Category Archives: Blog

Your blog category

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | Snoring: Why It’s More Common in Men

ಗೊರಕೆ (Snore) ನಿದ್ರೆಗೆ ಭಂಗ ತರುವುದು ಮಾತ್ರವಲ್ಲ, ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ ಎಂಬುದು ತಿಳಿದಿರಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ 40 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಗೊರಕೆ ಹೊಡೆಯುತ್ತಾರೆ. ಆದರೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಗೊರಕೆ ಹೊಡೆಯುತ್ತಾರೆಯೇ ಎಂಬ ಅನುಮಾನ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪುರುಷರು ಮಹಿಳೆಯರಿಗಿಂತ ಸುಮಾರು 2 ರಿಂದ 3 ಪಟ್ಟು ಹೆಚ್ಚು ಗೊರಕೆ ಹೊಡೆಯುವ ಸಾಧ್ಯತೆ ಇದ್ದು, ವಯಸ್ಸು ಹೆಚ್ಚಾದಂತೆ ಮಹಿಳೆಯರಿಗೂ ಈ ರೀತಿಯ ಸಮಸ್ಯೆ ಕಾಡುತ್ತದೆ. ಆದರೆ ಪುರುಷರು ಮಾತ್ರ ಮಹಿಳೆಯರಿಗಿಂತ ಹೆಚ್ಚು ಪ್ರಭಾವಿತರಾಗುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು, ಯಾಕೆ ಪುರುಷರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪುರುಷರು ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು?

ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ. ರವಿ ಮಹಾರ್ ಹೇಳುವ ಪ್ರಕಾರ, ಪುರುಷರು ಹೆಚ್ಚು ಗೊರಕೆ ಹೊಡೆಯಲು ಹಲವಾರು ಕಾರಣಗಳಿವೆ. ಪುರುಷರ ಗಂಟಲಿನಲ್ಲಿ ವಾಯುಮಾರ್ಗವು ಮಹಿಳೆಯರಿಗೆ ಹೋಲಿಸಿದರೆ ಕಿರಿದಾಗಿರುತ್ತದೆ. ಇದು ನಿದ್ರೆಯ ಸಮಯದಲ್ಲಿ ಉಸಿರಾಡುವಾಗ ಹೆಚ್ಚು ಕಂಪನವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣವಾಗುತ್ತದೆ. ಮಹಿಳೆಯರಲ್ಲಿ, ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ನಂತಹ ಹಾರ್ಮೋನುಗಳು ವಾಯುಮಾರ್ಗ ಸ್ನಾಯುಗಳನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ಆದರೆ ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಮಟ್ಟಗಳು ಕಡಿಮೆಯಾಗಲು ಪ್ರಾರಂಭಿಸಿದಾಗ ಈ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ವಯಸ್ಸು ಹೆಚ್ಚಾದಂತೆ ಈ ಸಮಸ್ಯೆ ಕೂಡ ಹೆಚ್ಚಾಗಬಹುದು. ಇನ್ನೊಂದು ಕಾರಣವೆಂದರೆ ಪುರುಷರಲ್ಲಿ ಗಂಟಲಿನ ಸುತ್ತಲೂ ಮತ್ತು ಸುತ್ತಮುತ್ತಲಿನ ಸ್ನಾಯುಗಳಲ್ಲಿ ಮಹಿಳೆಯರಿಗೆ ಹೋಲಿಸಿದರೆ ಹೆಚ್ಚಿನ ಕೊಬ್ಬು ಇರುತ್ತದೆ. ಇದು ಗೊರಕೆ ಹೆಚ್ಚಾಗಲು ಕಾರಣವಾಗುತ್ತದೆ.

ಇದನ್ನೂ ಓದಿ: ರಾತ್ರಿ ಜೋರಾಗಿ ಗೊರಕೆ ಹೊಡೆಯುತ್ತೀರಾ? ಅಬ್ಸ್ಟ್ರಕ್ಟಿವ್ ಸ್ಲೀಪ್ ಅಪ್ನಿಯಾ ಲಕ್ಷಣವಾಗಿರಬಹುದು ಎಚ್ಚರ

ಗೊರಕೆ ಎಂದರೆ ನಿಮ್ಮ ಉಸಿರಾಟದ ಮಾರ್ಗ, ಅಂದರೆ ನಿಮ್ಮ ಮೂಗು ಮತ್ತು ಗಂಟಲು ಸಂಪೂರ್ಣವಾಗಿ ತೆರೆದುಕೊಂಡಿಲ್ಲ ಎಂದರ್ಥ. ಇದು ನೀವು ಉಸಿರಾಡುವಾಗ ಮತ್ತು ಬಿಡುವಾಗ ಗಂಟಲಿನಲ್ಲಿರುವ ಅಂಗಾಂಶಗಳು ಕಂಪಿಸುವಂತೆ ಮಾಡುತ್ತದೆ. ಇದನ್ನು ಗೊರಕೆ ಎಂದು ಕರೆಯಲಾಗುತ್ತದೆ. ಇದಕ್ಕೆ ಬೊಜ್ಜು ಹೆಚ್ಚಾಗುವುದು, ಟಾನ್ಸಿಲ್‌ಗಳು, ಮೂಗಿನಲ್ಲಿ ರಚನಾತ್ಮಕ ಸಮಸ್ಯೆಗಳು ಮತ್ತು ನಿದ್ರೆಯ ಕೊರತೆ ಮುಂತಾದ ಹಲವು ಕಾರಣಗಳಿವೆ. ಸೌಮ್ಯವಾದ ಗೊರಕೆ ಸಮಸ್ಯೆಯಲ್ಲ, ಆದರೆ ಈ ಸಮಸ್ಯೆ ಮುಂದುವರಿದರೆ ನೀವು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ಅದು ಸ್ಲೀಪ್ ಅಪ್ನಿಯಾದ ಸಂಕೇತವಾಗಿರಬಹುದು. ಈ ಸಮಸ್ಯೆಯಲ್ಲಿ ನಿದ್ದೆ ಮಾಡುವಾಗ ಕೆಲವು ಸೆಕೆಂಡುಗಳ ಕಾಲ ಉಸಿರಾಟ ನಿಲ್ಲುತ್ತದೆ, ಇದು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ.

ಗೊರಕೆಯನ್ನು ತಡೆಗಟ್ಟಲು ಸಲಹೆಗಳು:

  • ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ.
  • ಮಲಗುವ ಮೊದಲು ಧೂಮಪಾನ, ಮದ್ಯಪಾನ ಮಾಡಬೇಡಿ.
  • ತುಂಬಾ ಗೊರಕೆ ಹೊಡೆಯುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ – Kannada News | January 29 Numerology Prediction: Birth Numbers 7, 8, 9 – What Awaits You Today?

ಸಂಬಂಧಗಳನ್ನು ನಿರ್ವಹಿಸುವುದು ಇದೆಯಲ್ಲಾ ಅದು ಬಹಳ ತಲೆನೋವು. ತಪ್ಪು ಯಾರ ಕಡೆಯಿಂದಲೇ ಆದರೂ ಕ್ಷಮೆಯನ್ನು ಮಾತ್ರ ನಾವೇ ಕೇಳಬೇಕು. ಸಂಬಂಧ, ಪ್ರೀತಿ- ಪ್ರೇಮ, ದಂಪತಿ ಮಧ್ಯೆ ಕಾಡುವ ಜಗಳ- ಕಲಹಗಳಿಗೆ ಬ್ರೇಕ್ ಹಾಕುವುದಕ್ಕೆ ರೋಸ್ ಕ್ವಾರ್ಟ್ಜ್ ಸ್ಟೋನ್ ಒಂದೊಳ್ಳೆ ಪರಿಹಾರ. ಜನ್ಮಸಂಖ್ಯೆ 7, 8, 9ರ ಜನರಿಗೆ ಈ ಸಲಹೆ ಖಂಡಿತಾ ಸಹಾಯ ಆಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಮಗೆ ಸಿಗಬೇಕು ಅಂತಿದ್ದರೆ ಹೇಗಿದ್ದರೂ ಸಿಕ್ಕೇ ಸಿಗುತ್ತದೆ ಎಂಬ ಥಿಯರಿ ಏನೋ ಸರಿ. ಆದರೆ ಆ ಕಾರಣದಿಂದ ನಿಮ್ಮ ಅಭಿಪ್ರಾಯವನ್ನು ಹೇಳುವಂತೆ ಕೇಳಿದರೂ ಬಾಯಿ ಬಿಟ್ಟು ಏನನ್ನೂ ಹೇಳದಿರುವುದು ಎಷ್ಟು ಸರಿ? ಈ ದಿನ ನಿಮಗೆ ಸಿಗುವ ಅವಕಾಶ ಚೆನ್ನಾಗಿ ಬಳಸಿಕೊಳ್ಳಿ. ಬಾಯಿ ಬಿಟ್ಟು ಹೇಳುವುದರೊಂದಿಗೆ ಬೇಕಾದದ್ದನ್ನು ಪಡೆದುಕೊಳ್ಳಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನೀವು ಬೇರೆ ಮತ್ತು ನಿಮ್ಮ ಆಲೋಚನೆ, ಲೆಕ್ಕಾಚಾರಗಳು ಬೇರೆ. ಉಳಿದವರಿಗಿಂತ ನೀವು ಬೇರೆ ಯಾವುದೋ ಲೆಕ್ಕ ಹಾಕಿಕೊಂಡಿದ್ದೀರಿ ಅಂತಾದಲ್ಲಿ ಸಂಶಯ ಪಡುವುದಕ್ಕೆ ಹೋಗಬೇಡಿ. ಅಂದುಕೊಂಡಿದ್ದು, ಅಂದುಕೊಂಡ ರೀತಿಯಲ್ಲಿಯೇ ಜಾರಿಗೆ ತನ್ನಿ. ನಾಲ್ಕಾರು ಜನಕ್ಕೆ ನಿಮ್ಮಿಂದ ಈ ದಿನ ಸಹಾಯ ಆಗುವ ಯೋಗ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಆರೋಗ್ಯದ ಬಗ್ಗೆ ಇನ್ನೊಂಚೂರು ಗಮನ ಕೊಡಬೇಕಿತ್ತು ಎಂದು ಬಲವಾಗಿ ಅನಿಸಲಿದೆ. ನಿಮ್ಮ ಉಳಿತಾಯದ ಹಣವನ್ನು ತೆಗೆದು ಸ್ವಲ್ಪ ರಿಸ್ಕ್ ಇರುವ ವ್ಯವಹಾರದಲ್ಲಿಯೇ ಹೂಡಿಕೆ ಮಾಡುವ ಬಗ್ಗೆ ಆಲೋಚನೆಯನ್ನು ಮಾಡಲಿದ್ದೀರಿ. ಆದರೆ ಈ ದಿನ ಯಾವ ಕಾರಣಕ್ಕೂ ಕುಟುಂಬ ಸದಸ್ಯರ ಮೇಲೆ ನಿಮ್ಮ ಸಿಟ್ಟು ತೋರಿಸಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 4, 5, 6 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಜತೆಗೆ ಇನ್ನೊಂದು ಬೋನಸ್. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡುವ ತನಕ ಅದೇ ಉತ್ಸಾಹ ಉಳಿಸುತ್ತಾ ಇಲ್ಲ. ದಿಢೀರ್ ಉತ್ಸಾಹ ಹಾಗೂ ಅಷ್ಟೇ ವೇಗದಲ್ಲಿ ಆ ಉತ್ಸಾಹ ಕರಗಿ ಹೋಗುತ್ತಾ ಇದೆ ಅನ್ನುವವರಿಗೆ ಮೂನ್ ಸ್ಟೋನ್ ಬಹಳ ಸಹಕಾರಿ. ನಿಮ್ಮದು ವೃಷಭ, ಕರ್ಕಾಟಕ ರಾಶಿಯಾದರೆ ಇನ್ನೂ ಒಳೆಯದು. ವೃಶ್ಚಿಕ ರಾಶಿಯಾದರೆ ಮೂನ್ ಸ್ಟೋನ್ ಬೇಡ. ಆದರೆ ವೃಶ್ಚಿಕ ರಾಶಿಯವರು ಕಾರ್ನೇಲಿಯನ್ ಧರಿಸಬಹುದು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸರಳವಾದ ಸಂಗತಿ, ವಿಷಯಗಳೇ ಸಿಕ್ಕು ಸಿಕ್ಕಾಗಿ ತಲೆ ಕೆಡಿಸಿಕೊಳ್ಳುವಂತೆ ಮಾಡಲಿದೆ. ನೀವು ಹೇಳಿದ್ದನ್ನೆಲ್ಲ ಕೇಳಿದ ಮೇಲೋ ಯಾರೋ ಮಾಡಿಕೊಂಡ ಸಮಸ್ಯೆಗೆ ತಲೆ ಕೊಡುವಂತೆ ಆಗಿ ಬಿಡುತ್ತದೆ. ಸಂಕೋಚಕ್ಕೆ ಬಿದ್ದು, ಧ್ವನಿ ಎತ್ತರಿಸಿ ಕೇಳದೆ ಹೋಗಿಬಿಟ್ಟರೆ ನೀವು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲುವಂತೆ ಆಗಿಬಿಡುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಮೊದಲಿನ ಉತ್ಸಾಹದಿಂದ ನಿಮ್ಮ ಮಾತಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಸಂಗಾತಿಯ ಮೇಲೋ ಗೆಳೆಯ- ಗೆಳತಿ, ಪ್ರಿಯಕರ ಮೇಲೋ ಸಿಟ್ಟಾಗುವಂಥ ಸಂದರ್ಭ ಎದುರಾಗಲಿದೆ. ಯಾವುದಕ್ಕೂ ತಾಳ್ಮೆಯಿಂದ ವರ್ತಿಸಿ. ತಾತ್ಕಾಲಿಕ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಿಕೊಳ್ಳುವ ಸ್ವಭಾವ ಈ ದಿನ ಮಾತ್ರ ಖಂಡಿತಾ ಬೇಡ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಅದೂ ಇರಲಿ, ಇದೂ ಇರಲಿ ಎಂದು ವಸ್ತುಗಳ ಮೇಲೆ ವಿಪರೀತ ಆಸೆ ಪಡುವುದಕ್ಕೆ ಹೋಗಬೇಡಿ. ಆದಾಯ ಚೆನ್ನಾಗಿ ಬರಲಿದೆ, ಲಾಭ ನಿಮ್ಮ ಕೈಯಲ್ಲಿ ಉಳಿಯಲಿದೆ ಎಂದೆನಿಸಿದ ಕೂಡಲೇ ಅದನ್ನು ಬ್ಯಾಂಕ್ ನಲ್ಲಿಯೇ ಇರಲಿ ಎಂಬ ಧೋರಣೆಯೊಂದಿಗೆ ಇರುವುದು ತುಂಬ ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 1, 2, 3 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಎಂಬುದರ ಜೊತೆಗೆ ದಿನಕ್ಕೆ ಒಂದರಂತೆ ಕ್ರಿಸ್ಟಲ್ ಗಳನ್ನು ಪರಿಚಯಿಸುವ ಪ್ರಯತ್ನ ಇಲ್ಲಿದೆ. ಅದರ ಮೊದಲ ಪ್ರಯತ್ನ ಸನ್ ಸ್ಟೋನ್. ಹಿಂಜರಿಕೆ ಕಾಡುತ್ತಿದೆಯಾ, ಗೊತ್ತಿರುವಂಥ ವಿಷಯಗಳನ್ನೇ ಆತ್ಮವಿಶ್ವಾಸದಿಂದ ಹೇಳುವುದು ಕಷ್ಟ ಆಗುತ್ತಿದೆಯಾ? ಈ ಸನ್ ಸ್ಟೋನ್ ಬಳಸಿದ್ದಲ್ಲಿ ನಾಯಕತ್ವ ಗುಣ ನಿಮ್ಮಲ್ಲಿ ಮತ್ತೂ ಹೆಚ್ಚಾಗುತ್ತದೆ. ಹಿಂಜರಿಕೆ, ಆತ್ಮವಿಶ್ವಾಸದ ಕೊರತೆ ಇವೆಲ್ಲ ದೂರವಾಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನೀವು ಹೇಳಿದ್ದೆಲ್ಲ ಸರಿಯಿದೆ, ಅದೇ ರೀತಿ ಮುಂದುವರಿಯೋಣ ಎಂಬ ಉತ್ಸಾಹದ ಮಾತುಗಳನ್ನು ಆಡುತ್ತಿದ್ದವರು ಏಕಾಏಕಿ ತಮ್ಮ ಧ್ವನಿಯನ್ನೇ ಬದಲಿಸಿ, ಉಲ್ಟಾ ಹೇಳುವುದಕ್ಕೆ ಶುರು ಮಾಡ್ತಾರೆ. ದೊಡ್ಡ ಮೊತ್ತದ ಹಣವನ್ನು ಕೈಯಿಂದ ಹಾಕಿ, ಶುರು ಮಾಡಬೇಕಾದ ಆರ್ಡರ್ ಗಳು ಇದ್ದಲ್ಲಿ ಒಂದಕ್ಕೆ ನಾಲ್ಕು ಬಾರಿಗೆ ಆಲೋಚಿಸಿ ಮುಂದಕ್ಕೆ ಹೆಜ್ಜೆ ಇಡಿ. ನಂಬಿಕೆ ಬೇಕು ನಿಜ, ಆದರೆ ಅತಿಯಾದ ನಂಬಿಕೆ ಹಣಕಾಸಿಗೆ ತೊಡಕು ಎಂಬುದು ನೆನಪಲ್ಲಿರಲಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮ ಈ ಹಿಂದಿನ ಯಾವುದೇ ಪ್ರಸ್ತಾವನೆ ಈ ದಿನ ಜೀವ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನೇನು ಅದು ವಾಪಸ್ ಬರುವ ಹಾಗೆ ಕಾಣಲ್ಲ ಎಂದು ಅಸೆಯೇ ಬಿಟ್ಟಿದ್ದ ಹಣ ಕೂಡ ಹಿಂತಿರುಗಿ ಬರುವ ಅವಕಾಶಗಳಿವೆ. ನಿಮ್ಮ ಜೊತೆಗೆ ಇದ್ದು ಕೂಡ ಉದ್ಯೋಗ- ವ್ಯವಹಾರದಲ್ಲಿ ಸಹಕಾರ ನೀಡದಿದ್ದವರು ಸಹ ಈಗ ಪೂರ್ಣ ಮನಸ್ಸಿನಿಂದ ನಿಮ್ಮ ಜೊತೆ ಇರುವುದಾಗಿ ಹೇಳಲಿದ್ದಾರೆ. ಕಡಿಮೆ ಎಂದುಕೊಂಡಂಥ ಕೆಲಸಗಳೇ ಒಳ್ಳೆ ಆದಾಯ ತಂದುಕೊಡುತ್ತವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಅಯ್ಯೋ ಮಾತನಾಡಿ, ಸಿಕ್ಕಿಹಾಕಿಕೊಂಡು ಬಿಟ್ಟೆನಲ್ಲ ಎಂಬ ಪರಿಸ್ಥಿತಿ ಈ ದಿನ ನಿಮ್ಮದಾಗಲಿದೆ. ಯಾವುದಕ್ಕೂ ಇರಲಿ ಎಂದುಕೊಂಡು ಎಮರ್ಜೆನ್ಸಿ ಫಂಡ್ ಎಂದು ನೀವಿಟ್ಟುಕೊಂಡಿದ್ದ ಹಣವೇ ಸಹಾಯಕ್ಕೆ ಬರಲಿದೆ. ಎಲ್ಲರನ್ನೂ ಒಂದೇ ರೀತಿ ಕಾಣಬೇಕು, ಅವರಿಗೆ ಬೇಕಾದ ಕೆಲಸ ಮಾಡಿಕೊಡಬೇಕು ಎಂಬ ನಿಮ್ಮ ಉದ್ದೇಶ ಈಡೇರುವ ಸಾಧ್ಯತೆ ಈ ದಿನ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 29 January: ಇಂದು ಈ ರಾಶಿಯವರಿಗೆ ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ

ಮೇಷ ರಾಶಿ:

ದೈವಭಕ್ತಿ ಶ್ರದ್ಧೆಗಳು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗುವುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು.

ವೃಷಭ ರಾಶಿ:

ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮೊಳಗಿರುವ ತರತಮಭಾವವನ್ನು ಪ್ರಕಟಿಸಲಾರಿರಿ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಕೆಲಸಗಳು ನಿಧಾನವಾಗುವುದು.

ಮಿಥುನ ರಾಶಿ:

ಇಂದು ನಿಮ್ಮ ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಪ್ರಖ್ಯಾತ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸುವಿರಿ.

ಕರ್ಕಾಟಕ ರಾಶಿ:

ಮನೋರಂಜನೆಯಲ್ಲಿ ಪಾಲ್ಗೊಂಡು ಮನಸ್ಸು ಹಗುರಾಗುವುದು. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ದೊಡ್ಡ ಅಪಾಯದಿಂದ ತಪ್ಪಿಸಿಕೊಳ್ಲಕುವುರಿ. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ವ್ಯಾಪಾರದಲ್ಲಿ ಪೂರೈಕೆ ಮಾಡುವವರಿಗೆ ಹೆಚ್ಚು ಬೇಡಿಕೆ ಕಾಣಿಸುವುದು. ಉದ್ಯಮದ ಹೊಸ ಕೇಂದ್ರವನ್ನು ನಿರ್ಮಿಸುವ ಸಾಧ್ಯತೆ ಇದೆ.

ಸಿಂಹ ರಾಶಿ:

ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ನಿಮ್ಮ ಮಾತುಗಳು ಅರಣ್ಯರೋದನದಂತೆ ನಿಷ್ಪ್ರಯೋಜಕವಾದೀತು. ಹಿತಶತ್ರುಗಳ ತಂತ್ರಕ್ಕೆ ಬಲಿಯಾಗಿ ಬೇಸರಗೊಳ್ಳುವಿರಿ. ಆರೋಗ್ಯದ ರಕ್ಷಣೆಯಲ್ಲಿ ಹಿನ್ನಡೆಯಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಎತ್ತರದ ಪ್ರದೇಶವನ್ನು ಏರುವ ಸಾಹಸ ಮಾಡುವಿರಿ. ಅಧಿಕಾರಿಗಳು ವೃತ್ತಿಯನ್ನು ಸರಿಯಾಗಿ ನಿರ್ವಹಿಸುವರು. ಅಜ್ಞಾನವನ್ನು ಯಾರಿಂದಲಾದರೂ ದೂರಮಾಡಿಕೊಳ್ಳಿ.

ಕನ್ಯಾ ರಾಶಿ:

ರಾಜಕಾರಣದಿಂದ ನಿಮ್ಮ ಯಶಸ್ಸಿಗೆ ತೊಂದರೆ. ಸಮ್ಮಾನಗಳನ್ನು ಪಡೆಯುವ ಆಸೆ ಇದ್ದರೂ ಯೋಗವು ಬೇಕಾಗುತ್ತದೆ. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಪರೋಕ್ಷವಾಗಿಯಾದರೂ ಹಿರಿಯರ ಆಶೀರ್ವಾದ ಪಡೆಯಿರಿ. ಆಗದವರು ನಿಮ್ಮ ರಹಸ್ಯ ವಿಚಾರಗಳನ್ನು ತಿಳಿದುಕೊಳ್ಳಲು ಇಚ್ಛಿಸುವರು. ನಿರುದ್ಯೋಗದ ಸಮಸ್ಯೆ ದೂರಾಗುವುದು.

ತುಲಾ ರಾಶಿ:

ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ವಿದೇಶದ ವ್ಯಕ್ತಿಗಳ ಸಂಪರ್ಕ ಉಂಟಾಗುವುದು. ನಿರಪೇಕ್ಷೆಯಿಂದ ಕೆಲಸ ಮಾಡಿದರೆ, ಅಧಿಕ ಸಂತೋಷ. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಕಠೋರ ಮಾತುಗಳಿಂದ ನಿಮ್ಮ ವಲಯ ಖಾಲಿಯಾಗಿ, ಒಂಟಿಯಾಗುವಿರಿ. ಯೌವನಾವಸ್ಥೆಯಲ್ಲಿ ಇರುವವರಿಗೆ ಯಾರನ್ನಾದರೂ ಪ್ರೀತಿಸುವ ಇಚ್ಛೆಯು ಬರಬಹುದು. ಸಹೋದರರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಜೀವನದ ಬಗ್ಗೆ ನಕಾರಾತ್ಮಕ ಅಂಶಗಳೇ ಕಾಣಿಸುವುದು.

ವೃಶ್ಚಿಕ ರಾಶಿ:

ನಿಮ್ಮ ಯೋಜನೆಗೆ ಯಾವ ಸ್ಪಂದನ ಇಲ್ಲದೇ ಅದು ಹಾಳಾಗುವುದು. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಯಾರದೋ ದಾಳವಾಗಿ ಇಂದು ಕೆಲಸವನ್ನು ಮಾಡಬೇಕಾಗಬಹುದು. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ನಿಮ್ಮನ್ನು ನಿರ್ಲಕ್ಷಿಸುವ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಎಲ್ಲ ತಪ್ಪುಗಳಿಗೂ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವಿರಿ.

ಧನು ರಾಶಿ:

ಶತ್ರುಗಳಿಂದ ನಿಮಗೆ ವಂಚನೆಯಾಗಿದ್ದು ವಿಳಂಬವಾಗಿ ಗೊತ್ತಾಗುವುದು. ಮಿತ್ರರಿಂದ ನಿಮ್ಮ ಇಚ್ಛೆಯು ಪೂರ್ಣವಾಗುವುದು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಬಹಳ ದಿನಗಳ ಅನಂತರ ಬಂಧುಗಳ ಮನೆಗೆ ಹೋಗಲಿದ್ದೀರಿ. ಸಂಗಾತಿಯ ವಿಚಾರದಲ್ಲಿ ಉದ್ವೇಗಕ್ಕೆ ಒಳಗಾಗುವುದು ಬೇಡ.

ಮಕರ ರಾಶಿ:

ಪ್ರಚೋದನಕಾರಿ ಮಾತುಗಾರರಿಗೆ ಅವಕಾಶವು ಸಿಗಲಿದೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಬಹಳ ದಿನಗಳ ಅನಂತರ ಸಮಾಜಮುಖಿಯಾಗಿ ಕಾಣಿಸುವಿರಿ. ನಿಮ್ಮ ಪಾಲಿಗೆ ಬಂದಿದ್ದನ್ನು ಬಿಟ್ಟುಕೊಡಲಾರಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುವಿರಿ.

ಕುಂಭ ರಾಶಿ:

ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಸುಂದರ ಸ್ಥಳಗಳಿಗೆ ಹೋಗಿ ಮನಸ್ಸು ಹಗುರಾಗುವುದು. ಮನಸ್ಸಿನ ಬಂಧಗಳು ಸಡಿಲಾಗುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಪತ್ರ ವ್ಯವಹಾರಗಳಿಲ್ಲದೇ ಯಾವದನ್ನೂ ಒಪ್ಪಿಕೊಳ್ಳುವುದು ಬೇಡ.

ಮೀನ ರಾಶಿ:

ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಪ್ರಯತ್ನವೇ ಇಲ್ಲದೇ ಫಲವನ್ನು ಬಯಸುವುದು ಸರಿಯಲ್ಲ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವರು.

ಜನವರಿ 29,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಬ್ರಹ್ಮ, ಕರಣ : ಭದ್ರ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 21 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:04 – 15:29, ಯಮಗಂಡ ಕಾಲ 06:54- 08:20, ಗುಳಿಕ ಕಾಲ 09:46 – 11:12

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಪ್ರಭಾಸ್ ಸಿನಿಮಾನಲ್ಲಿ ನಟಿಸಲಿರುವ ಸಾಯಿ ಪಲ್ಲವಿ ಆದರೆ ಜೋಡಿ ಆಗಿ ಅಲ್ಲ – Kannada News | Sai Pallavi to join Kalki 2898 AD movie sequel replacing Deepika Padukone

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ದಕ್ಷಿಣದ ಕೆಲ ದೊಡ್ಡ ಸ್ಟಾರ್ ನಟರುಗಳಿಗೆ ಇರುವಂತೆಯೇ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ತಮ್ಮ ಅದ್ಭುತ ನಟನೆ, ಅಂದ ಮತ್ತು ನೃತ್ಯ ಪ್ರತಿಭೆಯಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ಸಾಯಿ ಪಲ್ಲವಿ, ಸಿನಿಮಾ ಮಾತ್ರವಲ್ಲದೆ ಪರದೆಯ ಹಿಂದೆಯೂ ತಮ್ಮ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ, ಯಾವುದೇ ಸಿನಿಮಾನಲ್ಲಿ ನಟಿಸಲು ಸಿನಿಮಾದ ಕತೆಯೇ ಮುಖ್ಯ, ಸ್ಟಾರ್ ನಟ ಇದ್ದಾರೆಂಬ ಕಾರಣಕ್ಕೆ ಸಿನಿಮಾನಲ್ಲಿ ನಟಿಸುವುದಿಲ್ಲ ಅವರು. ಇದೀಗ ಅವರು ಪ್ರಭಾಸ್ ಜೊತೆಗೆ ನಟಿಸುತ್ತಿದ್ದಾರೆ. ಆದರೆ ಪ್ರಭಾಸ್​​ಗೆ ಜೋಡಿ ಆಗಿ ಅಲ್ಲ.

ಹೌದು, ಪ್ರಭಾಸ್ ಜೊತೆಗೆ ನಾಯಕಿಯಾಗಿ ನಟಿಸಲು ಭಾರತದ ಟಾಪ್ ನಟಿಯರೇ ಸಾಲು ಗಟ್ಟಿ ನಿಂತಿದ್ದಾರೆ. ಆದರೆ ಸಾಯಿ ಪಲ್ಲವಿ ಆ ಸಾಲಿನಲ್ಲಿಲ್ಲ. ಆದರೂ ಅವರಿಗೆ ಪ್ರಭಾಸ್ ಸಿನಿಮಾನಲ್ಲಿ ನಟಿಸುವ ಅವಕಾಶ ದೊರೆತಿದೆ. ವಿಶೇಷವೆಂದರೆ ಇಬ್ಬರೂ ಒಟ್ಟಿಗೆ ನಟಿಸಲಿರುವ ಈ ಸಿನಿಮಾನಲ್ಲಿ ಪ್ರಭಾಸ್ ಹಾಗೂ ಸಾಯಿ ಪಲ್ಲವಿ ಜೋಡಿಯಾಗಿ ನಟಿಸುತ್ತಿಲ್ಲ.

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ಸಿನಿಮಾ ಪ್ರೇಮಿಗಳಿಗೆ ಗೊತ್ತೇ ಇದೆ. ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಶೀಘ್ರ ಆರಂಭ ಆಗಲಿದೆ. ಆದರೆ ಸಿನಿಮಾದ ಮೊದಲ ಭಾಗದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ ಎರಡನೇ ಭಾಗದಿಂದ ಹೊರಗೆ ನಡೆದಿದ್ದಾರೆ, ಅಥವಾ ಅವರನ್ನು ಚಿತ್ರತಂಡದಿಂದ ಕೈಬಿಡಲಾಗಿದೆ. ಮೊದಲ ಭಾಗದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದ ಪಾತ್ರದಲ್ಲಿ ಈಗ ಸಾಯಿ ಪಲ್ಲವಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ರಜನೀಕಾಂತ್-ಕಮಲ್ ಹಾಸನ್ ಸಿನಿಮಾನಲ್ಲಿ ನಟಿಸಲಿದ್ದಾರೆ ಸಾಯಿ ಪಲ್ಲವಿ?

ಕೆಲಸದ ಅವಧಿಗೆ ಸಂಬಂಧಿಸಿದಂತೆ ನಟಿ ದೀಪಿಕಾ ಪಡುಕೋಣೆ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾ ತಂಡದ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು ಇದೇ ಕಾರಣಕ್ಕೆ ದೀಪಿಕಾರನ್ನು ಚಿತ್ರತಂಡದಿಂದ ಕೈಬಿಡಲಾಗಿದೆ. ಇದೀಗ ದೀಪಿಕಾ ಪಡುಕೋಣೆ ಸ್ಥಾನವನ್ನು ಸಾಯಿ ಪಲ್ಲವಿ ತುಂಬಲಿದ್ದಾರೆ ಎನ್ನಲಾಗುತ್ತಿದೆ. ‘ಕಲ್ಕಿ 2898 ಎಡಿ’ ಸಿನಿಮಾದ ನಿರ್ದೇಶಕ ನಾಗ್ ಅಶ್ವಿನಿ ಈಗಾಗಲೇ ಸಾಯಿ ಪಲ್ಲವಿ ಜೊತೆ ಮಾತುಕತೆ ನಡೆಸಿದ್ದು ನಟಿ ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನು ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಹಲವು ದೊಡ್ಡ ಕಲಾವಿದರು ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾದ ಮೊದಲ ಭಾಗ 2024ರಲ್ಲಿ ಬಿಡುಗಡೆ ಆಗಿತ್ತು. ಇದೀಗ ಎರಡನೇ ಭಾಗದ ಚಿತ್ರೀಕರಣ ಇದೇ ವರ್ಷ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ? – Kannada News | Budget 2026 income tax expectation: Know if there is an end to old tax regime

ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ.

ಕಳೆದ ವರ್ಷದ ಬಜೆಟ್​ನಲ್ಲಿ (2025ರದ್ದು) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇನ್ಕಮ್ ಟ್ಯಾಕ್ಸ್ ವಿಚಾರದಲ್ಲಿ ಭರಪೂರ ಕೊಡುಗೆಗಳನ್ನು ಜನಸಾಮಾನ್ಯರಿಗೆ ಕೊಟ್ಟಿದ್ದರು. ಸ್ಲ್ಯಾಬ್ ದರಗಳು ಬದಲಾದವು, ಸರಳಗೊಂಡವು. 12 ಲಕ್ಷ ರೂ ಆದಾಯ ಇದ್ದವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಯಿತು. 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಒಳಗೊಂಡರೆ 12,75,000 ರೂ ವಾರ್ಷಿಕ ಆದಾಯ ಇರುವವರು ಇನ್ಕಮ್ ಟ್ಯಾಕ್ಸ್ ಬಾಧ್ಯತೆಯನ್ನೇ ಹೊಂದಿರುವುದಿಲ್ಲ.

ಇದನ್ನೂ ಓದಿ: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

ಭಾರತದಲ್ಲಿ ಹೆಚ್ಚಿನ ಆದಾಯ ತೆರಿಗೆ ಪಾವತಿದಾರರ ವಾರ್ಷಿಕ ಆದಾಯ 12.75 ಲಕ್ಷ ರೂ ಮಿತಿಯೊಳಗೆಯೇ ಇದೆ. ಹೀಗಾಗಿ, ಕಳೆದ ಬಾರಿಯ ಬಜೆಟ್​ನಿಂದ ಕೋಟ್ಯಂತರ ಜನರು ಟ್ಯಾಕ್ಸ್ ರಿಲೀಫ್ ಪಡೆದಿದ್ದರು. ಆದರೆ, ಈ ಟ್ಯಾಕ್ಸ್ ರಿಲೀಫ್ ಕೊಡಲಾಗಿದ್ದು ಹೊಸ ಟ್ಯಾಕ್ಸ್ ರೆಜೀಮ್​ನಲ್ಲಿ ಮಾತ್ರ. ಹಳೆಯ ಟ್ಯಾಕ್ಸ್ ರೆಜಿಮ್ ಹಾಗೆಯೇ ಇದೆ. ಇದು ಗೊಂದಲ ತಂದಿರುವ ಸಂಗತಿ.

ಈ ಬಾರಿಯ ಬಜೆಟ್​ನಲ್ಲಿ ಹಳೆಯ ಟ್ಯಾಕ್ಸ್ ರೆಜಿಮ್ ವಿಚಾರದಲ್ಲಿ ಇರುವ ಗೊಂದಲವನ್ನು ನಿವಾರಿಸುವ ಪ್ರಯತ್ನವಾಗುತ್ತಾ ಎಂಬುದು ಪ್ರಶ್ನೆಯಾಗಿದೆ. ಹೊಸ ಟ್ಯಾಕ್ಸ್ ರೆಜೀಮ್​ನಲ್ಲಿ ಸಿಕ್ಕಾಪಟ್ಟೆ ಟ್ಯಾಕ್ಸ್ ರಿಲೀಫ್ ಕೊಡಲಾಗಿದ್ದರೂ, ಹಳೆಯ ಟ್ಯಾಕ್ಸ್ ರೆಜಿಮ್​ನ ಆಕರ್ಷಣೆ ಉಳಿದಿರುವುದು ಅದರ ಡಿಡಕ್ಷನ್ ಅವಕಾಶ.

ಓಲ್ಡ್ ಟ್ಯಾಕ್ಸ್ ರೆಜೀಮ್​ನಲ್ಲಿ ಸುಮಾರು 3 ಲಕ್ಷ ರೂವರೆಗೆ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇದೆ. ಜನರು ಪಿಪಿಎಫ್ ಇತ್ಯಾದಿಯಲ್ಲಿ ಹೂಡಿಕೆ ಮಾಡಿ ಅದರಿಂದ ಟ್ಯಾಕ್ಸ್ ಡಿಡಕ್ಷನ್ ಪಡೆಯಬಹುದು. ಹೊಸ ಟ್ಯಾಕ್ಸ್ ಸಿಸ್ಟಂನಲ್ಲಿ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಬಿಟ್ಟರೆ ಬೇರೆ ಡಿಡಕ್ಷನ್ ಸೌಲಭ್ಯ ಇಲ್ಲ. ಹೀಗಾಗಿ, ಈಗಲೂ ಕೂಡ ಬಹಳ ಜನರು ಹಳೆಯ ಟ್ಯಾಕ್ಸ್ ರೆಜಿಮ್ ಅನ್ನೇ ಬಳಸುತ್ತಿರುವುದುಂಟು.

ಇದನ್ನೂ ಓದಿ: ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ

ಈ ಬಾರಿಯ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಳೆಯ ಟ್ಯಾಕ್ಸ್ ಸಿಸ್ಟಂ ಅನ್ನು ನಿಲ್ಲಿಸುವ ನಿರ್ಧಾರ ಮಾಡುತ್ತಾರಾ? ಹೊಸ ಟ್ಯಾಕ್ಸ್ ಸಿಸ್ಟಂನಲ್ಲಿ ಇನ್ನಷ್ಟು ಡಿಡಕ್ಷನ್ ಆಯ್ಕೆಗಳನ್ನು ಕೊಟ್ಟು ಹಳೆಯ ರೆಜಿಮ್ ಅನ್ನು ನಿಲ್ಲಿಸಿದರೂ ಅಚ್ಚರಿ ಇರುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | February Festival Calendar 2026: Important Festival List Of February month

ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು,  ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ

  • ಫೆಬ್ರವರಿ 01- ವೇದವ್ಯಾಸ ಪೂಜೆ
  • ಫೆಬ್ರವರಿ 02- ಮಾಘ ಕೃಷ್ಣ ಪಕ್ಷ
  • ಫೆಬ್ರವರಿ 04- ಶಬೀ ಬರಾತ್
  • ಫೆಬ್ರವರಿ 05- ಸಂಕಷ್ಟಹರ ಚತುರ್ಥಿ
  • ಫೆಬ್ರವರಿ 06- ಮಹಾನಕ್ಷತ್ರ ಧನಿಷ್ಠಾ
  • ಫೆಬ್ರವರಿ 09- ಸೀತಾ ಜಯಂತಿ
  • ಫೆಬ್ರವರಿ 12-ಕುಂಭ ಸಂಕ್ರಮಣ
  • ಫೆಬ್ರವರಿ 13- ಸರ್ವೈಕಾದಶಿ ವಿಜಯಾ
  • ಫೆಬ್ರವರಿ 14- ಪ್ರದೋಷ
  • ಫೆಬ್ರವರಿ 15- ಮಹಾಶಿವರಾತ್ರಿ
  • ಫೆಬ್ರವರಿ 17 – ಅಮಾವಾಸ್ಯಾ
  • ಫೆಬ್ರವರಿ 18- ಫಾಲ್ಗುನ ಶುಕ್ಲ ಪಕ್ಷ
  • ಫೆಬ್ರವರಿ 19- ರಾಮಕೃಷ್ಣ ಪರಮ ಹಂಸ ಜನ್ಮದಿನ
  • ಫೆಬ್ರವರಿ 19- ರಂಜಾನ್ ಪ್ರಾರಂಭ
  • ಫೆಬ್ರವರಿ 24- ಶ್ರೀ ರಾಘವೇಂದ್ರ ಜಯಂತಿ
  • ಫೆಬ್ರವರಿ 27- ಸರ್ವೈಕಾದಶಿ ಆಮಲಕಿ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ: ಮಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಾಯಿ – Kannada News | Medical PG Student Suicide In Dharwad, Mother Gives Reasons to Death

ಧಾರವಾಡ,(ಜನವರಿ 28): ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: Dharwad: ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

Source link

6,6,6,6,6,6,6.. 23 ಎಸೆತಗಳಲ್ಲಿ 65 ರನ್ ಚಚ್ಚಿದ ಶಿವಂ ದುಬೆ

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿರುವ 215 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆಲ್‌ರೌಂಡರ್‌ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ತಂಡವು 82 ರನ್​ಗಳಿಗೆ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ಶಿವಂ ದುಬೆ ಕಿವೀಸ್ ಬೌಲರ್​ಗಳ ಎದುರು ಸಿಕ್ಸರ್​ ಹಾಗೂ ಬೌಂಡರಿಗಳ ಮಳೆಗರೆದರು.

ಹಾರ್ದಿಕ್ ಪಾಂಡ್ಯ ಔಟಾದ ಬಳಿಕ ಕ್ರೀಸ್​ಗೆ ಬಂದ ದುಬೆ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟುವ ಮೂಲಕ ಸ್ಫೋಟಕ ಆರಂಭ ಪಡೆದರು. ಆ ಬಳಿಕವೂ ತನ್ನ ಹೊಡಿಬಡಿ ಆಟ ಮುಂದುವರೆಸಿದ ದುಬೆ, ಸೋಧಿ ಬೌಲ್ ಮಾಡಿದ ಒಂದೇ ಓವರ್​ನಲ್ಲಿ ಬರೋಬ್ಬರಿ 29 ರನ್ ಕಲೆಹಾಕಿದರು. ಈ ಓವರ್​ನಲ್ಲಿ ದುಬೆ 3 ಸಿಕ್ಸರ್ ಹಾಗೂ 2 ಬೌಂಡರಿಗಳನ್ನು ಬಾರಿಸಿದರು. ಮುಂದಿನ ಓವರ್​ನಲ್ಲಿ 2 ಸಿಕ್ಸರ್‌ಗಳನ್ನು ಬಾರಿಸಿದ ದುಬೆ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ಇದರೊಂದಿಗೆ ದುಬೆ ನ್ಯೂಜಿಲೆಂಡ್ ವಿರುದ್ಧ ವೇಗದ ಅರ್ಧಶತಕ ಬಾರಿಸಿದ ಭಾರತದ ಎರಡನೇ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದರು. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಭಿಷೇಕ್ ಶರ್ಮಾ ಇದೇ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ಇನ್ನು ಈ ಪಂದ್ಯದಲ್ಲಿ ಏಕಾಂಗಿಯಾಗಿ ನಿಂತು ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದ ದುಬೆ ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ರನೌಟ್​ಗೆ ಬಲಿಯಾದರು. ಅಂತಿಮವಾಗಿ ದುಬೆ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಹಿತ 65 ರನ್ ಬಾರಿಸಿದರು.

Source link