Category Archives: Blog

Your blog category

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು.

ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ 92 ರನ್​ಗಳ ಅಂತರದಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಆಗಲಿ ಅಥವಾ ಮುಖ್ಯ ಕೋಚ್ ಆಶಿಶ್ ನೆಹ್ರಾ ಕಾಣಿಸಿಕೊಂಡಿರಲಿಲ್ಲ. ಬದಲಿಗೆ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿರ ಗ್ಲೆನ್ ಫಿಲಿಪ್ಸ್ ಅವರನ್ನು ಕಳುಹಿಸಲಾಗಿತ್ತು.

ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗ್ಲೆನ್ ಫಿಲಿಪ್ಸ್​​ಗೆ ವರದಿಗಾರರೊಬ್ಬರು, ಆರ್​ಸಿಬಿ ನೀಡಿದ 254 ರನ್​ಗಳ ಕಠಿಣ ಗುರಿ ನೋಡಿ ಗುಜರಾತ್ ಟೈಟಾನ್ಸ್ ಆಟಗಾರರು ಮಾನಸಿಕವಾಗಿಯೇ ಸೋಲು ಒಪ್ಪಿಕೊಂಡ್ರಾ? ಎಂದು ಪ್ರಶ್ನೆ ಮುಂದಿಟ್ಟಿದ್ದರು.

ಈ ಪ್ರಶ್ನೆ ಕೇಳುತ್ತಿರುವಂತೆ ಅಸಮಾಧಾನ ಹೊರಹಾಕಿದ ಗ್ಲೆನ್ ಫಿಲಿಪ್ಸ್, ಇದು ತಂಡದ ವೃತ್ತಿಪರತೆಗೆ ಧಕ್ಕೆ ತರುವಂತಹ ಪ್ರಶ್ನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನೀವು ಕೇಳಿರುವುದು ಅತ್ಯಂತ ಮೂರ್ಖತನದ ಪ್ರಶ್ನೆ. ನಿಜಕ್ಕೂ ಇಂತಹ ಪ್ರಶ್ನೆಗಳೇ ಮೂರ್ಖತನದ್ದು! ಯಾವೊಬ್ಬರ ವೃತ್ತಿಪರ ಕ್ರಿಕೆಟಿಗನೂ ಕೂಡ ಹೀಗೆ ಯೋಚಿಸಲ್ಲ. ಯಾರೂ ಸಹ ಸ್ಕೋರ್ ನೋಡಿ, ಈ ಪಂದ್ಯವನ್ನು ಇಲ್ಲೇ ಕೈ ಬಿಡುತ್ತಿದ್ದೇವೆ ಎಂದು ಮೈದಾನಕ್ಕೆ ಇಳಿಯುವುದಿಲ್ಲ. ಪಂದ್ಯವಾಡಲು ಬಂದವರು ಹಾಗೆ ಏಕೆ ಯೋಚಿಸುತ್ತಾರೆ ಹೇಳಿ”.

“250 ಕ್ಕೂ ಹೆಚ್ಚಿನ ಬೃಹತ್ ಮೊತ್ತವನ್ನು ಬೆನ್ನಟ್ಟುವಾಗ ಪ್ರತಿ ಹಂತದಲ್ಲೂ ನಾವು ಪಾಸಿಟಿವ್ ಆಗಿಯೇ ಯೋಚಿಸಬೇಕಾಗುತ್ತದೆ. ಆದರೆ ಕೆಲವೊಮ್ಮೆ ನಮ್ಮ ಪ್ಲ್ಯಾನ್​ಗಳು ವರ್ಕ್​ ಆಗಲ್ಲ. ಅದೇ ರೀತಿ ಈ ಮ್ಯಾಚ್​ನಲ್ಲಿ ನಾವು ಅಂದುಕೊಂಡಂತೆ ನಡೆದಿಲ್ಲ ಅಷ್ಟೇ” ಎಂದು ಗ್ಲೆನ್ ಫಿಲಿಪ್ಸ್ ಗುಜರಾತ್ ಟೈಟಾನ್ಸ್ ತಂಡದ ಆಟಗಾರರ ಪ್ರದರ್ಶನವನ್ನು ಸಮರ್ಥಿಸಿಕೊಂಡಿದ್ದಾರೆ.

ಫೈನಲ್​ ಮೇಲೆ ಗುಜರಾತ್ ಕಣ್ಣು:

ಈ ಬಾರಿಯ ಐಪಿಎಲ್​ನ ಫೈನಲ್ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಈ ಸ್ಟೇಡಿಯಂ ಗುಜರಾತ್ ಟೈಟಾನ್ಸ್ ತಂಡದ ತವರು ಮೈದಾನ. ಹೀಗಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೇರಲು ಪ್ಲ್ಯಾನ್ ರೂಪಿಸುತ್ತಿದೆ.

ಇದನ್ನೂ ಓದಿ: ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ!

ಇಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮುಂದಿನ ಎದುರಾಳಿಯಾಗಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್​ ತಂಡಕ್ಕೆ ಫೈನಲ್​ಗೇರಲು ಅವಕಾಶವಿದೆ.

 

Source link

ಡಿಕೆ ಶಿವಕುಮಾರ್​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ

ರಾಮನಗರ, ಮೇ 27: ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಂಬಿಕೆಯೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಅಧಿಕೃತ ಘೋಷಣೆಗೆ ಮೊದಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಅಧಿಕಾರ ಹಂಚಿಕೆ ಸಂಬಂಧ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೂ, ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಒಪ್ಪಿಕೊಂಡಿದ್ದಾರೆ ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಬಲವಾದ ನಂಬಿಕೆ ಕಾರ್ಯಕರ್ತರಲ್ಲಿದೆ. ಈ ನಂಬಿಕೆಯ ಹಿನ್ನಲೆಯಲ್ಲಿ, ರಾಮನಗರದಲ್ಲಿ ಸಡಗರ ಮತ್ತು ಸಂಭ್ರಮ ಮುಗಿಲುಮುಟ್ಟಿದೆ. ಪಕ್ಷದ ಕಾರ್ಯಕರ್ತರು ‘ಡಿಕೆ ಶಿವಕುಮಾರ್ ಕೀ ಜೈ, ಮುಖ್ಯಮಂತ್ರಿ ಡಿಕೆ ಶಿವಕುಮಾರ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Guru Sanchara 2026: ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಮಕರ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮಕರ ರಾಶಿಯವರಿಗೆ 2026ರ ಗುರು ಸಂಚಾರವು ಶುಭಕರವಾಗಿದೆ. ರಾಶ್ಯಾಧಿಪತಿ ಶನಿಯಾಗಿದ್ದು, ಗುರುವು ಕರ್ಕಾಟಕದಿಂದ ಸಪ್ತಮ ದೃಷ್ಟಿಯಲ್ಲಿ ಮಕರ ರಾಶಿಯನ್ನು ನೋಡುತ್ತಿದ್ದಾರೆ. ಜೂನ್ 2 ರಿಂದ ಗುರುಬಲ ಪ್ರಾರಂಭವಾಗುವುದರಿಂದ ಉತ್ತರಾಷಾಡ, ಶ್ರವಣ, ಧನಿಷ್ಠ ನಕ್ಷತ್ರದವರಿಗೆ ಅದೃಷ್ಟ ಕೂಡಿಬರಲಿದೆ.

ಆರ್ಥಿಕ ಪ್ರಗತಿ, ವಿವಾಹ ಯೋಗ, ಮನೆ ಮತ್ತು ಆಸ್ತಿ ಖರೀದಿ, ಭೂಮಿ ಯೋಗಗಳು ಪ್ರಾಪ್ತವಾಗುತ್ತವೆ. ಕೌಟುಂಬಿಕ ಭಿನ್ನಾಭಿಪ್ರಾಯಗಳು ದೂರಾಗಿ ಅನ್ಯೋನ್ಯತೆ ಹೆಚ್ಚಲಿದೆ. ಮಕ್ಕಳಿಂದ ಕೀರ್ತಿ ಪ್ರತಿಷ್ಠೆ ಲಭಿಸುತ್ತದೆ. ಉದ್ಯೋಗದಲ್ಲಿ ಬಡ್ತಿ, ರಾಜಕೀಯದಲ್ಲಿ ಯಶಸ್ಸು, ವ್ಯಾಪಾರಸ್ಥರಿಗೆ ಲಾಭವಿರುತ್ತದೆ. ಪೂರ್ವಿಕರ ಆಸ್ತಿಯ ವಿಚಾರದಲ್ಲಿ ಶುಭ ಫಲಗಳು ದೊರೆಯುತ್ತವೆ. ರೈತಾಪಿ ವರ್ಗದವರಿಗೆ ಉತ್ತಮ ಬೆಳೆ ಹಾಗೂ ಬೆಲೆ ಸಿಗಲಿದೆ. ಬಿಲ್ಡರ್ಸ್, ರಿಯಲ್ ಎಸ್ಟೇಟ್, ಕಾನೂನು ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಮಯ. ಶಿಕ್ಷಣ ಕ್ಷೇತ್ರ, ಧಾರ್ಮಿಕ ಚಟುವಟಿಕೆಗಳಲ್ಲಿರುವವರಿಗೂ ಶುಭ. ಕೋಪತಾಪಗಳ ವಿಚಾರದಲ್ಲಿ ಎಚ್ಚರ ವಹಿಸಬೇಕು. ತಾಳ್ಮೆ ಮತ್ತು ಸಹನೆ ಕಾಪಾಡಿಕೊಳ್ಳುವುದು ಅಗತ್ಯ. ಮಹಿಳೆಯರಿಗೆ ಗೌರವ ನೀಡುವುದು ಶುಭಕಾರಿ. ಪ್ರತಿನಿತ್ಯ ಓಂ ಶಿವದತ್ತಾಯ ನಮಃ ಮಂತ್ರ ಜಪಿಸುವುದು ಮತ್ತು ಗುರು ಶಾಂತಿ ಮಾಡಿಸುವುದು ಒಳಿತು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – Kannada News | Shobha Karandlaje Slams Karnataka Government Over CM Change Debate Amid Public Crisis

ದೇವನಹಳ್ಳಿ, ಮೇ 27: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಬಿಕ್ಕಟ್ಟು ಮತ್ತು ಆಡಳಿತದ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಐಎಬಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಆಡಳಿತದಲ್ಲಿ ಎರಡುವರೆ ವರ್ಷ ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆಯೇ ಚರ್ಚೆ ನಡೆಸಿದೆ. ಬರಗಾಲ, ನೆರೆಹಾವಳಿ, ಬೆಂಗಳೂರಿನಲ್ಲಿ ತ್ಯಾಜ್ಯ ಹಗರಣದಂತಹ ಗಂಭೀರ ಸಮಸ್ಯೆಗಳಿದ್ದರೂ, ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡದಿರುವುದು, ಇಲಾಖೆಗಳು ಕೆಲಸ ಮಾಡದಿರುವುದು ಮತ್ತು ಇಲಾಖೆಗಳಿಗೆ ಹಣಕಾಸಿನ ಕೊರತೆ ಇರುವುದು ರಾಜ್ಯದ ದುಸ್ಥಿತಿಗೆ ಕಾರಣ ಎಂದು ಕರಂದ್ಲಾಜೆ ಹೇಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಖಚಿತತೆ ಇಲ್ಲ, ಏಕೆಂದರೆ ಅವರು ಹಳೆಯ ಹುಲಿಯಾಗಿದ್ದು, ಯಾವಾಗ ಯಾವ ಆಟ ಆಡುತ್ತಾರೆಂದು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಕುರ್ಚಿ ಹೋರಾಟವನ್ನು ನಿಲ್ಲಿಸಿ, ಜನರ ಸಮಸ್ಯೆಗಳ ಕಡೆ ತಕ್ಷಣ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ನೆಲಮಂಗಲ: ಸ್ನಾಪ್‌ಚಾಟಲ್ಲಿ ಪ್ರೀತಿಸಿ ಮದುವೆ, ಎರಡೇ ತಿಂಗಳಿಗೆ ಬ್ರೇಕ್‌ಅಪ್! ಗಂಡ ಬೇಕೆಂದು ಠಾಣೆ ಮೆಟ್ಟಿಲೇರಿದ ಯುವತಿ – Kannada News | Nelamangala: Snapchat Love Story Ends in Just Two Months of Marriage; Nursing Woman Files Police Complaint

ನೆಲಮಂಗಲ, ಮೇ 27: ಸಾಮಾಜಿಕ ಜಾಲತಾಣಗಳ ಪರಿಚಯ ಮತ್ತು ಪ್ರೀತಿ ಎಷ್ಟೊಂದು ಬೇಗ ಹಳಿತಪ್ಪಬಹುದು ಎಂಬುದಕ್ಕೆ ನೆಲಮಂಗಲ (Nelamangala) ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಸ್ನಾಪ್‌ಚಾಟ್ (Snapchat) ಆ್ಯಪ್‌ನಲ್ಲಿ ಪರಿಚಯವಾಗಿ, ಒಂದೂವರೆ ವರ್ಷಗಳ ಕಾಲ ಪ್ರೀತಿಸಿ, ಕೇವಲ ಎರಡು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿಯೊಂದು ಈಗ ಎರಡೇ ತಿಂಗಳಲ್ಲಿ ವಿಚ್ಛೇದನದ ಹಂತಕ್ಕೆ ಬಂದು ನಿಂತಿದೆ. ಮದುವೆಯಾದ ಎರಡೇ ತಿಂಗಳಿಗೆ ಪತಿರಾಯ ‘ನೀನು ನನಗೆ ಬೇಡ’ ಎಂದು ಹೆಂಡತಿಯನ್ನು ಕೈಬಿಟ್ಟಿದ್ದು, ಹತಾಶಳಾದ ನೊಂದ ಯುವತಿ ತನಗೆ ನ್ಯಾಯ ಬೇಕು, ಗಂಡನೇ ಬೇಕು ಎಂದು ಪೊಲೀಸರ ಮೊರೆ ಹೋಗಿದ್ದಾಳೆ.

ಮುಖ್ಯಾಂಶಗಳು

  • ಸ್ನಾಪ್‌ಚಾಟ್‌ನಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿ, ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಚೇತನ್ ಮತ್ತು ನರ್ಸಿಂಗ್ ಯುವತಿ.
  • ತಂದೆ-ತಾಯಿ ಇಲ್ಲದ ತಬ್ಬಲಿ ಯುವತಿಯನ್ನು ಪ್ರೀತಿಸಿ ವರಿಸಿದ್ದ ಬೆಂಗಳೂರು ಉತ್ತರ ತಾಲೂಕಿನ ರಾವುತಹಳ್ಳಿಯ ನಿವಾಸಿ ಚೇತನ್.
  • ‘ಮನೆಯಲ್ಲಿ ತಂದೆ-ತಾಯಿಗೆ ಗೌರವ ನೀಡುತ್ತಿಲ್ಲ’ ಎಂಬ ಸಣ್ಣ ಕಾರಣಕ್ಕೆ ಜಗಳವಾಗಿ ಹೆಂಡತಿಯನ್ನು ತೊರೆದ ಪತಿ; ಮಾದನಾಯಕನಹಳ್ಳಿ ಠಾಣೆಗೆ ದೂರು.

ತಬ್ಬಲಿ ಯುವತಿಗೆ ಕೈಕೊಟ್ಟ ಪತಿರಾಯ

ನೊಂದ ಸಂತ್ರಸ್ತ ಯುವತಿ ನರ್ಸಿಂಗ್ ಮುಗಿಸಿಕೊಂಡಿದ್ದು, ಆಕೆಗೆ ತಂದೆ-ತಾಯಿ ಯಾರೂ ಇಲ್ಲದ ತಬ್ಬಲಿಯಾಗಿದ್ದಳು. ಸುಮಾರು ಒಂದೂವರೆ ವರ್ಷದ ಹಿಂದೆ ಈಕೆಗೆ ಬೆಂಗಳೂರು ಉತ್ತರ ತಾಲೂಕಿನ ರಾವುತಹಳ್ಳಿಯ ನಿವಾಸಿಯಾದ ಚೇತನ್ ಎಂಬಾತನ ಪರಿಚಯ ಸ್ನಾಪ್‌ಚಾಟ್‌ನಲ್ಲಿ ಆಗಿತ್ತು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಮತ್ತು ಯುವತಿಯ ಪರಿಚಯ ದಿನ ಕಳೆದಂತೆ ಗಾಢ ಪ್ರೀತಿಗೆ ತಿರುಗಿತ್ತು. ಆಕೆಯ ಅನಾಥ ಸ್ಥಿತಿಯನ್ನು ಅರಿತೂ ಚೇತನ್ ಪ್ರೀತಿಯಿಂದ ಎರಡು ತಿಂಗಳ ಹಿಂದೆ ಸಪ್ತಪದಿ ತುಳಿದು ತನ್ನ ಮನೆಗೆ ಕರೆತಂದಿದ್ದ.

ಆದರೆ, ಇವರ ಸಂಸಾರ ಸುಖವಾಗಿ ಸಾಗಿದ್ದು ಕೇವಲ ಕೆಲವೇ ದಿನಗಳು ಮಾತ್ರ. ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಕೌಟುಂಬಿಕ ಕಲಹಗಳು ಆರಂಭವಾಗಿದ್ದವು. ‘ನನ್ನ ತಂದೆ-ತಾಯಿಗೆ ನೀನು ಮನೆಯಲ್ಲಿ ಸರಿಯಾಗಿ ಗೌರವ ಕೊಡುತ್ತಿಲ್ಲ’ ಎಂದು ಚೇತನ್ ಪತ್ನಿಯೊಂದಿಗೆ ನಿರಂತರವಾಗಿ ಜಗಳವಾಡುತ್ತಿದ್ದ ಎನ್ನಲಾಗಿದೆ. ದಿನಕಳೆದಂತೆ ಈ ಕೌಟುಂಬಿಕ ಜಗಳ ತಾರಕಕ್ಕೇರಿದ್ದು, ಚೇತನ್ ತನ್ನ ಹೆಂಡತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ‘ನೀನು ನನಗೆ ಬೇಡವೇ ಬೇಡ’ ಎಂದು ದೂರ ತಳ್ಳಿದ್ದಾನೆ.

ಇದನ್ನೂ ಓದಿ: ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

ತಬ್ಬಲಿಯಾಗಿದ್ದ ತನಗೆ ಈಗ ಗಂಡನೂ ಇಲ್ಲದೆ ಆಸರೆಯೇ ಇಲ್ಲದಂತಾಗಿದೆ ಎಂದು ಕಣ್ಣೀರಿಟ್ಟಿರುವ ಯುವತಿ, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಂಪತಿಯನ್ನು ಕರೆಸಿ ಕೌನ್ಸೆಲಿಂಗ್ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ! – Kannada News | Why History Says RCB Will Win IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ. ಇಲ್ಲಿ ಆರ್​ಸಿಬಿ ಎದುರಾಳಿಯಾಗಿ ಬರಲಿರುವುದು ಯಾರು ಎಂಬುದೇ ಕುತೂಹಲ.

ಏಕೆಂದರೆ ಇದೀಗ ಫೈನಲ್ ರೇಸ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳಿವೆ. ಈ ಮೂರು ತಂಡಗಳಲ್ಲಿ ಒಂದು ಟೀಮ್ ಇಂದು ಹೊರಬೀಳಲಿದೆ. ಅಂದರೆ ಎಲಿಮಿನೇಟರ್ ಪಂದ್ಯವಾಡಲಿರುವ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಒಂದು ಟೀಮ್​ನ ಐಪಿಎಲ್ ಅಭಿಯಾನ ಇಂದು ಅಂತ್ಯಗೊಳ್ಳಲಿದೆ. ಇದಾದ ಬಳಿಕ ದ್ವಿತೀಯ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ.

ಹೀಗೆ ಯಾರೇ ಬಂದರೂ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವ ರಣ ಉತ್ಸಾಹದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇದಕ್ಕೆ ಕೇವಲ ತಂಡದ ಪ್ರಸ್ತುತ ಫಾರ್ಮ್ ಮಾತ್ರವಲ್ಲ, ಕಳೆದ 8 ಸೀಸನ್‌ಗಳ ಐಪಿಎಲ್ ಇತಿಹಾಸವೂ ಬೆನ್ನಿಗಿದೆ.

ಅಂದರೆ ಕಳೆದ 8 ವರ್ಷಗಳ ಐಪಿಎಲ್ ಪ್ಲೇಆಫ್​ ಇತಿಹಾಸವನ್ನು ಗಮನಿಸಿದರೆ, ಕ್ವಾಲಿಫೈಯರ್-1 ಪಂದ್ಯದಲ್ಲಿ ಗೆದ್ದ ತಂಡವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದಿರುವುದು ಆರ್​ಸಿಬಿ. ಹೀಗಾಗಿಯೇ ಈ ಸಲ ಕೂಡ ಕಪ್ ನಮ್ದೇ ಎನ್ನುತ್ತಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಕಳೆದ 8 ವರ್ಷಗಳ ಇತಿಹಾಸ!

  1. 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಕ್ವಾಲಿಫೈಯರ್ 1 ವಿನ್ನರ್)
  2. 2024: ಕೊಲ್ಕತ್ತಾ ನೈಟ್ ರೈಡರ್ಸ್ (ಕ್ವಾಲಿಫೈಯರ್ 1 ವಿನ್ನರ್)
  3. 2023: ಚೆನ್ನೈ ಸೂಪರ್ ಕಿಂಗ್ಸ್ (ಕ್ವಾಲಿಫೈಯರ್ 1 ವಿನ್ನರ್)
  4. 2022: ಗುಜರಾತ್ ಟೈಟಾನ್ಸ್ (ಕ್ವಾಲಿಫೈಯರ್ 1 ವಿನ್ನರ್)
  5. 2021: ಚೆನ್ನೈ ಸೂಪರ್ ಕಿಂಗ್ಸ್ (ಕ್ವಾಲಿಫೈಯರ್ 1 ವಿನ್ನರ್)
  6. 2020: ಮುಂಬೈ ಇಂಡಿಯನ್ಸ್ (ಕ್ವಾಲಿಫೈಯರ್ 1 ವಿನ್ನರ್)
  7. 2019: ಮುಂಬೈ ಇಂಡಿಯನ್ಸ್ (ಕ್ವಾಲಿಫೈಯರ್ 1 ವಿನ್ನರ್)
  8. 2018: ಚೆನ್ನೈ ಸೂಪರ್ ಕಿಂಗ್ಸ್ (ಕ್ವಾಲಿಫೈಯರ್ 1 ವಿನ್ನರ್)

ಇದನ್ನೂ ಓದಿ: Rajat Patidar: ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು!

2018 ರಿಂದ 2025 ರವರೆಗೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡಗಳೇ ಐಪಿಎಲ್​​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಮ್ಯಾಚ್ ಗೆದ್ದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಹೀಗಾಗಿ ಈ ಸಲನೂ ಕಪ್ ನಮ್ದೇ ಎನ್ನಬಹುದು.

Published On – 12:57 pm, Wed, 27 May 26

Source link

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ – Kannada News | Hubballi Dharwad Bifurcation: Governor Thawarchand Gehlot Gives Conditional Approval for Separate Dharwad Civic Body

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆImage Credit source: One India

ಧಾರವಾಡ, ಮೇ 27: ಅವಳಿ ನಗರದ ಜನರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ವಿಭಜನೆ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಹತ್ವದ ಷರತ್ತುಬದ್ಧ ಅನುಮೋದನೆ ನೀಡಿದ್ದಾರೆ. ಆದರೆ, ರಾಜ್ಯಪಾಲರು ವಿಧಿಸಿರುವ ಕಠಿಣ ನಿಬಂಧನೆಗಳಿಂದಾಗಿ ಪ್ರತ್ಯೇಕ ಪಾಲಿಕೆ ರಚನೆಯ ಕಡತ ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ವಾಪಸ್ ಹೋಗಿದ್ದು, ಧಾರವಾಡಿಗರ ಹೋರಾಟ ಮತ್ತೊಂದು ತಿರುವು ಪಡೆದುಕೊಂಡಿದೆ.

ಮುಖ್ಯಾಂಶಗಳು

  • ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಪ್ರಸ್ತಾವನೆಗೆ ರಾಜ್ಯಪಾಲರ ಷರತ್ತುಬದ್ಧ ಅನುಮೋದನೆ.
  • ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಮುಗಿಯುವವರೆಗೆ ಪಾಲಿಕೆ ವಿಭಜನೆ ಜಾರಿಗೆ ಬರುವುದಿಲ್ಲ.
  • ವಿಭಜನೆಯಿಂದ ಕೇಂದ್ರದ ಹಣಕಾಸು ಆಯೋಗದ ಭಾರಿ ಅನುದಾನ ಕೈತಪ್ಪುವ ಭೀತಿಯಿದೆ.

ಬೆಂಗಳೂರು ಬಿಟ್ಟರೆ ರಾಜ್ಯದಲ್ಲೇ ಅತ್ಯಂತ ದೊಡ್ಡದಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡವನ್ನು ಪ್ರತ್ಯೇಕಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಹುಬ್ಬಳ್ಳಿಗೇ ಹೆಚ್ಚಿನ ಅನುದಾನ ಸಿಗುತ್ತಿದೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಿಸಿದ್ದರು. ಆದರೆ ಈಗ ಈ ಪ್ರಕ್ರಿಯೆಗೆ ಕಾನೂನು ಮತ್ತು ತಾಂತ್ರಿಕ ಒಳಸುಳಿಗಳು ಎದುರಾಗಿವೆ.

ರಾಜ್ಯಪಾಲರು ವಿಧಿಸಿರುವ ಪ್ರಮುಖ ಷರತ್ತುಗಳೇನು?

ರಾಜ್ಯಪಾಲರು ಪ್ರಸ್ತಾವನೆಯನ್ನು ಪುರಸ್ಕರಿಸಿದ್ದರೂ, ಅದನ್ನು ತಕ್ಷಣ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಸದಸ್ಯರ ಅವಧಿ ಪೂರ್ಣಗೊಳ್ಳಬೇಕು: ಪ್ರಸ್ತುತ ಇರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ 5 ವರ್ಷಗಳ ಅಧಿಕಾರ ಅವಧಿ ಪೂರ್ಣಗೊಂಡ ನಂತರವೇ ವಿಭಜನೆ ಜಾರಿಗೆ ಬರಬೇಕು.
  • ಜನಗಣತಿ ನಿರ್ದೇಶನಾಲಯದ ಅಡ್ಡಿ: 2026ರ ಜನವರಿ 1ರಿಂದ 2027ರ ಮಾರ್ಚ್ 31ರವರೆಗೆ ಯಾವುದೇ ಆಡಳಿತಾತ್ಮಕ ಘಟಕಗಳ ಗಡಿ ಬದಲಾಯಿಸಬಾರದು ಎಂದು ಜನಗಣತಿ ನಿರ್ದೇಶನಾಲಯ ಸೂಚಿಸಿದೆ. ಹಾಗಾಗಿ, ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಮುಗಿಯುವವರೆಗೆ ಈ ವಿಭಜನೆಯ ಅಧಿಸೂಚನೆ ಜಾರಿ ಮಾಡುವಂತಿಲ್ಲ.
  • ಆರ್ಥಿಕ ನೆರವಿನ ಸವಾಲು: ವಿಭಜನೆಯ ನಂತರ ಎರಡೂ ಪಾಲಿಕೆಗಳಿಗೆ ಆರ್ಥಿಕ ನಷ್ಟವಾಗದಂತೆ ಆದಾಯ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರು ಕಡತವನ್ನು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ.

56 ಸಾವಿರ ಕೋಟಿ ಅನುದಾನಕ್ಕೆ ಕಂಟಕ?

ಕೇಂದ್ರದಿಂದ ಬರುವ ಸುಮಾರು 56,000 ಕೋಟಿ ರೂ. ಅನುದಾನ ಸಿಗಬೇಕಾದರೆ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ 10 ಲಕ್ಷದಿಂದ 40 ಲಕ್ಷ ಜನಸಂಖ್ಯೆ ಇರಬೇಕು. ಒಂದು ವೇಳೆ ಅವಳಿ ನಗರ ವಿಭಜನೆಯಾದರೆ, ಹುಬ್ಬಳ್ಳಿ ಮತ್ತು ಧಾರವಾಡ ಎರಡರಲ್ಲೂ ಜನಸಂಖ್ಯೆ 10 ಲಕ್ಷಕ್ಕಿಂತ ಕೆಳಗೆ ಇಳಿಯುತ್ತದೆ.

ಇದನ್ನೂ ಓದಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ

ಇದರಿಂದಾಗಿ ಕೇಂದ್ರದ ಭಾರಿ ಮೊತ್ತದ ಅನುದಾನ ಕೈತಪ್ಪಿ, ಎರಡೂ ನಗರಗಳ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎನ್ನುವುದು ಬಿಜೆಪಿ ಸದಸ್ಯರ ವಾದವಾಗಿದೆ. ರಾಜಕೀಯ ಮೇಲಾಟ ಹಾಗೂ ತಾಂತ್ರಿಕ ಸಂಕಷ್ಟಗಳ ನಡುವೆಯೂ ಧಾರವಾಡದ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ ಸಮಿತಿ ತನ್ನ ಹೋರಾಟವನ್ನು ಮುಂದುವರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:01 pm, Wed, 27 May 26

Source link

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಶುರುವಾಯ್ತು ಟೆನ್ಷನ್ – Kannada News | Siddaramaiahs Firm Decision to Resign: Ministers Plead for Delay Over Pending Work

ಬೆಂಗಳೂರು, ಮೇ.27: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಢೀರ್ ರಾಜೀನಾಮೆ ನಿರ್ಧಾರದಿಂದ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ. ದೆಹಲಿಯಿಂದ ಮರಳಿದ ನಂತರ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಇದು ಕೆಲವು ಆಪ್ತ ಸಚಿವರು ಮತ್ತು ಶಾಸಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಲಾಖೆಗಳಲ್ಲಿ ಬಾಕಿ ಉಳಿದಿರುವ ಹಲವಾರು ಅನುದಾನದ ಆದೇಶಗಳು ಮತ್ತು ಯೋಜನೆಗಳಿಗೆ ಸಿಎಂ ಸಮ್ಮತಿ ಅಗತ್ಯವಿದೆ. ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಿದರೆ ಈ ಕೆಲಸಗಳು ನಿಂತುಹೋಗುವ ಭೀತಿ ಸಚಿವರನ್ನು ಕಾಡುತ್ತಿದೆ. ಆದ್ದರಿಂದ, ಸಚಿವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕನಿಷ್ಠ ರಾಜ್ಯಸಭೆ ಚುನಾವಣೆ ಮುಗಿಯುವ ಜೂನ್ 18ರವರೆಗೆ ರಾಜೀನಾಮೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ಆದರೆ, ಹೈಕಮಾಂಡ್ ನಾಯಕರ ಸೂಚನೆಯನ್ನು ಒಪ್ಪಿಕೊಂಡಿರುವ ಸಿದ್ದರಾಮಯ್ಯ, ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದೆ ನಾಳೆಯೇ ರಾಜೀನಾಮೆ ನೀಡುವ ತಮ್ಮ ದೃಢ ನಿಲುವನ್ನು ಅವರು ಸಚಿವರುಗಳಿಗೆ ಸ್ಪಷ್ಟಪಡಿಸಿದ್ದಾರೆ. ಹೊಸ ಫೈಲ್‌ಗಳನ್ನು ಚಲಿಸದಂತೆ ಸೂಚಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಕುರಿತು ಮತ್ತಷ್ಟು ಚರ್ಚೆ ನಡೆಯುವ ನಿರೀಕ್ಷೆ ಇದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊಗ್ಗಿನ ಜಡೆ, ಬಗೆಬಗೆಯ ತಿನಿಸುಗಳು! ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ – Kannada News | Kolar Farmer Family Hosts Traditional ‘Seemantha’ Baby Shower for Pregnant Cow

ಕೋಲಾರ, ಮೇ 27: ತಾಲೂಕಿನ ಕಳ್ಳಿಪುರ ಗ್ರಾಮದ ರೈತ ಬಸವರಾಜ್ ಎಂಬುವರ ಕುಟುಂಬವು ತಮ್ಮ ಮನೆಯ ‘ಗೌರಿ’ ಎಂಬ ಹಸು ಗರ್ಭಧರಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿಯ ಹಸುವಿಗೆ ಸುಂದರವಾದ ಮೊಗ್ಗಿನ ಜಡೆ ಹಾಕಿ, ಬಗೆಬಗೆಯ ತಿಂಡಿ-ತಿನಿಸುಗಳನ್ನು ನೀಡಿ ಸತ್ಕರಿಸಲಾಯಿತು. ಈ ವಿಶೇಷ ಆಚರಣೆಗೆ ಗ್ರಾಮದ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ಹಸುವಿಗೆ ಆರತಿ ಬೆಳಗಿ, ಬಂದ ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಅರಿಶಿನ-ಕುಂಕುಮ ಹಾಗೂ ತಾಂಬೂಲ ನೀಡಿ ಸೀಮಂತವನ್ನು ಸಂಭ್ರಮಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Gold Rate: ಬಂಗಾರದ ಬೆಲೆ ಎರಡು ದಿನದಲ್ಲಿ 100 ರೂ ಇಳಿಕೆ – Kannada News | Gold Price Today on 27th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 27: ಚಿನ್ನದ ಬೆಲೆ ಇವತ್ತೂ ಕಡಿಮೆ ಆಗಿದೆ. ನಿನ್ನೆ 45 ರೂ ತಗ್ಗಿದ್ದ ಇದರ ಬೆಲೆ (Gold Rates) ಇವತ್ತು 55 ರೂ ಇಳಿದಿದೆ. ಎರಡು ದಿನದಲ್ಲಿ ಗ್ರಾಮ್​ಗೆ 100 ರೂ ಕಡಿಮೆ ಆದಂತಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ನಿಂತ ನೀರಾಗಿದೆ. ಕಳೆದ ಒಂದು ವಾರದಿಂದ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,829 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,510 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,872 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,829 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,510 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,510 ರೂ
  • ಚೆನ್ನೈ: 14,650 ರೂ
  • ಮುಂಬೈ: 14,510 ರೂ
  • ದೆಹಲಿ: 14,625 ರೂ
  • ಕೋಲ್ಕತಾ: 14,510 ರೂ
  • ಕೇರಳ: 14,510 ರೂ
  • ಅಹ್ಮದಾಬಾದ್: 14,515 ರೂ
  • ಜೈಪುರ್: 14,525 ರೂ
  • ಲಕ್ನೋ: 14,525 ರೂ
  • ಭುವನೇಶ್ವರ್: 14,510 ರೂ

ಇದನ್ನೂ ಓದಿ: ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (14,246 ರುಪಾಯಿ)
  • ದುಬೈ: 543.75 ಡಿರಾಮ್ (14,176 ರುಪಾಯಿ)
  • ಅಮೆರಿಕ: 148.50 ಡಾಲರ್ (14,199 ರುಪಾಯಿ)
  • ಸಿಂಗಾಪುರ: 196.10 ಸಿಂಗಾಪುರ್ ಡಾಲರ್ (14,713 ರುಪಾಯಿ)
  • ಕತಾರ್: 544.50 ಕತಾರಿ ರಿಯಾಲ್ (14,310 ರೂ)
  • ಸೌದಿ ಅರೇಬಿಯಾ: 560 ಸೌದಿ ರಿಯಾಲ್ (14,295 ರುಪಾಯಿ)
  • ಓಮನ್: 57.20 ಒಮಾನಿ ರಿಯಾಲ್ (14,225 ರುಪಾಯಿ)
  • ಕುವೇತ್: 45.33 ಕುವೇತಿ ದಿನಾರ್ (14,158 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link