ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದಿಂದಲೇ ಶ್ರದ್ಧಾಂಜಲಿ ಸಲ್ಲಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ಪೊಲೀಸರು – Kannada News | Mysuru Traffic Police Honour 2025 Road Accident Victims in Moving Awareness Drive
ಮೈಸೂರು, ಜ.22: ಸಂಚಾರ ಪೊಲೀಸರು ರಸ್ತೆ ಸುರಕ್ಷತೆಯ (Mysuru Traffic Police) ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಭಿನ್ನವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ರಸ್ತೆ ಅಪಘಾತಗಳಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ನಿಯಮಗಳನ್ನು ಪಾಲಿಸುವ ಅಗತ್ಯವನ್ನು ಜನರಿಗೆ ಮನಮುಟ್ಟಿಸುವ ಗುರಿಯನ್ನು ಈ ಜಾಗೃತಿ ಅಭಿಯಾನ ಹೊಂದಿತ್ತು. ಈ ವಿಶಿಷ್ಟ ಕಾರ್ಯಕ್ರಮವು ಮೈಸೂರಿನ ಪುರಭವನದಲ್ಲಿ ನಡೆಯಿತು. 2025ರಲ್ಲಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು. ಈ ಭಾವಚಿತ್ರಗಳಲ್ಲಿ ಮಧ್ಯವಯಸ್ಕರು, ಯುವಕರು, ವಯಸ್ಸಾದವರು, ಮಹಿಳೆಯರು ಮತ್ತು ಪುರುಷರು ಸೇರಿದ್ದರು….