Headlines

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬೆಂಗಳೂರು, ಮೇ 31: ಇಡೀ ಕರುನಾಡು ಆರ್‌ಸಿಬಿ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಗೆಲುವು ಸಂಭ್ರಮಾಚರಣೆಗೆ ಬೆಂಗಳೂರಿಗರು ಸಜ್ಜಾಗಿದ್ದಾರೆಯಾದರೂ ರೂಲ್ಸ್‌ಗಳು ಅಡ್ಡಿ ಆಗಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಸಂಭ್ರಮಾಚರಣೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆರ್ಸಿಬಿ ಅಭಿಮಾನಿಗಳ ಹೆಚ್ಚಿನ ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ನಿಯಮಬಾಹಿರ ಸಂಭ್ರಮಾಚರಣೆಗಳನ್ನು ನಿಯಂತ್ರಿಸಲು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಾದ್ಯಂತ ಪೊಲೀಸರಿಂದ ತೀವ್ರ ನಿಗಾ ವಹಿಸಲಾಗಿದ್ದು, ವಿಶೇಷವಾಗಿ ಎಂ.ಜಿ. ರೋಡ್, ಚರ್ಚ್‌ಸ್ಟ್ರೀಟ್ ಸೇರಿದಂತೆ ಹಲವಾರು…

Read More

ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

ರಣ್ವೀರ್ ಸಿಂಗ್, ಬಾಲಿವುಡ್​​ನ (Bollywood) ಸ್ಟಾರ್ ನಟ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಮರು ಜೀವವನ್ನೇ ನೀಡಿವೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಭರ್ಜರಿ ಯಶಸ್ಸು ರಣ್ವೀರ್ ಅವರನ್ನು ಮತ್ತೊಮ್ಮೆ ಬೇಡಿಕೆಯ ನಟರನ್ನಾಗಿ ಮಾಡಿದೆ. ರಣ್ವೀರ್ ಸಿಂಗ್ ಸ್ಟಾರ್ ನಟ ಆಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಅವರು ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರು ಹೊಸ ಮದ್ಯದ ಉದ್ಯಮವನ್ನು ಸಹ ಪ್ರಾರಂಭಿಸಿದ್ದು,…

Read More

RCB vs GT Final: ಕೃನಾಲ್ ಪಾಂಡ್ಯ ಬೌಲಿಂಗ್​ಗೆ ಕ್ರಿಕೆಟ್ ದೇವರೂ ಫಿದಾ..! ಏನಂದ್ರು ನೋಡಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಗುಜರಾತ್ ಟೈಟಾನ್ಸ್ ತಂಡ, ಆರ್​ಸಿಬಿಯ (GT vs RCB) ಸಾಂಘಿಕ ದಾಳಿಗೆ ಅಕ್ಷರಶಃ ನಲುಗಿ ಹೋಯಿತು. ಈ ಪಂದ್ಯದಲ್ಲಿ ಆರ್​ಸಿಬಿಯ ಪ್ರತಿಯೊಬ್ಬ ಬೌಲರ್​ಗಳು ಕರಾರುವಕ್ಕಾದ ದಾಳಿ ನಡೆಸಿದರು. ಹೀಗಾಗಿ ತವರಿನ ಲಾಭ ಪಡೆಯುವಲ್ಲಿ ವಿಫಲವಾದ ಗುಜರಾತ್ 156 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದ…

Read More

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಬೆಂಗಳೂರು, ಮೇ.31: ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಗಾರೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಹತ್ತು ಜನರನ್ನು (ಒಬ್ಬ ಚಾಲಕ ಮತ್ತು ಒಂಬತ್ತು ಮಹಿಳೆಯರು) ಕರೆದೊಯ್ಯುತ್ತಿದ್ದ ಆಟೋಗೆ, ಅತಿ ವೇಗವಾಗಿ ಬಂದ ಥಾರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದ, ಆಟೋ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ಮತ್ತು ಥಾರ್ ವಾಹನಗಳ ನಡುವೆ ಸಿಲುಕಿ…

Read More

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ ನಡೆದಿದ್ದೇನು?…

Read More

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!

ವಿಐಪಿ ಸಂಸ್ಕೃತಿ , ರಾಜ್ಯಪಾಲರ ಸಂಚಾರ ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ವಿಐಪಿ ಸಂಸ್ಕೃತಿ ಮತ್ತು ಅಧಿಕಾರಿಗಳ ಭದ್ರತೆಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ…

Read More

ಸಿಎಂ ಆಗಿ ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

ಬೆಂಗಳೂರು, ಮೇ 31: ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ…

Read More

RCB vs GT Final: ಫೈನಲ್ ಪಂದ್ಯದಲ್ಲೂ ಆರ್​ಸಿಬಿಗೆ ಮೋಸ; 3ನೇ ಅಂಪೈರ್ ವಿರುದ್ಧ ಫ್ಯಾನ್ಸ್ ಆಕ್ರೋಶ

ಪ್ರತಿ ಐಪಿಎಲ್​ನಂತೆ ಈ ಬಾರಿಯ ಐಪಿಎಲ್ ಕೂಡ ವಿವಾದಗಳಿಂದ ಹೊರತಾಗಿರಲಿಲ್ಲ. ಈ ಆವೃತ್ತಿಯಲ್ಲೂ ಸಾಕಷ್ಟು ವಿವಾದಗಳು ಸೃಷ್ಟಿಯಾದವು. ಅದರಲ್ಲೂ ಮೂರನೇ ಅಂಪೈರ್​ ನೀಡಿದ ಕೆಲವೊಂದು ತೀರ್ಪುಗಳು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದವು. ಅದರಲ್ಲಿ ಪ್ರಮುಖವಾದದ್ದು, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ನೀಡಿದ ಕ್ಯಾಚ್ ಅನ್ನು ಜೇಸನ್ ಹೊಲ್ಡರ್ ಹಿಡಿದ ರೀತಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಚೆಂಡು ಸ್ಪಷ್ಟವಾಗಿ ನೆಲಕ್ಕೆ ತಾಗಿದರೂ ಮೂರನೇ ಅಂಪೈರ್ ಅದನ್ನು ಔಟೆಂದು ತೀರ್ಪು ನೀಡಿದ್ದರು….

Read More

IPL 2026 Orange Cap: ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ ಫೈನಲ್ ಪಂದ್ಯ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಫೈನಲ್ ಪಂದ್ಯ ಮುಗಿಯುವುದಕ್ಕೆ ಮುನ್ನವೇ ಈ ಬಾರಿಯ ಆರೆಂಜ್ ಕ್ಯಾಚ್ ಯಾರ ಪಾಲಾಗಿದೆ ಎಂಬುದು ಖಚಿತವಾಗಿದೆ. ವಾಸ್ತವವಾಗಿ ಎಲ್ಲರಿಗೂ ತಿಳಿದಿರುವಂತೆ ಇಡೀ ಆವೃತ್ತಿಯಲ್ಲಿ ಯಾರು ಅತ್ಯಧಿಕ ರನ್ ಕಲೆಹಾಕುತ್ತಾರೋ ಅವರಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಈ ಆರೆಂಜ್ ಕ್ಯಾಪ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅಗ್ರಸ್ಥಾನದಲ್ಲಿದ್ದರು. ಆದಾಗ್ಯೂ ಅದರ ನಂತರದ ಎರಡು ಸ್ಥಾನಗಳಲ್ಲಿ ಗುಜರಾತ್ ತಂಡದ ಶುಭ್​ಮನ್…

Read More

ಬಾಲಸುಬ್ರಹ್ಮಣ್ಯಂ ನಟನೆಯ ಸುಂದರ ತೆಲುಗು ಸಿನಿಮಾ ಕನ್ನಡದಲ್ಲೂ ಬಿಡುಗಡೆ

ಭಾರತೀಯ ಸಿನಿಮಾ ಸಂಗೀತ ಲೋಕದ ಅತ್ಯುತ್ತಮ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಅತ್ಯದ್ಭುತ ಗಾಯಕರಾಗಿದ್ದ ಜೊತೆಗೆ ಅದ್ಭುತ ನಟರೂ ಆಗಿದ್ದರು. ಅವರು ಕನ್ನಡದಲ್ಲಿ ‘ಮುದ್ದಿನ ಮಾವ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಪರಭಾಷೆಯ ಕೆಲ ಸಿನಿಮಾಗಳಲ್ಲೂ ಅವರು ನಟಿಸಿದ್ದರು. ಬಾಲಸುಬ್ರಹ್ಮಣ್ಯಂ ಸಾಮಾನ್ಯವಾಗಿ ಅಮಾಯಕ, ಮುಗ್ಧ ವ್ಯಕ್ತಿಯ ಪಾತ್ರದಲ್ಲಿ ನಟಿಸುತ್ತಿದ್ದರು. ಅವರು ನಟಿಸಿದ ಹಲವು ಸಿನಿಮಾಗಳು ಹಿಟ್ ಆಗಿರುವುದು ಮಾತ್ರವಲ್ಲ ಅವರ ಪಾತ್ರವೂ ಜನಪ್ರಿಯತೆ ಗಳಿಸಿವೆ. ಆದರೆ ಎಸ್​​ಪಿಬಿ ಅವರು ನಿಧನ ಹೊಂದುವುದಕ್ಕೆ ಮುಂಚೆ…

Read More