ಜೀ ಕನ್ನಡದಲ್ಲಿ ‘ಸರಿಗಮಪ ಲಿಟ್ಲ್ ಚಾಂಪ್ಸ್’ ಪ್ರಸಾರ ಕಾಣುವುದರಲ್ಲಿ ಇದೆ. ಈ ಶೋನಲ್ಲಿ ಟ್ಯಾಲೆಂಟ್ಗಿಂತ ಹೆಚ್ಚಾಗಿ ಕಷ್ಟದಲ್ಲಿರುವವರಿಗೆ ಅವಕಾಶ ಕೊಟ್ಟು ಟಿಆರ್ಪಿ ಪಡೆದುಕೊಳ್ಳಲಾಗುತ್ತದೆ ಎಂಬ ಆರೋಪ ಇದೆ. ಇದಕ್ಕೆ ತಿರುಗೇಟು ಕೊಡಲು ಪ್ರೋಮೋ ಒಂದನ್ನು ಮಾಡಲಾಗಿದೆ. ಈ ಪ್ರೋಮೋದಲ್ಲಿ ಎಲ್ಲರಿಗೂ ಖಡಕ್ ಆಗಿ ಉತ್ತರಿಸಲಾಗಿದೆ. ಜನರ ಕಲ್ಪನೆ ಮತ್ತು ರಿಯಾಲಿಟಿ ವಿವರಿಸಲಾಗಿದೆ.
ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ.
ಕೆಕೆಆರ್ ವಿರುದ್ಧದ ಗೆಲುವಿನ ಬಳಿಕ ಇಶಾನ್ ಕಿಶನ್ ಹೇಳಿದ್ದೇನು?
ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ಇಶಾನ್ ಕಿಶನ್, ಅವರು ಇಡೀ ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. “ಎಲ್ಲರ ಪ್ರಯತ್ನದಿಂದ ನನಗೆ ಸಂತೋಷವಾಯಿತು. ಪಿಚ್ ಅಷ್ಟೊಂದು ಚೆನ್ನಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಹೆಡ್ ಮತ್ತು ಅಭಿಷೇಕ್ ನಮಗೆ ಆಟವನ್ನು ಸುಲಭಗೊಳಿಸಿದರು. ಇದು ಸಂಪೂರ್ಣ ತಂಡದ ಪ್ರಯತ್ನವಾಗಿತ್ತು. ವಿಕೆಟ್ ಪಡೆಯುವುದು ನಮ್ಮ ಯೋಜನೆಯಾಗಿತ್ತು. ಹರ್ಷ್ ಆ ಚೆಂಡನ್ನು ಬೌಲ್ ಮಾಡಿದ್ದು ಅದ್ಭುತವಾಗಿತ್ತು, ಮತ್ತು ನಾವು ಆ ವಿಕೆಟ್ ಪಡೆದಿದ್ದು ಅದೃಷ್ಟವಾಗಿತ್ತು.”
“ಹರ್ಷ್ ತಮ್ಮ ದೇಶೀಯ ತಂಡಕ್ಕೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನಾನು ಶಿವಾಂಗ್ ಅವರ ಕೊಡುಗೆ ಮರೆಯಲ್ಲ; ಅವರು ಅಸಾಧಾರಣವಾಗಿ ಉತ್ತಮ ಬೌಲಿಂಗ್ ಮಾಡಿದರು, ಉತ್ತಮ ಆತ್ಮವಿಶ್ವಾಸದಿಂದ ಬೌಲಿಂಗ್ ಮಾಡಿದರು. ಇಂದಿನ ಪಂದ್ಯದಲ್ಲಿ ಶಿವಾಂಗ್ ಅತ್ಯುತ್ತಮ ಕೆಲಸ ಮಾಡಿ ತಂಡಕ್ಕೆ ಸಹಕಾರ ನೀಡಿದರು” ಎಂದು ಕಿಶನ್ ಹೇಳಿದ್ದಾರೆ.
ಗೆಲುವಿನ ಹೊರತಾಗಿಯೂ, ಮುಂಬರುವ ಪಂದ್ಯಗಳಿಗೆ ತಂಡವು ತನ್ನ ಫೀಲ್ಡಿಂಗ್ ಅನ್ನು ಸುಧಾರಿಸಬೇಕಾಗಿದೆ ಎಂದು ಇಶಾನ್ ಕಿಶನ್ ಅಭಿಪ್ರಾಯಪಟ್ಟಿದ್ದಾರೆ. “ಫೀಲ್ಡಿಂಗ್ ವಿಭಾಗದಲ್ಲಿ ತಂಡವಾಗಿ ನಾವು ಕೆಲಸ ಮಾಡಬೇಕಾಗಿದೆ. 10-20 ರನ್ಗಳು ದೊಡ್ಡ ವ್ಯತ್ಯಾಸವನ್ನುಂಟುಮಾಡಬಹುದು” ಎಂದು ಅವರು ಹೇಳಿದರು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 226 ರನ್ ಗಳಿಸಿತು. ತಂಡದ ಪರವಾಗಿ ಹೆನ್ರಿಕ್ ಕ್ಲಾಸೆನ್ 52, ಅಭಿಷೇಕ್ ಶರ್ಮಾ 48 ಮತ್ತು ಟ್ರಾವಿಸ್ ಹೆಡ್ 46 ರನ್ ಗಳಿಸಿದರು, ನಿತೀಶ್ ರೆಡ್ಡಿ 24 ಎಸೆತಗಳಲ್ಲಿ 39 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ 161 ರನ್ಗಳಿಗೆ ಆಲೌಟ್ ಆಯಿತು. ತಂಡದ ಪರ ಅಂಗ್ಕ್ರಿಶ್ ರಘುವಂಶಿ 52 ರನ್ ಗಳಿಸಿದರೆ, ರಿಂಕು ಸಿಂಗ್ 35 ರನ್ ಗಳಿಸಿದರು. ನಿತೀಶ್ ಕುಮಾರ್ ರೆಡ್ಡಿ 39 ರನ್ಸ್ ಮತ್ತು ಎರಡು ವಿಕೆಟ್ ಕಿತ್ತ ಪರಿಣಾಮ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು.
ಗದಗ, ಏಪ್ರಿಲ್ 3: ಗದಗ (Gadag) ಜಿಲ್ಲೆಯ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ನಾಪತ್ತೆಯಾಗಿ, ನಂತರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಇದೊಂದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪ್ರೇಯಸಿ ರತ್ನಾ, ಆಕೆಯ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆ
ಹುಯಿಲಗೋಳ ಗ್ರಾಮದ ಚಂದ್ರು ಕುರಿ ಮತ್ತು ಅದೇ ಗ್ರಾಮದ ರತ್ನಾ ಕುದರಿ ನಡುವೆ ಕಳೆದ ಕೆಲವು ಸಮಯದಿಂದ ಅನೈತಿಕ ಸಂಬಂಧವಿತ್ತು. ರತ್ನಾಳಿಗೆ ಶಿರಹಟ್ಟಿ ತಾಲೂಕಿನ ಹೊಳಲಾಪುರ ಗ್ರಾಮದ ಈರಪ್ಪ ಎಂಬಾತನೊಂದಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ಗಂಡನ ಜೊತೆ ಸರಿಯಾಗಿ ಸಂಸಾರ ಮಾಡದ ರತ್ನಾ, ಪದೇ ಪದೇ ತವರು ಮನೆಗೆ ಬಂದು ಚಂದ್ರು ಜೊತೆಗಿನ ಸಂಬಂಧ ಮುಂದುವರಿಸಿದ್ದಳು. ಈ ವಿಷಯ ರತ್ನಾಳ ಪತಿ ಈರಪ್ಪ ಹಾಗೂ ಸಹೋದರ ಮಹಾಂತೇಶನಿಗೆ ತಿಳಿದು ಹಲವು ಬಾರಿ ಬುದ್ಧಿವಾದ ಹೇಳಿದ್ದರೂ ಇಬ್ಬರೂ ಕೇಳಿರಲಿಲ್ಲ.
ಪಕ್ಕಾ ಪ್ಲಾನ್ ಮಾಡಿ ಹತ್ಯೆ
ಚಂದ್ರು ಕುರಿಯನ್ನು ಮುಗಿಸಲು ಪ್ಲಾನ್ ಮಾಡಿದ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ, ಮಾರ್ಚ್ 25ರ ಮಧ್ಯರಾತ್ರಿ ರತ್ನಾಳ ಕೈಯಿಂದಲೇ ಚಂದ್ರುಗೆ ಫೋನ್ ಮಾಡಿಸಿ ಮನೆಗೆ ಕರೆಸಿಕೊಂಡಿದ್ದಾರೆ. ಚಂದ್ರು ಬಂದಾಗ ಮನೆಯ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ಈರಪ್ಪ ಮತ್ತು ಮಹಾಂತೇಶ ಆತನ ಮೇಲೆರಗಿದ್ದಾರೆ. ನಂತರ ‘ನಿನ್ನ ಜೊತೆ ಮಾತನಾಡೋದಿದೆ ಬಾ’ ಎಂದು ನಿರ್ಜನ ಪ್ರದೇಶದ ಬ್ರಿಡ್ಜ್ ಬಳಿ ಕರೆದೊಯ್ದು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಶವದ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿ ಅಲ್ಲಿಂದ ಪರಾರಿಯಾಗಿದ್ದರು.
48 ಗಂಟೆಯಲ್ಲಿ ಆರೋಪಿಗಳ ಬಂಧನ
ಮಾರ್ಚ್ 28ರಂದು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದಾಗ ಗದಗ ಎಸ್ಪಿ ರೋಹನ್ ಜಗದೀಶ್ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿತ್ತು. ಮೊದಲು ಚಂದ್ರು ಮನೆಯವರೇ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿತ್ತಾದರೂ, ಚಂದ್ರು ಹೊಂದಿದ್ದ ಮಹಿಳೆಯರ ಸಂಪರ್ಕದ ಜಾಡನ್ನು ಹಿಡಿದು ತನಿಖೆ ನಡೆಸಿದಾಗ ರತ್ನಾ ಹಾಗೂ ಆಕೆಯ ಕುಟುಂಬದ ಕೈವಾಡವಿರುವುದು ಪತ್ತೆಯಾಯಿತು. ಧಾರವಾಡ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು 48 ಗಂಟೆಯೊಳಗೆ ಹೆಡೆಮುರಿ ಕಟ್ಟಿದ್ದಾರೆ.
ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ರಾಜ್ಕೋಟ್, ಏಪ್ರಿಲ್ 03: ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ.
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ ಚಿತ್ರವು ಮಾರ್ಚ್ 19ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಪ್ರೇಕ್ಷಕರು ಮೂರು ತಿಂಗಳಿನಿಂದ ಈ ರಣವೀರ್ ಸಿಂಗ್ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 5ರಂದು ಬಿಡುಗಡೆಯಾಯಿತು. ‘ಧುರಂಧರ್ 2’ ಘೋಷಣೆಯಾದಾಗ, ಇತರ ಎಲ್ಲಾ ನಿರ್ಮಾಪಕರು ಹಿಂದೆ ಸರಿಯಲು ನಿರ್ಧರಿಸಿದರು. ಏಪ್ರಿಲ್ನಲ್ಲಿ ಬಿಡುಗಡೆಯಾಗಬೇಕಿದ್ದ ಅನೇಕ ದೊಡ್ಡ ಚಿತ್ರಗಳು ಮೇ ಅಥವಾ ಜೂನ್ಗೆ ಮುಂದೂಡಲ್ಪಟ್ಟಿವೆ.
ಅಕ್ಷಯ್ ಕುಮಾರ್ ಅವರ ‘ಭೂತ್ ಬಾಂಗ್ಲಾ’ ಚಿತ್ರ ಮಾರ್ಚ್ನಲ್ಲಿ ಬಿಡುಗಡೆಯಾಗಬೇಕಿತ್ತು. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಏಪ್ರಿಲ್ಗೆ ಮುಂದೂಡಲಾಗಿತ್ತು. ಇತರ ಚಿತ್ರಗಳ ಜೊತೆ ಘರ್ಷಣೆ ಆಗದಂತೆ ನೋಡಿಕೊಳ್ಳಬೇಕು ಎಂಬುದು ಇದರ ಉದ್ದೇಶ. ಈ ಚಿತ್ರ ಏಪ್ರಿಲ್ 16ರಂದು ಬಿಡುಗಡೆ ಆಗಲಿದೆ.
ಸಲ್ಮಾನ್ ಖಾನ್ ಅವರ ‘ಮಾತೃಭೂಮಿ’ ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗಬೇಕಿತ್ತು. ಈಗ ಸಿನಿಮಾ ಮೇ 15ರಂದು ಬಿಡುಗಡೆ ಆಗುವ ಸಾಧ್ಯತೆ ಇದೆ. ಇದರ ಹಿಂದಿನ ಇನ್ನೊಂದು ಕಾರಣವೆಂದರೆ, ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ಪ್ರಶಾಂತ್ ಅವರ ಮರಣದಿಂದಾಗಿ, ಕೆಲವು ಚಿತ್ರೀಕರಣಗಳು ಅಪೂರ್ಣವಾಗಿ ಉಳಿದಿವೆ. ಆದ್ದರಿಂದ, ಅದರ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ.
‘ಭೂತ್ ಬಾಂಗ್ಲಾ’ ಮತ್ತು ‘ಮಾತೃಭೂಮಿ’ ಜೊತೆಗೆ, ದಕ್ಷಿಣದ ಸೂಪರ್ಸ್ಟಾರ್ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಅಭಿನಯದ ‘ಪೇಟ್ರಿಯಾಟ್’ ಚಿತ್ರ ಏಪ್ರಿಲ್ 23 ರಂದು ಬಿಡುಗಡೆಯಾಗಬೇಕಿತ್ತು. ಈ ಚಿತ್ರದ ದಿನಾಂಕವನ್ನೂ ಮುಂದೂಡಲಾಗಿದೆ. ಈಗ ಚಿತ್ರವು ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಟ ಮಮ್ಮುಟ್ಟಿ ಸ್ವತಃ ಸಾಮಾಜಿಕ ಮಾಧ್ಯಮದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. ಇದರ ಜೊತೆಗೆ, ‘ದೃಶ್ಯಂ 3’ ಮತ್ತು ‘ಪೆದ್ದಿ’ ನಂತಹ ಚಿತ್ರಗಳ ಬಿಡುಗಡೆ ದಿನಾಂಕವನ್ನು ಸಹ ಮುಂದೂಡಲಾಗಿದೆ.
‘ಕೆಜಿಎಫ್’ ಖ್ಯಾತಿಯ ಯಶ್ ನಟಿಸಿರುವ ‘ಟಾಕ್ಸಿಕ್’ ಮಾರ್ಚ್ 19 ರಂದು ‘ಧುರಂದರ್ 2’ ಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಎರಡೂ ಚಿತ್ರಗಳ ನಡುವೆ ದೊಡ್ಡ ಬಾಕ್ಸ್ ಆಫೀಸ್ ಘರ್ಷಣೆ ನಡೆಯಲಿದೆ ಎಂಬ ಊಹಾಪೋಹವಿತ್ತು. ಆದರೆ ಇರಾನ್-ಇಸ್ರೇಲ್ ಯುದ್ಧದಿಂದಾಗಿ ‘ಟಾಕ್ಸಿಕ್’ ಬಿಡುಗಡೆಯನ್ನು ಅಂತಿಮವಾಗಿ ಮುಂದೂಡಲಾಯಿತು. ಈಗ, ಚಿತ್ರವು ಜೂನ್ 4, 2026 ರಂದು ಬಿಡುಗಡೆಯಾಗಲಿದೆ.
ಅಮೃತಧಾರೆ (Amruthadhaare) ಧಾರವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಅಲೋಚನೆ ಆಗಿತ್ತು ಮತ್ತು ಆ ಆಲೋಚನೆ ತಪ್ಪಾಯಿತು. ಇದು ಅವನಿಗೆ ತಿರುಮಂತ್ರವಾಗಿದೆ ಎಂದರೂ ತಪ್ಪಾಗಲಾರದು. ಈಗ ‘ಅಮೃತಧಾರೆ’ ಧಾರಾವಾಹಿ ಹೊಸ ತಿರುವನ್ನು ಪಡೆದುಕೊಂಡು ಸಾಗಲು ರೆಡಿ ಆಗಿದೆ. ಆ ಬಗ್ಗೆ ಇಲ್ಲಿ ನೋಡೋಣ.
ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಆಲೋಚನೆ ಆಗಿತ್ತು. ಇದಕ್ಕಾಗಿ ಸುನೀಲ್ ಎಂಬ ವ್ಯಕ್ತಿಯನ್ನು ಮುಂದಕ್ಕೆ ಬಿಡಲಾಯಿತು. ಆತ ಮೋಸ ಮಾಡುವ ಆಲೋಚನೆಯಲ್ಲಿ ಬಂದಿದ್ದ. ಆದರೆ, ಮಲ್ಲಿ ಮೇಲೆ ನಿಜವಾದ ಪ್ರೀತಿ ಆಯಿತು. ಹೀಗಾಗಿ, ಜಯದೇವ್ಗೆ ಮೋಸ ಮಾಡುವ ನಿರ್ಧಾರಕ್ಕೆ ಬಂದನು.
ಮದುವೆ ಮನೆಯಿಂದ ಅರ್ಧಕ್ಕೆ ಓಡಿ ಬರುವಂತೆ ಜಯದೇವ್ ಹೇಳಿದ್ದ. ಇದಕ್ಕೆ ಒಪ್ಪಿಗೆ ಸೂಚಿಸಿದ್ದ ಸುನೀಲ್. ಆದರೆ, ಹಾಗಾಗಲಿಲ್ಲ. ಆತ ಮದುವೆ ಆಗುವ ನಿರ್ಧಾರಕ್ಕೆ ಬಂದ. ಆಗಲೂ ಆತ ಸಬೂಬು ನೀಡಿದನು. ನಾನು ಮದುವೆ ಆಗುತ್ತೇನೆ ಮತ್ತು ಆ ಬಳಿಕ ಅವಳನ್ನು ಬಿಟ್ಟು ಹೋಗುತ್ತೇನೆ ಎಂದು ಆತ ಹೇಳಿದ್ದ. ಅಂತೆಯೇ ಮದುವೆ ಆದ. ಆ ಬಳಿಕ ಮಲ್ಲಿ ಜೊತೆ ಜಯದೇವ್ ಮನೆಗೆ ಬಂದ. ಇದರಿಂದ ಖುಷಿಯಾದ ಜಯದೇವ್ ಆಕೆಗೆ ಬಾಯಿಗೆ ಬಂದಂತೆ ಬೈದ. ಇದೆಲ್ಲ ನಂದೇ ಪ್ಲ್ಯಾನ್ ಎಂದು ಹೆಮ್ಮೆಯಿಂದ ಬೀಗಿದ.
ಆದರೆ ಕೊನೆಗೆ ಮೋಸ ಹೋಗಿದ್ದು ತಾನೇ ಎಂಬುದು ಆತನಿಗೆ ಗೊತ್ತಾಗಿದೆ. ನಿಜವಾಗಿ ನಡೆದಿದ್ದು ಏನು ಎಂಬುದನ್ನು ವಿವರಿಸಲಾಗಿದೆ. ಈ ಎಲ್ಲಾ ಕಾರಣದಿಂದ ಆತ ಶಾಕ್ ಆಗಿದ್ದಾನೆ. ಇದೇ ವೇಳೆ ಮಲ್ಲಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಆಕೆ ಸಿವಿಲ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾಳೆ. ಅಂದರೆ ಇನ್ನು ಆಕೆ ಸರ್ಕಾರಿ ನೌಕರಿಯಲ್ಲಿ ಇರುವವಳು. ಇಷ್ಟು ದಿನ ಆಕೆಯ ಮೇಲೆ ಸ್ಕೆಚ್ ಹಾಕಿದಾಗ ಆಕೆ ಸಾಮಾನ್ಯ ವ್ಯಕ್ತಿ ಆಗಿದ್ದಳು. ಆದರೆ, ಈಗ ಆಕೆ ಸರ್ಕಾರಿ ನೌಕರಳಾದ್ದರಿಂದ ಆಕೆಯನ್ನು ಮುಟ್ಟಲು ಬಂದರೆ ಜಯದೇವ್ ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ. ಇದರಿಂದ ಆತನ ಬಾಳಲ್ಲಿ ಕತ್ತಲು ಬರಲಿದೆ.
ಗದಗ, ಏಪ್ರಿಲ್ 3: ಜಿಲ್ಲೆಯಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪ್ರತ್ಯಕ್ಷವಾಗಿದ್ದು, ಸರಣಿ ಕಳ್ಳತನದ ಮೂಲಕ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ನಗರದ ಪುಟ್ಟರಾಜ್ ನಗರ ಮತ್ತು ಕೇಶವ್ ಪಾರ್ಕ್ ಪ್ರದೇಶದಲ್ಲಿ ನಡುರಾತ್ರಿ ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿರುವ ಐವರು ಮುಸುಕುಧಾರಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಡಾವಣೆಯ ನಿವಾಸಿ ವಿಜಯಲಕ್ಷ್ಮೀ ಎಂಬುವವರು ಜನ್ಮದಿನದ ಕಾರ್ಯಕ್ರಮಕ್ಕೆ ತಂದೆಯ ಮನೆಗೆ ಹೋಗಿದ್ದ ವೇಳೆ, ಕಳ್ಳರು ಮನೆಯ ಬೀಗ ಮುರಿದು ಸುಮಾರು 70 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ರಾತ್ರಿ 8 ಗಂಟೆಯಾಗುತ್ತಿದ್ದಂತೆ ಜನ ಹೊರಬರಲು ಹೆದರುತ್ತಿದ್ದು, ಕೂಡಲೇ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಒಂದು ಹೊತ್ತಿನ ಊಟಕ್ಕೂ ಬಡತನ, ವಿಪರೀತ ಬಿಸಿಲು ಹೊಟ್ಟೆಗೇನೂ ಇಲ್ಲದೆ ಬಿಸಿಲಲ್ಲಿ ಕುಸಿದು ಬಿದ್ದ ತಾಯಿಯನ್ನು ಉಳಿಸಿಕೊಳ್ಳಲು, ಬಾಲಕನೊಬ್ಬ ಅಲ್ಲಿಲ್ಲಿ ಬೇಡಿ ನೀರನ್ನು ತಂದು ತಾಯಿಗೆ ಕುಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಚಪ್ಪಲಿ ಇಲ್ಲದೆ ಬರಿಗಾಲಲ್ಲಿ ಬಿಸಿಲಲ್ಲಿ ಓಡಿ ಚಿಪ್ಸ್ ಹಾಗೂ ನೀರನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹೆಚ್ಚು ವಾಹನಗಳು ಓಡಾಡುವ ರಸ್ತೆಯಲ್ಲಿ ಮಹಿಳೆಯೊಬ್ಬರು ಬಿದ್ದಿರುವುದನ್ನು ಕಾಣಬಹುದು, ಮತ್ತೊಂದು ಕಡೆಯಿಂದ ಬಾಲಕ ಕೈಯಲ್ಲಿ ಬಾಟಲಿ ಹಿಡಿದು ಓಡಿ ಬರುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಆದರೆ ಅದನ್ನು ನೋಡಿ ವಿಡಿಯೋ ಮಾಡುತ್ತಿದ್ದ ಜನ ಯಾರೂ ಆತನ ಸಹಾಯಕ್ಕೆ ಬರಲಿಲ್ಲ.
ಟೆಹ್ರಾನ್, ಏಪ್ರಿಲ್ 3: ಇಸ್ರೇಲ್-ಅಮೆರಿಕವು ಇರಾನ್ ಮೇಲಿನ ದಾಳಿಯನ್ನು ಮುಂದುವರೆಸಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಇರಾನ್ನ ಅಲ್ಬೋರ್ಜ್ ಪ್ರಾಂತ್ಯದಲ್ಲಿ ಅಮೆಡರಿಕ-ಇಸ್ರೇಲಿ ಕ್ಷಿಪಣಿ ದಾಳಿಯಿಂದಾಗಿ ಕರಾಜ್ನಲ್ಲಿರುವ ಬಿ1 ಸೇತುವೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಈ ದಾಳಿಯಿಂದ ಗಣನೀಯ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಗುರುವಾರ ಟ್ರಂಪ್ ಸುದ್ದಿಗೋಷ್ಠಿ ನಡೆಸಿ ಪ್ರಸ್ತುತ ಯುದ್ಧ ಸ್ಥಿತಿ ಬಗ್ಗೆ ಮಾತನಾಡಿದ್ದರು.
ಇರಾನ್ ಮೇಲಿನ ದಾಳಿ ಮುಂದುವರೆಸುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಹಾರ್ಮುಜ್ ಜಲಸಂಧಿಯಿಂದ ತಮಗೇನು ಉಪಯೋಗವಿಲ್ಲ, ನಮ್ಮ ಹಡಗುಗಳೇನು ಅಲ್ಲಿಂದ ಬರುವುದಿಲ್ಲ, ನಮ್ಮಲ್ಲೇ ಬೇಕಾದಷ್ಟು ತೈಲ ಇದೆ, ನೀವೇ ಬೇಕಿದ್ದರೆ ನಮ್ಮಿಂದ ತೈಲ ಖರೀದಿಸಿ ಎಂದು ಬೇರೆ ದೇಶಗಳಿಗೆ ಸಲಹೆ ನೀಡಿದ್ದರು. ಇದಾದ ಬಳಿಕ ಅಮೆರಿಕ-ಇಸ್ರೇಲ್ ಜಂಟಿಯಾಗಿ ತಮ್ಮ ದಾಳಿಯನ್ನು ಮುಂದುವರೆಸಿವೆ.