Category Archives: Blog

Your blog category

ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್​ ಅಳವಡಿಕೆಗೆ ನೀಡಿದ್ದ 10 ಕೋಟಿ ರೂ. ವಾಪಸ್ ಪಡೆಯಿತಾ ಸರ್ಕಾರ? ಬಿಜೆಪಿ ಗಂಭೀರ ಆರೋಪ – Kannada News | Did Karnataka Government Withdraw Rs 10 Crore for Tungabhadra Dam Crest Gates? BJP Makes Serious Allegations

ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್​ ಅಳವಡಿಕೆ ಕಾಮಗಾರಿ

ಕೊಪ್ಪಳ, ಜನವರಿ 27: ತುಂಗಭದ್ರಾ ಜಲಾಶಯ (Tungabhadra Dam) 4 ಜಿಲ್ಲೆಯ ಜನರ ದಾಹ ನೀಗಿಸುವ, ಅನ್ನದಾತರ ಬದುಕನ್ನು ಹಸಿರಾಗಿಸುವ ಒಡಲು. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಟಿಬಿ ಡ್ಯಾಮ್​ ಗೇಟ್ ಅಳವಡಿಕೆಯ ವಿಚಾರ ಮತ್ತೊಮ್ಮೆ ಸದ್ದು ಮಾಡಿದೆ. ಮಳೆಗಾಲದಲ್ಲಿ ಜಲಾಶಯದ 19ನೇ ಕ್ರೆಸ್ಟ್​ ಗೇಟ್ ಕೊಚ್ಚಿ ಹೋಗಿತ್ತು. ಅಲ್ಲದೇ, ಜಲಾಶಯದ 6 ಗೇಟ್​ಗಳಿಗೆ ಹಾನಿಯಾಗಿವೆ ಎಂಬುದು ತಿಳಿದುಬಂದಿತ್ತು. ಹೀಗಾಗಿ ರಾಜ್ಯ ಸರ್ಕಾರ 54 ಕೋಟಿ ರೂ. ವೆಚ್ಚದಲ್ಲಿ 33 ಕ್ರೆಸ್ಟ್ ಗೇಟ್​ಗಳ ಬದಲಾವಣೆಗೆ ಆದೇಶ ನೀಡಿತ್ತು. ಗುಜರಾತ್ ಮೂಲದ ಕಂಪನಿಗೆ ಗೇಟ್ ಅಳವಡಿಕೆಗೆ ಟೆಂಡರ್ ನೀಡಲಾಗಿದ್ದು ಡಿಸೆಂಬರ್​​​ನಲ್ಲಿ ಕಾಮಗಾರಿ ಆರಂಭವಾಗಿದೆ.

ಗೇಟ್ 18ಕ್ಕೆ ಮಾತ್ರ ಕ್ರೆಸ್ಟ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇನ್ನೂ 32 ಕ್ರೆಸ್ಟ್ ಗೇಟ್ ಅಳವಡಿಕೆ ಬಾಕಿ ಇದೆ. ಗೇಟ್ ಕಾಮಗಾರಿಗೆ ನೀಡಿದ್ದ 10 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇದನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ.

ಆಂಧ್ರ, ತೆಲಂಗಾಣದಿಂದಲೂ ಹಣ

ರಾಜ್ಯ ಸರ್ಕಾರ ಟಿಬಿ ಜಲಾಶಯದ ಕ್ರೆಸ್ಟ್ ಗೇಟ್ ಅಳವಡಿಕೆ ಕಾಮಗಾರಿಗೆ 10 ಕೋಟಿ ರೂ. ನೀಡಿತ್ತು. ಇನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರ 25 ಕೋಟಿ ರೂ. ನೀಡಿವೆ ಎನ್ನಲಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ 10 ಕೋಟಿ ರೂ. ವಾಪಸ್ ಪಡೆದಿದೆ ಎಂಬ ಆರೋಪವಿದೆ. ಅಧಿಕಾರಿಗಳು, ಎಲ್ಲವೂ ಟಿಬಿ ಬೋರ್ಡ್​​ಗೆ ಗೊತ್ತಿದೆ ಎನ್ನುತ್ತಿದ್ದಾರೆ.

ಏತನ್ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ಆರೋಪವನ್ನು
ತಳ್ಳಿಹಾಕಿದ್ದು ನಾವು ಹಣ ವಾಪಸ್ ಪಡೆದಿಲ್ಲ. ಆದರೆ ಖಜಾನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಆಗಿದ್ದರೂ ಹಣ ಕೊಡಲೇಬೇಕು. ಫೆಬ್ರವರಿ ಅಂತ್ಯಕ್ಕೆ 6 ಕ್ರೆಸ್ಟ್ ಗೇಟ್​​ ಫಿಕ್ಸ್ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ?

ಈಗಾಗಲೇ 2ನೇ ಬೆಳೆಗೆ ಟಿಬಿ ಡ್ಯಾಮ್​ನಿಂದ ರೈತರಿಗೆ ನೀರು ಕೊಟ್ಟಿಲ್ಲ. ಹಣ ನೀಡದಿದ್ದರೆ ಕಾಮಗಾರಿ ವಿಳಂಬ ಆಗಲಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಹಣ ವಾಪಸ್ ಪಡೆದಿರುವ ಆರೋಪದಿಂದ ಇದೀಗ ರಾಜಕೀಯ ಕದನ ಏರ್ಪಟ್ಟಿದ್ದು, ಇದು ಇನ್ಯಾವ ಹಂತಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೀ ಕನ್ನಡದಲ್ಲಿ ಆರಂಭ ಆಗ್ತಿದೆ ಎರಡು ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​​ಗಳು ಯಾವವು? – Kannada News | Zee Kannada: New Serials Krishna Rukku, Jagaddhatri. Amrutha Dhare, Puttakkana Makkalu Ending?

ಜೀ ಕನ್ನಡ ವಾಹಿನಿಯು ಹೊಸ ಹೊಸ ಧಾರಾವಾಹಿಗಳು ಹಾಗೂ ಶೋಗಳನ್ನು ಪ್ರೇಕ್ಷಕರ ಎದುರು ಇಡುತ್ತಲೇ ಬರುತ್ತಿದೆ. ಈಗ ಜೀ ಕನ್ನಡದಲ್ಲಿ ಸಾಕಷ್ಟು ಉತ್ತಮ ಧಾರಾವಾಹಿಗಳು ಪ್ರಸಾರ ಕಾಣುತ್ತಿದ್ದು, ಟಿಆರ್​​ಪಿಯಲ್ಲಿ ಮೊದಲ ಸ್ಥಾನವನ್ನು ಗಳಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಎರಡು ಹೊಸ ಧಾರಾವಾಹಿಗಳು ಪ್ರಸಾರ ಕಾಣಲು ರೆಡಿ ಆಗಿವೆ. ಆ ಧಾರಾವಾಹಿಗಳು ಯಾವವು? ಮುಗಿಯುವ ಧಾರಾವಾಹಿಗಳು ಯಾವವು ಎಂಬುದನ್ನು ಇಲ್ಲಿ ನೋಡೋಣ.

ಜೀ ಕನ್ನಡ ವಾಹಿನಿಯು ಎರಡು ಹೊಸ ಧಾರಾವಾಹಿಗಳ ಪ್ರೋಮೋನ ಹಂಚಿಕೊಂಡಿದೆ. ‘ಕೃಷ್ಣ ರುಕ್ಕು’ ಎಂಬುದು ಧಾರಾವಾಹಿಯ ಹೆಸರು. ಇದರಲ್ಲಿ ಯಾರು ನಟಿಸುತ್ತಿದ್ದಾರೆ ಎಂಬಿತ್ಯಾದಿ ಮಾಹಿತಿ ರಿವೀಲ್ ಆಗಿಲ್ಲ. ಜಗದ್ಧಾತ್ರಿ ಹೆಸರಿನ ಧಾರಾವಾಹಿ ಕೂಡ ಬರುತ್ತಿದೆ. ಈ ಧಾರಾವಾಹಿ ಪ್ರೋಮೋಗೆ ‘ಇವಳು ಮನೆ ಬೆಳಗೋ ದೀಪವೂ ಹೌದು, ಅಧರ್ಮಕ್ಕೆ ಅಂತ್ಯ ಹಾಡೋ ಜ್ವಾಲೆಯೂ ಹೌದು’ ಎಂಬ ಕ್ಯಾಪ್ಶನ್ ನೀಡಲಾಗಿದೆ. ಈ ಧಾರಾವಾಹಿಯಲ್ಲಿ ಮಹಿಳೆ ಪಾತ್ರ ಪ್ರಾಮುಖ್ಯತೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಇದು ಹೊಸ ರೀತಿಯ ಪ್ರಯೋಗ ಇದ್ದರೂ ಇರಬಹುದು ಎನ್ನಲಾಗುತ್ತಿದೆ.

ಇನ್ನು, ಎರಡು ಧಾರಾವಾಹಿಗಳು ಪೂರ್ಣಗೊಳ್ಳುತ್ತಿವೆ ಎಂದಾಗ ಎರಡು ಹೊಸ ಧಾರಾವಾಹಿಗಳು ಪೂರ್ಣಗೊಳ್ಳಬಹುದು. ಅವು ಯಾವವವು ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ ‘ಅಮೃತಧಾರೆ’ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತ ತಲುಪೋ ರೀತಿ ಕಾಣುತ್ತಿದೆ. ಗೌತಮ್ ಹಾಗೂ ಭೂಮಿಕಾ ಒಂದಾಗಿ ಆಗಿದೆ. ಇನ್ನು, ಜಯದೇವ್ ಹಾಗೂ ತಂಡಕ್ಕೆ ಪಾಠ ಕಲಿಸಿದರೆ ಮುಗಿಯಿತು. ಹೀಗಾಗಿ, ಧಾರಾವಾಹಿ ಪೂರ್ಣಗೊಳ್ಳುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮುರಿದು ಬಿತ್ತು ‘ರಾಧಾ ರಮಣ’ ಧಾರಾವಾಹಿ ನಟಿ ಅನುಷಾ ಹೆಗಡೆ ದಾಂಪತ್ಯ

‘ಪುಟ್ಟಕ್ಕನ್ನ ಮಕ್ಕಳು’ ಧಾರಾವಾಹಿ ಕೂಡ ಪ್ರಸಾರ ಆರಂಭಿಸಿ ಹಲವು ವರ್ಷಗಳು ಕಳೆದಿವೆ. ಸಾವಿರಾರು ಎಪಿಸೋಡ್ ಪ್ರಸಾರಕಂಡಿದೆ. ಈ ಕಾರಣದಿಂದ ಈ ಧಾರಾವಾಹಿ ಕೂಡ ಪೂರ್ಣಗೊಂಡರೂ ಅಚ್ಚರಿ ಏನಿಲ್ಲ ಬಿಡಿ. ಹೀಗಾಗಿ. ಇದೆರಡು ಧಾರಾವಾಹಿಗಳು ಕೊನೆಗೊಳ್ಳಬಹುದು ಎಂಬುದು ಅನೇಕರ ಊಹೆ. ಈ ಬಗ್ಗೆ ವಾಹಿನಿ ಕಡೆಯಿಂದ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:50 am, Tue, 27 January 26

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ – Kannada News | Bengaluru temperature: Dry weather all over the karnataka, Misty weather in Bengaluru

ರಾಜ್ಯದೆಲ್ಲೆಡೆ ಶೀತದ ವಾತಾವರಣ, ಒಣ ಹವೆ

ಬೆಂಗಳೂರು, ಜನವರಿ 27: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಿನ್ನೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸತತ ಸೋಲು… RCBಗೆ ನೇರವಾಗಿ ಫೈನಲ್​ಗೇರಲು ಇರೋದು ಇದೊಂದೇ ದಾರಿ

Source link

Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧಿ – Kannada News | Daily Horoscope for January 27th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 27 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ನವಮಿ ಜೊತೆಗೆ ರೇವತಿ ನಕ್ಷತ್ರ ಮತ್ತು ಬಾಲವ ಕರಣ ಹೊಂದಿದ್ದು, ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು ಎದುರಿಸಬಹುದಾದ ಸವಾಲುಗಳು ಮತ್ತು ಪಡೆಯಬಹುದಾದ ಅವಕಾಶಗಳನ್ನು ವಿವರಿಸಲಾಗಿದೆ.

 

 

 

 

Source link

Daily Devotional: ಯಾವ ಸಮಸ್ಯೆಗೆ ಯಾವ ಪೂಜೆ ಮಾಡಬೇಕು ಗೊತ್ತಾ? – Kannada News | Daily Devotional: Worshipping God according to your problems

ಬೆಂಗಳೂರು, ಜನವರಿ 27: ಮಾನವನ ಜೀವನದಲ್ಲಿ ಯಾವ ರೀತಿ ಸಮಸ್ಯೆ ಬಂದರೆ ಯಾವ ರೀತಿ ದೇವರನ್ನು ಪೂಜಿಸಬೇಕೆಂದು ಡಾ.ಬಸವರಾಜ್ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಸೂರ್ಯ, ಚಂದ್ರ ಸೇರಿದಂತೆ ಎಲ್ಲಾ ಗ್ರಹಗಳ ದೋಷವಿದ್ದಲ್ಲಿ, ಆ ಗ್ರಹಕ್ಕೆ ಸಂಬಂಧಿಸಿದ ದಿನದಂದು ಭಕ್ತಿಪೂರ್ವಕವಾಗಿ ನಿರ್ದಿಷ್ಟ ನಿಯಮವನ್ನು ಅನುಸರಿಸಿ ಸ್ನಾನ ಮಾಡುವುದರಿಂದಲೇ ದೋಷ ಪರಿಹಾರವಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಹೋಗುವುದು, ದಾನ-ಧರ್ಮ ಮಾದುವುದು, ವೃತಗಳನ್ನು ಮಾಡುವುದರ ಜೊತೆಗೆ ಕೆಲವೊಂದು ಹೋಮ ಹವನ, ಉಪಾಯಗಳ ಮೂಲಕವೂ ಸಂಕಷ್ಟಗಳು ಬಗೆರಿಯುತ್ತವೆ ಎಂದು ಗುರೂಜಿ ಹೇಳಿದ್ದಾರೆ.

 

Source link

400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್! – Kannada News | Rs 400 Crore Robbery Case Takes stunning Twist: Is a Gujarat Politician the Real Owner? Debate sparked in Karnataka

ಬೆಳಗಾವಿ, ಜನವರಿ 27: ಗೋವಾದಿಂದ ಬೆಳಗಾವಿ (Belagavi) ಚೋರ್ಲಾ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಹಣವನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ (400 crore robbery case) ಮಾಡಲಾಗಿತ್ತು ಎಂಬ ಪ್ರಕರಣ ಸಂಬಂಧ ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದೀಗ ಈ ಹಣದ ಹಿಂದೆ ಗುಜರಾತ್ ರಾಜಕಾರಣಿ ಹೆಸರು ಕೇಳಬಂದಿದ್ದು, ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ದರೋಡೆಯಾದ ಹಣ ಮಹಾರಾಷ್ಟ್ರ ಪಾಲಿಕೆ ಚುನಾವಣೆಗೆ ಬಳಕೆ ಆಗಿದೆ. ನೋಟು ಬದಲಾವಣೆ ದಂಧೆ ನಡೆದಿದೆ, ಹಣ ಇವರದ್ದೇ ಇರಬೇಕು, ಅವರದ್ದೇ ಇರಬೇಕು ಎಂದು ಪರಸ್ಪರ ಕೆಸರೆರಚಾಟ ತಾರಕಕ್ಕೇರಿದೆ.

ಕಾಂಗ್ರೆಸ್​​​ನವರೇ ಹಣ ಕಳುಹಿಸಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಅವರ ಮಾತಿಗೆ ಮಾತಿಗೆ ಮಾಜಿ ಸಿಎಂ ಸದಾನಂದಗೌಡ ಧ್ವನಿಗೂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಣ ಸಂಗ್ರಹ ಮಾಡುತ್ತದೆ, ಬೇರೆ ಬೇರೆ ಕಡೆ ಕಳಿಸಿಕೊಡುತ್ತದೆ ಎಂದಿದ್ದಾರೆ. ಈ ಮಾತಿಗೆ ಗರಂ ಆದ, ಸಚಿವ ಭೈರತಿ ಸುರೇಶ್, ನೋಟ್ ಮೇಲೆ ಕಾಂಗ್ರೆಸ್ ಎಂದು ಬರೆದಿದೆಯಾ ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ, ಹಣ ಸಾಗಾಟಕ್ಕೆ ಸಂಬಂಧಿಸಿದ ಮೂರೂ ರಾಜ್ಯಗಳಲ್ಲೂ ಬಿಜೆಪಿಯೇ ಅಧಿಕಾರದಲ್ಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಧಾನಿ ಮೋದಿಗೆ ಕಲಬುರಗಿಯಲ್ಲಿ ರೊಟ್ಟಿ ಮಾಡುವವರ ಬಗ್ಗೆ ಗೊತ್ತಾಗುತ್ತದೆ. ದರೋಡೆ ಬಗ್ಗೆ ಯಾಕೆ ಗೊತ್ತಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿಯ ಗಡಿಭಾಗದಲ್ಲೇ ನಾಪತ್ತೆಯಾದ 400 ಕೋಟಿ ರೂ. ಬಗ್ಗೆ ಜಿಲ್ಲೆಯ ಸಚಿವರು ಪ್ರಶ್ನೆ ಎತ್ತಿದ್ದಾರೆ. ಮಹಾರಾಷ್ಟ್ರ ಪೊಲೀಸರೇ ನಮ್ಮ ಪೊಲೀಸರಿಗೆ ಸಹಕಾರ ಕೊಡುತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

400 ಕೋಟಿ ರೂ. ಹಣ ಗುಜರಾತ್ ರಾಜಕಾಣಿಗೆ ಸೇರಿದ್ದಾ?

ದರೋಡೆಯಾಗಿತ್ತು ಎನ್ನಲಾದ 400 ಕೋಟಿ ರೂ. ಹಣಕ್ಕೆ ಸಂಬಂಧಿಸಿದಂತೆ ಜಯೇಶ್ ಎಂಬಾತನ ಜೊತೆ ಮಹಾರಾಷ್ಟ್ರದ ಉದ್ಯಮಿ ಕಿಶೋರ್ ಮಾತನಾಡಿದ್ದಾನೆ ಎನ್ನಲಾದ ಆಡಿಯೋವೊಂದು ಸೋಮವಾರ ಬಹಿರಂಗವಾಗಿದೆ. ಅದರಲ್ಲ, ನನ್ನ ಮತ್ತು ವಿರಾಟ್‌ಗೆ ಪರಿಚಯವಿದ್ದ ವ್ಯಕ್ತಿ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿ ಗುಜರಾತ್‌ನ ದೊಡ್ಡ ರಾಜಕಾರಣ ಎಂದು ಹೇಳಲಾಗಿದೆ. ಹೀಗಾಗಿ ದರೋಡೆಯಾಗಿರುವ ಹಣ ಗುಜರಾತ್ ರಾಜಕಾಣಿಗೆ ಸೇರಿದ್ದಾ ಎಂಬ ಪ್ರಶ್ನೆ ಮೂಡಿದೆ. ಇದುವೇ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಆಡಿಯೋದಿಂದ ಹುಟ್ಟಿವೆ ಹಲವು ಪ್ರಶ್ನೆ

ಆಡಿಯೋ ಪ್ರಕಾರ ಕಿಶೋರ್ ಹಣ ಕಳುಹಿಸುತ್ತಿದ್ದ ಎನ್ನಬಹುದು. ಆದರೆ, ಗೋವಾದಲ್ಲಿ ಹಣ ಕೊಟ್ಟಿದ್ಯಾರು? ಆ ದುಡ್ಡು ಕಿಶೋರ್‌ನದ್ದೇನಾ? ಗುಜರಾತ್‌ ರಾಜಕಾರಣಿಗೆ ಹೋಗಿತ್ತಾ? ಅಥವಾ ಗುಜರಾತ್ ರಾಜಕಾರಣಿಯೇ ನೋಟು ಬದಲಾವಣೆಗೆ ಕೊಟ್ಟಿದ್ದರಾ ಎಂಬುದು ನಿಗೂಢವಾಗಿದೆ. ಗುಜರಾತ್ ರಾಜಕಾರಣಿ ಕೂಡಾ ಬೇರೆ ಹಣದ ವ್ಯವಸ್ಥೆ ಮಾಡಿ, ಈ ಬಗ್ಗೆ ಕಾಳಜಿ ವಹಿಸಿದ್ದಾರೆ ಎಂಬುದೂ ಆಡಿಯೋದಲ್ಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಕರಣಲ್ಲಿ ಗೊಂದಲವಿದೆ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಮೊದಲಿಗೆ ಕಿಡ್ನಾಪ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು 400 ಕೋಟಿ ರೂ. ಮೂಲ ಬೆನ್ನತ್ತಿದ್ದಾರೆ.

ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

ಒಟ್ಟಿನಲ್ಲಿ, 400 ಕೋಟಿ ರೂ. ದರೋಡೆ ಪ್ರಕರಣದ ಬಗ್ಗೆ ಕರ್ನಾಟಕದಲ್ಲಿ ಎಫ್​ಐಆರ್ ದಾಖಲಾಗಿಲ್ಲ. ಆದರೂ ಮಹಾರಾಷ್ಟ್ರ, ಗೋವಾ ಪೊಲೀಸರ ಜೊತೆಗೆ ತನಿಖೆಗೆ ಇಳಿದಿದ್ದಾರೆ. ಈ ನಡುವೆ ರಾಜಕೀಯ ನಾಯಕರ ನಡುವೆ ವಾಕ್ಸಮರವೂ ಮುಂದುವರಿದಿದೆ. ಗುಜರಾತಿನ ರಾಜಕಾರಣಿ ಯಾರು ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್ – Kannada News | Bigg Boss Satish Misinterprets Sudeep’s Sarcasm, Continues Boasting

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (Bigg Boss) ಮೂರನೇ ವಾರವೇ ಹೊರ ಬಂದ ಸತೀಶ್ ಸದಾ ಸುದ್ದಿಯಲ್ಲಿರೋ ಪ್ರಯತ್ನ ಮಾಡುತ್ತಿದ್ದಾರೆ. ಬಡಾಯಿಕೊಚ್ಚಿಕೊಳ್ಳುವುದರಲ್ಲಿ ಅವರು ಮುಂದು. ಇದು ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಬಿಗ್ ಬಾಸ್ ಫಿನಾಲೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ವ್ಯಂಗ್ಯವಾಗಿ ಹೇಳಿದ್ದರು. ಆದರೆ, ಸತೀಶ್ ಗಂಭೀರವಾಗಿ ಸ್ವಿಕರಿಸಿಬಿಟ್ಟಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಸುದೀಪ್ ಅವರು ವ್ಯಂಗ್ಯವಾಗಿ ಮಾತನಾಡಿದ್ದರು. ಸತೀಶ್ ಧರಿಸೋ ಗ್ಲಾಸ್ ಹಾಗೂ ಬಟ್ಟೆಗಳ ಬೆಲೆ ಲಕ್ಷಾಂತರ ರೂಪಾಯಿ ಇರುತ್ತದೆ. ಅವರಿಗೆ ನಾನು ಶೇಕ್​ಹ್ಯಾಂಡ್ ಮಾಡಿದರೆ ಲಕ್ಷ ಲಕ್ಷ ವೀವ್ಸ್ ಬರುತ್ತದೆ. ಕಲರ್ಸ್​​ಗೆ ಮಿಲಿಯನ್ ವೀವ್ಸ್ ಹೆಚ್ಚು ಬರೋಕೆ ಅವರೇ ಕಾರಣ ಎಂದೆಲ್ಲ ಹೇಳಿ ಕಾಲು ಎಳೆದಿದ್ದರು. ಇದು ವ್ಯಂಗ್ಯವಾಗಿ ಹೇಳಿದ್ದು ಎಂದು ವೀಕ್ಷಕರಿಗೆ ಗೊತ್ತಾಗಿದೆ. ಆದರೆ, ಸತೀಶ್​​ಗೆ ಮಾತ್ರ ಇದು ಅರ್ಥವಾಗಿಯೇ ಇಲ್ಲ.

ಸುದೀಪ್ ಅವರು ಸತೀಶ್​​ ಅವರ ಗ್ಲಾಸ್ ಕೇಳಿದರಂತೆ. ‘ಬಿಗ್ ಬಾಸ್ ಫಿನಾಲೆ ಮುಗಿದ ಬಳಿಕ ನಡೆದ ಪಾರ್ಟಿಯಲ್ಲಿ ನಾನೂ ಇದ್ದೆ. ಅಲ್ಲಿ ನನ್ನ ಗ್ಲಾಸ್ ಬಗ್ಗೆಯೇ ಮಾತುಕತೆ ನಡೆಯಿತು. ಸುದೀಪ್ ಅವರು ಗ್ಲಾಸ್ ಕೊಡಿ ಎಂದು ನನಗೆ ಹೇಳಿದರು. ಆದರೆ, ನಾನು ಕೊಡಲ್ಲ ಎಂದೆ. ನನ್ನ ತೋರಿಸಿದ್ರೆ ಮಿಲಿಯನ್ ವೀವ್ಸ್ ಬರುತ್ತದೆ ಎಂದು ಸುದೀಪ್ ಅವರೇ ಹೇಳಿದ್ದಾರೆ’ ಎಂಬುದಾಗಿ ಸತೀಶ್ ಬಡಾಯಿ ಕೊಚ್ಚಿಕೊಂಡಿದ್ದಾರೆ.

‘ತುಕಾಲಿ ಸಂತೋಷ್ ನನ್ನ ಪಾತ್ರ ಮಾಡಿದ್ದರು. ಮೂರು ದಿನ ಬಿಟ್ಟು ಕರೆ ಮಾಡಿದ್ದರು. ಬಿಗ್ ಬಾಸ್ ಶೋ ಮಾಡಿದ್ದೇನೆ, ಸಾಕಷ್ಟು ಶೋ ಮಾಡಿದ್ದೇನೆ. ಆದರೆ, ಯಾವಾಗಲೂ ಇಷ್ಟು ರೆಕಗ್ನೈಸೇಷನ್ ಸಿಕ್ಕಿರಲಿಲ್ಲ ಎಂದರು. ನನ್ನ ಪಾತ್ರ ಮಾಡಿದ ಬಳಿಕವೇ ಅವರಿಗೆ ಹೆಚ್ಚು ಜನಪ್ರಿಯತೆ ಸಿಕ್ಕಿತಂತೆ’ ಎಂದು ಸತೀಶ್ ವಿವರಿಸಿದರು.

ಇದನ್ನೂ ಓದಿ: ಬಿಗ್ ಬಾಸ್ ಸತೀಶ್​ಗೆ ಕೊಲೆ ಬೆದರಿಕೆ ಹಾಕಿದ ಗಿಲ್ಲಿ ಫ್ಯಾನ್ಸ್ ಅರೆಸ್ಟ್: 80 ಜನರ ಮೇಲೆ ಕೇಸ್

ಸದ್ಯ ಸತೀಶ್ ಮಾತು ಸಾಕಷ್ಟು ಚರ್ಚೆ ಆಗುತ್ತಿದೆ. ಜೀವನದಲ್ಲಿ ಅವರು ನಿಜ ಹೇಳಲೇಬಾರದು ಎಂದು ನಿರ್ಧರಿಸಿದಂತಿದೆ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಹೋರಾಟ ಸಂದರ್ಭದಲ್ಲೇ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಎಂಟ್ರಿ! – Kannada News | Randeep Surjewala Makes Sudden Bengaluru Entry Amid Congress Protest Against NREGA Name Change

ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರ ಮನ್​ರೇಗಾ (NREGA) ಯೋಜನೆಯ ಹೆಸರನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ (Congress) ಪಕ್ಷದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಸುರ್ಜೇವಾಲ, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವ ವಹಿಸಲಿದ್ದು, ಬೆಳಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಆರಂಭವಾಗಲಿದೆ. ಬಳಿಕ ಕಾಂಗ್ರೆಸ್ ನಾಯಕರು ಲೋಕಭವನದತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲಿದ್ದಾರೆ.

ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಜೊತೆಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ ನಡೆಸುವಂತೆ ಸೂಚಿಸಲಾಗಿದೆ.

ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ಸೋನಿಯಾ ಗಾಂಧಿ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಜಾರಿಗೊಳಿಸಿದ್ದ ಉದ್ಯೋಗ ಖಾತ್ರಿ ಯೋಜನೆಯ ಮೂಲ ಆತ್ಮವನ್ನು ಉಳಿಸಿಕೊಳ್ಳುವುದು ಈ ಹೋರಾಟದ ಮುಖ್ಯ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ಸೋಮವಾರ ಸ್ಪಷ್ಟಪಡಿಸಿದ್ದರು.

ಇನ್ನು, ಈ ಪ್ರತಿಭಟನೆಗೆ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಆಡಳಿತ ಪಕ್ಷವೇ ಮುತ್ತಿಗೆ ಹಾಗೂ ಮೆರವಣಿಗೆ ನಡೆಸುವುದು ಎಷ್ಟು ಸಮಂಜಸ ಎಂದು ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮೆರವಣಿಗೆ ಹಾಗೂ ಮುತ್ತಿಗೆಗಳಿಗೆ ನಿಷೇಧ ಇದ್ದು, ಈ ಬಗ್ಗೆ ಹೈಕೋರ್ಟ್ ನಿರ್ದೇಶನವಿದೆ. ಕಾನೂನು ಉಲ್ಲಂಘನೆಗೆ ಆಡಳಿತ ಪಕ್ಷವೇ ಮುಂದಾಗಿರುವುದು ಸರಿಯೇ? ಆಡಳಿತ ಪಕ್ಷಕ್ಕೆ ಅವಕಾಶ ನೀಡಿದರೆ, ಇತರ ಪಕ್ಷಗಳಿಗೂ ಇದೇ ಅವಕಾಶ ನೀಡಲಾಗುತ್ತದೆಯೇ ಎಂದು ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್​​ ಕುಮಾರ್​​ರಿಂದ ಸಾಲು ಸಾಲು ಪ್ರಶ್ನೆ

ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್‌ ಪ್ರತಿಭಟನೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 27ರ ದಿನಭವಿಷ್ಯ – Kannada News | Jan 27th Numerology Horoscope: What’s Your Daily Prediction? Birth Numbers 7, 8, 9

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ ಮಾಡುವುದಕ್ಕೆ ಅಥವಾ ಮುಖ್ಯವಾದ ವ್ಯವಹಾರ ಒಪ್ಪಂದ ಪೂರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಗುರುತಿಸಲಾಗುತ್ತದೆ. ಹೆಚ್ಚಿನ ಜವಾಬ್ದಾರಿಗಳನ್ನು ಸಹ ವಹಿಸಬಹುದು. ರಕ್ತದೊತ್ತಡ ಅಥವಾ ಉರಿಮೂತ್ರದ ಸಮಸ್ಯೆ ಕಂಡುಬರಬಹುದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕುಟುಂಬದ ಕಡೆಯಿಂದಲೂ ಉದ್ಯೋಗ ಸ್ಥಳದಲ್ಲಿಯೂ ಈ ದಿನ ಜವಾಬ್ದಾರಿಗಳ ಒತ್ತಡ ಹೆಚ್ಚಾಗುತ್ತದೆ. ಕೆಲಸದ ಕಾರಣದಿಂದ ಬೇಸರ ಆಗಬಹುದು. ಹಣಕಾಸಿನಲ್ಲಿ ಸಾಲ, ಕಂತು, ತೆರಿಗೆ ಪಾವತಿ ವಿಚಾರಗಳಿಗೆ ವಿಶೇಷವಾದ ಗಮನ ಕೊಡಿ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ನಿಧಾನವಾಗಿರುತ್ತದೆ. ಕುಟುಂಬದ ಬೆಂಬಲ ಇದ್ದರೂ ನಿಮ್ಮ ಆಪ್ತರಿಗೆ ಅಂತ ಸಮಯ ಕೊಡಲು ಸಾಧ್ಯವಾಗದೇ ಅಸಮಾಧಾನಕ್ಕೆ ಕಾರಣ ಆಗಬಹುದು. ಕೆಲವು ಮುಖ್ಯ ವಿಚಾರಗಳನ್ನು ಪರೀಕ್ಷಿಸಿಕೊಳ್ಳುವುದು ಒಳ್ಳೆಯದು. ಸರ್ಕಾರಿ ಕೆಲಸ- ಕಾರ್ಯಗಳಲ್ಲಿ ಅತಿಯಾದ ಒತ್ತಡ ಹಾಕಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಹೆಚ್ಚು ಮಾತನಾಡದೆ, ಇತರರ ಜತೆಗೆ ಸೇರಿಕೊಳ್ಳದೆ ಏಕಾಂಗಿಯಾಗಿ ಇರುವುದಕ್ಕೆ ಬಯಸುತ್ತೀರಿ. ಈ ದಿನ ಮನಸ್ಸು ಹೆಚ್ಚು ಅಂತರ್ಮುಖಿ ಆಗಿರುತ್ತದೆ. ಒಂಟಿಯಾಗಿಯೇ ಕೆಲಸ- ಕಾರ್ಯಗಳನ್ನು ಮಾಡುವ ಆಸಕ್ತಿ ಹೆಚ್ಚಾಗುತ್ತದೆ. ಸಂಬಂಧಕ್ಕೆ ಸಂಬಂಧಿಸಿದಂತೆ ದೊಡ್ಡ ನಿರ್ಧಾರಗಳನ್ನು ಇವತ್ತಿನ ಮಟ್ಟಿಗೆ ಮುಂದೂಡುವುದು ಒಳಿತು. ಹಣಕಾಸಿನ ವಿಚಾರದಲ್ಲಿ ಷೇರು- ಮ್ಯೂಚುವಲ್ ಫಂಡ್ ಈ ರೀತಿ ಹೊಸ ಹೂಡಿಕೆ ಬೇಡ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಕಡಿಮೆ ಆಗಬಹುದು.

ಲೇಖನ- ಸ್ವಾತಿ ಎನ್.ಕೆ.

Source link