Headlines

ಐಶ್ವರ್ಯಾ ರೈ ಕಾಲಿಗೆ ಬಿದ್ದ ಊರ್ವಶಿ ರೌಟೇಲಾ? ವೈರಲ್ ಆದ ಎಐ ಫೋಟೋ ಕಂಡು ಕಿಡಿಕಾರಿದ ನಟಿ

ಬಾಲಿವುಡ್‌ನ ಗ್ಲಾಮರಸ್ ನಟಿ ಊರ್ವಶಿ ರೌಟೇಲಾ (Urvashi Rautela) ಇತ್ತೀಚೆಗೆ ನಡೆದ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival 2026) ತಮ್ಮ ವಿಭಿನ್ನ ಹಾಗೂ ಭವ್ಯವಾದ ಗೌನ್‌ಗಳ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ ಪ್ರಸ್ತುತ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಯೊಬ್ಬರು ಹಂಚಿಕೊಂಡಿರುವ ಎಐ ತಂತ್ರಜ್ಞಾನದ (AI-generated) ಚಿತ್ರವೊಂದರ ವಿರುದ್ಧ ಊರ್ವಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಊರ್ವಶಿ ಅವರನ್ನು ಬಾಲಿವುಡ್‌ನ ಇತರೆ ನಟಿಯರಾದ ಐಶ್ವರ್ಯಾ ರೈ, ಪ್ರಿಯಾಂಕಾ ಚೋಪ್ರಾ, ಮಾಧುರಿ ದೀಕ್ಷಿತ್ ಮತ್ತು ದೀಪಿಕಾ…

Read More

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು

‘ಧುರಂಧರ್’ (Dhurandar) ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಇಂಡಸ್ಟ್ರಿ ಹಿಟ್ ನೀಡಿರುವ ರಣ್ವೀರ್ ಸಿಂಗ್ ಈಗ ಅದೇ ಇಂಡಸ್ಟ್ರಿಯಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ….

Read More

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಮೇ 27: ಮಾಜಿ ಪ್ರೇಯಸಿಯ (Ex-girlfriend) ಕರೆ ಹಿನ್ನೆಲೆ ಆಕೆಯನ್ನು ಭೇಟಿ ಮಾಡಲು ಮನೆಗೆ ಹೋಗಿದ್ದ ಯುವಕನೋರ್ವ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿರುವಂತಹ (death) ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ(27) ಕೊಲೆಯಾದ ಯುವಕ. ಕೊಲೆ ಆರೋಪ ಹಿನ್ನೆಲೆ ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಬ್ಯಾಟರಯನಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ…

Read More

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…

Read More

ಜೀವನದಲ್ಲಿ ಸಂತೋಷವಾಗಿರಲು ಬಯಸಿದರೆ ಇಂತಹ ಜನಗಳಿಂದ ಆದಷ್ಟು ದೂರವಿರಿ

ನಮ್ಮ ಸುತ್ತಮುತ್ತಲಿನ ಜನರು ನಮ್ಮ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಾರೆ. ಹೌದು ಕೆಟ್ಟ ಸಹವಾಸವು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ, ಅದೇ ಒಳ್ಳೆಯ ಜನರ ಸಹವಾಸವು ಉತ್ತಮ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಅದೇ ರೀತಿ ಈ ಕೆಲವೊಂದಿಷ್ಟು ಜನರಿಂದ ಜೀವನದ ಸಂತೋಷವೆಲ್ಲಾ (happiness) ಹಾಳಾಗಿಬಿಡುತ್ತದೆ. ಈ ಜನರು ಜೀವನದಲ್ಲಿ ನಕಾರಾತ್ಮಕತೆಯನ್ನು ತರುತ್ತಾರೆ ಮತ್ತು ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾರೆ. ಅಲ್ಲದೆ ಇಂತಹ ಜನರು ಗೆದ್ದಲುಗಳಂತೆ, ನಮ್ಮ ಜೀವನದ ಶಾಂತಿ ಮತ್ತು ಸಂತೋಷವನ್ನು ಮೌನವಾಗಿ…

Read More

ಔಷಧಿ ತೆಗೆದುಕೊಳ್ಳುವಾಗ ಮಾಡುವ ಈ 3 ತಪ್ಪುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಚ್ಚರ!

ಅನಾರೋಗ್ಯ ಬಂದಾಗ ಔಷಧಿ (Medicine) ನಮ್ಮ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಔಷಧಿ ಸೇವಿಸುವ ವಿಧಾನದಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಸ್ವಯಂ ಔಷಧಿ ಸೇವನೆ, ಡೋಸ್ ಮಧ್ಯದಲ್ಲಿ ನಿಲ್ಲಿಸುವುದು ಮತ್ತು ವೈದ್ಯರ ಸಲಹೆ ಇಲ್ಲದೆ ಔಷಧಿ ಬದಲಾಯಿಸುವುದು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಹೌದು, ಇದನ್ನು ನಾವು ಸಾಮಾನ್ಯ ಎಂದು ನಿರ್ಲಕ್ಷ್ಯ ಮಾಡುತ್ತೇವೆ ಆದರೆ ಘಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಫಾರ್ಮಾಸಿಸ್ಟ್…

Read More

Karnataka Weather Forecast: ರಾಜ್ಯದ 9 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​, ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ

ಬೆಂಗಳೂರು, ಮೇ 27: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ (ಮೇ 28) ಗುಡುಗು ಸಹಿತ ಭಾರೀ ಮಳೆಯಾಗಬಹುದೆಂಬ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೊಷಿಸಲಾಗಿದೆ. ಅರಬ್ಬಿ ಸಮುದ್ರದಿಂದ ತೇವಾಂಶಯುಕ್ತ ಗಾಳಿಯ ಪ್ರವಾಹ ಬಲವಾಗುತ್ತಿರುವುದು ಹಾಗೂ ನೈಋತ್ಯ ಮುಂಗಾರು ಮುನ್ನ ಹವಾಮಾನದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ…

Read More

ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇದೇ ಫೆಬ್ರವರಿ 26 ರಂದು ಬಲು ಅದ್ಧೂರಿಯಾಗಿ ಮದುವೆಯಾದರು. ಇವರ ಮದುವೆಯ ಚಿತ್ರಗಳು ಇನ್​​ಸ್ಟಾಗ್ರಾಂನಲ್ಲಿ ದಾಖಲೆಯನ್ನೇ ಬರೆದವು. ಅವರ ಉಡುಗೆ, ಧರಿಸಿದ್ದ ಆಭರಣಗಳು ಹೊಸ ಟ್ರೆಂಡ್ ಸೃಷ್ಟಿ ಮಾಡಿದವು. ಆಧುನಿಕತೆಯ ಜೊತೆಗೆ ಸಂಪ್ರದಾಯವನ್ನು ಬೆರೆಸಿದ್ದ ಅವರ ಮದುವೆಯ ಚರ್ಚೆಗಳು ವಾರಗಳ ಗಟ್ಟಲೆ ನಡೆದವು. ಇದೀಗ ವಿಜಯ್ ತಮ್ಮ ಪತ್ನಿಯನ್ನು ಅದೆಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಸಾಕ್ಷಿಯನ್ನು ನೆಟ್ಟಿಗರು ಹುಡುಕಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ವಿಮಾನ ನಿಲ್ದಾಣವೊಂದರಿಂದ ಹೊರಗೆ…

Read More

IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್​ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್​ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI).. ಐಪಿಎಲ್ 2026 ಕ್ವಾಲಿಫೈಯರ್ 1…

Read More

ಬಾತ್‌ರೂಮ್‌ ಕ್ಲೀನ್‌ ಮಾಡಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಸಾಕು

ತೇವಾಂಶದ ಕಾರಣದಿಂದಾಗಿ ಬಾತ್‌ರೂಮ್‌ನಲ್ಲಿ (bathroom) ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಸುಲಭವಾಗಿ ವೃದ್ಧಿಯಾಗುತ್ತವೆ. ಈ ಬ್ಯಾಕ್ಟೀರಿಯಾಗಳು ಸೋಂಕು ಮತ್ತು ವಾಸನೆಯ ಅಪಾಯವನ್ನು ಹೆಚ್ಚಿಸುತ್ತವೆ. ಆದ್ದರಿಂದ ಸ್ನಾನಗೃಹವನ್ನು ಎಷ್ಟು ಸ್ವಚ್ಛಗೊಳಿಸಿದರೂ ಕಮ್ಮಿಯೇ. ಸಾಮಾನ್ಯವಾಗಿ ಹೆಚ್ಚಿನವರು ಬಾತ್‌ರೂಮ್‌ನ ಕಲೆ, ಕೊಳೆ, ವಾಸನೆಯನ್ನು ತೊಡೆದುಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುತ್ತಾರೆ. ಈ ದುಬಾರಿ ಉತ್ಪನ್ನಗಳ ಬದಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ಕೆಲವು ವಸ್ತುಗಳ ಸಹಾಯದಿಂದ ಸ್ನಾನಗೃಹವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಬಹುದು. ಉಪ್ಪಿನ ಸಹಾಯದಿಂದ ಸ್ನಾನಗೃಹವನ್ನು ಸುಲಭವಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಉಪ್ಪಿನ…

Read More