Headlines

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು? – Kannada News | Janardhan Reddy Model House Fire Case Takes unexpected Turn, Minors Detained Over Reels Angle

ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಬೆಂಕಿ ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ (Ballari) ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhan Reddy) ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್…

Read More

India Test Squad: ಭಾರತ ಟೆಸ್ಟ್ ತಂಡ ಪ್ರಕಟ – Kannada News | India women’s squad for Australia Test Series

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್​ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್​ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್…

Read More

ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ: ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣದ ಭರವಸೆ – Kannada News | Indian Aviation Soars: Economic Growth and 350 New Airports by 2047, Connecting Tier 2 Cities

ದೆಹಲಿ,ಜ.24: ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ (India aviation market) ಹೊರಹೊಮ್ಮಿದೆ. ಅಮೇರಿಕಾ ಮತ್ತು ಚೀನಾದ ನಂತರ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ವಿಮಾನ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ವಿಮಾನಯಾನ ಕ್ಷೇತ್ರದ ಭವಿಷ್ಯದ ಬಗ್ಗೆ ಅತ್ಯಂತ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ತುಂಬುವ (2047 –…

Read More

ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ – Kannada News | Colors Kannada Celebrates 12th Year Anubandha Awards with Serial Artist and Stars

ಕಳೆದ ವಾರ ಬಿಗ್ ಬಾಸ್ (Bigg Boss) ಫಿನಾಲೆ ಪೂರ್ಣಗೊಂಡಿದೆ. ವೀಕೆಂಡ್​​​ನಲ್ಲಿ ಸುದೀಪ್ ಅವರ ಎಪಿಸೋಡ್ ನೋಡೋಕೆ ಸಿಗೋದಿಲ್ಲವಲ್ಲ ಎಂದು ವೀಕ್ಷಕರು ಬೇಸರದಲ್ಲಿ ಇದ್ದರು. ಆದರೆ, ಕಲರ್ಸ್ ಕನ್ನಡ ವೀಕ್ಷಕರು ಬೇಸರ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇಂದಿನಿಂದ ಮೂರು ದಿನ ಅಂದರೆ ಜನವರಿ 24, 25 ಮತ್ತು 26ರಂದು 12ನೇ ವರ್ಷದ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಸಂಜೆ 7ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆ ಕಲಾವಿದರ ಜೊತೆಗೆ ಹಿರಿತೆರೆ ದಿಗ್ಗಜರ ಸಮಾಗಮ ಆಗಲಿದೆ. ‘ಅನುಬಂಧ ಅವಾರ್ಡ್ಸ್’…

Read More

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಬಲವಾಯ್ತು ಅನುಮಾನ – Kannada News | Threat, abuse to woman official: Is a Powerful Minister Shielding Congress Leader Rajeev Gowda? Doubts Grow

ಪೌರಾಯುಕ್ತೆಗೆ ನಿಂದನೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರಾ ಪ್ರಭಾವಿ ಸಚಿವ? ಚಿಕ್ಕಬಳ್ಳಾಪುರ, ಜನವರಿ 24: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ…

Read More

ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ – Kannada News | Chicken Price Hike Shocks Non Veg Lovers in Bangalore Karnataka, Rates May Touch Rs 380 per Kg

ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್‌ವೆಜ್ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರ ಪಟ್ಟಿಯಲ್ಲಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು, ವಿಶೇಷವಾಗಿ ವಿದೌಟ್ ಸ್ಕಿನ್ ಚಿಕನ್ ತಿನ್ನುವವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ಲಭ್ಯವಿದ್ದರೆ, ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ…

Read More

Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Tortoise Ring Astrology: Benefits, Wearing Rules and Zodiac Signs Who Should Avoid It

ಆಮೆ ಉಂಗುರವು (Tortoise Ring) ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲ್ಪಟ್ಟಿದ್ದು, ಸಂಪತ್ತು, ಸಮೃದ್ಧಿ, ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆಯಿದೆ, ಇದು ವಿಷ್ಣುವಿನ ಕೂರ್ಮಾವತಾರದ ಸಂಕೇತವಾಗಿದೆ. ಆಮೆ ಉಂಗುರವನ್ನು ಧರಿಸುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ, ಇದು ಜೀವನದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಆಮೆ ಉಂಗುರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ರತ್ನಶಾಸ್ತ್ರದ ಪ್ರಕಾರ, ಆಮೆ ಉಂಗುರಗಳು ಕೆಲವು ರಾಶಿಗಳಿಗೆ ಶುಭವಲ್ಲ….

Read More

4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’ – Kannada News | Sunrisers Eastern Cape have made it to their 4th finals in 4 seasons

ಸೌತ್ ಆಫ್ರಿಕಾ ಟಿ20 ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ಈ ಬಾರಿ ಕೂಡ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಕಣಕ್ಕಿಳಿಯಲಿದೆ. ಅಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಪ್ರತಿ ಸೀಸನ್​ನಲ್ಲೂ ಫೈನಲ್​ ಆಡಿದ ವಿಶೇಷ ದಾಖಲೆಯೊಂದನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತನ್ನದಾಗಿಸಿಕೊಂಡಿದೆ. 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ಯಾಪಿಟಲ್ಸ್ ಪಡೆಯನ್ನು…

Read More

‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ – Kannada News | 45 Movie Title Controversy: Actor Mitra Claims Ownership, Expresses Disappointment

ಅರ್ಜುನ್ ಜನ್ಯ (Arjun Janya) ನಿರ್ದೇಶನದ, ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಗೂ ಬಂದಿದೆ. ‘45’ ಅನ್ನೋದು ಸಿನಿಮಾದ ಕಥೆಗೆ ಹೆಚ್ಚು ಸೂಕ್ತ. ಹೀಗಾಗಿ, ಈ ಟೈಟಲ್ ಇಡಲಾಗಿದೆ. ಈಗ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ಸಿನಿಮಾ ಹಾಗೂ ಕಿರುತೆರೆ ಕಲಾವಿದ ಮಿತ್ರ ಮಾತನಾಡಿದ್ದಾರೆ. ‘ಟೈಟಲ್ ನನ್ನದಾಗಿತ್ತು, ಅವರಿಗೆ ನೀಡಿದ್ದೇನೆ’ ಎಂದಿದ್ದಾರೆ. ಸಿನಿಮಾ ವೀಕ್ಷಿಸಿದವರಿಗೆ ‘45’ ಎಂಬ ಟೈಟಲ್ ಯಾಕೆ…

Read More

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು! – Kannada News | Government Officials Must Answer Calls from Elected Representatives, Karnataka Chief Secretary Issues Strict Circular

ಸಾಂದರ್ಭಿಕ ಚಿತ್ರ (ಎಡ) ಮತ್ತು ಸುತ್ತೋಲೆಯ ಪ್ರತಿ ಬೆಂಗಳೂರು, ಜನವರಿ 24: ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ…

Read More