Category Archives: Blog

Your blog category

ಯಶ್ ಯಾವಾಗ ಬರ್ತಾರೆ? ಖುದ್ದು ಯಶ್ ಕೊಟ್ಟಿದ್ದಾರೆ ಉತ್ತರ – Kannada News | Yash announce Toxic movie feature in BGMI game

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ಎರಡು ಬಾರಿ ಮುಂದೂಡಲ್ಪಟ್ಟಿದೆ. ‘ಟಾಕ್ಸಿಕ್’ ಯಾವಾಗ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಖಾತ್ರಿಯೂ ಇಲ್ಲ. ಹೊಸ ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಈಗ ಯಶ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ ಎಂಬ ಮಾಹಿತಿಯೂ ಇಲ್ಲ. ಇದೀಗ ಇದೇ ವಿಷಯವಾಗಿ ಜಾಹೀರಾತೊಂದು ಬಿಡುಗಡೆ ಆಗಿದ್ದು, ಎಲ್ಲರೂ ‘ಯಶ್ ಎಲ್ಲಿ?’ ‘ಯಶ್ ಯಾವಾಗ ಬರ್ತಾರೆ’ ಎಂದು ಹುಡುಕಾಡುತ್ತಿದ್ದಾರೆ. ಅದಕ್ಕೆ ಸ್ವತಃ ಯಶ್ ಉತ್ತರ ಕೊಟ್ಟಿದ್ದಾರೆ.

ಇದೀಗ ‘ಟಾಕ್ಸಿಕ್’ಗೆ ಸಂಬಂಧಿಸಿದ ಜಾಹೀರಾತೊಂದು ಬಿಡುಗಡೆ ಆಗಿದ್ದು, ಜಾಹೀರಾತಿನಲ್ಲಿ ತೋರಿಸಿರುವಂತೆ ಯುವಕರು ‘ಯಶ್ ಯಾವಾಗ ಬರ್ತಾರೆ?’, ‘ಟಾಕ್ಸಿಕ್ ಯಾವಾಗ ಬರುತ್ತೆ’ ಎಂದು ಕೇಳುತ್ತಿದ್ದಾರೆ. ನ್ಯೂಸ್ ಚಾನೆಲ್​​ಗಳಲ್ಲೂ ‘ಯಶ್ ಯಾವಾಗ ಬರ್ತಾರೆ’ ಎಂಬುದೇ ಪ್ರಶ್ನೆ. ಇದಕ್ಕೆ ಖುದ್ದು ಯಶ್ ಉತ್ತರ ಕೊಟ್ಟಿದ್ದು, ‘ಟಾಕ್ಸಿಕ್’ ಬರುತ್ತೆ, ಅದೂ ಧಮಾಕ ಮಾಡಿಕೊಂಡು ಬರುತ್ತೆ, ಆದರೆ ಸ್ವಲ್ಪ ಕಾಯಿರಿ’ ಎಂದಿದ್ದಾರೆ. ಆದರೆ ಯಶ್ ಮಾತ್ರ ನಾಳೆಯೇ ಬರುತ್ತಿದ್ದಾರೆ. ಬಿಜಿಎಂಐ (ಬ್ಯಾಟಲ್​​ಗ್ರೌಂಡ್ ಮೊಬೈಲ್ ಇಂಡಿಯಾ) ಮೂಲಕ.

‘ಟಾಕ್ಸಿಕ್’ ಇದೀಗ ಭಾರತದ ಬಲು ಜನಪ್ರಿಯ ಆನ್​​ಲೈನ್ ಗೇಮ್ ಆಗಿರುವ ಬಿಜಿಎಂಐ ಜೊತೆ ಕೊಲ್ಯಾಬರೇಟ್ ಆಗಿದ್ದು, ಬಿಜಿಎಂಐನ ‘ಟಾಕ್ಸಿಕ್’ ವರ್ಷನ್ ಇದೀಗ ಡೌನ್​​ಲೊಡ್​​ಗೆ ಲಭ್ಯವಿದೆ. ಈ ಹೊಸ ಗೇಮ್​​ನಲ್ಲಿ ‘ಟಾಕ್ಸಿಕ್’ ಸಿನಿಮಾನಲ್ಲಿ ಬಳಸಿದ ಆಯುಧಗಳು ಸಿಗಲಿವೆ. ಜೊತೆಗೆ ಯಶ್ ಅವರ ಧ್ವನಿಯೂ ಸಹ ಗೇಮ್​​ನಲ್ಲಿ ಇರಲಿದೆ. ‘ಟಾಕ್ಸಿಕ್’ ಚಲನಚಿತ್ರದ ಥೀಮ್ ಆಧಾರಿತ ವಿಶೇಷ ಸ್ಕಿನ್‌ಗಳು ಮತ್ತು ಔಟ್‌ಫಿಟ್‌ಗಳು ಲಭ್ಯವಿರಲಿವೆ. ಯಶ್ ಅವರ ವಿಶಿಷ್ಟ ಶೈಲಿಯ ಹೇರ್‌ಸ್ಟೈಲ್, ಉಡುಪು ಮತ್ತು ಆಕ್ಷನ್ ಮ್ಯಾನರಿಸಂಗಳನ್ನು ಗೇಮ್‌ನಲ್ಲಿ ಅಳವಡಿಸಲಾಗಿದೆಯಂತೆ.

ಈ ಹಿಂದಿನ ಅಪ್‌ಡೇಟ್‌ಗಳಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ, ಶಾರುಖ್ ಖಾನ್ ಅವರ ಧ್ವನಿ ಕೇಳುತ್ತಿತ್ತು. ಹೊಸ ಆವೃತ್ತಿಯಲ್ಲಿ ಯಶ್ ಅವರ ಖಡಕ್ ಧ್ವನಿ ಸಹ ಇರಲಿದೆ. ‘ಎನಿಮೀಸ್ ಅಹೆಡ್’, ‘ಫಾಲೋ ಮಿ’ ಇನ್ನಿತರೆ ಗೇಮ್ ಕಮಾಂಡ್​​ಗಳು ಯಶ್ ಅವರ ಖಡಕ್ ಧ್ವನಿಯಲ್ಲಿ ಕೇಳಬಹುದಾಗಿದೆ. ಯಶ್ ಅಭಿಮಾನಿಗಳಿಗಂತೂ ಇದು ಹಬ್ಬವೇ ಸರಿ. ಬಿಜಿಎಂಐ ಹೊಸ ಅಪ್​​ಡೇಟ್​​ನ ಗೇಮ್ ಆಡುವವರು ವಿಶೇಷ ‘ಟಾಕ್ಸಿಕ್’ ಕ್ರೇಟ್‌ಗಳನ್ನು ಅನ್‌ಲಾಕ್ ಮಾಡಬಹುದು. ಇದರಲ್ಲಿ ಚಿತ್ರದ ಪೋಸ್ಟರ್‌ಗಳಲ್ಲಿ ಕಾಣಿಸಿಕೊಂಡಿರುವ ರೀತಿಯ ಗನ್‌ ಸ್ಕಿನ್‌ಗಳು ಮತ್ತು ಡ್ರೆಸ್‌ಗಳು ಇರಲಿವೆ. ಗೇಮ್​ ಜೊತೆಗೆ ಯಶ್ ಅವರ ಸಹಯೋಗವನ್ನು ಸೆಲೆಬ್ರೇಟ್ ಮಾಡಲು ಗೇಮ್‌ನಲ್ಲಿ ಸಣ್ಣ ಪುಟ್ಟ ಮಿಷನ್‌ಗಳನ್ನು ನೀಡಲಾಗುತ್ತದೆ. ಈ ಮಿಷನ್‌ಗಳನ್ನು ಪೂರ್ಣಗೊಳಿಸಿದರೆ ಉಚಿತವಾಗಿ ಯಶ್ ಸಂಬಂಧಿತ ರಿವಾರ್ಡ್‌ಗಳನ್ನು ಪಡೆಯಬಹುದಾಗಿರುತ್ತದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

NeGD Summer Internship 2026: ಕೇಂದ್ರ ಸರ್ಕಾರದ ಐಟಿ ಇಲಾಖೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಇಲ್ಲಿದೆ ಸುವರ್ಣಾವಕಾಶ! – Kannada News | NeGD Summer Internship 2026: Non Technical Roles for Students in Digital India

ಕೇಂದ್ರ ಸರ್ಕಾರದ ಐಟಿ ಇಲಾಖೆಯಲ್ಲಿ ಇಂಟರ್ನ್‌ಶಿಪ್

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಅಡಿಯಲ್ಲಿ ಕಾರ್ಯನಿರ್ವಹಿಸುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನ ರಾಷ್ಟ್ರೀಯ ಇ-ಆಡಳಿತ ವಿಭಾಗವು (NeGD), 2026 ರ ಸಾಲಿನ ತಾಂತ್ರಿಕೇತರ ಬೇಸಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದೇಶದ ಡಿಜಿಟಲ್ ರೂಪಾಂತರದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಇದೊಂದು ಅಪರೂಪದ ಅವಕಾಶವಾಗಿದೆ.

ಲಭ್ಯವಿರುವ ಹುದ್ದೆಗಳು ಮತ್ತು ಇಲಾಖೆಗಳ ವಿವರ:

ಈ ಇಂಟರ್ನ್‌ಶಿಪ್ ಕಾರ್ಯಕ್ರಮದ ಅಡಿಯಲ್ಲಿ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇವುಗಳಲ್ಲಿ ಕಾರ್ಯಕ್ರಮ ನಿರ್ವಹಣೆಗೆ 5 ಹುದ್ದೆಗಳು, ಜಾಗೃತಿ ಮತ್ತು ಸಂವಹನಕ್ಕೆ 2 ಹುದ್ದೆಗಳು, ಸಾಮರ್ಥ್ಯ ವೃದ್ಧಿಗೆ 2 ಹುದ್ದೆಗಳು, ತಂತ್ರಜ್ಞಾನ ನಿರ್ವಹಣೆಗೆ 2 ಹುದ್ದೆಗಳು ಹಾಗೂ ಯೋಜನಾ ಮೌಲ್ಯಮಾಪನ ವಿಭಾಗಕ್ಕೆ 1 ಹುದ್ದೆಯನ್ನು ಮೀಸಲಿಡಲಾಗಿದೆ. ಆಯ್ಕೆಯಾಗುವ ಇಂಟರ್ನ್‌ಗಳಿಗೆ ನೀತಿ ದಸ್ತಾವೇಜೀಕರಣ, ದತ್ತಾಂಶ ವಿಶ್ಲೇಷಣೆ, ಭಾಷಾ ಸಂಸ್ಕರಣೆ (NLP) ಮತ್ತು ದತ್ತಾಂಶ ಗೌಪ್ಯತೆ ಸಂಶೋಧನೆಯಂತಹ ಡಿಪಿಡಿಪಿ (DPDP) ಕಾಯ್ದೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಮೇಲೆ ಕೆಲಸ ಮಾಡುವ ಸುವರ್ಣಾವಕಾಶ ಸಿಗಲಿದೆ. ಇದರ ಜೊತೆಗೆ, ಕೃತಕ ಬುದ್ಧಿಮತ್ತೆ (AI), ಬ್ಲಾಕ್‌ಚೈನ್ ಮತ್ತು ಕ್ಲೌಡ್ ಕಂಪ್ಯೂಟಿಂಗ್‌ನಂತಹ ಸಮಕಾಲೀನ ಆಧುನಿಕ ತಾಂತ್ರಿಕ ಕ್ಷೇತ್ರಗಳಲ್ಲಿ ಪ್ರಾಯೋಗಿಕ ಅನುಭವವನ್ನು ಗಳಿಸಲು ಇದು ಸಹಕಾರಿಯಾಗಲಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು:

ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ಕೋರ್ಸ್‌ಗಳಲ್ಲಿ ಕನಿಷ್ಠ ಶೇಕಡಾ 60 ರಷ್ಟು ಅಂಕಗಳನ್ನು ಗಳಿಸಿರಬೇಕು. ಶೈಕ್ಷಣಿಕ ಹಿನ್ನೆಲೆಗೆ ಸಂಬಂಧಿಸಿದಂತೆ, 10+2+4 ವ್ಯವಸ್ಥೆಯಲ್ಲಿ ಎಂಜಿನಿಯರಿಂಗ್‌ನ ಅಂತಿಮ ಅಥವಾ ಅಂತಿಮ ಪೂರ್ವ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅಲ್ಲದೆ, 10+2+5 ವ್ಯವಸ್ಥೆಯಲ್ಲಿ ಡಿಪ್ಲೊಮಾ, ಡ್ಯುಯಲ್ ಪದವಿ ಅಥವಾ ಸಂಯೋಜಿತ ಕೋರ್ಸ್‌ಗಳ ಅಂತಿಮ ಅಥವಾ ಪೂರ್ವ-ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆದಾಗ್ಯೂ, ಸಂಸ್ಥೆಯ ಅಗತ್ಯತೆಗಳನ್ನು ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ಅನುಮೋದನೆಯೊಂದಿಗೆ ಶೈಕ್ಷಣಿಕ ಅರ್ಹತೆಯಲ್ಲಿ ಸ್ವಲ್ಪ ಮಟ್ಟಿನ ಸಡಿಲಿಕೆಯನ್ನು ನೀಡಬಹುದಾಗಿದೆ. ಆದರೆ ಕನಿಷ್ಠ ಅರ್ಹತೆಗಳನ್ನು ಹೊಂದಿದ ತಕ್ಷಣ ಆಯ್ಕೆ ಖಾತರಿಯಾಗುವುದಿಲ್ಲ ಮತ್ತು ಉತ್ತಮ ಶೈಕ್ಷಣಿಕ ದಾಖಲೆಯೊಂದಿಗೆ ಹೆಚ್ಚುವರಿ ಕೌಶಲ್ಯ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮತ್ತು ಮಾನದಂಡಗಳು:

ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ಅರ್ಹತಾ ಪರೀಕ್ಷೆಗಳಲ್ಲಿ ಅವರು ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡುವ ಮೂಲಕ ಪ್ರಕ್ರಿಯೆಗೊಳಿಸಲಾಗುತ್ತದೆ. ತದನಂತರ, ಆಂತರಿಕ ಆಯ್ಕೆ ಸಮಿತಿಯು ನಡೆಸುವ ಸಂದರ್ಶನ ಅಥವಾ ಮೌಲ್ಯಮಾಪನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ವಿಶೇಷವೆಂದರೆ, ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡುವ ಎನ್‌ಐಆರ್‌ಎಫ್ (NIRF) ಶ್ರೇಯಾಂಕದಲ್ಲಿ ದೇಶದ ಅಗ್ರ 100 ಸಂಸ್ಥೆಗಳಲ್ಲಿ ಸ್ಥಾನ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚುವರಿ ಆದ್ಯತೆ ನೀಡಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸರಳ ವಿಧಾನ:

ಆಸಕ್ತ ವಿದ್ಯಾರ್ಥಿಗಳು ಸಚಿವಾಲಯದ (MeitY) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ವೆಬ್‌ಸೈಟ್‌ನ ಮುಖಪುಟದಲ್ಲಿರುವ “Key Offers” (ಕೀ ಆಫರ್‌ಗಳು) ವಿಭಾಗಕ್ಕೆ ತೆರಳಿ, ಅಲ್ಲಿ “Schemes and Services” (ಯೋಜನೆಗಳು ಮತ್ತು ಸೇವೆಗಳು) ಅಡಿಯಲ್ಲಿ ಲಭ್ಯವಿರುವ “NeGD Non-Technical (Summer) Internship Program” ಲಿಂಕ್ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ, “Detailed Documents” ವಿಭಾಗದಲ್ಲಿ ಕಾಣಿಸುವ ಅರ್ಜಿ ನಮೂನೆಯ ಲಿಂಕ್ ಕ್ಲಿಕ್ ಮಾಡಿ, ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ ಅರ್ಜಿಯನ್ನು ಸಬ್ಮಿಟ್ ಮಾಡಬೇಕು. ಮುಂದಿನ ದಿನಗಳ ಉಲ್ಲೇಖಕ್ಕಾಗಿ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳುವುದು ಉತ್ತಮ.

ಇದನ್ನೂ ಓದಿ: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಪ್ರಮುಖ ದಿನಾಂಕಗಳು ಮತ್ತು ಇಂಟರ್ನ್‌ಶಿಪ್ ಅವಧಿ:

ಈ ಪ್ರತಿಷ್ಠಿತ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ ಮೂರನೇ ವಾರದಲ್ಲಿ ಸಂದರ್ಶನ ಮತ್ತು ಮೌಲ್ಯಮಾಪನ ಪ್ರಕ್ರಿಯೆಗಳು ನಡೆಯಲಿದ್ದು, ಜೂನ್ ನಾಲ್ಕನೇ ವಾರದಲ್ಲಿ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಇಂಟರ್ನ್‌ಶಿಪ್ ಪ್ರೋಗ್ರಾಂ ಜುಲೈ ತಿಂಗಳಿನಲ್ಲಿ ಅಧಿಕೃತವಾಗಿ ಆರಂಭವಾಗಿ ಸೆಪ್ಟೆಂಬರ್ ತನಕ (ಒಟ್ಟು ಮೂರು ತಿಂಗಳು) ಮುಂದುವರಿಯಲಿದೆ. ಸಂಸ್ಥೆಯ ತುರ್ತು ಅಗತ್ಯಗಳು ಮತ್ತು ವಿದ್ಯಾರ್ಥಿಗಳ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಅವಧಿಯನ್ನು ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸುವ ಅವಕಾಶವೂ ಇರುತ್ತದೆ. ಇಂಟರ್ನ್‌ಶಿಪ್ ಯಶಸ್ವಿಯಾಗಿ ಮುಗಿಸುವ ವಿದ್ಯಾರ್ಥಿಗಳಿಗೆ ಆಯಾ ವಿಭಾಗದ ಮುಖ್ಯಸ್ಥರ ಅನುಮೋದನೆಯೊಂದಿಗೆ ಪ್ರಮಾಣಪತ್ರ ಮತ್ತು ಮಾಸಿಕ ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು? – Kannada News | Don 3 Controversy: Ranveer’s Exit, SRK’s Condition & The Next Don Mystery

‘ಡಾನ್ 3’ (Don 3) ಚಿತ್ರದ ವಿವಾದ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಬಿ-ಟೌನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಾರುಖ್ ಖಾನ್ ಅವರು ‘ಡಾನ್’ ಹಾಗೂ ‘ಡಾನ್ 2’ ಸಿನಿಮಾಗಳಲ್ಲಿ ನಟಿಸಿ ಜಾಗತಿಕ ಮಟ್ಟದಲ್ಲಿ ದೊಡ್ಡ ಯಶಸ್ಸು ತಂದುಕೊಟ್ಟಿದ್ದರು. ಆ ಬಳಿಕ ನಿರ್ದೇಶಕ ಫರ್ಹಾನ್ ಅಖ್ತರ್ ಅವರು ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಆದರೆ, ರಣವೀರ್ ಸಿಂಗ್ ಸಿನಿಮಾದಿಂದ ದಿಢೀರ್ ಹೊರನಡೆದಿರುವುದರಿಂದ ಅವರು ಈ ಚಿತ್ರದಲ್ಲಿ ನಟಿಸುವುದು ಬಹುತೇಕ ಅನುಮಾನವಾಗಿದೆ. ಈ ಬೆಳವಣಿಗೆಯಿಂದಾಗಿ ಈಗ ‘ಡಾನ್ 3’ ಚಿತ್ರಕ್ಕೆ ಮುಂದಿನ ನಾಯಕ ಯಾರು? ಶಾರುಖ್ ಖಾನ್ ಮತ್ತೆ ಡಾನ್ ಆಗಿ ಮರಳುತ್ತಾರಾ? ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ.

ರಣವೀರ್ ಸಿಂಗ್ ಚಿತ್ರದಿಂದ ಹೊರಬಿದ್ದ ತಕ್ಷಣವೇ, ಆ ಪಾತ್ರಕ್ಕೆ ಬಾಲಿವುಡ್ ಸೂಪರ್‌ಸ್ಟಾರ್ ಹೃತಿಕ್ ರೋಷನ್ ಅವರನ್ನು ಕರೆತರಲಾಗುತ್ತಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ ಈ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿದ್ದ ಹೃತಿಕ್, ‘ಕೇವಲ ವದಂತಿಯಾಗಿ ಆರಂಭವಾದ ಮಾತುಗಳು ಈಗ ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿವೆ. ಆದರೆ ‘ಡಾನ್ 3’ ಚಿತ್ರಕ್ಕಾಗಿ ಚಿತ್ರತಂಡ ನನ್ನನ್ನು ಯಾವುದೇ ಹಂತದಲ್ಲೂ ಸಂಪರ್ಕಿಸಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸುಮ್ಮನೆ ಹರಡಿದ್ದ ಸುದ್ದಿಗೆ ಬ್ರೇಕ್ ಹಾಕಿದ್ದರು.

ಮರುಪ್ರವೇಶಕ್ಕೆ ಶಾರುಖ್ ಖಾನ್ ಷರತ್ತು?

ಮತ್ತೊಂದೆಡೆ, ಶಾರುಖ್ ಖಾನ್ ಅವರೇ ಮತ್ತೆ ‘ಡಾನ್’ ಆಗಿ ಕಂಬ್ಯಾಕ್ ಮಾಡಲಿದ್ದಾರೆ ಎಂಬ ಬಲವಾದ ವರದಿಗಳು ಕೇಳಿಬರುತ್ತಿವೆ. ಆದರೆ, ಕಿಂಗ್ ಖಾನ್ ಮರಳಿ ಬರಲು ಒಂದು ಮುಖ್ಯ ಷರತ್ತು ವಿಧಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲೀ ಅವರು ಈ ಚಿತ್ರವನ್ನು ನಿರ್ದೇಶಿಸುವುದಾದರೆ ಮಾತ್ರ ತಾವು ನಟಿಸಲು ಸಿದ್ಧ ಎಂದು ಶಾರುಖ್ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಶಾರುಖ್ ಖಾನ್ ಅವರಾಗಲಿ ಅಥವಾ ನಿರ್ಮಾಣ ಸಂಸ್ಥೆಯಾಗಲಿ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

ನಿರ್ದೇಶಕ ಫರ್ಹಾನ್ ಅಖ್ತರ್ ಮೌನ:

ಇಷ್ಟೆಲ್ಲಾ ಗೊಂದಲ ಹಾಗೂ ವಿವಾದಗಳು ಸೃಷ್ಟಿಯಾಗಿದ್ದರೂ, ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ಫರ್ಹಾನ್ ಅಖ್ತರ್ ಮಾತ್ರ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ. ಅವರ ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ಸಂಸ್ಥೆಯೂ ಸಹ ಚಿತ್ರದ ಭವಿಷ್ಯದ ಬಗ್ಗೆ ಅಥವಾ ಮುಂದಿನ ನಾಯಕ ಯಾರು ಎಂಬುದರ ಕುರಿತು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್‌

ಅಮಿತಾಭ್ ಬಚ್ಚನ್ ಮತ್ತು ಶಾರುಖ್ ಖಾನ್ ಅವರಂತಹ ದಿಗ್ಗಜರು ನಟಿಸಿ ಬೆಳೆಸಿದ ‘ಡಾನ್’ ಸರಣಿಯ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬುದು ಸದ್ಯಕ್ಕೆ ದೊಡ್ಡ ಸಸ್ಪೆನ್ಸ್ ಆಗಿ ಉಳಿದಿದೆ. ಈ ಚಿತ್ರವನ್ನು ಅರ್ಧಕ್ಕೆ ಕೈ ಬಿಡೋ ಬಗ್ಗೆಯೂ ನಿರ್ಮಾಪಕರು ಯೋಚಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್​​: ರಾಹುಲ್​​ ಬಳಿ ಪರಮೇಶ್ವರ್​​ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ? – Kannada News | Siddaramaiahs Impending Resignation: Dr. G. Parameshwara Recommended for Karnataka Chief Minister.

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ರಾಜಕೀಯ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 28) ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ. ಈ ಸಂದರ್ಭದಲ್ಲಿ, ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಂದೆ ತೆರವಾಗುವ ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರಂತೆ. ಪಕ್ಷ ಸಂಘಟನೆಯಲ್ಲಿನ ಅನುಭವ ಮತ್ತು ಆಡಳಿತದಲ್ಲಿನ ಪರಿಣತಿಯನ್ನು ಉಲ್ಲೇಖಿಸಿ, ಡಾ. ಜಿ. ಪರಮೇಶ್ವರ ಅವರು ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ನಾನು ಯಾವ ತಪ್ಪು ಮಾಡಿಲ್ಲ’- 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ್ ಕೋರ್ಟ್ ತೀರ್ಪಿಗೆ ಬೈಜು ಬೇಸರ – Kannada News | Byju Raveendran disappointed with Singapore court judgement sentencing his for 6 month jail

ಸಿಂಗಾಪುರ, ಮೇ 27: ತನ್ನ ವಿರುದ್ಧ 6 ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಸಿಂಗಾಪುರ ಕೋರ್ಟ್​ನ ತೀರ್ಪಿನ ಬಗ್ಗೆ ಬೈಜು ರವೀಂದ್ರನ್ (Byju Raveendran) ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಇಡೀ ಪ್ರಕರಣವನ್ನು ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿ ನನ್ನ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ನಾವೀಗಾಗಲೇ ಹೂಡಿಕೆದಾರರೊಂದಿಗೆ ಅಂತಿಮ ಹಂತದ ಸಂಧಾನ ಮಾತುಕತೆಯಲ್ಲಿದ್ದೇವೆ (Settlement Talks),” ಎಂದು ಸ್ಪಷ್ಟಪಡಿಸಿದ್ದಾರೆ.

“ಸಾಲಗಾರರು ಹಾಗೂ ಕತಾರ್ ಇನ್ವೆಸ್ಟ್‌ಮೆಂಟ್ ಅಥಾರಿಟಿ (QIA) ಒಳಗೊಂಡಂತೆ ಎಲ್ಲಾ ಪ್ರಮುಖ ಭಾಗಿದಾರರೊಂದಿಗೆ ನಾವು ಒಪ್ಪಂದಕ್ಕೆ ಬಂದಿದ್ದೇವೆ. ಕೇವಲ ಕೆಲವು ಸಣ್ಣ ವಿಷಯಗಳು ಮಾತ್ರ ಬಾಕಿ ಉಳಿದಿವೆ. ಈ ಮಾತುಕತೆಗಳ ಸಮಯದಲ್ಲಿ, ನನ್ನ ಕಡೆಯಿಂದಾಗಲಿ ಅಥವಾ ಇತರ ಸಂಸ್ಥಾಪಕರಿಂದಾಗಲಿ ಯಾವುದೇ ತಪ್ಪು ನಡೆದಿಲ್ಲ ಎಂಬುದನ್ನು ಎಲ್ಲಾ ಕಡೆಯವರು ಒಪ್ಪಿಕೊಂಡಿದ್ದಾರೆ. ಇಂತಹ ಸೂಕ್ಷ್ಮ ಹಂತದಲ್ಲಿ ಕತಾರ್ ಇನ್ವೆಸ್ಟ್‌ಮೆಂಟ್ ಈ ರೀತಿಯ ಕಾನೂನು ಒತ್ತಡದ ತಂತ್ರಗಳನ್ನು ಬಳಸುತ್ತಿರುವುದು ಅತ್ಯಂತ ದುರದೃಷ್ಟಕರ” ಎಂದು ಬೈಜುಸ್ ಸಂಸ್ಥಾಪಕರಾದ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಾವು ಯಾವುದೇ ಹಣವನ್ನು ವೈಯಕ್ತಿಕವಾಗಿ ಪಡೆದಿಲ್ಲ ಮತ್ತು ವಿವಾದಿತ ಹಣವನ್ನು ಕೇವಲ ಉದ್ಯಮದ ಕಾನೂನಾತ್ಮಕ ಉದ್ದೇಶಗಳಿಗಾಗಿಯೇ ಬಳಸಲಾಗಿದೆ ಎಂದು ಪ್ರತಿಪಾದಿಸಿದ ಅವರಿ, “ಒಂದು ಕಡೆಯ ಸುಳ್ಳು ವರದಿಗಳನ್ನು ನಾನು ಸುಮ್ಮನೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ,” ಎಂದು ನ್ಯಾಯಾಲಯದ ತೀರ್ಪನ್ನು ಬಲವಾಗಿ ತಿರಸ್ಕರಿಸಿದ್ದಾರೆ.

ಸಿಂಗಾಪುರ ನ್ಯಾಯಾಲಯದ ಆದೇಶವೇನು?

ಬೈಜುಸ್ ಸಂಸ್ಥೆ ಸಾಲಗಾರರಿಗೆ ಹಣ ವಾಪಸ್ ಮಾಡದೇ ಇರುವ ಆರೋಪಕ್ಕೆ ಸಂಬಂಧಿಸಿದ ಕೋರ್ಟ್ ಕೇಸ್ ಇದು. ಕೋರ್ಟ್ ಆದೇಶವನ್ನೂ ಪಾಲಿಸಿಲ್ಲ ಎನ್ನುವ ಆರೋಪವೂ ಬೈಜು ರವೀಂದ್ರನ್ ಮೇಲಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ (Contempt of Court) ಆರೋಪ ಇದ್ದು, ಆ ಪ್ರಕರಣದಲ್ಲಿ ಬೈಜು ರವೀಂದ್ರನ್ ಅವರನ್ನು ದೋಷಿ ಎಂದು ಸಿಂಗಾಪುರ ಕೋರ್ಟ್ ಪರಿಗಣಿಸಿ ತೀರ್ಪು ನೀಡಿದೆ.

ಇದನ್ನೂ ಓದಿ: ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್​ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್

ಬೈಜು ರವೀಂದ್ರನ್ ಅವರ ಈ ಸ್ಪಷ್ಟನೆಯ ನಡುವೆಯೂ, ಸಿಂಗಾಪುರ ನ್ಯಾಯಾಲಯವು ಅವರನ್ನು **ನ್ಯಾಯಾಂಗ ನಿಂದನೆ (Contempt of Court)** ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಈ ಕೆಳಗಿನ ಕಠಿಣ ಆದೇಶಗಳನ್ನು ನೀಡಿದೆ:

6 ತಿಂಗಳ ಜೈಲು ಶಿಕ್ಷೆ

ನ್ಯಾಯಾಲಯದ ಆದೇಶಗಳನ್ನು ಪದೇ ಪದೇ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬೈಜು ಅವರಿಗೆ 6 ತಿಂಗಳ ಸಿವಿಲ್ ಜೈಲು ಶಿಕ್ಷೆ ವಿಧಿಸಲಾಗಿದೆ ಮತ್ತು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಲಾಗಿದೆ. ಸಿಂಗಾಪುರ ಡಾಲರ್ $90,000 (ಸುಮಾರು 67 ಲಕ್ಷ ರೂ) ಕಾನೂನು ವೆಚ್ಚವನ್ನು ನ್ಯಾಯಾಲಯಕ್ಕೆ ಪಾವತಿಸಲು ಆದೇಶಿಸಲಾಗಿದೆ. ‘ಬೀಆರ್ ಇನ್ವೆಸ್ಟ್‌ಕೋ ಪ್ರೈವೇಟ್ ಲಿಮಿಟೆಡ್’ (Beeaar Investco Pte) ಎಂಬ ಕಂಪನಿಯ ಮಾಲೀಕತ್ವದ ನಿಖರ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಏನಿದು ಬೈಜೂಸ್ ವಿರುದ್ಧದ ಪ್ರಕರಣ?

ಈ ಕಾನೂನು ಹೋರಾಟವು ಕತಾರ್‌ನ ಸಾರ್ವಭೌಮ ನಿಧಿ ಸಂಸ್ಥೆಯಾದ ಕತಾರ್ ಇನ್‌ವೆಸ್ಟ್‌ಮೆಂಟ್ ಅಥಾರಿಟಿಯ (QIA) ಅಂಗಸಂಸ್ಥೆಯಾದ ‘ಕತಾರ್ ಹೋಲ್ಡಿಂಗ್ಸ್’ ಸಲ್ಲಿಸಿದ ದೂರಿನಿಂದ ಆರಂಭವಾಗಿದೆ. ಬೈಜೂಸ್ ಸಂಸ್ಥೆಯು ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದ ಮತ್ತು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದ ಕಠಿಣ ದಿನಗಳಲ್ಲಿ ಈ ಸಂಸ್ಥೆಯು ಬೈಜೂಸ್‌ನಲ್ಲಿ ಭಾರಿ ಹೂಡಿಕೆ ಮಾಡಿತ್ತು.

ಬೈಜು ಆಸ್ತಿ ವಿವರ ಬಹಿರಂಗಪಡಿಸದಿರುವುದು

ಏಪ್ರಿಲ್ 2024 ರಿಂದ ಬೈಜು ರವೀಂದ್ರನ್ ಅವರು ತಮ್ಮ ವೈಯಕ್ತಿಕ ಹಾಗೂ ಕಾರ್ಪೊರೇಟ್ ಆಸ್ತಿಪಾಸ್ತಿಗಳ ವಿವರಗಳನ್ನು ಬಹಿರಂಗಪಡಿಸುವಂತೆ ಸಿಂಗಾಪುರ ನ್ಯಾಯಾಲಯ ನೀಡಿದ್ದ ನಿರ್ದೇಶನಗಳನ್ನು ಪಾಲಿಸಿರಲಿಲ್ಲ. ಕೋರ್ಟ್ ಆದೇಶಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದೇ ಈ ಜೈಲು ಶಿಕ್ಷೆಯ ತೀರ್ಪಿಗೆ ಮುಖ್ಯ ಕಾರಣವಾಗಿದೆ.

ಬೈಜುಸ್ ವಿರುದ್ಧ ಜಾಗತಿಕವಾಗಿ ಮುಂದುವರಿದಿರುವ ಇತರ ಕಾನೂನು ಸಂಕಷ್ಟಗಳು

ಬೈಜು ರವೀಂದ್ರನ್ ಅವರ ಕಾನೂನು ಹೋರಾಟ ಕೇವಲ ಸಿಂಗಾಪುರಕ್ಕೆ ಮಾತ್ರ ಸೀಮಿತವಾಗಿಲ್ಲ. ಬೈಜೂಸ್‌ನ ಅಂತರರಾಷ್ಟ್ರೀಯ ವಿಭಾಗವು ಪಡೆದಿದ್ದ 1.2 ಬಿಲಿಯನ್ ಡಾಲರ್ ಸಾಲದ ಮರುಪಾವತಿಗೆ ಸಂಬಂಧಿಸಿದಂತೆ ಅಮೆರಿಕದ ಸಾಲಗಾರರು ಮತ್ತು ನ್ಯಾಯಾಲಯಗಳು ಈಗಾಗಲೇ ಬೈಜು ವಿರುದ್ಧ ತೀವ್ರ ಕಾನೂನು ಕ್ರಮಗಳನ್ನು ಜರುಗಿಸುತ್ತಿವೆ. ಅಲ್ಲೂ ಕೂಡ ಮಾಹಿತಿ ನೀಡದ ಕಾರಣಕ್ಕೆ ಅವರ ಮೇಲೆ ಈ ಹಿಂದೆ ಸಿವಿಲ್ ನಿಂದನೆ ಆರೋಪ ಹೊರಿಸಲಾಗಿತ್ತು.

ಇದನ್ನೂ ಓದಿ: ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗೆ ನೀಡಬೇಕಾಗಿದ್ದ 159 ಕೋಟಿ ರೂ ಪ್ರಾಯೋಜಕತ್ವದ (Sponsorship) ಬಾಕಿ ಹಣದ ವಿವಾದದಿಂದಾಗಿ, ಬೈಜೂಸ್‌ನ ಪೋಷಕ ಸಂಸ್ಥೆಯಾದ ‘ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್’ ಸದ್ಯ ಕಾರ್ಪೊರೇಟ್ ದಿವಾಳಿತನ ನಿಯಂತ್ರಣ ಪ್ರಕ್ರಿಯೆಗೆ (CIRP) ಒಳಗಾಗಿದೆ.

ಒಂದು ಕಾಲದಲ್ಲಿ 22 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಜಾಗತಿಕ ಮಟ್ಟದಲ್ಲಿ ಭಾರತದ ಅತ್ಯಂತ ದೊಡ್ಡ ಯಶಸ್ವಿ ಸ್ಟಾರ್ಟ್‌ಅಪ್ ಆಗಿ ಮಿಂಚಿದ್ದ ಬೈಜೂಸ್ ಮತ್ತು ಅದರ ಸಂಸ್ಥಾಪಕ ಬೈಜು ರವೀಂದ್ರನ್, ಸದ್ಯ ಸಾಲದ ಸುಳಿ ಹಾಗೂ ಬಹುರಾಷ್ಟ್ರೀಯ ಕಾನೂನು ಬಿಕ್ಕಟ್ಟಿನ ಮಧ್ಯೆ ಸಿಲುಕಿದ್ದಾರೆ. ಸದ್ಯ ಅವರು ಸಿಂಗಾಪುರದಲ್ಲಿದ್ದಾರೆಯೇ ಅಥವಾ ಬೇರೆ ದೇಶದಲ್ಲಿದ್ದಾರೆಯೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾಡಿಗೆ ಹೋಗೋ ಮುನ್ನ ಇವ್ರಿಗೆ ‘ನಾಗರಿಕ ಪ್ರಜ್ಞೆ’ ಇರಲಿಲ್ವಾ?: ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು – Kannada News | Bandipur Pollution: Tourists Dump Waste in Tiger Reserve; Urgency for Eco Tourism

ಚಾಮರಾಜನಗರ, ಮೇ,27: ಕಾಡಿನ ನಡುವೆ ಪ್ರಾಣಿಗಳ ವಾಸಸ್ಥಾನಕ್ಕೆ ಭೇಟಿ ನೀಡುವ ಪ್ರವಾಸಿಗರು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನೂ ಮರೆತು ವರ್ತಿಸುತ್ತಿರುವ ಆಘಾತಕಾರಿ ಘಟನೆಯೊಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಬೆಳಕಿಗೆ ಬಂದಿದೆ. ಸುಂದರ ಕಾಡಿನ ರಸ್ತೆಯಲ್ಲೇ ಚಲಿಸುತ್ತಿದ್ದ ಬಲೆನೊ ಕಾರೊಂದರಿಂದ ಪ್ರವಾಸಿಗರು ಬಿಯರ್ ಕ್ಯಾನ್‌ಗಳು ಹಾಗೂ ಬಳಸಿದ ಟಿಶ್ಯೂ ಪೇಪರ್‌ಗಳನ್ನು ರಸ್ತೆಗೆ ಎಸೆಯುವ ಮೂಲಕ ಪರಿಸರ ಮಾಲಿನ್ಯ (Littering) ಮಾಡಿದ್ದು, ಈ ಕುರಿತಾದ ಎಕ್ಸ್ (X) ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಪ್ರಮುಖ ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ಸುಜುಕಿ ಬಲೆನೊ ಕಾರಿನಲ್ಲಿದ್ದ ಪ್ರವಾಸಿಗರು ತಾವು ಕುಡಿದ 2 ಬಿಯರ್ ಕ್ಯಾನ್‌ಗಳು ಹಾಗೂ ಬಳಸಿದ ಟಿಶ್ಯೂ ಪೇಪರ್‌ಗಳನ್ನು ಕಾರಿನ ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣವೇ ಈ ಬೇಜವಾಬ್ದಾರಿ ಕೃತ್ಯವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ

ಚಿಕ್ಕಮಗಳೂರು, ಮೇ 27: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರೆ. ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ರಂಭಾಪುರಿ ಶ್ರೀಗಳ ಈ ಹಿಂದಿನ ಹೇಳಿಕೆ ಸತ್ಯವಾಗುತ್ತಿರುವ ಮಾತುಗಳು ಕೇಳಿಬಂದಿವೆ. ರಂಭಾಪುರಿ ಜಗದ್ಗುರುಗಳೊಂದಿಗೆ ಶಾಸಕ ತಮ್ಮಯ್ಯ ಈ ಸಂಬಂಧ ಮಾತುಕತೆ ನಡೆಸಿದ್ದು, ನಿಮ್ಮ ಆಶೀರ್ವಾದದಿಂದ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಿದ್ದಾರೆ. ನೀವು ಏನು ಹೇಳಿದ್ದೀರೋ ಅದರಂತೆಯೇ ಆಗುತ್ತಿದೆ. ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದವರು ನೀವು ಎಂದು ಚಿಕ್ಕಮಗಳೂರು ನಗರದ ರೇಣುಕಾಸ್ವಾಮಿ ಕಲ್ಯಾಣ ಮಂಟಪದಲ್ಲಿ ತಮ್ಮಯ್ಯ ಶ್ರೀಗಳ ಬಳಿ ಹೇಳಿದ್ದಾರೆ. ಈ ಹಿಂದೆ ರಾಮನಗರದಲ್ಲಿ ಶ್ರೀಗಳು ಡಿಕೆಶಿ ಸಿಎಂ ಆಗುವ ಕುರಿತು ಹೇಳಿಕೆ ನೀಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ – Kannada News | Kerala’s Padmanabhaswamy Temple: Gold, Diamond Ornaments Vanish in Breach

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ ಸುಮಾರು 78 ಗ್ರಾಂ ಚಿನ್ನದ ಆಭರಣಗಳು ಮತ್ತು ಅತ್ಯಂತ ಬೆಲೆಬಾಳುವ ‘ವೈರಮ್ ನಾಮ’ ಎಂದು ಕರೆಯಲ್ಪಡುವ ವಜ್ರಖಚಿತ ತುಂಡು ಕಾಣೆಯಾಗಿರುವುದು ಪತ್ತೆಯಾಗಿದೆ.

ದೇವಾಲಯದ ಆಡಳಿತ ಮಂಡಳಿಯ ದಾಖಲೆಗಳ ಪ್ರಕಾರ, ಈ ‘ವೈರಮ್ ನಾಮ’ವನ್ನು ದುರಸ್ತಿ ಕಾರ್ಯಕ್ಕಾಗಿ ಹಲವು ತಿಂಗಳ ಹಿಂದೆಯೇ ಹೊರಗೆ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೂ ಅದನ್ನು ಮರಳಿ ತರಲಾಗಿಲ್ಲ. ಅದೇ ರೀತಿ, ಸುಮಾರು ಆರು ತಿಂಗಳ ಹಿಂದೆ ನಿರ್ವಹಣೆಗಾಗಿ ಕಳುಹಿಸಲಾಗಿದ್ದ ಚಿನ್ನದ ದೀಪವೂ ಸಹ ನಿಗೂಢವಾಗಿ ಕಣ್ಮರೆಯಾಗಿದೆ.

ಮತ್ತಷ್ಟು ಓದಿ: 85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಬಿಗಿ ಭದ್ರತೆಗೆ ಡಿಜಿಪಿ ಖಡಕ್ ಶಿಫಾರಸು

ದೇವಾಲಯದ ಅಸ್ತಿತ್ವದಲ್ಲಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಡಿಜಿಪಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೆಲವು ಪ್ರಮುಖ ಶಿಫಾರಸುಗಳನ್ನು ಮಾಡಿದ್ದಾರೆ. ದೇವಾಲಯದ ಎಲ್ಲಾ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಅತ್ಯಂತ ಸುರಕ್ಷಿತ ಕಪಾಟುಗಳಿಗೆ ಸ್ಥಳಾಂತರಿಸಬೇಕು. ಭಕ್ತರು ನೀಡುವ ಕಾಣಿಕೆಗಳನ್ನು ಕಡ್ಡಾಯವಾಗಿ ಮೀಸಲಾದ ಲಾಕರ್‌ಗಳಲ್ಲಿಯೇ ಸಂಗ್ರಹಿಸಬೇಕು.
ದೇವಾಲಯದ ಪ್ರತಿಯೊಂದು ಪ್ರವೇಶ ದ್ವಾರದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಮತ್ತು ಸರಿಯಾದ ತಪಾಸಣೆ ಇಲ್ಲದೆ ಯಾರನ್ನೂ ಒಳಗಡೆ ಬಿಡಬಾರದು.

ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಹಿನ್ನೆಲೆ
ಕೇರಳಂನ ತಿರುವನಂತಪುರಂನಲ್ಲಿರುವ ಈ ದೇವಾಲಯವು ಮಹಾವಿಷ್ಣುವಿಗೆ ಅರ್ಪಿತವಾಗಿದೆ. ಸಂಗಮ ಕಾಲದ ಇತಿಹಾಸ ಮತ್ತು ಸಾಹಿತ್ಯದಲ್ಲೂ ಈ ದೇವಾಲಯದ ಅಪಾರ ಸಂಪತ್ತನ್ನು ಉಲ್ಲೇಖಿಸಿ, ಇದನ್ನು ಗೋಲ್ಡನ್ ಟೆಂಪಲ್ (ಚಿನ್ನದ ದೇವಾಲಯ) ಎಂದು ಕರೆಯಲಾಗಿದೆ. ಇಂತಹ ಪೂಜನೀಯ ಸ್ಥಳದಲ್ಲಿ ನಡೆದಿರುವ ಈ ಭದ್ರತಾ ಲೋಪದ ಬಗ್ಗೆ ಈಗ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Karnataka Power Tussle: CM Siddaramaiah’s First Reaction After Delhi Congress Meet, Says Will Speak Everything Tomorrow

ಬೆಂಗಳೂರು, ಮೇ 27: ದೆಹಲಿಯಲ್ಲಿ ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ದೀರ್ಘಾವಧಿ ಸಭೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು (ಮೇ 27) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿಎಂ, ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಎದುರಿಸಬೇಕಾಯಿತು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ (ಗುರುವಾರ) ಎಲ್ಲವನ್ನೂ ಮುಕ್ತವಾಗಿ ಮಾತನಾಡುತ್ತೇನೆ’ ಎಂದು ಹೇಳಿದರು. ಆ ಮೂಲಕ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಮುಖ್ಯಾಂಶಗಳು

  • ದೆಹಲಿ ಹೈಕಮಾಂಡ್ ಸಭೆಯ ನಂತರ ಮೊದಲ ಬಾರಿಗೆ ಮೌನ ಮುರಿದ ಸಿಎಂ.
  • ವಿಧಾನಸೌಧದಲ್ಲಿ ನೆಹರೂ ಪುಣ್ಯಸ್ಮರಣೆ ಮುಗಿಸಿ ನೇರವಾಗಿ ಕಾವೇರಿ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ.
  • ಕೆಪಿಸಿಸಿ ಕಚೇರಿಯಲ್ಲಿನ ಕಾರ್ಯಕ್ರಮಕ್ಕೆ ಗೈರಾದ ಸಿದ್ದರಾಮಯ್ಯ.

ಎಂದಿನಂತಿಲ್ಲದ ಸಿದ್ದರಾಮಯ್ಯ ಬಾಡಿ ಲಾಂಗ್ವೇಜ್!

ದೆಹಲಿಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನಡೆದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಒಪ್ಪಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ಸಿಎಂ ಅವರ ಬಾಡಿ ಲ್ಯಾಂಗ್ವೇಜ್ ವಿಭಿನ್ನವಾಗಿ ಕಂಡುಬಂದಿದ್ದು, ಎಂದಿನ ವೇಗ ಕಾಣಿಸಲಿಲ್ಲ. ನಿಧಾನಗತಿಯಲ್ಲೇ ಕಾರಿಳಿದು ಬಂದು ನೆಹರೂ ಪ್ರತಿಮೆಗೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಮ್ಮುಖದಲ್ಲಿ ಪುಷ್ಪಾರ್ಚನೆ ಮಾಡಿದರು. ತದನಂತರ ಕೆಪಿಸಿಸಿ ಕಚೇರಿಯ ಕಾರ್ಯಕ್ರಮಕ್ಕೆ ತೆರಳದ ಅವರು ನೇರವಾಗಿ ತಮ್ಮ ‘ಕಾವೇರಿ’ ನಿವಾಸಕ್ಕೆ ಮರಳಿದರು.

ಸಿದ್ದರಾಮಯ್ಯ ಮಾತಿನ ವಿಡಿಯೋ


ಸಿದ್ದರಾಮಯ್ಯ ನಿವಾಸಕ್ಕೆ ನಾಯಕರ ದೌಡು

ಏತನ್ಮಧ್ಯೆ, ಸಿಎಂ ನಿವಾಸಕ್ಕೆ ಸಚಿವರಾದ ಸಂತೋಷ್ ಲಾಡ್, ಎಂ.ಸಿ. ಸುಧಾಕರ್, ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಶಾಸಕರುಗಳಾದ ಯಶವಂತರಾಯ ಪಾಟೀಲ್, ಶಿವಲಿಂಗೇಗೌಡ, ನಾಗೇಂದ್ರ, ಕೆ.ವೈ. ನಂಜೇಗೌಡ ಹಾಗೂ ಎಂಎಲ್‌ಸಿ ರಾಜೇಂದ್ರ ಭೇಟಿ ನೀಡಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹೈಕಮಾಂಡ್ ಮುಂದೆ ನಡೆದ ಚರ್ಚೆಗಳು ಹಾಗೂ ತಾವು ರಾಜೀನಾಮೆ ನಿಲುವು ತಳೆಯಲು ಕಾರಣವಾದ ಸಂದರ್ಭಗಳನ್ನು ಸಿಎಂ ತಮ್ಮ ಆಪ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ

ಇದೇ ವೇಳೆ ಸಿಎಂ ಭೇಟಿಯಾದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಪ್ರತಿಕ್ರಿಯಿಸಿ, ‘ಮಾನವೀಯತೆ ಕಾರಣಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೇನೆ. ಅವರು ಸುದೀರ್ಘ ರಾಜಕಾರಣ ಮಾಡಿದವರು, ಅವರಿಗೆ ಏನು ಮಾಡಬೇಕು ಎಂದು ಗೊತ್ತಿರುತ್ತದೆ, ಅವರ ನಿರ್ಧಾರಕ್ಕೆ ಒಳ್ಳೆಯದಾಗಲಿ’ ಎಂದಿದ್ದಾರೆ. ಒಟ್ಟಾರೆಯಾಗಿ ನಾಳೆ ಸಿಎಂ ನೀಡಲಿರುವ ಅಧಿಕೃತ ಹೇಳಿಕೆಯ ಮೇಲೆಯೇ ಇಡೀ ರಾಜ್ಯದ ದೃಷ್ಟಿ ನೆಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:31 pm, Wed, 27 May 26

Source link

ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್ – Kannada News | IPL 2026: Sai Sudharsan Scripts Unwanted History With Bizarre Hit Wicket

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 20 ಆಟಗಾರರು ಹಿಟ್​ ವಿಕೆಟ್ ಆಗಿ ಔಟಾಗಿದ್ದಾರೆ. ಈ ಇಪ್ಪತ್ತು ಆಟಗಾರರಲ್ಲಿ ಎರಡು ಬಾರಿ ಹಿಟ್ ವಿಕೆಟ್ ಆದ ಬ್ಯಾಟರ್ ಸಾಯಿ ಸುದರ್ಶನ್. ಹೀಗೆ ಎರಡು ಬಾರಿ ಹಿಟ್ ವಿಕೆಟ್ ಮೂಲಕ ಇನಿಂಗ್ಸ್ ಅಂತ್ಯಗೊಳಿಸಿ ಸಾಯಿ ಸುದರ್ಶನ್ ಅನಗತ್ಯ ದಾಖಲೆ ಬರೆದಿದ್ದಾರೆ.

ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ಎಸೆದ ಬೌನ್ಸರ್ ಎಸೆತವನ್ನು ಪುಲ್ ಮಾಡುವ ಯತ್ನದಲ್ಲಿ ಸಾಯಿ ಸುದರ್ಶನ್ ಅವರ ಕೈಯಿಂದ ಬ್ಯಾಟ್ ಜಾರಿ ವಿಕೆಟ್‌ಗೆ ಬಡಿದಿತ್ತು.

ಇದೀಗ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಜೇಕಬ್ ಡಫಿ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬ್ಯಾಟ್ ಕೈ ಚೆಲ್ಲುವ ಮೂಲಕ ವಿಕೆಟ್ ಆಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ಹಿಟ್​ ವಿಕೆಟ್ ಆದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಹಿಟ್​ ವಿಕೆಟ್​ನೊಂದಿಗೆ ಸಾಯಿ ಸುದರ್ಶನ್ 14 ರನ್​ಗಳ ತಮ್ಮ ಇನಿಂಗ್ಸ್ ಅಂತ್ಯಗೊಳಿಸಿದ್ದಾರೆ. ಆ ಬಳಿಕ ಬಂದ ಜೋಸ್ ಬಟ್ಲರ್ 29 ರನ್​ ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ನಡುವೆ ಶುಭ್​​ಮನ್ ಗಿಲ್ (2) ಕ್ಲೀನ್ ಬೌಲ್ಡ್ ಆಗಿದ್ದರು. ಪರಿಣಾಮ ಆರ್​ಸಿಬಿ ನೀಡಿದ 255 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ ಗಳಿಸಿ ಆಲೌಟ್ ಆಗಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 92 ರನ್​ಗಳ ಅಮೋಘ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್​ಸಿಬಿ ತಂಡವು ಐಪಿಎಲ್ 2026 ರಲ್ಲಿ ಫೈನಲ್​ಗೇರಿದೆ.

ಮೇ 31 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

 

 

Source link