Category Archives: Blog

Your blog category

WPL 2026: ಡಬ್ಲ್ಯುಪಿಎಲ್​ನಲ್ಲಿ ಮೊಟ್ಟ ಮೊದಲ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್ – Kannada News | WPL First Century: Nat Sciver Brunt’s Historic 100 for MI vs RCB

ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ಈ ಲೀಗ್​ನ ನಾಲ್ಕನೇ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೆಜೆಂಡರಿ ಆಲ್​ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿ, ಡಬ್ಲ್ಯುಪಿಎಲ್​ನಲ್ಲಿ ತನ್ನ ಹೆಸರನ್ನು ಶಾಶ್ವತಗೊಳಿಸಿದರು. ಸತತ ನಾಲ್ಕು ಆವೃತ್ತಿಗಳಲ್ಲಿ ಅನೇಕ ಆಟಗಾರ್ತಿಯರು ಶತಕದಂಚಿಗೆ ಬಂದು ಎಡವುತ್ತಿದ್ದರು. ಇದರಿಂದಾಗಿ ಮೊದಲ ಶತಕಕ್ಕಾಗಿ ಇಷ್ಟು ವರ್ಷ ಕಾಯಬೇಕಾಯಿತು. ಅಂದರೆ 1059 ದಿನಗಳು ಮತ್ತು 82 ಪಂದ್ಯಗಳ ನಂತರ, ಡಬ್ಲ್ಯುಪಿಎಲ್​ನಲ್ಲಿ ಅಂತಿಮವಾಗಿ ಮೊದಲ ಶತಕ ದಾಖಲಾಗಿದೆ.

ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಆರಂಭಿಕ ಆಟಗಾರ್ತಿ ಸಜೀವನ ಸಜ್ನಾ ಅವರನ್ನು ಮೂರನೇ ಓವರ್‌ನಲ್ಲಿ ಕಳೆದುಕೊಂಡು ಕಳಪೆ ಆರಂಭ ಕಂಡಿತು. ಆದಾಗ್ಯೂ, ನ್ಯಾಟ್ ಸಿವರ್, ಸಹ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ ಅವರೊಂದಿಗೆ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಗೆಯೇ ಇವರಿಬ್ಬರ ನಡುವೆ 131 ರನ್‌ಗಳ ಜೊತೆಯಾಟವೂ ಮೂಡಿಬಂತು.

ಅರ್ಧಶತಕ ಬಾರಿಸಿದ ನಂತರ ಮ್ಯಾಥ್ಯೂಸ್ ಔಟಾದರೂ ನ್ಯಾಟ್ ಸಿವರ್ ತಮ್ಮ ಅಬ್ಬರ ಮುಂದುವರೆಸಿದರು. ಆರ್‌ಸಿಬಿ ಬೌಲರ್‌ಗಳ ಮೇಲೆ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದ ಬ್ರಂಟ್ ಅಂತಿಮವಾಗಿ 20 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಸಿಂಗಲ್ ಮೂಲಕ ಶತಕ ಪೂರೈಸಿದರು. 57 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿತ್ತು. ಬ್ರಂಟ್ ಅವರ ಈ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ, ಮುಂಬೈ 20 ಓವರ್‌ಗಳಲ್ಲಿ 200 ರನ್‌ಗಳ ಕಠಿಣ ಗುರಿ ನೀಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು? – Kannada News | A 24 Year Woman Commits Suicide In Bengaluru Over harassed By Husband Family For dowry

ಬೆಂಗಳೂರು, (ಜನವರಿ 26): ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿಯೊಬ್ಬರು (Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಯಡಿಯೂರಿನಲ್ಲಿ ನಡೆದಿದೆ. ಕೀರ್ತಿ ಶ್ರೀ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡನ ಹಾಗೂ ಅವರ ಕುಟುಂಬಸ್ಥರ ವರದಕ್ಷಣಿ ಕಿರುಕುಳದಿಂದ ಕೀರ್ತಿ ಸಾವಿಗೆ ಶರಣಾಗಿದ್ದಾಳೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕೀರ್ತಿ ಕುಟುಂಬಸ್ಥರು ನೀಡಿದ ದೂರನ್ನು ಬನಶಂಕರಿ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮೂಲತಃ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೀರ್ತಿ, 2023ರ ನವೆಂಬರ್‌ನಲ್ಲಿ ಗುರುಪ್ರಸಾದ್‌ ಎಂಬುವರನ್ನು ಮದುವೆಯಾಗಿದ್ದರು. 2023ರಲ್ಲಿ ಗುರುಪ್ರಸಾದ್ ಹಾಗೂ ಮೃತ ಕೀರ್ತಿ ಶ್ರೀ ಮದುವೆಯಾಗಿದ್ದರು.ಸುಮಾರು 35 ಲಕ್ಷವನ್ನು ಖರ್ಚು ಮಾಡಿ 400 ಗ್ರಾಂ ಚಿನ್ನ ಹಾಗೂ 5 ಲಕ್ಷ ಹಣವನ್ನು ನಗದಾಗಿ ನೀಡಿ ಮದುವೆಯನ್ನು ಮಾಡಿ ಕೊಟ್ಟಿದ್ದರು. ಆದರೆ ಇಷ್ಟಾದರೂ ಮೃತ ಕೀರ್ತಿ ಶ್ರೀ ಗಂಡ ಗುರುಪ್ರಸಾದ್ ಹಾಗೂ ಆತನ ಮನೆಯವರು ಹಣಕ್ಕಾಗಿ ನಿತ್ಯ ಕಿರುಕುಳವನ್ನು ನೀಡುತ್ತಿದ್ದ. ಹೀಗಾಗಿ ಅವರೇ ಕೊಲೆ ಮಾಡಿದ್ದಾರೆ ಎಂದು ಕೀರ್ತಿಶ್ರೀ ತಂದೆ ಆರೋಪ ಮಾಡಿದ್ದಾರೆ.

ಇದನ್ನೂ ನೋಡಿ: ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ

ಈ ಹಿಂದೆ ಕೀರ್ತಿ ಶ್ರೀಯನ್ನು ಗಂಡನ ಮನೆಯವರು ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದರಂತೆ. ಇದನ್ನ ಮೃತ ಕೀರ್ತಿ ಶ್ರೀ ತಂದೆ ತಾಯಿಯ ಬಳಿ ಹೇಳಿಕೊಂಡಿದ್ದಳು. ಬರ ಬರುತ್ತಾ ಕೀರ್ತಿಗೆ ಆಕೆಯ ಗಂಡನ ಮನೆಯವರ ಕಿರುಕುಳ ವಿಪರೀತವಾಗಿದ್ದು, ಬಾತ್ರೂಮ್ನಲ್ಲಿ ಕೂಡಿಹಾಕಿ ಆಕೆಗೆ ಹೊಡೆದು ದೈಹಿಕ ಹಿಂಸೆ ನೀಡಿದ್ದರು. ಈ ಸಂಬಂಧ ರ ಕೀರ್ತಿ ಮನೆ ಕಡೆಯವರು ಗುರುಪ್ರಸಾದ್ ಮನೆಯಲ್ಲಿ 3 ಬಾರಿ ಜಗಳವನ್ನು ಶಮನ ಮಾಡುವ ಪಂಚಾಯತಿ ಕೂಡ ಮಾಡಿದ್ದರು.

ಆದ್ರೆ, ನಿನ್(ಜನವರಿ 25)ನ ಮದುವೆ ಸಮಯದಲ್ಲಿ ನಾವು ಕೇಳಿದಷ್ಟು ವರದಕ್ಷಿಣೆ ಕೊಟ್ಟಿಲ್ಲ ಅಂತ ನಿಂದಿಸುತ್ತಾ‌ ಎಲ್ಲರ ಮುಂದೆಯೇ ಆತ ಕೇಳಿದನಂತೆ. ಇದಾದ ನಂತರ ಮನೆ ಕಟ್ಟಲು 10 ಲಕ್ಷ ರೂ. ಕೊಡಿ ಆಮೇಲೆ ಬಾಕಿದು ನೋಡೋಣ ಎಂದು ನೇರವಾಗಿಯೇ ಗಂಡನ ಮನೆಯವರು ಕೇಳಿದರಂತೆ. ಈ ವೇಳೆ ಎಂಟು ಲಕ್ಷ ಹಣವನ್ನು ಕೊಟ್ಟಿದ್ದರೂ ಸಹ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಇದು ಆತ್ಮಹತ್ಯೆ ಅಲ್ಲ ಗಂಡ ಗುರುಪ್ರಸಾದ್ ಹಾಗೂ ಆತನ ಮನೆಯವರು ಕೀರ್ತಿಯನ್ನ ಕೊಲೆ ಮಾಡಿದ್ದಾರೆ ಎಂದು ಕೀರ್ತಿ ತಂದೆ ಬನಶಂಕರಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ .

ಒಟ್ಟಾರೆ ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಂತೆ ಗಂಡ ಹೆಂಡತಿ ನಡ್ಕೋಬೇಕು. ಜಗಳ ಹಾಗೂ ಹಣದ ಆಸೆ ಹೆಚ್ಚಾದರೆ ಈ ರೀತಿಯ ಕೃತ್ಯಗಳನ್ನು ಮಾಡಿಕೊಂಡು ಬಿಡುತ್ತಾರೆ. ಸದ್ಯ ಗಂಡ ಗುರುಪ್ರಸಾದ್ ಸೇರಿ 5 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಬನಶಂಕರಿ ಠಾಣೆ ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸರಿಯಾಗಿ ನಿದ್ರೆ ಮಾಡಿ ಎದ್ದ ಮೇಲೂ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ಆಗುವುದಕ್ಕೆ ಕಾರಣವೇನು ಗೊತ್ತಾ? – Kannada News | Headache Like Feeling After Sleep: What’s Wrong?

ರಾತ್ರಿ ಪೂರ್ತಿ ನಿದ್ರೆ ಚೆನ್ನಾಗಿ ಆದಾಗ ಮಾತ್ರ ದೇಹ ಮತ್ತು ಮನಸ್ಸು ಎರಡೂ ಉಲ್ಲಾಸದಿಂದ ಕೂಡಿರುತ್ತೆ ಎಂದು ಸಾಮಾನ್ಯವಾಗಿ ಎಲ್ಲರೂ ನಂಬುತ್ತಾರೆ, ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ ನಮ್ಮ ದೇಹ ಸ್ಪಂದಿಸುತ್ತದೆ. ಅಂದರೆ ಚೆನ್ನಾಗಿ ನಿದ್ರೆ (Sleep) ಮಾಡಿ ಎದ್ದಾಗಲೂ ಕೂಡ ಆಲಸ್ಯ, ತಲೆ ಭಾರವಾದಂತಹ ಅನುಭವವಾಗುತ್ತದೆ. ಈ ಸ್ಥಿತಿ ಏಕಾಗ್ರತೆಯ ಕೊರತೆ, ಕಿರಿಕಿರಿ ಅಥವಾ ಕೆಲಸದ ಮೇಲೆ ಗಮನಹರಿಸಲು ತೊಂದರೆಯಾಗುವಂತೆ ಮಾಡುತ್ತದೆ. ಅನೇಕರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ನಿಮ್ಮ ದೇಹದೊಳಗೆ ಆಗುತ್ತಿರುವ ಕೆಲವು ಬದಲಾವಣೆಗಳ ಸಂಕೇತವೂ ಆಗಿರಬಹುದು ಎಂಬುದನ್ನು ಮರೆಯಬೇಡಿ. ಹೌದು, ಇದು ದೇಹ ನಿಮಗೆ ನೀಡುತ್ತಿರುವ ಎಚ್ಚರಿಕೆಯ ಸೂಚನೆಯಾಗಿರಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿದ್ರೆ ಸರಿಯಾಗಿ ಆಗಿದ್ದರೂ ತಲೆಯಲ್ಲಿ ಭಾರ ಎನಿಸುವುದಕ್ಕೆ ಕಾರಣವೇನು?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರಾಧ್ಯಾಪಕ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರ ಎನಿಸುವುದಕ್ಕೆ ಮತ್ತು ಆಲಸ್ಯ ಉಂಟಾಗುವುದಕ್ಕೆ ಪ್ರಮುಖ ಕಾರಣವೆಂದರೆ ನಿದ್ರೆಯ ಗುಣಮಟ್ಟ. ತಡರಾತ್ರಿಯವರೆಗೆ ಮೊಬೈಲ್ ನೋಡುವುದು ಅಥವಾ ಟಿವಿ ನೋಡಿರುತ್ತಾರೆ. ಕೆಲವೊಮ್ಮೆ ಒತ್ತಡ ಮತ್ತು ಆತಂಕ ನಿದ್ರೆಯ ಸಮಯದಲ್ಲಿ ಮೆದುಳನ್ನು ಸಕ್ರಿಯವಾಗಿರಿಸುತ್ತದೆ, ಇದು ಬೆಳಿಗ್ಗೆ ನಿಮಗೆ ದಣಿವುಂಟು ಮಾಡುತ್ತದೆ. ಜೊತೆಗೆ ದೇಹದಲ್ಲಿ ನೀರಿನ ಕೊರತೆಯಿಂದಾಗಿ, ತಲೆ ಭಾರವಾಗಿರುತ್ತದೆ. ಕೆಲವರು ಉಪಯೋಗ ಮಾಡುವ ದಿಂಬು ಅಥವಾ ಮಲಗುವ ಭಂಗಿ ಸರಿಯಾಗಿ ಇರುವುದಿಲ್ಲ. ಇದು ಕುತ್ತಿಗೆ ಮತ್ತು ತಲೆಯ ಸ್ನಾಯುಗಳನ್ನು ಆಯಾಸಗೊಳಿಸಬಹುದು. ಇದರ ಹೊರತಾಗಿ, ಮೂಗಿನ ದಟ್ಟಣೆ, ಸೈನಸ್ ಸಮಸ್ಯೆಗಳು ಅಥವಾ ಆಮ್ಲಜನಕದ ಕೊರತೆಯು ಸಹ ಈ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಕೆಲವು ಸಂದರ್ಭಗಳಲ್ಲಿ, ಹಾರ್ಮೋನುಗಳ ಬದಲಾವಣೆ ಕೂಡ ಈ ರೀತಿಯ ಸಮಸ್ಯೆಗೆ ಕಾರಣವಾಗಬಹುದು.

ಕೆಲವರಿಗೆ ತಲೆ ಭಾರವಾಗುವುದರ ಜೊತೆಗೆ, ಆಲಸ್ಯ, ತಲೆತಿರುಗುವಿಕೆ ಅಥವಾ ಕಣ್ಣುಗಳಲ್ಲಿ ಉರಿಯ ಅನುಭವವಾಗಬಹುದು. ಕೆಲಸದ ಮೇಲೆ ಗಮನ ಕೊಡುವುದಕ್ಕೆ ಕಷ್ಟವಾಗಬಹುದು. ಇನ್ನು ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಕಿರಿಕಿರಿ ಅಥವಾ ಚಡಪಡಿಕೆಯ ಅನುಭವವಾಗಬಹುದು. ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ತಲೆನೋವು, ಕುತ್ತಿಗೆಯಲ್ಲಿ ಬಿಗಿತ ಮತ್ತು ಆಯಾಸ ಕಂಡುಬರಬಹುದು.

ಇದನ್ನೂ ಓದಿ: ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ

ತಡೆಯುವುದು ಹೇಗೆ?

  • ಪ್ರತಿದಿನ ನಿಗದಿತ ಸಮಯಕ್ಕೆ ಮಲಗಿ, ಏಳುವ ಅಭ್ಯಾಸವನ್ನು ಬೆಳೆಸಿಕೊಳ್ಳಿ.
  • ಮಲಗುವ ಮುನ್ನ ಮೊಬೈಲ್ ಫೋನ್ ಮತ್ತು ಪರದೆಗಳಿಂದ ದೂರವಿರಿ.
  • ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.
  • ಸಮತೋಲಿತ ಆಹಾರ ಸೇವನೆ ಮಾಡಿ.
  • ಮಲಗುವಾಗ ಬಳಸುವ ದಿಂಬು ಮತ್ತು ಮಲಗುವ ಭಂಗಿ ಸರಿಯಾಗಿರಲಿ.
  • ಒತ್ತಡವನ್ನು ಕಡಿಮೆ ಮಾಡಲು ಯೋಗ ಅಥವಾ ಧ್ಯಾನ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ ಯಶಸ್ಸನ್ನು ಭಾರತ ಸಾರಿಸಾರಿ ಹೇಳಿದರೂ ಪಾಕಿಸ್ತಾನ ಮಾತ್ರ ತಮಗೆ ಯಾವುದೇ ಹಾನಿಯಾಗಿಲ್ಲ ಎಂದು ನಾಟಕವಾಡಿತ್ತು. ಆದರೆ, ಈ ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಎಂದು ಭಾರತಕ್ಕೆ ಇದೀಗ ಮತ್ತೊಂದು ಸರ್ಟಿಫಿಕೆಟ್ ಸಿಕ್ಕಿದೆ!

ಆಪರೇಷನ್ ಸಿಂಧೂರ್ ಮೂಲಕ ಭಾರತ ವಾಯು ಪಡೆಯ ಸಾಮರ್ಥ್ಯವನ್ನು ಪ್ರದರ್ಶಿಸಿತು ಮತ್ತು 4 ದಿನಗಳ ತೀವ್ರ ಹೋರಾಟದ ನಂತರ ಪಾಕಿಸ್ತಾನವನ್ನು ಕದನ ವಿರಾಮಕ್ಕೆ ಮಂಡಿಯೂರುವಂತೆ ಮಾಡಿತು ಎಂದು ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ ತಿಳಿಸಿದೆ. ಆಪರೇಷನ್ ಸಿಂಧೂರ್: ದಿ ಇಂಡಿಯಾ-ಪಾಕಿಸ್ತಾನ್ ಏರ್ ವಾರ್ ಎಂಬ ಶೀರ್ಷಿಕೆಯಡಿ ಖ್ಯಾತ ಇತಿಹಾಸಕಾರ ಆಡ್ರಿಯನ್ ಫಾಂಟನೆಲ್ಲಾಜ್ ಈ ವರದಿಯನ್ನು ಬರೆದಿದ್ದಾರೆ. ಸ್ವಿಟ್ಜರ್‌ಲ್ಯಾಂಡ್‌ನ ಮಿಲಿಟರಿ ಇತಿಹಾಸ ಮತ್ತು ದೃಷ್ಟಿಕೋನ ಅಧ್ಯಯನ ಕೇಂದ್ರ (CHPM) ಈ ವರದಿಯನ್ನು ಪ್ರಕಟಿಸಿದೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್

2025ರ ಮೇ 7ರಿಂದ 10ರವರೆಗೆ ನಡೆದ 88 ಗಂಟೆಗಳ ಭಾರತ-ಪಾಕಿಸ್ತಾನ ವೈಮಾನಿಕ ಯುದ್ಧದ ಬಗ್ಗೆ ಅವರು ಸವಿವರವಾದ ವರದಿಯನ್ನು ಬರೆದಿದ್ದಾರೆ. ಭಾರತದ ಪಾಲಿಗೆ ಇದು ಬಹಳ ಮಹತ್ವದ ಸಂಗತಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಸುಂದರವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು. ಮೇ 7ರ ಮುಂಜಾನೆ ಭಾರತೀಯ ವಾಯುಪಡೆ (IAF) ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾಗೆ ಸಂಬಂಧಿಸಿದ ಪ್ರಧಾನ ಕಚೇರಿಗಳು ಮತ್ತು ಪ್ರಮುಖ ಶಿಬಿರಗಳು ಸೇರಿದಂತೆ ಹೆಚ್ಚಿನ ಮೌಲ್ಯದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿತು.

ಪಾಕಿಸ್ತಾನದ ಬಹವಾಲ್ಪುರ್ ಮತ್ತು ಮುರಿಡ್ಕೆ ಎಂಬ ಎರಡು ಪ್ರಮುಖ ತಾಣಗಳನ್ನು ದೀರ್ಘ-ಶ್ರೇಣಿಯ ನಿಖರ ಶಸ್ತ್ರಾಸ್ತ್ರಗಳಿಂದ ಹೊಡೆದುರುಳಿಸಲಾಯಿತು. ಈ ದಾಳಿಯ ನಂತರದ ಮೌಲ್ಯಮಾಪನಗಳು ಬಹು ಕಟ್ಟಡಗಳು ನಾಶವಾಗಿವೆ ಎಂದು ದೃಢಪಡಿಸಿದವು. ಆದರೆ, ಪಾಕಿಸ್ತಾನ ಇದನ್ನು ಒಪ್ಪಿಕೊಂಡಿರಲಿಲ್ಲ. ದಶಕದ ಅತಿ ದೊಡ್ಡ ವೈಮಾನಿಕ ಕಾರ್ಯಾಚರಣೆಯಾಗಿದ್ದ ಈ ಆಪರೇಷನ್ ಸಿಂಧೂರ್​ನಲ್ಲಿ ಅತ್ಯಂತ ಪ್ರಭಾವಶಾಲಿ ಯುದ್ಧವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿದವು. ಭಾರತದ ದಾಳಿಯ ಹೊಡೆತಕ್ಕೆ ನಲುಗಿದ ಪಾಕಿಸ್ತಾನ ಕದನವಿರಾಮಕ್ಕೆ ಬೇಡಿಕೊಂಡಿತು.

ಇದನ್ನೂ ಓದಿ: ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ

ತನ್ನ ವಾಯು ನೆಲೆಗಳು ನಿರಂತರ ಒತ್ತಡದಲ್ಲಿ ಮತ್ತು ಅದರ ವಾಯು ರಕ್ಷಣಾ ಜಾಲವು ಅವನತಿ ಹೊಂದಿದ ಕಾರಣದಿಂದ ಪಾಕಿಸ್ತಾನವು ಇನ್ನು ಮುಂದೆ ವಾಯುಪ್ರದೇಶವನ್ನು ಪರಿಣಾಮಕಾರಿಯಾಗಿ ಎದುರಿಸುವ ಸ್ಥಿತಿಯಲ್ಲಿರಲಿಲ್ಲ. ಈ ಹಂತದಲ್ಲಿಯೇ ಪಾಕಿಸ್ತಾನ ಕದನ ವಿರಾಮವನ್ನು ಬಯಸಿತು ಎಂದು ಸ್ವಿಸ್ ವಿಶ್ಲೇಷಕರು ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಭಾರತದ ಕಾರ್ಯತಂತ್ರದ ಸಿದ್ಧಾಂತದಲ್ಲಿ ಒಂದು ಮಹತ್ವದ ತಿರುವು ಎಂದು ವರದಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ದೇಶದ ಪ್ರದಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದರು. ಆದಾಗ್ಯೂ ಈ ಭೇಟಿಯ ನಂತರ ಪಿಸಿಬಿ ಅಧ್ಯಕ್ಷರು ಮಾಡಿರುವ ಅದೊಂದು ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಮೊಹ್ಸಿನ್ ನಖ್ವಿ ಜಾಗತೀಕವಾಗಿ ನಗೆಪಾಟಲಿಗೀಡಾಗಿದ್ದಾರೆ.

ಅಪಹಾಸ್ಯಕ್ಕೊಳಗಾದ ನಖ್ವಿ

ವಾಸ್ತವವಾಗಿ ಪಿಸಿಬಿ ಅಧ್ಯಕ್ಷ ನಖ್ವಿ ಕಳೆದೆರಡು ದಿನಗಳಿಂದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಕುರಿತು ಹೊಸ ನಾಟಕವನ್ನು ಪ್ರಾರಂಭಿಸಿದ್ದಾರೆ. ಆ ನಾಟಕದ ಮುಂದುವರೆದ ಭಾಗವಾಗಿ ಇಂದು ಅಂದರೆ ಜನವರಿ 26 ರ ಸೋಮವಾರದಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದರು. ಪ್ರಧಾನಿಯೊಂದಿಗಿನ ಭೇಟಿಯ ಸಮಯದಲ್ಲಿ, ನಖ್ವಿ ವಿಶ್ವಕಪ್‌ಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಆಯ್ಕೆಗಳ ಕುರಿತು ಚರ್ಚೆ ನಡೆಸಿದರು. ಈ ಸಭೆಯ ಬಗ್ಗೆ ಮಾಹಿತಿ ನೀಡುವ ಸಲವಾಗಿ ಮೊಹ್ಸಿನ್ ನಖ್ವಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದರು. ಆದರೆ ಆ ಪೋಸ್ಟ್​ನಲ್ಲಿ ಮಹಾ ಪ್ರಮಾದವೊಂದನ್ನು ಮಾಡಿ ಅಪಹಾಸ್ಯಕ್ಕೊಳಗಾಗಿದ್ದಾರೆ.

ಪ್ರಧಾನಿ ಹೆಸರು ತಪ್ಪಾಗಿ ಉಲ್ಲೇಖ

ಪ್ರಧಾನಿ ಶಹಬಾಜ್ ಷರೀಫ್ ಅವರೊಂದಿಗಿನ ಭೇಟಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ, ಅದರಲ್ಲಿ ದೇಶದ ಪ್ರಧಾನಿಯ ಹೆಸರನ್ನು ತಪ್ಪಾಗಿ ಬರೆದಿದ್ದಾರೆ. ಹಾಲಿ ಪ್ರಧಾನಿ ಶಹಬಾಜ್ ಷರೀಫ್ ಅವರ ಹೆಸರನ್ನು ಬರೆಯುವ ಬದಲಿಗೆ ಮಾಜಿ ಪ್ರಧಾನಿ ಮಿಯಾನ್ ಮುಹಮ್ಮದ್ ನವಾಜ್ ಷರೀಫ್ ಅವರ ಹೆಸರನ್ನು ಬರೆದಿದ್ದಾರೆ. ನವಾಜ್ ಷರೀಫ್ ಪಾಕಿಸ್ತಾನದ ಮಾಜಿ ಪ್ರಧಾನಿಯಾಗಿದ್ದು, ಶಹಬಾಜ್ ಷರೀಫ್ ಅವರ ಸಹೋದರ. ಹೀಗೆ ತನ್ನ ದೇಶದ ಪ್ರಧಾನಿಯ ಹೆಸರನ್ನು ತಪ್ಪಾಗಿ ಬರೆದಿರುವ ನಖ್ವಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೆ ಮತ್ತು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಆ ಬಳಿಕ ನಖ್ವಿಗೆ ತನ್ನ ತಪ್ಪಿನ ಅರಿವಾಗಿದೆಯಾದರೂ ಅಷ್ಟರಲ್ಲಾಗಲೇ ಅದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ.

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ

ಟಿ20 ವಿಶ್ವಕಪ್ ಬಗ್ಗೆ ಚರ್ಚೆ

ಶಹಬಾಜ್ ಷರೀಫ್ ಅವರೊಂದಿಗಿನ ಭೇಟಿಯ ನಂತರ, ನಖ್ವಿ ಅವರು ಜನವರಿ 30ರ ಶುಕ್ರವಾರ ಅಥವಾ ಫೆಬ್ರವರಿ 2 ರಂದು ಸೋಮವಾರ ವಿಶ್ವಕಪ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಬಗ್ಗೆ ಪಾಕಿಸ್ತಾನ ಸರ್ಕಾರ ನಿರ್ಧರಿಸುತ್ತದೆ ಎಂದು ನಖ್ವಿ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಇದೆಲ್ಲವನ್ನು ನೋಡಿದರೆ, ಪಾಕಿಸ್ತಾನ ಉದ್ದೇಶಪೂರ್ವಕವಾಗಿ ಇಲ್ಲದ ಸಮಸ್ಯೆಯನ್ನು ತನ್ನ ಮೈಮೇಲೆ ಎಳೆದುಕೊಳ್ಳುತ್ತಿದೆ ಎನ್ನಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಸತೀಶ್​ಗೆ ಕೊಲೆ ಬೆದರಿಕೆ ಹಾಕಿದ ಗಿಲ್ಲಿ ಫ್ಯಾನ್ಸ್ ಅರೆಸ್ಟ್: 80 ಜನರ ಮೇಲೆ ಕೇಸ್ – Kannada News | Satish Cadaboms says Gilli Nata fans arrested for making death threats

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ತುಂಬಾ ಜನಪ್ರಿಯತೆ ಪಡೆಯಿತು. ಈ ಶೋನಲ್ಲಿ ಸ್ಪರ್ಧಿಸಿದ್ದ ಡಾಗ್ ಬ್ರೀಡರ್ ಸತೀಶ್ ಅವರು ಗಿಲ್ಲಿ ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದರು. ಅವರ ವಿರುದ್ಧ ಗಿಲ್ಲಿ (Gilli Nata) ಅಭಿಮಾನಿಗಳು ಗರಂ ಆಗಿದ್ದರು. ಕೆಲವರು ಸತೀಶ್ ಅವರಿಗೆ ಕೊಲೆ ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಿದ್ದರು. ಅಂಥವರ ವಿರುದ್ಧ ಸತೀಶ್ ಅವರು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಹಲವರ ವಿರುದ್ಧ ದೂರು ನೀಡಿದ್ದಾರೆ. ಆ ಪೈಕಿ ಒಂದಷ್ಟು ಜನರನ್ನು ಬಂಧಿಸಲಾಗಿದೆ. ಈ ಕುರಿತು ಸ್ವತಃ ಸತೀಶ್ ಮಾಹಿತಿ ನೀಡಿದ್ದಾರೆ.

‘ಎಷ್ಟೇ ಟ್ರೋಲ್ ಮಾಡಿದರೂ ನನಗೆ ಏನೂ ಅನಿಸಲ್ಲ. ಆದರೆ ತೀರಾ ಪರ್ಸನಲ್ ಆಗಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಕೇಸ್ ಹಾಕಿದ್ದೇನೆ. 80 ಜನರ ಮೇಲೆ ಕೇಸ್ ಹಾಕಿದ್ದೇನೆ. ಅದರಲ್ಲಿ 8 ಜನರು ಅರೆಸ್ಟ್ ಆಗಿದ್ದಾರೆ. ಯಲಹಂಕ ಗುರು ಎಂಬುವವರು ಎ1. ಅವರ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಅವರು ಸ್ಟೇಷನ್ ಬೇಲ್ ಪಡೆದುಕೊಂಡಿದ್ದಾರೆ’ ಎಂದಿದ್ದಾರೆ ಸತೀಶ್.

‘ಅವರನ್ನು ಕೋರ್ಟ್​​ಗೆ ಎಳೆಯುತ್ತಿದ್ದೇನೆ. ಅಲ್ಲದೇ, ಅವರ ಮೇಲೆ 1 ಕೋಟಿ ರೂಪಾಯಿಗೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ವೈಟ್​ಫೀಲ್ಡ್​ ಕಡೆಯ ಯುವಸಾಮ್ರಾಟ್ ಎಂಬುವವರ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯದಲ್ಲಿ ಇರುವ ಇನ್ನೊಬ್ಬರು ಕೊಲೆ ಬೆದರಿಕೆ ಹಾಕಿದ್ದಾರೆ. ಅವರ ಮೇಲೆ ಪ್ರತ್ಯೇಕ ಕೇಸ್ ಹಾಕುತ್ತೇನೆ’ ಎಂದು ಸತೀಶ್ ಹೇಳಿದ್ದಾರೆ.

‘ಬಿಗ್ ಬಾಸ್ ಕುರಿತು ನನ್ನ ಅನಿಸಿಕೆ ಹೇಳಿದ್ದೆ. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿಗೆ ವೋಟ್ ಹಾಕಿ, ಸರಿಯಾಗಿ ಆಡುವವರನ್ನು ವಿನ್ ಮಾಡಿ ಅಂತ ನಾನು ಹೇಳಿದ್ದೆ. ಅದಕ್ಕಾಗಿ ಗಿಲ್ಲಿ ಫ್ಯಾನ್ಸ್ ಕೊಲೆ ಬೆದರಿಕೆ ಹಾಕಿದ್ದರು. ಚಾಮರಾಜಪೇಟೆ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಅದಕ್ಕಾಗಿ 8 ಜನರನ್ನು ಅರೆಸ್ಟ್ ಮಾಡಲಾಗಿದೆ. ಇನ್ನೂ ಯಾರಾದರೂ ಮಾತನಾಡಿದರೆ ಅವರ ಮೇಲೂ ಕೇಸ್ ಹಾಕುತ್ತೇನೆ’ ಎಂದಿದ್ದಾರೆ ಸತೀಶ್.

ಇದನ್ನೂ ಓದಿ: ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ

‘ಎಲ್ಲರಿಗೂ ನಾನು ಸರ್ ಅಂತ ಗೌರವ ಕೊಟ್ಟು ಮಾತನಾಡುತ್ತೇನೆ. ಅರೆಸ್ಟ್ ಆಗಿರುವ ವ್ಯಕ್ತಿಯನ್ನೂ ಹಾಗೆಯೇ ಮಾತನಾಡಿಸಿದ್ದೇನೆ. ಸೋಶಿಯಲ್ ಮೀಡಿಯಾದ ಹೆಸರನ್ನೇ ಹಾಳು ಮಾಡಿದ್ದಾರೆ. ಯಾರಿಗೋಸ್ಕರವೋ ಅವರು ಅನುಭವಿಸುವಂತೆ ಆಗಿದೆ. ಈಗ ಅವರ ಪರವಾಗಿ ಯಾರೂ ಬರಲ್ಲ’ ಎಂದು ಕ್ಯಾಡಬಾಮ್ಸ್ ಸತೀಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ? – Kannada News | Bank strike on January 27 These banks to remain closed Tomorrow

ನವದೆಹಲಿ, ಜನವರಿ 26: ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಮುಷ್ಕರ ನಡೆಸುತ್ತಿದೆ. ಹೀಗಾಗಿ, ನಾಳೆ (ಮಂಗಳವಾರ) ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ (Banks) ಬ್ಯಾಂಕಿಂಗ್ ಕಾರ್ಯಾಚರಣೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ.

ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ ನಂತರ ಈ ಮುಷ್ಕರದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗಣರಾಜ್ಯೋತ್ಸವದ ಕಾರಣದಿಂದಾಗಿ ಭಾನುವಾರ (ಜನವರಿ 25) ಮತ್ತು ಸೋಮವಾರ (ಜನವರಿ 26) ಬ್ಯಾಂಕುಗಳು ಈಗಾಗಲೇ ಮುಚ್ಚಲ್ಪಟ್ಟಿರುವುದರಿಂದ ನಾಳೆಯ ಮುಷ್ಕರ ಗ್ರಾಹಕರಿಗೆ ಅನಾನುಕೂಲತೆಯನ್ನು ಉಂಟುಮಾಡಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಮತ್ತು ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ನಗದು ಠೇವಣಿ ಮತ್ತು ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಮತ್ತು ಇತರ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಇದನ್ನೂ ಓದಿ: CBI Recruitment 2026: ಸೆಂಟ್ರಲ್ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು

ಆದರೆ, ಖಾಸಗಿ ವಲಯದ ಬ್ಯಾಂಕುಗಳಾದ HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್‌ಗಳು ಮುಷ್ಕರದಲ್ಲಿ ಭಾಗವಹಿಸುವ ಒಕ್ಕೂಟಗಳ ಭಾಗವಾಗಿಲ್ಲದ ಕಾರಣ ಅವು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಹಾಗೇ, ಯುಪಿಐ (UPI) ಪೇಮೆಂಟ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್‌ನಂತಹ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ? – Kannada News | Threatening shidlaghatta Lady Officer: Police How To Arrested Rajeev Gowda From Mangaluru businessman shelter

ಬೆಂಗಳೂರು, (ಜನವರಿ 26): ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ (Rajeev Gowda) ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಇಂದು (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಮುಖವಾಗಿ ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ (Mangaluru) ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಹೌದು…ಆಶ್ರಯ ನೀಡಿದ್ದ ಉದ್ಯಮಿಯ ಕಾರಿನ ಮೂಲಕವೇ ಇಂದು (ಜನವರಿ 26) ಮಂಗಳೂರಿನಿಂದ ಕೇರಳಕ್ಕೆ (Kerala) ಪರಾರಿಯಾಗುತ್ತಿರುವ ವೇಳೆ ರಾಜೀವ್ ಗೌಡನನ್ನು ಪೊಲೀಸರು ಹಿಡಿದು ಕೋಳ ತೊಡಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜೀವ್ ಗೌಡ ಸಿಕ್ಕಿಬಿದ್ದಿದ್ಹೇಗೆ?

ಜನವರಿ12ರಂದು ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್​ ಸಿನಿಮಾ ಬ್ಯಾನರ್​ ತೆರವು ಮಾಡಿದ್ದಕ್ಕೆ ರಾಜೀವ್​ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಇದರ ಬೆನ್ನಲ್ಲೇ ಜನವರಿ 24ರಂದು ರಾಜೀವ್​ನನ್ನು ಕೆಪಿಸಿಸಿ ಶಿಸ್ತುಸಮಿತಿ ಅಮಾನತು ಮಾಡಿತ್ತು. ಜೊತೆಗೆ FIR ರದ್ದುಕೋರಿ ರಾಜೀವ್ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್​ ವಜಾಗೊಳಿಸಿತ್ತು. ಹೀಗಾಗಿ ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ. ಇನ್ನು ಪೊಲೀಸರ ಕಣ್ತಪ್ಪಿಸಲು ಮಂಗಳೂರು ರೈಲ್ವೆ ಸ್ಟೇಷನ್​​​ನಲ್ಲಿ ಕಾರು ನಿಲ್ಲಿಸಿ ಕಳ್ಳಾಟ ಆಡಿದ್ದ. ಆದ್ರೆ ಉದ್ಯಮಿ ಕಾರಿನಲ್ಲೇ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದ ರಾಜೀವ್ ಗೌಡನನ್ನು ಹಿಡಿದು ಕೈಗೆ ಕೋಳ ತೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್!

ಪೊಲೀಸರ ಕಣ್ತಿಪ್ಪಿಸಲು ಯತ್ನಿಸಿದ ಆರೋಪಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿ ಕಳೆದ 14 ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರಾಜೀವ್​ ಗೌಡನಿಗೆ ಮಂಗಳೂರಿನ ಶ್ರೀಮಂತ ಉದ್ಯಮಿಯೊಬ್ಬರು ಆಶ್ರಯ ಕೊಟ್ಟಿದ್ದರು. ಆದ್ರೆ, ಇಂದು (ಜನವರಿ 26) ರಾಜೀವ್ ಗೌಡ, ಮಂಗಳೂರಿನ ಉದ್ಯಮಿಯ ಆಶ್ರಯದಲ್ಲಿದ್ದಾನೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆಯೇ ಬಂಧನಕ್ಕೆ ಬಲೆ ಬೀಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿ ರಾಜೀವ್ ಗೌಡ, ತನ್ನ ಕಾರು ಮಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ. ಬಳಿಕ ಆಶ್ರಯ ಕೊಟ್ಟಿದ್ದ ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ಹೋಗಿದ್ದ.

ಉದ್ಯಮಿ ಕಾರಿನಲ್ಲಿ ಪರಾರಿಗೆ ಯತ್ನ

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ತನ್ನ ಕಾರು ಬಿಟ್ಟು ಉದ್ಯಮಿಯ ಕಾರಿನಲ್ಲಿ ತೆರಳಿದ್ದಾನೆ ಎಂದು ತಿಳಿದ ಪೊಲೀಸರು, ಉದ್ಯಮಿಯ ಕಾರು ಯಾವ ಕಡೆ ಹೋಗಿದೆ ಎನ್ನುವುದನ್ನು ಕಾರ್ಯಚರಣೆ ನಡೆಸಿದ್ದು, ಆಗ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಬಳಿಕ ಇದೇ ಮಾರ್ಗದಲ್ಲಿ ಉದ್ಯಮಿಯ ಕಾರು ಜಾಡು ಹಿಡಿದು ಹೊರಟ ಶಿಡ್ಲಘಟ್ಟ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡಕ್ಕೆ ಕೇರಳ ಗಡಿ ಭಾಗದಲ್ಲಿ ಆರೋಪಿ ರಾಜೀವ್ ಗೌಡ ಸಿಕ್ಕಿಬಿದ್ದಿದ್ದಾನೆ.

ಸದ್ಯ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡ, ಕೇರಳದ ಗಡಿಭಾಗದಿಂದ ರಾಜೀವ್‌ಗೌಡನನ್ನು ಶಿಡ್ಲಘಟ್ಟ ನಗರ ಠಾಣೆಗೆ ಕರೆತರುತ್ತಿದ್ದು, ಬಳಿಕ ಚಿಂತಾಮಣಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ರಾಜೀವ್ ಗೌಡ ವಿರುದ್ಧ ಜನೆವರಿ 14 ರಂದು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಎರಡು ದೂರುಗಳು ದಾಖಲಾಗಿದ್ದವು. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡರಿಂದ ಒಂದು ದೂರು. ಶಾಸಕ ರವಿಕುಮಾರ್ ಪರವಾಗಿ ಒಂದು ದೂರು ದಾಖಲಾಗಿತ್ತು. ಬೆದರಿಕೆ ಪತ್ರ ಹಿನ್ನೆಲೆ ಮೊನ್ನೆ ಮತ್ತೊಂದು ದೂರು ದಾಖಲಾಗಿತ್ತು. ಹೀಗಾಗಿ ರಾಜೀವ್ ಗೌಡ ಬಂಧನಕ್ಕೆ ರಾಜ್ಯದ್ಯಂತ ಒತ್ತಯ ಕೇಳಿ ಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 8:10 pm, Mon, 26 January 26

Source link

ಕಾಂಗ್ರೆಸ್​​ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್​​ ಕುಮಾರ್​​ರಿಂದ ಸಾಲು ಸಾಲು ಪ್ರಶ್ನೆ – Kannada News | BJP MLA Suresh Kumar Slams Congress Lok Bhavan Chalo Amidst Assembly Session

ಕಾಂಗ್ರೆಸ್​​ ಲೋಕಭವನ ಚಲೋಗೆ ಸುರೇಶ್​​ ಕುಮಾರ್​ ಆಕ್ಷೇಪ

ಬೆಂಗಳೂರು, ಜನವರಿ 26: ಮನ್​ರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರೋದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ನಿಂದ ನಾಳೆ ಲೋಕಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಸಿಎಂ, ಡಿಸಿಎಂ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದ್ದು, ಕಾಂಗ್ರೆಸ್​​ಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.

ಸುರೇಶ್​​ ಕುಮಾರ್​​ ಆಕ್ಷೇಪ ಏನು?

ನಾಳೆ ಕರ್ನಾಟಕ ವಿಧಾನಸಭೆಯ ಅಧಿವೇಶನವನ್ನು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ. ಮೊದಲು ಪ್ರಶ್ನೋತ್ತರ, ನಂತರ ರಾಜ್ಯಪಾಲರ ಭಾಷಣದ ಮೇಲೆ ಗೊಂದಲ ನಿರ್ಣಯದ ಕುರಿತು ಚರ್ಚೆ ಎಂಬುದು ನಾಳಿನ ಕಲಾಪದ ಅಜೆಂಡಾ. ಆದರೆ ನಾಳೆ ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್​​ನಿಂದ ಲೋಕಭವನದ ಮುತ್ತಿಗೆ ಕಾರ್ಯಕ್ರಮ ನಡೆಯುತ್ತದೆ ಎಂಬ ಪ್ರಕಟಣೆ ಕಾಂಗ್ರೆಸ್ ಪಕ್ಷದಿಂದ ಹೊರ ಬಿದ್ದಿದೆ. ಇದರಿಂದಾಗಿ ಈಗ ಎರಡು ಪ್ರಶ್ನೆಗಳು ಉದ್ಭವವಾಗುತ್ತವೆ. ಅಧಿವೇಶನದ ಸಮಯದಲ್ಲಿಯೇ ಆಳುವ ಪಕ್ಷ ಈ ರೀತಿ ಕಾರ್ಯಕ್ರಮ ಹಮ್ಮಿಕೊಂಡು ತನ್ನ ಶಾಸಕರುಗಳೆಲ್ಲಾ ಇದರಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿರುವುದು ಎಷ್ಟು ಸಮಂಜಸ? ಬೆಂಗಳೂರಿನಲ್ಲಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಮುತ್ತಿಗೆ ಮಾಡುವಂತಹ ಕಾರ್ಯಕ್ರಮವನ್ನು ಉಚ್ಚ ನ್ಯಾಯಾಲಯದ ನಿರ್ದೇಶನಂತೆ ನಿಷೇಧಿಸಲಾಗಿದೆ. ಒಂದೊಮ್ಮೆ ಆಳುವ ಪಕ್ಷಕ್ಕೆ ಈ ರೀತಿ ಮುತ್ತಿಗೆ ಎಂಬ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರೆ, ಮುಂದೆ ಬೇರೆ ಪಕ್ಷಗಳಿಗೂ ಅವಕಾಶ ನೀಡಲಾಗುತ್ತದೆಯೇ? ಎಂದು ರಾಜಾಜಿನಗರ ಶಾಸಕ ಸುರೇಶ್​​ ಕುಮಾರ್​​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ; ಏನೆಲ್ಲಾ ಅಂಶಗಳಿವೆ?

ರಾಜ್ಯದಲ್ಲಿ ಆಡಳಿತ ನಡೆಸುವ ನಡೆಸುತ್ತಿರುವ ಪಕ್ಷವೇ ಕಾನೂನನ್ನು ಉಲ್ಲಂಘಿಸುವುದು ಎಷ್ಟು ಸಮಂಜಸ? ಆಡಳಿತ ನಡೆಸಬೇಕಾದ ಪಕ್ಷವೇ ಈ ರೀತಿ ಮುತ್ತಿಗೆ ಹಾಕುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸೂಕ್ತವೇ? ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಶಾಸಕ ಪ್ರಶ್ನೆ ಎತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಟಲ್ ಪೆನ್ಷನ್ ಯೋಜನೆ ಇನ್ನೂ 5 ವರ್ಷ ವಿಸ್ತರಣೆ; ಈ ಸ್ಕೀಮ್​ನಲ್ಲಿ ಪಿಂಚಣಿ ಪಡೆಯುವುದು ಹೇಗೆ? – Kannada News | Atal Pension Yojana extended for another 5 years, know how to invest in this APY scheme

ನವದೆಹಲಿ, ಜನವರಿ 26: ಕೇಂದ್ರ ಸರ್ಕಾರದಿಂದ ನಡೆಸಲಾಗುವ ಅಟಲ್ ಪೆನ್ಷನ್ ಯೋಜನೆಯನ್ನು (APY- Atal Pension Yojana) ಇನ್ನೂ ಐದು ವರ್ಷ ವಿಸ್ತರಣೆ ಮಾಡಲಾಗಿದೆ. 2030-31ರವರೆಗೂ ಈ ರಿಟೈರ್ಮೆಂಟ್ ಸ್ಕೀಮ್ ಮುಂದುವರಿಸಲು ಕೇಂದ್ರ ಸಂಪುಟ ಸಮ್ಮತಿ ಕೊಟ್ಟಿರುವುದು ತಿಳಿದುಬಂದಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂಗಿಂತ ಎಪಿವೈ ಭಿನ್ನವಾದ ಪಿಂಚಣಿ ಯೋಜನೆ. ಎನ್​ಪಿಎಸ್​ನಲ್ಲಿ ಯಾರು ಬೇಕಾದರೂ ಹೂಡಿಕೆ ಮಾಡಬಹುದು. ಆದರೆ, ಅಟಲ್ ಪೆನ್ಷನ್ ಯೋಜನೆಯು ಬಡವರು ಹಾಗೂ ಕೆಳ ಮಧ್ಯಮ ವರ್ಗದವರಿಗೆ ಗುರಿಯಾಗಿಸಿದೆ.

ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ ಅಟಲ್ ಪೆನ್ಷನ್ ಯೋಜನೆ ಹೇಳಿ ಮಾಡಿಸಿದ್ದಾಗಿದೆ. ಆದಾಯ ತೆರಿಗೆ ಪಾವತಿ ಮಾಡದೇ ಇರುವಂತಹವರು ಇದರಲ್ಲಿ ಹೂಡಿಕೆ ಮಾಡಬಹುದು. ಈ ಎಪಿವೈ ಯೋಜನೆಯಡಿ 1,000 ರೂನಿಂದ 5,000 ರೂವರೆಗೆ ಮಾಸಿಕ ಪಿಂಚಣಿ ಪಡೆಯಲು ಅವಕಾಶ ಇರುತ್ತದೆ. ಇದಕ್ಕೆ ಪಾವತಿಸುವ ಪ್ರೀಮಿಯಮ್ ಬಹಳ ಕಡಿಮೆ ಮೊತ್ತದ್ದು.

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು?

ಏನಿದು ಅಟಲ್ ಪೆನ್ಷನ್ ಯೋಜನೆ?

18 ವರ್ಷದಿಂದ 40 ವರ್ಷದೊಳಗಿನ ಯಾವುದೇ ಭಾರತೀಯ ನಾಗರಿಕರು ಅಟಲ್ ಪೆನ್ಷನ್ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಆಧಾರ್​ಗೆ ಲಿಂಕ್ ಆದ ಬ್ಯಾಂಕ್ ಅಕೌಂಟ್ ಮತ್ತು ಮೊಬೈಲ್ ನಂಬರ್ ಇರಬೇಕು. ಕನಿಷ್ಠ ಪಾವತಿ ಅವಧಿ 20 ವರ್ಷ ಇರುತ್ತದೆ. 60 ವರ್ಷ ವಯಸ್ಸಾಗುವವರೆಗೂ ಪ್ರೀಮಿಯಮ್ ಕಟ್ಟಬೇಕು. 60ರ ವಯಸ್ಸು ರಿಟೈರ್ಮೆಂಟ್ ಏಜ್. ಅಲ್ಲಿಂದ ಪಿಂಚಣಿ ಪ್ರಾರಂಭವಾಗುತ್ತದೆ.

ಈ ಯೋಜನೆಯಲ್ಲಿ ನೀವು 18ರ ವಯಸ್ಸಿಗೆ ಹೂಡಿಕೆ ಆರಂಭಿಸಿದರೆ ಕನಿಷ್ಠ ಪ್ರೀಮಿಯಮ್ ಹಣ ಕೇವಲ 42 ರೂ. ಈ ಹಣಕ್ಕೆ ನಿಮಗೆ ಸಿಗುವ ಮಾಸಿಕ ಪಿಂಚಣಿ 1,000 ರೂ. ನಿಮಗೆ 5,000 ರೂ ಪಿಂಚಣಿ ಬೇಕೆಂದರೆ ಮಾಸಿಕವಾಗಿ 210 ರೂ ಪಾವತಿಸಬೇಕು.

ಹೆಚ್ಚು ವಯಸ್ಸಾದ ನಂತರ ಸ್ಕೀಮ್​ನಲ್ಲಿ ಹೂಡಿಕೆ ಆರಂಭಿಸಿದರೆ ಪ್ರೀಮಿಯಮ್ ಹಣ ಹೆಚ್ಚುತ್ತಾ ಹೋಗುತ್ತದೆ. ಈ ಸ್ಕೀಮ್​ನಲ್ಲಿ ಗರಿಷ್ಠ ಮಾಸಿಕ ಪಿಂಚಣಿ 5,000 ರೂ ಇರುತ್ತದೆ.

ಇದನ್ನೂ ಓದಿ: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ

ಪೆನ್ಷನ್ ಸದಸ್ಯರು ಸಾಯುವವರೆಗೂ ಪಿಂಚಣಿ ಸಿಗುತ್ತಾ ಹೋಗುತ್ತದೆ. ಅವರು ಸಾವನ್ನಪ್ಪಿದರೆ ಅವರ ಸಂಗಾತಿಗೆ ಪಿಂಚಣಿ ಮುಂದವರಿಯುತ್ತದೆ. ಅವರೂ ಸತ್ತರೆ ಆಗ ನಿಗದಿತ ನಾಮಿನಿಯ ವ್ಯಕ್ತಿಗೆ ಈ ಪಿಂಚಣಿ ವರ್ಗವಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link