ಬೆಂಗಳೂರು, ಜನವರಿ 22: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ. ಭಾಷಣದ 11 ಪ್ಯಾರಾಗಳನ್ನು ಓದಲು ಅವರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ. ಕೇಂದ್ರ ವಿರುದ್ಧದ ವಿಚಾರ ಕೈಬಿಡಬೇಕೆಂಬುದು ಅವರ ಆಗ್ರಹ. ಆದರೆ, ಸರ್ಕಾರ ಅದನ್ನು ಕೈಬಿಡಲು ತಯಾರಿಲ್ಲ. ಹೀಗಾಗಿ ರಾಜ್ಯಪಾಲರು ಅಧಿವೇಶನಕ್ಕೆ ಗೈರಾಗುತ್ತಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ಒಂದು ವೇಳೆ ಅವರು ಗೈರಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಸಿದ್ಧತೆ ಮಾಡಿದೆ. ಹೀಗಾಗಿ ಅಧಿವೇಶನಕ್ಕೆ ಹಾಜರಾಗಿಯೇ ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎಂಬ ಪ್ರಶ್ನೆ ಈಗ ಮೂಡಿದೆ.
ಹಾಗಾದರೆ, ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ಮುಂದೆ ಏನೇನು ಆಯ್ಕೆಗಳಿವೆ? ಮಾಹಿತಿ ಇಲ್ಲಿದೆ.
ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು?
ಸರ್ಕಾರ ನೀಡಿರುವ ಭಾಷಣದ ಆಕ್ಷೇಪಾರ್ಹ ಪ್ಯಾರಾಗಳನ್ನು ಬಿಟ್ಟು ಉಳಿದ ಭಾಷಣವನ್ನು ರಾಜ್ಯಪಾಲರು ಓದಬಹುದು. ಆಕ್ಷೇಪಾರ್ಹ ಪ್ಯಾರಾಗಳನ್ನು ಓದುವುದನ್ನು ಕೈಬಿಡುವ ಸಂದರ್ಭದಲ್ಲಿ ‘ಈ ಪ್ಯಾರಾಗಳು ನನ್ನ ಭಾಷಣದ ಭಾಗವಾಗಿಲ್ಲ’ ಎಂದು ಉಚ್ಚರಿಸಬೇಕು. ರಾಜ್ಯಪಾಲರು ಹೀಗೆ ಉಲ್ಲೇಖಿಸಿದರೆ ಆ ಪ್ಯಾರಾಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶವಿಲ್ಲ. ಇದು ರಾಜ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸುವುದರ ಮೂಲ ಉದ್ದೇಶಕ್ಕೇ ಪೆಟ್ಟು ಕೊಡುತ್ತದೆ. ಹೀಗಾಗಿ ಈ ರೀತಿ ಸರ್ಕಾರಕ್ಕೆ ಚೆಕ್ ಮೇಟ್ ಕೊಡುವ ಆಯ್ಕೆ ರಾಜ್ಯಪಾಲರ ಎದುರಿದೆ.
ರಾಜ್ಯಪಾಲರ ಮುಂದಿರುವ ಇನ್ನಿತರ ಆಯ್ಕೆಗಳೇನು?
ಸಂವಿಧಾನದ ಆರ್ಟಿಕಲ್ 160ರ ಪ್ರಕಾರ ರಾಜ್ಯಪಾಲರಿಗೆ ವಿಶೇಷ ಪರಿಸ್ಥಿತಿಗಳಲ್ಲಿ ಅಧಿವೇಶನಕ್ಕೆ ಗೈರುಹಾಜರಾಗುವ ಅವಕಾಶವಿದೆ. ಅನಿರೀಕ್ಷಿತ ಅಥವಾ ಅಸಾಧಾರಣ ಸಂದರ್ಭಗಳು, ಆಕಸ್ಮಿಕ ಅನಾರೋಗ್ಯ ಅಥವಾ ತುರ್ತು ಪರಿಸ್ಥಿತಿ ಎದುರಾದಲ್ಲಿ, ರಾಜ್ಯಪಾಲರು ರಾಷ್ಟ್ರಪತಿಗಳಿಂದ ಅನುಮತಿ ಪಡೆದು ಅಧಿವೇಶನಕ್ಕೆ ಹಾಜರಾಗದೇ ಇರಬಹುದು. ಇಂತಹ ಸಂದರ್ಭಗಳಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಗೈರು ಹಾಜರಾತಿಗೆ ಅನುಮೋದನೆ ನೀಡುವ ಅಧಿಕಾರ ಹೊಂದಿದ್ದಾರೆ. ರಾಷ್ಟ್ರಪತಿಗಳ ಅನುಮತಿ ದೊರೆತಿದ್ದರೆ, ಈ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಹಸ್ತಕ್ಷೇಪ ಕಷ್ಟಸಾಧ್ಯವಾಗುತ್ತದೆ. ರಾಜ್ಯಪಾಲರ ವಿರುದ್ಧ ಯಾವುದೇ ಕಾನೂನು ಕ್ರಮ ಆರಂಭವಾದರೂ, ಅವರು ಸಂವಿಧಾನಾತ್ಮಕವಾಗಿ ಸಮಂಜಸವಾದ ಕಾರಣವನ್ನು ನೀಡುವ ಹಕ್ಕು ಹೊಂದಿರುತ್ತಾರೆ.
ಸರ್ಕಾರದ ಮುಂದಿರುವ ಆಯ್ಕೆಗಳೇನು?
ರಾಜ್ಯಪಾಲರು ಅಧಿವೇಶನಕ್ಕೆ ಗೈರಾದರೆ ಕಾನೂನು ಹೋರಾಟ ಮಾಡುವ ಆಯ್ಕೆ ಸರ್ಕಾರ ಮುಂದಿದೆ. ರಾಜ್ಯಪಾಲರು ಸಾಂವಿಧಾನಿಕ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ ಎಂದು ಆರೋಪಿಸಬಹುದು. ರಾಜ್ಯಪಾಲರು ಭಾಷಣ ಓದದೇ ಇದ್ದ ಪಕ್ಷದಲ್ಲಿ ತನ್ನ ಭಾಷಣವನ್ನು ಸದನದಲ್ಲಿ ನಿರ್ಣಯ ಮಂಡಿಸಿ ಸಭಾಧ್ಯಕ್ಷರಿಂದ ಚರ್ಚೆ ಅವಕಾಶ ಕೇಳಬಹುದು.
ಅಶ್ವಿನಿ ಗೌಡ (Ashwini Gowda) ಅವರ ಬಿಗ್ ಬಾಸ್ ಪ್ರಯಾಣ ಸಾಕಷ್ಟು ಏರಿಳಿತಗಳಿಂದ ಕೂಡಿತ್ತು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಅಶ್ವಿನಿ ಅವರು ಹೇಳಿಕೆ ನೀಡೋದನ್ನು ಮುಂದುವರಿಸಿದ್ದಾರೆ. ನಿಜವಾದ ವೋಟ್ ತೋರಿಸಿದ್ರೆ ನಾನೇ ಗೆಲ್ತಿದ್ದೆ ಎಂಬ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಈವರೆಗೆ ಬಂದಿಲ್ಲ’ ಎಂದ ಅಶ್ವಿನಿಗೆ ವೀಕ್ಷಕರು ಸಂಗೀತಾ ಶೃಂಗೇರಿ ಅವರನ್ನು ನೆನಪಿಸಿದ್ದಾರೆ.
ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದರು ಎಂಬುದರಲ್ಲಿ ಅನುಮಾನವೇ ಇಲ್ಲ. ಮಾತಿನ ವಿಷಯ ಬಂದಾಗ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಯಾರ ಮಾತಿಗೂ ಬಗ್ಗುತ್ತಿರಲಿಲ್ಲ. ಟಾಸ್ಕ್ ಕೂಡ ಉತ್ತಮವಾಗಿ ಆಡುತ್ತಿದ್ದರು. ಗಿಲ್ಲಿ ಅನೇಕ ಬಾರಿ ಕಾಲೆಳೆದಾಗ ಅಶ್ವಿನಿ ಅತ್ತಿದ ಉದಾಹರಣೆ ಇದೆ. ಆದಾಗ್ಯೂ ಹೊರಕ್ಕೆ ಬಂದ ಬಳಿಕ ‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಮತ್ತೊಬ್ಬರಿಲ್ಲ’ ಎಂದು ಅವರು ಹೇಳುತ್ತಿದ್ದಾರೆ. ಜನರಿಗೆ ಸಂಗೀತಾ ನೆನಪಾಗಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿ ಗಮನ ಸೆಳೆದವರು ಸಂಗೀತಾ ಶೃಂಗೇರಿ. ಅವರು ವಿನಯ್ ಗೌಡ, ರಜತ್ ಅಂತಹ ಸ್ಟ್ರಾಂಗ್ ಸ್ಪರ್ಧಿಗಳನ್ನು ಎದುರು ಹಾಕಿಕೊಂಡರು. ಅವರ ವಿರುದ್ಧ ಹೆದರಿಕೆ ಇಲ್ಲದೆ ಮಾತಿಗೆ ಇಳಿದರು. ಅವರ ಗತ್ತು ಬೇರೆಯದೇ ಇತ್ತು ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಸಂಗೀತಾನ ಫ್ಯಾನ್ಸ್ ಪ್ರೀತಿಯಿಂದ ಸಿಂಹಿಣಿ ಎನ್ನುತ್ತಿದ್ದರು.
ಸಂಗೀತಾ ಶೃಂಗೇರಿಗೆ ಟಾಸ್ಕ್ ಆಡುವಾಗ ಕಣ್ಣಿಗೆ ಸೋಪಿನ ನೀರು ಹಾಕಿದ್ದರಿಂದ ಸಾಕಷ್ಟು ತೊಂದರೆ ಆಗಿತ್ತು. ಅವರು 2-3 ದಿನ ಆಸ್ಪತ್ರೆ ಸೇರಬೇಕಾಯಿತು. ಆಸ್ಪತ್ರೆಯಿಂದ ಮರಳುವಾಗ ಅವರು ಕರಿ ಬಣ್ಣದ ಕನ್ನಡಕ ಹಾಕಿ ಬಂದಿದ್ದರು. ಈ ಎಪಿಸೋಡ್ ಗಮನ ಸೆಳೆದಿತ್ತು. ತಾವೆಷ್ಟು ಸ್ಟ್ರಾಂಗ್ ಎಂಬುದನ್ನು ಅವರು ಇಲ್ಲಿ ಸಾಬೀತು ಮಾಡಿದ್ದರು. ಹೀಗಾಗಿ, ಎಲ್ಲರೂ ಅಶ್ವಿನಿಗಿಂತ ಸಂಗೀತಾ ಅವರೇ ಸ್ಟ್ರಾಂಗ್ ಸ್ಪರ್ಧಿ ಎಂದು ಹೇಳುತ್ತಿದ್ದಾರೆ. ಇದನ್ನು ಬಹುತೇಕರು ಒಪ್ಪಿದ್ದಾರೆ. ಗಿಲ್ಲಿ ಗೆಲುವನ್ನು ಅಶ್ವಿನಿ ಗೌಡ ಅವರು ಒಪ್ಪುತ್ತಿಲ್ಲ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿರುವಾಗ ‘ನಾನು ಬಡವ, ನನ್ನ ಬಳಿ ಹಣವಿಲ್ಲ, ಊಟಕ್ಕೂ ತೊಂದರೆ ಆಗುತ್ತಿದೆ’ ಎಂದೆಲ್ಲ ಎಂದಿಯೂ ಹೇಳಿಕೊಂಡವರಲ್ಲ. ಅವರು ತಮ್ಮ ಆಸ್ತಿ, ಜಾತಿ ವಿಷಯವನ್ನು ಮಾತನಾಡಿಯೇ ಇಲ್ಲ. ಆದರೂ ಕೆಲವರು ಆ ಬಗ್ಗೆ ಮಾತನಾಡುತ್ತಿದ್ದಾರೆ. ಗಿಲ್ಲಿ ಬಡವ ಕಾರ್ಡ್ ಬಳಸಿ ಗೆದ್ದ ಎಂದೆಲ್ಲ ಹೇಳುತ್ತಿದ್ದಾರೆ. ಈ ಬಗ್ಗೆ ಈ ಸೀಸನ್ ಸ್ಪರ್ಧಿ ಅಭಿಷೇಕ್ ಮಾತನಾಡಿದ್ದಾರೆ. ಅವರು ತೂಕದ ಮಾತನಾಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಇರುವಾಗ ಯಾರ ಖ್ಯಾತಿ ಎಷ್ಟಿದೆ ಎಂಬುದರ ಅಂದಾಜು ಯಾರಿಗೂ ಇರೋದಿಲ್ಲ. ಅದನ್ನು ನೋಡೋಕೆ ಹೊರಕ್ಕೆ ಬರಬೇಕು. ಅಭಿಷೇಕ್ ಅವರು ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟನ ಆಟವನ್ನು ಅಷ್ಟಾಗಿ ಇಷ್ಟಪಟ್ಟವರಲ್ಲ. ಆದರೆ, ಹೊರ ಬಂದ ಬಳಿಕ ಗಿಲ್ಲಿ ಆಟ ಏನು ಎಂಬುದು ಗೊತ್ತಾಗಿದೆ. ಸಖತ್ ಆಗಿ ಕಂಟೆಂಟ್ ನೀಡಿ ಮನರಂಜಿಸಿದ್ದಾರೆ ಎಂಬುದು ಮನದಟ್ಟಾಗಿದೆ. ಈ ಎಲ್ಲಾ ಕಾರಣದಿಂದ ಅವರು ಗಿಲ್ಲಿಗೆ ಬೆಂಬಲ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿದ್ದಾರೆ.
‘ಸೋಶಿಯಲ್ ಮೀಡಿಯಾದಲ್ಲಿ ನೋಡುತ್ತಿದ್ದೇನೆ. ಒಬ್ಬರು ಗಿಲ್ಲಿ ಬಡವ ಅಂತಾರೆ, ಇನ್ನೊಬ್ಬರು ಗಿಲ್ಲಿ ಶ್ರೀಮಂತ ಅಂತಾರೆ. ಒಂದು ಕಡೆ ಅವನತ್ರ ಆ ಕಾರು ಇದೆ, ಈ ಕಾರು ಇದೆ ಅಂತಾರೆ. ಅದಕ್ಕೇನು? ಅವನು ಸಿಂಪತಿಯಿಂದ ಗೆದ್ದ ಎಂದು ನನಗೆ ಅನಿಸುತ್ತಿಲ್ಲ. ಅವನು ಟ್ಯಾಲೆಂಟ್ನಿಂದ ಗೆದ್ದ. ನಮಗೆ ಒಬ್ಬರನ್ನು ನಗಿಸೋದೆ ಕಷ್ಟ. ಹೀಗಿರುವಾಗ ಅವನು ಇಡೀ ಕರ್ನಾಟಕನ ನಗಿಸಿದ್ದಾನೆ. ನನಗೆ ಅವನ ಬಗ್ಗೆ ಸಂಪೂರ್ಣವಾಗಿ ಖುಷಿ ಇದೆ. ಅವನ ಬಳಿ ಟ್ಯಾಲೆಂಟ್ ಇದೆ. ಅವನು ಗೆದ್ದಿದ್ದಕ್ಕೆ ಖುಷಿ ಇದೆ. ಗಿಲ್ಲಿ ನಿನ್ನ ಬಗ್ಗೆ ಹೆಮ್ಮೆ ಇದೆ’ ಎಂದು ಅಭಿಷೇಕ್ ಮಾತನಾಡಿದ್ದಾರೆ.
ಅಭಿಷೇಕ್ ಮಾತಿನಿಂದ ಗಿಲ್ಲಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರು ಅಭಿಷೇಕ್ಗೆ ಧನ್ಯವಾದ ಅರ್ಪಿಸಿದ್ದಾರೆ. ಅಭಿಷೇಕ್ ರೀತಿ ಸೂರಜ್ ಕೂಡ ಮಾತನಾಡಿದ್ದಾರೆ. ಅವರು ಕೂಡ ಗಿಲ್ಲಿಗೆ ಬೆಂಬಲ ಸೂಚಿಸಿದ್ದಾರೆ. ಗಿಲ್ಲಿ ಸಿಂಪತಿ ಹಾಗೂ ಬಡವ ಕಾರ್ಡ್ ಬಳಸಿ ಗೆದ್ದ ಎಂಬುದು ಅಶ್ವಿನಿ ಹಾಗೂ ಧ್ರುವಂತ್ ಆರೋಪ.
ಬೆಂಗಳೂರು, ಜನವರಿ 22: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ (Karnataka Assembly Session) ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪ್ಯಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕು ಎಂದು ಪಟ್ಟು ಹಿಡಿದಿದೆ. ಈ ವಿಚಾರವಾಗಿ ಸರ್ಕಾರ ಕಾನೂನು ಹೋರಾಟಕ್ಕೂ ಸಿದ್ಧವಾಗಿದೆ.
ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವದೆಹಲಿಗೆ ತೆರಳಿದ್ದಾರೆ. ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿರುವ ಸಂಭಾವ್ಯ ಅರ್ಜಿಯಲ್ಲಿ ಎರಡು ಪ್ರಮುಖ ಅಂಶಗಳ ಮೇಲೆ ರಾಜ್ಯಪಾಲರಿಗೆ ನಿರ್ದೇಶನ ನೀಡಲು ಸರ್ಕಾರ ಕೋರಲಿದೆ. ಮೊದಲನೆಯದಾಗಿ, ರಾಜ್ಯಪಾಲರು ಸರ್ಕಾರದ ಭಾಷಣವನ್ನು ಸದನದಲ್ಲಿ ಓದಬೇಕು. ಎರಡನೆಯದಾಗಿ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಪಾಲಿಸಬೇಕು. ಈ ಕುರಿತು ಅರ್ಜಿ ಸಿದ್ಧಪಡಿಸಲು ಮುಖ್ಯಮಂತ್ರಿಗಳು ಪೊನ್ನಣ್ಣ ಮತ್ತು ಅಡ್ವೊಕೇಟ್ ಜನರಲ್ ಅವರಿಗೆ ಜವಾಬ್ದಾರಿಯನ್ನು ವಹಿಸಿದ್ದಾರೆ.
11 ಅಂಶ ಕೈಬಿಡಲು ಹೇಳಿದ್ದೇಕೆ ರಾಜ್ಯಪಾಲರು?
ಸರ್ಕಾರ ಬರೆದುಕೊಟ್ಟ ಭಾಷಣದಲ್ಲಿ ಮನ್ರೇಗಾ ಕಾಯ್ದೆ ಬದಲಾವಣೆ ಬಗ್ಗೆ ಉಲ್ಲೇಖಿಸಲಾಗಿತ್ತು. ಅದರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ ಎಂದಿರುವ ರಾಜ್ಯಪಾಲರು, 11 ಪ್ಯಾರಾಗಳನ್ನು ಕೈಬಿಡಬೇಕೆಂದು ಸಲಹೆ ನೀಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ನಡುವೆ ಸಂಬಂಧದ ಬಗ್ಗೆ ಉಲ್ಲೇಖವಿದೆ. ಮನ್ರೇಗಾ ಯೋಜನೆ ಮರುಸ್ಥಾಪನೆ, ಅನುದಾನ ತಾರತಮ್ಯ,
ಕೇಂದ್ರ ಸರ್ಕಾರ ಕಾರ್ಮಿಕರ ಕೆಲಸ ಕಿತ್ತುಕೊಂಡಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅನುದಾನ ನೀಡದಿರುವುದು ಸೇರಿದಂತೆ ಕೇಂದ್ರ ವಿರುದ್ಧದ ವಿಚಾರ ಕೈಬಿಡುವಂತೆ ರಾಜ್ಯಪಾಲರಿಂದ ಸಲಹೆ ನೀಡಿದ್ದಾರೆ.
ರಾಜ್ಯ ಸರ್ಕಾರದಿಂದ ಕಾದುನೋಡುವ ತಂತ್ರ
ರಾಜ್ಯ ಸರ್ಕಾರವು ಬೆಳಗ್ಗೆ 11 ಗಂಟೆಯವರೆಗೂ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಬೆಳಗ್ಗೆ 11 ಗಂಟೆಗೆ ಸರಿಯಾಗಿ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣವನ್ನು ಪ್ರಾರಂಭಿಸಬೇಕು. ಅದಕ್ಕೂ ಮುನ್ನ 10 ಗಂಟೆ 55 ನಿಮಿಷಕ್ಕೆ ಅವರು ವಿಧಾನಸೌಧದ ಗ್ರಾಂಡ್ ಸ್ಟೆಪ್ಗಳನ್ನು ತಲುಪಬೇಕಾಗುತ್ತದೆ. ಒಂದು ವೇಳೆ ಆ ನಿಗದಿತ ಸಮಯದ ನಂತರವೂ ರಾಜ್ಯಪಾಲರು ಅಧಿವೇಶನಕ್ಕೆ ಹಾಜರಾಗದೆ ಹೋದರೆ ಅಥವಾ ಭಾಷಣ ಮಾಡಲು ನಿರಾಕರಿಸಿದರೆ, ರಾಜ್ಯ ಸರ್ಕಾರವು ಕಾನೂನು ಸಮರವನ್ನು ಪ್ರಾರಂಭಿಸಲು ತೀರ್ಮಾನಿಸಿದೆ.
ಈ ನಡುವೆ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ನಂತರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವರದಿ ಸಲ್ಲಿಸಿದ್ದಾರೆ. ರಾಜ್ಯಪಾಲರು ಭಾಷಣದ 11 ಅಂಶಗಳನ್ನು ಯಾವ ಕಾರಣಕ್ಕಾಗಿ ಕೈಬಿಡಲು ಸೂಚಿಸಿದ್ದಾರೆ ಎಂಬ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆದಿದೆ. ಅಕಸ್ಮಾತ್ ರಾಜ್ಯಪಾಲರು ಅಧಿವೇಶನಕ್ಕೆ ಬರದಿದ್ದರೆ, ಅದು ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಲಿದೆ ಎಂದು ಸರ್ಕಾರ ಭಾವಿಸಿದೆ. ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಯಾವ ರೀತಿಯ ಭಾಷಣ ಮಾಡುತ್ತಾರೆ, ಸರ್ಕಾರ ಕೊಟ್ಟಿರುವ 11 ಅಂಶಗಳನ್ನು ಕೈಬಿಟ್ಟು ಓದುತ್ತಾರಾ, ಅಥವಾ ಸಂಪೂರ್ಣವಾಗಿ ಗೈರುಹಾಜರಾಗುತ್ತಾರಾ ಎಂಬುದು ಕುತೂಹಲ ಕೆರಳಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಜ.22: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ (ಜನವರಿ 22, 2026) ಹವಾಮಾನ ಶುಷ್ಕ ಮತ್ತು ಶೀತ ವಾತಾವರಣದಿಂದ ಕೂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಚಳಿಯ ತೀವ್ರತೆ ಮುಂದುವರಿದಿದ್ದು, ಒಣ ಹವಾಮಾನ (Dry Weather) ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಇಂದು ಆಹ್ಲಾದಕರ ಹವಾಮಾನವಿರಲಿದ್ದು, ಬೆಳಗಿನ ಜಾವ ಸಾಧಾರಣ ಮಂಜು ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16°C ಇರಲಿದೆ. ಗಾಳಿಯ ಗುಣಮಟ್ಟ (AQI) ಸಾಧಾರಣ ಮಟ್ಟದಲ್ಲಿದೆ. ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚಳಿಯ ಅಲೆ ಮುಂದುವರಿದಿದೆ. ಇಲ್ಲಿ ಕನಿಷ್ಠ ತಾಪಮಾನ 12°C – 14°C ವರೆಗೆ ಕುಸಿಯುವ ಸಾಧ್ಯತೆಯಿದೆ.
ಮಂಗಳೂರು, ಉಡುಪಿ ಭಾಗದಲ್ಲಿ ಹವಾಮಾನವು ಸ್ವಲ್ಪ ಉಷ್ಣಾಂಶದಿಂದ ಕೂಡಿರಲಿದ್ದು, ಗರಿಷ್ಠ ತಾಪಮಾನ 32°C ದಾಟಬಹುದು. ಇಲ್ಲಿ ಸಮುದ್ರದ ಗಾಳಿ ಮಂದಗತಿಯಲ್ಲಿರಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಬೆಳಿಗ್ಗೆ ದಟ್ಟ ಮಂಜು ಮುಸುಕಲಿದ್ದು, ವಾಹನ ಸವಾರರು ಜಾಗರೂಕರಾಗಿರಲು ಹವಾಮಾನ ಇಲಾಖೆ ಹೇಳಿದೆ. ಮುಂಜಾನೆ ಮತ್ತು ತಡರಾತ್ರಿ ಚಳಿ ಹೆಚ್ಚಿರುವುದರಿಂದ ಶೀತ ಮತ್ತು ಕೆಮ್ಮು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಬಗ್ಗೆ ಜಾಗ್ರತೆ ವಹಿಸಿ. ಬೆಚ್ಚಗಿನ ಉಡುಪು ಧರಿಸುವುದು ಉತ್ತಮ ಎಂದು ತಜ್ಞರು ಹೇಳಿದ್ದಾರೆ. ಇನ್ನು ಯಾವ ಜಿಲ್ಲೆಯಲ್ಲೂ ಕೂಡ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಕರ್ನಾಟಕದ ಬಯಲು ಪ್ರದೇಶಗಳಲ್ಲೇ ದಾವಣಗೆರೆಯಲ್ಲಿ ಕನಿಷ್ಠ 11.0°C ತಾಪಮಾನ ದಾಖಲಾಗಿದೆ.
ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ತುಂಬಾ ಬದಲಾವಣೆಗಳು ಕಾಣುತ್ತಿದೆ. ಮಕ್ಕಳು, ಮಹಿಳೆಯರು ಹಾಗೂ ಹಿರಿಯರು ಎಚ್ಚರವಾಗಿರಲು ತಜ್ಞರು ಹೇಳಿದ್ದಾರೆ. ಮುಂದಿನ ನಾಲ್ಕು ದಿನಗಳವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವಾರು ದಿನಗಳಿಂದ ಒಣ ಹವಾಮಾನ ಇದ್ದು, ಇದೇ ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ ಎಂದು ಇಲಾಖೆ ಹೇಳಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರದಲ್ಲೂ ಕೂಡ ವಾತಾವರಣ ಶುಷ್ಕವಾಗಿರಲಿದೆ. ಉತ್ತರ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ. ಈ ಭಾಗದಲ್ಲೂ ಕೂಡ ಎಚ್ಚರದಿಂದ ಇರುವಂತೆ ಇಲಾಖೆ ಹೇಳಿದೆ.
ಬೆಂಗಳೂರು, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ವಿದೇಶಿ ಮಹಿಳೆಗೆ ತಪಾಸಣೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಘಟನೆ ವರದಿಯಾಗಿದೆ. ಕೊರಿಯಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿ ಅಪಾನ್ ಅಹ್ಮದ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತನ ಬಂಧನವಾಗಿದೆ.
ಟಿಕೆಟ್ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ನಿಂದ ಬೀಪ್ ಸೌಂಡ್ ಬರುತ್ತಿದೆ ಎಂದು ಹೇಳಿದ ಅಪಾನ್ ಅಹ್ಮದ್, ಪ್ರತ್ಯೇಕವಾಗಿ ತಪಾಸಣೆ ನಡೆಸಬೇಕೆಂದು ತಿಳಿಸಿದ್ದಾನೆ. ಚೆಕಿಂಗ್ ಕೌಂಟರ್ಗೆ ಹೋದರೆ ವಿಮಾನಕ್ಕೆ ತಡವಾಗುತ್ತದೆ ಎಂದು ನಂಬಿಸಿ, ಮಹಿಳೆಯನ್ನು ಪುರುಷರ ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತಪಾಸಣೆ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿ, ಬಲವಂತವಾಗಿ ತಬ್ಬಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟರಲ್ಲಿ ಆರೋಪಿಯು, ‘ಓಕೆ ಥ್ಯಾಂಕ್ ಯು’ ಎಂದು ಹೇಳಿ ಅಲ್ಲಿಂದ ಹೊರನಡೆದಿದ್ದಾನೆ. ಬಳಿಕ ವಿದೇಶಿ ಮಹಿಳೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದು, ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ವಿದೇಶಿ ಮಹಿಳೆಯ ದೂರಿನ ಮೇರೆಗೆ ಕೆಂಪೇಗೌಡ ಏರ್ಪೋರ್ಟ್ ಠಾಣೆ ಪೊಲೀಸರು ಅಪಾನ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಬಂಧನವಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಗಣರಾಜ್ಯೋತ್ಸವ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ
ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಕಾರಣ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರಯಾಣಿಕರ ಭದ್ರತಾ ತಪಾಸಣೆಯನ್ನೂ ಬಿಗಿಗೊಳಿಸಲಾಗಿದೆ. ಇದರಿಂದಾಗಿ ಭದ್ರತಾ ತಪಾಸಣೆಯ ಹೆಚ್ಚುವರಿ ಸಮಯವನ್ನು ಗಮನದಲ್ಲಿಟ್ಟುಕೊಂಡು ಬೇಗನೆ ಏರ್ಪೋರ್ಟ್ಗೆ ಬರುವಂತೆ ಪ್ರಯಾಣಿಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.
ಕೊನೆ ಕ್ಷಣದಲ್ಲಿ ವಿಮಾನಕ್ಕೆ ತೆರಳಲು ವಿಳಂಬವಾಗುವುದು ಅಥವಾ ವಿಮಾನ ತಪ್ಪುವಂಥ ಸನ್ನಿವೇಶ ಸೃಷ್ಟಿಯಾಗದಿರಲು ಸಾಮಾನ್ಯವಾಗಿ ಬರುವುದಕ್ಕಿಂತಲೂ ಸ್ವಲ್ಪ ಹೆಚ್ಚೇ ಬೇಗನೆ ಏರ್ಪೋರ್ಟ್ಗೆ ಬರುವಂತೆ ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮರಣದ ಹೊಂದಿದ ನಂತರ ಹಿಂದೂ ಸಂಪ್ರದಾಯ ಬಿಳಿ ವಸ್ತ್ರ ಧರಿಸುವುದು ರೂಢಿ ಇಂದಿಗೂ ಇದೆ. ಬಿಳಿಯ ಬಣ್ಣವು ಶಾಂತಿ, ಶುದ್ಧತೆ, ಮೌನ ಹಾಗೂ ಸಮೃದ್ಧಿಯ ಸಂಕೇತವಾಗಿದೆ. ಭಗವದ್ಗೀತೆಯ ಪ್ರಕಾರ ಜನನ-ಮರಣಗಳು ಜೀವನದ ಸಹಜ ಭಾಗ. ಅಂತಹ ಸಂದರ್ಭಗಳಲ್ಲಿ ಬಿಳಿ ವಸ್ತ್ರಗಳನ್ನು ಧರಿಸಿ, ಒಡವೆಗಳನ್ನು ತ್ಯಜಿಸಿ, ಮೌನ ಪಾಲಿಸುವುದು ಆತ್ಮಕ್ಕೆ ಶಾಂತಿ ನೀಡುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಹಾಗೂ ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಾಯ ಮಾಡುತ್ತದೆ. ಬಿಳಿ ವಸ್ತ್ರವು ವಾತಾವರಣವನ್ನು ಶುದ್ಧವಾಗಿರಿಸಲು ಸಹಕಾರಿಯಾಗುತ್ತದೆ ಎಂದು ನಂಬಲಾಗಿದೆ. ಪ್ರತಿಯೊಬ್ಬರೂ ಸಾವಿನ ಮನೆಗೆ ಹೋಗುವಾಗ ಸಾಧ್ಯವಾದಷ್ಟು ಬಿಳಿ ವಸ್ತ್ರ, ಇಲ್ಲವಾದರೆ ಕನಿಷ್ಠ ಬಿಳಿ ಟವಲ್ ಧರಿಸುವುದರಿಂದ ಮೃತರ ಆತ್ಮಕ್ಕೆ ಶಾಂತಿ ಹಾಗೂ ಬದುಕಿರುವವರಿಗೆ ಶುಭವಾಗುತ್ತದೆ. ಒಡವೆಗಳನ್ನು ಹಾಕಿಕೊಂಡು, ವಿಚಿತ್ರವಾದ ಅಥವಾ ಆಡಂಬರದ ಬಟ್ಟೆಗಳನ್ನು ಧರಿಸಿಕೊಂಡು ಹೋಗುವುದಕ್ಕಿಂತ ಬಿಳಿಯ ವಸ್ತ್ರವನ್ನು ಧರಿಸಿ ಸ್ವಲ್ಪ ಹೊತ್ತು ಮೌನವನ್ನು ಪಾಲಿಸಿದಾಗ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಸಹಾಯಕವಾಗುತ್ತದೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲದೆ, ಇದು ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಕಾರಿಯಾಗುತ್ತದೆ. ಹಿಂದೂ ಸಮಾಜದಲ್ಲಿ ಮತ್ತು ಹಿಂದೂ ಧರ್ಮದಲ್ಲಿ ಜ್ಞಾನ ಮತ್ತು ಸದ್ಭಾವನೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಬಿಳಿ ಬಣ್ಣವು ಇದೇ ಜ್ಞಾನ ಮತ್ತು ಸದ್ಭಾವನೆಗೆ ಪ್ರತೀಕವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 22, 2026ರ ದಿನ ಭವಿಷ್ಯದ ಬಗ್ಗೆ ತಿಳಿಸಿದ್ದಾರೆ. ಈ ದಿನವು ಗುರುವಾರವಾಗಿದ್ದು, ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಚೌತಿ ತಿಥಿಯಾಗಿದೆ. ಶತಭಿಷಾ ನಕ್ಷತ್ರ, ವರಿಯನ್ ಯೋಗ ಮತ್ತು ವಣಿಕ ಕರಣಗಳು ಇಂದಿನ ಪ್ರಮುಖ ಗ್ರಹಗಳ ಸಂಯೋಜನೆಗಳಾಗಿವೆ. ಇಂದು ರವಿ ಮಕರ ರಾಶಿಯಲ್ಲಿದ್ದು, ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಶುಕ್ಲ ಪಕ್ಷದ ಚೌತಿ ಇರುವುದರಿಂದ ಇದನ್ನು ವಿನಾಯಕಿ ಚತುರ್ಥಿ ಎಂದೂ ಆಚರಿಸಲಾಗುತ್ತದೆ. ಇಡಗುಂಜಿ, ಸೌತಡ್ಕ ಮತ್ತು ಉಗಿನಿಯಂತಹ ಸ್ಥಳಗಳಲ್ಲಿ ವಿನಾಯಕ ರಥೋತ್ಸವಗಳು ನಡೆಯಲಿವೆ. ಪ್ರತಿಯೊಂದು ರಾಶಿಯವರಿಗೂ ಗ್ರಹಗಳ ಶುಭ ಫಲ, ವೃತ್ತಿ, ಆರೋಗ್ಯ, ಹಣಕಾಸು, ಕುಟುಂಬ ಮತ್ತು ವಿದ್ಯಾರ್ಥಿ ಜೀವನದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಅಲ್ಲದೆ, ಪ್ರತೀ ರಾಶಿಯವರಿಗೂ ನಿರ್ದಿಷ್ಟ ಪ್ರಯಾಣದ ದಿಕ್ಕು, ಶುಭ ಬಣ್ಣ, ಅದೃಷ್ಟ ಸಂಖ್ಯೆ ಮತ್ತು ಪಠಿಸಬೇಕಾದ ಮಂತ್ರವನ್ನೂ ಸಹ ತಿಳಿಸಲಾಯಿತು. ಈ ಭವಿಷ್ಯವು ದಿನದ ಶುಭ-ಅಶುಭಗಳನ್ನು ತಿಳಿಸಿ, ಸೂಕ್ತ ಮಾರ್ಗದರ್ಶನ ನೀಡುತ್ತದೆ.
ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು.
ವೃಷಭ ರಾಶಿ:
ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಸಾಮಾನ್ಯರಂತೆ ಕಾಣುವ ನಿಮಗೆ ಯಾವುದೇ ಆಡಂಬ ಇಷ್ಡವಾಗದು. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶ ಸಿಗದು. ಕುಟುಂಬದ ಕೆಲವು ಸನ್ನಿವೇಶಗಳು ನಿಮಗೆ ಇಷ್ಟವಾಗದು. ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ. ಹೃದಯ ಕಲ್ಲಾದಷ್ಟೂ ವ್ಯಕ್ಯಿತ್ವಗಳು ದೂರಾಗುವರು. ನಿಮ್ಮ ಮನೋಬಲದ ಪ್ರದರ್ಶನವನ್ನು ತೋರಿಸಬೇಕಾದೀತು. ಸುಮ್ಮನೇ ವಾಗ್ವಾದವನ್ನು ಮಾಡಲು ಹೋಗಿ ಸಮಯವನ್ನು ಹಾಗೂ ಇತರರ ಸಮಯವನ್ನೂ ಹಾಳು ಮಾಡುವಿರಿ.
ಮಿಥುನ ರಾಶಿ:
ನೀವು ಇಂದು ಯಾವುದನ್ನೂ ತಕ್ಷಣ ಒಪ್ಪಿಕೊಳ್ಳುವುದಿಲ್ಲ. ಎಲ್ಲ ಕಾರ್ಯಗಳನ್ನು ಸಲೀಸಾಗಿ ಮಾಡುವ ಅನುಭವ ನಿಮ್ಮದಾಗಲಿದೆ. ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವರು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಗೆಳೆಯನನ್ನು ಆಪ್ತನನ್ನಾಗಿ ಮಾಡಿಕೊಳ್ಳುವಿರಿ. ಅಪೇಕ್ಷಿಸದಿದ್ದರೂ ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗುವುದು. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ಯಾವುದನ್ನೇ ಆದರೂ ಉದ್ವೇಗದಿಂದ ನಿರಾಕರಿಸುವುದು ಬೇಡ.
ಕರ್ಕಾಟಕ ರಾಶಿ:
ಕೊಡಬೇಕಾದವರ ಹಣವನ್ನು ಹಾಗೆಯೇ ಇಟ್ಟುಕೊಳ್ಳುವಿರಿ. ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ನಿರಂತರ ಕೆಲಸದಿಂದ ಸಮಾಧಾನವು ಬೇಕಾಗುವುದು. ನಿಮ್ಮ ಕೆಲಸವನ್ನು ಪ್ರಸ್ತುತಿ ಮಾಡುವಲ್ಲಿ ಸೋಲುವ ಸಾಧ್ಯತೆ ಇದೆ. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ನಿಮ್ಮ ಸೌಂದರ್ಯಕ್ಕೆ ಆಕರ್ಷಿತರಾಗಿ ಮನಸೋಲಬಹುದು. ಕೃತಜ್ಞತೆಯಿಂದ ನಿಮ್ಮವರನ್ನು ಸ್ಮರಿಸುವಿರಿ, ಗೌರವಿಸುವಿರಿ. ವರ್ತನೆಯಲ್ಲಿ ಆಗುವ ಬದಲಾವಣೆಯನ್ನು ಯಾರೂ ಊಹಿಸಲಾರರು. ಎಲ್ಲದರ ಮೇಲೂ ನಂಬಿಕೆಯನ್ನು ಕಳೆದುಕೊಳ್ಳುವಿರಿ.
ಸಿಂಹ ರಾಶಿ:
ನಿಮ್ಮ ಗಮನಾಗಮನವನ್ನು ಯಾರಾದರೂ ತಿಳಿದುಕೊಳ್ಳುತ್ತಿರಬಹುದು. ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಎಲ್ಲ ಒಳ್ಳೆಯದಕ್ಕೂ ನೀವೇ ತಂದೆ ಎನ್ನುವ ಭಾವ ನಿಮ್ಮಲ್ಲಿ ಮೂಡಬಹುದು. ಅನಿಶ್ಚಿತತೆಯು ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು. ಕುಟುಂಬದಲ್ಲಿ ಪರಸ್ಪರ ಪ್ರೀತಿಯು ತೋರುವುದು. ಪ್ರಯಾಣದಿಂದ ಪ್ರಯಾಸವಾಗಲಿದೆ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು.
ಕನ್ಯಾ ರಾಶಿ:
ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ನಿಮ್ಮ ಮಕ್ಕಳ ಬಾಂಧವ್ಯದಿಂದೆ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಸಾಲವನ್ನು ಪಡೆಯದೇ ಇದ್ದರೂ ಕೆಲವು ಋಣದಿಂದ ಮುಕ್ತರಾಗಲು ಕೆಲಸ ಮಾಡಬೇಕು. ಸ್ಥಾನಮಾನವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿಯನ್ನು ಅನುಭವಿಸುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುತ್ತಾರೆ ಎಂದು ಅನ್ನಿಸಬಹುದು.
ತುಲಾ ರಾಶಿ:
ಇಂದು ವ್ಯಾಪಾರದ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಾದರೂ ಕೆಲವರ ಅಭಿಪ್ರಾಯ ಹಾಗೂ ಸಲಹೆಯನ್ನು ಮುಕ್ತವಾಗಿ ಪಡೆಯಿರಿ. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಇರಲಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಸಂಗಾತಿಯ ಮನವೊಲಿಸುವುದು ನಿಮ್ಮ ಚಾಣಾಕ್ಷತೆಗೆ ಬಿಟ್ಟಿದ್ದು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಸಮಾಜಮುಖೀ ಕಾರ್ಯಗಳನ್ನು ನಿರಪೇಕ್ಷೆಯಿಂದ ಮಾಡುವಿರಿ. ಕಾನೂನು ವ್ಯವಹಾರದಲ್ಲಿ ಗಲಿಬಿಲಿಯಾಗಲಿದೆ. ತಾಳ್ಮೆ ಕಡಿಮೆ ಆದಂತೆ ತೋರುವುದು.
ವೃಶ್ಚಿಕ ರಾಶಿ:
ಆರೋಗ್ಯದ ಬಗ್ಗೆ ಕಾಳಜಿ ಮುಖ್ಯವಾಗಿರಲಿ. ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ಯಾವ ಕ್ಷೇತ್ರದಲ್ಲೇ ಇದ್ದರೂ ಶತ್ರುಗಳ ಪಾತ್ರವನ್ನು ಇಲ್ಲಗಳೆಯುವಂತಿಲ್ಲ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ಆರ್ಥಿಕ ಒಪ್ಪಂದಕ್ಕೆ ಒಪ್ಪಿಗೆ ಕೊಡುವಿರಿ. ನಿರ್ಲಕ್ಷ್ಯ ಮಾಡದೇ ಒಂದು ಗಮನ ಬೇಕು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾದೀತು.
ಧನು ರಾಶಿ:
ಹಣಕಾಸಿನ ಭಯವು ನಿರೀಕ್ಷೆಗಿಂತ ಕಡಿಮೆಯಾಗಬಹುದು. ಇಂದು ಕೆಲವು ಪರಿಸ್ಥಿತಿಯನ್ನು ಎದುರಿಸಲು ಸಂಕೋಚವಾಗಬಹುದು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಮನಸ್ತಾಪವು ಬರಬಹುದು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ದಿನವನ್ನು ದುಃಖಾಂತ್ಯ ಮಾಡಿಕೊಳ್ಳುವುದು ಬೇಡ. ಸ್ವತಂತ್ರ ಆಲೋಚನೆಯಿಂದ ಹೊಸ ದೃಷ್ಟಿ ಸಿಗಲಿದೆ.
ಮಕರ ರಾಶಿ:
ಶುಭಕರ್ಮವನ್ನು ಮಾಡುವ ಉತ್ಸಾಹವಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ನಿಮ್ಮ ಯೋಜನೆಗಳು ಕ್ರಮಶುದ್ಧವೂ ತರ್ಕಸಿದ್ಧವೂ ನಿಯಮಬದ್ಧವೂ ಆಗಿರಲಿದೆ. ಆ ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಎಲ್ಲವೂ ಹೇಳದೆಯೂ ಅರ್ಥ ಮಾಡಕೊಂಡು ಕಾರ್ಯವನ್ನು ಮಾಡುವಿರಿ. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು.
ಕುಂಭ ರಾಶಿ:
ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ. ಸ್ವಂತ ನೆಲೆಯ ಸ್ಥಾಪನೆಯ ಬಗ್ಗೆ ಹೆಚ್ಚು ಯೋಚನೆ ಯೋಜನೆ ಅಗತ್ಯ. ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುಬುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ಪರರ ಸಂತೋಷದಲ್ಲಿ ನೀವು ಭಾಗಿಯಾಗುವಿರಿ. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ.
ಮೀನ ರಾಶಿ:
ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ವ್ಯಾಪಾರ ವಹಿವಾಟುಗಳಿಗೆ ಆಪ್ತರನ್ನೇ ಯೋಜಿಸಿಕೊಳ್ಳುವುದು ಉತ್ತಮ. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ನೌಕರರಿಗೆ ಇಂದು ಸಂತೋಷವನ್ನು ಕೊಡುವಿರಿ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು.
ಜನವರಿ 22, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ವರಿಯಾನ್, ಕರಣ : ಭದ್ರ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 17 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14-51 – 15:27, ಯಮಗಂಡ ಕಾಲ 06:54 – 08:20, ಗುಳಿಕ ಕಾಲ 09:45 – 11:11
ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ ಕೂಡ ಕೇಳಲಿದ್ದಾರೆ
ಏನು ಆಗುತ್ತಿದೆ ಎಂದು ಗೊತ್ತೇ ಇಲ್ಲದಂತೆ ನಿಮ್ಮ ಪರಿಸ್ಥಿತಿ ಆಗಲಿದೆ. ಯಾವುದೇ ತೀರ್ಮಾನ ಮಾಡಿದರೂ ಅದರಿಂದ ಸಮಾಧಾನ ತರುವಂಥದ್ದೇನೂ ಆಗಬಹುದು ಎಂಬ ವಿಶ್ವಾಸ ನಿಮ್ಮಲ್ಲಿ ಮೂಡುವುದಿಲ್ಲ. ನಿಮ್ಮ ಬಳಿ ಇರುವಂಥ ವಾಹನ ಒಂದನ್ನು ಮಾರಾಟ ಮಾಡುವುದಕ್ಕೆ ಮುಂದಾಗಲಿದ್ದೀರಿ. ಕುಟುಂಬ ಸದಸ್ಯರಿಗೆ ಈ ಬಗ್ಗೆ ಒಮ್ಮತ ಇಲ್ಲದಿದ್ದರೂ ನಿಮ್ಮ ನಿಲುವು ಬದಲಿಸುವ ಮನಸ್ಥಿತಿಯಲ್ಲಿ ಇರುವುದಿಲ್ಲ. ಹೋಟೆಲ್ ನಲ್ಲಿ ಕೆಲಸ ಮಾಡುವಂಥವರಿಗೆ ಒತ್ತಡದ ದಿನ ಇದಾಗಿರುತ್ತದೆ.
ಭವಿಷ್ಯದಲ್ಲಿ ಆಗಬಹುದಾದ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ದೊರೆಯುತ್ತಾ ಸಾಗುತ್ತದೆ. ನಿಮಗೆ ದೊಡ್ಡ ಹುದ್ದೆಯೊಂದರ ಜವಾಬ್ದಾರಿ ನೀಡುವ ಕುರಿತು ಮೇಲಧಿಕಾರಿಗಳು ಸುಳಿವು ಕೊಡಲಿದ್ದಾರೆ. ಈ ಹಿಂದೆ ನಿಮ್ಮಿಂದ ಆದಂಥ ಸಹಾಯವನ್ನು ನೆನಪಿನಲ್ಲಿ ಇಟ್ಟುಕೊಂಡು, ಸ್ನೇಹಿತರು ಈಗ ನಿಮ್ಮ ಅಗತ್ಯಕ್ಕೆ ಸ್ಪಂದಿಸಲಿದ್ದಾರೆ. ಬ್ಯಾಂಕ್ ನಲ್ಲಿ ಲಾಕರ್ ಅನ್ನು ಪಡೆದುಕೊಳ್ಳುವುದಕ್ಕೆ ನಿಮ್ಮಲ್ಲಿ ಕೆಲವರು ಪ್ರಯತ್ನವನ್ನು ಮಾಡಲಿದ್ದೀರಿ. ಅಥವಾ ಮನೆಗೆ ಅಂಥ ಲಾಕರ್ ಅನ್ನು ಖರೀದಿಸಿ ತರುವಂಥ ಸಾಧ್ಯತೆ ಇದೆ.