ಭಾರತೀಯರು ಆತಂಕಪಡುವ ಅಗತ್ಯವಿಲ್ಲ, ಇಂಧನ ಸಂಗ್ರಹ ಸಾಕಷ್ಟಿದೆ; ರಾಜನಾಥ್ ಸಿಂಗ್ ಸ್ಪಷ್ಟನೆ
ನವದೆಹಲಿ, ಮೇ 27: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಸಿದ್ಧತೆ ಹಾಗೂ ಪ್ರತಿಕ್ರಿಯಾ ಕ್ರಮಗಳ ಕುರಿತು ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ನೇತೃತ್ವದ ಸಚಿವರ ಸಮಿತಿಯು ನವದೆಹಲಿಯ ಕರ್ತವ್ಯ ಭವನದಲ್ಲಿ ಇಂದು ಸಭೆ ನಡೆಸಿತು. ಈ ಸಭೆಯಲ್ಲಿ ಜೆ.ಪಿ. ನಡ್ಡಾ, ಹರ್ದೀಪ್ ಸಿಂಗ್ ಪುರಿ, ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು. ಈ ವೇಳೆ ದೇಶದಲ್ಲಿ ಸದ್ಯಕ್ಕೆ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ…