Headlines

ಬಾಯಲ್ಲಿ ಹೇಳಿದ್ದು 7,000 ಕೋಟಿ ರೂ, ಅಕೌಂಟ್​ಗೆ ಬಿದ್ದದ್ದು ಸೊನ್ನೆ; ಇದು ಟ್ರಂಪ್ ಪೀಸ್ ಫಂಡ್​ನ 4 ತಿಂಗಳ ಕಥೆ

ವಾಷಿಂಗ್ಟನ್, ಮೇ 28: ಯುದ್ಧಪೀಡಿತ ಗಾಜಾ ಪಟ್ಟಿಯ ಪುನರ್ನಿರ್ಮಾಣಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರಿ ಸದ್ದುಗದ್ದಲದೊಂದಿಗೆ ಆರಂಭಿಸಿದ್ದ ‘ಬೋರ್ಡ್ ಆಫ್ ಪೀಸ್’ (Board of Peace) ಯೋಜನೆ ಸದ್ಯಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಜಾಗತಿಕ ನಾಯಕರು ಈ ನಿಧಿಗೆ ಬಿಲಿಯನ್ ಗಟ್ಟಲೆ ಡಾಲರ್ ನೆರವು ನೀಡುವುದಾಗಿ ಭರವಸೆ ನೀಡಿಯೂ ಇದ್ದರು. ಯೋಜನೆ ಆರಂಭವಾಗಿ ನಾಲ್ಕು ತಿಂಗಳು ಕಳೆದರೂ ಇದರ ಅಧಿಕೃತ ಖಾತೆಗೆ ಕೇವಲ ‘ಶೂನ್ಯ’ (Zero) ಹಣ ಜಮೆಯಾಗಿದೆ ಎಂದು ‘ಫೈನಾನ್ಷಿಯಲ್ ಟೈಮ್ಸ್’ (FT) ವರದಿ…

Read More

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ…

Read More

ಬಿಹಾರ: ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವು ಮಂದಿ ಸಾವು

ಪಾಟ್ನಾ, ಮೇ 28: ಉಮಾನಾಥ್ ಗಂಗಾ ಘಾಟ್ ಬಳಿ ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಈಗಾಗಲೇ ಇಬ್ಬರ ಶವ ಸಿಕ್ಕಿದೆ. ದೋಣಿಯಲ್ಲಿ ಸುಮಾರು 14 ರಿಂದ 15 ಜನರಿದ್ದರು.ಸುಮಾರು ಏಳು ಜನರು ಮುಳುಗಿ ಹೋಗಿರುವ ಶಂಕೆ ಇದೆ. ಇತರರನ್ನು ಮತ್ತೊಂದು ದೋಣಿ ಬಳಸಿ ರಕ್ಷಿಸಲಾಗಿದೆ. ಇಲ್ಲಿಯವರೆಗೆ, ಎಷ್ಟು ಜನರು ಮುಳುಗಿದ್ದಾರೆಂದು ದೃಢಪಟ್ಟಿಲ್ಲ. ಬಲವಾದ ಗಾಳಿಯಿಂದಾಗಿ ಸಣ್ಣ ದೋಣಿ ಪಲ್ಟಿಯಾಗಿದೆ.ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸುತ್ತಿದ್ದು, ಶೋಧ ಕಾರ್ಯ ಆರಂಭವಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

‘ದಯವಿಟ್ಟು ದೃಷ್ಟಿ ತೆಗೆಯಿರಿ’; ಸೂರ್ಯವಂಶಿ ಪಾಲಕರಿಗೆ ಆರ್​​. ಅಶ್ವಿನ್ ಕೋರಿಕೆ

ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಕ್ಷರಶಃ ಅಬ್ಬರಿಸಿದ್ದಾರೆ. ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 97 ರನ್ ಸಿಡಿಸಿದ ವೈಭವ್, ಎಸ್‌ಆರ್‌ಹೆಚ್ ಬೌಲಿಂಗ್ ಪಡೆಯನ್ನು ಧೂಳೀಪಟ ಮಾಡಿದರು. ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದ ಅತ್ಯಂತ ವೇಗದ ಶತಕದ ದಾಖಲೆಯನ್ನು ಮಿಸ್ ಮಾಡಿಕೊಂಡರೂ, ಈ ಹುಡುಗನ ಆಟಕ್ಕೆ ಇಡೀ ಕ್ರಿಕೆಟ್ ಜಗತ್ತೇ ಫಿದಾ…

Read More

ಶಾರುಖ್ ಖಾನ್, ಅಕ್ಷಯ್ ಕುಮಾರ್ ನನಗೆ ಎಚ್ಚರಿಕೆ ನೀಡಿದ್ದರು: ಹನಿ ಸಿಂಗ್

ಭಾರತದ ಸ್ಟಾರ್ ರ್ಯಾಪ್ ಗಾಯಕ ಹನಿ ಸಿಂಗ್ (Honey Singh) ಇತ್ತೀಚೆಗಷ್ಟೆ ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿ ತರುಣ್ ಚಾಗ್ ಅವರನ್ನು ಭೇಟಿ ಆಗಿದ್ದರು. ಈ ವೇಳೆ ಅವರು ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಯ್ತು. ಖುದ್ದು ಹನಿಸಿಂಗ್ ತಮ್ಮ ಹಾಡುಗಳಲ್ಲಿ ಡ್ರಗ್ಸ್ ಬಳಕೆಯನ್ನು ಗ್ಲಾಮರಸೈಸ್ ಮಾಡಿ ತೋರಿಸುತ್ತಾರೆ ಈಗ ಅವರೇ ಮಾದಕ ವಸ್ತು ವಿರುದ್ಧ ಜಾಗೃತಿ ರಾಯಭಾರಿ ಆಗಿದ್ದಾರೆ ಎಂದು ಹಲವರು ಟೀಕೆ…

Read More

Video: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ

ಅಜ್ಮೀರ್, ಮೇ 28: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕುಟುಂಬದ ನಾಲ್ವರು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಬೊರಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ, ಗ್ರಾಮದ ಮಾಜಿ ಮುಖ್ಯಸ್ಥ, ಅವರ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜಿಲ್ಲಾ ಪರಿಷತ್ ಸದಸ್ಯರೊಬ್ಬರು ಪ್ರಯಾಣಿಸುತ್ತಿದ್ದ ಕಾರಿಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಾಜಿ ಸರಪಂಚ್ ರಾಮಸಿಂಗ್ ಚೌಧರಿ ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿ ಮತ್ತು ಜಿಲ್ಲಾ ಪರಿಷತ್ ಸದಸ್ಯೆ ಪುಸಿ…

Read More

ಬೆಂಗಳೂರು ಮೆಟ್ರೋಗೆ ‘ಬಂಗಾಳ ಎಲೆಕ್ಷನ್ ಶಾಕ್’: 10 ಸಾವಿರ ಕಾರ್ಮಿಕರು ನಾಪತ್ತೆ, ಪಿಂಕ್-ಬ್ಲೂ ಲೈನ್ ಕಾಮಗಾರಿ ಬಂದ್!

ಬೆಂಗಳೂರು, ಮೇ 28: ನಗರದ ಜನತೆಯ ಬಹುನಿರೀಕ್ಷಿತ ನಮ್ಮ ಮೆಟ್ರೋ (BMRCL) ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳ ಉದ್ಘಾಟನೆಗೆ ಪಶ್ಚಿಮ ಬಂಗಾಳದ ಚುನಾವಣೆ ದೊಡ್ಡ ಮಟ್ಟದ ಬ್ರೇಕ್ ಹಾಕಿದೆ. ಮತದಾನ ಮಾಡಲು ಸ್ವಗ್ರಾಮಗಳಿಗೆ ತೆರಳಿದ ಸುಮಾರು 10 ಸಾವಿರಕ್ಕೂ ಹೆಚ್ಚು ಬಂಗಾಳಿ ಕಾರ್ಮಿಕರು ಇನ್ನು ಬೆಂಗಳೂರಿಗೆ ಮರಳಿ ಬಾರದ ಹಿನ್ನೆಲೆಯಲ್ಲಿ ಮೆಟ್ರೋ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ. ಮುಖ್ಯಾಂಶಗಳು ಬಂಗಾಳ ಎಲೆಕ್ಷನ್‌ಗೆ ಹೋದ ಹತ್ತು ಸಾವಿರ ಮೆಟ್ರೋ ಕಾರ್ಮಿಕರು ಮರಳಿ ಬಂದಿಲ್ಲ. ಕೆಲಸಗಾರರಿಲ್ಲದೆ ಪಿಂಕ್…

Read More

Guru Sanchara 2026: ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕುಂಭ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಕುಂಭ ರಾಶಿಯವರಿಗೆ 2026ರ ಗುರು ಸಂಚಾರವು ಮಿಶ್ರ ಫಲಗಳನ್ನು ನೀಡಲಿದೆ. ಶನಿಯ ಅಧಿಪತ್ಯದಲ್ಲಿರುವ ಕುಂಭ ರಾಶಿಯವರಿಗೆ ಕಡೆಯ ಸಾಡೆ ಸಾತಿ ಅವಧಿಯಿದೆ. ಗುರುವು ಐದನೇ ಮನೆಯಿಂದ ಆರನೇ ಮನೆಗೆ ಸಂಚಾರ ಮಾಡುವುದರಿಂದ ರೋಗ ಮತ್ತು ಸಾಲದ ವಿಚಾರದಲ್ಲಿ ಜಾಗ್ರತೆ ಅಗತ್ಯ. ಆರ್ಥಿಕವಾಗಿ ಉದಾಸೀನತೆ ಮತ್ತು ದುಂದುವೆಚ್ಚವನ್ನು…

Read More

Video: ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 28: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ….

Read More

ಮಾಜಿ ಲವರ್ ಮನೆಗೆ ಹೋಗಿ ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಬೆಂಗಳೂರು, ಮೇ 28: ಹಳೇ ಪ್ರೇಮದ ನೆನಪಿನಲ್ಲಿ ಮಾಜಿ ಪ್ರೇಯಸಿಯನ್ನು (Ex Lover) ಭೇಟಿಯಾಗಲು ಆಕೆಯ ಮನೆಗೆ ತೆರಳಿದ್ದ ಯುವಕನೊಬ್ಬ ಭೀಕರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೇಯಸಿಯ ಪತಿ ಹಾಗೂ ಆಕೆಯ ಕುಟುಂಬಸ್ಥರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಾಜಿ ಪ್ರೇಯಸಿ ಮನೆಗೆ ಹೋದ ಮೊಹಮ್ಮದ್ ಖಾಸಿಂ ಕೊಲೆಯಾಗಿದ್ದಾನೆ. ಹಳೇ ಪ್ರೇಮಿಯ ಆಗಮನದಿಂದ ಕೆರಳಿದ ಪತಿ ಮತ್ತು ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು,…

Read More