Category Archives: Blog

Your blog category

ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ – Kannada News | Threatening Sidlaghatta CMC commissioner: Congress Suspends Rajeev Gowda From Party

ಬೆಂಗಳೂರು/ಚಿಕ್ಕಬಳ್ಳಾಪುರ, (ಜನವರಿ 23): ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನನ್ನು  (Rajeev Gowda)  ಕಾಂಗ್ರೆಸ್​​ (Congress) ಪಕ್ಷದಿಂದ ಅಮಾನತು ಮಾಡಿದೆ. ಇಂದು (ಜನವರಿ 23) ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜೀವ್ ಗೌಡ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂದಿರುವ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಖಡಕ್ ಮಾತು

ಈ ಬಗ್ಗೆ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ಮಾತನಾಡಿದ್ದು, ಜನವರಿ 12ರಂದು ಸಂಜೆ ನಡೆದ ದೂರವಾಣಿ ಸಂಭಾಷಣೆಯಿಂದ ಅಧಿಕಾರಿಗಳಲ್ಲಿ ಆತಂಕ ಉಂಟಾಗಿತ್ತು. ಅವರು ದೂರು ಕೊಟ್ಟ ತಕ್ಷಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಅವರ ಮೇಲೆ ದೂರು ಕೂಡ ದಾಖಲಾಗಿದೆ. ಈಗ ಉತ್ತರ ಕೊಡದ ಕಾರಣ ಪಕ್ಷದಿಂದ ಅಮಾನತು ಮಾಡಲಾಗಿದೆ. ಅಧಿಕಾರಿಗಳ ಗೌರವ ಉಳಿಸುವ ಕಾರ್ಯ ನಾವು ಮಾಡಿದ್ದೇವೆ. ಅವರು ತಲೆ ಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸುವ ಕೆಲಸ ಆಗುತ್ತದೆ. ಮುನಿಯಪ್ಪ ಅವರಿಗೆ ಆತ್ಮೀಯತೆ ಇರಬಹುದು. ಆದ್ರೆ ಆಡಿಯೋ‌‌ ಕೇಳಿದ್ರೆ ನಾಗರಿಕ ಸಮಾಜ ಮೆಚ್ಚುವಂತದಲ್ಲ. ಆತ್ಮೀಯತೆ ಇದೆ ಎಂದರೆ ಅವರ ಪರವಾಗಿ ಮುನಿಯಪ್ಪ ಇದಾರೆ ಅಂತಲ್ಲ. ಸಿಎಂ, ಡಿಸಿಎಂ, ಗೃಹ ಸಚಿವರು ಸೂಚನೆ ಕೊಟ್ಟಿದ್ದಾರೆ. ಕೂಡಲೇ ಅವರನ್ನು ಬಂಧಿಸುವ ಕೆಲಸ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಬ್ಯಾನರ್ ವಿಚಾರಕ್ಕೆ ಮಹಿಳಾ ಅಧಿಕಾರಿಗೆ ಕರೆ ಮಾಡಿ ಬಾಯಿಗೆ ಬಂದಂತೆ ಬೈದು ಧಮ್ಕಿ ಹಾಕಿದ್ದು, ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಇಟ್ಟುಕೊಂಡು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಸ್ತ್ರವನ್ನಾಗಿ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಹೀಗಾಗಿ ಪಕ್ಷಕ್ಕೆ ಮಜುಗರವಾಗಿರುವುದಿರಂದ ಕಾಂಗ್ರೆಸ್ ಈ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.

ಇದನ್ನೂ ಓದಿ: ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಅಮಾನತಿಗೆ ಶಿಫಾರಸ್ಸು ಮಾಡಿದ್ದ ಕಾರ್ಯಾಧ್ಯಕ್ಷ

ಪ್ರಕರಣ ನಡೆದ ಸಂಬಂಧ ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದ್ರೆ, ನೋಟಿಸ್​​ಗೆ ಯಾವುದೇ ಉತ್ತರ, ಪ್ರತಿಕ್ರಿಯೆ ನೀಡಿರಲಿಲ್ಲ. ಇದರ ಬೆನ್ನಲ್ಲೇ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು ನಿನ್ನೆ (ಜನವರಿ 22) ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದ್ದರು.

ರಾಜೀವ್ ಗೌಡ ಅವರ ನಡೆ ಮಾಧ್ಯಮಗಳಲ್ಲಿ ಪ್ರಚಾರಗೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯ ಮಟ್ಟದ ನಾಯಕರಿಗೆ ತೀವ್ರ ಮುಜುಗರ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಅವರು ಶಿಸ್ತು ಸಮಿತಿಗೆ ಪತ್ರ ಬರೆದಿದ್ದರು. ‘ಪಕ್ಷದ ಘನತೆಗೆ ಧಕ್ಕೆ ತಂದಿರುವ ರಾಜೀವ್ ಗೌಡ ಅವರನ್ನು ತಕ್ಷಣವೇ ಪಕ್ಷದಿಂದ ಅಮಾನತುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಇಂದಿನ ಸಭೆಯಲ್ಲಿ ರಾಜೀವ್ ಗೌಡನನನ್ನು ಪಕ್ಷದಿಂದ ಸಸ್ಪೆಂಡ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ಇದುವರೆಗೂ ರಾಜೀವ್ ಗೌಡನ ಬಂಧನವಾಗಿಲ್ಲ

ಬ್ಯಾನರ್ ತೆರವು ಮಾಡಿರುವ ಸಂಬಂಧ ರಾಜೀವ್ ಗೌಡ, ಶಿಡ್ಲಘಟ್ಟ ಮಹಿಳಾ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಅಮೃತಾ ಅವರು ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಪೊಲೀಸರು ಸಹ ಎಫ್​​ಐಆರ್ ದಾಖಲಿಸಿದ್ದಾರೆ. ಆದ್ರೆ, ಇದುವರೆಗೂ ರಾಜೀವ್ ಗೌಡನನ್ನು ಬಂಧಿಸಲು ಆಗಿಲ್ಲ. ಇನ್ನು ರಾಜೀವ್ ಗೌಡ ಎಲ್ಲಿದ್ದಾನೆ ಎನ್ನುವ ಸುಳಿವು ಸಹ ಸಿಕ್ಕಿಲ್ಲ. ಇನ್ನೊಂದೆಡೆ ಸಚಿವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಬೇಕಂತಲೇ ರಾಜೀವ್ ಗೌಡನನ್ನು ಬಂಧಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಹೈಕೋರ್ಟ್​​​ನಲ್ಲೂ ಅರ್ಜಿ ವಜಾ

ಇನ್ನು ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಅಜ್ಞಾತ ಸ್ಥಳದಿಂದಲೇ ರಾಜೀವ್ ಗೌಡ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​​ ಸಹ ರಾಜೀವ್​​​​ ಗೌಡನನ್ನು ತರಾಟೆಗೆ ತೆಗೆದುಕೊಂಡು ಅರ್ಜಿ ವಜಾ ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ? – Kannada News | Big Boss Kannada 12: Gilli’s Gold Chain Gift from Sharavana – 20 Lakh Secret Revealed

ಗಿಲ್ಲಿಗೆ ಶರವಣ ಚಿನ್ನ ಹಾಕಿದ ಕ್ಷಣ (ಚಿತ್ರ: ಶ್ರೀಕಾಂತ್ ಗೌಡ)

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನ (Gilli Nata) ಲಕ್ ಸಂಪೂರ್ಣವಾಗಿ ಬದಲಾಗಿದೆ. ಬಿಗ್ ಬಾಸ್​ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು ಕಡೆ. ಇದರ ಜೊತೆಗೆ ಧನಲಕ್ಷ್ಮೀ ಕೂಡ ಗಿಲ್ಲಿಯನ್ನು ಹುಡುಕಿ ಬರುತ್ತಿದೆ. ಹೀಗಿರುವಾಗಲೇ ಗಿಲ್ಲಿ ನಟನಿಗೆ ಶರವಣ ಅವರು ಗೋಲ್ಡ್ ಚೈನ್ ಗಿಫ್ಟ್ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ವಿಡಿಯೋನ ವೈರಲ್ ಆಗಿದ್ದು, ಗಮನ ಸೆಳೆಯುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ರನ್ನರ್ ಅಪ್​​ ರಕ್ಷಿತಾ ಶೆಟ್ಟಿಗೆ ಸಾಯಿ ಗೋಲ್ಡ್ ಪ್ಯಾಲೆಸ್​​​ ಮುಖ್ಯಸ್ಥ ಶರವಣ ಕಡೆಯಿಂದ 20 ಲಕ್ಷ ರೂಪಾಯಿ ವೋಚರ್ ನೀಡಲಾಗಿದೆ. ಸಾಯಿ ಗೋಲ್ಡ್ ಪ್ಯಾಲೆಸ್​​​ನಲ್ಲಿ 20 ಲಕ್ಷ ರೂಪಾಯಿವರೆಗೆ ಚಿನ್ನ ಖರೀದಿಸೋ ಅವಕಾಶ ಇದೆ. ವೇದಿಕೆಗೆ ಬಂದು ಅವರು ವೋಚರ್​​ನ ರಕ್ಷಿತಾಗೆ ನೀಡಿದ್ದರು.

ಶರವಣ ಅವರಿಗೆ ಗಿಲ್ಲಿ ಬಗ್ಗೆ ವಿಶೇಷ ಒಲವು ಇದೆ. ಫಿನಾಲೆಗೆ ತೆರಳುವುದಕ್ಕೂ ಮೊದಲು ಮಾತನಾಡಿದ್ದ ಶರವಣ ಅವರು, ‘ಗಿಲ್ಲಿನೇ ಗೆಲ್ತಾನೆ’ ಎಂದು ಭವಿಷ್ಯ ನುಡಿದಿದ್ದರು. ‘ಗಿಲ್ಲಿ ಗೆದ್ರೆ ನನ್ನ ಕಡೆಯಿಂ 20 ಲಕ್ಷ ರೂಪಾಯಿ ಕೊಡ್ತೀನಿ’ ಎಂದಿದ್ದರು. ಆದರೆ, ಬಿಗ್ ಬಾಸ್ ವೇದಿಕೆ ಮೇಲೆ ಅವರು ಈ ಹಣವನ್ನು ನೀಡಿರಲಿಲ್ಲ. ಈಗ ಶಾಪ್ ಓಪನಿಂಗ್​​ಗೆ ಬಂದ ಗಿಲ್ಲಿಗೆ ಅವರು ಚಿನ್ನದ ಚೈನ್ ಹಾಕಿದ್ದಾರೆ.

ಇದನ್ನೂ ಓದಿ: ‘ತುಂಬಾ ಗೊಂದಲದಲ್ಲಿದ್ದೇನೆ’; ಮುಂದಿನ ಪ್ಲ್ಯಾನ್ ಬಗ್ಗೆ ಕನ್​​ಫ್ಯೂಸ್ ಆದ ಗಿಲ್ಲಿ ನಟ

ಈ ವಿಡಿಯೋ ನೋಡಿದ ಅನೇಕರು, 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕೊಟ್ಟಿರಬಹುದು ಎಂದು ಊಹಿಸಿದ್ದಾರೆ. ಆದರೆ, ಹಾಗಿಲ್ಲ ಎನ್ನಲಾಗುತ್ತಿದೆ. ಏಕೆಂದರೆ ಶಾಪ್​​ ಓಪನಿಂಗ್​​​ಗೆ ಬರೋ ಸೆಲೆಬ್ರಿಟಿಗಳಿಗೆ ಚಿನ್ನದ ಸರವನ್ನು ಹಾಕೋದು ಶರವಣ ಅವರ ಸ್ಟೈಲ್. ಈ ಮೊದಲು ಕಿಚ್ಚ ಸುದೀಪ್ ಅವರು ಶರಣವಣ ಅವರ ಶಾಪ್​​ಗೆ ಬಂದಾಗ ಇದೇ ರೀತಿಯ ಚೈನ್ ಹಾಕಿದ್ದರು. ಈ ಬಗ್ಗೆ ಅವರ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ

ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KKRTC ಬಸ್​ ಚಕ್ರಕ್ಕೆ ಸಿಲುಕಿ ಬಾಲಕಿ ಸಾವು

KKRTC ಬಸ್​ ಚಕ್ರಕ್ಕೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡೆದಿದೆ. ದಿವ್ಯಾಶ್ರೀ ದೇವರಾಜ(5) ಮೃತ ಬಾಲಕಿಯಾಗಿದ್ದು, ರಸ್ತೆ ಪಕ್ಕದ ಮನೆ ಮುಂದೆ ಆಟವಾಡುವಾಗ ಬಸ್ ಹರಿದು ಅವಘಡ ಸಂಭವಿಸಿದೆ. ಗಬ್ಬೂರಿನಿಂದ ಗೂಗಲ್ ಗ್ರಾಮಕ್ಕೆ ಬಸ್​​ ತೆರಳುತ್ತಿತ್ತು ಎನ್ನಲಾಗಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ; ಪ್ರಾಣಿ ದಾಳಿಯೋ? ಕೊಲೆಯೋ?

ಬೈಕ್​​ಗೆ ಹಿಂಬದಿಯಿಂದ ಆಟೋ ಡಿಕ್ಕಿ

ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿ ಹಿಂಬದಿಯಿಂದ ಆಟೋ ಡಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರನ ನಿರ್ಲಕ್ಷ್ಯ ಹಾಗೂ ಆಟೋ ಚಾಲಕನ ವೇಗವೇ ಘಟನೆಗೆ ಕಾರಣ ಎನ್ನಲಾಗಿದ್ದು, ಬೈಕ್​​ಗೆ ಆಟೋ ಗುದ್ದುವ ದೃಶ್ಯ ಅಂಬೇಡ್ಕರ್ ವೃತ್ತದಲ್ಲಿರುವ ಅಂಗಡಿಯೊಂದರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬೈಕ್​​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕಸ್ಮಿಕ ಬೆಂಕಿಗೆ ಟಿಪ್ಪರ್ ಸುಟ್ಟು ಕರಕಲು

ಸುಟ್ಟು ಕರಕಲಾಗಿರುವ ಟಿಪ್ಪರ್​​

ತುಮಕೂರು ಜಿಲ್ಲೆ ತುರುವೇಕರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿದೆ. ಗುಬ್ಬಿ ಕಡೆಯಿಂದ ತುರುವೇಕೆರೆಗೆ ಸಾಗುತ್ತಿದ್ದ ಟಿಪ್ಪರ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ತುರುವೇಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:41 pm, Fri, 23 January 26

Source link

Weekly Love Horoscope: ಈ ರಾಶಿಯವರ ಪ್ರೀತಿಗೆ ಮನೆಯವರಿಂದ ಸಮ್ಮತಿ – Kannada News | January 25 31 Love Horoscope: Zodiac Predictions for Romance and Relationships

ಮೇಷ ರಾಶಿ :

ಈ ವಾರ ಪ್ರೇಮಿಗಳಿಗೆ ಅತ್ಯಂತ ಶುಭದಾಯಕವಾಗಿದೆ. ನಿಮ್ಮ ಪ್ರೀತಿಗೆ ಮನೆಯಲ್ಲಿ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆಯಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.

ವೃಷಭ ರಾಶಿ :

ಸಂಬಂಧಗಳಲ್ಲಿ ತಾಳ್ಮೆ ಬಹಳ ಮುಖ್ಯ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬಂದರೂ ಪ್ರೀತಿಯಿಂದ ಬಗೆಹರಿಸಿಕೊಳ್ಳಿ. ಪ್ರಣಯ ಜೀವನದಲ್ಲಿ ಹೊಸ ಚೈತನ್ಯ ಬರಲಿದೆ.

ಮಿಥುನ ರಾಶಿ :

ಸಂಗಾತಿಯೊಂದಿಗೆ ಸಣ್ಣ ಪ್ರವಾಸಕ್ಕೆ ಹೋಗುವ ಯೋಗವಿದೆ. ನಿಮ್ಮ ಕ್ರಿಯಾಶೀಲತೆಯು ಪ್ರೇಮ ಜೀವನವನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ.

ಕರ್ಕಾಟಕ ರಾಶಿ :

ನಿಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಇದು ಸೂಕ್ತ ಸಮಯ. ಸಂಗಾತಿಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆಯ ಮಾತುಗಳನ್ನು ಹೇಳುವಿರಿ.

​ಸಿಂಹ ರಾಶಿ :

ಸಂಬಂಧಗಳಲ್ಲಿನ ಗೊಂದಲಗಳು ದೂರವಾಗುತ್ತವೆ. ನಿಮ್ಮ ಆಕರ್ಷಕ ಮಾತಿನಿಂದ ಸಂಗಾತಿಯ ಮನ ಗೆಲ್ಲುವಿರಿ. ಆದರೆ ಹಳೆಯ ವಿಷಯಗಳನ್ನು ಕೆದಕಬೇಡಿ.

ಕನ್ಯಾ ರಾಶಿ :

ನಿಮ್ಮ ಸಂಗಾತಿಯ ಭಾವನೆಗಳಿಗೆ ಗೌರವ ನೀಡಿ. ನೀವು ಒಬ್ಬಂಟಿಯಾಗಿದ್ದರೆ, ಹಳೆಯ ಸ್ನೇಹಿತರ ಮೂಲಕ ಹೊಸ ಪ್ರೇಮ ಸಂಬಂಧಗಳು ಅಚಾನಕ್ಕಾಗಿ ಬೆಳೆಯಬಹುದು.

ತುಲಾ ರಾಶಿ :

ಮನಸ್ಸಿನ ಗೊಂದಲಗಳನ್ನು ಬಿಟ್ಟು ನೇರವಾಗಿ ಮಾತನಾಡಿ. ಈ ವಾರ ನಿಮ್ಮ ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಅಥವಾ ಸರ್‌ಪ್ರೈಸ್ ನಿರೀಕ್ಷಿಸಬಹುದು.

ವೃಶ್ಚಿಕ ರಾಶಿ :

ತೀವ್ರವಾದ ಭಾವನೆಗಳು ನಿಮ್ಮನ್ನು ಕಾಡಬಹುದು. ಯಾರೋ ಒಬ್ಬರ ಮೇಲೆ ವಿಶೇಷ ಆಕರ್ಷಣೆ ಉಂಟಾಗಲಿದೆ. ಸತ್ಯಕ್ಕೆ ಮತ್ತು ನೈಜತೆಗೆ ಆದ್ಯತೆ ನೀಡಿ.

​ಧನು ರಾಶಿ :

ಪ್ರೀತಿಯ ವಿಷಯದಲ್ಲಿ ಹೊಸ ಆಯಾಮಗಳು ತೆರೆದುಕೊಳ್ಳುತ್ತವೆ. ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯ ಕಳೆಯಲು ಇದು ಸಕಾಲ.

ಮಕರ ರಾಶಿ :

ಪ್ರೀತಿಯ ವಿಷಯದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಉತ್ತಮ ವಾರ. ಸಂಬಂಧಗಳಲ್ಲಿ ಪ್ರಾಮಾಣಿಕತೆ ಮತ್ತು ನಿಷ್ಠೆ ನಿಮ್ಮನ್ನು ಹತ್ತಿರವಾಗಿಸುತ್ತದೆ.

​ಕುಂಭ ರಾಶಿ :

ಈ ವಾರ ದ್ವಾದಶ ರಾಶಿಯಲ್ಲಿ ಶುಕ್ರನ ಸಂಚಾರವಿರುವುದರಿಂದ, ನೀವು ಹೆಚ್ಚು ಆಕರ್ಷಕವಾಗಿ ಕಂಡರೂ ಪ್ರಯೋಜನವಾಗದು. ಹೊಸ ಪರಿಚಯಗಳು ಪ್ರೇಮವಾಗಿ ಬದಲಾಗಿ, ವಿಘ್ನವುಂಟಾಗುವುದು.

​ಮೀನ ರಾಶಿ :

ಪ್ರೀತಿ ನಿಮ್ಮ ಆಪ್ತ ವಲಯದಲ್ಲಿಯೇ ಇರಬಹುದು. ಸ್ನೇಹಿತರ ಸಹಾಯದಿಂದ ಪ್ರೇಮ ಸಂಬಂಧಗಳು ಸುಧಾರಿಸುತ್ತವೆ. ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ.

-ಲೋಹಿತ ಹೆಬ್ಬಾರ್ – 8762924271 (what’s app only)

Published On – 2:26 pm, Fri, 23 January 26

Source link

ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ‘ಮಾರ್ಕ್‌’: ಜ.23ರಿಂದ 4 ಭಾಷೆಗಳಲ್ಲಿ ಪ್ರಸಾರ – Kannada News | Mark movie on Jio Hotstar OTT streaming in 4 languages ​​from January 23

2025ರ ಬಹುನಿರೀಕ್ಷೆಯ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದ ಸಿನಿಮಾಗಳ ಪೈಕಿ ಕಿಚ್ಚ ಸುದೀಪ್‌ ನಟನೆಯ ‘ಮಾರ್ಕ್‌’ (Mark Movie) ಸಹ ಒಂದು. ಅಪಾರ ನಿರೀಕ್ಷೆಯಂತೆ, ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಡಿಸೆಂಬರ್‌ 25ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು ಈ ಸಿನಿಮಾ. ಆ್ಯಕ್ಷನ್‌ ಥ್ರಿಲ್ಲರ್‌ ಅಡ್ವೆಂಚರ್‌ ಜಾನರ್‌ನ ‘ಮಾರ್ಕ್‌’ ಸಿನಿಮಾಗೆ ಮೆಚ್ಚುಗೆಯ ಮಾತುಗಳೂ ಕೇಳಿಬಂದಿದ್ದವು. ಮಾಸ್‌ ಎಂಟರ್‌ಟೈನರ್‌ ಎಂಬಂತಹ ಪಾಸಿಟಿವ್‌ ವಿಮರ್ಶೆಗಳನ್ನೂ ಪಡೆದುಕೊಂಡಿತ್ತು ಈ ಸಿನಿಮಾ. ‘ಮಾರ್ಕ್‌’ ಸಿನಿಮಾದ ಒಟಿಟಿ (OTT) ಪ್ರಸಾರದ ಹಕ್ಕುಗಳನ್ನು ‘ಜಿಯೋ ಹಾಟ್‌ಸ್ಟಾರ್‌’ (Jio Hotstar) ಪಡೆದುಕೊಂಡಿದೆ. ಜನವರಿ 23ರ ಶುಕ್ರವಾರ ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆರಂಭ ಆಗಿದೆ.

ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಪ್ರಸಾರ ಆರಂಭಿಸಿದೆ. ಥಿಯೇಟರ್‌ಗಳಲ್ಲಿ ಈ ಚಿತ್ರವನ್ನು ಮಿಸ್‌ ಮಾಡಿಕೊಂಡವರು, ಇನ್ನೊಮ್ಮೆ ಸಿನಿಮಾ ನೋಡಬೇಕೆಂದುಕೊಂಡವರಿಗೆ ಇದೀಗ ಜಿಯೋ ಹಾಟ್‌ಸ್ಟಾರ್‌ ಸರ್ಪ್ರೈಸ್‌ ನೀಡಿದೆ. ಹಾಗಾದರೆ ಮತ್ಯಾಕೆ ತಡ, ಈಗಲೇ ಜಿಯೋ ಹಾಟ್‌ಸ್ಟಾರ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡು ಸಿನಿಮಾ ವೀಕ್ಷಿಸಿ.

ಮಾರ್ಕ ಸಿನಿಮಾ ಕಥೆ: ಅಜಯ್‌ ಮಾರ್ಕಂಡೇಯ ಅಲಿಯಾಸ್‌ ಮಾರ್ಕ್‌. ಕಥಾನಾಯಕ ಮಾರ್ಕ್‌ ಸಸ್ಪೆಂಡ್‌ ಆಗಿರುವ ಎಸಿಪಿ. ಪೊಲೀಸ್‌ ಡಿಪಾರ್ಟ್‌ಮೆಂಟ್‌ನಲ್ಲಿ ದೊಡ್ಡ ಹೆಸರು. ಆತನ ಹೆಸರು ಕೇಳಿದ್ರೆ ಸಾಕು ರಾಜಕೀಯ ನಾಯಕರಿಂದ ಹಿಡಿದು, ರೌಡಿಗಳೂ ಗಡಗಡ! ಆ ಮಟ್ಟದ ಖಡಕ್‌ ಹಿನ್ನೆಲೆ ಇರುವಂಥ ಅಧಿಕಾರಿ. ಹೀಗಿರುವಾಗ ಇದೇ ಮಾರ್ಕ್‌ಗೆ ಒಂದು ಸಂದಿಗ್ಧ ಪರಿಸ್ಥಿತಿಗೆ ಸಿಲುಕುತ್ತಾನೆ. ಒಂದು ಕಡೆ ರಾಜಕೀಯದ ಷಡ್ಯಂತ್ರ, ಮತ್ತೊಂದು ಕಡೆ ಮಕ್ಕಳ ಟ್ರಾಫಿಕಿಂಗ್‌ (ಮಕ್ಕಳ ಕಳ್ಳ ಸಾಗಣೆ), ಇದರ ನಡುವೆ ಡ್ರಗ್ಸ್‌ ಘಾಟು.. ಹೀಗೆ ಹಲವು ಕೋನಗಳಲ್ಲಿ ಪದರಗಳಾಗಿ ಸಿನಿಮಾ ತೆರೆದುಕೊಳ್ಳುತ್ತ ಹೋಗುತ್ತದೆ. ಇದೆಲ್ಲವನ್ನು ಸಂಭಾಳಿಸಲು ಕಥಾನಾಯಕನಿಗೆ ಇರೋದು ಜಸ್ಟ್‌ 36 ಗಂಟೆ ಮಾತ್ರ. ಆ 36 ಗಂಟೆಯಲ್ಲಿ ಸಿನಿಮಾ ಹೇಗೆಲ್ಲ ಓಟಕ್ಕಿಳಿಯುತ್ತೆ ಅನ್ನೋದೇ ಈ ಸಿನಿನಮಾದ ಒಂದೆಳೆ.

ತಾರಾಗಣ ಹಾಗೂ ತಾಂತ್ರಿಕ ವರ್ಗ: ಮಾರ್ಕ್‌ ಸಿನಿಮಾದಲ್ಲಿ ಹಿರಿ-ಕಿರಿ ಕಲಾವಿದರ ದೊಡ್ಡ ಬಳಗವೇ ಇದೆ. ಅದೇ ರೀತಿ ತೆರೆ ಹಿಂದೆ ತಾಂತ್ರಿಕವಾಗಿಯೂ ಸಾಕಷ್ಟು ಮಂದಿ ದುಡಿದಿದ್ದಾರೆ. ವಿಜಯ್‌ ಕಾರ್ತಿಕೇಯ ನಿರ್ದೇಶನದಲ್ಲಿ ಮೂಡಿ ಬಂದ ಮಾರ್ಕ್‌ ಸಿನಿಮಾವನ್ನು ಸತ್ಯಜ್ಯೋತಿ ಫಿಲಂಸ್‌ ಮತ್ತು ಕಿಚ್ಚ ಕ್ರಿಯೇಷನ್ಸ್‌ ಜಂಟಿಯಾಗಿ ನಿರ್ಮಾಣ ಮಾಡಿವೆ. ನಾಯಕನಾಗಿ ಕಿಚ್ಚ ಸುದೀಪ್‌, ಖಳನಾಯಕನಾಗಿ ಬಹುಭಾಷಾ ನಟ ನವೀನ್‌ ಚಂದ್ರ, ಮಲಯಾಳಂ ನಟ ಶೈನ್‌ ಟೊಮ್‌ ಚಾಕೊ, ವಿಕ್ರಾಂತ್‌, ಯೋಗಿ ಬಾಬು, ಗುರು ಸೋಮಸುಂದರಂ, ಗೋಪಾಲಕೃಷ್ಣ ದೇಶಪಾಂಡೆ, ರಘು ರಾಮನಕೊಪ್ಪ, ನಿಶ್ವಿಕಾ ನಾಯ್ಡು, ರೋಷನಿ ಪ್ರಕಾಶ್‌ ಸೇರಿ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿದೆ.

ಇದನ್ನೂ ಓದಿ: 10 ಗಂಟೆಯಲ್ಲಿ ‘ಡೆವಿಲ್’ ದಾಖಲೆ ಮುರಿದ ‘ಮಾರ್ಕ್​’ ಟ್ರೇಲರ್

ಅಜನೀಶ್‌ ಲೋಕನಾಥ್‌ ಸಂಗೀತ, ಶೇಖರ್‌ ಚಂದ್ರ ಅವರ ಸಿನಿಮಾಟೋಗ್ರಾಫಿ, ಗಣೇಶ್‌ ಬಾಬು ಅವರ ಸಂಕಲನ, ಈ ಚಿತ್ರಕ್ಕಿದೆ. ಇನ್ನು ‘ಮಾರ್ಕ್’ ಸಿನಿಮಾದ ಪ್ರಮುಖ ಆಕರ್ಷಣೆ ಎಂದರೆ ಅದು ಆಕ್ಷನ್ ಸೀಕ್ವೆನ್ಸ್‌ಗಳು. ಭಾರತೀಯ ಚಿತ್ರರಂಗದ ಖ್ಯಾತ ಸ್ಟಂಟ್‌ ಡೈರೆಕ್ಟರ್ಸ್‌ಗಳಾದ ಸ್ಟಂಟ್ ಸಿಲ್ವಾ, ಸುಪ್ರೀಮ್ ಸುಂದರ್ ಹಾಗೂ ಕನ್ನಡದ ರವಿವರ್ಮ ಅವರ ಸಾಹಸ ನಿರ್ದೇಶನವಿದೆ. ಇದೀಗ ಇದೇ ಸಿನಿಮಾ ಜನವರಿ 23ರಂದು ಜಿಯೋ ಹಾಟ್‌ಸ್ಟಾರ್‌ ಒಟಿಟಿಗೆ ಆಗಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ – Kannada News | Beat Bengaluru Traffic Stress: Techie’s Health Secret and WFH Impact

ಬೆಂಗಳೂರು, ಜ.23: ಜನದಟ್ಟಣೆಗೆ ವಿಶ್ವಪ್ರಸಿದ್ಧಯನ್ನು ಪಡೆದಿರುವ ಬೆಂಗಳೂರು ಟ್ರಾಫಿಕ್ (Bengaluru traffic health)​​​​​​ ಅನೇಕರಿಗೆ ಕಿರಿಕಿರಿಯನ್ನು ಉಂಟು ಮಾಡಿದ್ರೆ, ಈ ವ್ಯಕ್ತಿಯನ್ನು ಮಾತ್ರ ಆರೋಗ್ಯವಂತನಾಗಿ ಮಾಡಿದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಆಗುವ ನಕಾರಾತ್ಮಕ ವಿಚಾರಗಳ ಬಗ್ಗೆ ತುಂಬಾ ತಲೆಬಿಸಿ ಮಾಡಿಕೊಳ್ಳಬಾರದು. ಅಂತಹ ವಿಷಯಗಳಿಂದ ಹೊಸ ದಾರಿಯನ್ನು ಕಂಡುಕೊಳ್ಳಬೇಕು ಎಂಬುದಕ್ಕೆ ಈ ವ್ಯಕ್ತಿ ಉದಾಹರಣೆ ನೋಡಿ.  ಟ್ರಾಫಿಕ್‌ ತನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ ಎಂದು ಈ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಟೆಕ್ ಉದ್ಯೋಗಿ ಆಗಿರುವ ಇವರು, ವೈಟ್‌ಫೀಲ್ಡ್‌ನಿಂದ ಕೋರಮಂಗಲಕ್ಕೆ ದಿನನಿತ್ಯ 90 ನಿಮಿಷಗಳ ಕಾಲ ಟ್ರಾಫಿಕ್​ ಮಧ್ಯೆ ಪ್ರಯಣ ಮಾಡುತ್ತಾರೆ. ಇದರಿಂದ ಬೇಸತ್ತು ಟ್ರಾಫಿಕ್ ವಿರುದ್ಧ ಹೋರಾಟ ನಿಲ್ಲಿಸಿ ತಮ್ಮ ಜೀವನಶೈಲಿಯನ್ನೇ ಬದಲಾಯಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್‌ನಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಇದೊಂದು ಒಳ್ಳೆಯ ದಾರಿ ಎಂದು ನೆಟ್ಟಿಗರು ಹೇಳಿದ್ದಾರೆ.

ಬೆಂಗಳೂರಿನ ಟ್ರಾಫಿಕ್ ನನ್ನನ್ನು ನಿಜವಾಗಿಯೂ ಆರೋಗ್ಯವಂತರನ್ನಾಗಿ ಮಾಡಿದೆ ಎಂದು ತಾವು ಹಂಚಿಕೊಂಡಿರುವ ಪೋಸ್ಟ್​​​ನಲ್ಲಿ ಹೇಳಿದ್ದಾರೆ. “ನಾನು ವೈಟ್‌ಫೀಲ್ಡ್‌ನಿಂದ ಕೋರಮಂಗಲಕ್ಕೆ ಪ್ರತಿದಿನ ಪ್ರಯಾಣಿಸುತ್ತೇನೆ. ಈ ಮಾರ್ಗದಲ್ಲಿ ಹೋಗಬೇಕಾದರೆ 90 ನಿಮಿಷ ಬೇಕಾಗುತ್ತಿತ್ತು. ಇದರಿಂದ ನಿರಂತರ ಒತ್ತಡ, ಊಟ ಕೂಡ ಸರಿಯಾಗಿ ಮಾಡುತ್ತಿರಲಿಲ್ಲ, ವ್ಯಾಯಾಮಕ್ಕೂ ಕೂಡ ಸಮಯವೇ ಇರಲಿಲ್ಲ. ಈ ಅನಾರೋಗ್ಯಕರ ಜೀವನಶೈಲಿಯಿಂದ ಬೇಸತ್ತು. ವಾರದಲ್ಲಿ ಮೂರು ದಿನ ಮನೆಯಿಂದಲೇ ಕೆಲಸ (WFH) ಮಾಡಲು ನಿರ್ಧರಿಸಿದೆ.  ಡೆಲಿವರಿ ಆರ್ಡರ್ ಮಾಡುವ ಬದಲು ಹತ್ತಿರದ ರೆಸ್ಟೋರೆಂಟ್‌ಗಳಿಗೆ ನಡೆದುಕೊಂಡು ಹೋಗಿ ಊಟ ಮಾಡಲಾರಂಭಿಸಿದೆ. ಜೊತೆಗೆ, ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಮನೆಯ ಸಮೀಪದ ಜಿಮ್‌ಗೆ ಹೋಗುವ ಅಭ್ಯಾಸವನ್ನು ಕೂಡ ಬೆಳೆಸಿಕೊಂಡೆ. ಈ ರೀತಿಯ ಜೀವನಶೈಲಿಯಿಂದ ನನ್ನ ಆರೋಗ್ಯದಲ್ಲಿ ಬದಲಾವಣೆ ಆಗಿದೆ. ಆದರೆ ಟ್ರಾಫಿಕ್ ಸುಧಾರಿಸಲಿಲ್ಲ, ಅದರ ವಿರುದ್ಧ ಹೋರಾಡುವುದನ್ನು ನಿಲ್ಲಿಸಿ, ನಮ್ಮ ಆರೋಗ್ಯದ ಬಗ್ಗೆ ಗಮನ ನೀಡಿದೆ. ನನ್ನ ಈ ಜೀವನಶೈಲಿಯಿಂದ ಹೃದಯ ಬಡಿತ 82ರಿಂದ 64ಕ್ಕೆ ಇಳಿದಿದೆ. ಯಾವುದೇ ವಿಶೇಷ ಪ್ರಯತ್ನವಿಲ್ಲದೆ 8 ಕೆಜಿ ತೂಕವೂ ಕಡಿಮೆ ಮಾಡಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರೇ 3 ದಿನದ ರಜೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು: KSTDCನಿಂದ ವಿಶೇಷ ಪ್ಯಾಕೇಜ್

ಇಲ್ಲಿದೆ ನೋಡಿ ವೈರಲ್​​ ಪೋಸ್ಟ್​:

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಈ ಬಗ್ಗೆ ಹಲವು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ನಿಮ್ಮ ಈ ಬದಲಾವಣೆಗೆ ಟ್ರಾಫಿಕ್ ಕಾರಣವಲ್ಲ, ವರ್ಕ್ ಫ್ರಮ್ ಹೋಮ್ ಮತ್ತು ಜೀವನಶೈಲಿ ಬದಲಾವಣೆಯೇ ಆರೋಗ್ಯ ಸುಧಾರಣೆಗೆ ಕಾರಣ ಎಂದು ಹೇಳಿದ್ದಾರೆ. ಟ್ರಾಫಿಕ್ ನಿಮ್ಮನ್ನು ಆರೋಗ್ಯವಂತರನ್ನಾಗಿ ಮಾಡಲಿಲ್ಲ ವರ್ಕ್ ಫ್ರಮ್ ಹೋಮ್ ನಿಮ್ಮ ಆರೋಗ್ಯವನ್ನು ಬದಲಾವಣೆ ಮಾಡಿದೆ. ನಿಮ್ಮ ಆಹಾರ ಪದ್ಧತಿ, ಹಾಗೂ ಜಿಮ್​​​ ಮಾಡಲು ಸಮಯ ಸಿಕ್ಕಿದೆ. ಆ ಕಾರಣ ಈ ಬದಲಾವಣೆ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ನಾನು ನನ್ನ ಬೈಕ್ ಮಾರಿದ್ದೇನೆ. ಈಗ ಎಲ್ಲೆಡೆ ನಡೆದುಕೊಂಡೇ ಹೋಗುತ್ತೇನೆ. ನನ್ನ ಕೊಲೆಸ್ಟ್ರಾಲ್ ಮಟ್ಟಗಳು ಸಹಜ ಸ್ಥಿತಿಗೆ ಬಂದಿವೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ – Kannada News | Chamarajanagar: Mahadeshwara Betta Bans Night Padyatra After Deadly Leopard Incident

ಚಾಮರಾಜನಗರ, ಜನವರಿ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ (Leopard) ದಾಳಿಗೆ ಭಕ್ತ (Devotees) ಪ್ರವೀಣ್ ಬಲಿ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಇನ್ಮುಂದೆ ರಾತ್ರಿ ವೇಳೆ ಬೆಟ್ಟಕ್ಕೆ ಪಾದಯಾತ್ರೆಗೆ ನಿರ್ಬಂಧ ಹೇರಲಾಗಿದೆ. ಕಾಡುಪ್ರಾಣಿಗಳ ಕಾಟ ಹಿನ್ನೆಲೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಘಟನೆ ಹಿನ್ನೆಲೆ 

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿತ್ತು. ಈ ಬಗ್ಗೆ ಟಿವಿ9 ಕೂಡ ಕೆಲ ಹಿಂದೆಯೇ ಸುದ್ದಿ ಬಿತ್ತರಿಸಿತ್ತು. ಆದರೆ ಎಚ್ಚೆತ್ತುಕೊಳ್ಳದ ಮಲೆ ಮಹದೇಶ್ವರ ವನ್ಯಜೀವಿಧಾಮದ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಅದರ ಪರಿಣಾವೇ ಮಾದಪ್ಪನ ಭಕ್ತ ಬಲಿಯಾಗಿದ್ದ. ಮಂಡ್ಯದ ಚೀರನಹಳ್ಳಿ ಮೂಲದ ಪ್ರವೀಣ್ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ತೆರಳುವಾಗ ಚಿರತೆ ದಾಳಿ ನಡೆಸಿ ಕೊಂದು ತಿಂದಿತ್ತು.

ಇದನ್ನೂ ಓದಿ: ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ

ಮಂಡ್ಯದ ಚೀರನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಗಳಿಂದ 150ಕ್ಕೂ ಹೆಚ್ಚು ಜನರು ಪಾದಯಾತ್ರೆಗೆ ತೆರಳುತ್ತಿದ್ದರು. ಪ್ರವೀಣ್ ಕುಮಾರ್ ಸಂಜೀವ್ ಸೇರಿ 5 ಜನರು ಪ್ರತ್ಯೇಕ ತಂಡದಲ್ಲಿದ್ದರು. ಜನವರಿ 21ರ ಮುಂಜಾನೆ 6ಗಂಟೆ ಸುಮಾರಿಗೆ ರಂಗಸ್ವಾಮಿ ದಿಬ್ಬದ ಬಳಿ ನಡೆದು ಕೊಂಡು ಬರುವಾಗ ಚಿರತೆ ಎದುರಾಗಿದೆ. ಎಲ್ಲರೂ ಕೂಗಿಕೊಂಡು ಇಳಿಜಾರಿನ ಕಡೆ ಓಡಿದ್ದಾರೆ.

ಇದನ್ನೂ ಓದಿ: ಮಾದಪ್ಪನ ಭಕ್ತರಿಗೂ ಚಿರತೆ ಕಾಟ: ರಸ್ತೆಯ ಬದಿಯೇ‌ ಸೇತುವೆ ಮೇಲೆ ಕುಳಿತ ಚಿರತೆ! ಪಾದಯಾತ್ರೆ ಬರುವ ಭಕ್ತರೇ ಎಚ್ಚರ

ಪ್ರವೀಣ್ ದಿಬ್ಬದ ಮೇಲೆ ಓಡಿ ಹೋಗುತ್ತಿದ್ದಂತೆ ಹಿಂದಿನಿಂದ ಬಂದ ಚಿರತೆ ಪ್ರವೀಣ್ ಕತ್ತು ಸೀಳಿ ರಕ್ತ ಹೀರಿ ಬಳಿಕ ಕಾಡಿನೊಳಕ್ಕೆ ಎಳೆದುಕೊಂಡು ಹೋಗಿತ್ತು. ಇನ್ನು ಯಾರಿಗಾದ್ರು ವಿಚಾರ ತಿಳಿಸೋಣ ಅಂದ್ರೆ ನೆಟ್​ವರ್ಕ್ ಇಲ್ಲ. ಅದೇಗೊ ಓಡಿಕೊಂಡು ಹೋಗಿ ನೆಟ್​ವರ್ಕ್ ಸಿಗುವ ಜಾಗದಲ್ಲಿ ಪೊಲೀಸರಿಗೆ ಸ್ನೇಹಿತರು ಮಾಹಿತಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಈಗ ಪ್ರವೀಣ್ ಮೃತದೇಹವನ್ನು ಪತ್ತೆ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿ.ಕೆ. ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​ – Kannada News | Uproar in Council Over BJP–Congress Clash on BH Hariprasad Suspension Demand

ಬೆಂಗಳೂರು, ಜನವರಿ 23:  ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ವಿಚಾರ ಸಂಬಂಧ ಬಿ.ಕೆ. ಹರಿಪ್ರಸಾದ್ ಅಮಾನತು ಆಗಬೇಕು ಎಂದು ಬಿಜೆಪಿ ಒತ್ತಾಯಿಸಿದ ಹಿನ್ನೆಲೆ ವಿಧಾನ ಪರಿಷತ್​​ ರಣಾಂಗಣವಾದ ಪ್ರಸಂಗ ನಡೆದಿದೆ. ರಾಜ್ಯಪಾಲರು ಬಂದಾಗ ‘ಕೈ’ ಸದಸ್ಯರ ಗೂಂಡಾ ವರ್ತನೆ ಸರಿಯಲ್ಲ. ಹೀಗಾಗಿ ಬಿ.ಕೆ. ಹರಿಪ್ರಸಾದ್ ಅಮಾನತು ಆಗಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ನೋಟಿಸ್​ ಕೊಟ್ಟಿಲ್ಲ, ಹಾಗಾಗಿ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಲು ಆಗಲ್ಲ ಎಂದ ಸಭಾಪತಿ ಹೊರಟ್ಟಿ ಹೇಳಿದ್ದರಿಂದ ಕಾಂಗ್ರೆಸ್​ಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದ್ದಾರೆ. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವೆ ಮಾತಿನ ಚಕಮಕಿ ಉಂಟಾದ ಕಾರಣ ವಿಧಾನಪರಿಷತ್​ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಕೆಲಕಾಲ ಮೂಂದೂಡಬೇಕಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ – Kannada News | Vijayapura Police Arrest 14 Accused in Various Cases, Seize Assets Worth 1.17 Crore

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು.

ವಿಜಯಪುರ, ಜನವರಿ 23: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯ ಕಳ್ಳರು, ಖದೀಮರು ಸೇರಿ ಒಟ್ಟು 14 ಮಂದಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ ನಗದು, ಚಿನ್ನಾಭರಣ ಮತ್ತು ವಾಹನಗಳು ಸೇರಿ 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಖಾಕಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಪ್ತಿ ಮಾಡಿದ ಹಣ ಮತ್ತು ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಹಲವು ಪ್ರಕರಣ ಭೇದಿಸಿದ ಖಾಕಿ

2025ರ ಮೇ 30ರಂದು ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಬ್ಯಾಗ್​​ನಲ್ಲಿದ್ದ 65 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಗ್ಯಾಂಗ್​​ನ ಪತ್ತೆ ಮಾಡಿರುವ ಪೊಲೀಸರು, ಪ್ರಕರಣ ಸಂಬಂಧ ಕಲಬುರಗಿಯ ಪ್ರಶಾಂತ, ಆತನ ಪತ್ನಿ ಮಂಜುಳಾ, ಮಹಾರಾಷ್ಟ್ರದ ಅಂಕುಶ ಜಾಧವ್, ಗೋವರ್ಧನ ಪವಾರ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶಿವು ಹಾಗೂ ಆತನ ಪತ್ನಿ ರಜನಿಯನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇನ್ನು ನಕಲಿ ಚಿನ್ನದ ನಾಣ್ಯಗಳನ್ನು ಅಸಲಿ ಎಂದು ನಂಬಿಸಿ ಮಹಾರಾಷ್ಟ್ರದ ಲಾತೂರ್ ಮೂಲದ ರಾಜಕುಮಾರ ಕುಂಡರಗಿ ಎಂಬುವವರಿಗೆ ಮಾರಾಟ ಮಾಡಿದ ಆರೋಪದ ಮೇಲೆ ವಿಜಯನಗರ ಜಿಲ್ಲೆಯ ಮೂಲದ ಹಣಮಂತ ಕೊರಚರ, ರಾಜಾ ಕಾವಾಡಿ, ಹರೀಶ ಕೊರಚರ ಹಾಗೂ ಚಿರಂಜಿವಿ ಕೊರಚರ ಎಂಬ ನಾಲ್ವರನ್ನು ಬಂಧಿಸಿ ನಗದನ್ನು ವಶಕ್ಕೆ ಪಡೆದಿದ್ದಾರೆ. ವಿವಿಧ ಬೈಕ್​​ ಕಳವು ಪ್ರಕರಣಗಳನ್ನೂ ಭೇದಿಸಿದ್ದು, ವಿಜಯಪುರ ಜಿಲ್ಲೆಯ ಬಾಬು ಜಮಖಂಡಿ, ಸಿದ್ರಾಮ್ ಅರಕೇರಿ, ಮಂಜುನಾಥ ಉಕ್ಕಲಿ, ಆಕಾಶ ಮಠಪತಿ ಎಂಬುವರನ್ನು ಬಂಧಿಸಿ 20 ಬೈಕ್ ಗಳು ಮತ್ತು ಎರಡು ಕಾರ್​​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು!

ಪೊಲೀಸರಿಗೆ ಸನ್ಮಾನ

ಜಿಲ್ಲೆಯ ಖದೀಮರ ಜೊತೆಗೆ ಅನ್ಯ ಜಿಲ್ಲೆ ಹಾಗೂ ಅಂತಾರಾಜ್ಯದ ಆರೋಪಿಗಳ ಕೈಗೂ ಕೋಳ ಹಾಕಿರುವ ಖಾಕಿ, ಮೋಸ ಹೋದವರಿಗೆ ಮತ್ತು ಕಳ್ಳತನಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ವಿಜಯಪುರ ಗ್ರಾಮೀಣ ಡಿವೈಎಸ್ಪಿ ಟಿ. ಎಸ್. ಸುಲ್ಫಿ, ಇನ್ಸ್​​ಪೆಕ್ಟರ್​​ಗಳಾದ ರಾಯಗೊಂಡ ಜಾನಾರ, ರಮೇಶ ಆವಜಿ, ಸಬ್ ಇನ್ಸಪೆಕ್ಟರ್​​ಗಳು ಹಾಗೂ ಪೊಲೀಸ್ ಕಾನ್ಸ್​ಟೇಬಲ್ಸ್​ಗಳಿಗೆ ಪ್ರಮಾಣಪತ್ರ ನೀಡಿ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಎಎಸ್ಪಿ ರಾಮನಗೌಡ ಹಟ್ಟಿ ಸನ್ಮಾನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು – Kannada News | India’s traffic chokehold: Bengaluru ranks second; Pune fifth in global congestion index for 2025

ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿ ಹೊರಹೊಮ್ಮಿದೆ. ನಗರದ ಸರಾಸರಿ ಸಂಚಾರ ದಟ್ಟಣೆ ಪ್ರಮಾಣವು ಶೇಕಡ 74.4ರಷ್ಟಿದ್ದು, ಇದು 2024ಕ್ಕಿಂತ ಶೇಕಡ 1.7ರಷ್ಟು ಹೆಚ್ಚಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

Source link