Category Archives: Blog

Your blog category

ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ! – Kannada News | Uttara Kannada: Rajiv Pikale of Pikale Family Dies by Suicide Amid Alleged Social Media Defamation

ಕಾರವಾರ, ಜನವರಿ 23: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ವ್ಯಕ್ತಿಯೋರ್ವ ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದೆ. ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಮೃತ ದುರ್ದೈವಿಯಾಗಿದ್ದು, ಸೋಶಿಯಲ್​​ ಮೀಡಿಯಾದಲ್ಲಿನ ತೇಜೋವಧೆಯೇ ಅವರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಕಾರವಾರದಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಪಿಕಳೆ ಕುಟುಂಬ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಈ ಆಸ್ಪತ್ರೆಯಲ್ಲಿ ರಾಜೀವ್ ಪಿಕಳೆ ಔಷಧ ವಿಭಾಗವನ್ನು ನೋಡಿಕೊಳ್ಳುತಿದ್ದರು. ಕೆಲವು ದಿನದ ಹಿಂದೆ ಅವರು ಅವಧಿ ಮುಗಿದ ಔಷಧ ನೀಡಿದ್ದಾರೆ ಎಂದು ಯೂಟ್ಯೂಬರ್ ಒಬ್ಬ ವಿಡಿಯೋ ಮಾಡಿ ಹರಿಬಿಟ್ಟಿದ್ದ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎರಡು ತಲೆಮಾರಿನಿಂದ ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸುತಿದ್ದ ಪಿಕಳೆ ಕುಟುಂಬಕ್ಕೆ ಘಾಸಿ ಉಂಟುಮಾಡಿತ್ತು. ಇದರಿಂದ ಮನನೊಂದಿದ್ದ ರಾಜೀವ್ ಪಿಕಳೆ ಸಾಕಷ್ಟು ನೋವುಂಡಿದ್ದರು. ಇದಲ್ಲದೇ ಅವಧಿ ಮುಗಿದ ಔಷಧ ನೀಡಿದ್ದಕ್ಕೆ ಕ್ಷಮೆ ಯಾಚಿಸಿದ್ದರು. ಆದರೆ ವಿಡಿಯೋ ಹೆಚ್ಚು ವೈರಲ್ ಆಗಿದ್ದರಿಂದ ಮಾನಸಿಕವಾಗಿ ಅವರು ಕುಗ್ಗಿದ್ದರು. ಇದೇ ಕಾರಣಕ್ಕೆ ಮನೆಯಲ್ಲಿ ಡಬಲ್ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಿಂತಿದ್ದ ಪಿಕಪ್​​ ಟ್ರಕ್​​​ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ; ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು

ರಾಜಕೀಯ, ಸಾಮಾಜಿಕ, ವೈದ್ಯಕೀಯ ಕ್ಷೇತ್ರದಲ್ಲಿ ಎರಡು ತಲೆಮಾರಿನಿಂದ ಸೇವೆ ನೀಡುತ್ತಾ ಬಂದಿರುವ ಇವರದ್ದು ಕಾರವಾರದಲ್ಲಿ ಪ್ರತಿಷ್ಠಿತ ಕುಟುಂಬ. ಈ ಕುಟುಂಬದ ಸೇವೆ ಮೆಚ್ಚಿ ಕಾರವಾರದಲ್ಲಿ ರಸ್ತೆಯೊಂದಕ್ಕೆ ಪಿಕಳೆ ರಸ್ತೆ ಎಂದು ನಗರಸಭೆ ನಾಮಕರಣ ಮಾಡಿದೆ. ಇನ್ನು ರಾಜೀವ್ ಮಕ್ಕಳು ಸಹ ವೈದ್ಯರಾಗಿದ್ದು, ಇವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ಆದರೆ ರಾಜೀವ್​​ ಮಾತ್ರ ಅಂಕೋಲಾದ ಹಟ್ಟಿಕೇರಿಯಲ್ಲಿ ಏಕಾಂಗಿಯಾಗಿ ವಾಸವಿದ್ದರು. ತನ್ನ ವಿಡಿಯೋ ವೈರಲ್ ಆಗಿರುವುದರಿಂದ ಮಾನಸಿಕವಾಗಿ ಕುಗ್ಗಿದ್ದ ಇವರು, ಈ ಬಗ್ಗೆ ಕುಟುಂಬದಲ್ಲಿ ಸಹ ಹೇಳಿಕೊಂಡಿದ್ದರು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಕ್ಷೆ ನಡೆಸಿದಾಗ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರೋದು ಕಂಡುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ – Kannada News | BBK 12 Winner Gilli Nata inaugurates new jewellery store in Bengaluru

ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿರುವುದು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ನಟ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿಯತೆ ಜಾಸ್ತಿ ಆಗಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಗಿಲ್ಲಿ ನಟ (Gilli Nata) ಅವರು ಹೊಸ ಬಂಗಾರದ ಮಳಿಗೆಯ ಉದ್ಘಾಟನೆಗೆ ಅತಿಥಿಯಾಗಿ ತೆರಳಿದ್ದಾರೆ. ಅವರ ಕೊರಳಿಗೆ ಶರವಣ ಅವರು ಬಂಗಾರದ ಸರ ತೊಡಿಸಿದ್ದಾರೆ. ‘ಇದು ನನಗೆ ಅಲ್ವಾ ಸರ್’ ಎಂದು ಗಿಲ್ಲಿ ನಟ ಕೇಳಿದ್ದಾರೆ. ‘ಗಿಲ್ಲಿಗಿಂತ ಬೇರೆ ಬಂಗಾರ ಇಲ್ಲ’ ಎಂದು ಶರವಣ ಅವರು ಹೇಳಿದ್ದಾರೆ. ‘ನನ್ನನ್ನು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕರೆದಿದ್ದಕ್ಕೆ ಖುಷಿ ಆಗಿದೆ’ ಎಂದಿದ್ದಾರೆ ಗಿಲ್ಲಿ ನಟ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | IND vs NZ 2nd T20 Match: Live Updates, Playing XI, Toss and Score Raipur Match

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.

ಟಾಸ್ ಗೆದ್ದ ಸೂರ್ಯಕುಮಾರ್

ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದರು. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ 3 ಬದಲಾವಣೆಗಳಾಗಿವೆ.

ಹೆಡ್ ಟು ಹೆಡ್ ದಾಖಲೆ

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಲ್ಲಿಯವರೆಗೆ ಒಟ್ಟು 26 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಟೀಂ ಇಂಡಿಯಾ 15 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 10 ಪಂದ್ಯಗಳನ್ನು ಗೆದ್ದಿದೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಇನ್ನು ಭಾರತದಲ್ಲಿ ಉಭಯ ತಂಡಗಳ ನಡುವೆ 12 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ ಎಂಟು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ, ಕಿವೀಸ್ ಭಾರತದಲ್ಲಿ ಕೇವಲ ನಾಲ್ಕು ಟಿ20 ಪಂದ್ಯಗಳನ್ನು ಗೆದ್ದಿದೆ.

ಉಭಯ ತಂಡಗಳು

ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫಾಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ – Kannada News | Bengaluru: Karnataka Loka bhavana Receives RDX Bomb Threat via Email: Case Filed

ಬೆಂಗಳೂರು, ಜನವರಿ 23: ಇತ್ತೀಚೆಗೆ ರಾಜ್ಯದ ಹಲವು ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು (Bomb Threat) ಬಂದಿದ್ದವು. ಇದೀಗ ಕರ್ನಾಟಕ ಲೋಕಭವನ (Karnataka Lok Bhavan)
ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆಯ ಇ-ಮೇಲ್​​ ಸಂದೇಶ ಬಂದಿದೆ. ಜನವರಿ 14ರಂದು ರಾಜ್ಯಪಾಲರ ಅಧಿಕೃತ ಮೇಲ್ ಐಡಿಗೆ ಸಂದೇಶ ಕಳಿಸಿರುವ ಕಿಡಿಗೇಡಿಗಳು ಮಧ್ಯಾಹ್ನದೊಳಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ತಪಾಸಣೆ ವೇಳೆ ಇದೊಂದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಹುಸಿ ಬೆದರಿಕೆ ಕರೆ ಎಂದ ಪೊಲೀಸ್​​​

gaina_ramesh@outlook.com ಎಂಬ ಇ-ಮೇಲ್ ರಾಜ್ಯಪಾಲರ ಅಧಿಕೃತ ಮೇಲ್​​ ಐಡಿಗೆ ಸಂದೇಶ ಬಂದಿದೆ. ಐಇಡಿ RDX ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳಕ್ಕೆ ಯಾವುದೇ ಸ್ಫೋಟಕ ಸಾಮಗ್ರಿ ಪತ್ತೆಯಾಗಿಲ್ಲ. ತಪಾಸಣೆ ನಂತರ ಹುಸಿ ಬೆದರಿಕೆ ಕರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಲೋಕಭವನದ ಅಧಿಕಾರಿಗಳು ಜನವರಿ 20ರಂದೇ ಕೇಸ್ ದಾಖಲಿಸಿದ್ದು, ವಿಧಾನಸೌಧ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇ-ಮೇಲ್​​ ಸಂದೇಶದಲ್ಲಿ ಏನಿದೆ?

ತಮಿಳುನಾಡಿನಲ್ಲಿ 1979ರ ನೈನಾರ್ ದಾಸ್ ಪೊಲೀಸ್ ಒಕ್ಕೂಟವನ್ನು ಜಾರಿಗೆ ತನ್ನಿ. ನಿಮ್ಮ ರಾಜ್ಯಪಾಲರ ಕಚೇರಿಯಲ್ಲಿ 3 ಆರ್‌ಡಿಎಕ್ಸ್ ಬಾಂಬ್‌ಗಳನ್ನು ಬಳಸಿ ಮಾನವ ಆತ್ಮಹತ್ಯಾ ಸ್ಫೋಟಿಸುತ್ತೇವೆ. ಮಧ್ಯಾಹ್ನ 1:35ರೊಳಗೆ ಸಿಬ್ಬಂದಿ ಸ್ಥಳಾಂತರಿಸಿ ಎಂದಿದ್ದಾರೆ.

ಇದನ್ನೂ ಓದಿ: ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಪಾಸ್‌ಪೋರ್ಟ್ ಕಚೇರಿಗೂ ಬಂತು ಇ-ಮೇಲ್

ತಮಿಳುನಾಡು ಕಾನ್‌ಸ್ಟೆಬಲ್‌ಗಳು ನಿವೇತಾ ಪೇತುರಾಜ್ ಮತ್ತು ಇತರ ಡಿಎಂಕೆ ಪತ್ನಿಯರ ಬಟ್ಟೆ ಮತ್ತು ಕೊಳಕು ಪಾತ್ರೆಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಲ್ಪಡುತ್ತಾರೆ. ಇದರಿಂದಾಗಿ ಅನೇಕರು ಅವಮಾನ ಅನುಭವಿಸಿದ್ದಾರೆ. ಆದ್ದರಿಂದ, ಮಾಜಿ ಎಲ್‌ಟಿಟಿಇ ಸದಸ್ಯರು ಮತ್ತು ಕಾಶ್ಮೀರ ಐಎಸ್‌ಐ ಸದಸ್ಯರು ಇಂದು ನಿಮ್ಮ ಸರ್ಕಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಈ ಪದ್ಧತಿಯ ವಿರುದ್ಧ ಹೇಳಿಕೆ ನೀಡಲು ಮತ್ತು ತಮಿಳುನಾಡಿನಲ್ಲಿ 1979 ರ ನೈನಾರ್ ದಾಸ್ ಪೊಲೀಸ್ ಯೂನಿಯನ್ ಶಿಫಾರಸುಗಳನ್ನು ಕಾನ್‌ಸ್ಟೆಬಲ್‌ಗಳಿಗೆ ಜಾರಿಗೆ ತರಲು ಪ್ರಯತ್ನಿಸಿದ್ದಾರೆ. ನಮ್ಮ ಬೇಡಿಕೆಗಳನ್ನು ಕೇಳಲು ನಮಗೆ ಬೇರೆ ದಾರಿಯಿಲ್ಲ, ಕ್ಷಮಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗದಗ, ಮಂಗಳೂರು ಆಯ್ತು ಈಗ ಭಟ್ಕಳದ ತಹಶೀಲ್ದಾರ್ ಕಚೇರಿಗೂ ಬಾಂಬ್ ಬೆದರಿಕೆ!

ಅಮೋನಿಯಂ ನೈಟ್ರೇಟ್ ಬಳಸಿ ತಯಾರಿಸಿದ 3 ಆರ್‌ಡಿಎಕ್ಸ್ ಐಇಡಿಗಳನ್ನು ಈಗಾಗಲೇ ಕಚೇರಿಯಲ್ಲಿ ನಿಗದಿತ ಸ್ಥಳಗಳಲ್ಲಿ ಇರಿಸಲಾಗಿದೆ. ಒಂದಿಬ್ಬರು ಸದಸ್ಯರು ಊಟದ ಸಮಯದಲ್ಲಿ ಕಚೇರಿಗೆ ಬರುತ್ತಾರೆ. ರಿಮೋಟ್ ಕಂಟ್ರೋಲ್ ಟ್ರಿಗ್ಗರ್‌ಗಳನ್ನು ಹೊತ್ತ ಮಾಜಿ ಎಲ್‌ಟಿಟಿಇ ಸದಸ್ಯರು ಟರ್ಮಿನಲ್‌ಗಳಿಂದ 100 ಅಡಿಗಳ ಒಳಗೆ ಬಂದಾಗ ಐಇಡಿಗಳು ಸ್ವಯಂಚಾಲಿತವಾಗಿ ಸ್ಫೋಟಗೊಳ್ಳುತ್ತವೆ. ಒಂದು ವೇಳೆ ಅವು ಸ್ವಯಂಚಾಲಿತವಾಗದಿದ್ದರೆ, ಸದಸ್ಯರು ತಾವೇ ಜಿಲ್ಲಾ ಕಚೇರಿ ಒಳಗೆ ಬಂದು ಶ್ರೀಲಂಕಾದ ಈಸ್ಟರ್ ಕಾರ್ಯಾಚರಣೆಯಂತೆಯೇ ಎಲ್ಲಾ ಸಿಬ್ಬಂದಿ ಮತ್ತು ಪ್ರಯಾಣಿಕರೊಂದಿಗೆ ತಾವೇ ಸಿಡಿಸಿಕೊಳ್ಳುತ್ತಾರೆ ಎಂದು ಉಲ್ಲೇಖಿಸಲಾಗಿದೆ.

ವರದಿ: ಪ್ರದೀಪ್ ಕ್ರೈಂ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ – Kannada News | Love Transcends Borders: Chikkamagaluru Boy Marries Chinese Girl

ಚೀನಾ ಯುವತಿ ವರಿಸಿದ ಚಿಕ್ಕಮಗಳೂರಿನ ಯುವಕ.

ಚಿಕ್ಕಮಗಳೂರು, ಜನವರಿ 23: ಈತ ಕಾಫಿನಾಡು ಚಿಕ್ಕಮಗಳೂರಿನ ಯುವಕ, ಆಕೆ ದೂರದ ಚೀನಾದ ಯುವತಿ. ವಿದೇಶದಲ್ಲಿ ವಿದ್ಯಾಭ್ಯಾಸದ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು.  ಇಬ್ಬರ ಕಡೆಯವರ ಪೋಷಕರೂ ಮಕ್ಕಳ ಪ್ರೀತಿಯನ್ನು ಖುಷಿಯಿಂದ ಒಪ್ಪಿದ್ದು, ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಸಿದ್ದಾರೆ. ಬಂಧು ಬಾಂಧವರ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ಮದುವೆ ಸಮಾರಂಭ ನೆರವೇರಿದೆ.

ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡಿನ‌ ಯುವಕ ರೂಪಕ್ ಮತ್ತು ಚೀನಾ ಮೂಲದ ಯುವತಿ ಜಡೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಓದುವಾಗ ಇಬ್ಬರ ಮಧ್ಯೆ ಪ್ರೇಮಾಂಕುರ ಆಗಿದೆ. ಚೀನಾದಿಂದ ಮಗಳನ್ನ ಕರೆತಂದು ಆಕೆಯ ಹೆತ್ತವರು ರೂಪಕ್​​ಗೆ ದಾರೆ ಎರೆದು ಕೊಟ್ಟಿದ್ದಾರೆ. ವೀಶೇಷ ಅಂದ್ರೆ ಹಿಂದೂ ಸಂಪ್ರದಾಯದಂತೆ, ಶಾಸ್ತ್ರೋಕ್ತವಾಗಿ ಮದುವೆ ನಡೆದಿದೆ. ಅಪ್ಪಟ ಭಾರತೀಯ ಶೈಲಿಯಲ್ಲಿ ದಂಪತಿ ಕಂಗೊಳಿಸಿದ್ದು, ವರ ರೂಪಕ್​​ ಪಂಚೆ, ಶರ್ಟ್​​ನಲ್ಲಿ ಮಿಂಚಿದ್ರೆ, ವಧು ಜಡೆ ಚೀನಾದವಳಾದರೂ ಸೀರೆ ಉಟ್ಟಿದ್ದು ನೆರೆದಿದ್ದವರ ಹುಬ್ಬೇರಿಸಿದೆ.

ಇದನ್ನೂ ಓದಿ: ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್‌ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ

ಭಾರತೀಯ ಸಂಪ್ರದಾಯವನ್ನು ಯುವತಿ ಮೆಚ್ಚಿದ್ದು, ಚಿಕ್ಕಮಗಳೂರಿನ ಸೌಂದರ್ಯ ಕಂಡು ಆಕೆ ಮಾರು ಹೋಗಿದ್ದಾಳೆ. ವಧು ರೂಪಕ್ ಚಿಕ್ಕಮಗಳೂರಿನವರಾದರೂ ಆಸ್ಟ್ರೇಲಿಯಾದಲ್ಲಿ ಸೆಟಲ್​​ ಆಗಿದ್ದಾರೆ. ಯುವತಿಯೂ ಸದ್ಯ ಅಲ್ಲೇ ನೆಲೆಸಿರುವ ಕಾರಣ, ದಂಪತಿಯ ಮುಂದಿನ ಜೀವನವನ್ನು ವಿದೇಶದಲ್ಲಿಯೇ ಕಳೆಯಲ್ಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇತ್ತೀಚೆಗೆ ಇಂತಹ ಪ್ರೇಮ ವಿವಾಹಗಳು ರಾಜ್ಯದಲ್ಲಿ ಮೇಲಿಂದ ಮೆಲೆ ಸದ್ದು ಮಾಡ್ತಿವೆ. ಕಳೆದ ಡಿಸೆಂಬರ್​​ನಲ್ಲಿ ದಾವಣಗೆರೆ ಹುಡುಗಿಯೊಬ್ಬಳು ನ್ಯೂಜಿಲೆಂಡ್‌ನ ಯುವಕನ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ವಿಚಾರ ಭಾರಿ ಸುದ್ದಿಯಾಗಿತ್ತು. ಪ್ರೇಮಕ್ಕೆ ದೇಶ-ಭಾಷೆಯೆಂಬ ತಾರತಮ್ಯವಿಲ್ಲವೆಂದು ಮತ್ತೊಮ್ಮೆ ಸಾಭೀತಾಗಿತ್ತಲ್ಲದೆ, ಯುವಕ ವಿದೇಶಿಗನಾದರೂ ಅರಿಶಿಣ ಶಾಸ್ತ್ರ, ಧಾರೆ ಶಾಸ್ತ್ರ ಎಂದು ಅಪ್ಪಟ ಹಿಂದೂ ಸಂಪ್ರದಾಯದಂತೆ ಬೆಣ್ಣೆ ನಗರಿಯ ಹುಡುಗಿಯ ಕೈ ಹಿಡಿದಿದ್ದು ಸುದ್ದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:20 pm, Fri, 23 January 26

Source link

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ ಆಸ್ಟ್ರೇಲಿಯಾದ ವೇಗಿ ವಿಲ್ ಬೈರೋಮ್. ಶ್ರೀಲಂಕಾದ ಬ್ಯಾಟಿಂಗ್ ಬೆನ್ನೇಲುಬು ಮುರಿದ ಆಸೀಸ್ ವೇಗಿಗಳು ಇಡೀ ಲಂಕಾ ತಂಡವನ್ನು ಕೇವಲ 58 ರನ್‌ಗಳಿಗೆ ಆಲೌಟ್ ಮಾಡಿದರು.

ಆಸೀಸ್ ಮಾರಕ ದಾಳಿ

ಜನವರಿ 23 ರಂದು ನಮೀಬಿಯಾದ ವಿಂಡ್‌ಹೋಕ್‌ನಲ್ಲಿ ನಡೆದ ಈ ಗ್ರೂಪ್ ಎ ಪಂದ್ಯದಲ್ಲಿ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಿತು. ಶ್ರೀಲಂಕಾದ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಇನ್ನಿಂಗ್ಸ್‌ನ ಮೂರನೇ ಓವರ್‌ನ ವೇಳೆಗೆ ತಂಡವು ಕೇವಲ 3 ರನ್‌ಗಳನ್ನು ಗಳಿಸಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಚಾರ್ಲ್ಸ್ ಲೆಚ್ಮಂಡ್ ಎರಡೂ ವಿಕೆಟ್‌ಗಳನ್ನು ಪಡೆದರು. ಆ ನಂತರ ದಾಳಿಗಿಳಿದ ವಿಲ್ ಬೈರಾಮ್ ಶ್ರೀಲಂಕಾದ ಬ್ಯಾಟ್ಸ್‌ಮನ್‌ಗಳನ್ನು ಒಬ್ಬೊಬ್ಬರನ್ನಾಗಿ ಪೆವಿಲಿಯನ್​ಗೆ ಕಳುಹಿಸಲು ಪ್ರಾರಂಭಿಸಿದರು. ಹೀಗಾಗಿ ಇಡೀ ಲಂಕಾ ತಂಡವು ಕೇವಲ 58 ರನ್‌ಗಳಿಗೆ ಆಲೌಟ್ ಆಯಿತು.

ಆಸೀಸ್ ಪರ ಮಾರಕ ದಾಳಿ ನಡೆಸಿದ ವಿಲ್ ಬೈರೋಮ್ 6.5 ಓವರ್‌ಗಳ ಸ್ಪೆಲ್‌ನಲ್ಲಿ ಕೇವಲ 14 ರನ್‌ಗಳನ್ನು ಬಿಟ್ಟುಕೊಟ್ಟು 5 ವಿಕೆಟ್‌ಗಳನ್ನು ಪಡೆದರು. ಇದರ ಪರಿಣಾಮವಾಗಿ ಶ್ರೀಲಂಕಾ ತಂಡದ 11 ಬ್ಯಾಟ್ಸ್‌ಮನ್‌ಗಳಲ್ಲಿ 9 ಮಂದಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾದರು. ಕವಿಜಾ ಗಮಗೆ (10) ಮತ್ತು ಚಾಮಿಕಾ ಹೀನಾಟಿಗಲ (14) ಮಾತ್ರ ಎರಡಂಕಿಯ ರನ್‌ ತಲುಪುವಲ್ಲಿ ಯಶಸ್ವಿಯಾದರು.

U19 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಯಂಗ್ ಇಂಡಿಯಾ

ಆಸ್ಟ್ರೇಲಿಯಾಗೆ ಸುಲಭ ಜಯ

ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೂಡ ಮೊದಲ ಓವರ್‌ನಲ್ಲಿಯೇ ವಿಲ್ ಮಲಾಜುಕ್ ಅವರ ವಿಕೆಟ್ ಕಳೆದುಕೊಂಡಿತು. ಕೆಲವೇ ದಿನಗಳ ಹಿಂದೆ ಅಂಡರ್-19 ವಿಶ್ವಕಪ್‌ನಲ್ಲಿ ವೇಗದ ಶತಕದ ದಾಖಲೆ ನಿರ್ಮಿಸಿದ್ದ ವಿಲ್ ಮಲಾಜುಕ್ ವಿಕೆಟ್ ಪತನ ಆಸೀಸ್​ಗೆ ಆರಂಭಿಕ ಆಘಾತ ನೀಡಿತ್ತು. ಆದರೆ ಆ ನಂತರ ಜೊತೆಯಾದ ನಿತೇಶ್ ಸ್ಯಾಮ್ಯುಯೆಲ್ ಮತ್ತು ಸ್ಟೀವನ್ ಹೊಗನ್ ತಂಡವನ್ನು 12 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿಸಿರು. ಅಂತಿಮವಾಗಿ ಆಸ್ಟ್ರೇಲಿಯಾ 9 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:04 pm, Fri, 23 January 26

Source link

ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು – Kannada News | Union Budget 2026, LTCG rationalization to Fiscal discipline, key things for retail investors to observe

ನವದೆಹಲಿ, ಜನವರಿ 23: ಟ್ಯಾರಿಫ್, ಯುದ್ಧ, ದರ್ಪ, ಭಯ, ಅನಿಶ್ಚಿತತೆ ಇತ್ಯಾದಿ ಬಿಕ್ಕಟ್ಟಿನ ಸ್ಥಿತಿಯಲ್ಲಿ ಜಗತ್ತು ಇರುವ ಹೊತ್ತಲ್ಲೇ ಭಾರತ ಸರ್ಕಾರ ಮುಂಬರುವ ವರ್ಷಕ್ಕೆ ಬಜೆಟ್ (Union Budget) ರೂಪಿಸಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವ ಅಂಶಗಳನ್ನು ಬಜೆಟ್​ನಿಂದ ನಿರೀಕ್ಷಿಸಲಾಗುತ್ತಿದೆ. ಸಾಮಾನ್ಯ ರೀಟೇಲ್ ಹೂಡಿಕೆದಾರರು ಈ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು, ಅಥವಾ ಗಮನಿಸಬಹುದು? ಇಲ್ಲಿದೆ ಒಂದಷ್ಟು ವಿವರ.

ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಲ್ಲಿ ಬದಲಾವಣೆ

ಸರ್ಕಾರ ಕಳೆದ ಒಂದು ವರ್ಷದಲ್ಲಿ ಜಿಎಸ್​ಟಿ ಮತ್ತು ಆದಾಯ ತೆರಿಗೆಯನ್ನು ಕಡಿಮೆಗೊಳಿಸಿದೆ ಮತ್ತು ಸರಳೀಕೃತಗೊಳಿಸಿದೆ. ಆದರೆ, ಷೇರು ಮಾರುಕಟ್ಟೆಯ ರೀಟೇಲ್ ಹೂಡಿಕೆದಾರರಿಗೆ ಟ್ಯಾಕ್ಸ್ ಹೊರೆ ಹೆಚ್ಚು ಇದೆ. ಎರಡು ವರ್ಷದ ಹಿಂದಿನ ಬಜೆಟ್​ನಲ್ಲಿ ಸರ್ಕಾರ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ನು ಶೇ. 12.5ಕ್ಕೆ ಏರಿಸಿತ್ತು. ಅದರ ಜೊತೆಗೆ, ವಿನಾಯಿತಿ ಮಿತಿಯನ್ನು 1 ಲಕ್ಷ ರೂನಿಂದ 1.25 ಲಕ್ಷ ರೂಗೂ ಏರಿಸಿತ್ತು. ಈಗ ಎಲ್​ಟಿಸಿಜಿ ಟ್ಯಾಕ್ಸ್ ಅನ್ನು ಕಡಿಮೆಗೊಳಿಸಲಿ ಮತ್ತು ಎಕ್ಸೆಂಪ್ಷನ್ ಲಿಮಿಟ್ ಏರಲಿ ಎಂದು ರೀಟೇಲ್ ಹೂಡಿಕೆದಾರರು ಬಯಸುತ್ತಿದ್ದಾರೆ. ಎಲ್​ಟಿಸಿಜಿಯನ್ನು ಕಡಿಮೆ ಮಾಡಿದರೆ ದೀರ್ಘಾವಧಿ ಹೂಡಿಕೆಗೆ ಉತ್ತೇಜನ ಸಿಕ್ಕಬಹುದು.

ಇದನ್ನೂ ಓದಿ: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

ಷೇರು ಖರೀದಿಸಿ 12 ತಿಂಗಳ ನಂತರ ಮಾರಿದರೆ ಅದಕ್ಕೆ ಎಲ್​ಟಿಸಿಜಿ ಅನ್ವಯ ಆಗುತ್ತದೆ. 12 ತಿಂಗಳ ಒಳಗೆ ಮಾರಿದರೆ, ಅದಕ್ಕೆ ಶಾರ್ಟ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ವಯ ಆಗುತ್ತದೆ. ಸದ್ಯ ಎಸ್​ಟಿಸಿಜಿ ಷೇರುಗಳಿಗೆ ಶೇ. 20ರಷ್ಟಿದೆ. ಷೇರುಗಳು, ಈಕ್ವಿಟಿ ಫಂಡ್​ಗಳಿಗೆ ಶೇ. 20 ಎಲ್​ಟಿಸಿಜಿ ಇದೆ. ಬೇರೆ ಆಸ್ತಿಗಳ ಮಾರಾಟದಿಂದ ಬಂದ ಲಾಭವಾದರೆ ಅದು ವ್ಯಕ್ತಿಯ ಆದಾಯ ತೆರಿಗೆ ಸ್ಲಾಬ್ ದರಗಳು ಅನ್ವಯ ಆಗುತ್ತದೆ.

ಸರ್ಕಾರದಿಂದ ಬಂಡವಾಳ ವೆಚ್ಚ ಹೆಚ್ಚಲಿ ಎನ್ನುವ ನಿರೀಕ್ಷೆ

ಕಳೆದ ಕೆಲ ವರ್ಷಗಳಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಮುಖ್ಯ ಶಕ್ತಿಯಾಗಿರುವುದು ಸರ್ಕಾರದ ಬಂಡವಾಳ ವೆಚ್ಚ. ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಿಗೆ ಸರ್ಕಾರದಿಂದ ಸಾಕಷ್ಟು ಬಂಡವಾಳ ವೆಚ್ಚ ಬೇಕಾಗುತ್ತದೆ. ಹಾಗೆಯೇ, ಡಿಫೆನ್ಸ್, ವಿದ್ಯುತ್, ಉತ್ಪಾದನೆ ಇತ್ಯಾದಿ ಕ್ಷೇತ್ರಗಳಲ್ಲೂ ಸರ್ಕಾರದಿಂದ ಹಣ ಹರಿದುಹೋಗಬೇಕಾಗುತ್ತದೆ. ಆರ್ಥಿಕ ಪ್ರಗತಿಗೆ ಕಾರಣವಾಗುವ ಸೆಕ್ಟರ್​ಗಳಿಗೆ ಬಜೆಟ್​ನಲ್ಲಿ ಎಷ್ಟು ಮಹತ್ವ ಕೊಡಲಾಗುತ್ತದೆ ಎಂಬುದನ್ನು ಗಮನಿಸಬೇಕಾಗುತ್ತದೆ.

ಇದನ್ನೂ ಓದಿ: ಬಜೆಟ್ 2026: ಆಸ್ಪತ್ರೆಗಳು ಹೆಚ್ಚಬೇಕು, ಸ್ಥಳೀಯ ಉತ್ಪಾದನೆ ಹೆಚ್ಚಬೇಕು- ಹೆಲ್ತ್​ಕೇರ್ ಉದ್ಯಮದ ಬಜೆಟ್ ನಿರೀಕ್ಷೆಗಳು…

ವಿತ್ತೀಯ ಕೊರತೆ ತಗ್ಗಿಸುವುದು ಸೇರಿದಂತೆ ಹಣಕಾಸು ಶಿಸ್ತು

ಸರ್ಕಾರವು ವಿತ್ತೀಯ ಕೊರತೆ ಅಥವಾ ಫಿಸ್ಕಲ್ ಡೆಫಿಸಿಟ್ ಅನ್ನು ತಗ್ಗಿಸುವತ್ತ ಗಮನ ಕೊಡುತ್ತಿದೆ. ಸಾಲವನ್ನೂ ಕೂಡ ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ. ಮುಂದಿನ ಐದಾರು ವರ್ಷದಲ್ಲಿ ಸಾಲವು ದೇಶದ ಜಿಡಿಪಿಯ ಶೇ. 50ಕ್ಕಿಂತ ಕಡಿಮೆ ಇರಲಾಗುವಂತೆ ಸರ್ಕಾರ ಗುರಿ ಇಟ್ಟಿದೆ. ಈ ರೀತಿ ಸರ್ಕಾರವು ಆರ್ಥಿಕ ಶಿಸ್ತು ಕಾಯ್ದುಕೊಂಡಾಗ ವಿದೇಶೀ ಹೂಡಿಕೆದಾರರು ದೇಶದ ಮಾರುಕಟ್ಟೆಗೆ ಬರುವುದು ಹೆಚ್ಚಾಗುತ್ತದೆ. ಹೂಡಿಕೆಗಳು ಹೆಚ್ಚಾದಾಗ ಮಾರುಕಟ್ಟೆ ಬೆಳೆಯುತ್ತದೆ, ಹೆಚ್ಚು ರಿಟರ್ನ್ಸ್ ಕೊಡುತ್ತದೆ. ಹೀಗಾಗಿ, ಬಜೆಟ್​ನಲ್ಲಿ ಫಿಸ್ಕಲ್ ಡೆಫಿಸಿಟ್​ಗೆ ಸರ್ಕಾರ ಎಷ್ಟು ಗುರಿ ಇಟ್ಟಿದೆ ಎಂದು ಗಮನಿಸಬೇಕಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ – Kannada News | Gilli Nata talks about Rakshita Shetty and his winning moment in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಅವರು ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅವರ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಓಡಿ ಬಂದು ಗಿಲ್ಲಿಯನ್ನು ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದ್ದರು. ಅದರ ಬಗ್ಗೆ ಗಿಲ್ಲಿ ನಟ ಅವರು ಈಗ ಮಾತನಾಡಿದ್ದಾರೆ. ‘ಒಂದು ವೇಳೆ ರಕ್ಷಿತಾ ಶೆಟ್ಟಿ ಗೆದ್ದಿದ್ದರೆ ನನಗೆ ಬೇಜಾರು ಆಗುತ್ತಿತ್ತು. ಅದು ಸಹಜ. ಆದರೆ ನಾನು ಗೆದ್ದಾಗ ರಕ್ಷಿತಾ ಬಂದು ಹಗ್ ಮಾಡಿ, ಅಭಿನಂದನೆ ತಿಳಿಸಿದಳು. ಅವಳು ಖುಷಿಪಟ್ಟಳು. ಆ ಖುಷಿ ನಿಜವಾಗಿ ಕಾಣಿಸುತ್ತಿತ್ತು. ನನ್ನ ಗೆಲುವಿನ ಖುಷಿ ಅವಳ ಕಣ್ಣಿನಲ್ಲಿ ಕಾಣಿಸಿತು. ಆ ಕಾರಣಕ್ಕಾಗಿಯೇ ಅವಳು ಎಲ್ಲರಿಗೂ ಇಷ್ಟ ಆಗುವುದು’ ಎಂದು ಗಿಲ್ಲಿ ನಟ (Gilli Nata) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ! – Kannada News | Prajwal Revanna case: Police officers get Rs 35 lakh cash incentive for effective case

ಬೆಂಗಳೂರು, (ಜನವರಿ 22): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು ಒಟ್ಟಾರೆ 35 ಲಕ್ಷ ರೂ. ಬಹುಮಾನವನ್ನು ಘೋಷಿಸಿದೆ.

ಯಾರ್ಯಾರಿಗೆ ಎಷ್ಟು ಹಣ?

ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ ಈ 25 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ.

ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರು, ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ) ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರು, ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರು. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.

ಆದೇಶದಲ್ಲೇನಿದೆ?

ಹಾಸನ ಜಿಲ್ಲಾ ಮಾಜಿ ಸಂಸದ ಪುಜ್ವಲ್ ರೇವಣ್ಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡವು ಸದರಿರವರುಗಳ ವಿರುದ್ಧ ಒಟ್ಟು 04 ಪಕರಣ ಮತ್ತು ಹೆಚ್.ಡಿ ರೇವಣ್ಣ ರವರ ವಿರುದ್ಧ ದಾಖಲಾಗಿರುವ ಒಟ್ಟು 01 ಪುಕರಣಗಳ ತನಿಖಾ ಕಾಲದಲ್ಲಿ ಸಮರ್ಪಕವಾಗಿ ತನಿಖೆ ಕೈಗೊಂಡು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಒಟ್ಟು 05 ಪ್ರಕರಣಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಿದ್ಧಪಡಿಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ. ಸದರಿ ಪುಕರಣಗಳ ಪೈಕಿ ಸಿ.ಐ.ಡಿ. ಸೈಬರ್ ಕ್ರೈಂ ಪೊಲೀಸ್ ಠಾಣಾ ಮೊ.ಸಂ.02/2024ರ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ವಿಚಾರಣೆ ಪೂರ್ಣಗೊಂಡು ಪುಕರಣದ ಆರೋಪಿಯಾದ ಪ್ರಜ್ವಲ್ ರೇವಣ್ಯ ಕೃತ್ಯ ಸಾಭೀತಾಗಿದ್ದರಿಂದ ಅಪರಾಧಿಗೆ ಅಜೀವ ಕಾರವಾಸ ಮತ್ತು 11,60,000 ರೂ. ದಂಡವನ್ನು ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.

ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಪಡೆಯಲ್ಲಿ ವೃತ್ತಿಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ನಗದು ಪ್ರಶಸ್ತಿಗಳನ್ನು ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:56 pm, Fri, 23 January 26

Source link

ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ – Kannada News | Weight Gain Mystery: When Eating Less Isn’t Enough

Doctors Reveal Why You Can Gain Weight On A Low Calorie DietImage Credit source: Getty Images

ದಪ್ಪವಾಗುವ ಭಯದಲ್ಲಿ ಕಡಿಮೆ ತಿನ್ನುವವರನ್ನು ನೀವು ನೋಡಿರಬಹುದು. ಆದರೂ ಕೂಡ ಅವರ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಲೇ ಇರುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವ ಆಸೆ ಇರುವವರು ಸಾಮಾನ್ಯವಾಗಿ ತಮ್ಮ ಆಹಾರದ ಮೇಲೆ ಹೆಚ್ಚಿನ ನಿಯಂತ್ರಣ ಇಟ್ಟುಕೊಂಡಿರುತ್ತಾರೆ. ಜೊತೆಗೆ ತುಂಬಾ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುತ್ತಾರೆ, ಇಷ್ಟಾದರೂ ಕೂಡ ಅವರ ತೂಕ (Weight) ನಿಯಂತ್ರಣದಲ್ಲಿರುವುದಿಲ್ಲ. ಇಂತಹ ಸಮಸ್ಯೆ ಇದ್ದರೆ, ಅದನ್ನು ಎಂದಿಗೂ ಹಗುರವಾಗಿ ಪರಿಗಣಿಸಬೇಡಿ. ಇದು ದೇಹದಲ್ಲಿನ ಕೆಲವು ಕಾಯಿಲೆಗಳ ಲಕ್ಷಣವಾಗಿರಬಹುದು. ಅಷ್ಟೇ ಅಲ್ಲ, ಚಯಾಪಚಯ ಕ್ರಿಯೆಗೆ ನೇರವಾಗಿ ಸಂಬಂಧಿಸಿರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ನಿಜವಾದ ಕಾರಣಗಳೇನು, ಯಾಕೆ ಈ ರೀತಿಯ ಸಮಸ್ಯೆ ಉಂಟಾಗುತ್ತದೆ, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ.

ರಾಜೀವ್ ಗಾಂಧಿ ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಅಜಿತ್ ಜೈನ್ ಅವರು ಹೇಳುವ ಪ್ರಕಾರ, ಕಡಿಮೆ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿದರೂ ಕೂಡ ತೂಕ ಹೆಚ್ಚಾಗುವುದು ಅನೇಕರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆ. ಅದರಲ್ಲಿಯೂ 40 ವರ್ಷದ ನಂತರ ಈ ರೀತಿಯಾಗುವುದು ಹೆಚ್ಚಾಗುತ್ತದೆ. ಇದಕ್ಕೆ ಪ್ರಮುಖ ಕಾರಣವೆಂದರೆ ನಿಧಾನ ಚಯಾಪಚಯ ಕ್ರಿಯೆ. ಒಬ್ಬ ವ್ಯಕ್ತಿಯ ದೇಹವು ಕ್ಯಾಲೊರಿಗಳನ್ನು ಸುಡುವಾಗ ತೆಗೆದುಕೊಳ್ಳುವ ಸಮಯ ನಿಧಾನವಾಗುವುದರಿಂದ ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತದೆ. ಹಾಗಾಗಿ ಏನೆ ತಿಂದರೂ ದೇಹದಲ್ಲಿ ಕೊಬ್ಬು ಸಂಗ್ರಹವಾಗುತ್ತದೆ, ಇದು ಬೊಜ್ಜು ಮತ್ತು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಹಾರ್ಮೋನುಗಳ ಅಸಮತೋಲನವೂ ಒಂದು ಪ್ರಮುಖ ಸಮಸ್ಯೆ:

ಡಾ. ಅಜಿತ್ ಹೇಳುವ ಪ್ರಕಾರ, ಆಹಾರ ಸೇವನೆಯ ಪ್ರಮಾಣವನ್ನು ಕಡಿಮೆ ಮಾಡಿದರೂ ಕೂಡ ತೂಕ ಹೆಚ್ಚಾಗುವುದಕ್ಕೆ ಮತ್ತೊಂದು ಪ್ರಮುಖ ಕಾರಣವೆಂದರೆ ಹಾರ್ಮೋನುಗಳ ಅಸಮತೋಲನ. ಇಂತಹ ಸಮಸ್ಯೆಗಳು ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಸಾಮಾನ್ಯವಾಗಿ ಪಿಸಿಓಎಸ್, ಋತುಬಂಧ ಅಥವಾ ಗರ್ಭಧಾರಣೆಯ ನಂತರ ಉಂಟಾಗುವ ಹಾರ್ಮೋನುಗಳ ಬದಲಾವಣೆಗಳಿಂದಾಗಿ ತೂಕ ಹೆಚ್ಚಾಗಬಹುದು. 40 ವರ್ಷದ ನಂತರ ಈ ಸಮಸ್ಯೆಗಳು ಹೆಚ್ಚು ಸಾಮಾನ್ಯವಾಗುತ್ತವೆ. ವಯಸ್ಸು ಹೆಚ್ಚಾದಂತೆ, ತೂಕ ಕೂಡ ಹೆಚ್ಚಾಗುತ್ತದೆ.

ಇದನ್ನೂ ಓದಿ: ಈ ಜ್ಯೂಸ್‌ ಕುಡಿಯಿರಿ, ನಿಮ್ಮ ಹೊಟ್ಟೆಯ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ

ಆಹಾರ ಸೇವನೆ ಮಾಡುವ ಸರಿಯಾದ ವಿಧಾನ ತಿಳಿಯದಿರುವುದು:

ಸಾಮಾನ್ಯವಾಗಿ ಕೆಲವರು ಆಹಾರವನ್ನು ಸರಿಯಾದ ರೀತಿಯಲ್ಲಿ ಸೇವನೆ ಮಾಡುವುದಿಲ್ಲ. ಅಂದರೆ, ಅಗತ್ಯಕ್ಕಿಂತ ಕಡಿಮೆ ತಿನ್ನುತ್ತಾರೆ ಅಥವಾ ದೀರ್ಘಕಾಲದವರೆಗೆ ಹಸಿವಿನಿಂದ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ, ದೇಹ ಕೊಬ್ಬನ್ನು ಸುಡುವುದಿಲ್ಲ ಬದಲಾಗಿ ಅದನ್ನು ಸಂಗ್ರಹಿಸಲು ಪ್ರಾರಂಭಿಸುತ್ತದೆ, ಹಾಗಾಗಿ ಈ ರೀತಿಯ ಅಭ್ಯಾಸಗಳು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಜೊತೆಗೆ ಸ್ಟೀರಾಯ್ಡ್ ಔಷಧಿಗಳನ್ನು ತೆಗೆದುಕೊಳ್ಳುವವರಲ್ಲಿಯೂ ಕೂಡ ಈ ರೀತಿಯ ಸಮಸ್ಯೆ ಕಂಡುಬರುತ್ತದೆ.

ತೂಕ ಹೆಚ್ಚಾಗುವುದನ್ನು ತಡೆಯಲು ಸಲಹೆಗಳು:

  • ಸಮತೋಲಿತ ಆಹಾರವನ್ನು ಸೇವನೆ ಮಾಡಿ. ಯಾವುದೇ ಕಾರಣಕ್ಕೂ ಕಡಿಮೆ ಪ್ರಮಾಣದಲ್ಲಿ ತಿನ್ನಬೇಡಿ.
  • ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ.
  • 7- 8 ಗಂಟೆ ನಿದ್ರೆ ಮಾಡುವುದನ್ನು ಮರೆಯಬೇಡಿ.
  • ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಅಥವಾ ಧ್ಯಾನವನ್ನು ಅಭ್ಯಾಸ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link