Category Archives: Blog

Your blog category

IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209 ರನ್ ಕಲೆಹಾಕಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಇಷ್ಟು ಬೃಹತ್ ಮೊತ್ತವನ್ನು ಬೆನ್ನಟ್ಟಿದ ದಾಖಲೆಯನ್ನು ನಿರ್ಮಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ಪಡೆಯಿತು. ಡೆವೊನ್ ಕಾನ್ವೇ ಮತ್ತು ಟಿಮ್ ಸೀಫರ್ಟ್ ಪವರ್‌ಪ್ಲೇನಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು. ನಂತರ ರಚಿನ್ ರವೀಂದ್ರ 26 ಎಸೆತಗಳಲ್ಲಿ 44 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ನಾಯಕ ಮಿಚೆಲ್ ಸ್ಯಾಂಟ್ನರ್ ಕೂಡ 27 ಎಸೆತಗಳಲ್ಲಿ ಅಜೇಯ 47 ರನ್ ಗಳಿಸಿದರು. ಗ್ಲೆನ್ ಫಿಲಿಪ್ಸ್ 19 ರನ್ ಮತ್ತು ಡ್ಯಾರಿಲ್ ಮಿಚೆಲ್ 18 ರನ್​ಗಳ ಕಾಣಿಕೆ ನೀಡಿದರು. ಪರಿಣಾಮವಾಗಿ, ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 208 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಮತ್ತೊಂದೆಡೆ, ಭಾರತದ ಪರ ಬೌಲಿಂಗ್​ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ ಎರಡು ವಿಕೆಟ್‌ಗಳನ್ನು ಪಡೆದರೆ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು. ಆದಾಗ್ಯೂ, ಅರ್ಷದೀಪ್ ಸಿಂಗ್ ತಮ್ಮ ನಾಲ್ಕು ಓವರ್‌ಗಳಲ್ಲಿ 53 ರನ್‌ಗಳನ್ನು ಬಿಟ್ಟುಕೊಟ್ಟು ವಿಕೆಟ್ ಪಡೆಯದೆ ದುಬಾರಿ ಎನಿಸಿಕೊಂಡರು.

Published On – 10:32 pm, Fri, 23 January 26

Source link

Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ – Kannada News | Sunny Deol Varun Dhawan starrer Border 2 movie gets mixed reviews on social media

ಬಿಡುಗಡೆಗೂ ಮುನ್ನವೇ ‘ಬಾರ್ಡರ್ 2’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಟ್ರೇಲರ್ ಮತ್ತು ಹಾಡಿನಲ್ಲಿ ವರುಣ್ ಧವನ್ (Varun Dhawan) ಅವರ ನಟನೆಯನ್ನು ನೋಡಿ ಕೆಲವರು ಟ್ರೋಲ್ ಮಾಡಿದ್ದರು. ಜನವರಿ 23ರಂದು ಈ ಸಿನಿಮಾ ಬಿಡುಗಡೆ ಆಗಿದೆ. ದೇಶಭಕ್ತಿ ಕಥಾಹಂದರ ಇರುವ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರಲ್ಲಿ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿತ್ತು. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಹುತೇಕ ಪ್ರೇಕ್ಷಕರಿಗೆ ‘ಬಾರ್ಡರ್ 2’ (Border 2) ಸಿನಿಮಾ ಇಷ್ಟ ಆಗಿದೆ. ಕೆಲವರಿಗೆ ಇಷ್ಟ ಆಗಿಲ್ಲ. ಹಾಗಾಗಿ ಈ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದಿದೆ.

1997ರಲ್ಲಿ ‘ಬಾರ್ಡರ್’ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರದ ಸೀಕ್ವೆಲ್ ಆಗಿ ಈಗ ‘ಬಾರ್ಡರ್ 2’ ರಿಲೀಸ್ ಆಗಿದೆ. ಅನುರಾಗ್ ಸಿಂಗ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ, ದಿಲ್ಜಿತ್ ದೊಸಾಂಜ್, ಮೋನಾ ಸಿಂಗ್, ಸೋನಂ ಭಾಜ್ವ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. 1971ರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಆಧರಿಸಿ ‘ಬಾರ್ಡರ್ 2’ ಸಿನಿಮಾ ಸಿದ್ಧವಾಗಿದೆ. ‘ಬಾರ್ಡರ್ ಚಿತ್ರದ ಪರಂಪರೆಯನ್ನು ಬಾರ್ಡರ್ 2 ಸಿನಿಮಾ ಮುಂದುವರಿಸಿದೆ. ಕೊನೇ ದೃಶ್ಯದ ತನಕ ರೋಮಾಂಚನ ಆಗುತ್ತದೆ. ಸಿನಿಮಾ ತುಂಬಾ ಚೆನ್ನಾಗಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್ ಮಾಡಿದ್ದಾರೆ.

‘ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ಪರಿಣಾಮಕಾರಿಯಾದ ಸಂಭಾಷಣೆಗಳಿವೆ. ಬಿಗಿಯಾದ ನಿರೂಪಣೆಯಿಂದಾಗಿ ಇದು ನೋಡಲೇಬೇಕಾದ ಸಿನಿಮಾ ಆಗಿದೆ’ ಎಂದು ಪ್ರೇಕ್ಷಕರು ಹೊಗಳಿದ್ದಾರೆ. ದೇಶಭಕ್ತಿಯ ಕಹಾನಿಯನ್ನು ಜನರು ಇಷ್ಟಪಡುತ್ತಿದ್ದಾರೆ. ಬಹುತಾರಾಗಣ ಇರುವ ಸಿನಿಮಾ ಆದ್ದರಿಂದ ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಂಡಿದೆ.

ಕೆಲವರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ‘ಈ ಮೊದಲು ಬಂದಿದ್ದ ಬಾರ್ಡರ್ ಸಿನಿಮಾದಲ್ಲಿ ಸೈನಿಕರ ಮತ್ತು ಕುಟುಂಬದವರ ನೋವಿನ ಕಥೆಯನ್ನು ಯುದ್ಧದ ಹಿನ್ನೆಲೆಯಲ್ಲಿ ತೋರಿಸಲಾಗಿತ್ತು. ಆದರೆ ಬಾರ್ಡರ್ 2 ಕಳಪೆ ವಿಎಫ್​ಎಕ್ಸ್ ಹೊಂದಿರುವ ಒಂದು ಯುದ್ಧದ ಸಿನಿಮಾ ಅಷ್ಟೇ’ ಎಂದು ಪ್ರೇಕ್ಷಕರೊಬ್ಬರು ಈ ಸಿನಿಮಾವನ್ನು ತೆಗಳಿದ್ದಾರೆ.

ಮೂಲ ಸಿನಿಮಾದ ಮೋಡಿಯನ್ನು ಮರುಸೃಷ್ಟಿ ಮಾಡುವಲ್ಲಿ ‘ಬಾರ್ಡರ್ 2’ ಚಿತ್ರ ವಿಫಲವಾಗಿದೆ. ಕಥೆ ಕಳಪೆ ಆಗಿದೆ. ಸುಲಭವಾಗಿ ಊಹಿಸಬಹುದಾದ ಯುದ್ಧದ ಸನ್ನಿವೇಶಗಳು ಇವೆ. ಬಲವಂತಹ ದೇಶಭಕ್ತಿ, ಕಳಪೆ ವಿಎಫ್​ಎಕ್ಸ್ ಇದೆ. ಹಾಡಿಗಳು ಚೆನ್ನಾಗಿವೆ. ಆದರೆ ಮನಮುಟ್ಟುವಂತಿಲ್ಲ’ ಎಂದು ಕೂಡ ನೆಟ್ಟಿಗರೊಬ್ಬರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

‘ಧುರಂಧರ್’ ಸಿನಿಮಾ ಬಿಡುಗಡೆ ಆದ ಬಳಿಕ ‘ಬಾರ್ಡರ್ 2’ ಸಿನಿಮಾ ಬಂದಿದೆ. ಎರಡರಲ್ಲೂ ದೇಶಭಕ್ತಿ ಕಥಾಹಂದರ ಇದೆ. ‘ಧುರಂದರ್’ ಸಿನಿಮಾದಷ್ಟು ನಿರೀಕ್ಷೆಯನ್ನು ಇಟ್ಟುಕೊಂಡು ಕೆಲವರು ‘ಬಾರ್ಡರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಅಂಥವರಿಗೂ ಈ ಸಿನಿಮಾ ಇಷ್ಟ ಆಗಿಲ್ಲ. ಆದರೆ ಸನ್ನಿ ಡಿಯೋಲ್ ಅವರ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ – Kannada News | Karnataka School Safety: New Education Department Guidelines for Child Protection During Events

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ.

ಮಾರ್ಗಸೂಚಿಗಳು ಏನೇನು?

  • ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ ಮಕ್ಕಳನ್ನು ಹತ್ತಿಸಬಾರದು.
  • ಮಕ್ಕಳ ಕವಾಯತು ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಆಗಿಂದಾಗ್ಗೆ ಪರಿಶೀಲಿಸುವುದು.

ಇದನ್ನೂ ಓದಿ: ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ಖಾಸಗಿ ಬಸ್​​​ಗಳಿಂದ ದುಪ್ಪಟ್ಟು ದರ ವಸೂಲಿ

  • ಮಕ್ಕಳನ್ನು ಕಾರ್ಯಕ್ರಮ, ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳ ಬಗ್ಗೆ ಪರಿಶೀಲಿಸಬೇಕು.
  • ವಾಹನ ಚಾಲಕರು ವೇಗಮಿತಿಯಲ್ಲಿ ಚಲಿಸುವಂತೆ ಸೂಚನೆ ನೀಡುವುದು. ಪ್ರಮುಖವಾಗಿ ಚಾಲಕರು ಮದ್ಯಪಾನ ಮಾಡಿರದ ಬಗ್ಗೆ ಖಚಿತಪಡಿಸಿಕೊಳ್ಳುವುದು ಮತ್ತು ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕರೆದುಕೊಂಡು ಹೋಗಬಾರದು.
  • ಕಾರ್ಯಕ್ರಮ ನಡೆಸುವ ಸ್ಥಳಗಳಲ್ಲಿ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
  • ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬಾರದಂತೆ ವಿದ್ಯುತ್ ತಂತಿಗಳನ್ನು ಅಳವಡಿಸಲು ತಂತ್ರಜ್ಞರಿಗೆ ಸೂಚಿಸುವುದು.
  • ವಿದ್ಯುತ್ ತಂತಿಗಳು ಇರುವಲ್ಲಿ ಮಳೆ ನೀರು ಸೋರದಂತೆ ಮತ್ತು ಇತರೆ ಯಾವುದೇ ಮೂಲದಿಂದ ನೀರು ಹರಿಯದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
  • ಮಕ್ಕಳಿಗೆ ನೀಡುವ ನೀರು, ಪಾನೀಯ, ಆಹಾರದ ಶುಚಿತ್ವದ ಬಗ್ಗೆ ಪರಿಶೀಲಿಸುವುದು. ಆಹಾರ ತಯಾರಿಸುವ ಸ್ಥಳಗಳಿಗೆ ಮಕ್ಕಳ ಪ್ರವೇಶವನ್ನು ನಿರ್ಬಂಧಿಸುವುದು.
  • ಗ್ಯಾಸ್ ಹಾಗೂ ಒಲೆಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿ ನಿಗಾವಹಿಸುವುದು. ಯಾವುದೇ ರೀತಿ ಬೆಂಕಿ ಅವಘಡವಾಗದಂತೆ ಕ್ರಮವಹಿಸುವುದು.
  • ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಮಾಡಲು ಸೂಚನಾ ಫಲಕಗಳನ್ನು ಅಳವಡಿಸುವುದು. ಕಾರ್ಯಕ್ರಮದ ಸ್ಥಳದಿಂದ ಕನಿಷ್ಟು 100 ಮೀಟರ್ ದೂರದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವುದು.

ಇದನ್ನೂ ಓದಿ: ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ

  • ಅನಿರೀಕ್ಷಿತವಾಗಿ ಸಂಭವಿಸಬಹುದಾದ ಸನ್ನಿವೇಶಗಳನ್ನು ಎದುರಿಸುವ ಕುರಿತು ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು.
    ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವುದು.
  • ಸ್ಥಳೀಯ ಆಡಳಿತಗಳು ಮಕ್ಕಳ ಸುರಕ್ಷತೆ ಕುರಿತು ಗಮನ ಹರಿಸುವುದು. ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸುವುದು. ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಾಶ್ ಮುಚ್ಚಲ್ – Kannada News | Smriti Mandhana Wedding Canceled: Friend Reveals Palak Muchhal’s Alleged Infidelity and Fraud

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರೂ ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳ ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ ಯಾವ ಕಾರಣಕ್ಕೆ ಮದುವೆ ರದ್ದಾಯಿತು ಎಂಬುದರ ಬಗ್ಗೆ ಇಬ್ಬರೂ ಖಚಿತವಾಗಿ ಏನನ್ನು ಹೇಳಿರಲಿಲ್ಲ. ಆದರೀಗ ಸ್ಮೃತಿ ಮಂಧಾನ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ಮದುವೆ ನಿಲ್ಲಲು ಕಾರಣವೇನು ಮತ್ತು ಮದುವೆಯ ಹಿಂದಿನ ದಿನ ಏನೆಲ್ಲ ನಡೆಯಿತು ಎಂಬುದನ್ನು ವಿವರಿಸಿದ್ದಾರೆ.

ಮದುವೆ ರದ್ದಾಗಲು ಇದೇ ಕಾರಣ?

ಮದುವೆ ಮನೆಯಲ್ಲಿ ಅಂದು ನಡೆದಿದ್ದೇನು ಎಂಬುದನ್ನು ವಿವರಿಸಿರುವ ವಿದ್ಯಾನ್ ಮಾನೆ, ‘ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು’ ಎಂದಿದ್ದಾರೆ.

ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿದ್ಯಾನ್ ಮಾನೆ, ‘ಪಲಾಶ್ ಚಿತ್ರದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ. ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್​ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.

ನ. 23 ರಂದು ಮದುವೆ ನಡೆಯಬೇಕಿತ್ತು

ಮೇಲೆ ಹೇಳಿದಂತೆ ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಆದಾಗ್ಯೂ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು. ಇದೀಗ ಸ್ಮೃತಿ ಅವರ ಬಾಲ್ಯದ ಗೆಳೆಯನ ಈ ರೀತಿಯ ಹೇಳಿಕೆ ಎಲ್ಲರನ್ನೂ ಆಘಾತಕ್ಕೊಳಗಾಗುವಂತೆ ಮಾಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:14 pm, Fri, 23 January 26

Source link

ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ – Kannada News | Bengaluru Ancient GBA Aadishakti Temple Reborn: Employees Fund 1.6 Cr Renovation

ಬೆಂಗಳೂರು, ಜನವರಿ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಇಂದು ಲೋಕಾರ್ಪಣೆಗೊಂಡಿದೆ. ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಜಿಬಿಎ ಕೇಂದ್ರ ಕಚೇರಿ ಕಂಗೊಳಿಸಿತು.

800 ವರ್ಷಗಳ ಸುದೀರ್ಘ ಇತಿಹಾಸ

ಉದ್ಯಾನನಗರಿ ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಸರಿ ಸಮಾರು 800 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು, ಬೆಂಗಳೂರಿನ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದೆಂದು ಪ್ರಸಿದ್ಧಿ ಪಡೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಾಯ, ಸಹಕಾರ ಮತ್ತು ಬೆಂಬಲಗಳಿಂದ ಜೀರ್ಣೋದ್ಧಾರಗೊಂಡಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯದ ಉದ್ಘಾಟನೆ ಮತ್ತು ದೇವತಾ ಪೂಜಾ ಕಾರ್ಯಕ್ರಮಕ್ಕೆ ಮೂರು ದಿನಗಳವರೆಗೂ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: 8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ: ಲಕ್ಕುಂಡಿ ನೈಜ ಗತವೈಭವ ಈಗ ಆರಂಭ

ಕಾರ್ಯಕ್ರಮದಲ್ಲಿ ವಿವಿಧ ರೀತಿಯ ದೇವರ ಪ್ರತಿಷ್ಠಾಪನೆ ಮಾಡಲಾಗಿದ್ದು, ಜೊತೆಗೆ ಸಪ್ತಮಾತೃಕಾ ದುರ್ಗಾ, ಶ್ರೀ ಲಕ್ಷ್ಮೀ ಸರಸ್ವತಿ ಹೋಮ, ತತ್ವನ್ಯಾಸ ಕಾಲನ್ಯಾಸ ಹೋಮ, ಕಲಾ ಹೋಮ, ನವ ಚಂಡಿಕಾಯಾಗ, ನವ ಚಂಡಿಕಾ ಹೋಮ, ಕುಂಭಾಭಿಷೇಕ, ವಿಶೇಷ ದುರ್ಗಾ ದೀಪ ನಮಸ್ಕಾರ ಹಾಗೂ ದೇವತಾ ಕಾರ್ಯಕ್ರಮ ನಡೆಯಿತು.

ದೇವಾಲಯದ ಜೀರ್ಣೋದ್ದಾರದ ಮಹತ್ಕಾರ್ಯಕ್ಕಾಗಿ ಸಂಘದ ವತಿಯಿಂದ ಪ್ರತಿ ನೌಕರರಿಂದ ತಲಾ ಒಂದು ಸಾವಿರ ರೂ. ಕಟಾವಣೆ ಮಾಡಲಾಯಿತು ಮತ್ತು ಆರ್ಥಿಕವಾಗಿ ಸಹಾಯ ನೀಡಿ ಅಂದಾಜು 1 ಕೋಟಿ 60 ಲಕ್ಷ ರೂ. ಜೀರ್ಣೋದ್ಧಾರಕ್ಕೆ ನೌಕರರ ವರ್ಗದಿಂದ ದೇಣಿಗೆ ನೀಡಲಾಗಿದೆ. ಜೊತೆಗೆ ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ 20 ಲಕ್ಷ ರೂ ಉದಾರ ದೇಣಿಗೆ ನೀಡಿ ದೇವಸ್ಥಾನದ ನವೀಕರಣಕ್ಕೆ ಕೈಜೋಡಿಸಲಾಗಿದೆ.

ಇದನ್ನೂ ಓದಿ: Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಒಟ್ಟಾರೆಯಾಗಿ ಹಲವು ವರ್ಷಗಳಿಂದ ದೇವಸ್ಥಾನದ ಶಿಥಿಲಾ ವ್ಯವಸ್ಥೆ ಇಲ್ಲದೆ ಹಳೆ ದೇವಸ್ಥಾನ ಹಾಳಾಗಿತ್ತು. ಪ್ರತಿ ನೌಕರರಿಂದ ತಲಾ ಇಂತಿಷ್ಟು ಹಣವನ್ನು ನೀಡುವ ಮೂಲಕ ಆರ್ಥಿಕವಾಗಿ ಸಹಾಯ ನೀಡುವ ಮೂಲಕ ದೇವಸ್ಥಾನದ ನವೀಕರಣಕ್ಕೆ ಕೈಜೋಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:47 pm, Fri, 23 January 26

Source link

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ – Kannada News | Fans take selfies with BBK 12 Kavya Shaiva during jewellery shop inauguration

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata), ಶೋಭಾ ಕರಂದ್ಲಾಜೆ, ಅನುಷಾ ರೈ ಮುಂತಾದ ಸೆಲೆಬ್ರಿಟಿಗಳು ಆಗಮಿಸಿದ್ದರು. ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಿದ ಎಲ್ಲರಿಗೂ ಡಿಮ್ಯಾಂಡ್ ಹೆಚ್ಚಿದೆ. ಕಾವ್ಯಾ ಅವರು ಕಿರುತೆರೆ ಮತ್ತು ಸಿನಿಮಾಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ ಈಕೆ ತನ್ನ ಕನಸುಗಳನ್ನು ಸಾಕಾರಗೊಳಿಸುವ ಆಲೋಚನೆ ಮಾಡಲೂ ಬಿಡುವಿಲ್ಲದಂತಾಗಿತ್ತು. ಒಳ್ಳೆಯ ಹೆಂಡತಿ, ಒಳ್ಳೆಯ ಸೊಸೆ ಮತ್ತು ಒಳ್ಳೆಯ ತಾಯಿಯಾಗಲು ಈಕೆ ಶ್ರಮಿಸುತ್ತಿರುವಾಗ ಈಕೆಯ ಫ್ಯಾಷನ್ ಪದವಿ ಎಲ್ಲೋ ಧೂಳು ಹಿಡಿದು ಕೂತಿತ್ತು. ಅದೇನೇ ಆದರೂ ಈಕೆಯ ಗುರಿ ಈಡೇರಿಸುವ ಬಯಕೆಯಂತೂ ಎದೆಯೊಳಗೆ ಸುಪ್ತವಾಗಿ ಇಣುಕುತ್ತಲೇ ಇದ್ದದ್ದು ಹೌದು.

ನಾಲ್ಕು ಗೋಡೆಗಳ ಚೌಕಟ್ಟಿಗೆ ಸೀಮಿತವಾಗದ ಮನಸ್ಸು

ಮದುವೆಯ ನಂತರ, ದಿಶಾ ಗರ್ಗ್ ಅವರು ಕ್ರಮೇಣ ತಮ್ಮ ಗಂಡನ ಕುಟುಂಬಕ್ಕೆ ಸಂಪೂರ್ಣವಾಗಿ ಅರ್ಪಿಸಿಕೊಂಡರು. ಕಾಲ ಕಳೆದಂತೆ, ಅವರು ಅಪ್ಪಟ ಗೃಹಿಣಿಯೇ ಆದರು. ಅವರ ಗುರುತೇ ಗೃಹಿಣಿಯಾಯಿತು. ಮನೆಯ ನಾಲ್ಕು ಗೋಡೆಗಳ ಚೌಕಟ್ಟಿನೊಳಗೆ ಸೀಮಿತಗೊಳ್ಳುವುದು ಆಕೆಯ ಮನಸ್ಸಿನೊಳಗೆ ಎಲ್ಲೋ ಕಸಿವಿಸಿ ಮೂಡಿಸುತ್ತಿತ್ತು. ಮನೆಯ ನೆಲಮಾಳಿಗೆಯಲ್ಲಿ ಒಂದು ಸಣ್ಣ ಅಂಗಡಿ ತೆರೆಯುವ ಬಯಕೆಯನ್ನು ಆಕೆ ವ್ಯಕ್ತಪಡಿಸಿದಾಗ, ಕುಟುಂಬದಿಂದ ವಿರೋಧ ವ್ಯಕ್ತವಾಯಿತು.

ದಿಶಾ ಬ್ಯುಸಿನೆಸ್ ಪ್ರಯಾಣದ ಆರಂಭಿಕ ಹಂತ ಹೇಗಿತ್ತು ಗೊತ್ತಾ?

ಬ್ಯುಸಿನೆಸ್ ಆರಂಭಿಸಲು ಮನೆಯವರ ವಿರೋಧ ಬಂದಾಗ ದಿಶಾ ಗರ್ಗ್ ಅವರು ಚಾಣಾಕ್ಷ್ಯತೆಯಿಂದ ಪರಿಸ್ಥಿತಿ ನಿರ್ವಹಿಸುತ್ತಾರೆ. ತನ್ನ ಅತ್ತೆ ಮತ್ತು ಮಾವ ಅವರ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಕೇವಲ ಇಬ್ಬರು ಟೈಲರ್​ಗಳು ಹಾಗೂ ಬಹಳ ಸೀಮಿತ ಸಂಪನ್ಮೂಲದೊಂದಿಗೆ ದಿಶಾ ಅವರು ಟೈಲರ್ ಅಂಗಡಿ ಶುರು ಮಾಡುತ್ತಾರೆ. ಇಬ್ಬರು ಕೆಲಸಗಾರರೊಂದಿಗೆ ಶುರುವಾದ ಇದರಲ್ಲಿ ಈಗ 25 ಮಂದಿ ಕೆಲಸ ಮಾಡುತ್ತಿರುವ ಹಂತಕ್ಕೆ ಬ್ಯುಸಿನೆಸ್ ಬೆಳೆದಿದೆ. ದೊಡ್ಡ ಸೆಟಪ್ ಇರಲಿಲ್ಲ, ಸಮರ್ಪಕವಾದ ಸಪೋರ್ಟ್ ಸಿಸ್ಟಂ ಕೂಡ ಇರಲಿಲ್ಲ. ಈಕೆಯ ಶಕ್ತಿಯಂತೆ ಇದ್ದದ್ದು ಕೆಲಸದ ಕೌಶಲ್ಯ ಮತ್ತು ಆತ್ಮವಿಶ್ವಾಸ ಮಾತ್ರ. ದಿಶಾ ತನ್ನ ಉದ್ದಿಮೆಯಲ್ಲಿ ಕ್ರಮೇಣವಾಗಿ ಪ್ರಗತಿ ಸಾಧಸುತ್ತಾ ಹೋಗುತ್ತಾ ತನ್ನ ಕೌಶಲ್ಯವನ್ನೂ ಪರಿಷ್ಕರಿಸುತ್ತಾ ಸಾಗಿದರು.

ಇದನ್ನೂ ಓದಿ: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ

ಉತ್ಸಾಹಕ್ಕಿಂತ ಬದುಕುಳಿಯುವುದು ಮುಖ್ಯವಾದಾಗ

ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿಶಾಗೆ ಹಿಮ್ಮೆಟ್ಟುವುದನ್ನು ಬಿಟ್ಟು ಬೇರೆ ದಾರಿ ಇದ್ದಂತಿರಲಿಲ್ಲ. ಈ ಕ್ಲಿಷ್ಟ ಸಂದರ್ಭಗಳಿಗೆ ಬಲಿಯಾಗುವ ಬದಲು, ಅವರು ಹೊಸ ಬದುಕಿನ ದಾರಿ ಕಂಡುಕೊಳ್ಳತೊಡಗಿದರು.

ಗ್ರೀನ್ ಪಾರ್ಕ್‌ನ ಡಿಸೈನರ್ ಬೂಟೀಕ್‌

ಇಂದು, ದಿಶಾ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿ ಯಶಸ್ವಿ ಡಿಸೈನರ್ ಬೂಟೀಕ್ ಅನ್ನು ನಡೆಸುತ್ತಿದ್ದಾರೆ. ಅವರು ಸುಮಾರು 25 ಜನರಿಗೆ ಉದ್ಯೋಗ ನೀಡಿದ್ದಾರೆ. ಅವರ ವ್ಯವಹಾರವು ಅವರ ಗುರುತಾಗಿರುವುದು ಮಾತ್ರವಲ್ಲ, ಕುಟುಂಬಕ್ಕೆ ಬೆಂಬಲ ಕೊಡುತ್ತಿದೆ. ಸಾಕಷ್ಟು ಹಣ ಸಂಪಾದನೆ ಮಾಡುತ್ತಿದ್ದಾರೆ. ಆದರೆ, ಸಂಪಾದಿಸಿದ ಹಣವು ಖರ್ಚು ಮಾಡಲು ಇರುವುದು ಎನ್ನುವ ಪೈಕಿಯವರಲ್ಲ ದಿಶಾ. ಇವತ್ತಿನ ಸಂಪಾದನೆಯಲ್ಲಿ ನಾಳೆಯ ಸುರಕ್ಷತೆಗಾಗಿಯೂ ಒಂದಷ್ಟು ಪಾಲು ತೆಗೆದಿರಿಸಬೇಕು ಎನ್ನುವಂಥವರು ದಿಶಾ. ನಾಳೆ ದಿಢೀರ್ ಕಷ್ಟ ಬಂದರೆ ಏನು ಮಾಡುವುದು?

ಇದನ್ನೂ ಓದಿ: ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ದೀಪಾ ದೇವರಾಜನ್

ಪ್ರತಿಯೊಬ್ಬ ಮಹಿಳೆಗೆ ಆರ್ಥಿಕ ಸ್ವಾತಂತ್ರ್ಯ ಏಕೆ ಮುಖ್ಯ?

ದಿಶಾ ಗರ್ಗ್ ಅವರ ಜೀವನ ಕಥೆಯಿಂದ ಕಲಿಯಬಹುದಾದ ಹಲವು ಪಾಠಗಳಲ್ಲಿ ಒಂದೆಂದರೆ, ‘ಆರ್ಥಿಕ ಸ್ವಾತಂತ್ರ್ಯ ಎಂಬುದು ಲಕ್ಷುರಿ ಅಲ್ಲ, ಅದು ಭದ್ರತೆ’ ಎಂಬುದು. ಜೀವನದಲ್ಲಿ ಇದ್ದಕ್ಕಿದ್ದಂತೆ ಎಲ್ಲವೂ ಕಸಿದು ಹೋದಾಗ, ಮತ್ತೆ ಎದ್ದು ನಿಲ್ಲಲು ನಿಮಗೆ ಶಕ್ತಿಯನ್ನು ನೀಡುವುದು ನಿಮ್ಮ ಆರ್ಥಿಕ ಸ್ವಾತಂತ್ರ್ಯ. ದಿಶಾ ಕೇವಲ ಡಿಸೈನರ್ ಅಲ್ಲ, ಜೀವನದ ಜವಾಬ್ದಾರಿಗಳ ಹೊರೆಯಲ್ಲಿ ಕನಸ್ಸುಗಳನ್ನು ಬಚ್ಚಿಟ್ಟುಕೊಂಡು ಸಾಗುತ್ತಿರುವ ಅನೇಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ.

ದಿಶಾ ಗರ್ಗ್

ಹೂಡಿಕೆ ಮಾಡುವ ಮೊದಲು ಈ ವಿಷಯಗಳು ನೆನಪಿನಲ್ಲಿರಲಿ

ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಮುನ್ನ KYC (Know Your Customer) ಪೂರ್ಣಗೊಂಡಿರಬೇಕು. SEBI ವೆಬ್​ಸೈಟ್​ನಲ್ಲಿ ವಿವರ ಹೊಂದಿರುವ ಹಾಗೂ ನೊಂದಾಯಿತವಾಗಿರುವ ಮ್ಯೂಚುವಲ್ ಫಂಡ್ ಕಂಪನಿಗಳೊಂದಿಗೆ ಮಾತ್ರ ಮಾಡಬೇಕು. ಹೂಡಿಕೆದಾರರು ಯಾವುದೇ ದೂರುಗಳಿಗಾಗಿ ನೇರವಾಗಿ AMC ಅನ್ನು ಸಂಪರ್ಕಿಸಬಹುದು ಅಥವಾ SCORES ಪೋರ್ಟಲ್‌ನಲ್ಲಿ (https://scores.gov.in) ದೂರು ಸಲ್ಲಿಸಬಹುದು. ಪರಿಹಾರವು ತೃಪ್ತಿಕರವಾಗಿಲ್ಲದಿದ್ದರೆ, Smart ODR ಪೋರ್ಟಲ್ (https://smartodr.in/login) ಅನ್ನು ಬಳಸಬಹುದು.

HDFC AMC ಬಗ್ಗೆ

HDFC ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ಭಾರತದ ಅತಿದೊಡ್ಡ ಮ್ಯೂಚುವಲ್ ಫಂಡ್ ಕಂಪನಿಗಳಲ್ಲಿ ಒಂದಾಗಿದೆ. ಇದನ್ನು 1999 ರಲ್ಲಿ ಸ್ಥಾಪಿಸಲಾಯಿತು ಮತ್ತು SEBI ಅನುಮೋದನೆ ಪಡೆದ ನಂತರ 2000 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಈಕ್ವಿಟಿ, ಫಿಕ್ಸೆಡ್ ಇನ್ಕಮ್ ಮತ್ತು ಇತರ ಹೂಡಿಕೆ ಆಯ್ಕೆಗಳನ್ನು ನಿರ್ವಹಿಸುತ್ತದೆ. ಮತ್ತು ದೇಶಾದ್ಯಂತ ಶಾಖೆಗಳನ್ನು ಹೊಂದಿದೆ. ಬ್ಯಾಂಕುಗಳು, ಸ್ವತಂತ್ರ ಹಣಕಾಸು ಸಲಹೆಗಾರರು ಮತ್ತು ರಾಷ್ಟ್ರೀಯ ವಿತರಕರ ಮೂಲಕ ಸೇವೆಗಳನ್ನು ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ – Kannada News | Fire Breaks out In Janardhana Reddy And Sriramulu ownership Model House at Bellary, reddy Alleged On Congress

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.

ಈ ಮಾಡೆಲ್ ಹೌಸ್​ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ಮಾಡಲಾಗಿದೆ. ಈ ಹೌಸ್ ಒಟ್ಟು 109 ಎಕರೆ ಟೋಟಲ್ G ಸ್ವ್ಕೇರ್ ಹೊಂದಿದೆ.

ಕೈ ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ

ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು (ಜನವರಿ 23) ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಮಾಡಲ್​ ಹೌಸ್​ಗೆ ಪೆಟ್ರೋಲ್​, ಡೀಸೆಲ್​ ಹಾಕಿ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಶಾಸಕ ಭರತ್​ ರೆಡ್ಡಿ ಬೆಂಬಲಿಗರೇ ಇದನ್ನ ಮಾಡಿರುವುದು. ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಕೂಡ ಬಂದಿದ್ದಾರೆ. ಇದನ್ನ ನಾವು ಬಿಡಲ್ಲ, ಪೊಲೀಸ್​ ಠಾಣೆಗೆ ದೂರು ನೀಡುತ್ತೇವೆ ಎಂದರು.

ಜನಾರ್ದನ ರೆಡ್ಡಿ ಹೇಳಿದ್ದಿಷ್ಟು

ಇನ್ನು ಈ ಅಗ್ನಿ ಅವಘಡದ ಬಗ್ಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಟಿವಿ9 ಜೊತೆ ಮಾತನಾಡಿದ್ದು, ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ.ಘಟನೆ ಬಗ್ಗೆ ಬಳ್ಳಾರಿ ಎಸ್​ಪಿ ಜೊತೆ ನಾನು ಮಾತಾಡಿದ್ದೇನೆ ಎಂದು ಹೇಳಿದರು.

Published On – 8:24 pm, Fri, 23 January 26

Source link

ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Milk and Calcium: How Effective Is It for Deficiency?

Milk And Calcium How Effective Is It For DeficiencyImage Credit source: Getty Images

ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರ ವರೆಗೆ ಒಂದು ಹೊತ್ತಾದರೂ ಹಾಲು ಕುಡಿಯುತ್ತಾರೆ. ಇದು ಬಹಳ ಸಾಮಾನ್ಯ. ದೇಹದ ಬೆಳವಣಿಗೆ ಮತ್ತು ಶಕ್ತಿ ನೀಡುವುದಕ್ಕೆ ಹಾಲು ಪೂರಕ ಎಂದು ಹೇಳಲಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಹೊರತಾಗಿಯೂ, ಹಾಲನ್ನು ಇನ್ನೂ ಪೌಷ್ಟಿಕಾಂಶದ ಮೂಲವೆಂದು ಪರಿಗಣಿಸಲಾಗುತ್ತದೆ. ಅದರಲ್ಲಿಯೂ ಮೂಳೆ ಮತ್ತು ಹಲ್ಲುಗಳ ಆರೋಗ್ಯದ ವಿಷಯಕ್ಕೆ ಬಂದಾಗ, ಹಾಲು ಮೊದಲು ನೆನಪಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕ್ಯಾಲ್ಸಿಯಂ ಕೊರತೆಗೆ ಸಂಬಂಧಿಸಿದ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ಜನ ತಮ್ಮ ಆಹಾರದ ಬಗ್ಗೆ ಮೊದಲಿಗಿಂತ ಹೆಚ್ಚು ಜಾಗರೂಕರಾಗುತ್ತಿದ್ದಾರೆ. ಆದರೆ ಪ್ರತಿದಿನ ಹಾಲು ಕುಡಿಯುವುದು ದೇಹದ ಕ್ಯಾಲ್ಸಿಯಂ ಅಗತ್ಯಗಳನ್ನು ಪೂರೈಸಲು ಸಾಕಾಗುತ್ತದೆಯೇ ಅಥವಾ ಇಲ್ಲವೇ, ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಹಾಲು ನಿಜವಾಗಿಯೂ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ಡಾ. ಎಲ್.ಎಚ್. ​​ಘೋಟೇಕರ್ ಅವರು ಹೇಳುವ ಪ್ರಕಾರ, ಒಂದು ಲೋಟ ಹಾಲು ಕುಡಿಯುವುದರಿಂದ ದೇಹಕ್ಕೆ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ದೊರೆಯುತ್ತದೆ, ಅದನ್ನು ಸುಲಭವಾಗಿ ದೇಹ ಹೀರಿಕೊಳ್ಳುತ್ತದೆ. ಹಾಲಿನಲ್ಲಿರುವ ವಿಟಮಿನ್ ಡಿ ದೇಹದಲ್ಲಿ ಕ್ಯಾಲ್ಸಿಯಂ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಈ ಕಾರಣಕ್ಕಾಗಿ, ಹಾಲು ಮೂಳೆ ಮತ್ತು ಹಲ್ಲುಗಳ ಬಲಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ ಪ್ರತಿಯೊಬ್ಬರ ಕ್ಯಾಲ್ಸಿಯಂ ಅಗತ್ಯತೆ ಒಂದೇ ಆಗಿರುವುದಿಲ್ಲ. ಇದು ವಯಸ್ಸು, ಲಿಂಗ, ಜೀವನಶೈಲಿ ಮತ್ತು ಆರೋಗ್ಯವನ್ನು ಅವಲಂಬಿಸಿರುತ್ತದೆ. ದೇಹ ಹೆಚ್ಚು ಕ್ಯಾಲ್ಸಿಯಂ ಕೊರತೆಯನ್ನು ಹೊಂದಿದ್ದರೆ, ಹಾಲು ಮಾತ್ರ ಕುಡಿದರೆ ಸಾಕಾಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ, ಹಾಲಿನ ಜೊತೆಗೆ ಮೊಸರು, ಚೀಸ್, ಹಸಿರು ತರಕಾರಿಗಳು, ಎಳ್ಳು ಮತ್ತು ಬಾದಾಮಿಯಂತಹ ಆಹಾರಗಳನ್ನು ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಇದು ದೇಹಕ್ಕೆ ವಿವಿಧ ಮೂಲಗಳಿಂದ ಕ್ಯಾಲ್ಸಿಯಂ ಅನ್ನು ಒದಗಿಸಲು ಸಹಾಯ ಮಾಡುತ್ತದೆ. ಒಟ್ಟಾರೆಯಾಗಿ, ಹಾಲು ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ, ಆದರೆ ಸಮತೋಲಿತ ಆಹಾರವಿಲ್ಲದೆ ಕೊರತೆಯನ್ನು ಸಂಪೂರ್ಣವಾಗಿ ನೀಗಿಸುವುದು ಕಷ್ಟಕರ.

ಇದನ್ನೂ ಓದಿ: ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?

ದಿನಕ್ಕೆ ಎಷ್ಟು ಲೋಟ ಹಾಲು ಕುಡಿಯಬೇಕು?

ಆರೋಗ್ಯವಂತ ವಯಸ್ಕರು, ಸಾಮಾನ್ಯವಾಗಿ ದಿನಕ್ಕೆ 2 ಗ್ಲಾಸ್ ಅಥವಾ 400 ರಿಂದ 500 ಮಿಲಿ ಹಾಲು ಕುಡಿಯಬಹುದು. ಇದು ದೈನಂದಿನ ಕ್ಯಾಲ್ಸಿಯಂ ಅವಶ್ಯಕತೆಯನ್ನು ಪೂರೈಸುತ್ತದೆ. ಮಕ್ಕಳು, ಹದಿಹರೆಯದವರು ಮತ್ತು ಗರ್ಭಿಣಿಯರು ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಪ್ರಮಾಣವನ್ನು ಹೆಚ್ಚಿಸಬೇಕಾಗಬಹುದು. ಇನ್ನು, ಲ್ಯಾಕ್ಟೋಸ್ ಸಮಸ್ಯೆ ಇರುವವರು ಹಾಲು ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯಬೇಕು. ಅಗತ್ಯಕ್ಕಿಂತ ಹೆಚ್ಚು ಹಾಲು ಕುಡಿಯುವುದು ಪ್ರಯೋಜನಕಾರಿಯಲ್ಲ ಎಂಬುದನ್ನು ಮರೆಯಬಾರದು. ಇದೆಲ್ಲದರ ಜೊತೆಗೆ ಸಂಸ್ಕರಿತ ಆಹಾರ ಮತ್ತು ಸೋಡಾ ಸೇವನೆ ಮಾಡುವುದನ್ನು ಕಡಿಮೆ ಮಾಡಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ – Kannada News | Shidlaghatta Commissioner Amrutha Gowda seeks police protection after acid threat

ಚಿಕ್ಕಬಳ್ಳಾಪುರ, ಜನವರಿ 23: ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ (Amrutha Gowda) ಆ್ಯಸಿಡ್ ಹಾಕುವುದಾಗಿ ಬೆದರಿಕೆ  ಬೆನ್ನಲ್ಲೇ ರಕ್ಷಣೆ ನೀಡುವಂತೆ ಪತ್ರ ಸಮೇತ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಅಮೃತಾಗೌಡ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಹಿನ್ನೆಲೆ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಧಮ್ಕಿ ಹಾಕಿದ್ದರು. ಈ ಬಗ್ಗೆ ಅಮೃತಾಗೌಡ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದಂತೆ ತಲೆ ಮರೆಸಿಕೊಂಡಿರುವ ರಾಜೀವ್ ಗೌಡ, ಇನ್ನು ಪತ್ತೆ ಆಗಿಲ್ಲ. ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ಇತ್ತ ಪೌರಾಯುಕ್ತೆಗೆ ಬೆದರಿಕೆ ಪತ್ರಯೊಂದು ಬಂದಿದ್ದು, ಆ್ಯಸಿಡ್​ ದಾಳಿ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಇದೀಗ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಾಳೆ ರಾಜೀವ್ ಗೌಡ ಭವಿಷ್ಯ ನಿರ್ಧಾರ

ರಾಜೀವ್ ಗೌಡಗೆ ಕಾನೂನಿನ ಉರುಳು ಬಿಗಿಯಾಗುತ್ತಿದೆ. ಪೌರಾಯುಕ್ತೆ ಅಮೃತಾಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ರಾಜೀವ್ ಗೌಡ, ತನ್ನ ಮೇಲಿನ ಎಫ್‌ಐಆರ್ ರದ್ದು ಮಾಡಬೇಕು ಅಂತ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಆ ಅರ್ಜಿಯನ್ನು ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಿದೆ. ತನಿಖೆ ಮುಂದುವರಿಯಲಿ ಎಂದು ಆದೇಶ ನೀಡುವ ಮೂಲಕ ರಾಜೀವ್ ಗೌಡಗೆ ಮೊದಲ ಶಾಕ್ ನೀಡಿದೆ.

ರಾಜೀವ್ ಗೌಡ ಪರ ವಕೀಲರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿಯೂ ನಿರೀಕ್ಷಣಾ ಜಾಮೀನಿಗಾಗಿ ಮೊದಲೇ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಎರಡನೇ ವಿಚಾರಣೆ ಇಂದು ನಡೆಯಿತು. ಸರ್ಕಾರಿ ಅಭಿಯೋಜಕರು ಸಲ್ಲಿದ್ದ ಆಕ್ಷೇಪಣೆಗಳಿಗೆ ರಾಜೀವ್ ಗೌಡ ಪರ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದರು.

ಇದನ್ನೂ ಓದಿ: ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪತ್ರ: ಆ್ಯಸಿಡ್​​ ಎರಚುವುದಾಗಿ ಎಚ್ಚರಿಕೆ

ಸದ್ಯ ನ್ಯಾಯಾಲಯ, ವಾದ-ಪ್ರತಿವಾದ ಆಲಿಸಿದ್ದು, ಜನವರಿ 24ರಂದು ಆದೇಶ ಕಾಯ್ದಿರಿಸಿದೆ. ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ಸಿಗುತ್ತಾ, ಇಲ್ಲಾ ಜೈಲು ಪಾಲಾಗುತ್ತಾರಾ ಎನ್ನುವುದು ನಾಳೆ ಗೊತ್ತಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On – 8:12 pm, Fri, 23 January 26

Source link