Category Archives: Blog

Your blog category

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ ತುಂಬ ಮುಖ್ಯ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಹೆಚ್ಚಿನ ಹಣ ಸಿಗುತ್ತದೆ ಎಂಬ ಕಾರಣಕ್ಕೆ ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಕೆಲಸಗಳನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ನಿಮ್ಮ ಮನವೊಲಿಸಲು ಕೆಲವು ಸ್ನೇಹಿತರು ನೀಡುವ ಕಾರಣಗಳನ್ನು ವಿಶ್ಲೇಷಣೆ ಮಾಡದೆ ಒಪ್ಪಿಕೊಂಡು ಬಿಟ್ಟರೆ ಆ ನಂತರ ಪರಿತಪಿಸುವಂತೆ ಆಗಲಿದೆ. ದಂಪತಿ ಮಧ್ಯೆ ಹಣಕಾಸಿನ ವಿಚಾರಕ್ಕೆ ಅಭಿಪ್ರಾಯ ಭೇದ ಕಾಣಿಸಿಕೊಳ್ಳಬಹುದು. ನಿಮಗೆ ಇಷ್ಟವಿಲ್ಲದ ಸ್ಥಳಕ್ಕೆ ಯಾರದೋ ಬಲವಂತಕ್ಕೆ ತೆರಳಿ, ಅಲ್ಲಿ ಅವಮಾನ ಪಡುವಂತೆ ಆಗಲಿದೆ. ಕೆಲವು ಕೆಲಸ- ಕಾರ್ಯಗಳು ನಿಧಾನವಾಗಿಯೇ ಆದರೂ ಪರವಾಗಿಲ್ಲ, ಆತುರ ಮಾಡುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಬಗ್ಗೆ ಮೂಡುವ ಅಸಮಾಧಾನದ ಮನಸ್ಥಿತಿಯಿಂದ ಆಚೆ ಬರುವುದಕ್ಕೆ ನಾನಾ ಪ್ರಯತ್ನಗಳನ್ನು ಮಾಡಲಿದ್ದೀರಿ. ನಿಮಗೆ ಬರಬೇಕಾದ ಹಣಕ್ಕೆ ಏನಾದರೊಂದು ಕಾರಣ ಒಡ್ಡಿ, ಅಡ್ಡಗಾಲು ಹಾಕಿದವರು ಯಾರು ಎಂಬ ಮಾಹಿತಿ ದೊರೆಯಲಿದೆ. ಕೆಲವು ಉದ್ಯೋಗಾವಕಾಶ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ನಿಮ್ಮ ಮಾತಿನ ಮೂಲಕ ಕೆಲವು ಕೆಲಸ- ಕಾರ್ಯ ಮಾಡಿಸಿಕೊಳ್ಳಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 28 January : ಇಂದು ಈ ರಾಶಿಯವರಿಗೆ ಆರ್ಥಿಕ ವಂಚನೆ ಸಂಭವ – Kannada News | Horoscope Today: January 28, Wednesday 2026 Daily Zodiac Predictions and Lucky Signs

ಮೇಷ ರಾಶಿ:

ನಿಮ್ಮ ಸಾಧನೆಗೆ ಸಣ್ಣ ಪ್ರೋತ್ಸಾಹವೂ ದೊಡ್ಡದೇ. ಕಳೆದುಕೊಂಡಿದ್ದು ನಿಮ್ಮ ಕೈಸೇರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಬಾಗುವಿಕೆಯಿಂದ ಏನನ್ನೂ ಕಳೆದುಕೊಳ್ಳುವುದಿಲ್ಲ. ಆ ಭಾವ ನಿಮ್ಮಲ್ಲಿದ್ದರೆ ತೆಗೆದುಹಾಕಿ. ಕ್ಷುಲ್ಲಕ ಕಾರಣಕ್ಕೆ ಸ್ನೇಹವನ್ನು ಮುರಿದುಕೊಳ್ಳುವಿರಿ.‌ ಯಾರಿಗೂ ಒತ್ತಾಯ ಪೂರ್ವಕ ಇಟ್ಟುಕೊಳ್ಳುವುದು ಬೇಡ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡಬಹುದು. ಅಪರಿಚಿತರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ಕುತೂಹಲವು ಬರಬಹುದು.

ವೃಷಭ ರಾಶಿ:

ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ಪುಣ್ಯ ಸ್ಥಳದ ದರ್ಶನದಿಂದ ಶಕ್ತಿಸಂಚಯವಾಗಲಿದೆ. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟವಾಗುವುದು. ನೀವು ಇಂದು ಮೌನವನ್ನೇ ಹೆಚ್ಚು ಇಷ್ಟಪಡುವಿರಿ.‌

ಮಿಥುನ ರಾಶಿ:

ಪ್ರೀತಿ ಕೊಟ್ಟವರ ನೋವಿಗೆ ಸ್ಪಂದಿಸುವಿರಿ. ಕೈಲಾಗದ ಕಾರ್ಯಕ್ಕೆ ಸೈ ಎನಿಸಿಕೊಳ್ಳುವ ಅಸೆ ನಿಮ್ಮದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು. ಪ್ರೇಮವು ಸ್ಥಾಯಿಯಾಗಿರಲು ಒಂದಿಷ್ಟು ಪೌಷ್ಟಿಕಾಂಶ ಬೇಕು. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಮಾತುಗಳಲ್ಲಿ ವಕ್ರತೆಯನ್ನು ಕಡಿಮೆ ಮಾಡಿ. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆಯಾಗುವುದು. ಅಧ್ಯಾತ್ಮದ ವಿಚಾರವು ಹೆಚ್ಚು ಇಷ್ಟವಾಗುವುದು. ಇನ್ನೊಬ್ಬರ ದುಃಖಕ್ಕೆ ಸ್ಪಂದಿಸುವಿರಿ. ಎಲ್ಲರ ಜೊತೆ ಉತ್ಸಾಹದಿಂದ ಮಾತನಾಡುವಿರಿ.

ಕರ್ಕಾಟಕ ರಾಶಿ:

ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ಆತ್ಮೀಯರನ್ನು ನೀವು ಕಳೆದುಕೊಳ್ಳಬೇಕಾಗುವುದು. ಮೇಲಧಿಕಾರಿಗಳ ಮನವೊಲಿಸಿ ನಿಮ್ಮ ಭಡ್ತಿಯನ್ನು ಮಾಡಿಸಿಕೊಳ್ಳುವಿರಿ. ಪ್ರಯತ್ನಕ್ಕೆ ಸರಿಯಾಗಿ ಫಲವು ಸಿಗದು. ಯಂತ್ರಗಳ ಜೊತೆ ಕೆಲಸ ಮಾಡುವುದು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಸಂಗಾತಿಯ ಮಾತಿನಿಂದ‌ ಕೆಲವು ಮಾರ್ಪಾಡು ಮಾಡಿಕೊಳ್ಳುವಿರಿ. ನಿಮ್ಮದೇ ಆದ ಕಾರ್ಯದಲ್ಲಿ ಮಗ್ನರಾಗಿ ಯಶಸ್ಸು ಸಾಧಿಸುವಿರಿ.

ಸಿಂಹ ರಾಶಿ:

ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು. ಪ್ರೇಮಪಾಶದಿಂದ ಬಿಡಿಸಿಕೊಳ್ಳುವ ಪ್ರಯತ್ನ ಇರಲಿದೆ. ಉನ್ನತ ವಿದ್ಯಾಭ್ಯಾಸದ ಕನಸು‌‌ ಬಂಧುಗಳ ಸಹಕಾರದಿಂದ ಆಗಲಿದೆ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ಅವಸರವಸರವಾಗಿ ಇಂದಿನ ಕಾರ್ಯಗಳನ್ನು ಮಾಡುವಿರಿ. ಆದರೂ ನಿಮ್ಮ ಎಲ್ಲ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳಲು ಆಗದು.

ಕನ್ಯಾ ರಾಶಿ:

ನಿಮ್ಮ ವ್ಯಕ್ತಿತ್ವವು ಸಕಾರಾತ್ಮಕವಾಗಿ ಬೆಳೆಯುತ್ತಿರುವುದು ನಿಮಗೂ ಇತರರಿಗೂ ಸಂತೋಷದ ಸಂಗತಿಯಾಗಿದೆ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ. ಕಳೆದುಕೊಳ್ಳಬೇಕಿದ್ದ ಭೂಭಾಗವನ್ನು ನೀವು ಪಡೆಯುವಿರಿ. ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು. ಮನೆಯ ಬಗ್ಗೆ ನಿಮಗೆ ಕಾಳಜಿ ಹೆಚ್ಚು.

ತುಲಾ ರಾಶಿ:

ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ಪ್ರಾಯೋಗಿಕ ವಿಭಾಗದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆಯುವಿರಿ. ಹಳೆಯ ಮನೆಯಲ್ಲಿ ವಾಸ ಮಾಡುವಿರಿ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಕೆಟ್ಟವರ ಸಹವಾಸದಿಂದ ಅಪಕೀರ್ತಿ ಬರಬಹುದು. ಕಟು ವಚನದಿಂದ ಬೇಸರವಾಗಲಿದೆ. ಅವಕಾಶಗಳನ್ನು ಕಳೆದುಕೊಂಡು ಮನಸ್ಸಿನಲ್ಲಿಯೇ ದುಃಖಿಸುವಿರಿ. ಕೋಪವನ್ನು ತಾನಾಗಿಯೇ ಕಡಿಮೆ ಆಗಿದ್ದು ನಿಮಗೆ ಆಶ್ಚರ್ಯವಾಗಬಹುದು.

ವೃಶ್ಚಿಕ ರಾಶಿ:

ಪರದೇಶದಲ್ಲಿ ಇರುವವರಿಗೆ ಅರಾಜಕತೆ ಬರುವ ಸಾಧ್ಯತೆ ಇದೆ. ಕಾರ್ಯಗಳಿಂದ ಹೆಚ್ಚಿನ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಸಣ್ಣ ಕಾರಣಕ್ಕೆ ಮನೆಯಲ್ಲಿ ದೊಡ್ಡ ಕಲಹವಾಗುವುದು. ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದು. ಮಕ್ಕಳ ತಪ್ಪನ್ನು ನೀವು ಸಮರ್ಥಿಸಿಕೊಳ್ಳಬೇಕಾದೀತು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಇಂದು ಸಾಧ್ಯವಾಗದು.

ಧನು ರಾಶಿ:

ಅನವಶ್ಯಕ ಕರೆಗಳು ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗ ತರುವುವು. ವಿದ್ಯಾಭ್ಯಾಸಕ್ಕೆ ಅತಿಯಾದ ಹಣಕಾಸಿನ ಖರ್ಚು ಬರಲಿದ್ದು, ನಿಮಗೆ ಕಷ್ಟವಾಗುವುದು. ನಿರೀಕ್ಷಿತ ಸಂದರ್ಭವು ಇಂದು ಬರಲಿದ್ದು ಅದನ್ನು ಬಳಸಿಕೊಳ್ಳುವಿರಿ. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ಜಾಣ್ಮಯಿಂದ ನಿಮ್ಮ ಕಾರ್ಯವನ್ನು ಸಾಧಿಸಿ. ಇಂದು ಖುಷಿಯಿಂದ ಹಣವನ್ನು ಖರ್ಚು ಮಾಡುವಿರಿ. ಇಂದು ನೀವಾಡವ ಮಾತು ತೂಕದ್ದಾಗಿರಲಿದೆ.

ಮಕರ ರಾಶಿ:

ನಿಮ್ಮ ಸಾರ್ವಜನಿಕ ಸಂಪರ್ಕದ ವ್ಯಾಪ್ತಿಯೂ ವಿಶಾಲವಾಗುವುದು. ಮಾರುಕಟ್ಟೆಗೆ ಸಂಬಂಧಿತ ಕಾರ್ಯಗಳನ್ನು ಮಾಡಲು ಸರಿಯಾದ ಸಮಯ. ಕೆಲವು ಕಠಿಣ ನಿರ್ಧಾರಗಳನ್ನೂ ತೆಗೆದುಕೊಳ್ಳುವುದು ಪ್ರಯೋಜನವಾದೀತು. ಅಪರಿಚಿತರ ಸಹಾಯದಿಂದ ಪೂರ್ಣ ನಂಬಿಕೆ ಬರದು. ನಿಮ್ಮ ನೆಮ್ಮದಿಯು ಇತರರ ಮಾತಿನಿಂದ ವಿಚಲಿತವಾಗುವುದು. ನಿಮ್ಮವರೇ ಆದರೂ ನಿಯಮ‌ ಮೀರದಂತೆ ನೋಡಿಕೊಳ್ಳಬೇಕು. ಮಾಡಬೇಕೆಂದುಕೊಂಡ ಕಾರ್ಯನ್ನು ತೊಂದರೆ ಬಂದರೂ ಬಿಡದೇ ಮುಂದುವರಿಯಿರಿ.

ಕುಂಭ ರಾಶಿ:

ವೈವಾಹಿಕ ಸಂಬಂಧಗಳಲ್ಲಿ ಮಾಧುರ್ಯವು ಇರಲಿದೆ. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಪ್ರಯೋಗಾತ್ಮಕ ವಿಚಾರಕಗಕೆ ನಿಮ್ಮ ಆಸಕ್ತಿ ಹೆಚ್ಚು. ಕಾರ್ಯದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ಯೋಚಿಸಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಇಂದು ಕೋಪಿಸಿಕೊಂಡು ಎಲ್ಲವನ್ನೂ ಶಪಿಸಬಹುದು. ಅತಿಯಾದ ಉತ್ಸಾಹದಲ್ಲಿರುವ ನಿಮಗೆ ಸಂಗಾತಿಯ ಮಾತು ಉತ್ಸಾಹಕ್ಕೆ ಭಂಗವನ್ನು ತಂದೀತು.

ಮೀನ ರಾಶಿ:

ನಿಮ್ಮ ಮೇಲೆ ನಂಬಿಕೆ ಇಟ್ಟು ಮುಂದುವರಿಯಿರಿ. ವೃತ್ತಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ ಕಛೇರಿಯಲ್ಲಿ ಹೆಚ್ಚಿನ ಕೆಲಸದ ಕಾರಣ ಹೆಚ್ಚುವರಿ ಸಮಯವನ್ನು ನೀಡಬೇಕಾಗಬಹುದು. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸರ್ಕಾರದ ಉದ್ಯೋಗಿಗಳಿಗೆ ಇಷ್ಟವಿಲ್ಲದ ಕಡೆ ವರ್ಗಾವಣೆ ಸಂಭವ. ನಿಮ್ಮ ಮೇಲೆ‌ ಹಿತಶತ್ರುಗಳು‌ ಇಲ್ಲದ ಆರೋಪವನ್ನು ಮಾಡಬಹುದು. ನಿಮ್ಮ ತಿಳಿವಳಿಕೆಯನ್ನು ಇನ್ನೊಬ್ಬರ‌ ಮುಂದೆ ತೋರಿಸಿಕೊಳ್ಳಲಾರಿರಿ.

ಜನವರಿ 28,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ದಶಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಶುಕ್ಲ, ಕರಣ : ಗರಜ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 20 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:37 – 14:03, ಯಮಗಂಡ ಕಾಲ 08:20 – 09:46, ಗುಳಿಕ ಕಾಲ 11:12 – 12:37

-ಲೋಹಿತ ಹೆಬ್ಬಾರ್ – 8762924271 (what’s app only)

Source link

ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್ – Kannada News | Duniya Vijay talks about his real life experience of Landlord movie story

ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ಹಿಟ್ ಆಗಿದೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಶೋಷಿತ ವರ್ಗದ ಕೊಡಲಿ ರಾಚಯ್ಯ ಎಂಬ ವ್ಯಕ್ತಿಯ ಪಾತ್ರ ಮಾಡಿದ್ದಾರೆ. ಈ ಕುರಿತು ಅವರು ಟಿವಿ9 ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಪಾತ್ರ ಅಷ್ಟು ಸಹಜವಾಗಿ ಮೂಡಿಬರಲು ಕಾರಣ ಆದ ಅಂಶಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಊರಿನಲ್ಲಿ ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು. ಅದನ್ನು ನಾನು ನೋಡಿದ್ದೇನೆ. ನಮ್ಮ ಊರಿನಲ್ಲಿ ನಾನು ಆ ಶೋಷಣೆ ನೋಡಿದ್ದೇನೆ. ನಮ್ಮ ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ಬಡತನದಲ್ಲಿ ಇದ್ದರು. ನನ್ನ ತಂದೆ ಒಬ್ಬರೇ ಓದಿದ್ದರು. ಅವರು ಕಷ್ಟಪಟ್ಟಿದ್ದನ್ನು ಕಣ್ಣಾರೆ ಕಂಡಿದ್ದೇನೆ. ಚಿಕ್ಕ ವಯಸ್ಸಿನಿಂದಲೂ ನಾನು ಶೋಷಣೆಗೆ ವಿರುದ್ಧವಾಗಿ ಇದ್ದವನು. ಆ ಕೆಟ್ಟ ಸಂಪ್ರದಾಯದಲ್ಲಿ ನಮ್ಮ ಮನೆಯವರೂ ಬದುಕಿದ್ದಾರೆ. ಅದನ್ನೆಲ್ಲ ನೆನಪಿಸಿಕೊಂಡರೆ ಮೈ ಜುಂ ಎನಿಸುತ್ತದೆ. ನಾನು ಅದನ್ನೆಲ್ಲ ಜೀವಿಸಿದ್ದರಿಂದ ಈ ಪಾತ್ರವನ್ನು ಮಾಡಲು ಸುಲಭ ಆಯ್ತು’ ಎಂದು ದುನಿಯಾ ವಿಜಯ್ (Duniya Vijay) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿದ ಪ್ರವಾಸಿಗನ ಪಾಲಿಗೆ ದೇವರಾದ ರಾಫ್ಟಿಂಗ್ ಗೈಡ್ – Kannada News | Tourist Saved by Rafting Guides in Rishikesh Ganga River Viral Video

ರಿಷಿಕೇಶ, ಜನವರಿ 27: ರಿಷಿಕೇಶದಲ್ಲಿ ಗಂಗಾ ನದಿಯಲ್ಲಿ (Ganga River) ಸ್ನಾನ ಮಾಡುವಾಗ ಮುಳುಗುತ್ತಿದ್ದ ಗುರುಗ್ರಾಮದ ಪ್ರವಾಸಿ ಅವಿನಾಶ್ ಎಂಬುವವರನ್ನು ರಾಫ್ಟಿಂಗ್ ಗೈಡ್ ಒಬ್ಬರು ಪವಾಡಸದೃಶವಾಗಿ ರಕ್ಷಿಸಿದ್ದಾರೆ. ಯೂಸುಫ್ ಬೀಚ್‌ನಲ್ಲಿ ನಡೆದ ಈ ಘಟನೆ ರಾಫ್ಟಿಂಗ್ ಗೈಡ್‌ನ ಹೆಲ್ಮೆಟ್‌ನಲ್ಲಿ ಅಳವಡಿಸಲಾದ ಗೋಪ್ರೊ ಕ್ಯಾಮೆರಾದಲ್ಲಿ ದಾಖಲಾಗಿದೆ. ಆ ಗೈಡ್ ಅವಿನಾಶ್​ನನ್ನು ಕಾಪಾಡಿ, ತಕ್ಷಣ ಸಿಪಿಆರ್ ನೀಡುವ ಮೂಲಕ ಅವರ ಜೀವವನ್ನು ಉಳಿಸಿದ್ದಾರೆ. ಪ್ರಥಮ ಚಿಕಿತ್ಸೆಯ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದರಿಂದಾಗಿ ಆ ಪ್ರವಾಸಿಗನ ಜೀವ ಉಳಿಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ! – Kannada News | Agra Man murders his lover and threw her head in Canal

ಆಗ್ರಾ, ಜನವರಿ 27: ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ, ಆಕೆಯ ತಲೆಯನ್ನು ಪ್ಯಾಕೆಟ್‌ನಲ್ಲಿ ಹಾಕಿ ಕಾಲುವೆಗೆ ಎಸೆದಿದ್ದಾನೆ. ಈ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಕೊಲೆಗಾರನನ್ನು (Killer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಮಿಂಕಿ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಜೊತೆ ಸಂಬಂಧ ಹೊಂದಿದ್ದರು. ಅವರಿಬ್ಬರ ನಡುವೆ ಮದುವೆಯ ವಿಷಯಕ್ಕೆ ಜಗಳ ನಡೆಯುತ್ತಿತ್ತು. ವಿನಯ್ ಮಿಂಕಿಯನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಅದಕ್ಕೆ ನಿರಾಕರಿಸಿದ್ದರಿಂದ ಅವರ ನಡುವೆ ಜಗಳ ಉಂಟಾಗಿದೆ. ಇದೇ ಕೋಪದಿಂದ ಆತ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ!

ಜಗಳದ ನಂತರ ತೆಂಗಿನಕಾಯಿ ಕತ್ತರಿಸಲು ಬಳಸುವ ಚಾಕುವಿನಿಂದ ವಿನಯ್ ಪದೇ ಪದೇ ಆಕೆಯ ಮೇಲೆ ಹಲ್ಲೆ ಮಾಡಿ, ಆಕೆಯ ಕುತ್ತಿಗೆಯನ್ನು ಕತ್ತರಿಸಿದ್ದಾನೆ. ನಂತರ ಅವನು ಆಕೆಯ ದೇಹವನ್ನು ತುಂಡು ಮಾಡಿ, ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿ ಪಾರ್ಸೆಲ್ ಟೇಪ್‌ನಿಂದ ಮುಚ್ಚಿದ್ದಾನೆ. ಆಕೆಯ ತಲೆಯನ್ನು ಬೇರೆ ಚೀಲದಲ್ಲಿ ಹಾಕಿ ಎಸೆದಿದ್ದಾನೆ. ಆ ತಲೆ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಅದಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಜನವರಿ 24ರ ರಾತ್ರಿ ಕೊಲೆಯ ನಂತರ, ಅವನು ದೇಹವನ್ನು ಚೀಲದಲ್ಲಿ ಹಾಕಿ ಯಮುನಾ ನದಿಗೆ ಎಸೆಯಲು ಹೊರಟಿದ್ದನು. ಆದರೆ ಅದನ್ನು ಸೇತುವೆಯ ಮೇಲೆ ಬಿಟ್ಟು ಪರಾರಿಯಾಗಿದ್ದನು. ತುಂಡರಿಸಿದ ತಲೆಯನ್ನು ಕಪ್ಪು ಪ್ಯಾಕೆಟ್‌ನಲ್ಲಿ ಇರಿಸಲಾಗಿತ್ತು. ಅದನ್ನು ಕಾಲುವೆಯಲ್ಲಿ ಎಸೆದಿದ್ದ. ಅದನ್ನು ಪತ್ತೆಹಚ್ಚಲು ಡೈವರ್‌ಗಳಿಗೆ ಸೂಚಿಸಲಾಗಿದೆ. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಚಾಕು, ಸ್ಕೂಟರ್ ಮತ್ತು ಬಟ್ಟೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:56 pm, Tue, 27 January 26

Source link

ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್: ಕೋಟ್ಯಂತರ ಅಭಿಮಾನಿಗಳಿಗೆ ಶಾಕ್ – Kannada News | Singer Arijit Singh announces retirement from playback singing

ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಅವರು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಏಕಾಏಕಿ ಅವರು ನಿವೃತ್ತಿ (Arijit Singh Retirement) ಘೋಷಿಸಿದ್ದಾರೆ. ಅವರು ಈ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್​ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ (Arijit Singh) ಅವರು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಧ್ವನಿಯಲ್ಲಿ ಹೊಸ ಹೊಸ ಹಾಡುಗಳನ್ನು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಈಗ ಶಾಕ್ ಆಗಿದೆ.

ಅರಿಜಿತ್ ಸಿಂಗ್ ಅವರು ಸೋಶಿಯಲ್ ಮೀಡಿಯಾ ಮೂಲಕ ಈ ನಿರ್ಧಾರ ತಿಳಿಸಿದ್ದಾರೆ. ‘ಇದನ್ನು ನಿಲ್ಲಿಸುತ್ತಿದ್ದೇನೆ. ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ಇಷ್ಟೊಂದು ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಈ ಪ್ರಯಾಣ ಅದ್ಭುತವಾಗಿತ್ತು’ ಎಂದು ಅರಿಜಿತ್ ಸಿಂಗ್ ಅವರು ಪೋಸ್ಟ್ ಮಾಡಿದ್ದಾರೆ.

‘ದೇವರು ನನಗೆ ಕರುಣಾಮಯನಾಗಿದ್ದ. ನಾನು ಒಳ್ಳೆಯ ಸಂಗೀತದ ಅಭಿಮಾನಿ. ಮುಂದಿನ ದಿನಗಳಲ್ಲಿ ಹೆಚ್ಚು ಕಲಿಯುತ್ತೇನೆ. ಚಿಕ್ಕ ಕಲಾವಿದನಾಗಿ ಇನ್ನಷ್ಟು ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಈಗಾಗಲೇ ಒಪ್ಪಿಕೊಂಡ ಕೆಲಸಗಳನ್ನು ನಾನು ಮುಗಿಸಬೇಕಿದೆ. ಅವುಗಳನ್ನು ಪೂರ್ಣಗೊಳಿಸುತ್ತೇನೆ. ಹಾಗಾಗಿ ಈ ವರ್ಷ ನಿಮಗೆ ಕೆಲವು ಹೊಸ ಹಾಡುಗಳು ಸಿಗುತ್ತವೆ. ಆದರೆ ಒಂದು ಸ್ಪಷ್ಟನೆ, ಸಂಗೀತದ ಕೆಲಸವನ್ನು ನಾನು ನಿಲ್ಲಿಸುವುದಿಲ್ಲ’ ಎಂದು ಅರಿಜಿತ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಹಣ ಎಷ್ಟು?

ಕನ್ನಡದಲ್ಲಿ ‘ನಿನ್ನಿಂದಲೇ’ ಸಿನಿಮಾದ ‘ಮೌನ ತಾಳಿತೆ..’ ಹಾಡು ಅರಿಜಿತ್ ಸಿಂಗ್ ಅವರ ಕಂಠದಲ್ಲಿ ಮೂಡಿಬಂದಿತ್ತು. ಹಿಂದಿ ಮಾತ್ರವಲ್ಲದೇ ಬೆಂಗಾಲಿ, ತಮಿಳು, ತೆಲುಗು ಹಾಡುಗಳಿಗೂ ಕೂಡ ಅರಿಜಿತ್ ಸಿಂಗ್ ಅವರು ಧ್ವನಿ ನೀಡಿದ್ದಾರೆ. ಆದರೆ ಅವರು ಈಗ ನಿವೃತ್ತಿ ಘೋಷಿಸಿರುವುದಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರೀ ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗಾಗಿ ವಿಶೇಷ ರೈಲು ಸಂಚಾರ – Kannada News | Special train operated for tourists as heavy snowfall blocks the Jammu Srinagar National Highway

ಶ್ರೀನಗರ, ಜನವರಿ 27: ಇಂದು ಕಾಶ್ಮೀರದಾದ್ಯಂತ ಭಾರೀ ಹಿಮಪಾತವಾಗಿದೆ. ಹೀಗಾಗಿ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು. ಶ್ರೀನಗರ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಯಿತು. ಇದರಿಂದಾಗಿ ನೂರಾರು ಪ್ರವಾಸಿಗರು ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡರು. ಹೀಗಾಗಿ, ಪ್ರವಾಸಿಗರಿಗಾಗಿ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆ ರೈಲು ಹಿಮದಿಂದ (Snowfall) ಆವೃತವಾದ ರೈಲ್ವೆ ಹಳಿಯನ್ನು ಭೇದಿಸುತ್ತಾ ಸಾಗುತ್ತಿರುವ ದೃಶ್ಯ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ – Kannada News | Udupi Tourist Boat Capsize Tragedy: Another Young Girl Dies, Death Toll Rises to Three

ಉಡುಪಿ, ಜನವರಿ 27: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ (Boat Tragedy) ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೋರ್ವ ಯುವತಿ ಸಾವನ್ನಪ್ಪಿದ್ದಾರೆ (death). ಮೈಸೂರಿನ ದಿಶಾ(23) ಮೃತ ಯುವತಿ. ನಿನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ

ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ ವಿಶ್ವಪ್ರಸಿದ್ಧ. ಯೂಟ್ಯೂಬ್ ನಲ್ಲಿ ಈ ಬಿಚ್​​ ವಿಡಿಯೋ ನೋಡಿದರೆ ಭೂಲೋಕದ ಸ್ವರ್ಗದಂತೆ ಕಾಣಿಸುತ್ತೆ. ಇಲ್ಲಿ ಮೋಜು ಮಾಡಬೇಕೆಂದು ಬಂದ ಮೈಸೂರಿನ ಬಿಪಿಒ ಕಾಲ್ ಸೆಂಟರ್​ವೊಂದರ 28 ಮಂದಿ ಪ್ರವಾಸಿಗರ ತಂಡ, ಇದೀಗ ಕಣ್ಣೀರಿಡುತ್ತಾ ವಾಪಸಾಗುವಂತಾಗಿದೆ.

ಇದನ್ನೂ ಓದಿ: ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ಇಬ್ಬರು ಸಾವು

ಇಲ್ಲಿನ ಡೆಲ್ಟಾ ಬೀಚ್ ಸಮೀಪ, ಎರಡು ಪ್ರವಾಸಿ ಬೋಟುಗಳಲ್ಲಿ 28 ಮಂದಿ ಕಡಲಿಗೆ ಇಳಿದಿದ್ದರು. ಎಲ್ಲ ಪ್ರವಾಸಿಗರಿಗೂ ಭದ್ರತೆಯ ದೃಷ್ಟಿಯಿಂದ ಲೈಫ್ ಜಾಕೆಟ್ ನೀಡಲಾಗಿತ್ತು. ಈ ಪೈಕಿ ಹಲವರು ಜಾಕೆಟ್ ಧರಿಸಿದರೆ ಇನ್ನು ಕೆಲವರು ನೆಗ್ಲೆಟ್ ಮಾಡಿ ಹಾಗೇನೆ ಬೋಟ್ ಹತ್ತಿದ್ದರು ಎನ್ನಲಾಗಿದೆ. ಕಡಲಿನಲ್ಲಿ ಬೋಟ್ ಸಾಗುತ್ತಿದ್ದಂತೆ ಕೆಲ ಪ್ರವಾಸಿಗರ ಹುಚ್ಚಾಟ ಜೋರಾಗಿತ್ತು. ಕುಣಿಯಲು ಪ್ರಾರಂಭಿಸಿದ್ದರು. ಇದರಿಂದ ನಿಯಂತ್ರಣ ತಪ್ಪಿದ ಬೋಟು ಮಗಚಿ ಬಿದ್ದಿದೆ.

ಇದನ್ನೂ ಓದಿ: ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ

ತಕ್ಷಣ ಅಲರ್ಟ್ ಆದ ಸ್ಥಳೀಯ ಮೀನುಗಾರರಾದ ನಾಗರಾಜ, ವಿಶ್ವನಾಥ್ ಶ್ರೀಯಾನ್, ದಿನೇಶ್ ಕರ್ಕೆರ ಇನ್ನೊಂದು ಬೋಟಿನ ಮೂಲಕ ಸ್ಥಳಕ್ಕೆ ತೆರಳಿ ನೀರಿನಲ್ಲಿ ಮುಳುಗಿದವರನ್ನು ಮೇಲಕ್ಕೆತ್ತಿದ್ದಾರೆ. ಹಲವರು ಲೈಫ್ ಜಾಕೆಟ್ ಧರಿಸಿದ್ದರಿಂದ ಸುಲಭವಾಗಿ ಮತ್ತೊಂದು ಬೋಟ್​ಗೆ ಶಿಫ್ಟ್ ಮಾಡಲಾಯಿತು. ನೀರಿಗೆ ಬಿದ್ದ 14 ಮಂದಿಯ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಶಂಕರಪ್ಪ(22) ಹಾಗೂ ಸಿಂಧು (23) ಆಸ್ಪತ್ರೆಗೆ ಸಾಗುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾರೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ದಿಶಾ ಕೂಡ ಸಾವನ್ನಪ್ಪಿದ್ದು, ಧರ್ಮರಾಜ್​ಗೆ ಚಿಕಿತ್ಸೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

1 ಲಕ್ಷ ಸಾಲಕ್ಕೆ 40 ಲಕ್ಷದ ಚೆಕ್ ಕೇಸ್: ಸೆಲ್ಫಿ ವೀಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ – Kannada News | A Bengaluru Man Commits Suicide In Hassan for Loan torture

ಹಾಸನ, (ಜನವರಿ 27): ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ. ಬೆಂಗಳೂರಿನ (Bengaluru) ನೆಲಮಂಗಲದ ಕೃಷ್ಣಪ್ಪ(47) ಮೃತ ವ್ಯಕ್ತಿ. ಹಾಸನ ಹೊರವಲಯದ ದೊಡ್ಡಪುರ ಬಳಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಕೃಷ್ಣಪ್ಪನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನು ಸಾಯುವ ಮುನ್ನ ಕೃಷ್ಣಪ್ಪ ಸೆಲ್ಫಿ ವಿಡಿಯೋ ಮಾಡುತ್ತಲೇ ವಿಷ ಸೇವಿಸಿದ್ದಾನೆ.

ಸೆಲ್ಫಿ ವಿಡಿಯೋವನ್ನು ಪತ್ನಿ ಕಾಂಚನಗೆ ಕಳುಹಿಸಿದ್ದು, ಕಾಂಚನ ನನ್ನ ಕ್ಷಮಿಸಿಬಿಡು. ರಮೇಶ್ ಹಾಗೂ ಮಂಜು ನೀಡುತ್ತಿರುವ ಕಿರುಕುಳ ತಡೆಯಲು ಆಗುತ್ತಿಲ್ಲ. ನಾನು ಸಾಲ ಪಡೆದಿದ್ದು 1 ಲಕ್ಷ ಸಾಲ ರೂಪಾಯಿ. ಆದರೆ ಅವರು 40 ಲಕ್ಷ ರೂಪಾಯಿ ಚೆಕ್ ಕೇಸ್ ಹಾಕಿದಾರೆ. ನನ್ನ ಸಾವಿಗೆ ನೇರ ಕಾರಣ ಈ ಅಣ್ಣ ತಮ್ಮಂದಿರು (ರಮೇಶ್ , ಮಂಜು) ಎಂದು ವಿಡಿಯೋನಲ್ಲಿ ಹೇಳಿ ವಿಷ ಸೇವಿಸಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್​​

ಸೆಲ್ಫಿ ವಿಡಿಯೋನಲ್ಲಿ ಹೇಳಿದ್ದೇನು?

ಬೆಂಗಳೂರಿನ ನೆಲಮಂಗಲದ ಕೃಷ್ಣಪ್ಪ ಕಳೆದ ಮೂರು ವರ್ಷದಿಂದ ಪತ್ನಿ ಮಕ್ಕಳ ಜೊತೆ ಹಾಸನ ನಗರದಲ್ಲಿ ನೆಲೆಸಿದ್ದು, ಇಂದುಈಜನವರಿ 27) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾನು ಪಡೆದಿದ್ದು 1 ಲಕ್ಷ ರೂ. ಸಾಲ. ಆದರೆ ಅವರು 40 ಲಕ್ಷದ ಚೆಕ್ ಕೇಸ್ ಹಾಕಿದಾರೆ. ಜಾಮೀನು ಪಡೆಯಲು ಕೂಡ ಹಣ ಹೊಂದಿಸಲು ನನ್ನಿಂದ ಸಾಧ್ಯವಿಲ್ಲ. ಹಾಗಾಗಿ ನಾನು ಸಾಯುತ್ತಿದ್ದೇನೆ. ನನ್ನ ಸಾವಿಗೆ ನೇರ ಕಾರಣ ರಮೇಶ್ ಹಾಗು ಮಂಜು ಅಣ್ಣ ತಮ್ಮಂದಿರು. ನನ್ನ ಸಾವಿಗೆ ನ್ಯಾಯ ಸಿಗಬೇಕಾದರೆ ಅವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ವಿಡಿಯೋ ಮಾಡುತ್ತಲೇ ಹಾಸನ ಹೊರವಲಯದ ದೊಡ್ಡಪುರ ಬಳಿ ವಿಷ ಸೇವಿಸಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ಪರ್ಸ್​​ನಿಂದ ಹಾಲಿನ ದುಡ್ಡು ಕೊಡಿ; ನೋಟ್ ಬರೆದಿಟ್ಟು ಶಿಕ್ಷಕಿ ಸಾವು – Kannada News | Take money From My Purse for Milk leaving death note Bihar Teacher Dies By Suicide

ನವದೆಹಲಿ, ಜನವರಿ 27: ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ ಶಿಕ್ಷಕಿಯೊಬ್ಬರ ಮೃತದೇಹ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಮೂಡಿಸಿದೆ. ಆ ಶಿಕ್ಷಕಿಯ ರೂಂನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಖಾಜೆಚಂದ್ ಛಪ್ರಾ ಮಿಡಲ್ ಸ್ಕೂಲ್‌ನ ಶಿಕ್ಷಕಿ ಪ್ರಿಯಾ ಭಾರತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಆ ಮನೆಯ ಕಿಟಕಿಯಿಂದ ಒಳಗೆ ನೋಡಿದಾಗ ಆ ಶಿಕ್ಷಕಿ ತನ್ನ ರೂಂನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಅವನು ಪೊಲೀಸರಿಗೆ ವಿಷಯ ತಿಳಿಸಿದ್ದಾನೆ.

ಪ್ರಿಯಾ ಭಾರತಿ ಸೆಹಾನ್ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪ್ರತಿದಿನ ಆಟೋದಲ್ಲಿ ಶಾಲೆಗೆ ಹೋಗುತ್ತಿದ್ದರು. ಸೋಮವಾರ ಬೆಳಿಗ್ಗೆ ಆಟೋ ಚಾಲಕ ಎಂದಿನಂತೆ ಅವರನ್ನು ಶಾಲೆಗೆ ಕರೆದೊಯ್ಯಲು ಬಂದನು. ಆದರೆ ಬಹಳ ಸಮಯ ಕಾದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಅವನು ಮನೆಯ ಬಳಿ ಹೋಗಿ ಕಿಟಕಿಯಿಂದ ಒಳಗೆ ನೋಡಿದ್ದಾನೆ. ಆಗ ಪ್ರಿಯಾ ನೇಣು ಬಿಗಿದುಕೊಂಡಿರುವುದನ್ನು ನೋಡಿ ಗಾಬರಿಯಾಗಿ ಅಕ್ಕಪಕ್ಕದವರಿಗೆ ವಿಷಯ ತಿಳಿಸಿದನು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ: ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ರೂಂನಲ್ಲಿ ಒಂದು ಸೂಸೈಡ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ “ಅಮ್ಮ ಮತ್ತು ಅಪ್ಪ, ಕ್ಷಮಿಸಿ. ನನಗೆ ಯಾರೊಂದಿಗೂ ಯಾವುದೇ ಜಗಳವಿಲ್ಲ. ನಾನು ನನ್ನ ಸ್ವಂತ ಇಚ್ಛೆಯಿಂದ ಈ ಲೋಕವನ್ನು ತೊರೆಯುತ್ತಿದ್ದೇನೆ. ನನ್ನ ಶವವನ್ನು ರಸೂಲ್‌ಪುರಕ್ಕೆ ಕೊಂಡೊಯ್ಯಬಾರದು. ನನ್ನ ಅಂತ್ಯಕ್ರಿಯೆಗಳನ್ನು ಹಾಜಿಪುರದಲ್ಲಿ ನಡೆಸಬೇಕು. ಯಾವುದೇ ಕಾರಣಕ್ಕೂ ನನ್ನ ಗಂಡ ನನ್ನ ಅಂತ್ಯಕ್ರಿಯೆ ಮಾಡಬಾರದು. ನನ್ನ 3 ತಿಂಗಳ ಹೆಣ್ಣು ಮಗುವೇ ಅಂತ್ಯಕ್ರಿಯೆ ಮಾಡಬೇಕು. ನನ್ನ ಮೊಬೈಲ್ ಫೋನ್ ನನ್ನ ಗಂಡನಿಗೆ ಹಸ್ತಾಂತರಿಸಬೇಕು. ನನ್ನ ಮೊಬೈಲ್​ನಲ್ಲಿ ಸಂದೇಶಗಳು, ಆಡಿಯೋ ಮತ್ತು ವಿಡಿಯೋ ಸಂದೇಶಗಳಿವೆ. ಅದರ ಪಾಸ್‌ವರ್ಡ್‌ಗಳು ನನ್ನ ಗಂಡನಿಗೆ ತಿಳಿದಿವೆ. ನಾನು ನೋಯಿಸಿದ ಪ್ರತಿಯೊಬ್ಬರಲ್ಲೂ ನಾನು ಕ್ಷಮೆ ಯಾಚಿಸುತ್ತೇನೆ. ಮರಣೋತ್ತರ ಪರೀಕ್ಷೆ ನಡೆಸದಂತೆ ನಾನು ಪೊಲೀಸ್ ಆಡಳಿತವನ್ನು ವಿನಂತಿಸುತ್ತೇನೆ. ನನ್ನ ಪತಿ ಅಥವಾ ಕುಟುಂಬದ ವಿರುದ್ಧ ಯಾವುದೇ ಪ್ರಕರಣ ದಾಖಲಿಸಬಾರದು. ಅಮ್ಮ, ಅಪ್ಪ ನಿಮ್ಮ ಮಗಳು ಸೋತಿದ್ದಾಳೆ. ಕ್ಷಮಿಸಿ ಅಮ್ಮ.” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ!

ನನ್ನ ಸಾವಿಗೆ ಯಾರೂ ಕಾರಣರಲ್ಲ. 5.5 ಲೀಟರ್ ಹಾಲಿಗೆ ನಾನು ಹಣ ನೀಡಬೇಕಾಗಿದೆ. ಆ ಹಣ ನನ್ನ ಪರ್ಸ್​​ನಲ್ಲಿದೆ. ಅದನ್ನು ಅವರಿಗೆ ಕೊಟ್ಟುಬಿಡಿ ಎಂದು ಆ ಮಹಿಳೆ ಸೂಸೈಡ್ ನೋಟ್​​ನಲ್ಲಿ ಬರೆದಿದ್ದಾರೆ.

ಪ್ರಿಯಾ ಭಾರತಿ ಎರಡು ವರ್ಷಗಳ ಹಿಂದೆ ಜಂದಹಾ ಪೊಲೀಸ್ ಠಾಣೆ ಪ್ರದೇಶದ ರಸೂಲ್‌ಪುರ ಗ್ರಾಮದ ನಿವಾಸಿ ದೀಪಕ್ ರಾಜ್ ಅವರನ್ನು ವಿವಾಹವಾಗಿದ್ದರು. ದಂಪತಿಗಳ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪೊಲೀಸರು ಪತಿಯನ್ನು ವಿಚಾರಣೆ ನಡೆಸುತ್ತಿದ್ದು, ಎಲ್ಲಾ ಕೋನಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link