Category Archives: Blog

Your blog category

ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea

ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ವಿಕ್ರಮನಾಥ್ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ರಾಮಮೂರ್ತಿ ಅವರು ಕಾಂಗ್ರೆಸ್​​​ನ ಸೌಮ್ಯಾ ರೆಡ್ಡಿ ಅವರನ್ನು 16 ಮತಗಳಿಂದ ಸೋಲಿಸಿದ್ದರು. ಆದ್ರೆ, ಮತ ಎಣಿಕೆಯಲ್ಲಿ ಚುನಾವನಾಧಿಕಾರಿಗಳು ಸರಿಯಾಗಿ ನಿಯಮ ಪಾಲನೆ ಮಾಡಿಲ್ಲ ಎಂದು ಸೌಮ್ಯ ರೆಡ್ಡಿ ಅವರು ಹೈಕೋರ್ಟ್​​ಗೆ ಫಲಿತಾಂಶ ತಕರಾರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಪ್ರಕರಣದ ಟ್ರಯಲ್ ತಡೆ ಕೋರಿ ರಾಮಮೂರ್ತಿ ಸಹ ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ರಾಮಮುರ್ತಿ ಅವರ ಅರ್ಜಿಯನ್ನು ವಜಾ ಮಾಡಿತ್ತು. ಬಳಿಕ ಇದನ್ನು ಪ್ರಶ್ನಿಸಿ ರಾಮಮೂರ್ತಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು. ಆದ್ರೆ, ಇದೀಗ ಸುಪ್ರೀಂಕೋರ್ಟ್​​ನಲ್ಲೂ ಸಹ ಹಿನ್ನಡೆಯಾಗಿದೆ.

ಇದನ್ನೂ ಓದಿ: ‘ಕೈ’ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! ಕೊನೆಗೂ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟ, ಬಿಜೆಪಿಗೆ ಗೆಲುವು – ನಡುರಾತ್ರಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ

ಮೊದಲು ಕಾಂಗ್ರೆಸ್​​​ನ ಸೌಮ್ಯ ರೆಡ್ಡಿ ಅವರು 116 ಮತಗಳಿಂದ ಗೆದ್ದುಬೀಗಿದ್ದರು.  ಆದ್ರೆ, ಕೆಲ ಗೊಂದಲಗಳು ಏರ್ಪಟ್ಟಿದ್ದರಿಂದ ಮರು ಎಣಿಕೆಯಾದಾಗ ಫಲಿತಾಂಶ ಕಾಂಗ್ರೆಸ್​ನ ‘ಕೈ’ ಚೆಲ್ಲಿದ್ದು, ವಿಜಯದ ಲಕ್ಷ್ಮೀ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರ ಪಲಾಗಿತ್ತು. ಕೊನೆ ಕ್ಷಣದಲ್ಲಿ ರಿಸಲ್ಟ್ ಕೈಕೊಟ್ಟಿದ್ದರಿಂದ ಸೌಮ್ಯ ರೆಡ್ಡಿ ಸ್ಥಳದಲ್ಲೇ ಕಣ್ಣೀರಿಟ್ಟಿದ್ದರು. ಅಲ್ಲದೇ ಚುನಾವಣಾ ಆಯೋಗದ ಆದೇಶದನ್ವಯ ಮತ ಎಣಿಕೆ ಆಗಿಲ್ಲ. ಮರು ಮತ ಎಣಿಕೆ ನಿಯಮಬಾಹಿರವಾಗಿ ಆಗಿದೆ. 837 ಅಂಚೆ ಮತ ಮರು ಎಣಿಕೆ ಆಗಬೇಕು. ವಿಡಿಯೋ ಫೂಟೇಜ್ ಪರಿಶೀಲಿಸಬೇಕೆಂದು ಕೋರ್ಟ್​ ಮೊರೆ ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:17 pm, Wed, 28 January 26

Source link

ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ! – Kannada News | 63 year old spikes soft drinks at supermarket with urine for over year viral news

ನವದೆಹಲಿ, ಜನವರಿ 28: ತಾನು ಕೆಲಸ ಮಾಡುವ ಸೂಪರ್ ಮಾರ್ಕೆಟ್​​ನಲ್ಲಿ ತಂಪು ಪಾನೀಯಗಳಿಗೆ ಮೂತ್ರ ಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಹಾಂಗ್​ಕಾಂಗ್​ನಲ್ಲಿ (Hong Kong) ನಡೆದಿದೆ. 63 ವರ್ಷದ ಮಾಜಿ ಆಸ್ತಿ ಏಜೆಂಟ್ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ಕಲುಷಿತ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿ ಸೂಪರ್ ಮಾರ್ಕೆಟ್ ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಾಟಲಿಗಳನ್ನು ಇಟ್ಟಿದ್ದ ಎಂದು ವರದಿ ತಿಳಿಸಿದೆ.

1 ವರ್ಷಕ್ಕೂ ಹೆಚ್ಚು ಕಾಲ ಆತ ಈ ರೀತಿ ಸೂಪರ್ ಮಾರ್ಕೆಟ್​ಗಳಲ್ಲಿ ಇತರ ವಸ್ತುಗಳ ಜೊತೆಗೆ ಮೂತ್ರ ಹಾಕಿದ ತಂಪು ಪಾನೀಯಗಳನ್ನು ಇರಿಸಿದ್ದ. ಈ ವಿಷಯ ಬಯಲಾಗುತ್ತಿದ್ದಂತೆ ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿ ಹಾಂಗ್ ಕಾಂಗ್ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ತನ್ನ ನಿವೃತ್ತಿ ಮತ್ತು ವಿಚ್ಛೇದನದ ಖಿನ್ನತೆಯಿಂದಾಗಿ ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾನೆ.

ಇದನ್ನೂ ಓದಿ: ಹಿಮಪಾತದಿಂದ ಯಜಮಾನ ಸತ್ತರೂ 3 ದಿನ ಹೆಣದ ಬಳಿಯೇ ನಿಂತು ಕಾದ ಸಾಕುನಾಯಿ!

ಫ್ರಾಂಕ್ಲಿನ್ ಲೋ ಕಿಂಗೈ ಎಂಬ ವ್ಯಕ್ತಿ ಸೂಪರ್ ಮಾರ್ಕೆಟ್ ಸಿಬ್ಬಂದಿಯ ಬಗ್ಗೆ ಅತೃಪ್ತಿ ಹೊಂದಿದ್ದ. ನಂತರ ಮೂತ್ರ ಹಾಕಿದ ಬಾಟಲಿಗಳನ್ನು ಇಡಲು ಪ್ರಾರಂಭಿಸಿದನು. ಅವರು ಕೋಕಾ-ಕೋಲಾ ಪ್ಲಸ್ ಮತ್ತು 7-ಅಪ್ ಪಾನೀಯಗಳಿಗೆ ಮೂತ್ರವನ್ನು ಸೇರಿಸಿ ವೆಲ್ಕಮ್ ಮತ್ತು ಪಾರ್ಕ್ನ್ಶಾಪ್ ಔಟ್​ಲೆಟ್​ಗಳಲ್ಲಿ ಇರಿಸಿದರು. ಈ ಘಟನೆ 2024ರ ಜುಲೈ 21 ಮತ್ತು ಕಳೆದ ವರ್ಷ ಆಗಸ್ಟ್ 6ರ ನಡುವೆ ನಡೆದಿದೆ.

ತಮ್ಮ ತಪ್ಪನ್ನು ಅವರು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ. ಆ ವ್ಯಕ್ತಿ ಮಾಡಿದ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಆ ವ್ಯಕ್ತಿ ವಿಚ್ಛೇದನದ ನಂತರ ಖಿನ್ನತೆಗೆ ಒಳಗಾಗಿದ್ದರು. ಅವರಿಗೆ ಯಾವುದೇ ಭಾವನಾತ್ಮಕ ಬೆಂಬಲ ಇರಲಿಲ್ಲ. ಅವರ ಮಾಜಿ ಪತ್ನಿ ಮತ್ತು ಮಗ ವಿದೇಶಕ್ಕೆ ಸ್ಥಳಾಂತರಗೊಂಡಿದ್ದರು. ಅವರಿಬ್ಬರ ಜೊತೆ ಆ ವ್ಯಕ್ತಿಗೆ ಯಾವುದೇ ಸಂಪರ್ಕವೂ ಇರಲಿಲ್ಲ. ಅವರು ತಮ್ಮ ಪೋಷಕರನ್ನು ಸಹ ಕಳೆದುಕೊಂಡಿದ್ದರು. ಅಲ್ಲದೆ, ಶಾಪ್​ನ ಸಿಬ್ಬಂದಿಯ ಬಗ್ಗೆಯೂ ಅವರು ಅತೃಪ್ತಿ ಹೊಂದಿದ್ದರು. ಹೀಗಾಗಿ, ಖಿನ್ನತೆಯಿಂದ ಬಳಲುತ್ತಿದ್ದ ಅವರು ಈ ಕೃತ್ಯ ಎಸಗಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್​​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ

ಹಲವಾರು ವೆಲ್‌ಕಮ್ ಮತ್ತು ಪಾರ್ಕ್‌ಶಾಪ್ ಔಟ್‌ಲೆಟ್‌ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಗ್ಗೆ ಹಲವಾರು ವರದಿಗಳು ಬಂದ ನಂತರ ಜನರಿಗೆ ಅದರ ಬಗ್ಗೆ ತಿಳಿದುಬಂದಿತು. ಜುಲೈ 2025ರಲ್ಲಿ ಮಾಂಗ್ ಕೋಕ್‌ನ ಯೂನಿಯನ್ ಪಾರ್ಕ್ ಸೆಂಟರ್‌ನಲ್ಲಿರುವ ವೆಲ್‌ಕಮ್ ಶಾಖೆಯಿಂದ ಮೂತ್ರ ಮಿಶ್ರಿತ ತಂಪು ಪಾನೀಯಗಳ ಬಾಟಲಿಯ ಕೂಲ್ ಡ್ರಿಂಕ್ಸ್ ಸೇವಿಸಿದ ನಂತರ 9 ವರ್ಷದ ಬಾಲಕನೊಬ್ಬ ಅಸ್ವಸ್ಥನಾಗಿದ್ದ. ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತ ಚೇತರಿಸಿಕೊಂಡ. ಆದರೆ, ಆ ಘಟನೆಯ ಬಳಿಕ ಈ ಸುದ್ದಿ ಹೆಚ್ಚು ಪ್ರಚಲಿತಕ್ಕೆ ಬಂದಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police

ಬೆಂಗಳೂರು, ಜನವರಿ 28: ಡ್ರಗ್ಸ್​ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜ.19ರ ಮಧ್ಯಾಹ್ನ ಜಕ್ಕೂರು ರೈಲ್ವೆ ಟ್ರ್ಯಾಕ್ ಬಳಿ ಡ್ರಗ್ಸ್​ ಪತ್ತೆಯಾಗಿತ್ತು. ಜ.21ರಂದು ಜಿಕೆವಿಕೆ ಮೈದಾನದಲ್ಲಿ 2 ಕೆಜಿ ಹೈಡ್ರೋ ಗಾಂಜಾ ಸೀಜ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: Bengaluru: ಡ್ರಗ್ಸ್​ ದಂಧೆಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಮೈಸೂರು ರಸ್ತೆ ಸ್ಯಾಟ್​ಲೈಟ್​ ನಿಲ್ದಾಣ ಬಳಿ 2 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. 500 ಎಲ್​ಎಸ್​ಡಿ ಸ್ಟ್ರಿಪ್ಸ್​ ವಶಕ್ಕೆ ಪಡೆಯಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಅಮೃತಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​ ಮಾಹಿತಿ ನೀಡಿದ್ದಾರೆ.

3 ಕೋಟಿ ರೂ ಮೌಲ್ಯದ ಡ್ರಗ್ಸ್​​ ಸೀಜ್​

ಇನ್ನು ಇತ್ತೀಚೆಗೆ ನಗರದಲ್ಲಿ ಡ್ರಗ್ಸ್ ಸಪ್ಲೈಗೆ ಸಿದ್ದವಾಗಿದ್ದ 3 ಕೋಟಿ ರೂ ಮೌಲ್ಯದ ಡ್ರಗ್ಸ್​​ ಸೀಜ್​ ಮಾಡಲಾಗಿದ್ದು, ಇಬ್ಬರು ಪೆಡ್ಲರ್​ಗಳನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದರು. ಹೊಸ ವರ್ಷದ ಪಾರ್ಟಿಗಳಿಗೆ ಮಾರಾಟ ಮಾಡಲು ಸಿದ್ಧವಾಗಿದ್ದ 3 ಕೋಟಿ ರೂ. ಮೌಲ್ಯದ 3.2 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು, ಇಬ್ಬರು ಡ್ರಗ್ಸ್​ ಪೆಡ್ಲರ್‌ಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ ಪತ್ತೆ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್

ಈ ಕೋಟ್ಯಂತರ ಮೌಲ್ಯದ ಡ್ರಗ್ಸ್ ಡೀಲ್ ಹಿಂದೆ ನೈಜೀರಿಯಾ ಮೂಲದ ಪ್ರಮುಖ ಪೆಡ್ಲರ್‌ನ ಲಿಂಕ್ ಇರುವುದು ದೃಢಪಟ್ಟಿತ್ತು. ಪ್ರಮುಖ ಆರೋಪಿ ನೈಜೀರಿಯಾ ಮೂಲದ ಪೆಡ್ಲರ್‌ನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್ – Kannada News | Ajit Pawar’s Human Side: How He Broke Protocol to Help an Injured Man 20 Days Ago

ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು.

ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು. ಇದಲ್ಲದೆ, ಅವರು ತಕ್ಷಣವೇ ಗಾಯಗೊಂಡ ಯುವಕನಿಗೆ ಸ್ಥಳದಲ್ಲೇ ಸಹಾಯ ಮಾಡಿದ್ದರು ಮತ್ತು ತಕ್ಷಣದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲು ಸಹಾಯ ಮಾಡಿದ್ದರು.

ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವುದನ್ನು ಅವರು ಹೆಚ್ಚು ಮುಖ್ಯವೆಂದು ಅವರು ಭಾವಿಸಿದ್ದರು. ಅವರನ್ನು ಚಿಕಿತ್ಸೆಗೆ ಕರೆದೊಯ್ಯಲು ಶಿಷ್ಟಾಚಾರವನ್ನು ಮುರಿದಿದ್ದರು. ಆ ದಿನ, ಅಜಿತ್ ಪವಾರ್ ಪುಣೆಯಲ್ಲಿರುವ ತಮ್ಮ ನಿವಾಸ ಜಿಜೈನಿಂದ ಪಿಂಪ್ರಿ-ಚಿಂಚ್‌ವಾಡ್‌ಗೆ ಪ್ರಯಾಣಿಸುತ್ತಿದ್ದಾಗ, ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ಕಂಡಿದ್ದರು.

ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಮುಂಬೈನಿಂದ ಬಾರಾಮತಿಗೆ ಹಾರುತ್ತಿದ್ದ ಖಾಸಗಿ ಚಾರ್ಟರ್ ವಿಮಾನವು ಇಳಿಯುವ ಕೆಲವೇ ಕ್ಷಣಗಳ ಮೊದಲು ಕೆಳಗೆ ಅಪ್ಪಳಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದರಿಂದ ವಿಮಾನವನ್ನು ಕ್ರ್ಯಾಶ್​ ಲ್ಯಾಂಡಿಂಗ್ ಮಾಡಿದ ಕಾರಣ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು ಎಂದು ವರದಿಯಾಗಿದೆ.

ಅಜಿತ್ ಪವಾರ್ 1982 ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಯಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. 1991 ರಲ್ಲಿ, ಅವರು ಪುಣೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದರು.

ಮತ್ತಷ್ಟು ಓದಿ: ಅಜಿತ್ ಪವಾರ್ ಇದ್ದ ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅವರು ಮೊದಲು 1991 ರಲ್ಲಿ ಬಾರಾಮತಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು ಆದರೆ ನಂತರ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಟ್ಟರು. ಪವಾರ್ ಅವರು ಬಾರಾಮತಿಯಿಂದ ಏಳು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು. 1991 ರ ಉಪಚುನಾವಣೆಯಲ್ಲಿ ಮತ್ತು ನಂತರ 1995, 1999, 2004, 2009 ಮತ್ತು 2014 ರಲ್ಲಿ ಗೆದ್ದಿದ್ದರು.

ನವೆಂಬರ್ 2019 ರಲ್ಲಿ, ಅವರು NCPಯನ್ನು ಒಡೆದು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವನ್ನು ಸೇರಿಕೊಂಡಿದ್ದರು ಮತ್ತು ಉಪಮುಖ್ಯಮಂತ್ರಿಯಾಗಿದ್ದರು. ಫೆಬ್ರವರಿ 2024 ರಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೊಳೆಯಾದ ದಿಂಬುಗಳನ್ನು ತೊಳೆಯದೆ ಕ್ಷಣಾರ್ಧದಲ್ಲಿ ಸ್ವಚ್ಛಗೊಳಿಸಲು ಈ ಸರಳ ಸಲಹೆ ಪಾಲಿಸಿ – Kannada News | You can clean a dirty pillow by following these simple tips

ಬಹುತೇಕ ಹೆಚ್ಚಿನವರು ದಿಂಬು ಕವರ್‌ ಹಾಗೂ ಬೆಟ್‌ಶೀಟ್‌ಗಳನ್ನು ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಸ್ವಚ್ಛಗೊಳಿಸುತ್ತಿರುತ್ತಾರೆ. ಆದ್ರೆ ದಿಂಬಿನ (pillow) ಸ್ವಚ್ಛತೆಯ ಕಡೆಗೆ ಗಮನವೇ ಕೊಡುವುದಿಲ್ಲ. ದಿಂಬಿನ ಕವರ್‌ ಕ್ಲೀನ್‌ ಮಾಡುವುದು ಎಷ್ಟು ಮುಖ್ಯವೋ ಅದೇ ರೀತಿ ದಿಂಬನ್ನು ಸಹ ಸ್ವಚ್ಛಗೊಳಿಸಬೇಕಾಗುತ್ತದೆ. ಇಲ್ಲದಿದ್ದರೆ ದಿಂಬಲ್ಲಿ ಸಂಗ್ರಹವಾಗುವ ಧೂಳು ಹಾಗೂ ಕೊಳೆಗಳ  ಕಾರಣದಿಂದ ಅಲರ್ಜಿ, ಉಸಿರಾಟದ ತೊಂದರೆಗಳಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಮತ್ತು ಮೊಡವೆಯ ಸಮಸ್ಯೆಗಳು ಸಹ ಹೆಚ್ಚಾಗಬಹುದು. ಹಾಗಾಗಿ ದಿಂಬನ್ನು ಸ್ವಚ್ಚಗೊಳಿಸುವುದು ಅತ್ಯಗತ್ಯ. ಇವೆಲ್ಲಾ ಸರಿ ಆದ್ರೆ ದಿಂಬನ್ನು ನೀರಿನಿಂದ ತೊಳೆಯದೆ ಹೇಗಪ್ಪಾ ಕ್ಲೀನ್‌ ಮಾಡೋದು ಎಂಬ ಪ್ರಶ್ನೆ ಹಲವರಲ್ಲಿ ಇದ್ದೇ ಇರುತ್ತೆ. ಅದಕ್ಕಾಗಿ ಈ ಸರಳ ಸಲಹೆಗಳನ್ನು ಅನುಸರಿಸಿದರೆ ಸಾಕು.

ದಿಂಬನ್ನು ಸ್ವಚ್ಛಗೊಳಿಸಲು ಈ ಸಲಹೆಗಳನ್ನು ಪಾಲಿಸಿ:

ವ್ಯಾಕ್ಯೂಮ್‌ ಕ್ಲೀನರ್‌ ಬಳಸಿ: ನಿಮ್ಮ ದಿಂಬುಗಳನ್ನು ತೊಳೆಯದೆಯೇ ಸ್ವಚ್ಛಗೊಳಿಸಲು ನೀವು ವ್ಯಾಕ್ಯೂಮ್‌ ಕ್ಲೀನರ್‌ ಬಳಸಬಹುದು. ಇದು ಹೆಚ್ಚು ಸಮಯ ತೆಗೆದುಕೊಳ್ಳದೆ ದಿಂಬಿನಲ್ಲಿ ಸಂಗ್ರಹವಾದ ಯಾವುದೇ ಕೊಳಕು ಮತ್ತು ಕೊಳೆಯನ್ನು ತೆಗೆದುಹಾಕುತ್ತದೆ. ಇದಕ್ಕಾಗಿ ಮೊದಲು ದಿಂಬಿನ ಕವರ್‌ಗಳನ್ನು ತೆಗೆದುಹಾಕಿ  ನಂತರ ವ್ಯಾಕ್ಯೂಮ್ ಕ್ಲೀನರ್‌ನ ವೇಗವನ್ನು ಕಡಿಮೆ ಇರಿಸಿ, ಇದರ ಸಹಾಯದಿಂದ ನಿಧಾನವಾಗಿ ಬಿಂಬನ್ನು ಕ್ಲೀನ್‌ ಮಾಡಿ.

ಕೋಲು ಬಳಸಿ: ನಿಮ್ಮ ಬಳಿ ವ್ಯಾಕ್ಯೂಮ್ ಕ್ಲೀನರ್ ಇಲ್ಲದಿದ್ದರೆ, ನೀವು ನಿಮ್ಮ ದಿಂಬುಗಳನ್ನು ಕೋಲಿನಿಂದ ಸ್ವಚ್ಛಗೊಳಿಸಬಹುದು, ಕೋಲಿನಿಂದ ದಿಂಬಿಗೆ ಹೊಡೆಯುವ ಮೂಲಕ ದಿಂಬನ್ನು ಸ್ವಚ್ಛಗೊಳಿಸಬಹುದು. ಇದು ದಿಂಬಿನ ಮೇಲಿನ ಧೂಳು, ಕೊಳೆಯನ್ನು ತೆಗೆದುಹಾಕುತ್ತದೆ.

ಅಡಿಗೆ ಸೋಡಾ: ನಿಮ್ಮ ದಿಂಬುಗಳನ್ನು ಸ್ವಚ್ಛಗೊಳಿಸಲು ನೀವು ಅಡಿಗೆ ಸೋಡಾವನ್ನು ಬಳಸಬಹುದು. ದಿನಕ್ಕಾಗಿ ನೀವು ದಿಂಬಿನ ಮೇಲಿನ ಕೊಳಕು ಅಥವಾ ಕಲೆಗಳ ಮೇಲೆ 1 ಟೀ ಚಮಚ ಅಡಿಗೆ ಸೋಡಾವನ್ನು ಸಿಂಪಡಿಸಿ. ನಂತರ, ಅದನ್ನು ಬ್ರಷ್‌ನಿಂದ ಸ್ಕ್ರಬ್ ಮಾಡಿ. 10 ರಿಂದ 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ಅದು ಒಣಗಿದ ನಂತರ, ಅದನ್ನು ನಿಮ್ಮ ಕೈಗಳಿಂದ ಸ್ಕ್ರಬ್ ಮಾಡಿ. ಇದು ದಿಂಬನ್ನು ಸ್ವಚ್ಛಗೊಳಿಸುವುದು ಮಾತ್ರವಲ್ಲ ವಾಸನೆಯನ್ನೂ ಹೋಗಲಾಡಿಸುತ್ತದೆ.

ಟೂತ್‌ಪೇಸ್ಟ್:‌ ನಿಮ್ಮ ದಿಂಬನ್ನು ಸ್ವಚ್ಛಗೊಳಿಸಲು ನೀವು ಟೂತ್‌ಪೇಸ್ಟ್‌ ಬಳಸಬಹುದು. ಇದಕ್ಕಾಗಿ ಸ್ವಲ್ಪ ಟೂತ್‌ಪೇಸ್ಟನ್ನು  ಟೂತ್‌ಬ್ರಷ್‌ಗೆ ಹಚ್ಚಿ ಅದನ್ನು ದಿಂಬಿನ ಮೇಲಿನ ಕೊಳೆಗೆ ಹಚ್ಚಿ. ನಂತರ, ಬ್ರಷ್‌ನಿಂದ ಅದನ್ನು ಸ್ಕ್ರಬ್ ಮಾಡಿ 10 ನಿಮಿಷಗಳ ಕಾಲ ಹಾಗೆಯೇ ಬಿಡಿ. ಟೂತ್‌ಪೇಸ್ಟ್ ಒಣಗಿದ ನಂತರ, ಅದನ್ನು ನಿಮ್ಮ ಕೈಗಳಿಂದ ಸ್ಕ್ರಬ್ ಮಾಡಿ, ಮತ್ತು ದಿಂಬು ಸಂಪೂರ್ಣವಾಗಿ ಸ್ವಚ್ಛವಾಗುತ್ತದೆ.

ಇದನ್ನೂ ಓದಿ: ಗ್ಯಾಸ್‌ನಲ್ಲಿಟ್ಟ ಹಾಲು ಉಕ್ಕಿ ಚೆಲ್ಲಬಾರದೆಂದರೆ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು

ಬಿಸಿಲಿನಲ್ಲಿಡಿ: ಇದು ಅತ್ಯಂತ ಹಳೆಯ ಮತ್ತು ಪರಿಣಾಮಕಾರಿ ಸ್ವಚ್ಛತಾ ವಿಧಾನವಾಗಿದೆ.  ಸೂರ್ಯನ ಬೆಳಕು ನೈಸರ್ಗಿಕ ಸೋಂಕುನಿವಾರಕವಾಗಿದ್ದು,  ದಿಂಬನ್ನು ಬಿಸಿಲಿನಲ್ಲಿ ಇಡಿ ಇದರಿಂದ ತೇವಾಂಶ ಕಡಿಮೆಯಾಗುತ್ತದೆ ಮತ್ತು ಇದು ಬ್ಯಾಕ್ಟೀರಿಯಾ ಬೆಳವಣಿಗೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಪ್ರತಿ 15 ದಿನಗಳಿಗೊಮ್ಮೆ ಕನಿಷ್ಠ 3 ರಿಂದ 4 ಗಂಟೆಗಳ ಕಾಲ ದಿಂಬನ್ನು ನೇರ ಸೂರ್ಯನ ಬೆಳಕಿನಲ್ಲಿ ಇರಿಸಿ.

ಸ್ಪಾಟ್ ಕ್ಲೀನಿಂಗ್: ದಿಂಬಿನ ಮೇಲೆ ಮೊಂಡುತನದ ಬೆವರು ಅಥವಾ ಎಣ್ಣೆಯ ಕಲೆಗಳಿದ್ದರೆ, ಇಡೀ ದಿಂಬನ್ನು ನೀರಿನಿಂದ ತೊಳೆಯುವ ಅಗತ್ಯವಿಲ್ಲ. ಅದಕ್ಕಾಗಿ ಹತ್ತಿ ಬಟ್ಟೆಯನ್ನು ವಿನೆಗರ್ ಅಥವಾ ಸೌಮ್ಯ ಸೋಪ್‌ನಲ್ಲಿ ಅದ್ದಿ, ಕಲೆಯಾದ ಪ್ರದೇಶವನ್ನು ಮಾತ್ರ ನಿಧಾನವಾಗಿ ಉಜ್ಜಿ. ನಂತರ, ದಿಂಬನ್ನು ಫ್ಯಾನ್ ಅಡಿಯಲ್ಲಿ ಒಣಗಿಸಿ.

 ಸಾರಭೂತ ತೈಲ ಸ್ಪ್ರೇ: ನಿಮ್ಮ ದಿಂಬನ್ನು ಪರಿಮಳಯುಕ್ತವಾಗಿಸಲು ಮತ್ತು ಬ್ಯಾಕ್ಟೀರಿಯಾ ಮುಕ್ತವಾಗಿಡಲು ನೀವು  ದಿಂಬಿನ ಮೇಲೆ ಸಾರಭೂತ ತೈಲವನ್ನು ಸಿಂಪಡಿಸಬಹುದು. ಒಂದು ಸ್ಪ್ರೇ ಬಾಟಲಿಯಲ್ಲಿ ನೀರು ಮತ್ತು ಕೆಲವು ಹನಿ ಟೀ ಟ್ರೀ ಎಣ್ಣೆ ಅಥವಾ ಲ್ಯಾವೆಂಡರ್ ಎಣ್ಣೆಯನ್ನು ಮಿಶ್ರಣ ಮಾಡಿ. ಅದನ್ನು ದಿಂಬಿನ ಮೇಲೆ ಲಘುವಾಗಿ ಸಿಂಪಡಿಸಿ. ಇದು ಪರಿಮಳವನ್ನು ನೀಡುವುದು ಮಾತ್ರವಲ್ಲ ಲ್ಯಾವೆಂಡರ್ ಪರಿಮಳವು ನಿಮಗೆ ಆಳವಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿ 1979 ಅನ್​ಟೋಲ್ಡ್ ಸ್ಟೋರಿ: ಬಂಗಾಳದ ಕಥೆಯ ಸಿನಿಮಾಗೆ ಕೋಲಾರದಲ್ಲಿ ಶೂಟಿಂಗ್ – Kannada News | The 1979 Untold Story Kannada movie ready for release

ಐತಿಹಾಸಿಕ ಕಥಾಹಂದರ ಹೊಂದಿರುವ ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಕನ್ನಡ ಚಿತ್ರ ರಂಗದಲ್ಲಿ (Kannada Film Industry) ಇತ್ತೀಚಿಗೆ ಅನೇಕ ಹೊಸ ಪ್ರಯೋಗಗಳು ನಡೆಯುತ್ತಿವೆ. ಕಥೆ, ಪಾತ್ರಗಳ ಮೂಲಕ ಪ್ರಯೋಗ ಮಾಡಲಾಗುತ್ತಿದೆ. ಹೊಸ ಪ್ರತಿಭೆಗಳು ಹೊಸ ರೀತಿಯಲ್ಲಿ ಜನರಿಗೆ ಕಥೆಗಳನ್ನು ಹೇಳುತ್ತಿದ್ದಾರೆ. ಅಂಥ ತಂಡಗಳ ಸಾಲಿಗೆ ‘ದಿ 1979 ಅನ್ ಟೋಲ್ಡ್ ಸ್ಟೋರಿ’ (The 1979 Untold Story) ಕೂಡ ಸೇರ್ಪಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಬಂಗಾಳದ ಕಥೆಯನ್ನು ತೋರಿಸಲಾಗುತ್ತಿದೆ.

‘ಮನಂ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾ ನಿರ್ಮಾಣ ಆಗಿದೆ. ಈ ಸಿನಿಮಾಗೆ ಪುಷ್ಪ ರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಬೀರಮಾನಹಳ್ಳಿ ಎಂ. ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 1979ರಲ್ಲಿ ಬಂಗಾಳದಲ್ಲಿ ನಡೆದ ರಿಯಲ್ ಘಟನೆಗಳನ್ನು ಆಧರಿಸಿ, ಕಾಲ್ಪನಿಕ ಕಥೆಯನ್ನು ಹೆಣೆಯಲಾಗಿದೆ.

The 1979 Untold Story Team

‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸಂಪೂರ್ಣ ಕಥೆಯು ಬಂಗಾಳದ ಹಿನ್ನೆಲೆಯನ್ನು ನಡೆಯುತ್ತದೆ. ವಿಶೇಷ ಏನೆಂದರೆ, ಕಥೆ ಬಂಗಾಳದ್ದು ಆದರೂ ಈ ಸಿನಿಮಾದ ಶೂಟಿಂಗ್ ನಡೆದಿರುವುದು ಕೋಲಾರದಲ್ಲಿ! ಆ ಕಾರಣದಿಂದಲೂ ಸಿನಿಮಾ ಮೇಲೆ ನಿರೀಕ್ಷೆ ಮೂಡುವಂತಾಗಿದೆ. ಈಗಾಗಲೇ ‘ದಿ 1979 ಅನ್ ಟೋಲ್ಡ್ ಸ್ಟೋರಿ’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ.

‘ದಿ 1979 ಅನ್ ಟೋಲ್ಡ್ ಸ್ಟೋರಿ’ ಟೀಸರ್:

ಜನವರಿ 23ರಂದು ‘ಮ್ಯೂಸಿಕ್ ಬಜಾರ್’ ಯೂಟ್ಯೂಬ್ ಚಾನೆಲ್ ಮೂಲಕ ಟೀಸರ್ ಅನಾವರಣ ಆಯಿತು. ರಾಜಕೀಯ, ಅಧಿಕಾರ, ಆಡಳಿತ, ಸ್ವಾಭಿಮಾನ, ನೋವು, ಹಿಂಸೆ ಮುಂತಾದ ಅಂಶಗಳು ಈ ಟೀಸರ್​​ನಲ್ಲಿ ಕಾಣಿಸಿದೆ. ತಾಂತ್ರಿಕವಾಗಿಯೂ ಈ ಸಿನಿಮಾದ ಮೇಕಿಂಗ್ ಗಮನ ಸೆಳೆದಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ ಆಗಲಿವೆ.

ಇದನ್ನೂ ಓದಿ: ರವಿತೇಜ ನಟನೆಯ 77ನೇ ಸಿನಿಮಾಗೆ ‘ಇರುಮುಡಿ’ ಶೀರ್ಷಿಕೆ: ಫಸ್ಟ್ ಲುಕ್ ರಿಲೀಸ್

ಈ ಚಿತ್ರದ ರಿಲೀಸ್ ಡೇಟ್ ಇನ್ನೂ ಬಹಿರಂಗ ಆಗಿಲ್ಲ. ಆದರೆ ಫೆಬ್ರವರಿ ತಿಂಗಳಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಅಜ್ಜು, ಪ್ರಾನ್ವಿ ಗೌಡ, ಸುಜಿತ್, ಅಮೃತ ಗೌಡ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಚಲಾಕಿ ಚರಣ್ ಅವರ ಛಾಯಾಗ್ರಹಣ, ಜಶ್ವಂತ್ ವಸುವುಲೇಟಿ ಅವರ ಸಂಗೀತ ನಿರ್ದೇಶನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ – Kannada News | Kalaburagi Tragedy: Brother Dies of Grief After Elder Sibling’s Death

ಕಲಬುರಗಿ, ಜನವರಿ 28: ಅಣ್ಣ ಸತ್ತ ಮರು ದಿನವೇ ಆತನ ಸಾವಿನ ದುಃಖವನ್ನು ತಡೆಯಲಾರದೆ ತಮ್ಮನೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಅಣ್ಣನ ಅಗಲಿಕೆಯಿಂದ ಮಾನಸಿಕವಾಗಿ ಕುಸಿದಿದ್ದ ಶಿವರಾಯ ಅವರು ಆಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ.

ಅಣ್ಣನ ಸಾವಿನ ದುಃಖದಲ್ಲೇ ತಮ್ಮ ಸಾವು

ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಜನವರಿ 26ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವು ಜನವರಿ 27ರಂದು ನೆರವೇರಿತು. ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರ ತಮ್ಮ ಶಿವರಾಯ ಸಣ್ಣಕ್ (79) ಅವರು ಅಣ್ಣನ ಅಗಲಿಕೆಯ ಆಘಾತಕ್ಕೆ ಒಳಗಾಗಿ ಮನೆಗೆ ಮರಳಿದ ಬಳಿಕ ಹಾಸಿಗೆ ಹಿಡಿದ್ದರು. ಅಣ್ಣನ ಸಾವಿನ ದುಃಖ ಶಿವರಾಯ ಸಣ್ಣಕ್ ಮನಸ್ಸಿನ ಮೇಲೆ ತೀವ್ರವಾಗಿ ಪರಿಣಾಮ ಬೀರಿದ್ದು, ಅದೇ ದಿನ ರಾತ್ರಿ ಅವರೂ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸತತ ಎರಡು ದಿನಗಳಲ್ಲಿ ಸಹೋದರರು ಅಗಲಿರುವುದರಿಂದ ಬಡದಾಳ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.

ಹೃದಯಾಘಾತದಿಂದ 35 ವರ್ಷದ ಯುವಕ ಸಾವು

ಹೃದಯಘಾತದಿಂದ 35 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಗಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ರಮೇಶ್ (35) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ರಮೇಶ್ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಲೇ ರಮೇಶ್ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Income Tax Dept Recruitment 2026: ಆದಾಯ ತೆರಿಗೆ ಇಲಾಖೆಯಲ್ಲಿ ಕ್ರೀಡಾ ಕೋಟಾದಡಿ ಉದ್ಯೋಗವಕಾಶ; 97 ಹುದ್ದೆಗೆ ಅರ್ಜಿ ಆಹ್ವಾನ – Kannada News | Income Tax Dept Sports Quota Recruitment 2026: 97 Posts, Apply by Jan 31!

ಆದಾಯ ತೆರಿಗೆ ಇಲಾಖೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಬಂದಿದೆ. ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರ (Pr. CCIT) ಕಚೇರಿಯು ಕ್ರೀಡಾ ಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 97 ಖಾಲಿ ಹುದ್ದೆಗಳು ಭರ್ತಿಯಾಗಲಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೇವಲ 4 ದಿನಗಳು ಮಾತ್ರ ಉಳಿದಿದ್ದು, ಅರ್ಹ ಅಭ್ಯರ್ಥಿಗಳು ಜನವರಿ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್–2 (12 ಹುದ್ದೆಗಳು), ತೆರಿಗೆ ಸಹಾಯಕ (47 ಹುದ್ದೆಗಳು) ಹಾಗೂ ಮಲ್ಟಿ–ಟಾಸ್ಕಿಂಗ್ ಸ್ಟಾಫ್ (38 ಹುದ್ದೆಗಳು) ಸೇರಿವೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ ಅಥ್ಲೆಟಿಕ್ಸ್, ಈಜು, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಚೆಸ್, ಲಾನ್ ಟೆನ್ನಿಸ್, ಕ್ರಿಕೆಟ್, ಬ್ಯಾಸ್ಕೆಟ್‌ಬಾಲ್, ವಾಲಿಬಾಲ್, ಕಬಡ್ಡಿ, ಫುಟ್‌ಬಾಲ್, ಬಿಲಿಯರ್ಡ್ಸ್ ಸೇರಿದಂತೆ ಮಾನ್ಯತೆ ಪಡೆದ ಕ್ರೀಡೆಗಳಲ್ಲಿ ಭಾಗವಹಿಸಿದ ಪ್ರಮಾಣಪತ್ರ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ 18 ರಿಂದ 27 ವರ್ಷಗಳ ನಡುವೆ ಇರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು

ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು 200 ರೂ ಪಾವತಿಸಬೇಕು. ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂಬಂಧಿತ ಕ್ರೀಡಾ ಸಾಧನೆ ಮತ್ತು ಅರ್ಹತೆಯ ಆಧಾರದಲ್ಲೇ ಅಂತಿಮ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ಸೌಲಭ್ಯವೂ ದೊರೆಯಲಿದೆ. ಸ್ಟೆನೋಗ್ರಾಫರ್ ಮತ್ತು ತೆರಿಗೆ ಸಹಾಯಕ ಹುದ್ದೆಗಳಿಗೆ ತಿಂಗಳಿಗೆ 25,500 ರಿಂದ 81,100 ರೂ. ವರೆಗೆ ಹಾಗೂ ಮಲ್ಟಿ–ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ 18,000 ರಿಂದ 56,900 ರೂ. ವರೆಗೆ ವೇತನ ನೀಡಲಾಗುತ್ತದೆ.

ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿ, ಕೇಂದ್ರ ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೂ ಮುನ್ನ ತಪ್ಪದೇ ಅರ್ಜಿ ಸಲ್ಲಿಸಿ.

ಆದಾಯ ತೆರಿಗೆ ಇಲಾಖೆಯ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:27 pm, Wed, 28 January 26

Source link

ಮಕ್ಕಳ ಕಿವಿಗೆ ಎಣ್ಣೆ ಹಾಕುವ ಅಭ್ಯಾಸ ನಿಮಗಿದ್ಯಾ, ಇದರಿಂದ ಪ್ರಯೋಜನ ಸಿಗುತ್ತಾ? ಸ್ಟೋರಿಯಲ್ಲಿದೆ ಮಾಹಿತಿ – Kannada News | Oil for Earache in Kids: Home Remedy or Danger?

Ear Infection & Oil Drops What Parents Must KnowImage Credit source: Getty Images

ಸಾಮಾನ್ಯವಾಗಿ ಆಯುರ್ವೇದ ಪದ್ಧತಿಗಳನ್ನು ಅನುಸರಿಸುತ್ತೇವೆ ಎಂದು ಅನೇಕ ಪೋಷಕರು ಮಕ್ಕಳ ಆರೋಗ್ಯ ಹಾಳು ಮಾಡುವ ಮನೆಮದ್ದುಗಳನ್ನು (Home Remedy) ಪ್ರಯತ್ನಿಸುತ್ತಾರೆ. ಇವುಗಳಲ್ಲಿ ಮಗುವಿನ ಕಿವಿಗೆ ಎಣ್ಣೆ ಹಾಕುವ ಪದ್ಧತಿಯೂ ಒಂದು. ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲದೆ ನಗರಗಳಲ್ಲಿಯೂ ಈ ಒಂದು ವಿಧಾನವನ್ನು ಅನುಸರಿಸುವ ಪಾಲಕರಿದ್ದಾರೆ. ಈ ಮನೆಮದ್ದುಗಳನ್ನು ಪ್ರಯತ್ನಿಸುವುದರ ಹಿಂದೆ ಹಲವಾರು ಕಾರಣಗಳಿರಬಹುದು. ಮಕ್ಕಳಿಗೆ ಕಿವಿ ನೋವು (ear pain) ಬಂದಾಗ, ಪೋಷಕರು ಮಗುವಿನ ಕಿವಿಗೆ ಕೆಲವು ಹನಿ ಸಾಸಿವೆ ಎಣ್ಣೆಯನ್ನು ಹಾಕುತ್ತಾರೆ. ಜೊತೆಗೆ ಮೇಣದ ಶೇಖರಣೆ ಆದಾಗಲೂ ಕೂಡ ಮಕ್ಕಳ ಕಿವಿಗೆ ಎಣ್ಣೆ ಹಾಕುತ್ತಾರೆ. ಇದು ಬಹಳ ಸಾಮಾನ್ಯ ಎಂದು ನಾವೆಲ್ಲರೂ ತಿಳಿದುಕೊಂಡಿದ್ದೇವೆ ಆದರೆ, ಇದು ನಿಜವಾಗಿಯೂ ಕಿವಿ ನೋವನ್ನು ಕಡಿಮೆ ಮಾಡುತ್ತದೆಯೇ, ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಇಎನ್‌ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ರವಿ ಮೆಹರ್ ಹೇಳುವ ಪ್ರಕಾರ, ಮಗುವಿಗೆ ಕಿವಿ ನೋವು ಇದ್ದರೆ, ಅದಕ್ಕೆ ಸೋಂಕು ಕಾರಣವಾಗಿರಬಹುದು ಅಥವಾ ಬೇರೆ ಯಾವುದಾದರೂ ಸಮಸ್ಯೆಯೂ ಕಾರಣವಾಗಿರಬಹುದು. ಇಂತಹ ಪರಿಸ್ಥಿತಿಯಲ್ಲಿ ನೀವು ಅವರ ಕಿವಿಗೆ ಎಂದಿಗೂ ಎಣ್ಣೆ ಹಾಕಬಾರದು. ಏಕೆಂದರೆ ಈ ಒಂದು ಅಭ್ಯಾಸ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸಬಹುದು. ಎಣ್ಣೆ ಹಾಕುವುದರಿಂದ ಸೋಂಕು ಗುಣವಾಗುವುದಿಲ್ಲ ಅಥವಾ ನೋವು ಕಡಿಮೆಯಾಗುವುದಿಲ್ಲ. ಎಣ್ಣೆ ಬ್ಯಾಕ್ಟೀರಿಯಾ ಅಥವಾ ಶಿಲೀಂಧ್ರಗಳ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಜೊತೆಗೆ ನೋವು, ಊತ ಅಥವಾ ಸುಡುವಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಅಷ್ಟೇ ಅಲ್ಲ, ಕಿವಿಯಿಂದ ಕೀವು ಅಥವಾ ನೀರು ಬರುತ್ತಿದ್ದಾಗ ಎಣ್ಣೆ ಹಾಕಬಾರದು. ಮಗುವಿಗೆ ಶೀತ ಅಥವಾ ಜ್ವರ ಇದ್ದಾಗ, ಕಿವಿ ನೋವು ಬರಬಹುದು. ಹಾಗಾಗಿ ಈ ರೀತಿಯಾದಾಗ ಮೊದಲು ವೈದ್ಯರ ಸಲಹೆ ಪಡೆಯಬೇಕು.

ಇದನ್ನೂ ಓದಿ: ಕಿವಿ ನೋವು ಬಂದರೆ ನಿರ್ಲಕ್ಷಿಸದಿರಿ, ಇದು ಹೃದಯಾಘಾತದ ಲಕ್ಷಣ

ಕಿವಿ ನೋವು ಬಂದಾಗ ಏನು ಮಾಡಬೇಕು?

ಮಗುವಿಗೆ ಕಿವಿ ನೋವು ಅಥವಾ ಇನ್ನಾವುದೇ ಸಮಸ್ಯೆ ಇದ್ದರೆ, ಇಎನ್‌ಟಿ ವೈದ್ಯರನ್ನು ಭೇಟಿ ಮಾಡುವುದು ಬಹಳ ಉತ್ತಮ. ಮನೆಮದ್ದುಗಳನ್ನು ಪ್ರಯತ್ನಿಸುವುದು ಗಂಭೀರ ಹಾನಿಯನ್ನುಂಟುಮಾಡಬಹುದು. ನೀವು ಕಿವಿಯನ್ನು ಸ್ವಚ್ಛಗೊಳಿಸಬೇಕಾದರೆ, ಇಯರ್‌ಬಡ್ ಬಳಸಿ, ಆದರೆ ಅದನ್ನು ತುಂಬಾ ಆಳವಾಗಿ ಹಾಕಬಾರದು ಎಂಬುದನ್ನು ಮರೆಯಬೇಡಿ. ಅಲ್ಲದೆ, ವೈದ್ಯರ ಮಾರ್ಗದರ್ಶನವಿಲ್ಲದೆ ಮಕ್ಕಳ ಕಿವಿಗೆ ಡ್ರಾಪ್ಸ್ ಹಾಕಬೇಡಿ. ಮಗುವಿಗೆ ಕಿವಿ ಸಮಸ್ಯೆ ಇದ್ದರೆ, ಅವರು ಪದೇ ಪದೇ ಅಳುತ್ತಾರೆ ಅಥವಾ ಕಿವಿ ಹಿಡಿದುಕೊಳ್ಳುತ್ತಾರೆ. ಜೊತೆಗೆ ಅವರಿಗೆ ಶ್ರವಣ ಸಮಸ್ಯೆ ಕೂಡ ಇರಬಹುದು. ಇಂತಹ ಸಮಯದಲ್ಲಿ ಮಕ್ಕಳ ವೈದ್ಯರು ಅಥವಾ ತಜ್ಞರ ಸಲಹೆಯ ಮೇರೆಗೆ ಔಷಧಿ ನೀಡಿ ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಅವಶ್ಯಕ. ಇದೆಲ್ಲದರ ಜೊತೆಗೆ ಮಗು ಸ್ನಾನ ಮಾಡುವಾಗ, ನೀರು ಅಥವಾ ಸೋಪ್ ಆಕಸ್ಮಿಕವಾಗಿ ಕಿವಿಗೆ ಹೋಗದಂತೆ ನೋಡಿಕೊಳ್ಳಿ. ಶೀತ ವಾತಾವರಣದಲ್ಲಿ, ಮಗುವಿನ ಕಿವಿಗಳನ್ನು ಆದಷ್ಟು ಬೆಚ್ಚಗಿಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ರಾಜಾಸಾಬ್’ ಸೋಲಿನ ಬಳಿಕ ಬಜೆಟ್ ಉಳಿಸಲು ಹೊಸ ಪ್ಲ್ಯಾನ್ ರೂಪಿಸಿದ ಪ್ರಭಾಸ್ – Kannada News | Prabhas’ Spirit Movie Budget Cut: 95 Day Shoot Plan After ‘Raja Saab’ Loss

ನಟ ಪ್ರಭಾಸ್ (Prabhas) ನಟನೆಯ ‘ರಾಜಾಸಾಬ್’ ಸಿನಿಮಾ ಡಿಸಾಸ್ಟರ್ ಎನಿಸಿಕೊಂಡಿತು. ಚಿತ್ರದ ಬಜೆಟ್ 400 ಕೋಟಿ ರೂಪಾಯಿಗೂ ಅಧಿಕ ಆಗಿತ್ತು. ಸಿನಿಮಾ ಕಲೆಕ್ಷನ್ ಕೂಡ ಕಡಿಮೆ ಇದ್ದಿದ್ದರಿಂದ ನಿರ್ಮಾಪಕರಿಗೆ ದೊಡ್ಡ ನಷ್ಟ ಉಂಟಾಯಿತು. ಈಗ ಮುಂದಿನ ಸಿನಿಮಾದ ಬಜೆಟ್ ಉಳಿಸಲು ಪ್ರಭಾಸ್ ಹಾಗೂ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಹೊಸ ಪ್ಲ್ಯಾನ್ ರೂಪಿಸಿದ್ದಾರೆ. ‘ಸ್ಪಿರಿಟ್’ ಚಿತ್ರದ ಬಜೆಟ್​​ ಅನ್ನು ತಗ್ಗಿಸಲು ಈ ಪ್ಲ್ಯಾನ್ ಸಹಕಾರಿ ಆಗಲಿದೆ.

ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಸಿನಿಮಾಗಳ ಬಜೆಟ್ ಮಿತಿ ಮೀರುತ್ತದೆ. ವಿಸ್ತ್ರ ಶೂಟಿಂಗ್ ಶೆಡ್ಯೂಲ್ ಕೂಡ ಇದಕ್ಕೆ ಕಾರಣ. ನಿರ್ದೇಶಕರು ಎಷ್ಟೇ ಪ್ಲ್ಯಾನ್ ಮಾಡಿದರೂ ಹೀರೋಗಳ ಕಾಲ್​​ಶೀಟ್​​ನಲ್ಲಿ ವ್ಯತ್ಯಾಸ ಆಗುತ್ತದೆ. ಇದು ಸಿನಿಮಾದ ಬಜೆಟ್ ಹೆಚ್ಚಿಸುತ್ತದೆ. ಅಲ್ಲದೆ, 150-200 ದಿನ ಶೂಟ್ ನಡೆಯೋದು ಬಜೆಟ್ ಏರಲು ಕಾರಣ. ಆದರೆ, ಇದಕ್ಕೆಲ್ಲ ಬ್ರೇಕ್ ಹಾಕಲು ಪ್ಲ್ಯಾನ್ ರೂಪಿಸಿದ್ದಾರೆ ಪ್ರಭಾಸ್.

ಪ್ರಭಾಸ್ ಅವರಿಂದ ‘ರಾಜಾಸಾಬ್’ ನಿರ್ಮಾಪಕರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಹೀಗಾಗಿ, ‘ಸ್ಪಿರಿಟ್’ ಚಿತ್ರವನ್ನು ಕೇವಲ 95 ದಿನಗಳಲ್ಲಿ ಮಾಡಿ ಮುಗಿಸೋ ಪ್ಲ್ಯಾನ್ ಅಲ್ಲಿದ್ದಾರೆ ಪ್ರಭಾಸ್. ಈ ಎಲ್ಲಾ ಕಾರಣದಿಂದ ನಿರ್ಮಾಪಕರು ಸಾಕಷ್ಟು ಖುಷಿಪಟ್ಟಿದ್ದಾರೆ. ಸಂದೀಪ್ ರೆಡ್ಡಿ ವಂಗ ಅವರು ಪಕ್ಕಾ ಪ್ಲ್ಯಾನ್ ಮಾಡಿ ಶೂಟಿಂಗ್ ಸ್ಥಳ ಹಾಗೂ ದಿನಗಳನ್ನು ನಿಗದಿ ಮಾಡಿದ್ದಾರೆ. ಇದರ ಅನುಸಾರ ಶೂಟ್ ನಡೆಯಲಿದೆ.

ಇದನ್ನೂ ಓದಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ

ಹಾಗಂತ ಒಂದೇ ಸ್ಟ್ರೇಚ್​​ನಲ್ಲಿ 95 ದಿನಗಳ ಕಾಲ ಶೂಟ್ ಮಾಡೋದಿಲ್ಲ. ಹಂತ ಹಂತವಾಗಿ ಈ ಚಿತ್ರೀಕರಣ ನಡೆಯಲಿದೆ. ಒಂದೊಮ್ಮೆ ಅಂದುಕೊಂಡಂತೆ 95 ದಿನಗಳಲ್ಲಿ ಶೂಟ್ ಪೂರ್ಣಗೊಂಡಿದ್ದೇ ಆದಲ್ಲಿ ಈ ಮೊದಲು ನಿಗದಿಪಡಿಸಿದ 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರಲಿದೆ. ಇದರಿಂದ ನಿರ್ಮಾಪಕರಿಗೆ ಒಂದಷ್ಟು ಬಜೆಟ್ ಕೂಡ ಉಳಿತಾಯ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link