Category Archives: Blog

Your blog category

Astrological Tips: ಸಣ್ಣ ವಿಷಯಕ್ಕೂ ಅತಿಯಾಗಿ ಕೋಪಗೊಳ್ಳುತ್ತೀರಾ? ಜಾತಕದಲ್ಲಿ ಈ ಗ್ರಹ ದುರ್ಬಲ ಸ್ಥಾನದಲ್ಲಿದೆ ಎಂದರ್ಥ! – Kannada News | Astrological Insights into Sudden Anger: Causes and Remedies

ಸಣ್ಣ ವಿಷಯಗಳಿಗೂ ಅತಿಯಾದ ಕೋಪ ಬರಲು ಕಾರಣಗಳೇನು ಎಂಬುದಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಮನುಷ್ಯನಲ್ಲಿ ತಾಮಸ, ರಜೋ ಮತ್ತು ಸತ್ವ ಎಂಬ ಮೂರು ಗುಣಗಳಿರುತ್ತವೆ. ಕೆಲವೊಮ್ಮೆ ಪರಿಸ್ಥಿತಿಗಳು ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಗುರುಬಲ, ಅದೃಷ್ಟ, ಹಣ ಮತ್ತು ಉದ್ಯೋಗವಿದ್ದರೂ ಕೂಡ ಕೆಲವರಿಗೆ ಇದ್ದಕ್ಕಿದ್ದಂತೆ ಕೋಪ ಬರುತ್ತದೆ. ಈ ಅತಿ ಕೋಪಕ್ಕೆ ಜ್ಯೋತಿಷ್ಯದ ಗ್ರಹಗತಿಗಳು ಹೇಗೆ ಕಾರಣವಾಗುತ್ತವೆ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಜ್ಯೋತಿಷ್ಯದಲ್ಲಿ ಬುಧ ಗ್ರಹವು ಬುದ್ಧಿಕಾರಕನಾಗಿದ್ದು, ಸೂಕ್ಷ್ಮತೆಯನ್ನು ನೀಡುತ್ತದೆ. ಬುಧ ಗ್ರಹ ದುರ್ಬಲವಾದಾಗ, ಪಾಪಗ್ರಹಗಳ ದೃಷ್ಟಿ ಇದ್ದಾಗ, ನೀಚನಾಗಿದ್ದಾಗ ಅಥವಾ ಪಾಪಗ್ರಹಗಳ ಜೊತೆ ಸೇರಿದಾಗ ವ್ಯಕ್ತಿಗಳ ಜಾತಕದಲ್ಲಿ ತಕ್ಷಣ ಕೋಪ ಕಾಣಿಸಿಕೊಳ್ಳುತ್ತದೆ. ಇಂತಹವರಿಗೆ ಬುಧವಾರ ಮತ್ತು ಸೋಮವಾರದಂತಹ ಕೆಲವು ದಿನಗಳಲ್ಲಿ, ಅಥವಾ ನಿರ್ದಿಷ್ಟ ಹೋರಾ ಸಮಯದಲ್ಲಿ ಕೋಪ ಹೆಚ್ಚಾಗಿರುತ್ತದೆ.

ಈ ಅತಿ ಕೋಪಕ್ಕೆ ಪರಿಹಾರಗಳು ಹೀಗಿವೆ:

  • ಬುಧವಾರ ಉಪವಾಸ: ಬುಧ ಗ್ರಹದ ಪ್ರಭಾವವನ್ನು ಕಡಿಮೆ ಮಾಡಲು ಬುಧವಾರದಂದು ಉಪವಾಸ ಮಾಡುವುದು ಉತ್ತಮ.
  • ಆಲೋಚನೆಗಳ ಮುಂದೂಡಿಕೆ: ಕೋಪ ಬಂದಾಗ ತಕ್ಷಣ ನಿರ್ಧಾರಗಳನ್ನು ತೆಗೆದುಕೊಳ್ಳದೆ, ಆಲೋಚನೆಗಳನ್ನು ಸ್ವಲ್ಪ ಸಮಯ ಮುಂದೂಡುವುದು ಜಾಣತನ.
  • ಮಂತ್ರ ಜಪ: ವಿಷ್ಣುಸಹಸ್ರನಾಮ ಜಪ ಮತ್ತು ಪ್ರತಿದಿನ “ಓಂ ನಮೋ ಭಗವತೇ ವಾಸುದೇವಾಯ” ಮಂತ್ರವನ್ನು ಜಪಿಸುವುದರಿಂದ ಮನಸ್ಸಿಗೆ ಶಾಂತಿ ಲಭಿಸುತ್ತದೆ.
  • ಸಾತ್ವಿಕ ಆಹಾರ ಸೇವನೆ: ಸಾತ್ವಿಕ ಆಹಾರ ಸೇವನೆಯಿಂದ ಮನಸ್ಸು ನಿರ್ಮಲವಾಗುತ್ತದೆ.
  • ದಾನ ಧರ್ಮ: ಹೆಸರುಬೇಳೆ, ಹಸಿರು ವಸ್ತುಗಳು, ತರಕಾರಿಗಳು ಮತ್ತು ಗೋವುಗಳಿಗೆ ಹುಲ್ಲನ್ನು ದಾನ ಮಾಡುವುದು ಶುಭ. ದೇವಸ್ಥಾನಗಳಲ್ಲಿ ಪ್ರಸಾದ ಮತ್ತು ನೈವೇದ್ಯವನ್ನು ನೀಡಬಹುದು.
  • ಪಚ್ಚೆ ಧಾರಣೆ: ಪಚ್ಚೆ ರತ್ನವನ್ನು ಧಾರಣೆ ಮಾಡಿಕೊಳ್ಳುವುದರಿಂದ ಕೋಪದ ಪ್ರಮಾಣ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಜೋಡಿ ಒಂಟೆಯ ಪ್ರತಿಮೆ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಇಂತಹ ಪರಿಹಾರಗಳನ್ನು ಅನುಸರಿಸುವುದರಿಂದ ತಾಳ್ಮೆ ಹೆಚ್ಚುತ್ತದೆ ಮತ್ತು ಅತಿಯಾದ ಕೋಪ ನಿಯಂತ್ರಣಕ್ಕೆ ಬರುತ್ತದೆ. ಇದು ಬುಧ ಗ್ರಹದ ಪ್ರಭಾವವನ್ನು ಸಕಾರಾತ್ಮಕವಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಸಂಜು ಸ್ಯಾಮ್ಸನ್ ಅವರನ್ನು ಇನಿಂಗ್ಸ್​ನ ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು.

ಇದೀಗ ನಾಲ್ಕನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿ, ಒಂದೇ ಸರಣಿಯಲ್ಲಿ  ಇಬ್ಬರು ಆರಂಭಿಕರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದ ಐಸಿಸಿ ಪೂರ್ಣ ಸದಸ್ಯ ತಂಡದ ಮೊದಲ ಬೌಲರ್ ಎಂಬ ಹೆಗ್ಗಳಿಕೆಯನ್ನು ಮ್ಯಾಟ್ ಹೆನ್ರಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನುಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 215 ರನ್​ಗಳನ್ನು ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ನಾಲ್ಕನೇ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 50 ರನ್​ಗಳ ವಿಜಯ ಸಾಧಿಸಿದೆ.

Source link

ಶುಕ್ರನ ಸಂಚಾರ: ಅಬ್ಬಾಬ್ಬ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ – Kannada News | Shukra Gochar 2024: How Venus in Shravana Nakshatra Impacts Your Zodiac

ಇನ್ನು ಕೆಲವು ದಿನ ಮಕರ ರಾಶಿಯ ಶ್ರವಣ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಆಗಲಿದೆ. ಮಕರ ರಾಶಿಯ ಅಧಿಪತಿ ಶನಿ ಮತ್ತು ಶ್ರವಣ ನಕ್ಷತ್ರದ ಅಧಿಪತಿ ಚಂದ್ರ. ಶುಕ್ರ ಮತ್ತು ಶನಿ ಮಿತ್ರರಾಗಿದ್ದರೂ, ಮನಸ್ಸಿಗೆ ಕಾರಕನಾದ ಚಂದ್ರನ ನಕ್ಷತ್ರದಲ್ಲಿ ಶುಕ್ರನ ಸಂಚಾರವು ಭಾವನಾತ್ಮಕ ಬದಲಾವಣೆಗಳನ್ನು ತರುತ್ತದೆ. ನಕಾರಾತ್ಮಕ ಬದಲಾವಣೆಗೆ ಕುಗ್ಗದೇ, ಬುದ್ಧಿಯಿಂದ ಅದನ್ನು ಸರಿಮಾಡಿಕೊಳ್ಳಿ.

​ಈ ಸಂಚಾರದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಯಾರಿಗೆ ಎಚ್ಚರಿಕೆ ಅಗತ್ಯ ಎಂಬ ವಿವರ ಇಲ್ಲಿದೆ:

​ಶುಭ ಫಲ

​ವೃಷಭ ರಾಶಿ:

ಭಾಗ್ಯ ಸ್ಥಾನದಲ್ಲಿ ಶುಕ್ರನ ಸಂಚಾರವಿರುವುದರಿಂದ ಅದೃಷ್ಟ ಒಲಿಯಲಿದೆ. ದೀರ್ಘಕಾಲದ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ.

​ಕನ್ಯಾ ರಾಶಿ:

ಪಂಚಮ ಸ್ಥಾನದಲ್ಲಿ ಶುಕ್ರನಿರುವುದರಿಂದ ಪ್ರೇಮ ಸಂಬಂಧಗಳು ಮಧುರವಾಗುತ್ತವೆ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಆಕಸ್ಮಿಕ ಧನ ಲಾಭದ ಯೋಗವಿದೆ.

​ಮಕರ ರಾಶಿ:

ನಿಮ್ಮದೇ ರಾಶಿಯಲ್ಲಿ ಶುಕ್ರನಿರುವುದರಿಂದ ವ್ಯಕ್ತಿತ್ವದಲ್ಲಿ ಸುಧಾರಣೆ ಕಂಡುಬರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ ಮತ್ತು ವಿವಾಹದ ಮಾತುಕತೆಗಳು ಯಶಸ್ವಿಯಾಗುತ್ತವೆ.

​ಮೀನ ರಾಶಿ:

ಲಾಭ ಸ್ಥಾನದಲ್ಲಿ ಶುಕ್ರನಿರುವುದರಿಂದ ಆರ್ಥಿಕ ಸ್ಥಿತಿ ಭದ್ರವಾಗುತ್ತದೆ. ಹಿರಿಯ ಸಹೋದರರಿಂದ ಅಥವಾ ಸ್ನೇಹಿತರಿಂದ ಬೆಂಬಲ ಸಿಗಲಿದೆ.

ಮಿಶ್ರ ಫಲ

​ಮಿಥುನ ಮತ್ತು ತುಲಾ:

ವೃತ್ತಿಜೀವನದಲ್ಲಿ ಪ್ರಗತಿ ಇರುತ್ತದೆ, ಆದರೆ ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಕುಟುಂಬದವರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು.

​ಧನು ರಾಶಿ:

ಆರ್ಥಿಕವಾಗಿ ಹೂಡಿಕೆ ಮಾಡಲು ಒಳ್ಳೆಯ ಸಮಯ, ಆದರೆ ಮಾತಿನ ಮೇಲೆ ನಿಗಾ ಇರಲಿ. ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಅಶುಭ ರಾಶಿ

​ಕರ್ಕಾಟಕ ರಾಶಿ:

ಸಪ್ತಮ ಸ್ಥಾನದಲ್ಲಿ ಶುಕ್ರನಿರುವುದರಿಂದ ಸಂಗಾತಿಯೊಂದಿಗೆ ಸಣ್ಣಪುಟ್ಟ ವಾಗ್ವಾದಗಳು ಉಂಟಾಗಬಹುದು. ವ್ಯವಹಾರದಲ್ಲಿ ಪಾಲುದಾರರೊಂದಿಗೆ ಪಾರದರ್ಶಕವಾಗಿರಿ.

​ಸಿಂಹ ರಾಶಿ:

ಶತ್ರುಗಳ ಕಾಟ ಹೆಚ್ಚಾಗಬಹುದು ಅಥವಾ ಅನಗತ್ಯ ಸಾಲ ಮಾಡಬೇಕಾದ ಪರಿಸ್ಥಿತಿ ಬರಬಹುದು. ಆರೋಗ್ಯದ ಕಡೆ ಗಮನಹರಿಸಿ.

​ವೃಶ್ಚಿಕ ರಾಶಿ:

ಅತಿಯಾದ ಆತ್ಮವಿಶ್ವಾಸದಿಂದ ಕೆಲಸಗಳು ಕೆಡಬಹುದು. ಸಹೋದರರೊಂದಿಗೆ ಮನಸ್ತಾಪವಾಗದಂತೆ ನೋಡಿಕೊಳ್ಳಿ.

​ಶುಕ್ರವಾರದಂದು ಮಹಾಲಕ್ಷ್ಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ಅಥವಾ ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡುವುದರಿಂದ ಶುಭ ಫಲಗಳು ಹೆಚ್ಚುತ್ತವೆ.

– ಲೋಹಿತ ಹೆಬ್ಬಾರ್

Source link

ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ – Kannada News | Kodagu: Videos of Youth With Several Young Women Go Viral, Mohammed Savad Arrested in Madikeri

ಆರೋಪಿ ಮೊಹಮ್ಮದ್ ಸವದ್ ಹಾಗೂ ಯುವಕರ ಮೇಲಿನ ಹಲ್ಲೆಯ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: tv9

ಮಡಿಕೇರಿ, ಜನವರಿ 29: ಕೊಡಗು (Kodagu) ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಯುವತಿಯರ ಜತೆಗಿನ ರಾಸಲೀಲೆಯ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಸವದ್

ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಸವದ್ ಸ್ನೇಹಿತರೇ ಈ ವಿಡಿಯೋಗಳನ್ನು ವೈರಲ್ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಹಲವು ಯುವಕರ ಮೇಲೂ ಹಲ್ಲೆ: ವಿಡಿಯೋ ವೈರಲ್

ಇದರ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಯುವಕರ ಮೇಲೆ ಹಲ್ಲೆ ನಡೆದಿರುವ ವಿಡಿಯೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಹಲ್ಲೆಗಳು ಸವದ್ ಕಡೆಯವರಿಂದ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ, ಹಲ್ಲೆಗೆ ಒಳಗಾದ ಯುವಕರು ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ

ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಲಾಗುತ್ತಿದ್ದು, ಸತ್ಯಾಂಶ ಬಯಲಿಗೆಳೆಯಲು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಹೇಳಿದ್ದಾರೆ. ಸದ್ಯ, ಕೊಡಗು ಜಿಲ್ಲೆಯಾದ್ಯಂತ ಮೊಹಮ್ಮದ್ ಸವದ್ ಕಾಮಕೇಳಿ ವಿಡಿಯೋಗಳು ಹಲ್ಚಲ್ ಸೃಷ್ಟಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:37 am, Thu, 29 January 26

Source link

ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ, ಸುಪ್ರೀಂ ಹೇಳಿದ್ದೇನು? – Kannada News | SC Slams Medical Aspirants Using Buddhist Conversion for Minority Quota

ಸುಪ್ರೀಂಕೋರ್ಟ್​Image Credit source: Citizens for Justice and Peace

ನವದೆಹಲಿ, ಜನವರಿ 29: ಬೌದ್ಧ ಧರ್ಮ(Buddhism)ಕ್ಕೆ ಮತಾಂತರ(Conversion)ಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಮೇಲ್ಜಾತಿಯ ವಿದ್ಯಾರ್ಥಿಗಳನ್ನು ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಕೋಟಾದಡಿ ಪ್ರವೇಶ ಬೇಕೆಂದು ಕೊನೇ ಹಂತದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅಂಥಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕೆ ಎಂದು ಪ್ರಶ್ನಿಸಿದೆ. ಈ ಕ್ರಮವು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಘೋಷಿಸಲಾದ ಉತ್ತರ ಪ್ರದೇಶದ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ ಬೌದ್ಧ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶ ಪಡೆಯಲು ನಿರ್ದೇಶನಗಳನ್ನು ಕೋರಿ ಹರಿಯಾಣದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರು ತಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆಂದು ಹೇಳಿಕೊಂಡು, ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಉಪವಿಭಾಗಾಧಿಕಾರಿ ನೀಡಿದ ಪ್ರಮಾಣಪತ್ರಗಳನ್ನು ಹಾಜರುಪಡಿಸಿದರು.

ಮತ್ತಷ್ಟು ಓದಿ: ಗದಗದಲ್ಲಿ ಇಸ್ಲಾಂ ಧರ್ಮಕ್ಕೆ ಹಿಂದೂ ಯುವಕನ ಮತಾಂತರ ಆರೋಪ: ಅಷ್ಟಕ್ಕೂ ಆಗಿದ್ದೇನು?

ಅರ್ಜಿದಾರರು ಪುನಿಯಾ ಜಾತಿಗೆ ಸೇರಿದವರು ಎಂದು ಗಮನಿಸಿದ ಸಿಜೆಐ ಸೂರ್ಯ ಕಾಂತ್, ಪುನಿಯಾಗಳು ಪರಿಶಿಷ್ಟ ಜಾತಿ ವರ್ಗದಲ್ಲಿ ಇರಬಹುದು, ಪುನಿಯಾಗಳು ಜಾಟ್ ಕೂಡ ಆಗಿರಬಹುದು, ಅದು ಸಾಮಾನ್ಯ ವರ್ಗ. ನೀವು ಯಾವ ಪುನಿಯಾ? ಎಂದು ಕೇಳಿದರು. ಅವರು ಜಾಟ್ ಎಂದು ವಕೀಲರು ಉತ್ತರಿಸಿದರು ಹಾಗಾದರೆ ನೀವು (ಅಲ್ಪಸಂಖ್ಯಾತರು) ಹೇಗೆ ಆಗುತ್ತೀರಿ ಎಂದು ಸಿಜೆಐ ಕೇಳಿದರು.

ಅವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ, ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಬಹುದು ಎಂದು ವಕೀಲರು ಉತ್ತರಿಸಿದರು. ಇದು ವಂಚನೆಯ ಮತ್ತೊಂದು ಮಾರ್ಗ, ನೀವು ಕೆಲವು ನಿಜವಾದ ಪ್ರಾಮಾಣಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದೀರ, ನೀವು ಶ್ರೀಮಂತ, ಉತ್ತಮ ಸ್ಥಾನಮಾನ ಹೊಂದಿರುವ, ಮೇಲ್ಜಾತಿಯ ಸಮುದಾಯಗಳಲ್ಲಿ ಒಬ್ಬರು, ಕೃಷಿ ಭೂಮಿಯನ್ನು ಹೊಂದಿರುವ ಮತ್ತು ಸೌಲಭ್ಯಗಳನ್ನು ಹೊಂದಿರುವ, ನೀವು ನಿಮ್ಮ ಅರ್ಹತೆಯ ಬಗ್ಗೆ ಹೆಮ್ಮೆ ಪಡಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಮೇಲೆ ಹಲ್ಲೆ – Kannada News | A Gang assaults On BJP leader Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಬಿಜೆಪಿ ಮುಖಂಡ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ ಹಲ್ಲೆ ನಡೆಸಿದ್ದಾರೆ.​

ಚಿಕ್ಕಮಗಳೂರು ತಾಲೂಕಿನ ಮತ್ತಾವರ ಗ್ರಾಮದ ಮಹಿಳೆಯೊಬ್ಬರ ಜೊತೆ ಸಿಡಿಎ ಮಾಜಿ ಅಧ್ಯಕ್ಷ ಆನಂದ್ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಗ್ರಾಮಸ್ಥರಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆ ವಾಸವಿದ್ದ ಮತ್ತಾವರ ಗ್ರಾಮದ ಹತ್ತಾರು ಜನರು ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂ ಸ್ಟೇ ಮೇಲೆ ಏಕಾಏಕಿ ದಾಳಿ ಮಾಡಿ ಪ್ರತಿಯೊಂದು ಕೊಠಡಿಗಳನ್ನು ಪರಿಶೀಲಿಸಿದ್ದಾರೆ.ಆಗ ಮಹಿಳೆಯ ಜೊತೆ ಸಿಕ್ಕಿಬಿದ್ದ ಆನಂದ್ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇದನ್ನೂ ಓದಿ: ಮಾಜಿ ಸಂಸದರೊಬ್ಬರದ್ದು ಎನ್ನಲಾದ ಆಡಿಯೋ ವೈರಲ್​​: ರಾಜಕೀಯ ರಹಸ್ಯಗಳು ಬಯಲು

ಈ ಬಗ್ಗೆ ಯಾರು ದೂರು ನೀಡಿಲ್ಲ. ಹೀಗಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದ್ರೆ, ಹಲ್ಲೆ ನಡೆಸಿರುವ ವಿಡಿಯೋ ಮಾತ್ರ ಸಾಮಾಜಿಕ ಜಲಾತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಗೆ ಗಂಡ ಇಲ್ಲ. ಹೀಗಾಗಿ ಆನಂದ್ ಹಾಗೂ ಮಹಿಳೆಯ ಪರಿಚಯವಾಗಿದ್ದು, ಹೀಗೆ ಪರಿಚವಾಗಿ ಇಬ್ಬರು ಹೋಂಸ್ಟೇಗೆ ಬಂದು ವಾಸ್ತವ್ಯ ಹೂಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹಿಳೆಯ ಗ್ರಾಮಸ್ಥರು ಹೋಂಸ್ಟೇ ಮೇಲೆ ದಾಳಿ ಮಾಡಿದ್ದಾರೆ. ಆಗ ಆನಂದ್​ ಮಹಿಳೆಯೊಂದಿಗೆ ರೆಡ್​​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಸದ್ಯ ಪೊಲಿಸರು ಎರಡು ಕಡೆಯವರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ. ಆದ್ರೆ, ಈ ಪ್ರಕರಣ ಇಲ್ಲಿಗೆ ನಿಲ್ಲುತ್ತೋ ಅಥವಾ ಮುಂದೆ ದ್ವೇಷವಾಗಿ ಬೆಳೆಯುತ್ತೋ ಗೊತ್ತಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:29 pm, Wed, 28 January 26

Source link

ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ – Kannada News | Beware of Fake Traffic Challan Links: Bengaluru Techie Loses Rs 2.32 Lakh After Clicking Fraud Link

ಬೆಂಗಳೂರು, ಜನವರಿ 29: ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು (Bangalore) ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ, 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ 57 ವರ್ಷದ ಸಂತ್ರಸ್ತ ವ್ಯಕ್ತಿಯ ದೂರಿನ ಮೇರೆಗೆ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ವೈಟ್‌ಫೀಲ್ಡ್‌ನ ಟೆಕ್ಕಿಗೆ ಜನವರಿ 26 ರಂದು ‘ನಿಮ್ಮ 500 ರೂ. ಟ್ರಾಫಿಕ್ ಚಲನ್ ಬಾಕಿ ಇದೆ’ ಎಂದು ಹೇಳುವ ಟೆಕ್ಷ್ಟ್​ ಮೆಸೇಜ್ ಬಂದಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆ ಸಂದೇಶದಲ್ಲಿ ಹಣ ಪಾವತಿಗೆ ಲಿಂಕ್ ಕೂಡ ಇತ್ತು.

ಅವರು ಲಿಂಕ್ ಕ್ಲಿಕ್ ಮಾಡಿದಾಗ, 500 ರೂ. ದಂಡವನ್ನು ಪಾವತಿಸಲು ಪಾವತಿ ವಿವರಗಳನ್ನು ಕೇಳುವ ವೆಬ್​ಸೈಟ್ ಓಪನ್ ಆಯಿತು. ಅವರು ತಮ್ಮ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ನಮೂದಿಸಿದರು. ತಕ್ಷಣವೇ ಖಾತೆಯಿಂದ 2,32,272 ರೂ.ಗಳನ್ನು ಡೆಬಿಟ್ ಆಯಿತು. ಬಳಿಕ ಮೋಸದ ಅರಿವಾಗಿ ಅವರು ಪೊಲೀಸರ ಮೊರೆ ಹೋದರು.

ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಚಲನ್‌ಗಳ ಕ್ಲಿಯರೆನ್ಸ್ ಕೋರಿ ನಾವು ಅಂತಹ ಸಂದೇಶಗಳನ್ನು ಕಳುಹಿಸುವುದಿಲ್ಲ ಎಂದು ಬೆಂಗಳೂರು ಸಂಚಾರ ಪೊಲೀಸರು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್, ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ

ಅಪರಿಚಿತ ಸಂಖ್ಯೆಯಿಂದ ಬರುವ ಲಿಂಕ್‌ಗಳು, ದಂಡ ಅಥವಾ ಬಹುಮಾನ ಎಂಬ ಸಂದೇಶಗಳನ್ನು ಎಂದಿಗೂ ನಂಬಬೇಡಿ. ಯಾವುದೇ ಸಂದರ್ಭದಲ್ಲೂ ಲಿಂಕ್ ಕ್ಲಿಕ್ ಮಾಡಿ ಬ್ಯಾಂಕ್ ಅಥವಾ ಕಾರ್ಡ್ ವಿವರಗಳನ್ನು ನಮೂದಿಸಬೇಡಿ. ಸಂಶಯ ಇದ್ದಲ್ಲಿ ನೇರವಾಗಿ ಅಧಿಕೃತ ವೆಬ್‌ಸೈಟ್ ಅಥವಾ ಸಂಬಂಧಿತ ಇಲಾಖೆಯನ್ನು ಸಂಪರ್ಕಿಸುವುದು ಸುರಕ್ಷಿತ ಎಂದು ಪೊಲೀಸರು ಸಲಹೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

Source link

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು – Kannada News | Ranveer Singh Daiva FIR: Bengaluru Police Files Case Over Daiva Sentiments Hurt

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಜೊತೆಗೆ ವಿವಾದಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ. ಈ ಮೊದಲು ಬೆತ್ತಲಾಗಿ ಫೋಟೋಶೂಟ್ ಮಾಡಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಕಳೆದ ವರ್ಷ ದೈವ ಅನುಕರಿಸಲು ಹೋಗಿ ವಿವಾದಕ್ಕೆ ಸಿಲುಕಿದ್ದರು. ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ‘ಧುರಂಧರ್’ ಸಿನಿಮಾ ಗೆಲುವಿನ ಖುಷಿಯನ್ನು ಇದು ತಗ್ಗಿಸಿದೆ.

ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ರಣವೀರ್ ಸಿಂಗ್ ಭಾಗಿ ಆಗಿದ್ದರು. ‘ಕಾಂತಾರ’ ಚಿತ್ರದ ನಾಯಕ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಅಲ್ಲಿಯೇ ಇದ್ದರು. ವೇದಿಕೆ ಏರಿದ ರಣವೀರ್ ಅವರು ದೈವವನ್ನು ಅನುಕರಿಸಿದರು. ಈ ವಿಡಿಯೋ ವೈರಲ್ ಆಗಿತ್ತು. ರಣವೀರ್ ಅವರನ್ನು ಅನೇಕರು ಟೀಕಿಸಿದರು.

ಭಕ್ತರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಅಭಿನಯ ಮಾಡಿದ್ದಾರೆ ಎಂದು 1ನೇ ಎಸಿಜೆಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿತ್ತು. ವಕೀಲ ಪ್ರಶಾಂತ್ ಮೇಥಲ್ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಅನ್ವಯ ಬೆಂಗಳೂರು ಪೊಲೀಸರು ಎಫ್​ಐಆರ್ ದಾಖಲು ಮಾಡಿದ್ದಾರೆ. ಕರಾವಳಿ ಭಾಗದಲ್ಲಿ ಆರಾಧಿಸುವ ಚಾವುಂಡಿ, ಗುಳಿಗ, ಪಂಜುರ್ಲಿ ದೈವಗಳನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಬಿಎನ್​ಎಸ್​​ ಕಾಯ್ದೆ 196, 302, 299 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ

ರಣವೀರ್ ಸಿಂಗ್ ಅವರು ದೈವ ಅನುಕರಿಸಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಈ ಪ್ರಕರಣದಿಂದ ಅವರ ನಟನೆಯ ‘ಧುರಂಧರ್’ ಚಿತ್ರಕ್ಕೆ ಆರಂಭದಲ್ಲಿ ಹಿನ್ನಡೆ ಆಯಿತು. ಆ ಬಳಿಕ ಸಿನಿಮಾ ಚೆನ್ನಾಗಿ ಇದ್ದಿದ್ದರಿಂದ ಸಿನಿಮಾಗೆ ಯಾವುದೇ ತೊಂದರೆ ಆಗಿಲ್ಲ. ಈ ಚಿತ್ರ 1300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಜನವರಿ 30ಕ್ಕೆ ನೆಟ್​​​ಫ್ಲಿಕ್ಸ್​​ನಲ್ಲಿ ಸಿನಿಮಾ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:08 am, Thu, 29 January 26

Source link

ಬೆಂಗಳೂರಿನ ಈ ರೆಸ್ಟೋರೆಂಟ್​​​ಗಳಲ್ಲಿ ಊಟ ಸೇವಿಸಿದ್ರೆ ಪ್ರಾಣ ಹೋಗುವುದು ಖಂಡಿತ, ಟಿವಿ9 ಕನ್ನಡ ನಡೆಸಿದ ಬಿಗ್ ಕಾರ್ಯಚರಣೆ – Kannada News | Shocking: Bengaluru Restaurants Use Expired Food, Risking Your Health

ಬೆಂಗಳೂರು, ಜ.29: ಬೆಂಗಳೂರಿನಲ್ಲಿ (Bengaluru) ರೆಸ್ಟೋರೆಂಟ್​​​ಗಳಿಗೆ ಏನು ಕಡಿಮೆ ಇಲ್ಲ. ಬೀದಿ ಬೀದಿಯಲ್ಲಿ ರೆಸ್ಟೋರೆಂಟ್​​ಗಳು ಇದೆ. ಆದ್ರೆ ಅಲ್ಲಿ ಸರಿಯಾದ ಹಾಗೂ ಉತ್ತಮ ಗುಣಮಟ್ಟದ ಆಹಾರಗಳು ಸಿಗುತ್ತಾ? ಎಂಬ ಅನುಮಾನ ಮೂಡಿದೆ. ಹಣ ಗಳಿಸುವ ಆಸೆಯಲ್ಲಿ ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಇದೀಗ ಬೆಂಗಳೂರಿನ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನೆ ಎದ್ದಿದೆ. ದೇಶ-ವಿದೇಶದ ಜನರನ್ನು ಬೆಂಗಳೂರು ಆಹಾರ ವಿಚಾರದಲ್ಲಿ ಸೆಳೆದುಕೊಂಡಿದೆ. ಆದರೆ ಇದೀಗ ಇಲ್ಲಿನ ರೆಸ್ಟೋರೆಂಟ್ ನಲ್ಲಿ ಸಿಗುವ ಆಹಾರಗಳು ಎಷ್ಟು ಸೇಫ್​​​ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗಿದೆ. ಬೆಂಗಳೂರಿನಲ್ಲಿ ಜನಸಾಮಾನ್ಯರ ಹಸಿವನ್ನು ಬಂಡವಾಳ ಮಾಡಿಕೊಂಡ ಹೋಟೆಲ್ ಮಾಲೀಕರು ಆಹಾರದಲ್ಲೂ ಒಂದು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ. ರಾಜಾಜಿನಗರ ಬಳಿಯ ಶಿವನಗರ ಸಿಗ್ನಲ್ ಸಮೀಪದ ಹಂಗ್ರಿ ಬೈಟ್ಸ್ ಎಂಬ ರೆಸ್ಟೋರೆಂಟ್ ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಬಳಸಿ ಅಡುಗೆ ತಯಾರಿಸುತ್ತಿದ್ದಾರೆ. ಸಾಸ್, ಮಯೋನಿಸ್, ಜ್ಯೂಸ್​ ಫ್ಲೇವರ್ಸ್, ಸೇರಿ ಹತ್ತು ಹಲವು ಉತ್ಪನ್ನಗಳ ಎಕ್ಸ್​​ಪೈರಿ ಡೇಟ್​ ಮುಗಿದು ಒಂದು ವರ್ಷವಾದರೂ ಅದನ್ನೇ ಬಳಸುತ್ತಿದ್ದಾರೆ ಎಂಬುದನ್ನು ಟಿವಿ9 ಕನ್ನಡ ಪತ್ತೆ ಮಾಡಿದೆ.

ಸ್ಯಾಂಡ್ ವಿಚ್, ಮೊಮೊಸ್, ಫ್ರೆಂಚ್ ಫ್ರೈಸ್ ಸೇರಿದಂತೆ ಇನ್ನು ಅನೇಕ ಆಹಾರ ತಯಾರಿಸಲು ಬಳಸುವ ಉತ್ಪನ್ನಗಳು ತುಂಬಾ ಕಳಪೆಯಾಗಿದೆ. ಒಂದು ವೇಳೆ ಇದನ್ನು ಅಪ್ಪಿ ತಪ್ಪಿ ತಿಂದರೆ, ಜೀವ ಹೋಗುವುದು ಖಂಡಿತ. ರೆಸ್ಟೋರೆಂಟ್ ನಡೆಸುವವರು ಗ್ರಾಹಕರ ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದಿರುವುದು ದುರಂತ. ಟಿವಿ9 ಸ್ಥಳಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಆರೋಗ್ಯ ಅಧಿಕಾರಿ ರೆಸ್ಟೋರೆಂಟ್ ಮಾಲೀಕರಿಗೆ 2 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಇನ್ನು ರೆಸ್ಟೋರೆಂಟ್ ಮಾಲೀಕರು ಹಾಗೂ ಅಡುಗೆ ತಯಾರಿಸುವವರ ಮಧ್ಯೆ ನಾನಾ ರೀತಿಯ ವೈಯಕ್ತಿಕ ತಕರಾರು ಹಾಗೂ ಭಿನ್ನಾಭಿಪ್ರಾಯಗಳಿವೆ. ಕೊನೆಗೆ ಅದರ ಸೇಡನ್ನ ಪರಿಣಾಮ ದುಡ್ಡು ಕೊಟ್ಟು ಆಹಾರ ಸವಿಯಲು ಬಂದ ಗ್ರಾಹಕರ ಮೇಲೆ ತೀರಿಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು

ಅಧಿಕಾರಿಗಳ ಮೃದು ಧೋರಣೆ?

ಇಷ್ಟು ದೊಡ್ಡ ಮಟ್ಟದ ಉಲ್ಲಂಘನೆ ಪತ್ತೆಯಾದ ನಂತರವೂ ಆರೋಗ್ಯ ಅಧಿಕಾರಿಗಳು ಕೇವಲ ₹2,000 ದಂಡ ವಿಧಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜನರ ಜೀವಕ್ಕೆ ಅಪಾಯ ತರುವ ಇಂತಹ ಹೋಟೆಲ್‌ಗಳಿಗೆ ಇಷ್ಟು ಕಡಿಮೆ ದಂಡ ವಿಧಿಸುವುದು ದಂಧೆಕೋರರಿಗೆ ಭಯವಿಲ್ಲದಂತೆ ಮಾಡುತ್ತದೆ ಎಂಬುದು ಕಟು ಸತ್ಯ.

ಗ್ರಾಹಕರು ವಹಿಸಬೇಕಾದ ಮುನ್ನೆಚ್ಚರಿಕೆ:

ಸಾಧ್ಯವಾದರೆ ಹೋಟೆಲ್‌ನ ಅಡುಗೆ ಮನೆ ಎಷ್ಟು ಸ್ವಚ್ಛವಾಗಿದೆ ಎಂದು ಒಮ್ಮೆ ಕಣ್ಣಾಡಿಸಿ.

ಹಾರದಲ್ಲಿ ಅಸಹಜ ವಾಸನೆ ಅಥವಾ ರುಚಿ ಕಂಡುಬಂದರೆ ತಕ್ಷಣ ತಿನ್ನುವುದನ್ನು ನಿಲ್ಲಿಸಿ.

ದೊಡ್ಡ ರೆಸ್ಟೋರೆಂಟ್ ಅಥವಾ ಬ್ರ್ಯಾಂಡ್ ಎಂಬ ಕಾರಣಕ್ಕೆ ಎಲ್ಲವೂ ಸರಿ ಇರುತ್ತದೆ ಎಂದು ಕುರುಡಾಗಿ ನಂಬಬೇಡಿ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:50 am, Thu, 29 January 26

Source link