Video: ಡಿಕೆ ಶಿವಕುಮಾರ್ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 28: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ….