Category Archives: Blog

Your blog category

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ ಕಡಿತಕ್ಕೆ ಒಳಗಾಗುವ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಮನಸ್ಸಿಗೆ ಸಮಾಧಾನ ತರುವಂಥ ಬೆಳವಣಿಗೆಗಳು ಆಗಲಿವೆ. ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಇಂಟರ್ ವ್ಯೂ ಕರೆ ಬರಬಹುದು. ಇನ್ನು ವೃತ್ತಿಪರರು ನೀವಾಗಿಯೇ ಕೆಲವು ಕ್ಲೈಂಟ್ ಗಳಿಗೆ ಇನ್ನು ಕೆಲಸ ಮಾಡಿಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ. ಊಟ- ತಿಂಡಿಗಾಗಿ ದೂರದ ಸ್ಥಳಗಳಿಗೆ ಹುಡುಕಿಕೊಂಡು ಹೋಗಲಿದ್ದೀರಿ. ಇದಕ್ಕೆ ನಿಮ್ಮ ಸ್ನೇಹಿತರು ಸಹ ಜೊತೆಯಾಗುತ್ತಾರೆ. ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನಕ್ಕೆ ಪ್ರಸ್ತಾವ ಬರಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಯಾಕೆ- ಏನು ಎಂಬ ಪ್ರಶ್ನೆ ಮಾಡದೆ ತಮಗೆ ಬೇಕಾದ ಕೆಲಸವನ್ನು ಮಾಡಿಕೊಡಬೇಕು ಎಂಬುದು ನಿಮ್ಮ ಸ್ನೇಹಿತರ ನಿರೀಕ್ಷೆ ಆಗಿರಲಿದೆ. ಇದಕ್ಕಾಗಿ ನಡೆಯುವ ಮಾತುಕತೆ ವೇಳೆ ನಿಮ್ಮ ಮೇಲೆ ಹಿಡಿತ ಸಾಧಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರು ಆಗಲಿದೆ. ಜಮೀನು- ಸೈಟು ಇಂಥ ದಾಖಲೆಗಳ ವಿಚಾರದಲ್ಲಿ, ಮನೆ- ಮಳಿಗೆ ನಿರ್ಮಾಣದಲ್ಲಿ ತೊಡಗಿಕೊಂಡವರು ನಿಯಮಾನುಸಾರ ಕೆಲಸ- ಕಾರ್ಯಗಳು ನಡೆಯುತ್ತಾ ಇವೆಯೇ ಎಂದು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

 

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ. ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯವಾಗುತ್ತಿಲ್ಲ ಎನ್ನುವುದರಿಂದ ನೀವು ಇಕ್ಕಟ್ಟಿಗೆ ಸಿಲುಕಿಕೊಳ್ಳುತ್ತೀರಿ. ಪ್ರಯಾಣಕ್ಕೆ ಹೆಚ್ಚು ಖರ್ಚು ಮಾಡುವ ಯೋಗ ಇದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ನಿಮ್ಮ ಬದ್ಧತೆಗೆ ಮೆಚ್ಚುಗೆ ವ್ಯಕ್ತವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಪ್ಲಾನ್ ಬಿ ಮಾಡಿಕೊಳ್ಳುವ ವಿಧಾನದಿಂದ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ ಜೊತೆಗೆ ಚರ್ಚೆ ಮಾಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕೆಲವು ಬದಲಾವಣೆಗೆ ಸಂಬಂಧಿಸಿದಂತೆ ನಿಮ್ಮನ್ನು ಒಪ್ಪಿಸುವುದಕ್ಕೆ ಸಹೋದ್ಯೋಗಿಗಳು ಪ್ರಯತ್ನ ಮಾಡಲಿದ್ದಾರೆ. ಎಲ್ಲಿಯೂ ಹೇಳಿಕೊಳ್ಳದ ಸಂಗತಿಗಳನ್ನು ಬಾಯಿ ಬಿಟ್ಟು ಹೇಳಿಕೊಳ್ಳುವಂತೆ ಆಗಲಿದೆ. ನಿಮ್ಮ ಸಾಮರ್ಥ್ಯ, ಬದ್ಧತೆ, ಅದರಿಂದ ಆಗಿರುವ ಅನುಕೂಲಗಳ ಬಗ್ಗೆ ಮಾತನಾಡುತ್ತೀರಿ. ಇದರ ಆಚೆಗೆ ಆಗುವ ಯಾವುದೇ ಬದಲಾವಣೆಗೆ ಒಪ್ಪಿಕೊಳ್ಳುವುದಕ್ಕೆ ಸಿದ್ಧರಿಲ್ಲ ಎಂಬುದನ್ನು ಸಹ ಹೇಳಲಿದ್ದೀರಿ. ಯಾವುದಾದರೂ ನಿರ್ದಿಷ್ಟ ಕಾಯಿಲೆ ಆಗಿದೆಯಾ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಏನಾದರೂ ಸೂಚಿಸಿದ್ದಲ್ಲಿ ಗಂಭೀರ ಸಮಸ್ಯೆ ಇಲ್ಲ ಎಂಬುದು ತಿಳಿದುಬರಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದಕ್ಕೆ ಹೋಗಬೇಡಿ. ಹೋಟೆಲ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಪ್ರೀತಿಯಲ್ಲಿ ಇರುವವರು ಜೊತೆಯಾಗಿ ಸಮಯವನ್ನು ಕಳೆಯುವಂಥ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 26 January : ಇಂದು ಈ ರಾಶಿಯವರು ಯಾವ ಸವಾಲನ್ನು ಒಪ್ಪುಕೊಳ್ಳರು – Kannada News | Horoscope Today: January 26, Monday 2026 Daily Zodiac Predictions and Lucky Signs

ಮೇಷ ರಾಶಿ:

ಇನ್ನೊಬ್ಬರಿಂದ ಮತ್ತೆ ಮತ್ತೆ ಹೇಳಿಸಿಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ವಿದ್ಯಾಭ್ಯಾಸದ ಬಗ್ಗೆ ಆತಂಕ ಕಾಣಿಸುವುದು.

ವೃಷಭ ರಾಶಿ:

ನಿಮ್ಮ ಬಗ್ಗೆ ಅನಗತ್ಯ ಮಾತುಗಳು ಬರುವುದು. ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಕೆಲವರು ದೂರವಾದಷ್ಟು ನಿಮಗೆ ನೆಮ್ಮದಿ ಇರುವುದು. ಹಿರಿಯರ ಜೊತೆ ವಾಗ್ವಾದ ಆಗಬಹುದು. ಪ್ರಯಾಣದ ಆಯಾಸದಿಂದ ಜ್ವರ, ಆಶಕ್ತತೆಯು ಬರಬಹುದು. ನಿಮ್ಮ ಶ್ರಮವು ಹಾಕಬೇಕಾದಲ್ಲಿ ಹಾಕದೇ ಮತ್ತೆಲ್ಲೋ ಹಾಕುವಿರಿ. ಪ್ರಯಾಣದಿಂದ ಸ್ವಲ್ಪ ಆಯಾಸವಾಗಲಿದ್ದು ವಿಶ್ರಾಂತಿಯಿಂದ ಸರಿಮಾಡಿಕೊಳ್ಳಿ. ನಿಮ್ಮ ವಸ್ತುಗಳನ್ನು ಕಳೆದುಕೊಳ್ಳುವ ಸಂಭವವಿದೆ.

ಮಿಥುನ ರಾಶಿ:

ಇಂದು ಮಾಡಲಾಗದ ಕಾರ್ಯವನ್ನು ಮತ್ತೆಂದೋ ಮಾಡುವ ಬದಲು ಅದಕ್ಕಾಗಿ ಇಂದೇ ದಿನವನ್ನು ನಿಶ್ಚಯಿಸಿ. ನಿಮ್ಮ ಗೌರವಕ್ಕೆ ದಕ್ಕೆ ಬರುವ ಕಡೆ ಹೋಗಲಾರಿರಿ. ಉತ್ಪನ್ನ ಮಾಡುವವರಿಗೆ ಬೇಡಿಕೆ ಅಧಿಕವಾಗಿದ್ದು, ಪೂರೈಸೈಲು ನಿಮಗೆ ಅಷ್ಟವಾಗುವುದು. ನಿಮ್ಮಲ್ಲಿ ಆದ ಬದಲಾವಣೆಯನ್ನು ಸಹೋದ್ಯೋಗಿಗಳು ಗಮನಿಸಬಹುದು. ದೀರ್ಘಕಾಲದ ರೋಗವು ಇಂದು ಗೊತ್ತಾಗಬಹುದು. ವಿದ್ಯಾರ್ಥಿಗಳು ಮನೆಯ ಜವಾಬ್ದಾರಿಯನ್ನೂ ನಡೆಸುವ ಸಂದರ್ಭವು ಬರಬಹುದು.

ಕರ್ಕಾಟಕ ರಾಶಿ:

ಸಾಹಿತ್ಯಾಸಕ್ತರಿಗೆ ಉತ್ತಮ ಅವಕಾಶಗಳು ಪ್ರಾಪ್ತವಾಗಿ, ತಮ್ಮ ಜೀವನವನ್ನು ಬದಲಿಸಿಕೊಳ್ಳುವರು. ಆಲಂಕಾರಿಕ ವಸ್ತುಗಳ ಖರೀದಿಯನ್ನು ಮಾಡುವಿರಿ. ಸಮಯವನ್ನು ಬಹಳ ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ. ಸಂಗಾತಿಯಿಂದ ನಿಮಗೆ ಅಪರೂಪದ ವಸ್ತುಗಳು ಸಿಗಬಹುದು. ನಿಮ್ಮ ಶ್ರೇಯಸ್ಸಿಗೆ ದೈವದ ಕೃಪೆಯನ್ನು ಬೇಡುವಿರಿ. ಹೊಸ ಯೋಜನೆಗಳನ್ನು ಆರಂಭಿಸಲು ಧೈರ್ಯ ಮಾಡುವುದು ಬೇಡ. ಏನಾದರೂ ಒಂದು ಅಸಂಬದ್ಧವನ್ನು ಮಾಡಿರುವ ಹಣೆಪಟ್ಟಿ ಬರಬಹುದು.

ಸಿಂಹ ರಾಶಿ:

ಸಹೋದರರ ಜೊತೆ ಸಣ್ಣ ವಿಚಾರಕ್ಕೆ ಕಲಹವಾಗಬಹುದು. ಜಯದಿಂದ ನಿಮಗೆ ಅಹಂಕಾರ ಬರುವ ಸಾಧ್ಯತೆ ಇದೆ. ವಿದ್ಯಾಭ್ಯಾಸವನ್ನು ಮುಗಿಸಿ ಹೊಸ ಉದ್ಯೋಗವನ್ನು ಹುಡುಕುವಿರಿ. ಸರ್ಕಾರದಿಂದ ಆಗಬೇಕಾದ ಕೆಲಸಕ್ಕೆ ಹೆಚ್ಚು ಖರ್ಚನ್ನು ಮಾಡಬೇಕಾಗುದು. ಯಾವುದೋ ಆಲೋಚನೆಯಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮಾಡಲಾಗದು. ನಿಮ್ಮ ಮಾತನ್ನು ತಪ್ಪಾಗಿ ಅರ್ಥೈಸಬಹುದು. ಕುರುಡಾಗಿ ಮುನ್ನುಗ್ಗುವುದು ಬೇಡ.

ಕನ್ಯಾ ರಾಶಿ:

ಅದೃಷ್ಟವು ನಿಮಗೆ ಸಂಕೇತದ ರೂಪದಲ್ಲಿ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದ ಹಿನ್ನಡೆಯ ಕಾರಣ ಎಲ್ಲರಿಂದ ಅವಮಾನವಾಗಬಹುದು. ಕೃಷಿಕರಿಗೆ ಲಾಭಾವಾಗಲಿದೆ. ನಿಮಗೆ ಪ್ರೋತ್ಸಾಹದ ಕೊರತೆ ಅಧಿಕವಾಗಿ ಕಾಣಿಸುವುದು. ಅಧಿಕಾರಿಗಳಿಂದ ನಿಮಗೆ ಮಾನಸಿಕ ಹಿಂಸೆ ಆಗಬಹುದು. ಎಷ್ಟೋ ವರ್ಷಗಳಿಂದ ಆಗದೇ ಇರುವ ಕೆಲಸವನ್ನು ಸಾಮಾಜಿಕ ಕೆಲಸದಿಂದ ಸಾಧಿಸುವಿರಿ. ವಾಹನ ಚಾಲನೆಯಲ್ಲಿ ಸುರಕ್ಷತೆ ಇರಲಿ.

ತುಲಾ ರಾಶಿ:

ವಿದ್ಯಾರ್ಥಿಗಳು ಅಧ್ಯಯನವನ್ನು ಚುರುಕು ಮಾಡುವುದು ಒಳ್ಳೆಯದು. ಹಿತಶತ್ರುಗಳನ್ನೇ ನಿಮ್ಮ ಬೆಂಬಲಕ್ಕೆ ಇಟ್ಟುಕೊಳ್ಳುವಿರಿ. ರಾಜಕೀಯದವರಿಗೆ ಬೆಂಬಲಿಗರಿಂದ ಒತ್ತಡಗಳು ಬರಬಹುದು. ಸಂಗಾತಿಯ ಮನೋಭಾವವು ಬದಲಾದಂತೆ ಅನ್ನಿಸುವುದು. ನಿಮ್ಮ ಆದಾಯವನ್ನು ಧಾರ್ಮಿಕ ಕಾರ್ಯಗಳಿಗೆ ಉಪಯೋಗಿಸುವಿರಿ. ಮನೆಯ ವಾತಾವರಣವು ನಿಮಗೆ ಹಿತವೆನಿಸಲಿದ್ದು ಮನೆಯಿಂದ ದೂರವಿರಲು ಕಷ್ಟವಾಗುವುದು. ಸ್ವಾಭಿಮಾನಕ್ಕೆ ಆಪ್ತರಿಂದ ತೊಂದರೆಯಾಗಬಹುದು. ಸಂಗಾತಿಯ ಮೌನದಿಂದ ನಿಮಗೆ ಕಷ್ಟ.

ವೃಶ್ಚಿಕ ರಾಶಿ:

ನೀವು ಮಾಡಿದೆ ಕಾರ್ಯಕ್ಕೆ ದಾಖಲೆ ಅವಶ್ಯಕತೆ ಇರಲಿದೆ. ಸಾಲವನ್ನು ಪಡೆಯಲು ನಿಮಗೆ ಸರಿಯಾದ ಆದಾಯ ಮೂಲದ ಅವಶ್ಯಕತೆ ಇರುವುದು. ಪೋಷಕರ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಜಾಗರೂಕವಾಗಿ ಇರುವುದು. ನಿಮ್ಮನ್ನು ಅವ್ಯವಹಾರಕ್ಕೆ ಸಹೋದ್ಯೋಗಿಗಳು ಪ್ರೇರಿಸಬಹುದು. ನಿದ್ರಾಹೀನತೆ ಕಾಣಿಸುವುದು. ಅಪ್ರಯೋಜಕ ಎಂದುಕೊಂಡ ವಿದ್ಯೆಯಿಂದ ಪ್ರಯೋಜನವಾಗುವುದು. ಬಹಳ ದಿನಗಳಿಂದ ಮನೆಗೆ ಬಂಧುಗಳ ಆಗಮನವು ಆಗದೇ ಇರುವುದು ಬೇಸರತಂದೀತು.

ಧನು ರಾಶಿ:

ಇಂದು ಸಂಗಾತಿಯ ಜೊತೆ ಹೊರಗೆ ಸುತ್ತಾಡುವ ಬಯಕೆಯಾಗುವುದು. ವಾಹನ ಖರೀದಿಯ ಬಗ್ಗೆ ನಿಮಗೆ ಚಿಂತೆಯಾಗಬಹುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ವಿಚಾರದಲ್ಲಿ ತಜ್ಞರ ಸಂಪರ್ಕ ಮಾಡುವುದು ಉತ್ತಮ. ನಿಮ್ಮ ಇಂದಿನ ಕೆಲಸವನ್ನು ಪೂರ್ಣ ಮಾಡಲು ಬಹಳ ಆತುರದಿಂದ ಇರುವಿರಿ. ಸಹೋದರನ ಮನವೊಲಿಸಲು ನಿಮಗೆ ಕಷ್ಟವಾದೀತು. ತಂದೆಯ ಅಸಮಾಧಾನವನ್ನು ಕುಳಿತು ಬಗೆಹರಿಸಿ. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೋರಿಸಬೇಕಾಗುವುದು. ಧಾರ್ಮಿಕ ಕರ್ಮಗಳಿಗೆ ಅಶ್ರದ್ಧೆ.

ಮಕರ ರಾಶಿ:

ಎಲ್ಲದಕ್ಕೂ ಇನ್ನೊಬ್ಬರನ್ನು ಅವಲಂಬಿಸುವುದು ನಿಮಗೆ ಇಷ್ಟವಾಗದು. ಇದಕ್ಕಾಗಿ ಬೇರೆ ಮಾರ್ಗವನ್ನೂ ಅನ್ವೇಷಿಸುವಿರಿ. ಹಿರಿಯರ ಪ್ರೀತಿ ನಿಮಗೆ ಸಿಗಲಿದೆ. ಇಂದು ಕಾರ್ಯದ ಸ್ಥಳದಲ್ಲಿ ನಿಮ್ಮ ಹಿತಶತ್ರುಗಳು ಏನಾದರೂ ಕಿರಿಕಿರಿ ಮಾಡಿ ನಿಮ್ಮ ಕೆಲಸವು ಪೂರ್ಣವಾಗದಂತೆ ನೋಡಿಕೊಳ್ಳುವರು. ಇಂದು ನಿಮ್ಮ ಕುಟುಂಬದ ಸದಸ್ಯರು ನಿಮ್ಮನ್ನು ಬಿಟ್ಟು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವರು. ಬಹಳ ಹುಡುಕಿದರೂ ನಿಮಗೆ ಬೇಕಾದ ಉದ್ಯೋಗವು ಸಿಗದೇ ಜೀವನವು ನಿರುತ್ಸಾಹವು ಉಂಟಾಗಬಹುದು. ಮಾನಸಿಕವಾಗಿ ನೀವು ಕುಗ್ಗಬಹುದು.

ಕುಂಭ ರಾಶಿ:

ನಿಮ್ಮ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ಚಿಂತಿಸಬೇಕಾಗುವುದು. ಇಂದು ನಿಮ್ಮ ಮಕ್ಕಳ ಬಗ್ಗೆ ಸಕಾರಾತ್ಮಕ ವಾರ್ತೆಯನ್ನು ಕೇಳುವಿರಿ. ನೀವು ಇಂದು ಯಾರ ಜೊತೆಗದರೂ ಹಣವನ್ನು ವಿನಿಮಯ ಮಾಡಿಕೊಳ್ಳಲು ಯೋಚಿಸುತ್ತಿದ್ದರೆ, ಸರಿಯಾದ ಲೆಕ್ಕಾಚಾರವನ್ನು ಇಟ್ಟುಕೊಳ್ಳಿ. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ನಿಮ್ಮ ಅಪರೂಪದ ವ್ಯಕ್ತಿಗಳು ಆಕಸ್ಮಾತ್ತಾಗಿ ಭೇಟಿಯಾಗುವರು. ನಿಮಗೆ ಕೊಟ್ಟ ಕಾರ್ಯವನ್ನು ಮರೆತು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ಮನಸ್ತಾಪವನ್ನು ಗುಟ್ಟಾಗಿಡುವುದು ಬೇಡ. ಹಾಗೆಂದು ಎಲ್ಲರ ಮುಂದೂ ಹೇಳಬೇಡಿ.

ಮೀನ ರಾಶಿ:

ನಿಮ್ಮ ಮಗುವನ್ನು ಹೊರಗೆ ಓದಲು ಕಳುಹಿಸಲು ಬಯಸುವಿರಿ. ಸಂಗಾತಿಯನ್ನು ಒಪ್ಪಿಸುವುದು ಸುಲಭವಲ್ಲ. ವಿವಾಹದ ವಾತಾವರಣವು ಮನೆಯಲ್ಲಿ ಇದ್ದರೂ ಉದ್ವೇಗಕ್ಕೆ ಒಳಗಾಗದೇ ನೀವೂ ನೆಮ್ಮದಿಯಿಂದ ಓಡಾಡುವಿರಿ. ಚಲಿಸುವ ವಾಹನದಿಂದ ಬೀಳುವ ಸಾಧ್ಯತೆ ಇದೆ. ಕಳ್ಳತನದ ಅಪವಾದದಿಂದ ತಲೆಮರೆಸಿಕೊಳ್ಳುವಿರಿ. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆಯಾಗುವುದು. ಇದರಿಂದ ನಿಮ್ಮ ಆದಾಯಕ್ಕೆ ಹೊಡೆತ ಬೀಳಬಹುದು.

ಜನವರಿ 26,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಭರಣೀ, ಯೋಗ : ಸಾಧ್ಯ, ಕರಣ : ಬವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 19 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:20 – 09-46, ಯಮಗಂಡ ಕಾಲ 11:11 – 12:37, ಗುಳಿಕ ಕಾಲ 14:03 – 15:28

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸೋಲಿನ ಸುಳಿಯಿಂದ ಹೊರತಂದ ನಿರ್ದೇಶಕನಿಗೆ ಭಾರಿ ಉಡುಗೊರೆ ಕೊಟ್ಟ ಮೆಗಾಸ್ಟಾರ್ – Kannada News | Megastar Chiranjeevi gifts luxury car to director Anil Ravipudi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಲೆಜೆಂಡರಿ ನಟ. ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದಿದ್ದಾರೆ ಚಿರಂಜೀವಿ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್ ಅವರಿಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಬಚ್ಚನ್ ಅವರಿಗಿಂತಲೂ ಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ತೀರ ಇತ್ತೀಚೆಗಿನ ವರೆಗೂ ಸಹ ಮೆಗಾಸ್ಟಾರ್ ಅನ್ನು ಬಾಕ್ಸ್ ಆಫೀಸ್​​ ಕಲೆಕ್ಷನ್​​ನಲ್ಲಿ ಹಿಂದಿಕ್ಕುವವರಿರಲಿಲ್ಲ. ಆದರೆ ರಾಜಕೀಯಕ್ಕೆ ಹೋಗಿ ಮರಳಿದ ಬಳಿಕ ಚಿರಂಜೀವಿ ಸತತ ಸೋಲುಗಳನ್ನೇ ಕಂಡಿದ್ದರು. ಯಾವ ಸಿನಿಮಾ ಸಹ ದೊಡ್ಡ ಹಿಟ್ ಆಗಿರಲಿಲ್ಲ. ಆದರೆ ಇದೀಗ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಹಲವು ವರ್ಷಗಳ ಬಳಿಕ ದೊಡ್ಡ ಯಶಸ್ಸನ್ನು ಚಿರಂಜೀವಿ ಕಂಡಿದ್ದಾರೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಪ್ರಸ್ತುತ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆದ ಪ್ರಭಾಸ್ ಸಿನಿಮಾವನ್ನು ಸಹ ಹಿಂದಿಕ್ಕಿ ಸಂಕ್ರಾಂತಿಯ ವಿನ್ನರ್ ಎನಿಸಿಕೊಂಡಿದೆ. ಇದಕ್ಕಿಂತಲೂ ಮುಖ್ಯವಾಗಿ, ಸತತ ಸೋಲು ಕಂಡು ಕಂಗಾಲಾಗಿದ್ದ ಚಿರಂಜೀವಿ ಅವರಿಗೆ ಅತ್ಯಂತ ಅವಶ್ಯಕವಾದ ಗೆಲುವನ್ನು ತಂದುಕೊಟ್ಟಿದೆ. ಮೆಗಾಸ್ಟಾರ್ ಅನ್ನು ಮತ್ತೆ ಗೆಲುವಿನ ಹಳಿಗೆ ತಂದಿದೆ.

ತಮ್ಮನ್ನು ಸೋಲಿನ ಸುಳಿಯಿಂದ ಮೇಲೆತ್ತಿದ ನಿರ್ದೇಶಕನಿಗೆ ಮೆಗಾಸ್ಟಾರ್ ಚಿರಂಜೀವಿ ಭರ್ಜರಿ ಉಡುಗೊರೆಯನ್ನೇ ಕೊಟ್ಟಿದ್ದಾರೆ. ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾದ ನಿರ್ದೇಶಕ ಅನಿಲ್ ರವಿಪುಡಿ ಅವರಿಗೆ ಚಿರಂಜೀವಿ ಅವರು ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಅನಿಲ್ ರವಿಪುಡಿ ಅವರಿಗೆ ಅತ್ಯಂತ ಐಶಾರಾಮಿ ರೇಂಜ್ ರೋವರ್ ಸ್ಪೋರ್ಟ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ:ಚಿರಂಜೀವಿ ಕ್ರೇಜ್: ಒಂದೇ ಕುಟುಂಬದ 140 ಮಂದಿಯಿಂದ ಸಿನಿಮಾ ವೀಕ್ಷಣೆ

ಚಿರಂಜೀವಿ ಉಡುಗೊರೆ ನೀಡಿರುವ ಕಾರಿನ ಪ್ರಾರಂಭಿಕ ಬೆಲೆಯೇ 1.70 ಕೋಟಿ ರೂಪಾಯಿಗಳಿದೆ. ಟಾಪ್ ಮಾಡೆಲ್ ಬೆಲೆ 3.39 ಕೋಟಿ ರೂಪಾಯಿಗಳಿದೆ. ಅತ್ಯಂತ ಐಶಾರಾಮಿ ಸೌಲಭ್ಯಗಳು ಹಾಗೂ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಈ ಕಾರು, ಭಾರತದಲ್ಲಿ ಸ್ಟೇಟಸ್ ಸಿಂಬಲ್ ಎನಿಸಿಕೊಂಡಿದೆ. ಕಾರನ್ನು ಉಡುಗೊರೆಯಾಗಿ ಪಡೆದಿರುವ ಅನಿಲ್ ರವಿಪುಡಿ ಖುಷ್ ಆಗಿದ್ದಾರೆ. ಚಿರಂಜೀವಿ ಅವರು ಕಾರು ಉಡುಗೊರೆ ನೀಡುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಕೆಲ ತಿಂಗಳ ಹಿಂದೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಹ ತಮ್ಮ ಸಿನಿಮಾ ‘ಓಜಿ’ಯನ್ನು ನಿರ್ದೇಶಿಸಿದ್ದ ಸುಜೀತ್ ಅವರಿಗೆ ಹೀಗೆಯೇ ಒಂದು ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಪವನ್ ಕಲ್ಯಾಣ್, ಲ್ಯಾಂಡ್ ರೋವರ್ ಡಿಫೆಂಡರ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಅದರ ಬೆಲೆ ಸುಮಾರು 3 ಕೋಟಿ ರೂಪಾಯಿಗಳಾಗಿತ್ತು. ಇದೀಗ ಪವನ್ ಅವರ ಅಣ್ಣ ಚಿರಂಜೀವಿ ಸಹ ದುಬಾರಿ ಕಾರನ್ನು ನಿರ್ದೇಶಕನಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Record 14 Ball Fifty Powers India to 13th Consecutive T20I Series Win vs NZ

ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯ ತಂಡಗಳನ್ನು ನೋಡಿದರೆ, ಅಭಿಷೇಕ್ ಶರ್ಮಾ ಜಂಟಿಯಾಗಿ ಮೂರನೇ ಅತಿ ವೇಗದ ಅರ್ಧಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಜಿಂಬಾಬ್ವೆ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ನಮೀಬಿಯಾದ ಆಟಗಾರ ಜಾನ್ ಫ್ರೈಲಿಂಕ್ ಎರಡನೇ ಸ್ಥಾನದಲ್ಲಿದ್ದಾರೆ. 2016 ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಕಾಲಿನ್ ಮುನ್ರೋ ಅವರೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರು ಈಗ ಜಂಟಿಯಾಗಿ ಮೂರನೇ ಸ್ಥಾನದಲ್ಲಿದೆ.

Source link

‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ – Kannada News | Amazon Prime warned Jana Nayagan producer sue over release date chaos

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಕಾರಣಕ್ಕೆ ತೀವ್ರ ಹಿನ್ನಡೆ ಆಗಿದ್ದು, ಈಗಾಗಲೇ ಬಿಡುಗಡೆ ದಿನಾಂಕ ಮುಂದೆ ಹೋಗಿ ನಿರ್ಮಾಪಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಎಂತೆಂಥ ಸಿನಿಮಾಗಳಿಗೆ ಸುಲಭವಾಗಿ ಪ್ರಮಾಣ ಪತ್ರ ನೀಡಿರುವ ಸೆನ್ಸಾರ್ ಮಂಡಳಿ, ರೀಮೇಕ್ ಸಿನಿಮಾ ಆಗಿರುವ ‘ಜನ ನಾಯಗನ್’ಗೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್​​ನಲ್ಲಿದೆ. ಹೀಗಿರುವಾಗ ಸಿನಿಮಾದ ನಿರ್ಮಾಪಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಪ್ಪಂದದಂತೆ ಸಿನಿಮಾ ಬಿಡುಗಡೆ ಮಾಡದಿದ್ದರೆ ನಷ್ಟಪರಿಹಾರ ನೀಡಬೇಕೆಂದು ಒಟಿಟಿಯವರು ನಿರ್ಮಾಪಕರಿಗೆ ಎಚ್ಚರಿಸಿದ್ದಾರೆ.

‘ಜನ ನಾಯಗನ್’ ಸಿನಿಮಾದ ಡಿಜಿಟಲ್​​ ಹಕ್ಕುಗಳನ್ನು ಮುಂಗಡವಾಗಿ ಅಮೆಜಾನ್ ಪ್ರೈಂ ವಿಡಿಯೋಕ್ಕೆ ಭಾರಿ ಮೊತ್ತಕ್ಕೆ ನಿರ್ಮಾಪಕ ವೆಂಕಟ್ ನಾರಾಯಣ್ ಅವರು ಮಾರಾಟ ಮಾಡಿದ್ದರು. ಅಮೆಜಾನ್ ಜೊತೆಗಿನ ಒಪ್ಪಂದದಂತೆ ಸಿನಿಮಾದ ಬಿಡುಗಡೆ ದಿನಾಂಕದ ನಾಲ್ಕು ವಾರಗಳ ತರುವಾಯ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಬೇಕಿತ್ತು. ಒಪ್ಪಂದದ ಪ್ರಕಾರ ‘ಜನ ನಾಯಗನ್’ ಸಿನಿಮಾವನ್ನು ಅಮೆಜಾನ್​​ನಲ್ಲಿ ಬಿಡುಗಡೆ ಮಾಡಲು ಕೆಲವೇ ದಿನಗಳು ಬಾಕಿ ಇವೆ.

ಇದೀಗ ಅಮೆಜಾನ್ ಪ್ರೈಂ ವಿಡಿಯೋದವರು ನಿರ್ಮಾಪಕ ವೆಂಕಟ್ ನಾರಾಯಣ್ ಅವರಿಗೆ ಎಚ್ಚರಿಕೆ ನೀಡಿದ್ದು, ಒಂದೊಮ್ಮೆ ಒಪ್ಪಂದದ ಪ್ರಕಾರ ನಿಗದಿತ ಸಮಯಕ್ಕೆ ‘ಜನ ನಾಯಗನ್’ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡದಿದ್ದಲ್ಲಿ ಭಾರಿ ಮೊತ್ತದ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದಿದ್ದಾರೆ. ಅಲ್ಲದೆ, ಸಿನಿಮಾ ಬಿಡುಗಡೆ ಮಾಡದೇ ಇದ್ದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿಯು ಪ್ರಮಾಣ ಪತ್ರವನ್ನು ನಿರಾಕರಿಸಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ ಮೊದಲಿಗೆ ಸಿನಿಮಾದ ಪರವಾಗಿ ತೀರ್ಪು ಬಂದಿತ್ತು. ಆದರೆ ತೀರ್ಪು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸಿಬಿಎಫ್​​ಸಿ ಆದೇಶವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದು, ಸಿನಿಮಾದ ಪರವಾಗಿ ಆದೇಶ ನೀಡಿದ್ದ ಮದ್ರಾಸ್ ಹೈಕೋರ್ಟ್​​ ಸ್ವತಃ ತನ್ನದೇ ಆದೇಶಕ್ಕೆ ತಡೆ ನೀಡಿತು. ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಬಂದಿದ್ದೂ ಆಗಿದೆ. ಜನವರಿ 27 ರಂದು ಪ್ರಕರಣದ ಬಗ್ಗೆ ಆದೇಶ ಹೊರಬೀಳಲಿದೆ.

‘ಜನ ನಾಯಗನ್’ ಸಿನಿಮಾವನ್ನು ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕಾಗಿದೆ. ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ. ಕೆವಿಎನ್​ ಪ್ರೊಡಕ್ಷನ್ಸ್ ಮೂಲಕ ಸಿನಿಮಾದ ನಿರ್ಮಾಣ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:39 pm, Sun, 25 January 26

Source link

ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ; ಇಲ್ಲಿದೆ 70 ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿ – Kannada News | Shubhanshu Shukla gets Ashoka Chakra, as president selects 70 army personnel for gallantry awards

ನವದೆಹಲಿ, ಜನವರಿ 25: ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಷನ್​ಗೆ ಪೈಲಟ್ ಆಗಿ ಹೋಗಿ ಬಂದ ಭಾರತದ ಮೊದಲ ಗಗನಯಾತ್ರಿ ಎನಿಸಿರುವ ಶುಭಾಂಶು ಶುಕ್ಲಾ ಅವರಿಗೆ ಸರ್ಕಾರ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಅಶೋಕ ಚಕ್ರವು ಶಾಂತಿಕಾಲದ ಅತ್ಯುನ್ನತ ಶೌರ್ಯ ಪ್ರಶಸ್ತಿ ಎನಿಸಿದೆ. ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಅವರು ಇಸ್ರೋ ವತಿಯಿಂದ ಗಗನಯಾತ್ರಿಯಾಗಿ ಸ್ಪೇಸ್​ಎಕ್ಸ್​ನ ಡ್ರಾಗಾನ್ ಗಗನನೌಕೆ ಮೂಲಕ ಐಎಸ್​ಎಸ್ ತಲುಪಿದ್ದರು.

ಶುಭಾಂಶು ಶುಕ್ಲಾ ಅವರಿಗೆ ನಾಳೆ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ಪ್ರಶಸ್ತಿ ದಯಪಾಲಿಸಲಿದ್ದಾರೆ. ಶುಭಾಂಶುವೂ ಸೇರಿದಂತೆ ಒಟ್ಟು 70 ಮಂದಿಯನ್ನು ಶೌರ್ಯ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಇವರಲ್ಲಿ ಆರು ಮಂದಿಗೆ ಮರಣೋತ್ತರ ಪ್ರಶಸ್ತಿಗಳು ಸಿಗಲಿವೆ. ಈ 70 ಗ್ಯಾಲಂಟ್ರಿ ಅವಾರ್ಡ್​ಗಳಲ್ಲಿ ಒಂದು ಅಶೋಕ ಚಕ್ರ, 3 ಕೀರ್ತಿ ಚಕ್ರ, 13 ಶೌರ್ಯ ಚಕ್ರ, 1 ಬಾರ್ ಟು ಸೇನಾ ಮೆಡಲ್ ಮತ್ತು 44 ಸೇನಾ ಮೆಡಲ್​ಗಳು ಸೇರಿವೆ.

ಇದನ್ನೂ ಓದಿ: Padma Awards 2026: ಪದ್ಮ ಪ್ರಶಸ್ತಿಗೆ ಯಾರೆಲ್ಲ ಭಾಜನ? ಇಲ್ಲಿದೆ ಮಾಹಿತಿ

2026ರ ಗಣರಾಜ್ಯೋತ್ಸವದಂದು 70 ಶೌರ್ಯ ಪ್ರಶಸ್ತಿಗಳ ಪಟ್ಟಿ

ಅಶೋಕ ಚಕ್ರ

  1. ವಾಯುಪಡೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಕೀರ್ತಿ ಚಕ್ರ

  1. ಮೇಜರ್ ಅರ್ಶದೀಪ್ ಸಿಂಗ್
  2. ನಯೀಬ್ ಸುಬೇದಾರ್ ದೋಲೇಶ್ವರ್ ಸುಬ್ಬ
  3. ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್

ಶೌರ್ಯ ಚಕ್ರ

  1. ಲೆಫ್ಟಿನೆಂಟ್ ಕರ್ನಲ್ ಘಟಗೆ ಆದಿತ್ಯ ಶ್ರೀಕುಮಾರ್
  2. ಮೇಜರ್ ಅನ್ಶುಲ್ ಬಲ್ಟೂ
  3. ಮೇಜರ್ ಶಿವಕಾಂತ್ ಯಾದವ್
  4. ಮೇಜರ್ ವಿವೇಕ್
  5. ಮೇಜರ್ ಲೇಶಾಂಗದೆಮ್ ದೀಪಕ್ ಸಿಂಗ್
  6. ಕ್ಯಾಪ್ಟನ್ ಯೋಗೇಂದರ್ ಸಿಂಗ್ ಠಾಕೂರ್
  7. ಸುಬೇದಾರ್ ಪಿ ಎಚ್ ಮೋಸಸ್
  8. ಲ್ಯಾನ್ಸ್ ದಫಾದರ್ ಬಲದೇವ್ ಚಂದ್ (ಮರಣೋತ್ತರ)
  9. ರೈಫಲ್​ಮ್ಯಾನ್ ಮಂಗಲಮ್ ಸ್ಯಾಂಗ್ ವೈಫೇ
  10. ರೈಫಲ್​ಮ್ಯಾನ್ ಧುರ್ಬ ಜ್ಯೋತಿ ದತ್ತ
  11. ಲೆಫ್ಟಿನೆಂಟ್ ಕಮಾಂಡರ್ ದಿಲ್ನಾ ಕೆ
  12. ಲೆಫ್ಟಿನೆಂಟ್ ಕಮಾಂಡರ್ ರೂಪಾ ಎ
  13. ಅಸಿಸ್ಟೆಂಟ್ ಕಮಾಂಡೆಂಟ್ ವಿಪಿನ್ ವಿಲ್ಸನ್

ಬಾರ್ ಟು ಸೇನಾ ಮೆಡಲ್

  1. ಲ್ಯಾನ್ಸ್ ಹವೀಲ್ದಾರ್ ಸತ್ಯ ಪಾಲ್ ಸಿಂಗ್

ಇದನ್ನೂ ಓದಿ: ವೀರ ಪ್ರಶಸ್ತಿ ವಿಜೇತರಿಂದ ಹಿಡಿದು ಸ್ತಬ್ಧಚಿತ್ರಗಳ ಮೆರವಣಿಗೆ, ಈ ಬಾರಿಯ ರಿಪಬ್ಲಿಕ್ ಪೆರೇಡ್ ಅದ್ಭುತ

ಸೇನಾ ಮೆಡಲ್

  1. ಕರ್ನಲ್ ಅಮಿತ್ ದಾಧವಾಲ್
  2. ಲೆಫ್ಟಿನೆಂಟ್ ಕರ್ನಲ್ ಮೂಡಿಗೆರೆ ರಾಜಗೋಪಾಲ್ ಸುಹಾಸ್
  3. ಲೆಫ್ಟಿನೆಂಟ್ ಕರ್ನಲ್ ಪ್ರದೀಪ್ ಶೌರ್ಯ ಆರ್ಯ
  4. ಮೇಜರ್ ಕುಲಬೀರ್ ಸಿಂಗ್ ಮೋಹನ್
  5. ಮೇಜರ್ ಅನೀಶ್ ಚಂದ್ರನ್ ಸಿ
  6. ಮೇಜರ್ ಚರಣ್​ಜೀತ್ ಸಿಂಗ್
  7. ಮೇಜರ್ ನಾಗವಿಗ್ನೇಶ್ ಕೆ.ಎ.
  8. ಮೇಜರ್ ರೋಹಿತ್ ಕುಮಾರ್
  9. ಮೇಜರ್ ಶಿವಪ್ರಸಾದ್ ಕೆ
  10. ಮೇಜರ್ ಅಕ್ಷಯ್ ಆನಂದ್
  11. ಮೇಜರ್ ಸಿ ಸಾಯಿ ವಿವೇಕ್
  12. ಮೇಜರ್ ವಿಶ್ವ ಪ್ರಕಾಶ್ ದುಬೇ
  13. ಮೇಜರ್ ರೋಹಿತ್ ಕುಮಾರ್
  14. ಮೇಜರ್ ರವಿ ಕುಮಾರ್ ಸಿಂಗ್
  15. ಮೇಜರ್ ತುಷಾರ್ ನಾಗ್ರೇಕ್
  16. ಕ್ಯಾಪ್ಟನ್ ಅಜಿಂಕ್ಯ ಪಂಡಿತ್ ಕಣಸೆ
  17. ಕ್ಯಾಪ್ಟನ್ ಜಗದೀಪ್ ನಾರಾಯಣ್
  18. ಕ್ಯಾಪ್ಟನ್ ಪ್ರಭಾತ್ ಕುಮಾರ್ ಸಿಂಗ್
  19. ಕ್ಯಾಪ್ಟನ್ ಗುರಶರಣ್ ಸಿಂಗ್
  20. ಸುಬೇದಾರ್ ಧರಂವೀರ್ (ಮರಣೋತ್ತರ)
  21. ಸುಬೇದಾರ್ ರಾಜ್ ಕುಮಾರ್ ಮಂಝಿ
  22. ಸುಬೇದಾರ್ ಗೋಪಾಲ್ ಸಿಂಗ್
  23. ಸುಬೇದಾರ್ ಕುಲದೀಪ್ ಸಿಂಗ್ (ಮರಣೋತ್ತರ)
  24. ಸುಬೇದಾರ್ ಶಮಸ್ ದಿನ್
  25. ನಯೀಬ್ ಸುಬೇದಾರ್ ಮೊಹಮದ್ ಇಕ್ಬಾಲ್ ತೀಲಿ
  26. ನಯೀಬ್ ಸುಬೇದಾರ್ ಪವನ್ ಕುಮಾರ್
  27. ನಯೀಬ್ ಸುಬೇದಾರ್ ಸರಿಫುಲ್ ಮಂಡಲ್
  28. ನಯೀಬ್ ರಿಸಾಲ್ದಾರ್ ರಾಣ ಪ್ರತಾಪ್ ಸಿಂಗ್
  29. ಹವೀಲ್ದಾರ್ ಝಂಟು ಅಲಿ ಶೇಖ್ (ಮರಣೋತ್ತರ)
  30. ಹವೀಲ್ದಾರ್ ಆನಂದ್ ಸುಮನ್ ರಾಣಾ
  31. ಹವೀಲ್ದಾರ್ ಮಕ್ಸೂದ್ ದೀನ್
  32. ಹವೀಲ್ದಾರ್ ಪೂರನ್ ಸಿಂಗ್ ಖರಾಯತ್
  33. ಹವೀಲ್ದಾರ್ ಮೊಹಮ್ಮದ್ ಸರೋಜ್ ಖಾನ್
  34. ಹವೀಲ್ದಾರ್ ಯಾಂಗ್ ದೋರ್ಜೀ ಲಾಮಾ
  35. ಲ್ಯಾನ್ಸ್ ದಫಾದಾರ್ ಭಾರವಾದ್ ಮೆಹುಲ್​ಭಾಯ್ ಮೆಪಾಭಾಯ್ (ಮರಣೋತ್ತರ)
  36. ನಾಯ್ಕ್ ರಂಜಯ್ ಕುಮಾರ್
  37. ಲ್ಯಾನ್ಸ್ ನಾಯ್ಕ್ ಅಶೋಕ್ ಕುಮಾರ್ ಭಿಂದರ್
  38. ಸಿಪಾಯ್ ಶಬೀರ್ ಅಹ್ಮದ್
  39. ಸಿಪಾಯ್ ಗ್ಯಾಕಾರ್ ಸಂದೀಪ್ ಪಾಂಡುರಂಗ್ (ಮರಣೋತ್ತರ)
  40. ಸಿಪಾಯಿ ಕದಾವೋಹುಮ್ ಬೆಲ್ಲಾಯ್
  41. ರೈಫಲ್​ಮ್ಯಾನ್ ವಾಯಿಕೋಂ ಮೋಹನ್ ಸಿಂಗ್
  42. ರೈಫಲ್​ಮ್ಯಾನ್ ತಂಗ್ಗೋಲುನ್ ಸಿಂಗ್ಸನ್
  43. ಪ್ಯಾರಟ್ರೂಪರ್ ಬ್ರಿಂಗರ್ ಎಚ್​ಕೆ
  44. ಪ್ಯಾರಾಟ್ರೂಪರ್ ದೀಪ್​ಚಂದ್ ಕರಗ್ವಾಲ್

ನೌಕಾ ಸೇನಾ ಮೆಡಲ್

  1. ಕಮಾಂಡರ್ ನರದೀಪ್ ಸಿಂಗ್
  2. ಲೆಫ್ಟಿನೆಂಟ್ ಕಮಾಂಡರ್ ರಿಷಭ್ ಪುರ್ಬಿಯಾ
  3. ಕಮಾಂಡರ್ ರಾಜೇಶ್ವರ್ ಕುಮಾರ್ ಶರ್ಮಾ
  4. ಲೆಫ್ಟಿನೆಂಟ್ ಕಮಾಂಡರ್ ಪ್ರಶಾಂತ್ ರಾಜ್
  5. ಕಮಾಂಡರ್ ಹರಪ್ರೀತ್ ಸಿಂಗ್
  6. ಕ್ಯಾಪ್ಟನ್ ಪಿಯೂಶ್ ಕಟಿಯಾರ್

ವಾಯು ಸೇನಾ ಮೆಡಲ್

  1. ವಿಂಗ್ ಕಮಾಂಡರ್ ಶೋಭಿತ್ ವ್ಯಾಸ್
  2. ಜೂನಿಯರ್ ವಾರಂಟ್ ಆಫೀಸರ್ ಕೃಪಾಲ್ ಸಿಂಗ್ ಸಲಾರಿಯಾ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸ್ನೇಹಿತರಿಂದಲೇ ರೌಡಿಶೀಟರ್ನ ಡೆಡ್ಲಿ ಮರ್ಡರ್​: ಹಣದ ವಿಷಯಕ್ಕೆ ಹರಿದಿದ್ದು ನೆತ್ತರು – Kannada News | Rowdy Sheeter Auto Naga Killed by Friends Over Money Dispute in Nelamangala

ನೆಲಮಂಗಲ, ಜನವರಿ 25: ಮಾರಕಾಸ್ತ್ರಗಳಿಂದ ಇರಿದು ಸ್ನೇಹಿತರೇ ರೌಡಿಶೀಟರ್​​ನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ಬಳಿಯ ಬಾಲಾಜಿ ಫಾರ್ಮ್ ಹೌಸ್​ನಲ್ಲಿ ನಡೆದಿದೆ. ಲಗ್ಗೆರೆ ಮತ್ತು ಹುಲಿಯೂರುದುರ್ಗ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಟೋ ನಾಗ ಕೊಲೆಯಾದ ವ್ಯಕ್ತಿಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣದ ವಿಚಾರಕ್ಕೆ ಮರ್ಡರ್​​ ನಡೆದಿದೆ ಎನ್ನಲಾಗಿದೆ.

ಮೊದಲು ಪಾರ್ಟಿ, ಆಮೇಲೆ ಮರ್ಡರ್​!

ಗಂಗೊಂಡಹಳ್ಳಿಯಲ್ಲಿದ್ದ ನಾಗ ಇಂದು ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಮುಂದಾಗಿದ್ದ. ಹೀಗಾಗಿ ಮಧ್ಯಾಹ್ನ 2.30ರ ವೇಳೆಗೆ ಬಾಲಾಜಿ ಫಾರ್ಮ್​​ ಹೌಸ್​​ಗೆ ಬಂದಿದ್ದ. ಸ್ನೇಹಿತರ ಜೊತೆಗೆ ಕೂತು ಚೆನ್ನಾಗಿ ಮದ್ಯವನ್ನೂ ಸೇವಿಸಿದ್ದ. ಎಲ್ಲರೂ ಒಟ್ಟಾಗಿ ಒಂದೇ ತಟ್ಟೆಯಲ್ಲಿ ಊಟವನ್ನೂ ಮಾಡಿದ್ದರು. ಆದರೆ ಬಳಿಕ ನಡೆಯಬಾರದ್ದು ನಡೆದಿದೆ. ನಾಗ ಕುಡಿದ ಮತ್ತಲ್ಲಿ ಇರುವಾಗ ಸ್ನೇಹಿತರೇ ಆತನನ್ನು ಡ್ರಾಗರ್​​ನಿಂದ ಇರಿದು ಕೊಂದಿದ್ದಾರೆ. ಘಟನೆ ಸಂಬಂಧ ಎಸಿಪಿ ಅಶೋಕ್ ಹಾಗೂ ಇನ್ಸ್ಪೆಕ್ಟರ್ ಮುರುಳಿಧರ್ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದ ರೌಡಿಶೀಟರ್​​ ತಂದಿದ್ದು ನಕಲಿ ಬಂದೂಕು!

ಹಣದ ವಿಚಾರಕ್ಕೆ ಹರಿದ ನೆತ್ತರು

ಸ್ನೇಹಿತ ಅಭಿ ಎಂಬಾನಿಗೆ ಅಂದರ್ ಬಾಹರ್ ಹಣದಲ್ಲಿ ನಾಗ 22 ಲಕ್ಷ ಸಾಲ ನೀಡಿದ್ದ. ಆದ್ರೆ  ಕೊಟ್ಟ ಹಣ ಹಿಂದಿರುಗಿಸುವಂತೆ ನಾಗ ಇತ್ತೀಚೆಗೆ ಕೇಳಿದ್ದು, ಹಣ ವಾಪಸ್ ಕೊಡಲು ಸಾಧ್ಯವಾಗದ ಕಾರಣ ಕೊಲೆಗೆ ಸ್ಕೆಚ್​​ ರೆಡಿಯಾಗಿತ್ತು. ಇಂದು ಪಾರ್ಟಿ ಮಾಡಿ ಮಾತನಾಡುವ ನೆಪದಲ್ಲಿ ನಾಗನನ್ನು ಕರೆಸಿಕೊಂಡಿದ್ದ ಆರೋಪಿಗಳು ಮರ್ಡರ್​​ ಮಾಡಲು ಸಿದ್ಧವಾಗಿಯೇ ಬಂದಿದ್ದರು. ನಾಗ ಹಾಗೂ ಆರೋಪಿಗಳು ಸೇರಿ ಎರಡು ರೂಂಗಳನ್ನು ಬುಕ್​​ ಮಾಡಿದ್ದರು. ನಾಗ ಬಂದ ಬಳಿಕ ಚೆನ್ನಾಗಿ ಪಾರ್ಟಿ ಮಾಡಿದ್ದು, ಬಳಿಕ ಪ್ಲ್ಯಾನ್​​ನಂತೆ ಆತನನ್ನು ಇರಿದು ಕೊಲ್ಲಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ ಮಾಡುವುದಾಗಿ ನಿವಾಸಿಗಳಿಗೆ ಸರ್ಕಾರದಿಂದ ಭರವಸೆ ನೀಡಲಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link