ಹಾಸನ, ಜನವರಿ 24: ವೀರಪ್ಪನ್ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ.
ರಜನೀಕಾಂತ್ (Rajinikanth) ಭಾರತದ ಸೂಪರ್ ಸ್ಟಾರ್ ನಟ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರ ರಜನೀಕಾಂತ್. ಈಗಲೂ ಸಹ ರಜನೀಕಾಂತ್ ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ 37 ವರ್ಷಗಳ ಹಿಂದೆ ರಜನೀಕಾಂತ್ ಮಾತ್ರವಲ್ಲ ಇನ್ನೂ ಕೆಲವು ದೊಡ್ಡ ಸ್ಟಾರ್ ನಟರುಗಳನ್ನು ಹಾಕಿಕೊಂಡು ಭಾರಿ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ ಬಳಿಕ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ.
ನಟಿ ರೀನಾ ರಾಯ್ ಅವರ ಸಹೋದರ ರಾಜಾ ರಾಯ್ ಅವರು 1989 ರಲ್ಲಿ ನಿರ್ಮಾಣ ಮಾಡಿದ್ದ ಸಿನಿಮಾ ‘ಹಮ್ ಮೇ ಶೆಹೆನ್ಶಾ ಕೌನ್’ ಇದೀಗ ಸುಮಾರು ನಾಲ್ಕು ದಶಕಗಳ ಬಳಿಕ ಬಿಡುಗಡೆ ಆಗುತ್ತಿದೆ. ರಜನೀಕಾಂತ್ ಮಾತ್ರವೇ ಅಲ್ಲದೆ ಆಗ ಸೂಪರ್ ಸ್ಟಾರ್ ಬಾಲಿವುಡ್ ನಟ ಶತೃಘ್ನ ಸಿನ್ಹಾ, ಸ್ಟಾರ್ ನಟಿ ಹೇಮಾ ಮಾಲಿನಿ, ಖ್ಯಾತ ವಿಲನ್ ಅಮರೀಶ್ ಪುರಿ, ಪ್ರೇಮ್ ಚೋಪ್ರಾ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದರು.
‘ಹಮ್ ಮೇ ಶೆಹೆನ್ಶಾ ಕೌನ್’ ಸಿನಿಮಾವನ್ನು ಆಗಿನ ಜನಪ್ರಿಯ ನಿರ್ದೇಶಕ ಹರ್ಮೇಶ್ ಮಲ್ಹೋತ್ರಾ ನಿರ್ದೇಶನ ಮಾಡಿದ್ದರು. ಸಿನಿಮಾಕ್ಕೆ ಸಂಗೀತ ನೀಡಿದ್ದಿದ್ದು ಲಕ್ಷ್ಮಿಕಾಂತ್ ಪ್ಯಾರೇಲಾಲ್, ಸಿನಿಮಾಕ್ಕೆ ಡೈಲಾಗ್ ಬರೆದಿದ್ದು ಸಲ್ಮಾನ್ ಖಾನ್ ತಂದೆ ಸಲೀಂ, ಸರೋಜ್ ಖಾನ್ ನೃತ್ಯ ನಿರ್ದೇಶಕಿ. ಅದ್ಧೂರಿ ತಾರಾಗಾಣ, ಅದ್ದೂರಿ ಸೆಟ್ಗಳನ್ನು ಹಾಕಿ ಬಲು ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದ್ದ ಸಿನಿಮಾವು ಅನಿವಾರ್ಯ ಕಾರಣಗಳಿಂದ ಪೂರ್ಣಗೊಂಡಿರಲಿಲ್ಲ. ಆದರೆ ಇದೀಗ ಎಐ ಬಳಸಿ ಸಿನಿಮಾವನ್ನು ಪೂರ್ತಿ ಮಾಡಲಾಗಿದ್ದು, ಬಿಡುಗಡೆಗೆ ಸಜ್ಜು ಮಾಡಲಾಗಿದೆ.
ಇದೀಗ ಸಿನಿಮಾ ಬಿಡುಗಡೆ ಬಗ್ಗೆ ಘೋಷಿಸಿರುವ ನಿರ್ಮಾಪಕ ಮತ್ತು ಸಹ ನಿರ್ಮಾಪಕರು, ಸಿನಿಮಾವನ್ನು ನಾವು ಪೂರ್ಣ ಮಾಡಿದ್ದೆವು, ಆದರೆ ಈಗ ಎಐ ಮತ್ತು ಇತರೆ ತಂತ್ರಜ್ಞಾನಗಳನ್ನು ಬಳಸಿ, ಈಗಿನ ತಂತ್ರಜ್ಞಾನಕ್ಕೆ ತಕ್ಕಂತೆ ಸಿನಿಮಾವನ್ನು ಅಪ್ಡೇಟ್ ಮಾಡಲಾಗಿದೆ. ದೃಶ್ಯಗಳನ್ನು ಇನ್ನಷ್ಟು ಪರಿಣಾಮಕಾರಿ ಗೊಳಿಸಲು ನಾವು ಎಐ ಅನ್ನು ಬಳಸಿದ್ದೇವೆ ಎಂದಿದ್ದಾರೆ. ಸಿನಿಮಾವನ್ನು 4ಕ ಫಾರ್ಮ್ಯಾಟ್ಗೆ ಬದಲಾಯಿಸಲಾಗಿದ್ದು, 5.1 ಸರೌಂಡ್ ಸೌಂಡ್ ಅನ್ನು ಅಳವಡಿಸಲಾಗಿದೆ.
‘ಹಮ್ ಮೇ ಶೆಹೆನ್ಶಾ ಕೌನ್’ ಸಿನಿಮಾವನ್ನು ಆಗ 35 ಎಂಎಂ ಈಸ್ಟಮನ್ ಕಲರ್ನಲ್ಲಿ ಚಿತ್ರೀಕರಣ ಮಾಡಲಾಗಿತ್ತಂತೆ. ಸಿನಿಮಾದ ಚಿತ್ರೀಕರಣ ಆಗಲೇ ಪೂರ್ಣಗೊಂಡಿದ್ದರೂ ಸಹ ಕೆಲವು ಕಾರಣಗಳಿಂದಾಗಿ ಸೆನ್ಸಾರ್ ಸರ್ಟಿಫಿಕೇಟ್ಗೆ ಸಿನಿಮಾವನ್ನು ಸಲ್ಲಿಸಲಾಗಿರಲಿಲ್ಲ. ಆದರೆ ಈಗ ಮತ್ತೊಮ್ಮೆ ಸಿನಿಮಾಕ್ಕೆ ಅಂತಿಮ ಸ್ಪರ್ಷ ನೀಡಿದ್ದು, ಸಿನಿಮಾವನ್ನು ಸೆನ್ಸಾರ್ಗೆ ಕಳಿಸಿ ಬಿಡುಗಡೆ ಮಾಡಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ.
2026 ರ ಐಸಿಸಿ ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ.
ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶವನ್ನು ಪಂದ್ಯಾವಳಿಯಿಂದ ಹೊರಗಿಟ್ಟ ನಂತರ ಪಾಕ್ ಮಂಡಳಿ ಅಧ್ಯಕ್ಷನಿಂದ ಈ ಹೇಳಿಕೆ ಬಂದಿದೆ. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಪಂದ್ಯಗಳನ್ನು ಆಡದಿರಲು ನಿರ್ಧರಿಸಿತ್ತು. ಬಿಸಿಬಿ ತನ್ನ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸುವಂತೆ ಐಸಿಸಿಯನ್ನು ವಿನಂತಿಸಿತು, ಆದರೆ ಜನವರಿ 21 ರಂದು ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ಪ್ರಸ್ತಾಪವನ್ನು ತಿರಸ್ಕರಿಸಲಾಯಿತು. ಇದರ ನಂತರ, ಐಸಿಸಿ ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಆಡುವ ಅವಕಾಶ ನೀಡಿದೆ.
ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಬಗ್ಗೆ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳುತ್ತದೆ. ಪ್ರಧಾನಿ ದೇಶಕ್ಕೆ ಮರಳಲು ನಾವು ಕಾಯುತ್ತಿದ್ದೇವೆ. ಬಾಂಗ್ಲಾದೇಶಕ್ಕೆ ಅನ್ಯಾಯ ಮಾಡಲಾಗಿದೆ. ಪಾಕಿಸ್ತಾನ ಸರ್ಕಾರ ಪಂದ್ಯಾವಳಿಯನ್ನು ಬಹಿಷ್ಕರಿಸುವಂತೆ ಕೇಳಿದರೆ, ಐಸಿಸಿ 22 ನೇ ತಂಡವನ್ನು ಸೇರಿಸಿಕೊಳ್ಳಬಹುದು. ಅದು ನಮಗೆ ಮುಖ್ಯವಲ್ಲ. ಬಾಂಗ್ಲಾದೇಶವನ್ನು ಅನ್ಯಾಯಕ್ಕೆ ಬಲಿಪಶುವನ್ನಾಗಿ ಮಾಡಬಾರದು. ಅವರು ಕೂಡ ಪ್ರಮುಖ ಸದಸ್ಯರಾಗಿದ್ದಾರೆ ಎಂದು ಮೊಹ್ಸಿನ್ ನಖ್ವಿ ಹೇಳಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
2026 ರ ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ವಡೋದರಾದಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾಗಿ ಹೇಳಿದರು. ಇತ್ತ ಟಾಸ್ ಸೋತ ಸ್ಮೃತಿ ಕೂಡ ಟಾಸ್ ಗೆದ್ದಿದ್ದರೆ, ಬೌಲಿಂಗ್ ಮಾಡುವುದಾಗಿ ಹೇಳಿದರು. ಟಾಸ್ ಬಳಿಕ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.
🚨 Toss 🚨@DelhiCapitals have won the toss against @RCBTweets and elected to bowl first in Match 1⃣5⃣
ಬಾಗಲಕೋಟೆ, ಜನವರಿ 24: ಅಕ್ಕಿ(Rice)ಸಾಗಾಟ ಮಾಡುತ್ತಿದ್ದ ಚಾಲಕ ಸೇರಿದಂತೆ ಲಾರಿ ಅಪಹರಿಸಿದ್ದ 8 ಜನ ಅಂತಾರಾಜ್ಯ ದರೋಡೆಕೋರರನ್ನು (Robbers) ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಪೊಲೀಸರು ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಮೂಲದ ಜಾಕೀರ್ ಮಕಾಂದಾರ್, ಸಚಿನ್ ನಾಯ್ಕೊಡಿ, ಅರ್ಪಾತ್ ತಾಳಿಕೋಟಿ, ಸಂತೋಷ್ ಕಾಂಬಳೆ, ಫಯಾಜ್ ಮಕಾಂದಾರ್, ಜಮಖಂಡಿಯ ಸಂಜು ಕಡಕೋಳ, ವಿಶ್ವನಾಥ ಲಗಳಿ, ಜಮಖಂಡಿ ತಾಲ್ಲೂಕಿನ ಮೈಗೂರು ಗ್ರಾಮದ ಸಂಗಮೇಶ್ ಕಾಂಬಳೆ ಬಂಧಿತರು. 3 ಲಕ್ಷ 90 ಸಾವಿರ ರೂ ಹಣ, ಸ್ಕಾರ್ಪಿಯೋ, ಇನ್ನೋವಾ ಮತ್ತು ಲಾರಿ ಜಪ್ತಿ ಮಾಡಲಾಗಿದೆ.
ನಡೆದದ್ದೇನು?
ಜನವರಿ 10ರ ರಾತ್ರಿ 12.45ಕ್ಕೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರ ಬಳಿ ಘಟನೆ ನಡೆದಿದೆ. ಸ್ಕಾರ್ಪಿಯೋ ಕಾರಿನಲ್ಲಿ ವಿಜಯಪುರ ಗ್ಯಾಂಗ್ ಬಂದಿದ್ದು, ಇನ್ನೋವಾ ಕಾರಿನಲ್ಲಿ ಜಮಖಂಡಿ ಗ್ಯಾಂಗ್ ಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಕೊಲ್ಲಾಪುರಕ್ಕೆ ಹೊರಟಿದ್ದ (MH 09 UC 8190) ನಂಬರಿನ ಲಾರಿಯನ್ನ ಸೈದಾಪುರ ಬಳಿ ಅಡ್ಡಗಟ್ಟಿದ ದರೋಡೆಕೋರರು ಚಾಲಕನನ್ನು ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಚಾಲಕನ ಕಣ್ಣಿಗೆ ಬಟ್ಟೆ ಕಟ್ಟಿ ಕಿಡ್ನ್ಯಾಪ್ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ 6 ಲಕ್ಷ 12 ಸಾವಿರ 500 ರೂ ಮೌಲ್ಯದ 25 ಟನ್ ಅಕ್ಕಿಯನ್ನು ಒಬ್ಬರಿಗೆ ಮಾರಾಟ ಮಾಡಿದ್ದಾರೆ. ಅಕ್ಕಿ ಮಾರಾಟದಿಂದ ಬಂದ ಹಣ ತೆಗೆದುಕೊಂಡು ದರೋಡೆಕೋರರು ಪರಾರಿ ಆಗಿದ್ದಾರೆ. ಸದ್ಯ ಲಾರಿ ಚಾಲಕ ಬಾಬಾಸಾಬ ರಾಮದುರ್ಗ ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ದರೋಡೆಕೋರರು ಲಾಕ್ ಆಗಿದ್ದೇಗೆ?
ಇನ್ಸ್ಟಾಗ್ರಾಮ್ ವಾಯ್ಸ್ ಕಾಲ್ ಆಧಾರವಾಗಿಟ್ಟುಕೊಂಡು ಮಹಾಲಿಂಗಪುರ ಪೊಲೀಸರು ರೋಚಕ ಕಾರ್ಯಾಚರಣೆ ಮಾಡಿದ್ದಾರೆ. ದರೋಡೆಕೋರರ ಪರಿಚಿತರಿಂದ ಅವರಿಗೆ ಮೆಸೇಜ್ ಕಳುಹಿಸಲಾಗಿದೆ. ಬಳಿಕ ಐಡಿಪಿಆರ್, ಇಂಟರ್ನೆಟ್ ಆಪರೇಟ್ ಸ್ಥಳ ಗುರುತಿಸಿ ದರೋಡೆಕೋರರ ಕೈಗೆ ಕೋಳ ತೊಡಿಸಲಾಗಿದೆ.
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada) ಗೆದ್ದ ಗಿಲ್ಲಿ, ಗೆದ್ದ ಬಳಿಕ ಬಿಡುವಿಲ್ಲದಂತೆ ಪರ್ಯಟನೆ ಮಾಡುತ್ತಿದ್ದಾರೆ. ಸುದೀಪ್, ಶಿವರಾಜ್ ಕುಮಾರ್ ಅವರ ಭೇಟಿ ಆಗಿ ಆಶೀರ್ವಾದ ಪಡೆದ ಬಳಿಕ ಸಿಎಂ ಸೇರಿದಂತೆ ರಾಜ್ಯದ ಕೆಲವು ಪ್ರಮುಖ ರಾಜಕಾರಣಿಗಳನ್ನು ಸಹ ಭೇಟಿಯಾಗಿ ಆಶೀರ್ವಾದ ಪಡೆದರು. ಇದೀಗ ತಮ್ಮ ಹುಟ್ಟೂರಿಗೆ ತೆರಳಿದ ಗಿಲ್ಲಿ, ಅಲ್ಲಿ ತಾವು ಪ್ರೌಢಶಾಲೆ ಕಲಿತ ಬಂಡೂರಿನ ಶಾಲೆಗೆ ಭೇಟಿ ನೀಡಿದ್ದರು. ಶಿಕ್ಷಕರು, ಊರಿನವರು, ಕೆಲವು ಹಳೆ ಗೆಳೆಯರ ಭೇಟಿ ಮಾಡಿದ ಗಿಲ್ಲಿ ನಟ, ತಾವು ಕೂರುತ್ತಿದ್ದ ಶಾಲೆಯ ಬೆಂಚಿನ ಮೇಲೆ ಕೂತು ಹಳೆಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ…
ಬೆಂಗಳೂರು, (ಜನವರಿ 24): ಮೊದಲೇ ಬೆಂಗಳೂರು ಟ್ರಾಫಿಕ್ (Bengaluru traffic) ಜನದಟ್ಟಣೆಗೆ ವಿಶ್ವಪ್ರಸಿದ್ಧಯನ್ನು ಪಡೆದುಕೊಂಡಿದೆ. ಅದರಲ್ಲೂ ವೀಕೆಂಡ್, ಸಾಲು ಸಾಲು ರಜೆಗಳು ಇದ್ದರೆ ಸಾಕು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿರುತ್ತವೆ. ಅದರಂತೆ ಇಂದಿನಿಂದ ಸೋಮವಾರದವರೆಗೂ ರಜೆ ಇರುವುದರಿಂದ ಜನರ ಊರುಗಳತ್ತ ಮುಖ ಮಾಡುತ್ತಿದ್ದು, ಇದರಿಂದ ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಹೀಗಾಗಿ ವ್ಯಕ್ತಿ ಓರ್ವ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದು, ತಡೆಯಲಾಗದೇ ರಸ್ತೆಯಲ್ಲೇ ಮೂತ್ರ (urine) ವಿಸರ್ಜನೆ ಮಾಡಿರುವ ಪ್ರಸಂಗ ನಡೆದಿದೆ.
ಹೌದು…ವ್ಯಕ್ತಿಯೋರ್ವ ಕಾರಿನ ಎರಡು ಡೋರ್ ಓಪನ್ ರಸ್ತೆಯಲ್ಲೇ ನಿಂತು ಮೂತ್ರ ವಿಸರ್ಜನೆ ಮಾಡಿದ್ದಾನೆ. ಚಂದಾಪುರದ ಪ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ವಿಪರೀತ ಟ್ರಾಫಿಕ್ ಉಂಟಾಗಿದ್ದರಿಂದ ಕಾರು ಚಾಲಕ ಗಂಟೆಗಟ್ಟಲೇ ಕಾದಿದ್ದಾನೆ. ಇದರಿಂದ ತಡೆದುಕೊಳ್ಳಲು ಆಗದೇ ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋ ವ್ಯಕ್ತಿಯೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಸ್ಕಾಟ್ಲೆಂಡ್ ಅಧಿಕೃತವಾಗಿ ಬಾಂಗ್ಲಾದೇಶವನ್ನು ಬದಲಾಯಿಸಿದೆ. ಸ್ಕಾಟ್ಲೆಂಡ್ ಗ್ರೂಪ್ ಸಿ ಯ ಭಾಗವಾಗಿದ್ದು, ಈ ಗುಂಪಿನಲ್ಲಿ ಇಂಗ್ಲೆಂಡ್, ವೆಸ್ಟ್ ಇಂಡೀಸ್, ನೇಪಾಳ, ಇಟಲಿ ತಂಡಗಳು ಸೇರಿವೆ. ಐಸಿಸಿ ತಂಡದ ಶ್ರೇಯಾಂಕಗಳ ಆಧಾರದ ಮೇಲೆ ಸ್ಕಾಟ್ಲೆಂಡ್ ಅನ್ನು ಆಯ್ಕೆ ಮಾಡಲಾಗಿದೆ.
ನೆಲಮಂಗಲ, ಜನವರಿ 24: ಡಿ ಮಾರ್ಟ್ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ (mother and son) ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶೈಲಜಾ(45), ಪ್ರಜ್ವಲ್(26) ಮೃತ ತಾಯಿ, ಮಗ. ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಡೆದದ್ದೇನು?
ತಾಯಿ ಮತ್ತು ಮಗ ಡಿ ಮಾರ್ಟ್ಗೆ ಹೋಗಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ವೇಗವಾಗಿ ಬಂದ ಟಾಟಾ ಏಸ್ ವಾಹನ ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓವರ್ಟೇಕ್ ಮಾಡಲು ಹೋಗಿ ಬಸ್ಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
ಬಸ್ಗೆ ಬೈಕ್ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ಬಳಿ ನಡೆದಿದೆ. ಕುಂದಾಪುರದಿಂದ ಕೊಲ್ಲೂರು ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಓವರ್ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಬಸ್ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ.
ನಿಂತಿದ್ದ ಬೈಕ್ಗೆ ಕಾರು ಡಿಕ್ಕಿ: ಸವಾರರಿಗೆ ಗಂಭೀರ ಗಾಯ
ನಿಂತಿದ್ದ ಬೈಕ್ಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕಾರು ಮಾಲೀಕ ಹಾಗೂ ಬೈಕ್ ಸವಾರರ ಗುರುತು ಪತ್ತೆಯಾಗಿಲ್ಲ.
ಯುವಕರಿಬ್ಬರು ರಸ್ತೆ ಬದಿ ಬೈಕ್ ನಿಲ್ಲಿಸಿ ಬೇಕರಿ ಕಡೆ ಹೋಗಲು ಮುಂದಾಗಿದ್ದರು. ಈ ವೇಳೆ ಕಾರು ಚಾಲಕನ ಅಜಾಗರೂಕತೆಯಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ನೆಲಕ್ಕೆ ಬಿದಿದ್ದು, ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ವಿಯಾಗಲು ಬಯಸುತ್ತಾನೆ. ಯಶಸ್ಸನ್ನು (success) ಸಾಧಿಸಲು ಹಗಲು ರಾತ್ರಿ ಶ್ರಮಿಸುತ್ತಾರೆ, ಅನೇಕ ವಿಷಯಗಳಲ್ಲಿ ತ್ಯಾಗವನ್ನು ಮಾಡುತ್ತಾನೆ. ಇಷ್ಟೆಲ್ಲಾ ಶ್ರಮಿಸಿದರೂ, ಎಷ್ಟೇ ಪ್ರಯತ್ನಪಟ್ಟರೂ ಒಂದಷ್ಟು ಮಂದಿ ಯಶಸ್ಸಿನ ಮೆಟ್ಟಿಲನ್ನು ಏರಲು ಸಾಧ್ಯವೇ ಆಗುವುದಿಲ್ಲ, ಸತತ ಸೋಲುಗಳನ್ನೇ ಕಾಣುತ್ತಿರುತ್ತಾರೆ. ಅಂತಹವರು ಚಾಣಕ್ಯರು ಹೇಳಿರುವ ಈ ಕೆಲವು ಜೀವನ ರಹಸ್ಯಗಳನ್ನು ಪಾಲಿಸುವ ಮೂಲಕ ಯಶಸ್ಸಿನ ಶಿಖರವನ್ನು ಏರಬಹುದು. ಯಶಸ್ಸಿನ ಆ ರಹಸ್ಯಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.
ಚಾಣಕ್ಯರು ಹೇಳಿರುವ ಯಶಸ್ಸಿನ ರಹಸ್ಯಗಳಿವು:
ಗುರಿಯ ಬಗ್ಗೆ ಸ್ಪಷ್ಟತೆ: ತನ್ನ ಗುರಿಯ ಬಗ್ಗೆ ಸ್ಪಷ್ಟವಾಗಿರುವ ವ್ಯಕ್ತಿ ಖಂಡಿತವಾಗಿಯೂ ಯಶಸ್ಸನ್ನು ಸಾಧಿಸುತ್ತಾನೆ. ಗುರಿಯಿಲ್ಲದ ಜೀವನವು ಗಮ್ಯಸ್ಥಾನವಿಲ್ಲದ ಪ್ರಯಾಣದಂತೆ. ತನ್ನ ಮಾರ್ಗವನ್ನು ಸ್ಪಷ್ಟವಾಗಿ ಆರಿಸಿಕೊಂಡ ವ್ಯಕ್ತಿ ಎಂದಿಗೂ ದಾರಿ ತಪ್ಪುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಅಂತಹ ಜನರು ತಮ್ಮ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುವುದಿಲ್ಲ. ಅಲ್ಲದೆ ಗುರಿಯ ಬಗ್ಗೆ ಸ್ಪಷ್ಟವಾಗಿರುವವರು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವೇ ಇಲ್ಲ.
ಮಾತಿನ ಬಗ್ಗೆ ಸ್ಪಷ್ಟತೆ: ಮಾತಿಗಿರುವಷ್ಟು ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಅದಕ್ಕಾಗಿಯೇ ಎಲ್ಲಿ ಮಾತನಾಡಬೇಕು ಮತ್ತು ಎಲ್ಲಿ ಮೌನವಾಗಿರಬೇಕು ಎಂಬುದರ ಬಗ್ಗೆ ವಿವೇಚನೆಯಿಂದ ಇರುವುದು ಬಹಳ ಮುಖ್ಯ ಎಂದು ಚಾಣಕ್ಯರು ಹೇಳಿದ್ದು. ಅನಗತ್ಯವಾಗಿ ಮಾತನಾಡುವುದರಿಂದ ಶತ್ರುಗಳು ಹೆಚ್ಚಾಗಬಹುದು. ಸರಿಯಾದ ಸಮಯದಲ್ಲಿ ಮಾತನಾಡುವ ಮಾತುಗಳು ಸಮಾಜದಲ್ಲಿ ಗೌರವ ಮತ್ತು ಮನ್ನಣೆಯನ್ನು ತರುತ್ತವೆ. ಮೌನವನ್ನು ಆಯುಧವಾಗಿ ಬಳಸುವುದು ಹೇಗೆ ಎಂದು ತಿಳಿದಿರುವ ವ್ಯಕ್ತಿಗೆ ಯಾರೂ ಮಾನಸಿಕವಾಗಿ ಹಾನಿ ಮಾಡಲು ಸಾಧ್ಯವಿಲ್ಲ. ಮತ್ತು ಇಂತಹ ವ್ಯಕ್ತಿಗಳು ಜೀವನದಲ್ಲಿ ಸೋಲನ್ನು ಸಹ ಎದುರಿಸುವುದಿಲ್ಲ.
ಸುತ್ತಮುತ್ತಲಿನವರ ಬಗ್ಗೆ ಎಚ್ಚರಿಕೆಯಿಂದ ಇರುವುದು: ನಾವು ಯಶಸ್ವಿಯಾಗಬೇಕಾದರೆ, ನಮ್ಮ ಸುತ್ತಲಿನ ಜನರು ಎಂತಹವರೆಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನಗುತ್ತಾ ಬೆನ್ನಿಗೆ ಚೂರಿ ಹಾಕುವ ಸ್ನೇಹಿತನಿಗಿಂತ ನೇರವಾಗಿ ದಾಳಿ ಮಾಡುವ ಶತ್ರುವೇ ಲೇಸು. ನಿಜವಾದ ಸ್ನೇಹಿತ ಮತ್ತು ಶತ್ರುವಿನ ನಡುವೆ ವ್ಯತ್ಯಾಸವನ್ನು ಗುರುತಿಸುವ ಬುದ್ಧಿವಂತಿಕೆ ಇರುವ ವ್ಯಕ್ತಿ ಎಂದಿಗೂ ಮೋಸ ಹೋಗುವುದಿಲ್ಲ ಎನ್ನುತ್ತಾರೆ ಚಾಣಕ್ಯ.
ಕೆಟ್ಟವರ ಸಹವಾಸದಿಂದ ದೂರವಿರುವುದು: ಕೆಟ್ಟ ಸ್ವಭಾವದ ಜನರಿಂದ ದೂರವಿರುವುದರಿಂದ ಅನಗತ್ಯ ತೊಡಕುಗಳನ್ನು ತಪ್ಪಿಸಬಹುದು. ಜೊತೆಗೆ ಒಳ್ಳೆಯವರ ಜೊತೆ ಇರುವುದಿಂದ ನೀವು ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ಹಾಗಾಗಿ ಸಜ್ಜನರ ಸಹವಾಸದಲ್ಲಿಯೇ ಇರಬೇಕು ಎನ್ನುತ್ತಾರೆ ಚಾಣಕ್ಯ.
ಸವಾಲುಗಳನ್ನು ಧೈರ್ಯದಿಂದ ಎದುರಿಸುವುದು: ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸುವವರು, ಜೀವನದಲ್ಲಿ ಎದುರಾಗುವ ಸವಾಲುಗಳ ಬಗ್ಗೆ ಭಯಪಡದವರು ಜೀವನದಲ್ಲಿ ಎಂದಿಗೂ ಸೋಲನ್ನು ಕಾಣಲು ಸಾಧ್ಯವೇ ಇಲ್ಲ ಎನ್ನುತ್ತಾರೆ ಚಾಣಕ್ಯರು. ಜೀವನದ ಈ ರಹಸ್ಯಗಳ ಬಗ್ಗೆ ತಿಳಿದರೆ ಯಶಸ್ಸನ್ನು ಸಾಧಿಸಲು ಸಾಧ್ಯ.