Headlines

‘ಇಂದಿರಾ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಟೈಟಲ್ ಬಗ್ಗೆ ಸ್ಪಷ್ಟನೆ ನೀಡಿದ ಚಿತ್ರತಂಡ – Kannada News | New Kannada movie titled Indira But not a political film

ಇಂದಿನ ತಲೆಮಾರಿನ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ಇಂದಿರಾ’ ಸಿನಿಮಾ (Indira Movie) ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಜೆನ್ ಜೀ (Gen Z) ಜೀವನ ಶೈಲಿಯ ಕುರಿತ ಕಥೆ ಇರಲಿದೆ. ಈ ತಲೆಮಾರಿನ ಯುವಕರ ಅಂಗೈಯಲ್ಲಿ ಯಾವಾಗಲೂ ಸ್ಮಾರ್ಟ್‌ ಪೋನ್‌ ಇರುತ್ತದೆ. ಈ ತಂತ್ರಜ್ಞಾನವನ್ನು ಹೇಗೆಲ್ಲ ಬಳಸಿಕೊಳ್ಳಲಾಗುತ್ತಿದೆ? ಹೇಗೆಲ್ಲ ಬಳಸಿಕೊಳ್ಳಬಹುದು ಎಂಬ ಕಥೆಯನ್ನು ‘ಇಂದಿರಾ’ ಸಿನಿಮಾ ಮೂಲಕ ಹೇಳಲಾಗುವುದು. ಈ ಹಿಂದೆ ‘ರಾವೆನ್‌’ ಸಿನಿಮಾ ನಿರ್ದೇಶಿಸಿದ್ದ ವೇದ್‌ ಅವರು ಈಗ ‘ಇಂದಿರಾ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ…

Read More

ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್​​​ ಹೋಗಬಹುದು!: KSTDC ವಿಶೇಷ ಪ್ಯಾಕೇಜ್ – Kannada News | Escape City Rush: Affordable KSTDC One Day Trip to Bangalore Rural Temples and Forts

ನಾಳೆಯಿಂದ ಸಾಲು ಸಾಲು ರಜೆಗಳು ಇದೆ. ಈ ರಜೆಯಲ್ಲಿ ಎಲ್ಲಿಗೆ ಹೋಗುವುದು ಎಂಬ ಯೋಚನೆ ಇರಬಹುದು. ಇನ್ನು ಕೆಲವರಿಗೆ ತಿಂಗಳ ಕೊನೆ, ಈ ಕೈಯಲ್ಲಿ ಕಾಸು ಇರಲ್ಲ, ಅದರೂ ಚಿಕ್ಕದಾಗಿ ಟೂರ್​​​ ಪ್ಯಾನ್​​ ಮಾಡಬೇಕೆಂದು ಅದುಕೊಂಡಿದ್ದಾರೆ. ನಿಮಗೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಈ ಪ್ಯಾಕೇಜ್​​ ಉತ್ತಮ. ಒಂದೇ ದಿನದಲ್ಲಿ ಇಷ್ಟು ಸ್ಥಳಗಳನ್ನು ನೋಡಬಹುದು. ಈ ಒಂದು ದಿನ ಪ್ಲಾನ್​​ ಮಾಡಿಕೊಂಡಿದ್ದರೆ,ಗಣರಾಜ್ಯೋತ್ಸವದ ದಿನ ಉತ್ತಮ. ಕಡಿಮೆ ದರದಲ್ಲಿ ಈ ಟೂರ್​​ಗೆ ಹೋಗಿ ಬರುಬಹುದು. ಬೆಳಿಗ್ಗೆ…

Read More

ಹುಬ್ಬಳ್ಳಿಯ ಮಾಲ್​ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್ – Kannada News | Hubballi Sukhasagara Mall Fire: Short Circuit Causes Lakhs in Damage

ಹುಬ್ಬಳ್ಳಿ, ಜನವರಿ 23: ಅದು ನಗರದ ಪ್ರಮುಖ ವ್ಯಾಪಾರ ಏರಿಯಾ. ಆದರೆ ರಾತ್ರಿ ಸಮಯದಲ್ಲಿ ನಾಲ್ಕು ಅಂತಸ್ತಿನ ಮಾಲ್​ನಲ್ಲಿ (Mall) ಹೊತ್ತಿಕೊಂಡ ಬೆಂಕಿ (Fire) ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣ ಮಾಡಿತ್ತು. ಮಾಲ್​ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಮತ್ತೊಂದೆಡೆ ಸುತ್ತಮುತ್ತಲಿನ ವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಲು ಆರಂಭಿಸಿತ್ತು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ನಡೆದದ್ದೇನು? ಮರಾಠ ಗಲ್ಲಿಯಲ್ಲಿರುವ ಸುಪ್ರಸಿದ್ಧ ಸುಖಸಾಗರ ಮಾಲ್​ನಲ್ಲಿ ಕಳೆದ ರಾತ್ರಿ 12 ಗಂಟೆ ಸಮಯಕ್ಕೆ…

Read More

ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ – Kannada News | Threatening Sidlaghatta CMC commissioner: Congress Suspends Rajeev Gowda From Party

ಬೆಂಗಳೂರು/ಚಿಕ್ಕಬಳ್ಳಾಪುರ, (ಜನವರಿ 23): ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನನ್ನು  (Rajeev Gowda)  ಕಾಂಗ್ರೆಸ್​​ (Congress) ಪಕ್ಷದಿಂದ ಅಮಾನತು ಮಾಡಿದೆ. ಇಂದು (ಜನವರಿ 23) ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜೀವ್ ಗೌಡ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂದಿರುವ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ…

Read More

ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ? – Kannada News | Big Boss Kannada 12: Gilli’s Gold Chain Gift from Sharavana – 20 Lakh Secret Revealed

ಗಿಲ್ಲಿಗೆ ಶರವಣ ಚಿನ್ನ ಹಾಕಿದ ಕ್ಷಣ (ಚಿತ್ರ: ಶ್ರೀಕಾಂತ್ ಗೌಡ) ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನ (Gilli Nata) ಲಕ್ ಸಂಪೂರ್ಣವಾಗಿ ಬದಲಾಗಿದೆ. ಬಿಗ್ ಬಾಸ್​ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು ಕಡೆ. ಇದರ ಜೊತೆಗೆ ಧನಲಕ್ಷ್ಮೀ ಕೂಡ ಗಿಲ್ಲಿಯನ್ನು ಹುಡುಕಿ ಬರುತ್ತಿದೆ. ಹೀಗಿರುವಾಗಲೇ ಗಿಲ್ಲಿ ನಟನಿಗೆ ಶರವಣ ಅವರು ಗೋಲ್ಡ್ ಚೈನ್ ಗಿಫ್ಟ್ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ವಿಡಿಯೋನ…

Read More

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು…

Read More

Weekly Love Horoscope: ಈ ರಾಶಿಯವರ ಪ್ರೀತಿಗೆ ಮನೆಯವರಿಂದ ಸಮ್ಮತಿ – Kannada News | January 25 31 Love Horoscope: Zodiac Predictions for Romance and Relationships

ಮೇಷ ರಾಶಿ : ಈ ವಾರ ಪ್ರೇಮಿಗಳಿಗೆ ಅತ್ಯಂತ ಶುಭದಾಯಕವಾಗಿದೆ. ನಿಮ್ಮ ಪ್ರೀತಿಗೆ ಮನೆಯಲ್ಲಿ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆಯಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ವೃಷಭ ರಾಶಿ : ಸಂಬಂಧಗಳಲ್ಲಿ ತಾಳ್ಮೆ ಬಹಳ ಮುಖ್ಯ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬಂದರೂ ಪ್ರೀತಿಯಿಂದ ಬಗೆಹರಿಸಿಕೊಳ್ಳಿ. ಪ್ರಣಯ ಜೀವನದಲ್ಲಿ ಹೊಸ ಚೈತನ್ಯ ಬರಲಿದೆ. ಮಿಥುನ ರಾಶಿ : ಸಂಗಾತಿಯೊಂದಿಗೆ ಸಣ್ಣ ಪ್ರವಾಸಕ್ಕೆ ಹೋಗುವ ಯೋಗವಿದೆ. ನಿಮ್ಮ ಕ್ರಿಯಾಶೀಲತೆಯು ಪ್ರೇಮ ಜೀವನವನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ. ಕರ್ಕಾಟಕ ರಾಶಿ : ನಿಮ್ಮ ಭಾವನೆಗಳನ್ನು…

Read More

ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ‘ಮಾರ್ಕ್‌’: ಜ.23ರಿಂದ 4 ಭಾಷೆಗಳಲ್ಲಿ ಪ್ರಸಾರ – Kannada News | Mark movie on Jio Hotstar OTT streaming in 4 languages ​​from January 23

2025ರ ಬಹುನಿರೀಕ್ಷೆಯ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದ ಸಿನಿಮಾಗಳ ಪೈಕಿ ಕಿಚ್ಚ ಸುದೀಪ್‌ ನಟನೆಯ ‘ಮಾರ್ಕ್‌’ (Mark Movie) ಸಹ ಒಂದು. ಅಪಾರ ನಿರೀಕ್ಷೆಯಂತೆ, ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಡಿಸೆಂಬರ್‌ 25ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು ಈ ಸಿನಿಮಾ. ಆ್ಯಕ್ಷನ್‌ ಥ್ರಿಲ್ಲರ್‌ ಅಡ್ವೆಂಚರ್‌ ಜಾನರ್‌ನ ‘ಮಾರ್ಕ್‌’ ಸಿನಿಮಾಗೆ ಮೆಚ್ಚುಗೆಯ ಮಾತುಗಳೂ ಕೇಳಿಬಂದಿದ್ದವು. ಮಾಸ್‌ ಎಂಟರ್‌ಟೈನರ್‌ ಎಂಬಂತಹ ಪಾಸಿಟಿವ್‌ ವಿಮರ್ಶೆಗಳನ್ನೂ ಪಡೆದುಕೊಂಡಿತ್ತು ಈ ಸಿನಿಮಾ. ‘ಮಾರ್ಕ್‌’ ಸಿನಿಮಾದ ಒಟಿಟಿ (OTT) ಪ್ರಸಾರದ ಹಕ್ಕುಗಳನ್ನು ‘ಜಿಯೋ ಹಾಟ್‌ಸ್ಟಾರ್‌’ (Jio Hotstar)…

Read More

ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ – Kannada News | Beat Bengaluru Traffic Stress: Techie’s Health Secret and WFH Impact

ಬೆಂಗಳೂರು, ಜ.23: ಜನದಟ್ಟಣೆಗೆ ವಿಶ್ವಪ್ರಸಿದ್ಧಯನ್ನು ಪಡೆದಿರುವ ಬೆಂಗಳೂರು ಟ್ರಾಫಿಕ್ (Bengaluru traffic health)​​​​​​ ಅನೇಕರಿಗೆ ಕಿರಿಕಿರಿಯನ್ನು ಉಂಟು ಮಾಡಿದ್ರೆ, ಈ ವ್ಯಕ್ತಿಯನ್ನು ಮಾತ್ರ ಆರೋಗ್ಯವಂತನಾಗಿ ಮಾಡಿದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಆಗುವ ನಕಾರಾತ್ಮಕ ವಿಚಾರಗಳ ಬಗ್ಗೆ ತುಂಬಾ ತಲೆಬಿಸಿ ಮಾಡಿಕೊಳ್ಳಬಾರದು. ಅಂತಹ ವಿಷಯಗಳಿಂದ ಹೊಸ ದಾರಿಯನ್ನು ಕಂಡುಕೊಳ್ಳಬೇಕು ಎಂಬುದಕ್ಕೆ ಈ ವ್ಯಕ್ತಿ ಉದಾಹರಣೆ ನೋಡಿ.  ಟ್ರಾಫಿಕ್‌ ತನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ ಎಂದು ಈ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ….

Read More

ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ – Kannada News | Chamarajanagar: Mahadeshwara Betta Bans Night Padyatra After Deadly Leopard Incident

ಚಾಮರಾಜನಗರ, ಜನವರಿ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ (Leopard) ದಾಳಿಗೆ ಭಕ್ತ (Devotees) ಪ್ರವೀಣ್ ಬಲಿ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಇನ್ಮುಂದೆ ರಾತ್ರಿ ವೇಳೆ ಬೆಟ್ಟಕ್ಕೆ ಪಾದಯಾತ್ರೆಗೆ ನಿರ್ಬಂಧ ಹೇರಲಾಗಿದೆ. ಕಾಡುಪ್ರಾಣಿಗಳ ಕಾಟ ಹಿನ್ನೆಲೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ಹಿನ್ನೆಲೆ …

Read More