Headlines

ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities

200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್​ಗಳು, ಇಯರ್ ಫೋನ್​ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ…

Read More

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ. ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ…

Read More

ಹಿಂದೂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕ: ಕುಮಟಾದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ – Kannada News | Muslim Youth Sets Hindu Man’s House Ablaze in Kumta, Uttara Kannada

ಕಾರವಾರ, ಜನವರಿ 28: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಟುಂಬದವರು ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಕುಮಟಾದ ವೆಂಕಟರಮಣ ಜಾತ್ರೆಗೆ ದಿನಕರ್ ಕುಟುಂಬದವರು ತೆರಳಿದ್ದರು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಅವರ ಮನೆಗೆ ಬೆಂಕಿ ಹಚ್ಚಿ ದ್ವೇಷ ಸಾಧಿಸಲು ಯತ್ನಿಸಿದ್ದಾನೆ. ಇನ್ನು ಬೆಂಕಿ ಹಚ್ಚಿದ ತಕ್ಷಣವೇ ಆರೋಪಿಯನ್ನು ಸ್ಥಳೀಯರು ಹಿಡಿದಿದ್ದಾರೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದ…

Read More

‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು – Kannada News | Duniya Vijay Happy Over Her Daughter Performance in Land lord Movie

ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಅವರ ಮಗಳು ರಿತನ್ಯಾ ವಿಜಯ್ ನಟಿಸಿದ್ದಾರೆ. ಅವರದ್ದು ಸಿನಿಮಾದಲ್ಲಿ ಮಗಳ ಪಾತ್ರವೇ ಎಂಬುದು ವಿಶೇಷ. ‘ನನ್ನ ಮಗಳು ಪದೇ ಪದೇ ಪಾತ್ರ ಹೇಗೆ ಬಂದಿದೆ ಎಂದು ಕೇಳುತ್ತಲೇ ಇದ್ದಳು. ನಾನು ಆಗ ಏನನ್ನೂ ಹೇಳೋಕೆ ಹೋಗಿರಲಿಲ್ಲ. ಇವತ್ತು ಹೆಮ್ಮೆಯಿಂದ ಹೇಳುತ್ತೇನೆ. ಅವಳು ನನ್ನ ಮಗಳಾಗಿದ್ದಕ್ಕೂ ಸಾರ್ಥಕವಾಯಿತು’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Video: ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ – Kannada News | Schoolboy Survives After Electric Pole Crashes Near Him in Kurnool

ಕರ್ನೂಲ್, ಜನವರಿ 28: ತಂತಿ ಸಮೇತ ವಿದ್ಯುತ್ ಕಂಬ ಏಕಾಏಕಿ ರಸ್ತೆಗೆ ಬಿದ್ದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಅದೇ ಸಮಯದಲ್ಲಿ ಬಾಲಕನೊಬ್ಬ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ, ಕಂಬ ಬೀಳುತ್ತಿರುವುದನ್ನು ಕಂಡು ಕೂಡಲೇ ತನ್ನೆಲ್ಲಾ ಶಕ್ತಿಗಳನ್ನು ಒಟ್ಟು ಸೇರಿಸಿ ಅಲ್ಲಿಂದ ವೇಗವಾಗಿ ಓಡಿ ಜೀವ ಉಳಿಸಿಕೊಂಡಿದ್ದಾನೆ. ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ…

Read More

6,6,6,6,6,6,6,6,6: ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್ – Kannada News | Harry Brook Creates History in Sri Lanka

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಶರವೇಗದ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 111 ರನ್​ಗಳ ಇನಿಂಗ್ಸ್ ಆಡಿದರು. ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹ್ಯಾರಿ ಬ್ರೂಕ್ ಲಂಕಾ ಬೌಲರ್​ಗಳನ್ನು ಚೆಂಡಾಡಿದರು….

Read More

ನಾದಿನಿಗೆ ಚಾಕುವಿನಿಂದ ಇರಿದು ಬಳಿಕ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಟೆಕ್ಕಿ – Kannada News | High Rise Tragedy in Noida: Engineer Attacks Sister in Law, Dies After Fatal Jump

ಗ್ರೇಟರ್​ ನೋಯ್ಡಾ, ಜನವರಿ 28: ಟೆಕ್ಕಿಯೊಬ್ಬ ನಾದಿನಿಗೆ ಚಾಕುವಿನಿಂದ ಇರಿದು, ಬಳಿಕ ತಾನು 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬಿಸ್ರಾಖ್ ಪ್ರದೇಶದ ಪ್ಯಾರಾಮೌಂಟ್ ಎಮೋಷನ್ಸ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಹಾರದ ಪಾಟ್ನಾ ಮೂಲದ ಶತ್ರುಘ್ನ ಸಿನ್ಹಾ (38) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಿನ್ಹಾ ತನ್ನ ಪತ್ನಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದ, ನಂತರ ಆಕೆಯ ಮೇಲೆ ಹಲ್ಲೆಗೆ ಯತ್ನಿಸಿದ್ದ. ಆತನ ನಾದಿನಿ ಮಧ್ಯಪ್ರವೇಶಿಸಿದಾಗ, ತರಕಾರಿ ಚಾಕುವಿನಿಂದ ಆಕೆಯ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the karnataka

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 28: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು…

Read More

ಕುಡಿದ ನಶೆಯಲ್ಲಿ ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದಿದ್ದೆ ಅಷ್ಟೇ; ಸ್ಪಷ್ಟನೆ ಕೊಟ್ಟ ಸತೀಶ್ – Kannada News | Satish Kadambam on Gilli: Said Under Alcohol Influence, Not Prediction

ಡಾಗ್ ಬ್ರೀಡರ್ ಸತೀಶ್ (Satish) ಕ್ಯಾಡಬಾಮ್ ಅವರು ಹೋದಲ್ಲಿ ಬಂದಲ್ಲಿ ಮಾಧ್ಯಮಗಳ ಎದುರು ಮಾತನಾಡುತ್ತಿದ್ದಾರೆ. ಯೂಟ್ಯೂಬ್ ಚಾನೆಲ್ ಇರಲಿ, ಟಿವಿ ಮಾಧ್ಯಮ ಇರಲಿ ಅವರು ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಒಂದು ವಿಷಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ಗಿಲ್ಲಿ ಗೆಲ್ಲಲ್ಲ ಎಂದು ಕುಡಿದ ನಶೆಯಲ್ಲಿ ಹೇಳಿದ್ದು ಅಷ್ಟೇ’ ಎಂದು ಸತೀಶ್ ಅವರು ಹೇಳಿಕೆ ನೀಡಿದ್ದಾರೆ. ಗಿಲ್ಲಿ ಗೆಲ್ಲಲ್ಲ ಎಂದು ಸತೀಶ್ ಅವರು ಮೊದಲಿನಿಂದಲೂ ಹೇಳುತ್ತಾ ಬರುತ್ತಿದ್ದರು. ‘ಗಿಲ್ಲಿ ಕೊಳಕ, ಬಿಗ್ ಬಾಸ್ ಮನೆಯಲ್ಲಿ ನನಗೆ ತುಂಬಾನೇ ಚಿತ್ರ ಹಿಂಸೆ…

Read More

ಬೆಂಗಳೂರಲ್ಲಿ ಮನೆಗೆಲಸದವರಿಂದಲೇ ಬಿಲ್ಡರ್​​ ಮನೆಗೆ ಕನ್ನ: ದೋಚಿದ್ದು 18 ಕೋಟಿ ಮೌಲ್ಯದ ಸಂಪತ್ತು! – Kannada News | Bengaluru House Help Duo Robs Builder’s Home; 18 Crore Jewellery Stolen

ಬೆಂಗಳೂರು, ಜನವರಿ 28: ಮನೆಗೆಲಸ ಮಾಡುತ್ತಿದ್ದಿದ್ದ ದಂಪತಿ ಅದೇ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಬೆಲೆ ಬಾಳುವ ವಸ್ತುಗಳನ್ನು ದೋಚಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಯಮಲೂರಿನ ಬಿಲ್ಡರ್ ಶಿವಕುಮಾರ್ ಮನೆಯಲ್ಲಿ ಕಳ್ಳತನ ನಡೆದಿದ್ದು, 20 ದಿನದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ದಂಪತಿ ದಿನೇಶ್ ಮತ್ತು ಕಮಲಾ ಎಂಬವರೇ ಆರೋಪಿಗಳು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆಸಿ ಎಸ್ಕೇಪ್​​ ಆಗಿದ್ದಾರೆ ಎನ್ನಲಾಗಿದ್ದು, ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ…

Read More