Category Archives: Blog

Your blog category

ಏಕಕಾಲಕ್ಕೆ 3 ವಾಹಿನಿಯಲ್ಲಿ ‘ಧುರಂಧರ್’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Ranveer Singh starrer Dhurandhar World Television Premiere on May 30 Where to Watch

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ (Dhurandhar) ಈಗ ಕಿರುತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರವು ಮೇ 30ರ ಶನಿವಾರ ಸಂಜೆ 7 ಗಂಟೆಗೆ ಮೂರು ವಾಹಿನಿಗಳಲ್ಲಿ ಏಕಕಾಲಕ್ಕೆ ಪ್ರಸಾರ ಆಗಲಿದೆ. ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ವಾಹಿನಿಗಳಲ್ಲಿ ಒಟ್ಟಿಗೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ (Dhurandhar World Television Premiere) ಆಗಲಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಕಿರುತೆರೆಯಲ್ಲಿ ‘ಧುರಂಧರ್’ ಸಿನಿಮಾ ನೋಡಲು ಕಾದಿದ್ದ ಅಭಿಮಾನಿಗಳಿಗೆ ಇದು ಗುಡ್ ನ್ಯೂಸ್.

ಖ್ಯಾತ ನಿರ್ದೇಶಕ ಆದಿತ್ಯ ಧರ್ ಆ್ಯಕ್ಷನ್-ಕಟ್ ಹೇಳಿರುವ ‘ಧುರಂಧರ್’ ಸಿನಿಮಾವು ಹಮ್ಜಾ ಅಲಿ ಮಜಾರಿ ಎಂಬ ಭಾರತೀಯ ಅಂಡರ್‌ಕವರ್ ಏಜೆಂಟ್‌ನ ಕಥೆಯನ್ನು ಒಳಗೊಂಡಿದೆ. ದಶಕಗಳ ಕಾಲದ ಸುದೀರ್ಘ ಗುಪ್ತಚರ ಕಾರ್ಯಾಚರಣೆಯ ಭಾಗವಾಗಿ ಆತ ಕರಾಚಿಯ ಅಪರಾಧ ಮತ್ತು ರಾಜಕೀಯ ಜಗತ್ತನ್ನು ಹೇಗೆ ಭೇದಿಸುತ್ತಾನೆ ಎಂಬ ರೋಚಕ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ.

‘ಧುರಂಧರ್’ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಇವರೊಂದಿಗೆ ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಆರ್. ಮಾಧವನ್, ಸಾರಾ ಅರ್ಜುನ್, ರಾಕೇಶ್ ಬೇಡಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿವೆ.

ಚಿತ್ರದ ಟಿವಿ ಪ್ರೀಮಿಯರ್ ಕುರಿತು ಮಾತನಾಡಿರುವ ನಿರ್ದೇಶಕ ಆದಿತ್ಯ ಧರ್, ‘ಈ ಚಿತ್ರಕ್ಕೆ ಪ್ರೇಕ್ಷಕರು ನೀಡಿದ ಅಪಾರ ಪ್ರೀತಿ ಮತ್ತು ಈ ಫ್ರಾಂಚೈಸಿಗೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ನಾವು ನಿಜವಾಗಿಯೂ ಧನ್ಯರಾಗಿದ್ದೇವೆ. ಈಗ ಮೇ 30ರಂದು ಸಂಜೆ 7 ಗಂಟೆಗೆ ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ಮೂಲಕ ಈ ಚಿತ್ರವನ್ನು ದೇಶಾದ್ಯಂತದ ಮನೆ ಮನೆಗೆ ತಲುಪಿಸುತ್ತಿರುವುದು ನಮಗೆ ಅತ್ಯಂತ ಸಂತಸ ತಂದಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ

ಈ ಬಗ್ಗೆ ಜಿಯೋಸ್ಟಾರ್ ವಕ್ತಾರರು ಮಾತನಾಡಿ, ‘ಕೆಲವು ಸಿನಿಮಾಗಳು ಕೇವಲ ಮನರಂಜನೆಯನ್ನು ಮೀರಿ ಸಾಂಸ್ಕೃತಿಕ ವಿದ್ಯಮಾನಗಳಾಗಿ ಬದಲಾಗುತ್ತವೆ. ಅಂತಹವುಗಳಲ್ಲಿ ಧುರಂಧರ್ ಕೂಡ ಒಂದು. ಈ ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡುವ ಮೂಲಕ, ನಾವು ಇಡೀ ದೇಶದ ಕುಟುಂಬಗಳು ಒಟ್ಟಿಗೆ ಕುಳಿತು ವೀಕ್ಷಿಸುವಂತಹ ಒಂದು ದೇಶವ್ಯಾಪಿ ಸುವರ್ಣಾವಕಾಶವನ್ನು ಸೃಷ್ಟಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ: ಡೆತ್​​​ನೋಟ್​​​ನಲ್ಲಿ ಸ್ನೇಹಿತನ ಅಸಲಿ ಮುಖ ಬಯಲು – Kannada News | RJ Found Dead in Bengaluru: Death Note Reveals Shocking Details About her Friend

ಬೆಂಗಳೂರು, ಮೇ26: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿಯಾಗಿದ್ದ (RJ) ಆತ್ಮಹತ್ಯೆಗೆ (death) ಶರಣಾಗಿದ್ದಾರೆ. ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮುಖ್ಯಾಂಶಗಳು

  • ಫ್ಲಾಟ್‌ನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ
  • ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ RJ
  • ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ವಿಚ್ಛೇದನದ ಬಳಿಕ ಬೆಂಗಳೂರಿಗೆ ಬಂದಿದ್ದ ಮನೀಷಾ

ಮುಂಬೈನಲ್ಲಿ ರೇಡಿಯೋ ಜಾಕಿಯಾಗಿದ್ದ ಮನೀಷಾ ಅವರು, 2024ರಲ್ಲಿ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ತದನಂತರ ಕಳೆದ ಏಪ್ರಿಲ್ ತಿಂಗಳಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸದಾಗಿ ಫ್ಲಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು. ಕಳೆದ ಮೇ 23ರಂದು ಮನೀಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸಂಬಂಧಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ನನ್ನ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ

ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನೀಷಾ ಅವರು ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಮ್ಮ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ‘ನಾನು ಮತ್ತು ಹರ್ಷವರ್ಧನ್ ಸಿಂಗ್ ರಿಲೇಷನ್‌ಶಿಪ್‌ನಲ್ಲಿದ್ದೆವು. ಈ ವಿಷಯ ಆತನ ಮನೆಯವರಿಗೂ ತಿಳಿದಿತ್ತು. ಆದರೆ ಆತ ಪ್ರತಿದಿನ ನನಗೆ ತೀವ್ರ ಮಾನಸಿಕ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳವನ್ನು ತಡೆಯಲಾರದೆ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು

ಸದ್ಯ ಘಟನಾ ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಡೆತ್‌ನೋಟ್ ಹಾಗೂ ಮನೀಷಾ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗಲ್ಫ್ ಇನ್ಮುಂದೆ ಅಮೆರಿಕಕ್ಕೆ ರಕ್ಷಣೆ ನೀಡಲಾರದು; ಟ್ರಂಪ್​ಗೆ ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ – Kannada News | Gulf nations wont be safe for US bases Mojtaba Khamenei warns amid Iran Peace Talk

ಟೆಹ್ರಾನ್, ಮೇ 26: ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಇರಾನ್‌ನ ಅತ್ಯುನ್ನತ ಆಧ್ಯಾತ್ಮಿಕ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಗಲ್ಫ್ ರಾಷ್ಟ್ರಗಳಿಗೆ ಹಾಗೂ ಅಮೆರಿಕಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇನ್ನು ಮುಂದೆ ಗಲ್ಫ್ ದೇಶಗಳಲ್ಲಿ ಸುರಕ್ಷಿತ ನೆಲೆಗಳನ್ನು ಹೊಂದಿರುವುದಿಲ್ಲ ಎಂದು ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಸಿದ್ದಾರೆ. ತಮ್ಮ ತಂದೆಯ ಮರಣದ ನಂತರ ಇರಾನ್‌ನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ಮತ್ತು ಇಲ್ಲಿಯವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲದ ಮೊಜ್ತಬಾ ಖಮೇನಿ ಇದೀಗ ಲಿಖಿತ ಹೇಳಿಕೆ ನೀಡಿದ್ದಾರೆ. ಗಲ್ಫ್ ಪ್ರದೇಶದ ದೇಶಗಳು ಮತ್ತು ಪ್ರದೇಶಗಳು ಇನ್ನು ಮುಂದೆ ಅಮೆರಿಕದ ಮಿಲಿಟರಿ ನೆಲೆಗಳಿಗೆ ಸುರಕ್ಷಿತ ಸ್ವರ್ಗವಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದುಷ್ಟತನಕ್ಕೆ ಅಥವಾ ಮಿಲಿಟರಿ ನೆಲೆಗಳನ್ನು ಸ್ಥಾಪಿಸಲು ಅಮೆರಿಕಕ್ಕೆ ಗಲ್ಫ್ ಪ್ರದೇಶ ಇನ್ನು ಮುಂದೆ ಸುರಕ್ಷಿತ ತಾಣವಾಗಿರುವುದಿಲ್ಲ ಎಂದು ಅವರು ಹೇಳಿದ್ದಾರೆ. ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆ ನಡೆಯುತ್ತಿರುವ ಸಮಯದಲ್ಲಿ ಇರಾನಿನ ಸರ್ವೋಚ್ಚ ನಾಯಕ ಈ ಹೇಳಿಕೆಗಳನ್ನು ನೀಡಿರುವುದು ಈಗ ತೀವ್ರ ಚರ್ಚೆಯ ವಿಷಯವಾಗಿದೆ.

ಇದನ್ನೂ ಓದಿ: ಏನಿದು ಅಬ್ರಹಾಂ ಒಪ್ಪಂದ? ಟ್ರಂಪ್ ಮಾತಿಗೆ ಒಪ್ಪಿದರೆ ಪಾಕಿಸ್ತಾನದ ಪಾಸ್​ಪೋರ್ಟ್ ಏಕೆ ಬದಲಾಗುತ್ತದೆ?

ಯುದ್ಧದ ಆರಂಭದಲ್ಲಿ ಅಮೆರಿಕ-ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ನಂತರ ಮಾರ್ಚ್‌ನಲ್ಲಿ ಅವರ ಮಗ ಮೊಜ್ತಬಾ ಅಧಿಕಾರ ವಹಿಸಿಕೊಂಡರು. ಆದರೆ, ಅವರ ತಂದೆಯನ್ನು ಕೊಂದ ಅದೇ ದಾಳಿಯಲ್ಲಿ ಮೊಜ್ತಬಾ ಖಮೇನಿ ಕೂಡ ಗಂಭೀರವಾಗಿ ಗಾಯಗೊಂಡರು. ಅಂದಿನಿಂದ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ವರದಿಗಳು ಸೂಚಿಸುತ್ತವೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಜೊತೆ ಶಾಂತಿ ಮಾತುಕತೆ ನಡೆಯುತ್ತಿದೆ ಎಂದು ಹೇಳಿಕೊಂಡರೂ, ಅಮೆರಿಕ ಸೇನೆಯು ದಕ್ಷಿಣ ಇರಾನ್‌ನಲ್ಲಿ ಕ್ಷಿಪಣಿ ಉಡಾವಣಾ ತಾಣಗಳು ಮತ್ತು ಗಣಿ ಹಾಕುವ ದೋಣಿಗಳ ಮೇಲೆ ಈ ಹಿಂದೆ ದಾಳಿ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪ್ರಿಯಕರನಿಂದ ವಿಧವೆ ಹತ್ಯೆ; ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬಯಲು – Kannada News | Warangal Widow Killed by Lover Shocking Facts Revealed in Police Probe

ವಾರಂಗಲ್, ಮೇ 26: ವಾರಂಗಲ್ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ವಿಧವೆ ಮಹಿಳೆಯ ಕೊಲೆಯ ರಹಸ್ಯ (Crime News) ಕೊನೆಗೂ ಬಯಲಾಗಿದೆ. ವಿವಾಹೇತರ ಸಂಬಂಧದಿಂದಾಗಿ ಆಕೆಯ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಆಕೆಯ ಜೊತೆ ವಾಸಿಸುತ್ತಿದ್ದ ಆಕೆಯ ಪ್ರಿಯಕರ ಆಕೆ ತನ್ನನ್ನು ಬಿಟ್ಟು ಬೇರೆ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಆತನನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಗಿದೆ.

ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆಯಲ್ಲಿ ಆಕೆಯ ಕತ್ತನ್ನು ಚಾಕುವಿನಿಂದ ಸೀಳಿ ಕೊಲೆ ಮಾಡಲಾಗಿದೆ. ಮೃತಳನ್ನು ವಾರಂಗಲ್ ಜಿಲ್ಲೆಯ ದುಗ್ಗೊಂಡಿ ಮಂಡಲದ ಲಕ್ಷ್ಮಿಪುರಂ ಗ್ರಾಮದ ವಿಧವೆ ಸುಮಲತಾ ಎಂದು ಗುರುತಿಸಲಾಗಿದೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಅವರ ಪತಿ 5 ವರ್ಷಗಳ ಹಿಂದೆ ನಿಧನರಾಗಿದ್ದರು. ಆದರೆ, ಅವರ ಪತಿಯ ಮರಣದ ನಂತರ ಆಕೆ ಸುರೇಶ್ ಎಂಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು.

ಇದನ್ನೂ ಓದಿ: ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ

ಪೊಲೀಸ್ ತನಿಖೆಯಲ್ಲಿ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಲತಾ ತನ್ನನ್ನು ಹೊರತುಪಡಿಸಿ ಬೇರೆಯವರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಪ್ರಿಯಕರನಿಗೆ ಅನುಮಾನವಿತ್ತು. ಇದೇ ವಿಷಯಕ್ಕೆ ಸುರೇಶ್ ಆಕೆಯ ಜೊತೆ ಆಗಾಗ ಜಗಳವಾಡುತ್ತಿದ್ದ.

ಇದನ್ನೂ ಓದಿ: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಕಳೆದ ಕೆಲವು ವರ್ಷಗಳಿಂದ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಮತ್ತೆ ಇದೇ ಕಾರಣಕ್ಕೆ ಸುಮಲತಾ ಮೇಲೆ ಕೋಪಗೊಂಡ ಸುರೇಶ್, ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದ್ದ. ಪ್ಲಾನ್ ಮಾಡಿದಂತೆ ಆಕೆಯನ್ನು ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆಗೆ ಕರೆದೊಯ್ದು ಚಾಕುವಿನಿಂದ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಪೊಲೀಸರು ಘಟನೆ ನಡೆದ 5 ದಿನಗಳಲ್ಲಿಯೇ ಕೊಲೆ ರಹಸ್ಯವನ್ನು ಭೇದಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ – Kannada News | Ebola Scare in Karnataka; Woman Arriving in Bengaluru from Uganda Suspected of Infection

ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bangluru) ಎಬೋಲಾ ವೈರಸ್ ರೋಗದ (EVD) ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಮುಖ್ಯಾಂಶಗಳು

  • ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್?
  • ಉಗಾಂಡಾದ ಕ್ಯಾಂಪಾಲಾ ಮೂಲದವರಲ್ಲಿ ಶಂಕಿತ ಪ್ರಕರಣ ಪತ್ತೆ
  • 28 ವರ್ಷದ ಮಹಿಳೆಯಲ್ಲಿ ಕಾಣಿಸಿಕೊಂಡ ಎಬೋಲಾ ಪತ್ತೆ ಶಂಕೆ

ಹೋಟೆಲ್‌ನಿಂದ ಐಸೋಲೇಷನ್‌ಗೆ ಶಿಫ್ಟ್

ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ, ಕಳೆದ ಮೇ 23ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ ಬೂಟಿಕ್’ ಹೋಟೆಲ್‌ನ ರೂಮ್ ನಂಬರ್ 303ರಲ್ಲಿ ತಂಗಿದ್ದರು. ಮಹಿಳೆಗೆ ಎಬೋಲಾ ಮಾದರಿಯ ಆರೋಗ್ಯ ಸಮಸ್ಯೆಗಳು ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ, ತಕ್ಷಣವೇ ಆದೇಶ ಹೊರಡಿಸಿ ಇಂದು ಆಂಬುಲೆನ್ಸ್ ಮೂಲಕ ಅವರನ್ನು ಐಸೋಲೇಷನ್​​ಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪುಣೆ ಲ್ಯಾಬ್ ವರದಿಗಾಗಿ ಕಾಯುತ್ತಿರುವ ಆರೋಗ್ಯ ಇಲಾಖೆ

ಶಂಕಿತ ಮಹಿಳೆಯಿಂದ ಮೇ 25ರಂದೇ ರಕ್ತ ಹಾಗೂ ಇತರ ಅಗತ್ಯ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಸ್ಯಾಂಪಲ್‌ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದಾರೆ. ವರದಿ ಬಂದ ಬಳಿಕವಷ್ಟೇ ಮಹಿಳೆಗೆ ಎಬೋಲಾ ಸೋಂಕು ತಗುಲಿದೆಯೇ ಇಲ್ಲವೇ ಎಂಬುದು ಅಧಿಕೃತವಾಗಿ ದೃಢವಾಗಲಿದೆ. ನಾಳೆಯೊಳಗೆ ವರದಿ ಕೈಸೇರಲಿದೆ ಎಂದು ಆರೋಗ್ಯ ಇಲಾಖೆಯಿಂದ ಟಿವಿ9ಗೆ ಮಾಹಿತಿ ನೀಡಲಾಗಿದೆ. ವರದಿ ಬಳಿಕ ಸೂಕ್ತ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಲಿದೆ.

21 ದಿನ ಕ್ವಾರಂಟೈನ್​

ಎಬೋಲಾ ಸೋಂಕಿತ ರಾಷ್ಟ್ರಗಳಿಂದ ಬಂದವರಿಗೆ ಕ್ವಾರಂಟೈನ್​ನಲ್ಲಿಡಲು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್​ನಲ್ಲಿಡಲು ಸರ್ಕಾರ ನಿರ್ಧರಿಸಿತ್ತು. ರೋಗಲಕ್ಷಣ ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ವರದಿ ನೀಡಲು ಸೂಚಿಸಲಾಗಿತ್ತು. ಜತೆಗೆ IDSP ಅಡಿಯಲ್ಲಿ ತೀವ್ರ ನಿಗಾ ವ್ಯವಸ್ಥೆ ಮತ್ತು ಅನುಮಾನಾಸ್ಪದ ಪ್ರಕರಣಗಳ ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ವಿಮಾನ ನಿಲ್ದಾಣಗಳು ಮತ್ತು ಪ್ರವೇಶ ಕೇಂದ್ರಗಳ ಸಮನ್ವಯ ವ್ಯವಸ್ಥೆ ಕಲ್ಪಿಸುವುದು, ಪ್ರತ್ಯೇಕ ಕ್ವಾರಂಟೈನ್ ಮತ್ತು ಐಸೋಲೇಷನ್ ಸೌಲಭ್ಯಗಳು ಹಾಗೂ ರೆಫರಲ್ ಆಂಬುಲೆನ್ಸ್ ವ್ಯವಸ್ಥೆಗೂ ಸೂಚಿಸಲಾಗಿದೆ. ಆರೋಗ್ಯ ಸಿಬ್ಬಂದಿಗೆ ತರಬೇತಿ ಹಾಗೂ ಸೋಂಕು ನಿಯಂತ್ರಣ ಕ್ರಮಗಳ ಬಲಪಡಿಸುವಿಕೆಗೆ ಆರೋಗ್ಯ ಇಲಾಖೆ ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:45 pm, Tue, 26 May 26

Source link

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60 ರನ್ ಕಲೆಹಾಕಿತು.

Published On – 8:06 pm, Tue, 26 May 26

Source link

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಒಳನುಸುಳುವಿಕೆ ಗಡಿ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಯ ಮೇಲೂ ಪ್ರಭಾವ ಬೀರುತ್ತಿದೆ ಎಂದು ಅಮಿತ್ ಶಾ ಬೇಸರ ವ್ಯಕ್ತಪಡಿಸಿದರು. ಹಾಗೇ, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮತ್ತು ಗಡಿಭಾಗದ ಜಿಲ್ಲೆಗಳಲ್ಲಿ ಜನಸಂಖ್ಯೆಯ ಅನುಪಾತವು ತೀರಾ ಅಸಹಜವಾದ ರೀತಿಯಲ್ಲಿ ಬದಲಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಅಸಹಜ ಜನಸಂಖ್ಯಾ ಬದಲಾವಣೆಯ ಹಿಂದಿನ ನಿಖರವಾದ ಕಾರಣಗಳು, ನುಸುಳುವಿಕೆಯ ಪ್ರಮಾಣ ಮತ್ತು ಅದರ ಭೌಗೋಳಿಕ ಪ್ರಭಾವಗಳನ್ನು ಆಳವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರವು ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ

ಈ ಸಮಿತಿಯು ಗಡಿಭಾಗದ ಜಿಲ್ಲೆಗಳಲ್ಲಿ ಜನಸಂಖ್ಯೆಯ ಡೇಟಾ ಪರಿಶೀಲಿಸಲಿದೆ. ಅಕ್ರಮವಾಗಿ ವಲಸೆ ಬಂದು ನೆಲೆಸಿರುವವರನ್ನು ಪತ್ತೆಹಚ್ಚಲು ಹಾಗೂ ಗಡಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರಕ್ಕೆ ಅಗತ್ಯ ಶಿಫಾರಸುಗಳನ್ನು ನೀಡಲಿದೆ. ನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಯಲು ಗಡಿ ಭದ್ರತಾ ಪಡೆಗಳಿಗೆ (BSF ಮತ್ತು ಇತರ ರಕ್ಷಣಾ ಸಂಸ್ಥೆಗಳಿಗೆ) ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

ಅಮಿತ್ ಶಾ ಅವರ ಪೋಸ್ಟ್ ಇಲ್ಲಿದೆ:

ಗಡಿಭಾಗಗಳಲ್ಲಿ ತಂತ್ರಜ್ಞಾನ ಆಧಾರಿತ ಕಣ್ಗಾವಲು, ಡ್ರೋನ್ ಬಳಕೆಯ ಹೆಚ್ಚಳ ಮತ್ತು ಫೆನ್ಸಿಂಗ್ ಕಾರ್ಯಗಳನ್ನು ಚುರುಕುಗೊಳಿಸಲು ಆದೇಶಿಸಲಾಗಿದೆ ಎಂದಿದ್ದಾರೆ. ಯಾವುದೇ ರಾಜಕೀಯ ಅಥವಾ ಪ್ರಾದೇಶಿಕ ಒತ್ತಡಗಳಿಗೆ ಮಣಿಯದೆ, ದೇಶದ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಮಿತ್ ಶಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ

ಅಮಿತ್ ಶಾ ಅವರ ಈ ಘೋಷಣೆಯು ದೇಶದ ಭದ್ರತಾ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಗಡಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಈಶಾನ್ಯ ಭಾರತದ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ವಲಸೆಯ ವಿರುದ್ಧ ಕೇಂದ್ರ ಸರ್ಕಾರ ಭಾರಿ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದೆ ಎಂಬುದರ ಮುನ್ಸೂಚನೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ? – Kannada News | Rahul Gandhi Gives Big Offers To CM Siddaramaiah Over Karnataka Power Tussle, here Is Meeting Inside details

ನವದೆಹಲಿ,(ಮೇ 26): ದೆಹಲಿಯಲ್ಲಿಂದು (New Delhi) ನಡೆದ ಸರಣಿ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಮಾತ್ರವಲ್ಲದೇ ಪ್ರಮುಖವಾಗಿ ಕರ್ನಾಟಕ (Karnataka) ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜತೆ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸರಿಸುಮಾರು 45 ನಿಮಿಷಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ಆಫರ್​​​ಗೆ ಸಮ್ಮಿಸಿಲ್ಲ ಎನ್ನಲಾಗಿದೆ.

ಒನ್ ಟು ಒನ್ ಮಾತುಕತೆ ವೇಳೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಂದೆ ಅಧಿಕಾರ ಹಂಚಿಕೆ ಪ್ರಸ್ತಾಪ ಇಟ್ಟಿದ್ದು, ಇದರ ಜೊತೆ ಸಿದ್ದರಾಮಯ್ಯಗೆ ರಾಜ್ಯಸಭೆಯ ಆಫರ್ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಮಾತ್ರವಲ್ಲದೇ ಪುತ್ರ ಯತೀಂದ್ರ ಅವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿಯೂ ಸಹ ರಾಹುಲ್ ಗಾಂಧಿ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಸಿಎಂ ಸಿದ್ದರಾಮಯ್ಯ ಮಾತ್ರ ರಾಹುಲ್ ಗಾಂಧಿ ಆಫರ್​​ಗಳಿಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸದೆ ಸೈಲೆಂಟ್ ಆಗಿ ಬೇಸರದಲ್ಲೇ ಆಚೆ ಬಂದು ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ನಿಂತುಕೊಂಡರು.

ಇದನ್ನೂ ನೋಡಿ: ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

ಹೈಕಮಾಂಡ್ ಮುಂದೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಆಫರ್ ಮುಂದಿಟ್ಟಾಗ ಸಿಎಂ ಸಿದ್ದರಾಮಯ್ಯ ಸಹ ರಾಹುಲ್ ಮುಂದೆ ನೇರ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ ಎನ್ನಲಾಗಿದೆ. ನಾನು ರಾಜ್ಯಸಭೆಗೆ ಹೋದರೆ, ಮುಂದಿನ ಕರ್ನಾಟಕದ ಸಿಎಂ ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದಕ್ಕೆ ರಾಹುಲ್ ಪ್ರತಿಕ್ರಿಯಿಸಿ, ಹೈಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತೆ. ನಿಮ್ಮನ್ನು ಸಹ ವಿಶ್ವಾಸಕ್ಕೆ ಪಡೆದು ನಿರ್ಧಾರಕೈಗೊಳ್ಳುತ್ತೆ ಎಂದಿದ್ದಾರಂತೆ.

ಸಭೆಯಲ್ಲಿ ಕೇವಲ ರಾಜ್ಯಸಭೆ ಬಗ್ಗೆ ಚರ್ಚೆಯಾಗಿದೆ ಎಂದು ಕೆಸಿ ವೇಣುಗೋಪಾಲ್ ರಾಜಕೀಯ ಹೇಳಿಕೆಯಾಗಿ ನೀಡಿದ್ದಾರೆ. ಆದ್ರೆ, ಅಸಲಿಗೆ ರಾಹುಲ್ ಗಾಂಧಿ ಸಿದ್ದರಾಮಯ್ಯನವರ ಜೊತೆ ನಾಯತ್ವ ಬದಲಾವಣೆಯನ್ನೂ ಸಹ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಎಲ್ಲವನ್ನೂ ಸೂಕ್ಷ್ಮವಾಗಿ ಆಲಿಸಿದ ಸಿದ್ದರಾಮಯ್ಯ, ಸಭೆ ಮುಗಿಯುತ್ತಿದ್ದಂತೆಯೇ ಯಾವುದೇ ಪ್ರತಿಕ್ರಿಯೆ ನೀಡಿದೇ ಬೇಸರ ಮುಖದಲ್ಲೇ ನೇರವಾಗಿ ತಮ್ಮ ಬೆಂಬಲಿಗರು ತಂಗಿರುವ ಜಾರ್ಜ್ ನಿವಾಸಕ್ಕೆ ತೆರಳಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್​​​ನಲ್ಲಿ ರಾಜಕೀಯ ಬೆಳವಣಿಗೆಗಳು ಸಂಚಲನ ಮೂಡಿಸಿದ್ದು, ಮುಂದೆ ಈ ಬೆಳವಣಿಗೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಸನ್‌ ಉದಯ’ ಟಿವಿಯಲ್ಲಿ ಅಮೂಲ್ಯ ಗೌಡ ಹೊಸ ಧಾರಾವಾಹಿ ‘ಮಹಾಲಕ್ಷ್ಮೀ ಮದುವೆ’ – Kannada News | Amulya Gowda new Kannada Serial Mahalakshmi Maduve on Sun Udaya Tv Story Line Star Cast

‘ಸನ್ ಉದಯ’ (Sun Udaya) ವಾಹಿನಿಯಲ್ಲಿ ಹಲವು ಧಾರಾವಾಹಿಗಳು ಜನಮನ ಗೆದ್ದಿವೆ. ʻಮೂಗುತಿ ಮಲ್ಲಿ’ ರೀತಿಯ ಜನಪ್ರಿಯ ಧಾರಾವಾಹಿಯನ್ನು ಕನ್ನಡಿಗರಿಗೆ ನೀಡಿದ ಈ ವಾಹಿನಿಯು ಈಗ ಮಧ್ಯಮ ವರ್ಗದ ಮನೆ ಮನೆಯ ಕಥೆಯೊಂದನ್ನು ಇಟ್ಟುಕೊಂಡು ಹೊಸ ಧಾರಾವಾಹಿಯನ್ನು ಪರಿಚಯಿಸುತ್ತಿದೆ. ʻಮಹಾಲಕ್ಷ್ಮೀ ಮದುವೆʼ (Mahalakshmi Maduve) ಎಂಬುದು ಈ ಹೊಸ ಸೀರಿಯಲ್ ಹೆಸರು. ಈ ಧಾರಾವಾಹಿಯು ಜೂನ್‌ 1ರಿಂದ ಪ್ರಸಾರ ಆರಂಭಿಸಿಲಿದೆ. ಈ ಸೀರಿಯಲ್ (Kannada Serial) ಕಥೆಯ ಎಳೆ ಏನು ಎಂಬುದನ್ನು ತಿಳಿಸಲಾಗಿದೆ.

ಈ ಧಾರಾವಾಹಿಯ ಕಥಾನಾಯಕ ಶ್ರೀಹರಿ ಓರ್ವ ಮಧ್ಯಮ ವರ್ಗದ ಹುಡುಗ. ಕಥಾನಾಯಕಿ ಮಹಾಲಕ್ಷ್ಮೀ ಕೂಡ ಮಧ್ಯಮ ವರ್ಗದವಳು. ಬ್ಯಾಂಕಲ್ಲಿ ಕೆಲಸ ಮಾಡುವ ಮಗನಿಗೆ ಒಳ್ಳೆಯ ವರದಕ್ಷಿಣೆ ಹಾಗೂ ಒಡವೆ ತರುವ ಹುಡುಗಿ ಸಿಗಲಿ ಎಂಬುದು ಹುಡುಗನ ಅಮ್ಮನ ಆಸೆ. ಈ ಆಸೆಗೆ ಇನ್ನೂ ಸ್ವಲ್ಪ ಕುಮ್ಮಕ್ಕು ಕೊಡುವವಳು ಹುಡುಗನ ಅಕ್ಕ. ಹಾಗಂತ ಅವರೆಲ್ಲ ಕೆಟ್ಟವರಲ್ಲ. ‘ನಮ್ ಶ್ರೀಹರಿ ಚೆನ್ನಾಗಿದ್ರೆ ನಾವೂ ಚೆನ್ನಾಗಿರ್ತೀವಿ’ ಎಂಬ ಮಹದಾಸೆ ಅವರಿಗೆ.

ಆದರೆ ಮಹಾಲಕ್ಷ್ಮೀ ಗಟ್ಟಿಗಿತ್ತಿ. ಅಪ್ಪನ ಆಸರೆ ಇಲ್ಲದೇ ಮನೆಯ ಜವಾಬ್ದಾರಿಯನ್ನು ತಾನೇ ಹೊತ್ತುಕೊಂಡವಳು. ತಂಗಿಯರನ್ನು ಓದಿಸಬೇಕು, ಅಮ್ಮನಿಗೆ ಆಸರೆಯಾಗಬೇಕು ಎಂಬುದು ಆಕೆಯ ಉದ್ದೇಶ. ಆದ್ದರಿಂದ ಮದುವೆ ಆದರೂ ಕೂಡ ಸಂಬಳವನ್ನು ತಾಯಿಗೆ ಕೊಡುತ್ತೇನೆ ಎಂಬದು ಆಕೆಯ ಷರತ್ತು. ಸಾವಿರ ಸುಳ್ಳು ಅಲ್ಲ, ಒಂದೇ ಒಂದು ಸುಳ್ಳಿನ ಮೂಲಕ ನಡೆಯುವ ಶ್ರೀಹರಿ ಮತ್ತು ಮಹಾಲಕ್ಷ್ಮೀ ಮದುವೆ ಯಾವ ರೀತಿ ಮುಂದೆ ಸಾಗುತ್ತದೆ ಎಂಬುದೇ ಈ ಸೀರಿಯಲ್ ಕಹಾನಿ.

ಮಹಾಲಕ್ಷ್ಮೀ ಪಾತ್ರದಲ್ಲಿ ಖ್ಯಾತ ನಟಿ ಅಮೂಲ್ಯ ಗೌಡ ಅವರು ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಭರತ್‌ ಶಿವಣ್ಣ ಅವರು ಈ ಸೀರಿಯಲ್ ಮೂಲಕ ಕಿರುತೆರೆ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಶಿವಾಜಿ ರಾವ್‌ ಜಾಧವ್, ಸೀತಾ ಕೋಟೆ, ಮಂಜು ಪಾವಗಡ, ಅಮೃತಾ ರಾಮಮೂರ್ತಿ, ಪದ್ಮಿನಿ, ಮಾನಸಾ, ಮೇಘಶ್ರೀ, ಪ್ರತೀಕ್ಷಾ, ಧನುಷ್‌ ಗೌಡ, ಸ್ನೇಹಾ ಭಟ್‌, ಹರಿಪ್ರಿಯಾ, ʻಮಹಾಲಕ್ಷ್ಮೀ ಮದುವೆʼ ಧಾರಾವಾಹಿಯ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ

‘ಲೈಮ್‌ಲೈಟ್ ಪ್ರೊಡಕ್ಷನ್ಸ್‌’ ಮೂಲಕ ನಿರ್ಮಾಣ ಆಗುತ್ತಿರುವ ‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿಗೆ ಶಿವಧ್ವಜ್ ಶೆಟ್ಟಿ ಮತ್ತು ಪ್ರಶಾಂತ್ ರೈ ನಿರ್ಮಾಪಕರಾಗಿದ್ದಾರೆ. ಪಾಪಾ ಔಟ್‌ಡೋರ್‌ ಯೂನಿಟ್‌ನ ಗಾಯತ್ರಿ ಸೆಲ್ವಂ ಅವರು ಈ ಧಾರಾವಾಹಿಯ ಕಾರ್ಯಕಾರಿ ನಿರ್ಮಾಪಕರು. ಶಿವು ಪೂಜೇನ ಅಗ್ರಹಾರ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಯೋಗೇಶ್ ಗೌಡ ಅವರ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link