Category Archives: Blog

Your blog category

ನಿಂಗೆ ಇನ್ನೂ ಸಹ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗ್ತಿಲ್ಲ, ಅಲ್ವಾ.! – Kannada News | Still can’t get a 50 off 12 balls: Yuvraj Singh teases Abhishek Sharma

ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಅಬ್ಬರದೊಂದಿಗೆ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ಬಳಿಕ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಅಭಿಷೇಕ್ ಶರ್ಮಾ ಅವರ ಈ ಪ್ರಚಂಡ ಬ್ಯಾಟಿಂಗ್ ಬೆನ್ನಲ್ಲೇ ಗುರು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಯುವಿ ತನ್ನ ಶಿಷ್ಯನ ಕಾಲೆಳೆದಿದ್ದಾರೆ.

14 ಎಸೆತಗಳಲ್ಲಿ ಅಭಿಷೇಕ್ ಶರ್ಮಾ ಅರ್ಧಶತಕ ಪೂರೈಸುತ್ತಿದ್ದಂತೆ ಟ್ವೀಟ್ ಮಾಡಿರುವ ಯುವರಾಜ್ ಸಿಂಗ್, ನಿಂಗೆ ಇನ್ನೂ ಸಹ 12 ಎಸೆತಗಳಲ್ಲಿ 50 ರನ್ ಬಾರಿಸಲು ಸಾಧ್ಯವಾಗುತ್ತಿಲ್ಲ, ಅಲ್ವಾ? ಎಂದು ಕಾಲೆಳೆದಿದ್ದಾರೆ.

ಇದಾಗ್ಯೂ ಅದ್ಭುತವಾಗಿ ಆಡಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಯುವರಾಜ್ ಸಿಂಗ್, ಇದೇ ರೀತಿ ಮುಂದುವರೆಯಿರಿ ಎಂದು ಹಾರೈಸಿದ್ದಾರೆ.

ಅಂದರೆ ಇಲ್ಲಿ ಯುವರಾಜ್ ಸಿಂಗ್ ತನ್ನ ಶಿಷ್ಯನೇ 12 ಎಸೆತಗಳ ಅರ್ಧಶತಕದ ದಾಖಲೆ ಮುರಿಯುವುದನ್ನು ಎದುರು ನೋಡುತ್ತಿದ್ದಾರೆ. ಅತ್ತ ಅಭಿಷೇಕ್ ಶರ್ಮಾ ಕೂಡ 12 ಎಸೆತಗಳ ಅರ್ಧಶತಕದ ದಾಖಲೆ ಮುರಿಯುತ್ತೇನೆ ಎಂದಿರುವ ಸಾಧ್ಯತೆ ಇದೆ. ಹೀಗಾಗಿಯೇ ಯುವರಾಜ್ ಸಿಂಗ್ ಇನ್ನೂ ಸಹ 12 ಎಸೆತಗಳಲ್ಲಿ 50 ರನ್ ಬಾರಿಸಲು ಸಾಧ್ಯವಾಗುತ್ತಿಲ್ಲ ಅಲ್ವಾ ಎಂದು ಅಭಿಷೇಕ್ ಶರ್ಮಾ ಅವರನ್ನು ಕಿಚಾಯಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಕೇವಲ 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 154 ರನ್​ಗಳ ಗುರಿಯನ್ನು ಟೀಮ್ ಇಂಡಿಯಾ 10 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Source link

Astrological Warning: ಮಾರ್ಚ್ 19 ರ ವರೆಗೆ ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಲೇಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Astrological Warning: Three Zodiac Signs Should Avoid Black Clothes Until Ugadi

ಯುಗಾದಿ ಅಂದರೆ ಮಾರ್ಚ್ 19 ರ ತನಕ, 12 ರಾಶಿಗಳ ಪೈಕಿ ಈ ಮೂರು ರಾಶಿಯವರು ಕಪ್ಪು ಬಟ್ಟೆಗಳನ್ನು ಧರಿಸುವುದನ್ನು ಅಷ್ಟಾಗಿ ಶುಭವಲ್ಲ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಕಪ್ಪು ಬಟ್ಟೆ ಉದ್ಯೋಗದ ಸಮವಸ್ತ್ರ ಅಥವಾ ಯಾವುದೇ ನಿರ್ದಿಷ್ಟ ಅಗತ್ಯಕ್ಕಾಗಿದ್ದರೆ ಅದು ಬೇರೆ ವಿಷಯ. ಆದರೆ, ಸಾಮಾನ್ಯ ದಿನಗಳಲ್ಲಿ ಕಪ್ಪು ಬಟ್ಟೆಯ ಬಳಕೆಯನ್ನು ಸೀಮಿತಗೊಳಿಸುವುದು ಉತ್ತಮ ಎಂದು ತಿಳಿಸಿದ್ದಾರೆ. ನಾವು ಧರಿಸುವ ಬಟ್ಟೆಗಳು ಮನಸ್ಸಿಗೆ ಶಾಂತಿಯನ್ನು ನೀಡುವುದಲ್ಲದೆ, ಕೆಲವೊಮ್ಮೆ ನಮ್ಮ ಹಣೆಬರಹವನ್ನು ಬದಲಾಯಿಸುವ ಶಕ್ತಿಯನ್ನೂ ಹೊಂದಿರಬಹುದು. ಕಪ್ಪು ಬಣ್ಣವು ಏಳು ಬಣ್ಣಗಳಲ್ಲಿ ಶನಿಯ ಪ್ರತೀಕವಾಗಿದೆ. ವಿಶ್ವದಲ್ಲಿ ಪ್ರತಿಯೊಂದು ವಸ್ತುವಿಗೂ ತನ್ನದೇ ಆದ ಶಕ್ತಿ ಇರುವಂತೆ, ಬಟ್ಟೆ ಮತ್ತು ಬಣ್ಣಗಳಿಗೂ ತಮ್ಮದೇ ಆದ ಪ್ರಭಾವವಿದೆ. ಈ ಬಣ್ಣಗಳ ಪ್ರಭಾವವು 12 ರಾಶಿಗಳ ಮೇಲೂ ಇರುತ್ತದೆ.

ಕಪ್ಪು ಬಣ್ಣ ಎಲ್ಲರಿಗೂ ಶುಭವಲ್ಲ, ಕೆಲವರಿಗೆ ಶುಭಕರವಾಗಿದ್ದರೆ, ಇನ್ನು ಕೆಲವರಿಗೆ ಅಶುಭಕರವಾಗಿರುತ್ತದೆ. ಕಪ್ಪು ಬಣ್ಣದ ಅತಿಯಾದ ಬಳಕೆಯು ಮಾನಸಿಕ ಒತ್ತಡ, ಅನಾರೋಗ್ಯ, ಚಂಚಲತೆ ಮತ್ತು ನಿರ್ಲಕ್ಷ್ಯದಂತಹ ಸಮಸ್ಯೆಗಳನ್ನು ತರಬಹುದು. ಆದಾಗ್ಯೂ, ಅಯ್ಯಪ್ಪ ಸ್ವಾಮಿ ವ್ರತದಂತಹ ಸಂದರ್ಭಗಳಲ್ಲಿ ಕಪ್ಪು ಬಣ್ಣಕ್ಕೆ ಒಂದು ವಿಶೇಷ ಆಧ್ಯಾತ್ಮಿಕ ಮಹತ್ವವಿದೆ, ಅಲ್ಲಿ ಅದು ತ್ಯಾಗ ಮತ್ತು ಭಗವಂತನ ಕಡೆಗೆ ಗಮನ ಹರಿಸುವುದನ್ನು ಸಂಕೇತಿಸುತ್ತದೆ. ಆದರೆ, ಪ್ರಸ್ತುತ ಸಂದರ್ಭದಲ್ಲಿ ಮೂರು ನಿರ್ದಿಷ್ಟ ರಾಶಿಗಳಿಗೆ ಯುಗಾದಿಯ ತನಕ ಕಪ್ಪು ಬಣ್ಣದ ಬಳಕೆಯು ಅಷ್ಟು ಸೂಕ್ತವಲ್ಲ.

ಈ ಮೂರು ರಾಶಿಗಳು ಯಾವುವು:

ಮೇಷ ರಾಶಿ:

ಮೇಷ ರಾಶಿಯ ಅಧಿಪತಿ ಕುಜ (ಮಂಗಳ). ಕುಜ ಅಗ್ನಿ ತತ್ವದ ಗ್ರಹ. ಮೇಷ ರಾಶಿಯವರು ಸಾಮಾನ್ಯವಾಗಿ ಶಕ್ತಿವಂತರು, ಆತುರ ಮತ್ತು ಆವೇಶದಿಂದ ಕೂಡಿದ ನಿರ್ಧಾರಗಳನ್ನು ತೆಗೆದುಕೊಳ್ಳುವವರು. ಅವರಿಗೆ ಸಾಧನೆ ಮಾಡುವ ಛಲವಿರುತ್ತದೆ. ಯುಗಾದಿಯ ತನಕ ನೀವು ಕೈಗೊಳ್ಳುವ ಯಾವುದೇ ಕಾರ್ಯಗಳು ದ್ವಿಗುಣಗೊಳ್ಳುತ್ತವೆ ಮತ್ತು ಅದೃಷ್ಟವು ಕೂಡಿ ಬರುತ್ತದೆ. ಆದರೆ, ಈ ಸಮಯದಲ್ಲಿ ಕಪ್ಪು ಬಟ್ಟೆಗಳನ್ನು ಧರಿಸಿದರೆ ನಿಮ್ಮ ಸಂಕಲ್ಪಗಳು ಹಿನ್ನಡೆ ಅನುಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಕೆಂಪು, ಗುಲಾಬಿ ಅಥವಾ ಕಿತ್ತಳೆ ಬಣ್ಣದಂತಹ ಶುಭಕರ ಬಣ್ಣಗಳನ್ನು ಧರಿಸುವುದು ಉತ್ತಮ.

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಚಂದ್ರನು ಮನಃಕಾರಕ. ಹಾಲು, ಅನ್ನ, ಅಕ್ಕಿ, ಮತ್ತು ಬಿಳಿ ವಸ್ತ್ರಗಳಿಗೆ ಚಂದ್ರನ ಅಂಶ ಇರುತ್ತದೆ. ಕರ್ಕಾಟಕ ರಾಶಿಯವರು ಯುಗಾದಿಯ ತನಕ ಹೆಚ್ಚು ಕಪ್ಪು ಬಟ್ಟೆಗಳನ್ನು ಧರಿಸುವುದು ಅಷ್ಟಾಗಿ ಶುಭವಲ್ಲ. ಇದು ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಕನ್ಯಾ ರಾಶಿ:

ಕನ್ಯಾ ರಾಶಿಯ ಅಧಿಪತಿ ಬುಧ. ಕನ್ಯಾ ರಾಶಿಯವರು ಸೂಕ್ಷ್ಮ ಸ್ವಭಾವದವರಾಗಿರುತ್ತಾರೆ. ಯುಗಾದಿಯ ತನಕ ಕಪ್ಪು ಬಟ್ಟೆಗಳನ್ನು ಧರಿಸಿದರೆ, ಅದು ಮಾನಸಿಕ ಫಲಿತಾಂಶಗಳನ್ನು ಕಡಿಮೆ ಮಾಡಬಹುದು. ವಿದ್ಯಾರ್ಥಿಗಳು, ಉದ್ಯೋಗಸ್ಥರು, ಅಥವಾ ಸರ್ಕಾರಿ ನೌಕರರಾಗಿರಲಿ, ಅವರಿಗೆ ಅಷ್ಟು ಶುಭಕರವಾಗಿರುವುದಿಲ್ಲ. ಇದರಿಂದ ಮನೆಯಲ್ಲಿ ಅಶಾಂತಿ, ಟೆನ್ಶನ್, ಮತ್ತು ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಹೊಂದಾಣಿಕೆಯ ಕೊರತೆ ಉಂಟಾಗುವ ಸಾಧ್ಯತೆ ಇರುತ್ತದೆ. ಇದು ಮಹಿಳೆಯರಿಗೆ ಅಥವಾ ಪುರುಷರಿಗೆ ಎಂದು ನಿರ್ದಿಷ್ಟವಾಗಿಲ್ಲ, ಎಲ್ಲರಿಗೂ ಅನ್ವಯಿಸುತ್ತದೆ.

ಹಾಗಾಗಿ, 12 ರಾಶಿಗಳಲ್ಲಿ ಮೇಷ ರಾಶಿ, ಕರ್ಕಾಟಕ ರಾಶಿ, ಮತ್ತು ಕನ್ಯಾ ರಾಶಿಯವರು ಯುಗಾದಿ ಮತ್ತು ಚೈತ್ರ ಮಾಸದ ತನಕ ಕಪ್ಪು ಬಟ್ಟೆಗಳನ್ನು ಹೆಚ್ಚಾಗಿ ಉಪಯೋಗಿಸುವುದನ್ನು ತಪ್ಪಿಸುವುದು ಶುಭಕರವೆಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಒಂಟಿ ಸಲಗ: ಬೆಚ್ಚಿದ ಪ್ರವಾಸಿಗರು, ಸ್ವಲ್ಪರದಲ್ಲೇ ಪಾರು – Kannada News | Elephant Creates Panic on Karnataka–Tamil Nadu Border, Chases Vehicles Near Sathyamangalam Tiger Reserve, Video viral

ಚಾಮರಾಜನಗರ, ಜನವರಿ 27: ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಘಟನೆಯಲ್ಲಿ, ಒಂಟಿ ಸಲಗವು ಪ್ರಯಾಣಿಕರ ಕಾರನ್ನು ಅಟ್ಟಾಡಿಸಿದೆ. ಕಾಡಿನೊಳಗಿಂದ ಹೊರಬಂದ ಸಲಗವು ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನಗಳತ್ತ ದಾಳಿ ಮಾಡಲು ಯತ್ನಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ.

ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯವು ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಒಂಟಿ ಸಲಗದ ಸಂಚಾರ ಆಗಾಗ ಕಂಡುಬರುತ್ತಿದೆ. ಕಾಡಿನಿಂದ ಹೊರಬಂದು ಮುಖ್ಯ ರಸ್ತೆಗೆ ಬರುವ ಸಲಗದಿಂದ ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಒಂಟಿ ಸಲಗವು ಯಾವ ಕ್ಷಣದಲ್ಲಾದರೂ ಕರ್ನಾಟಕ ಗಡಿ ದಾಟಿ ಪ್ರವೇಶಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಕರ್ನಾಟಕ ಅರಣ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಗಡಿ ಭಾಗದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಾಹನ ಸಂಚಾರದ ಮೇಲೆ ನಿಗಾ ವಹಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ! – Kannada News | Bengaluru ATM Cash Scam: Staff Abscond With Over Rs 1 Crore Meant for ATM Deposit

ಬೆಂಗಳೂರು, ಜನವರಿ 27: ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ (Bangalore) ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 400 ಕೋಟಿ ರೂ. ಹಣ ದರೋಡೆ ಪ್ರಕರಣದ ಕುರಿತ ಚರ್ಚೆ ತೀವ್ರವಾಗಿರುವ ಸಂದರ್ಭದಲ್ಲೇ ಮತ್ತೊಂದು ದೊಡ್ಡ ನಗದು ಕಳವು ಪ್ರಕರಣ ಬಹಿರಂಗವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋರಮಂಗಲದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ಗೆ ಸೇರಿದ ಒಂದು ಕೋಟಿಗೂ ಅಧಿಕ ಹಣವನ್ನು ವಿವಿಧ ಎಟಿಎಂಗಳಿಗೆ ಡೆಪಾಸಿಟ್ ಮಾಡುವಂತೆ ಕಂಪನಿ ಅಧಿಕಾರಿ ಮಿಥುನ್ ಎಂಬವರು ಜನವರಿ 19ರಂದು ಸೂಚನೆ ನೀಡಿದ್ದರು.

ಎಟಿಎಂಗೆ ಹಣ ಹಾಕಲು ಹೋದವರು ನಗದು ಸಮೇತ ಪರಾರಿ

ಎಟಿಎಂಗೆ ಹಣ ಹಾಕಲೆಂದು ಕಂಪನಿಯ ಎರಡು ಪ್ರತ್ಯೇಕ ತಂಡಗಳಿಗೆ ನಗದು ಹಂಚಿಕೆ ಮಾಡಲಾಗಿತ್ತು. ಪ್ರವೀಣ್, ಧನಶೇಖರ್, ರಾಮಕ್ಕ, ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ವರುಣ್ ಎಂಬ ಸಿಬ್ಬಂದಿಗಳಿಗೆ ಎಟಿಎಂಗಳಿಗೆ ಹಣ ಹಾಕುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಆರೋಪಿಗಳು ಎಟಿಎಂಗಳಿಗೆ ಹಣ ಹಾಕದೇ ನಗದಿನೊಂದಿಗೆ ಪರಾರಿಯಾಗಿದ್ದಾರೆ.

ಒಂದು ತಂಡವು ಸುಮಾರು 57 ಲಕ್ಷ ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದರೆ, ಮತ್ತೊಂದು ತಂಡವು ಸುಮಾರು 80 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದೆ ಎನ್ನಲಾಗಿದೆ. ಎಟಿಎಂಗಳಲ್ಲಿ ಹಣ ಜಮಾ ಆಗದಿರುವುದು ಗೊತ್ತಾದ ಬಳಿಕ ಕಂಪನಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಹಿಟಾಚಿ ಪೇಮೆಂಟ್ ಸರ್ವಿಸ್ ಕಂಪನಿ ಅಧಿಕಾರಿ ಮಿಥುನ್ ಅವರು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್!

ಈ ಪ್ರಕರಣವು ಖಾಸಗಿ ನಗದು ನಿರ್ವಹಣಾ ಕಂಪನಿಗಳ ಭದ್ರತೆ ಹಾಗೂ ನಿಗಾವ್ಯವಸ್ಥೆ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಎತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ಫ್ಯಾನ್ಸ್ ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕ್ತಿದ್ದಾರೆ ಎಂದ ಸತೀಶ್ – Kannada News | Gilli Fans Giving Me a Death Threat Says Dog Satish

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಗಿಲ್ಲಿ ನಟ ಹಾಗೂ ಸತೀಶ್ ಮಧ್ಯೆ ಕಿರಿಕ್​​ಗಳು ಆಗಿವೆ. ಬಿಗ್ ಬಾಸ್ ಮುಗಿದರೂ ಕಿರಿಕ್​​ಗಳು ಮುಂದುವರಿದಿವೆ. ಸತೀಶ್ ಅವರು ಒಂದು ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ಸಾಯಿಸೋದಾಗಿ ಗಿಲ್ಲಿ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟಿ20 ವಿಶ್ವಕಪ್​ ಆರಂಭಕ್ಕೂ 3 ದಿನ ಮೊದಲು ಭಾರತಕ್ಕೆ ಸೌತ್ ಆಫ್ರಿಕಾ ಎದುರಾಳಿ – Kannada News | India To Face South Africa In T20 World Cup 2026 Warm Up Match

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ.

ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಮೂಲಕ ಭಾರತ ತಂಡವು ಟಿ20 ವಿಶ್ವಕಪ್​ಗಾಗಿ ಸಕಲ ರೀತಿಯಲ್ಲೂ ಸಜ್ಜಾಗಲಿದೆ.

ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಬಳಿಕ ಟೀಮ್ ಇಂಡಿಯಾ ಫೆಬ್ರವರಿ 7 ರಂದು ಯುಎಸ್​ಎ ತಂಡದ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಭಾರತ ತಂಡ ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ. ಇನ್ನು ಫೆಬ್ರವರಿ 15 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಹಾಗೆಯೇ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ನಾಲ್ಕು ಪಂದ್ಯಗಳ ಬಳಿಕ ಸೂಪರ್-8 ಸುತ್ತಿನ ಪಂದ್ಯಗಳು ಶುರುವಾಗಲಿದೆ.

ಟಿ20 ವಿಶ್ವಕಪ್ 2026 ಭಾರತದ ವೇಳಾಪಟ್ಟಿ:

  1. ಫೆಬ್ರವರಿ 7: ಭಾರತ vs ಯುಎಸ್​​ಎ-  (ಮುಂಬೈ)
  2. ಫೆಬ್ರವರಿ 12: ಭಾರತ vs  ನಮೀಬಿಯಾ- (ದೆಹಲಿ)
  3. ಫೆಬ್ರವರಿ 15: ಭಾರತ vs ಪಾಕಿಸ್ತಾನ್-  (ಕೊಲಂಬೊ)
  4. ಫೆಬ್ರವರಿ 18: ಭಾರತ vs ನೆದರ್​ಲೆಂಡ್ಸ್-​​ (ಅಹಮದಾಬಾದ್)

ಈ ನಾಲ್ಕು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ 4 ಗ್ರೂಪ್​ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆಯಲಿದೆ.

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಇದನ್ನೂ ಓದಿ: ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ

ಟಿ20 ವಿಶ್ವಕಪ್​ನ ತಂಡಗಳ 4 ಗ್ರೂಪ್​ಗಳು:

  • ಗ್ರೂಪ್- 1
  • ಭಾರತ
  • ಪಾಕಿಸ್ತಾನ್
  • ಯುಎಸ್​ಎ
  • ನಮೀಬಿಯಾ
  • ನೆದರ್​ಲೆಂಡ್ಸ್

___________________

  • ಗ್ರೂಪ್-2
  • ಆಸ್ಟ್ರೇಲಿಯಾ
  • ಶ್ರೀಲಂಕಾ
  • ಝಿಂಬಾಬ್ವೆ
  • ಐರ್ಲೆಂಡ್
  • ಒಮಾನ್

___________________

  • ಗ್ರೂಪ್-3
  • ಇಂಗ್ಲೆಂಡ್
  • ವೆಸ್ಟ್ ಇಂಡೀಸ್
  • ಇಟಲಿ
  • ಸ್ಕಾಟ್ಲೆಂಡ್
  • ನೇಪಾಳ

___________________

  • ಗ್ರೂಪ್-4
  • ಸೌತ್ ಆಫ್ರಿಕಾ
  • ನ್ಯೂಝಿಲೆಂಡ್
  • ಅಫ್ಘಾನಿಸ್ತಾನ್
  • ಯುಎಇ
  • ಕೆನಡಾ

___________________

Source link

ಮುಂದಿನ ಶೈಕ್ಷಣಿಕ ವರ್ಷಕ್ಕೆ 10ಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ – Kannada News | Karnataka Govt to Recruit 10,800 Teachers, Boost Smart Schools says Madhu bangarappa

ಮುಂದಿನ ಶೈಕ್ಷಣಿಕ ವರ್ಷಕ್ಕೆ 10ಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಜನವರಿ 27:  ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ (Teacher recruitment) ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ.

ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸಲು ಸ್ಮಾರ್ಟ್​ ಕ್ಲಾಸ್

ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಅವರು ಹೇಳಿದರು. ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಧು ಬಂಗಾರಪ್ಪ,  ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು. ಈ ಯೋಜನೆಗಳಿಗೆ ಸರ್ಕಾರವು 160 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ಅವರು ಮಾಹಿತಿ ನೀಡಿದರು.

‘ಒನ್ ಡಿಸ್ಟ್ರಿಕ್ಟ್, ಒನ್ ಡೆಸ್ಟಿನೇಷನ್’ ಮಧು ಬಂಗಾರಪ್ಪ

ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗೂಡವಿ ಪಕ್ಷಿಧಾಮವನ್ನು ‘ಒನ್ ಡಿಸ್ಟ್ರಿಕ್ಟ್, ಒನ್ ಡೆಸ್ಟಿನೇಷನ್’ ಯೋಜನೆಯಡಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು. ಜೊತೆಗೆ, ಶ್ರೀ ಚಂದ್ರಗುಟ್ಟಿ ರೇಣುಕಾಂಬಾದೇವಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಅನುಮೋದನೆ ನೀಡಿದ್ದು , ಯಾತ್ರಾಕೇಂದ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಒಟ್ಟಿಗೆ ಎರಡೆರಡು ದುಬಾರಿ ಕಾರು ಖರೀದಿಸಿದ ಗೌತಮಿ ಜಾಧವ್

Source link

ಸೋಲಿನ ನಡುವೆಯೂ RCB ತಂಡ ಭರ್ಜರಿ ದಾಖಲೆ – Kannada News | RCB W is the first team to go past 150 despite losing their 5 wickets for under 50

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

Source link

ಕೋಗಿಲು ನಿವಾಸಿಗಳು ನಿರಾಶ್ರಿತರಲ್ಲ, ಲಕ್ಷಾಧಿಪತಿಗಳು! ಆರೋಪಿಗಳ ಖಾತೆಯಲ್ಲಿ ನಡೆದಿತ್ತು ಕೋಟಿ-ಕೋಟಿ ವ್ಯವಹಾರ – Kannada News | Kogilu Layout Eviction Takes Dramatic Turn: Residents Not Homeless but Millionaires, Crores Found in Accused Accounts

ಬೆಂಗಳೂರು, ಜನವರಿ 27: ಕೋಗಿಲು ಲೇಔಟ್​ನಲ್ಲಿರುವ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಕೇರಳದ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರವನ್ನು ‘ಬುಲ್ಡೋಜರ್ ರಾಜ್’ ಎಂದು ಟೀಕೆ ಮಾಡಿದ್ದರು. ಅಷ್ಟೇ ಯಾಕೆ, ಶತ್ರು ರಾಷ್ಟ್ರ ಪಾಕಿಸ್ತಾನ ಕೂಡಾ ಕೋಗಿಲು ಲೇಔಟ್ ಒತ್ತುವರಿ ಬಗ್ಗೆ ಟೀಕೆ ಮಾಡಿತ್ತು. ಆದರೆ ಈಗ, ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ರೋಚಕ‌ ಸಂಗತಿಗಳು ಗೊತ್ತಾಗಿವೆ. ಕೋಗಿಲು ಲೇಔಟ್​ನ ಫಕೀರ್ ಕಾಲೋನಿ ಹಾಗೂ ವಸೀಂ ಲೇಔಟ್​ನಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದವರಿಂದ ಲಕ್ಷ ಲಕ್ಷ ಹಣ ಪಡೆಯಲಾಗಿತ್ತು. ಸುಮಾರು 2 ಕೋಟಿ ರೂಪಾಯಿಗೂ ಅಧಿಕ ಹಣದ ವ್ಯವಹಾರ ನಡೆದಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೋಗಿಲು ಲೇಔಟ್​​ನ ಫಕೀರ್ ಲೇಔಟ್ ಹಾಗೂ ವಸೀಂ ಲೇಔಟ್​​ನಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿ ಶೆಡ್ ನಿರ್ಮಾಣ ಮಾಡಿಕೊಳ್ಳಲು ಆರೋಪಿಗಳಾದ ವಸೀಂ ಹಾಗೂ ವಿಜಯ್ ಮತ್ತು ರಾಬಿನ್ ಎಂಬುವವರು ಲಕ್ಷ ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ಮೂವರ ಬ್ಯಾಂಕ್ ಖಾತೆಗಳ ಜಾಲಾಡಿದಾಗ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿರುವುದು ಗೊತ್ತಾಗಿದೆ. ಪೊಲೀಸರ ತನಿಖೆಯಲ್ಲಿ ಈ ಸತ್ಯ ಬಯಲಾಗುತ್ತಿದ್ದಂತೆಯೇ, ಒತ್ತುವರಿದಾರರಿಗೆ ಪುನರ್ವಸತಿ ನೀಡದೇ ಇರುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಕೋಗಿಲು ನಿವಾಸಿಗಳು ಹೇಳಿದ್ದೇನು?

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೋಗಿಲು ನಿವಾಸಿಗಳು, ಎಲ್ಲರೂ ಮನೆ ಕಟ್ಟಿಕೊಂಡರು. ನಾವು ಕೂಡ ಮನೆ ಕಟ್ಟಿಕೊಂಡಿದ್ದೇವೆ. ಎರಡ್ಮೂರು ವರ್ಷದ ಹಿಂದೆ ಇಲ್ಲಿ ನಾವು ಮನೆ ನಿರ್ಮಾಣ ಮಾಡಿದ್ದೇವೆ ಎಂದಿದ್ದಾರೆ.

ಲಕ್ಷಾಂತರ ರೂಪಾಯಿ ಕೊಟ್ಟು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಯಾಕೆ ಪುನರ್ವಸತಿ ನೀಡಬೇಕೆಂಬ ಚರ್ಚೆ ಶುರುವಾಗಿದೆ. ಆರಂಭದಲ್ಲಿ ಅಲ್ಲಿದವರು ಬಡವರು ಎಂಬ ಮಾನವೀಯತೆ ಇತ್ತು. ಆದರೆ ಕೋಟ್ಯಂತರ ರೂಪಾಯಿ ವ್ಯವಹಾರದ ಮಾಹಿತಿ ಪೊಲೀಸ್ ತನಿಖೆಯಲ್ಲಿ ಬಯಲಾಗಿದ್ದು, ಇದೀಗ 26 ಜನರಿಗೆ ಪುನರ್ವಸತಿ ನೀಡಬೇಕು ಎಂದಿಕೊಂಡಿದ್ದ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸದ್ಯಕ್ಕೆ ಒತ್ತುವರಿದಾರರಿಗೆ ಪುನರ್ವಸತಿ ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ

ಒಟ್ಟಿನಲ್ಲಿ ಕೋಗಿಲು ಲೇಔಟ್ ಅಕ್ರಮ ಒತ್ತುವರಿ ತೆರವು ಮಾಡಿ ಇಂದಿಗೆ 38 ದಿನಗಳಾಗಿವೆ. ಆದರೆ ಇಲ್ಲಿನ ನಿವಾಸಿಗಳಿಗೆ ಮನೆ ಕೊಡುತ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ. ಸರ್ಕಾರವೂ ಮಾಹಿತಿ ನೀಡುತ್ತಿಲ್ಲ. ಇದರಿಂದ ಕೋಗಿಲು ನಿವಾಸಿಗಳು ಗೊಂದಲಕ್ಕೊಳಗಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link