ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್ನಲ್ಲಿ ಈಡೇರುತ್ತಾ? – Kannada News | PM Kisan Samman Nidhi Yojana, expectations of rise in funding for this scheme
ನವದೆಹಲಿ, ಜನವರಿ 22: ಮುಂಬರುವ ಬಜೆಟ್ನಲ್ಲಿ (Union Budget) ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಉತ್ತೇಜನಕಾರಿ ಕ್ರಮಗಳನ್ನು ಸರ್ಕಾರ ಕೈಗೊಳ್ಳುವ ನಿರೀಕ್ಷೆ ಇದೆ. ಕಳೆದ ಕೆಲ ವರ್ಷಗಳಿಂದ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ವಿನಿಯೋಗಿಸುತ್ತಿರುವ ಹಣ ಕ್ರಮೇಣವಾಗಿ ಹೆಚ್ಚುತ್ತಾ ಬಂದಿದೆ. 2013-14ರಲ್ಲಿ ಕೃಷಿ ಕ್ಷೇತ್ರಕ್ಕೆ 21,933 ಕೋಟಿ ರೂ ನೀಡಲಾಗಿತ್ತು. 2025-26ರ ಬಜೆಟ್ನಲ್ಲಿ 1.27 ಲಕ್ಷ ಕೋಟಿ ರೂಗಿಂತ ಹೆಚ್ಚಿನ ಮೊತ್ತವನ್ನು ಕೃಷಿಗೆ ವಿನಿಯೋಗಿಸಲಾಗಿದೆ. 2026-27ರ ಬಜೆಟ್ನಲ್ಲಿ ಇದು 1.50 ಲಕ್ಷ ಕೋಟಿ ರೂ ಮುಟ್ಟುವ ನಿರೀಕ್ಷೆ ಇದೆ. ಪಿಎಂ…