Category Archives: Blog

Your blog category

ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ – Kannada News | Colors Kannada Celebrates 12th Year Anubandha Awards with Serial Artist and Stars

ಕಳೆದ ವಾರ ಬಿಗ್ ಬಾಸ್ (Bigg Boss) ಫಿನಾಲೆ ಪೂರ್ಣಗೊಂಡಿದೆ. ವೀಕೆಂಡ್​​​ನಲ್ಲಿ ಸುದೀಪ್ ಅವರ ಎಪಿಸೋಡ್ ನೋಡೋಕೆ ಸಿಗೋದಿಲ್ಲವಲ್ಲ ಎಂದು ವೀಕ್ಷಕರು ಬೇಸರದಲ್ಲಿ ಇದ್ದರು. ಆದರೆ, ಕಲರ್ಸ್ ಕನ್ನಡ ವೀಕ್ಷಕರು ಬೇಸರ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇಂದಿನಿಂದ ಮೂರು ದಿನ ಅಂದರೆ ಜನವರಿ 24, 25 ಮತ್ತು 26ರಂದು 12ನೇ ವರ್ಷದ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಸಂಜೆ 7ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆ ಕಲಾವಿದರ ಜೊತೆಗೆ ಹಿರಿತೆರೆ ದಿಗ್ಗಜರ ಸಮಾಗಮ ಆಗಲಿದೆ.

‘ಅನುಬಂಧ ಅವಾರ್ಡ್ಸ್’ ಕೇವಲ ಪ್ರಶಸ್ತಿ ಸಮಾರಂಭವಾಗಿ ಉಳಿದಿಲ್ಲ. ಇದು ಕಲರ್ಸ್ ಕನ್ನಡ ಕಲಾವಿದರು ಹಾಗೂ ವೀಕ್ಷಕರ ಪಾಲಿಗೆ ಮನೆಯ ಹಬ್ಬ. ಇಲ್ಲಿ ವಿವಿಧ ವಿಭಾಗದಲ್ಲಿ ಅವಾರ್ಡ್ಸ್ ನೀಡಲಾಗುತ್ತದೆ. ನೆಚ್ಚಿನ ನಟ/ನಟಿ, ನೆಚ್ಚಿನ ಸೊಸೆ, ನೆಚ್ಚಿನ ಅತ್ತೆ, ನೆಚ್ಚಿನ ವಿಲನ್ ಹೀಗೆ ಹಲವು ವಿಭಾಗಗಳಲ್ಲಿ ಅವಾರ್ಡ್ ಕೊಡಲಾಗುತ್ತದೆ.
ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಬಣ್ಣದ ಲೋಕಕ್ಕೆ ಬಂದು 50 ವರ್ಷಗಳು ತುಂಬಿವೆ. ಅದೇ ರೀತಿ ‘ಭಾಗ್ಯ’ ಪಾತ್ರಧಾರಿ ಸುಷ್ಮಾ ರಾವ್ ಅವರು ಕಿರುತೆರೆಯಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರೈಸಿದ್ದಾರೆ. ಇಬ್ಬರಿಗೂ ವೇದಿಕೆ ಮೇಲೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ.

ಕಲರ್ಸ್​​ನ ‘ರಾಮಾಚಾರಿ’ ಧಾರಾವಾಹಿ ಸಾವಿರ ಕಂತು ಪೂರೈಸಿದೆ. ಇದನ್ನು ಸಂಭ್ರಮಿಸಲು ಕನ್ನಡ ಚಿತ್ರರಂಗದ ರಾಮಾಚಾರಿ ಎಂದೇ ಫೇಮಸ್ ಆದ ರವಿಚಂದ್ರನ್ ಆಗಮಿಸಲಿದ್ದಾರೆ.

‘ಸು ಫ್ರಮ್ ಸೋ’ ಸಿನಿಮಾ ಥಿಯೇಟರ್​ ಬಳಿಕ ಒಟಿಟಿ ಹಾಗೂ ಟಿವಿಗೆ ಬಂತು. ಕಲರ್ಸ್​​​ನಲ್ಲೇ ಈ ಸಿನಿಮಾ ಪ್ರಸಾರ ಕಂಡಿದೆ. ಹೀಗಾಗಿ, ಚಿತ್ರದ ನಿರ್ದೇಶಕ ಜೆ.ಪಿ. ತುಮಿನಾಡ್ ಮತ್ತು ಕಲಾವಿದರಾದ ಶನೀಲ್ ಗೌತಮ್, ಪುಷ್ಪರಾಜ್ ಬೋಳಾರ್ ವೇದಿಕೆ ಏರಲಿದ್ದಾರೆ. ಸಿನಿಮಾಗೆ ಅವಾರ್ಡ್ ಕೂಡ ಸಿಗಲಿದೆ. ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ ಗೆ ಅವರ ತಾಯಿ ವೇದಿಕೆ ಮೇಲೆ ಸರ್​​ಪ್ರೈಸ್ ನೀಡಿದ್ದಾರೆ. ‘ಹುಚ್ಚ’ ಸಿನಿಮಾ ಖ್ಯಾತಿಯ ನಟಿ ರೇಖಾ ವೇದವ್ಯಾಸ್ ಸುದೀರ್ಘ ಕಾಲದ ನಂತರ ಈ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಪುನೀತ್ ಹೆಸರಲ್ಲಿ ಕಲರ್ಸ್ ಕನ್ನಡ ‘ಕಲರ್ಸ್‌ ಕನ್ನಡಿಗ’ ಪ್ರಶಸ್ತಿ ಪ್ರದಾನ ಮಾಡುತ್ತದೆ. ಈ ಅವಾರ್ಡ್​​ನ ಬಾಲ್ಯ ವಿವಾಹದ ವಿರುದ್ಧ ಹೋರಾಡುತ್ತಿರುವ ಬಾಗಲಕೋಟೆಯ ಗಟ್ಟಿಗಿತ್ತಿ ಗುರಮ್ಮ ಸಂಕಿನಮಠ ಅವರಿಗೆ ನೀಡಲಾಗಿದೆ. ‘ಥಟ್‌ ಅಂತ ಹೇಳಿ’ ನಡೆಸಿಕೊಡೋ ಡಾ. ನಾ. ಸೋಮೇಶ್ವರ್‌, ಶಾಸಕ ಪ್ರದೀಪ್‌ ಈಶ್ವರ್‌, ನಿರ್ದೇಶಕ ತರುಣ್‌ ಸುಧೀರ್-ಸೋನಲ್‌ ಮೊಂತೇರೋ, ಅನು‌ ಪ್ರಭಾಕರ್- ರಘು ಮುಖರ್ಜಿ ಅನುಬಂಧ ವೇದಿಕೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ‘ಮಾರ್ಕ್‌’: ಜ.23ರಿಂದ 4 ಭಾಷೆಗಳಲ್ಲಿ ಪ್ರಸಾರ

ಈ ಬಾರಿ 37 ಅವಾರ್ಡ್​​​​ಗಳನ್ನು ನೀಡಲಾಗುತ್ತಿದೆ. 15ಕ್ಕೂ ಹೆಚ್ಚು ಪ್ರದರ್ಶನಗಳಿವೆ. ಗಿಚ್ಚಿ ಗಿಲಿಗಿಲಿ ತಂಡದ ಕಾಮಿಡಿ ಸ್ಕಿಟ್‌ಗಳು ವೀಕ್ಷಕರನ್ನು ನಗೆಗಡಲಲ್ಲಿ ತೆಲಿಸೋದು ಪಕ್ಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ – Kannada News | Threat, abuse to woman official: Is a Powerful Minister Shielding Congress Leader Rajeev Gowda? Doubts Grow

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ?

ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ ಮಂತ್ರಿಯೊಬ್ಬರು ರಾಜೀವ್ ಗೌಡ ಪತ್ನಿ ಸಹನಾ ಜೊತೆ ದೂರವಾಣಿ ಸಂಪರ್ಕದಲ್ಲಿದ್ದಾರೆ. ಅವರೇ ಬಂಧನದಿಂದ ತಪ್ಪಿಸಿಕೊಳ್ಳಲು ಬೇಕಾದ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂಬ ವಿಚಾರ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಪ್ರಭಾವಿ ಸಚಿವರ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ. ಇದರಿಂದಾಗಿ ರಾಜೀವ್ ಗೌಡ ಬಂಧನ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪೊಲೀಸರು ಶೋಧ ನಡೆಸಿದ್ದರು ಇನ್ನೂ ರಾಜೀವ್ ಗೌಡ ಬಂಧನ ವಾಗದಿರುವುದು, ಪ್ರಭಾವಿ ಸಚಿವರ ಹಸ್ತಕ್ಷೇಪದ ಕುರಿತ ಅನುಮಾನಗಳಿಗೆ ಪುಷ್ಟಿ ನೀಡಿದೆ.

ಶಿಡ್ಲಘಟ್ಟ ಪೊಲೀಸರಿಂದ ನಾಲ್ಕು ನೋಟಿಸ್ ಜಾರಿ

ಪೌರಾಯುಕ್ತೆಗೆ ನಿಂದಿಸಿರುವ ಪ್ರಕರಣದಲ್ಲಿ ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸರು ನಾಲ್ಕು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ಮನೆಗಳಿಗೆ ಬೀಗ ಜಡಿದು ರಾಜೀವ್ ಗೌಡ ತಲೆಮೆರೆಸಿಕೊಂಡಿದ್ದಾರೆ. ಅವರ ಪತ್ನಿ ಸಹನಾ ಕೂಡ ಮನೆಯಲ್ಲಿ ಇಲ್ಲವೆಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಂದೆಡೆ ರಾಜೀವ್ ಗೌಡ ವಿಚಾರ ಚಿಕ್ಕಬಳ್ಳಾಪುರ, ಕೋಲಾರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನ ಎರಡು ಬಣಗಳ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಯಿತೇ ಎಂಬ ಪ್ರಶ್ನೆಯೂ ಮೂಡಿದೆ. ಒಬ್ಬರು ಪ್ರಭಾವಿ ಸಚಿವರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದರೆ, ಮತ್ತೊಬ್ಬರು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಸದ್ಯ ರಾಜೀವ್ ಗೌಡರನ್ನು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಶಿಫಾರಸಿನ ಮೇರೆಗೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೆ ಅದಕ್ಕೆ ಯಾವುದೇ ಉತ್ತರ, ಪ್ರತಿಕ್ರಿಯೆ ನೀಡಿರಲಿಲ್ಲ. ಇದರ ಬೆನ್ನಲ್ಲೇ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸು ಮಾಡಿದ್ದರು. ಸದ್ಯ ಇಷ್ಟೆಲ್ಲ ಆಗಿಯೂ ರಾಜೀವ್ ಗೌಡ ಬಂಧ ಆಗದಿರುವುದು, ಪ್ರಭಾವಿ ಸಚಿವರೊಬ್ಬರು ಆತನ ರಕ್ಷಣೆ ನಿಂತಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಟಿ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ – Kannada News | Chicken Price Hike Shocks Non Veg Lovers in Bangalore Karnataka, Rates May Touch Rs 380 per Kg

ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್‌ವೆಜ್ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರ ಪಟ್ಟಿಯಲ್ಲಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು, ವಿಶೇಷವಾಗಿ ವಿದೌಟ್ ಸ್ಕಿನ್ ಚಿಕನ್ ತಿನ್ನುವವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ಲಭ್ಯವಿದ್ದರೆ, ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ ಪ್ರದೇಶಗಳಲ್ಲಿ ಈಗಾಗಲೇ ಕೆಜಿಗೆ 350 ರೂ ದರ ತಲುಪಿದ್ದು, ಮುಂದಿನ ದಿನಗಳಲ್ಲಿ 370–380 ರೂ ಆಗುವ ಸಾಧ್ಯತೆಯೂ ಇದೆ ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ.

ಚಿಕನ್ ಬೆಲೆ ಏರಿಕೆಗೆ ಕಾರಣವೇನು?

ಕೋಳಿ ಮಾಂಸದ ದಿಢೀರ್ ಬೆಲೆ ಏರಿಕೆಗೆ ಹಲವು ಕಾರಣಗಳಿವೆ. ಪ್ರಮುಖವಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಕೋಳಿ ಸಾಕಾಣೆದಾರರು ನಡೆಸುತ್ತಿರುವ ಪ್ರತಿಭಟನೆ ಇದಕ್ಕೆ ಕಾರಣ ಎನ್ನಲಾಗಿದೆ. ನಿರ್ವಹಣಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಂಪನಿಗಳು ಹೆಚ್ಚು ಹಣ ನೀಡಬೇಕು ಎಂದು ಕೋಳಿ ಸಾಕಾಣೆದಾರರು ಒತ್ತಾಯಿಸುತ್ತಿದ್ದಾರೆ.

ಇದೇ ಸಮಯದಲ್ಲಿ ಕೋಳಿ ಉತ್ಪಾದನೆಯಲ್ಲೂ ಕುಸಿತ ಕಂಡುಬಂದಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ. ಇದರಿಂದ ಮಾರುಕಟ್ಟೆಯಲ್ಲಿ ಚಿಕನ್ ಕೊರತೆ ಉಂಟಾಗಿ, ದರ ಏರಿಕೆಗೆ ಕಾರಣವಾಗಿದೆ.

ನಾನ್‌ವೆಜ್ ಹೋಟೆಲ್‌ಗಳಲ್ಲೂ ದರ ಹೆಚ್ಚಳ ಸಾಧ್ಯತೆ

ಚಿಕನ್ ಬೆಲೆ ಏರಿಕೆಯಿಂದ ನಾನ್‌ವೆಜ್ ರೆಸ್ಟೋರೆಂಟ್‌ಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಚಿಕನ್ ಬಿರಿಯಾನಿ, ಚಿಕನ್ ಕಬಾಬ್ ಸೇರಿದಂತೆ ಹಲವು ನಾನ್‌ವೆಜ್ ಖಾದ್ಯಗಳ ದರ ಹೆಚ್ಚಾಗುವ ಸೂಚನೆಗಳು ಕಂಡುಬಂದಿವೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಿಗೆ ತಮಿಳುನಾಡಿನಿಂದ ಕೋಳಿ ಮತ್ತು ಕೋಳಿ ಮಾಂಸ ಪೂರೈಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಹೊರರಾಜ್ಯದ ಬೆಳವಣಿಗೆಗಳು ರಾಜ್ಯದ ಮಾರುಕಟ್ಟೆಯ ಮೇಲೂ ನೇರ ಪರಿಣಾಮ ಬೀರುತ್ತಿವೆ.

ಇದನ್ನೂ ಓದಿ: ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು?

ಒಟ್ಟಿನಲ್ಲಿ, ಚಿಕನ್ ಪ್ರಿಯರಿಗೆ ಇದು ಖಂಡಿತವಾಗಿಯೂ ಶಾಕಿಂಗ್ ಸುದ್ದಿ. ಮುಂದಿನ ದಿನಗಳಲ್ಲಿ ಚಿಕನ್ ದರ ಯಾವ ಮಟ್ಟಿಗೆ ಏರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:14 pm, Sat, 24 January 26

Source link

Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Tortoise Ring Astrology: Benefits, Wearing Rules and Zodiac Signs Who Should Avoid It

ಆಮೆ ಉಂಗುರವು (Tortoise Ring) ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲ್ಪಟ್ಟಿದ್ದು, ಸಂಪತ್ತು, ಸಮೃದ್ಧಿ, ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆಯಿದೆ, ಇದು ವಿಷ್ಣುವಿನ ಕೂರ್ಮಾವತಾರದ ಸಂಕೇತವಾಗಿದೆ. ಆಮೆ ಉಂಗುರವನ್ನು ಧರಿಸುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ, ಇದು ಜೀವನದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಆಮೆ ಉಂಗುರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ರತ್ನಶಾಸ್ತ್ರದ ಪ್ರಕಾರ, ಆಮೆ ಉಂಗುರಗಳು ಕೆಲವು ರಾಶಿಗಳಿಗೆ ಶುಭವಲ್ಲ.

ಈ ನಾಲ್ಕು ರಾಶಿಗಳ ಜನರು ಆಮೆ ಉಂಗುರಗಳನ್ನು ಧರಿಸಬಾರದು:

ಆಮೆ ಉಂಗುರ ಧರಿಸುವುದರಿಂದ ಹಲವು ಪ್ರಯೋಜನಗಳಿವೆ ಎಂದು ತಿಳಿದಿದ್ದರೂ, ಎಲ್ಲಾ ರಾಶಿಯ ಜನರು ಅದನ್ನು ಧರಿಸಬಾರದು. ರತ್ನಶಾಸ್ತ್ರದ ಪ್ರಕಾರ, ಮೇಷ, ಕನ್ಯಾ, ವೃಶ್ಚಿಕ ಮತ್ತು ಮೀನ ರಾಶಿಯ ಜನರು ಆಮೆ ಉಂಗುರಗಳನ್ನು ಧರಿಸಬಾರದು. ಈ ನಾಲ್ಕು ರಾಶಿಗಳು ನೀರಿನ ಅಂಶಕ್ಕೆ ಸಂಬಂಧಿಸಿವೆ ಎಂದು ಜ್ಯೋತಿಷ್ಯ ಹೇಳುತ್ತದೆ.

ಈ ರಾಶಿಗಳಿಗೆ ಆಮೆ ಉಂಗುರವು ಶುಭ:

ರತ್ನಶಾಸ್ತ್ರದ ಪ್ರಕಾರ ವೃಷಭ ಮತ್ತು ಮಕರ ರಾಶಿಗಳಲ್ಲಿ ಜನಿಸಿದವರಿಗೆ ಆಮೆ ಉಂಗುರವನ್ನು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಈ ಎರಡು ರಾಶಿಗಳು ಖಂಡಿತವಾಗಿಯೂ ಆಮೆ ಉಂಗುರವನ್ನು ಧರಿಸಬೇಕು. ಆಮೆ ಉಂಗುರವನ್ನು ಧರಿಸುವುದು ಎರಡೂ ರಾಶಿಚಕ್ರ ಚಿಹ್ನೆಗಳ ಜನರಿಗೆ ತುಂಬಾ ಪ್ರಯೋಜನಕಾರಿ. ಈ ಉಂಗುರವನ್ನು ಧರಿಸುವುದರಿಂದ ಸಂತೋಷ, ಸಮೃದ್ಧಿ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಇದು ಪ್ರೀತಿಯ ಜೀವನವನ್ನು ಸಹ ಸುಧಾರಿಸುತ್ತದೆ ಎಂದು ನಂಬಲಾಗಿದೆ.

ಆಮೆ ಉಂಗುರ ಧರಿಸುವ ನಿಯಮಗಳು:

ಆಮೆ ಉಂಗುರವನ್ನು ಧರಿಸುವಾಗ, ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಯಾವಾಗಲೂ ಬೆಳ್ಳಿಯ ಆಮೆ ಉಂಗುರವನ್ನು ಧರಿಸಿ. ಆಮೆಯ ಬೆನ್ನಿನ ಮೇಲೆ “ಶ್ರೀ” ಚಿಹ್ನೆಯನ್ನು ಗಮನಿಸಬೇಕು. ಉಂಗುರವನ್ನು ಧರಿಸುವ ಮೊದಲು, ಅದನ್ನು ಗಂಗಾ ಜಲದಿಂದ ಸ್ವಚ್ಚಗೊಳಿಸಿ. ಆಮೆಯ ಬಾಯಿ ಯಾವಾಗಲೂ ನಿಮ್ಮ ಕಡೆಗೆ ಇರಬೇಕು. ಈ ಸ್ಥಾನದಲ್ಲಿ ಉಂಗುರವು ಹೆಚ್ಚು ಪ್ರಯೋಜನಕಾರಿ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’ – Kannada News | Sunrisers Eastern Cape have made it to their 4th finals in 4 seasons

ಸೌತ್ ಆಫ್ರಿಕಾ ಟಿ20 ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ಈ ಬಾರಿ ಕೂಡ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಕಣಕ್ಕಿಳಿಯಲಿದೆ. ಅಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಪ್ರತಿ ಸೀಸನ್​ನಲ್ಲೂ ಫೈನಲ್​ ಆಡಿದ ವಿಶೇಷ ದಾಖಲೆಯೊಂದನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತನ್ನದಾಗಿಸಿಕೊಂಡಿದೆ.

  • 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ಯಾಪಿಟಲ್ಸ್ ಪಡೆಯನ್ನು ಬಗ್ಗು ಬಡಿದು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  • 2024 ರಲ್ಲಿ ನಡೆದ ದ್ವಿತೀಯ ಸೀಸನ್​ನಲ್ಲೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಫೈನಲ್​ಗೇರಿತ್ತು. ಅಷ್ಟೇ ಅಲ್ಲದೆ ಫೈನಲ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡವನ್ನು ಮಣಿಸಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದರು.
  • 2025 ರಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೂರನೇ ಸೀಸನ್​ನ ಫೈನಲ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಹಾಗೂ ಎಂಐ ಕೇಪ್ ​ಟೌನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಕ್ಕೆ ಸೋಲುಣಿಸುವಲ್ಲಿ ಎಂಐ ಕೇಪ್ ಟೌನ್ ಯಶಸ್ವಿಯಾಗಿತ್ತು.

ಇದೀಗ ನಾಲ್ಕನೇ ಸೀಸನ್​ನಲ್ಲೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪರ್ಲ್ ರಾಯಲ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಸನ್​ರೈಸರ್ಸ್ ಪಡೆ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪರ್ಲ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. ಈ ಸುಲಭ ಗುರಿಯನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 11.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ನಾಲ್ಕನೇ ಬಾರಿ ಫೈನಲ್​ಗೇರಿದೆ. ಭಾನುವಾರ (ಜ.25) ನಡೆಯಲಿರುವ ಫೈನಲ್ ಪಂದ್ಯದಲ್ಲಿ  ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಲಿದೆ.

ಇದನ್ನೂ ಓದಿ: ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ

ಈ ಪಂದ್ಯದ ಮೂಲಕ ಪ್ರಿಟೊರಿಯಾ ಕ್ಯಾಪಿಟಲ್ಸ್ ತಂಡವು 2023ರ ಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲಿದೆಯಾ ಅಥವಾ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 3ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

Source link

‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ – Kannada News | 45 Movie Title Controversy: Actor Mitra Claims Ownership, Expresses Disappointment

ಅರ್ಜುನ್ ಜನ್ಯ (Arjun Janya) ನಿರ್ದೇಶನದ, ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಗೂ ಬಂದಿದೆ. ‘45’ ಅನ್ನೋದು ಸಿನಿಮಾದ ಕಥೆಗೆ ಹೆಚ್ಚು ಸೂಕ್ತ. ಹೀಗಾಗಿ, ಈ ಟೈಟಲ್ ಇಡಲಾಗಿದೆ. ಈಗ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ಸಿನಿಮಾ ಹಾಗೂ ಕಿರುತೆರೆ ಕಲಾವಿದ ಮಿತ್ರ ಮಾತನಾಡಿದ್ದಾರೆ. ‘ಟೈಟಲ್ ನನ್ನದಾಗಿತ್ತು, ಅವರಿಗೆ ನೀಡಿದ್ದೇನೆ’ ಎಂದಿದ್ದಾರೆ.

ಸಿನಿಮಾ ವೀಕ್ಷಿಸಿದವರಿಗೆ ‘45’ ಎಂಬ ಟೈಟಲ್ ಯಾಕೆ ಇಡಲಾಗಿದೆ ಎಂಬುದು ಮನದಟ್ಟಾಗುತ್ತದೆ. ಈ ಟೈಟಲ್​​ ಇಡೋಣ ಎಂದು ನಿರ್ದೇಶಕರು ಹಾಗೂ ನಿರ್ಮಾಪಕರು ನಿರ್ಧರಿಸಿದಾಗ ನಟ ಮಿತ್ರ ಅವರು ಈ ಶೀರ್ಷಿಕೆ ನೋಂದಣಿ ಮಾಡಿಸಿದ ವಿಷಯ ಗೊತ್ತಾಗಿದೆ. ಹೀಗಾಗಿ, ಟೈಟಲ್​​ನ ಅವರ ಬಳಿ ಕೇಳಿ ಪಡೆದರು ನಿರ್ಮಾಪಕ ರಮೇಶ್ ರೆಡ್ಡಿ. ಸೌಜನ್ಯಕ್ಕೆ ಒಮ್ಮೆ ಹೆಸರನ್ನಾದರೂ ಹೇಳಬಹುದಿತ್ತು ಎಂಬುದು ಮಿತ್ರನ ಅಭಿಪ್ರಾಯ.

ಇದನ್ನೂ ಓದಿ: ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ

‘ಕನ್ನಡ ಪಿಚ್ಚರ್​’ಗೆ ನೀಡಿದ ಸಂದರ್ಶನದಲ್ಲಿ ಮಿತ್ರ ಮಾತನಾಡಿದ್ದಾರೆ.  ‘45 ಟೈಟಲ್ ಕೊಟ್ಟಿದ್ದೇ ನಾನು. ನನ್ನ ಬ್ಯಾನರ್ ಅಡಿಯಲ್ಲಿ ಸಿನಿಮಾ ನೋಂದಣಿ ಮಾಡಿಸಿದ್ದೆ. ರಮೇಶ್ ರೆಡ್ಡಿ ಅವರು ಕರೆ ಮಾಡಿದರು. ನಮ್ಮ ಕಥೆಗೆ ಈ ಶೀರ್ಷಿಕೆ ಹೊಂದಾಣಿಕೆ ಆಗುತ್ತಿದೆ, ಟೈಟಲ್ ಬೇಕಿತ್ತು. ಅರ್ಜುನ್ ಜನ್ಯ ನಿರ್ದೇಶನ ಇದೆ ಎಂದು ವಿವರಿಸಿದರು’ ಎಂದಿದ್ದಾರೆ ಮಿತ್ರ.

‘ಹಣ ನೀಡೋಕೆ ಬಂದರು. ನಾನು ಬೇಡ ಎಂದೆ. ಥ್ಯಾಂಕ್ಸ್ ಕಾರ್ಡ್ ಹಾಕ್ತಾರೆ ಅಥವಾ ಸಂದರ್ಶನದಲ್ಲಿ ಹೇಳ್ತಾರೆ ಎಂದುಕೊಂಡಿದ್ದೆ. ಕೊನೆಪಕ್ಷ ಅರ್ಜುನ್ ಜನ್ಯ ನನೆಪಿಸಿಕೊಳ್ಳುತ್ತಾರೆ ಎಂದುಕೊಂಡಿದ್ದೆ. ಆದರೆ, ಏನೂ ಮಾಡಿಲ್ಲ. ಪ್ರೀತಿಯಿಂದ ಟೈಟಲ್ ಬಿಟ್ಟು ಕೊಟ್ಟಿದ್ದೇನೆ, ಹಣ ನಿರೀಕ್ಷಿಸಿಲ್ಲ. ಬ್ಯುಸಿ ಇಂದ ಮರೆತು ಹೋಗಿರಬಹುದು. ಸೇವೆನ ಪರಿಗಣಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ’ ಎನ್ನುತ್ತಾರೆ ಮಿತ್ರ. ‘45’ ಸಿನಿಮಾ ಡಿಸೆಂಬರ್ 25ರಂದು ಥಿಯೇಟರ್​​ಗೆ ಬಂತು. ಈಗ ಜನವರಿ 23ರಂದು ಜೀ 5 ಅಲ್ಲಿ ಪ್ರಸಾರ ಆರಂಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು! – Kannada News | Government Officials Must Answer Calls from Elected Representatives, Karnataka Chief Secretary Issues Strict Circular

ಸಾಂದರ್ಭಿಕ ಚಿತ್ರ (ಎಡ) ಮತ್ತು ಸುತ್ತೋಲೆಯ ಪ್ರತಿ

ಬೆಂಗಳೂರು, ಜನವರಿ 24: ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳ ಪತ್ರದಲ್ಲೇನಿದೆ?

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರು ದಿನಾಂಕ 16-12-2025 ರಂದು ಬರೆದ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಈ ಮೂಲಕ ಸೂಚನೆಯನ್ನು ನೀಡಿದೆ ಎಂದು ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ

ಈ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವು ತಿಂಗಳ ಹಿಂದೆ ಫೈಜಾನ್‌ ನನಗೆ ಹೊಡೆದ ಎಂಬ ಕಾರಣಕ್ಕೆ ನಾನು ಅವನನ್ನು ಕೊಲೆ ಮಾಡಿದೆ ಎಂದು ಹೇಳಿದ್ದಾನೆ. ಈ ಕೊಲೆಯಲ್ಲಿ ನನ್ನ ಕುಟುಂಬ ಅಥವಾ ಸ್ನೇಹಿತರ ಯಾವುದೇ ಪಾತ್ರ ಇಲ್ಲ ಎಂದು ಹೇಳಿದ್ದಾನೆ.

ನಾನು ಫೈಜಾನ್‌ನನ್ನು ವೈಯಕ್ತಿಕ ದ್ವೇಷದಿಂದ ಕೊಂದೆ. ಇದರಲ್ಲಿ ನನ್ನ ತಂದೆಯ ಯಾವುದೇ ಪಾತ್ರವಿಲ್ಲ, ನನ್ನ ಕುಟುಂಬ ಅಥವಾ ಸ್ನೇಹಿತರಿಗೆ ಯಾವುದೇ ಸಂಬಂಧವಿಲ್ಲ. ನನ್ನ ಮನೆಯವರ ಮಾತು ಕೇಳಿ ಆತನನ್ನು ಕೊಂದಿಲ್ಲ. ಹಾಗೂ ಈ ಕೊಲೆಯನ್ನು ಹಣಕ್ಕಾಗಿ ಮಾಡಿಲ್ಲ. ನಾಲ್ಕು ತಿಂಗಳ ಹಿಂದೆ ನನಗೆ ಕಪಾಳಮೋಕ್ಷ ಮಾಡಿದ್ದ, ಆ ಕಾರಣಕ್ಕೆ ಕೋಪಗೊಂಡು ನಾನು ಕೊಲೆ ಮಾಡಿದ್ದಾನೆ. ಈ ವಿಷಯವು ಹಣಕ್ಕೆ ಸಂಬಂಧಿಸಿದೆ ಎಂಬ ಫೈಜಾನ್ ಅವರ ಸಹೋದರನ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾನೆ.

ಫೈಜಾನ್​​ ಅಣ್ಣ ಹೇಳಿರುವ ಪ್ರಕಾರ, ನನ್ನ ತಮ್ಮನ್ನು ಹಣಕ್ಕಾಗಿ ಕೊಲೆ ಮಾಡಿದ್ದಾರೆ. ಇದರಲ್ಲಿ ಕೊಲೆಗಾರನ ತಂದೆ, ಸ್ನೇಹಿತರ ಕೈವಾಡ ಇದೆ ಎಂದು ಹೇಳಿದ್ದಾರೆ. ಹಣಕ್ಕಾಗಿ ತನ್ನ ತಮ್ಮ ಜತೆಗೆ ಕೊಲೆಗಾರನ ತಂದೆ ಜಗಳ ಮಾಡಿದ್ದಾರೆ. ಈ ಜಗಳ ನಂತರವೇ ತಮ್ಮನ ಕೊಲೆಯಾಗಿದೆ. ಕೊಲೆಗಾರ ಹಾಗೂ ಆತನ ತಂದೆ ಈಗಲೇ ಬಂಧಿಸಬೇಕು ಎಂದು ಫೈಜಾನ್ ಸಹೋದರ ಸಲ್ಮಾನ್​​ ಹೇಳಿದ್ದಾರೆ. ಫೈಜಾನ್ ಸಾಲ ಪಡೆದಿದ್ದ, ಮರುಪಾವತಿಸಲು ಸಾಧ್ಯವಾಗದಿದ್ದಾಗ, ತಂದೆ ಮತ್ತು ಮಗ ನಮ್ಮ ಮನೆಗೆ ಬಂದು ಜಗಳವಾಡಿದ್ದಾರೆ. ಈ ಬಗ್ಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಗುರುವಾರ ರಾತ್ರಿ 10:28 ರ ಸುಮಾರಿಗೆ ಮೌಜ್‌ಪುರದ ಮಿಸ್ಟರ್ ಕಿಂಗ್ ಲೌಂಜ್ ಮತ್ತು ಕೆಫೆಯಲ್ಲಿ ವೆಲ್ಕಮ್ ಪ್ರದೇಶದ ನಿವಾಸಿ ಫೈಜಾನ್ ಅವರನ್ನು ಗುಂಡಿಕ್ಕಿ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಗಂಭೀರವಾಗಿ ಗಾಯಗೊಂಡಿದ್ದ ಫೈಜಾನ್ ಅನ್ನು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಆಸ್ಪತ್ರೆಗೆ ಕರೆದೊಯ್ಯುವಾಗಲೇ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೂರು ಗುಂಡುಗಳು ತನ್ನ ಸಹೋದರನಿಗೆ ತಗುಲಿದೆ. ಒಂದು ಅವನ ತಲೆಗೆ ಹಾಗೂ ಎರಡು ಎದೆಗೆ ಹೊಕ್ಕವು, ಅವನ ಕೈಯಲ್ಲಿ ಗಾಯದ ಗುರುತು ಕೂಡ ಇದೆ ಸಲ್ಮಾನ್​​ ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!

ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 12:31 pm, Sat, 24 January 26

Source link

‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ – Kannada News | Siddaramaiah Wishes Landlord Movie He will Watch Duniya Vijay Movie

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link