Category Archives: Blog

Your blog category

ಐತಿಹಾಸಿಕ ಲಕ್ಕುಂಡಿಯಲ್ಲಿ 6ನೇ ದಿನದ ಉತ್ಖನನದಲ್ಲಿ ಏನೇನು ಸಿಕ್ತು? ಇಲ್ಲಿದೆ ವಿವರ – Kannada News | Lakkundi Gold Treasure: Some old things Found during 6th day excavation

ಗದಗ, (ಜನವರಿ 21): ಲಕ್ಕುಂಡಿಯಲ್ಲಿ ಚಿನ್ನದ ನಿಧಿ (Lakkundi Gold Treasure) ಸಿಕ್ಕಿದ್ದೇ ಸಿಕ್ಕಿದ್ದು ಗ್ರಾಮದ ಹೆಸರು ಭಾರೀ ಸದ್ದು ಮಾಡತೊಡಗಿದೆ. ಗ್ರಾಮದ ಶ್ರೀಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi excavation) ಭರದಿಂದ ಸಾಗಿದ್ದು,  6ನೇ ದಿನದ ಉತ್ಖನನ ಕಾರ್ಯ ಅಂತ್ಯವಾಗಿದೆ. ಇಂದು (ಜನವರಿ 21) 6ನೇ ದಿನದ ಉತ್ಖನನ ಕಾರ್ಯ ವೇಳೆ ಐದಾರು ಬಿಲ್ಲೆ, ನಾಗರಹಾವಿನ ಚಿತ್ರದ ಶಿಲೆ ಜತೆಗೆ ಮೂಳೆ ತುಣುಕುಗಳು ಸಹ ಸಿಕ್ಕಿರುವುದು ಕುತೂಹಲಕ್ಕೆ ಕಾರಣವಾಗಿದೆ.

6ನೇ ದಿನ ಅಪರೂಪದ ವಸ್ತುಗಳು ಪತ್ತೆ

ಪುರಾತನ ಕಾಲದ ಅಪರೂಪದ ಬಿಲ್ಲೆ ಪತ್ತೆಯಾಗಿದೆ. ಅಷ್ಟೇ ಅಲ್ಲ ಇಂದು ಮತ್ತೆ ನಾಗರ ಹಾವಿನ ಚಿತ್ರ ಇರೋ ಶಿಲೆ ಪತ್ತೆಯಾಗಿದೆ. ಪದೇ ಪದೇ ಇದೇ ಸ್ಥಳದಲ್ಲಿ ನಾಗರಹಾವಿನ ಚಿತ್ರ ಇರೋ ಶಿಲೆಗಳು ಪತ್ತೆಯಾಗಿರುವುದಿರಂದ ಇಲ್ಲಿ ನಿಧಿ ಇದೆಯಾ ಎನ್ನುವ ಕೌತಕ ಹೆಚ್ಚಾಗಿದೆ. ಇನ್ನೊಂದೆಡೆ ನಿಧಿಯನ್ನು ಹಾವುಗಳು ಕಾಯುತ್ತಿವೆಯಾ ಎನ್ನುವ ಭಯ, ಆತಂಕ ಸಹ ಗ್ರಾಮಸ್ಥರಲ್ಲಿ ಹೆಚ್ಚಾಗಿದೆ. ಈಗಾಗಲೇ ಸುಮಾರು 6 ಅಡಿಯಷ್ಟು ಆಳಕ್ಕೆ ಅಗೆಯಲಾಗಿದ್ದು, ಮುಂದೆ ನಡೆಯುವ ಉತ್ಖನನದಲ್ಲಿ ಮತ್ತಷ್ಟು ಪ್ರಾಚೀನ ಅವಶೇಷ ಪತ್ತೆಯಾಗುವ ಸಾಧ್ಯತೆ ಸಹ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಲಕ್ಕುಂಡಿ ನಿಧಿಗೆ ಸರ್ಪ ಕಾವಲು? ಮೈಸೂರಿನಿಂದ ಬಂದ ಉರಗ ರಕ್ಷಕರು ಹೇಳಿದ್ದೇನು?

ಪತ್ತೆಯಾಗಿದ್ದ ಪಾಣಿಪೀಠ ಹಿನ್ನೆಲೆ

ಉತ್ಖನನ ವೇಳೆ ಪತ್ತೆಯಾಗಿದ್ದ ಪಾಣಿಪೀಠವನ್ನು ಮೊದಲು ಶಿವಲಿಂಗ ಪಾಣಿಪೀಠ ಎನ್ನಲಾಗಿತ್ತು.ಪಾಣಿಪೀಠದಲ್ಲಿ ಗರುಡ ಮುದ್ರೆ ಇರುವುದರಿಂದ ವಿಷ್ಣುವಿನ ಪೀಠ ಸಾಧ್ಯತೆ ಎನ್ನಲಾಗುತ್ತಿದೆ. ಯಾಕಂದ್ರೆ ಕೇಶವ ಅಂದ್ರೆ ವಿಷ್ಣು ದೇವರ ಪೀಠವಾಗಿರಬಹುದು ಎನ್ನಲಾಗುತ್ತಿದೆ. ಕೇಶವಾದಿತ್ಯ ದೇವಾಲಯಕ್ಕೆ ಸಂಬಂಧಪಟ್ಟ ಪೀಠ ಸುಖಾಸನದ ಆಕಾರದಲ್ಲಿ ಕುಳಿತ ಗರುಡ ಚಿತ್ರ ಇರುವ ಪೀಠ ಇದ್ದಾಗಿದೆ.

ಲಕ್ಕುಂಡಿಯಲ್ಲಿ ಭೂಗರ್ಭ ಅಗೆದಷ್ಟು ಅನೇಕ ಅವಶೇಷಗಳು ಪತ್ತೆಯಾಗುತ್ತಿವೆ. ಇವು ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಉತ್ಖನನ ಜಾಗದ A4 ಬ್ಲಾಕ್ ನಲ್ಲಿ ಐದಾರು ಚಿಕ್ಕ ಚಿಕ್ಕ ಮೂಳೆಯ ತುಣುಕುಗಳು ಪತ್ತೆಯಾಗಿವೆ. ಸಿಕ್ಕ ಆ ಮೂಳೆಯ ತುಂಡನ್ನು ಪ್ರತ್ಯೇಕವಾಗಿ ತೆಗೆದಿಡಲಾಗಿದೆ. ಅದನ್ನು ಚಿಕ್ಕ ಪ್ಲಾಸ್ಟಿಕ್ ಪ್ಯಾಕೇಟ್ನಲ್ಲಿ ಸೀಲ್ ಮಾಡಿ ಮೂಳೆಯನ್ನ ತೆಗೆದಿಟ್ಟಿದ್ದು, ಪುರಾತತ್ವ ಇಲಾಖೆಯ ಅಧಿಕಾರಿಗಳು, ಮೇಲ್ವಿಚಾರಕರು ಇದರ ಬಗ್ಗೆ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಮೂಳೆ ಮಾನವರದ್ದಾ? ಪ್ರಾಣಿಗಳದ್ದಾ? ಅಥವಾ ಯಾವುದಾದರೂ ಪಕ್ಷಿಯದ್ದಾ ಎಂಬ ಸ್ಪಷ್ಟ ವರದಿಯನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕಾಗಿದೆ.

ಪ್ರವಾಸಿಗರನ್ನ ಆಕರ್ಷಿಸುತ್ತಿದೆ ಲಕ್ಕುಂಡಿ!

ಇನ್ನು ಚಿನ್ನದ ನಿಧಿ ಸಿಕ್ಕಿದ್ದೇ ತಡ ಲಕ್ಕುಂಡಿ ಗ್ರಾಮ ಇದೀಗ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ ಲಕ್ಕುಂಡಿಯಲ್ಲಿ ಯಾವಾಗ ನಿಧಿ ಸಿಕ್ತೋ ಪ್ರವಾಸಗರ ದಂಡೇ ಬರುತ್ತಿದೆ. ಅದರಲ್ಲೂ ಇಂದು ಹುಬ್ಬಳ್ಳಿ ನೇಕಾರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು, ಶಿಕ್ಷಕರು ಆಗಮಿಸಿ ಉತ್ಖನನ ಕಾರ್ಯ ಹೇಗಿರುತ್ತೆ ಎನ್ನುವುದನ್ನು ಮಕ್ಕಳಿಗೆ ತಿಳಿಸಲಾಯ್ತು

ಉತ್ಖನನ ಬಗ್ಗೆ ಕೇವಲ‌ ಪಠ್ಯಪುಸ್ತಕಗಳಲ್ಲಿ ಮೂಲಕ ತಿಳಿದುಕೊಂಡಿದ್ದೆವು. ಈಗ ಪ್ರತ್ಯಕ್ಷವಾಗಿ ಉತ್ಖನನ ಕೆಲಸ ನೋಡಿ ತುಂಬಾನೆ ಖುಷಿ ಆಗಿದೆ. ಉತ್ಖನನ ಅಂದ್ರೆ ಏನು? ಹೇಗೆ ಉತ್ಖನನ ಮಾಡ್ತಾರೆ.? ಅಲ್ಲಿ‌ ಏನೆಲ್ಲಾ ಅವಶೇಷಗಳು ಸಿಗುತ್ತವೆ? ಇದರ ಹಿನ್ನಲೆ ಏನಿರಬಹುದು.? ಹೀಗೆ ಹತ್ತಾರು‌ ಕುತೂಹಲಕಾರಿ ವಿಷಯಗಳ ಬಗ್ಗೆ ತಿಳಿದುಕೊಳ್ಳಲು‌ ನಮಗೆ ಸಂತೋಷವಾಗುತ್ತಿದೆ ಅಂತಿದ್ದಾರೆ ಶಿಕ್ಷಕರು.

ಒಟ್ಟಾರೆ ಲಕ್ಕುಂಡಿ ಸಾಕಷ್ಟು ಬಂಗಾರ, ವಜ್ರ ವೈಡೂರ್ಯ ಶ್ರೀಮಂತ ನಾಡು ಈಗ ರಾಜ್ಯ, ದೇಶದ ಗಮನ ಸೆಳೆಯುತ್ತಿದೆ. ಇದು ಇತಿಹಾಸ ಗ್ರಾಮ ಆಗಬೇಕು. ಇಲ್ಲಿಯ ಪ್ರತಿಯೊಂದು ದೇವಸ್ಥಾನ ಅಭಿವೃದ್ಧಿ ಪಡಿಸಬೇಕಿದ್ದು, ಲಕ್ಕುಂಡಿಯಲ್ಲಿ ನಡೆಯುವ ಉತ್ಖನನ ವೇಳೆ ಏನೆಲ್ಲಾ ಸಿಗಬಹುದು ಎಂಬ ಕುತೂಹಲ ಜನರಲ್ಲಿ ಮನೆಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ – Kannada News | AHINDA Convention in Hubballi Backs Siddaramaiah Amidst Karnataka CM Change Talks

ಹುಬ್ಬಳ್ಳಿ, ಜ.21: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಅಹಿಂದ ಸಮ್ಮೇಳನ (AHINDA Rallies for Siddaramaiah) ನಡೆದಿದೆ. ಇದೀಗ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಬಣದ ನಡುವೆ ಮುಸುಕಿನ ಗುದ್ದಾಟ ಜೋರಾಗಿರುವಂತೆ ಕಾಣುತ್ತಿದೆ. ನವೆಂಬರ್​ ಕ್ರಾಂತಿ, ಡಿಸೆಂಬರ್​​ ಕ್ರಾಂತಿ ಎಂದೆಲ್ಲ ವಿರೋಧ ಪಕ್ಷದ ನಾಯಕರ ಜತೆಗೆ ಕಾಂಗ್ರೆಸ್​​​ನ ಕೆಲವು ನಾಯಕರು ಕೂಡ ಹೇಳಿಕೆಯನ್ನು ನೀಡುತ್ತಿದ್ದರು. ಇದೀಗ ಬಹಿರಂಗವಾಗಿ ಸಿಎಂ ಸಿದ್ಧರಾಮಯ್ಯ ಪರ ಅಹಿಂದ ನಾಯಕರು ನಿಂತಿದ್ದಾರೆ. ಸಿದ್ದರಾಮಯ್ಯನವರು ಎರಡನೇ ಬಾರಿಗೆ ಸಿಎಂ ಆಗಿ ಎರಡುವರೆ ವರ್ಷವಾಗುತ್ತಿದ್ದಂತೆ, ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಸ್ವತಃ ಕಾಂಗ್ರೆಸ್​ನ ಅನೇಕರು ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗೋದಿಲ್ಲಾ ಅಂತ ಹೇಳುತ್ತಲೇ ಇದ್ದಾರೆ. ಆದರೆ ಈ ಬಗ್ಗೆ ಹೈಕಮಾಂಡ್ ನಿಂದ ಮಾತ್ರ ಸಿಎಂ ಬದಲಾವಣೆಯ ಚರ್ಚೆಗೆ ತೆರೆ ಎಳೆಯುವ ಯಾವುದೇ ಕೆಲಸ ಆಗುತ್ತಿಲ್ಲ. ಇದು ಅಹಿಂದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ತುಂಬಲು ಇಂದು (ಜ.21) ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ನಡೆಸಲಾಯಿತು. ಹುಬ್ಬಳ್ಳಿ ನಗರದ ಗ್ಲಾಸ್ ಹೌಸ್ ನಲ್ಲಿ ನಡೆದ ಅಹಿಂದ ಸಮಾವೇಶಲ್ಲಿ ಅನೇಕ ನಾಯಕರು ಭಾಗಿಯಾಗಿದ್ದರು. ಸಿದ್ದರಾಮಯ್ಯರಿಗೆ ಶಕ್ತಿ ತುಂಬಲು ಅಹಿಂದ ನಾಯಕರು ಮುಂದಾಗಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು ಉತ್ತರ ಕರ್ನಾಟಕ ಭಾಗದ ಅಹಿಂದ ನಾಯಕರು ಭಾಗಿಯಾಗಿದ್ದರು. ಇದರ ನಡುವೆ ಅಹಿಂದ ನಾಯಕರು ಡಿಕೆ ಶಿವಕುಮಾರ್​​ ವಿರುದ್ಧ ಒಂದು ಮಹತ್ವದ ಆರೋಪವನ್ನು ಮಾಡಿದ್ದಾರೆ. ಜ.27ರಂದು ಮೈಸೂರಿನಲ್ಲಿ ನಡೆಯುವ ಅಹಿಂದ ಸಮಾವೇಶಕ್ಕೆ ವಾಹನಗಳನ್ನು ಬಿಡಬಾರದು ಎಂದು ಹೇಳಿದ್ದಾರೆ. ಈ ಮೂಲಕ ಸಿದ್ಧರಾಮಯ್ಯ ಅವರನ್ನು ಕುಗ್ಗಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ಸಮಾವೇಶದ ಮೂಲಕ ಯಾವುದೇ ಕಾರಣಕ್ಕೂ ಕೂಡಾ ಸಿಎಂ ಸಿದ್ದರಾಮಯ್ಯರನ್ನು ಬದಲಾವಣೆ ಮಾಡಬಾರದು. ಮಾಡಿದ್ರೆ ಅಹಿಂದ ವರ್ಗ ಸುಮ್ಮನೇ ಇರೋದಿಲ್ಲಾ. ಈ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆಯೋ ಕೆಲಸ ಮಾಡಬೇಕು ಎಂದು ಹೇಳಿದೆ. ರಾಜ್ಯದಲ್ಲಿ ಐದು ಕಡೆ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದು, ಮೊದಲ ಸಮಾವೇಶವನ್ನು ಇಂದು ಹುಬ್ಬಳ್ಳಿಯಲ್ಲಿ ನಡೆಸಲಾಯಿತು, ಇಲ್ಲಿಂದ ರಾಜ್ಯಾದ್ಯಂತ ಸಮಾವೇಶ ನಡೆಸಲು ಅಹಿಂದ ನಾಯಕರು ಮುಂದಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಅಹಿಂದ ಸಮಾವೇಶಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿದಂತೆ ಹತ್ತಕ್ಕೂ ಹೆಚ್ಚು ಕಾಂಗ್ರೆಸ್ ಸಚಿವರು, ಅನೇಕ ಶಾಸಕರಿಗೆ ಆಹ್ವಾನ ನೀಡಲಾಗಿತ್ತು. ಆದ್ರೆ ಇಂದಿನ ಸಮಾವೇಶಕ್ಕೆ ಯಾವೊಬ್ಬ ಸಚಿವರು ಭಾಗಿಯಾಗಿಲ್ಲ. ಇನ್ನು ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸೋ ಷಡ್ಯಂತ್ರವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಮಾಡಿದ್ದಾರೆ. ಇಂದಿನ ಸಭೆಗೆ ಯಾರಿಗೂ ಬರದಂತೆ ನೋಡಿಕೊಂಡಿದ್ದಾರೆ. ಹುಬ್ಬಳ್ಳಿ ಯಲ್ಲಿ 24 ಕ್ಕೆ ನಡೆಯೋ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಕೂಡ ಅಹಿಂದ ಜನರು ಬರದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಅಹಿಂದ ನಾಯಕರು ಹೇಳಿದ್ದಾರೆ.

ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರೆ ಅಲ್ಲೋಲ ಕಲ್ಲೋಲ

ಸಿಎಂ ಸಿದ್ದರಾಮಯ್ಯಗೆ ಶಕ್ತಿ ತುಂಬಲು ಸಮಾವೇಶ ಮಾಡ್ತಿದ್ದೇವೆ. ಸಿದ್ದರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್ ಪಕ್ಷ ಹೊರಟಿದೆ. ಯಾವ ಕಾರಣಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸ ನಡೀತಿದೆ. ಸಾವಿರಾರು ಕೋಟಿ ಲಂಚ ಹೊಡೆದು ಜೈಲಿಗೆ ಹೋಗಿದ್ದಾರಾ? ಸಿದ್ದರಾಮಯ್ಯ ಮಾಡಿರುವ ತಪ್ಪು ಏನೆಂದು ಕಾಂಗ್ರೆಸ್ ಹೇಳಲ. ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರೆ ಅಲ್ಲೋಲ ಕಲ್ಲೋಲ ಆಗುತ್ತದೆ. ಯಾವ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಶೇ.86ರಷ್ಟು ಅಹಿಂದ ಸಮುದಾಯದವರು ಇದ್ದೇವೆ. 2028ರವರೆಗೆ ಕೆಳಗಿಳಿಸುವುದಿಲ್ಲ ಅಂತಾ ಹೈಕಮಾಂಡ್​ ಹೇಳಬೇಕು. ಪದೇಪದೆ ಅಹಿಂದ ನಾಯಕರನ್ನು ಅವಮಾನಿಸಿದ್ರೆ ನಾವು ಬಿಡಲ್ಲ ಎಂದು ಅಹಿಂದ ಮುಖಂಡ ಸಿದ್ದಣ್ಣ ತೇಜಿ ಹೇಳಿದ್ದಾರೆ.

ಇದನ್ನೂ ಓದಿ: ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು?

ಅಹಿಂದ ಸಮಾವೇಶಕ್ಕೆ ವಾಹನ ನೀಡಬೇಡಿ ಎಂದಿದ್ದಾರೆ ಡಿಕೆಶಿ

ಅಹಿಂದ ಮುಖಂಡರನ್ನು ಡಿ.ಕೆ.ಶಿವಕುಮಾರ್ ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಜನವರಿ 24ಕ್ಕೆ ನಡೆಯುವ ಅಹಿಂದ ಸಮಾವೇಶಕ್ಕೆ ವಾಹನ ನೀಡಬೇಡಿ ಎಂದು ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಪ್ರಭಾವ ಕುಗ್ಗಿಸಲು ಯತ್ನಿಸುತ್ತಿದ್ದಾರೆ. ಅಹಿಂದ ಜನ ಬಂದ್ರೆ ಸಿದ್ದರಾಮಯ್ಯ ಪರ ಜೈಕಾರ ಹಾಕುತ್ತಾರೆ. ಹೀಗಾಗಿ ಅವರು ಬರದಂತೆ ನೋಡಿಕೊಳ್ಳಿ ಅಂತಾ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರು, ನಾಯಕರಿಗೆ ಡಿಕೆ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಲಿಂಗಾಯತರ ಪಕ್ಷ ಆಗುತ್ತಿದೆ. ಸಿದ್ದರಾಮಯ್ಯ ಮುಖ ನೋಡಿ ಲಿಂಗಾಯತರಿಗೆ ವೋಟ್ ಹಾಕಿದ್ದೇವೆ. ಇದರ ಜತೆಗೆ ಅಹಿಂದ ಅಧಿಕಾರಿಗಳಿಗೆ ಒಳ್ಳೆಯ ಪೋಸ್ಟ್ ಆಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾಗಲೇ ಇಂತಹ ಪರಿಸ್ಥಿತಿ ಇದೆ. ಕೋಮುವಾದಿ ಪಕ್ಷ ಅಧಿಕಾರದಲ್ಲಿದ್ದರೆ ನಮ್ಮ ಪರಿಸ್ಥಿತಿ ಏನಾಗುತ್ತದೆ ಎಂದು ಅಹಿಂದ ಮುಖಂಡರು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ – Kannada News | India vs NZ T20 Series Trophy: Sustainable Design from Upcycled Bats and Balls

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿದೆ. ಇದು ಪಂದ್ಯದ ವಿಚಾರವಾದರೆ, ಇನ್ನು ಈ ಸರಣಿ ವಿಜೇತರಿಗೆ ನೀಡಲಿರುವ ಟ್ರೋಫಿ ತನ್ನ ವೈಶಿಷ್ಟ್ಯಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಸರಣಿಗಾಗಿ ನಿರ್ಮಿಸಿರುವ ಟ್ರೋಫಿ ಕಂದು ಮತ್ತು ಕೆಂಪು ಬಣ್ಣ ಮಿಶ್ರಿತವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ, ಟ್ರೋಫಿಗಳನ್ನು ಲೋಹದಿಂದ ತಯಾರಿಸಲಾಗುತ್ತದೆ. ಆದಾಗ್ಯೂ, ಈ ಸರಣಿಗಾಗಿ ನಿರ್ಮಿಸಿರುವ ಈ ಟ್ರೋಫಿಯನ್ನು ವಿಶೇಷವಾಗಿ ಮರ ಮತ್ತು ಚರ್ಮವನ್ನು ಬಳಸಿ ವಿನ್ಯಾಸಗೊಳಿಸಲಾಗಿದೆ. ಈ ಟ್ರೋಫಿಯ ಬಗ್ಗೆ ಮಾಹಿತಿ ನೀಡಿರುವ ವಿಡಿಯೋವನ್ನು ಬಿಸಿಸಿಐ ಹಂಚಿಕೊಂಡಿದ್ದು, ‘ಈ ಟ್ರೋಫಿಯನ್ನು ಈಗಾಗಲೇ ಬಳಸಿರುವ ಮತ್ತು ಮತ್ತೆ ಬಳಸಲು ಸಾಧ್ಯವಿಲ್ಲದ ಬ್ಯಾಟ್‌ಗಳು ಮತ್ತು ಚರ್ಮದ ಚೆಂಡುಗಳನ್ನು ಮರುಬಳಕೆ ಮಾಡುವ ಮೂಲಕ ತಯಾರಿಸಲಾಗಿದೆ’.

Source link

ಕಟ್ಟುನಿಟ್ಟಿನ ಕ್ರಮ: ಇನ್ಮುಂದೆ ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ – Kannada News | Transport Minister Ramalinga Reddy instructs 8 Rules mandatory to sleeper coach buses

ಬೆಂಗಳೂರು, (ಜನವರಿ 21): ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ (Chitradruga Bus Accident) ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಅವರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಖಾಸಗಿ ಬಸ್ ಮಾಲೀಕರು,ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಯಾವ ರೀತಿಯಲ್ಲಿ ಬಸ್ ಗಳ ಬಾಡಿ ಬಿಲ್ಡಿಂಗ್ ಮಾಡಬೇಕು? ಎಷ್ಟು ಎಮರ್ಜೆನ್ಸಿ ಡೋರ್ ಇಡಬೇಕು? ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ 8 ನಿಯಮಗಳ ಕಡ್ಡಾಯ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ರಾಮಲಿಂಗಾರೆಡ್ಡಿ ಖಡಕ್ ಸೂಚನೆ

ಪ್ರಯಾಣಿಕರಿಗೆ ಯಾವ ರೀತಿಯಲ್ಲಿ ಮಾಹಿತಿ ನೀಡಬೇಕು? ಫೈರ್ ಎಸ್ಟಿಂಗ್ ವಿಷರ್ ಗಳನ್ನು ಅಳವಡಿಸುವ ಬಗ್ಗೆ,ಎಮರ್ಜೆನ್ಸಿ ಎಕ್ಸಿಟ್ ಡೋರ್ ಗಳ ಬಳಿ ಯುವಕರು ಮತ್ತು ಮಧ್ಯ ವಯಸ್ಕರಿಗೆ ಸೀಟ್ ನೀಡಬೇಕು, ಎಸಿ ಬಸ್ಸುಗಳಲ್ಲಿ ಬೆಂಕಿ ಕಾಣಿಸಿಕೊಂಡರೆ ಹೇಗೆ ನಂದಿಸಬೇಕು? ಹೊರಗೆ ಬರಲು ಗ್ಲಾಸ್ ಹೊಡೆಯಲು ಹ್ಯಾಮರ್ ಗಳನ್ನು ಇಡಬೇಕು? ಪ್ರಯಾಣಿಕರು ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ವ್ಯವಸ್ಥೆ ಮಾಡಬೇಕು, ಬೆಂಕಿ ಕಾಣಿಸಿಕೊಂಡರೇ ಪ್ರಯಾಣಿಕರಿಗೆ ಡ್ರೈವರ್ ಅಲರಾಂ ನೀಡಬೇಕು. ಹೀಗೆ ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪನಿಗಳಿಗೆ ಸಾರಿಗೆ ಸಚಿವರು ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಸ್​ಗಳಲ್ಲೂ ವಿಮಾನದ ಗಗನಸಖಿಯರ ರೀತಿ ಸಂದೇಶ! ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಹೊಸ ನಿಯಮ

ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ

  • ಸ್ಲೀಪರ್ ಬಸ್ ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು.
  • ಸ್ಲೀಪರ್ ಬರ್ತ್ ಗಳಲ್ಲಿ ಸ್ಲೈಡರ್ ತೆಗೆಯಬೇಕು
  • ಫೈರ್ ಡಿಟೆಕ್ಷನ್ ಅನ್ನ ತಿಂಗಳೊಳಗೆ ಅಳವಡಿಸಬೇಕು
  • 10ಕೆಜಿ ತೂಕದ ಅಗ್ನಿ ಶಾಮಕ ಸಾಧನ ಅಳವಡಿಕೆ ಕಡ್ಡಾಯ
  • ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್
  • ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯ
  • ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್ ಸಿ ಮಾಡಬೇಕು
  • ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಬೇಕು

ಇನ್ನೂ ಗುಜರಾತಿನ 41 ವಾಹನಗಳಿಗೆ ಕೋರಮಂಗಲ ಆರ್ಟಿಓ ಕಚೇರಿಯಲ್ಲಿ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ಬಗ್ಗೆ ಟಿವಿ9 ನಿನ್ನೆ ಸುದ್ದಿ ಪ್ರಸಾರ ಮಾಡಿತ್ತು. ರೂಲ್ಸ್ ಪ್ರಕಾರ ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆ ಪ್ರಕಾರ, ಯಾವುದೇ ರಾಜ್ಯದಲ್ಲಾದರೂ ವಾಹನಗಳ ಎಫ್‌ಸಿ ಮಾಡಿಸಿಕೊಳ್ಳಲು ಅವಕಾಶವಿದೆ. ಆದರೆ, ವಾಹನವವನ್ನು ಖುದ್ದು ಆರ್‌ಟಿಒ ಮುಂದೆ ಹಾಜರುಪಡಿಸಿದ ನಂತರ ಪರಿಶೀಲನೆ ನಡೆಸಿಯೇ ಎಫ್​ಸಿ ನೀಡಬೇಕು ಎಂಬ ನಿಯಮವಿದೆ. ಆದರೆ, ಕೋರಮಂಗಲ ಆರ್‌ಟಿಒ ಅಧಿಕಾರಿಗಳು, ವಾಹನಗಳು ಇಲ್ಲಿಗೆ ಬಂದಿದ್ದವು, ನಾವು ಖುದ್ದಾಗಿ ಪರಿಶೀಲಿಸಿದ್ದೇವೆ ಎಂದು ಸುಳ್ಳು ಹೇಳಿ ಎಫ್‌ಸಿಗಳನ್ನು ನೀಡಿದ್ದರು.

ಆ ಸಮಯದಲ್ಲಿ ಆ ವಾಹನಗಳು ಗುಜರಾತ್‌ನಲ್ಲಿ ಸಂಚರಿಸುತ್ತಿರುವುದನ್ನು ಅಲ್ಲಿನ ಸಾರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಸಮೇತ ಬಹಿರಂಗಪಡಿಸಿದ್ದರು. ಈ ಸಂಬಂಧ ಕೋರಮಂಗಲ ಆರ್‌ಟಿಒದ ಹಿರಿಯ ಮೋಟಾರು ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಇತ್ತ ಸಾರಿಗೆ ಇಲಾಖೆಯ ಸೂಚನೆಗೆ ಖಾಸಗಿ ಬಸ್ ಮಾಲೀಕರ ಸಂಘ ನಾವು ಸಾರಿಗೆ ರೂಲ್ಸ್ ಅಳವಡಿಸಿಕೊಳ್ಳುತ್ತೇವೆ. ಆದರೆ ಅದಕ್ಕೆ 6 ತಿಂಗಳುಗಳ ಕಾಲಾವಕಾಶ ‌ಬೇಕು ಎಂದು ಮನವಿ ಮಾಡಿದ್ದಾರೆ.

Source link

IND vs NZ: 6,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ – Kannada News | India vs NZ T20: Rinku Singh’s Unbeaten 44 Off 20 Balls Secures Mammoth 239 Total

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್​ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು.

ತಂಡದ ಪರ ಕೊನೆಯ ಓವರ್​ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 4 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು. ಅವರ ಆಕ್ರಮಣಕಾರಿ ಬ್ಯಾಟಿಂಗ್ ಭಾರತ 200 ರನ್‌ಗಳ ಗಡಿ ದಾಟಲು ಸಹಾಯ ಮಾಡಿತು. ರಿಂಕು 220 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್​ ಬೀಸಿದ ರಿಂಕು ಸಿಂಗ್ ಡ್ಯಾರೆಲ್ ಮಿಚೆಲ್ ಬೌಲ್ ಮಾಡಿದ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ 2 ಸಿಕ್ಸರ್ ಹಾಗೂ 2 ಸಿಕ್ಸರ್ ಸಹಿತ 21 ರನ್ ಕಲೆಹಾಕಿದರು.

Source link

Gratuity Calculator: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ – Kannada News | Gratuity calculator, formula to count how much money you get from employer after end of the service

Gratuity Calculator: ನೀವು ಉದ್ಯೋಗಿಯೇ? ನಿಮಗೆ ಪಿಎಫ್ ಖಾತೆ ಇದೆಯೇ? ನೀವು ಇಪಿಎಫ್‌ನಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಉದ್ಯೋಗ ಸೇವೆಯ ಸಮಯದಲ್ಲಿ, ನಿಮ್ಮ ಸಂಬಳವನ್ನು ಪ್ರತಿ ತಿಂಗಳು ಕಡಿತಗೊಳಿಸಿ ಪಿಎಫ್ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನೀವು ಇದರಿಂದ ಹಣವನ್ನು ಭಾಗಶಃ ಹಿಂಪಡೆಯಬಹುದು. ನಿವೃತ್ತಿಯ ನಂತರ ನೀವು ಅದನ್ನು ಸಂಪೂರ್ಣವಾಗಿ ತೆಗೆದುಕೊಳ್ಳಬಹುದು. ಪಿಎಫ್ ಖಾತೆಯನ್ನು ಹೊಂದಿರುವವರು ತಮ್ಮ ಸೇವೆಯನ್ನು ಅವಲಂಬಿಸಿ ನಿವೃತ್ತಿಯ ನಂತರ ಇಪಿಎಸ್ ಪಿಂಚಣಿಯನ್ನು ಸಹ ಪಡೆಯುತ್ತಾರೆ. ಉದ್ಯೋಗಿಗಳಿಗೆ ಇಪಿಎಫ್, ಇಪಿಎಸ್ ಅಲ್ಲದೆ ಇನ್ನೂ ಒಂದು ಸ್ಕೀಮ್​ನ ಲಾಭ ಇದೆ. ಇದು ಸ್ಯಾಲರಿ ಸ್ಲಿಪ್​ನಲ್ಲಿ ಕಾಣುವುದಿಲ್ಲ. ಹೀಗಾಗಿ, ಬಹಳ ಮಂದಿಗೆ ಇದು ನೆನಪೇ ಇರೋದಿಲ್ಲ. ಇದು ಗ್ರಾಚ್ಯುಟಿ ಸ್ಕೀಮ್ (Gratuity). ಒಂದು ಕಂಪನಿಯಲ್ಲಿ ನೀವು ಕನಿಷ್ಠ 5 ವರ್ಷ ಕೆಲಸ ಮಾಡಿದ್ದರೆ ಗ್ರಾಚ್ಯುಟಿಗೆ ಅರ್ಹರಾಗಿರುತ್ತೀರಿ. ನೀವು ಐದು ಅಥವಾ ಇನ್ನೂ ಹೆಚ್ಚಿನ ವರ್ಷ ಕೆಲಸ ಮಾಡಿ ಕಂಪನಿ ತೊರೆದಾಗ ಅಥವಾ ನಿವೃತ್ತರಾದಾಗ ಗ್ರಾಚುಟಿ ಕೊಡಲಾಗುತ್ತದೆ.

ಗ್ರಾಚ್ಯುಟಿ ಎಂದರೇನು?

ಗ್ರಾಚ್ಯುಟಿ ಎಂದರೆ ಒಂದು ಕಂಪನಿಯು ತನ್ನ ಉದ್ಯೋಗಿಯ ಸೇವೆಗೆ ಪ್ರತಿಯಾಗಿ ನೀಡುವ ಗೌರವಧನವಾಗಿದೆ. ಇದು ಸಂಬಳ ಅಲ್ಲದೆ ನೀಡುವ ಹಣ. ಉದ್ಯೋಗಿಯ ಸೇವೆಗೆ ಕೃತಜ್ಞತೆಯಾಗಿ ಗ್ರಾಚುಟಿ ಕೊಡಲಾಗುತ್ತದೆ. ಈಗಿರುವ 1972ರ ಗ್ರಾಚ್ಯುಟಿ ಕಾಯ್ದೆ ಪ್ರಕಾರ ಉದ್ಯೋಗಿಯು ಒಂದು ಕಂಪನಿಯಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ್ದರೆ ಗ್ರಾಚ್ಯುಟಿಗೆ ಅರ್ಹರಾಗಿರುತ್ತಾರೆ. ಉದ್ಯೋಗಿಯು ನಿವೃತ್ತಿಯಾದಾಗ ಇದನ್ನು ಕೊಡಲಾಗುತ್ತದೆ. ಅಕಸ್ಮಾತ್ 5 ಅಥವಾ ಇನ್ನೂ ಹೆಚ್ಚು ವರ್ಷ ಕೆಲಸ ಮಾಡಿ ಉದ್ಯೋಗ ತೊರೆದಾಗಲೂ ಗ್ರಾಚ್ಯುಟಿ ಕೊಡಲಾಗುತ್ತದೆ. ಅಪಘಾತ ಅಥವಾ ಅನಾರೋಗ್ಯದಿಂದ ಉದ್ಯೋಗಿಗೆ ದೈಹಿಕ ಊನವಾದಾಗಲೂ ಗ್ರಾಚುಟಿಯನ್ನು ಪಡೆಯಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ?

ನಿಮಗೆ ಎಷ್ಟು ಗ್ರಾಚ್ಯುಟಿ ಸಿಗುತ್ತೆ? ಇಲ್ಲಿದೆ ಕ್ಯಾಲ್ಕುಲೇಟರ್

ಗ್ರಾಚ್ಯುಟಿ ಲೆಕ್ಕಾಚಾರ ಹೇಗೆ?

ನಿಮ್ಮ ಸೇವಾವಧಿಯ ವರ್ಷಗಳು ಹಾಗೂ ನಿಮ್ಮ ಕೊನೆಯ ವೇತನದ ಬೇಸಿಕ್ ಸ್ಯಾಲರಿ ಎಷ್ಟಿದೆ ಎನ್ನುವುದರ ಮೇಲೆ ಗ್ರಾಚ್ಯುಟಿಯನ್ನು ಎಣಿಸಲಾಗುತ್ತದೆ. ಅದಕ್ಕೆಂದೇ ಒಂದು ಸೂತ್ರ ಇದೆ.

ಗ್ರಾಚುಟಿ = ಮೂಲವೇತನ x 15/26 x ಸೇವೆ ವರ್ಷಗಳು

ಇಲ್ಲಿ ಮೂಲವೇತನ ಎಂದರೆ ಬೇಸಿಕ್ ಸ್ಯಾಲರಿ ಹಾಗೂ ಡಿಎ ಇತ್ಯಾದಿ ಸೇರಿದ್ದಾಗಿದೆ. 15/26 ಎಂದರೆ ಒಂದು ತಿಂಗಳ 26 ಕೆಲಸದ ದಿನಗಳಲ್ಲಿ 15 ದಿನಗಳ ವೇತನ ಪರಿಗಣಿಸಲಾಗುತ್ತದೆ. ಸೇವೆ ವರ್ಷಗಳ ವಿಚಾರಕ್ಕೆ ಬಂದರೆ ನೀವು 5 ವರ್ಷ 6 ತಿಂಗಳು ಕೆಲಸ ಮಾಡಿದರೆ ಅದನ್ನು 6 ವರ್ಷಕ್ಕೆ ರೌಂಡಾಫ್ ಮಾಡಲಾಗುತ್ತದೆ.

ಈಗ 30,000 ರೂ. ಮೂಲ ವೇತನದಲ್ಲಿ 5 ವರ್ಷಗಳು, 10 ವರ್ಷಗಳು ಮತ್ತು 7 ವರ್ಷಗಳವರೆಗೆ ಎಷ್ಟು ಗ್ರಾಚ್ಯುಟಿ ಸಿಗುತ್ತದೆ ಎಂಬುದನ್ನು ಹೀಗೆ ಗಣಿಸಬಹುದು.

ಇದನ್ನೂ ಓದಿ: 1 ಲಕ್ಷ ರೂನಿಂದ 2.71 ಕೋಟಿ ರೂ; ಭಾರತದ ಅತ್ಯಂತ ಹಳೆಯ ಫಂಡ್​ನಿಂದ ಭರ್ಜರಿ ಆದಾಯ

ಮೊದಲನೆಯದಾಗಿ, 5 ವರ್ಷಗಳ ಗ್ರಾಚ್ಯುಟಿ ಲೆಕ್ಕ ಹಾಕೋಣ. ಮೂಲ ವೇತನ ರೂ. 30 ಸಾವಿರ ರೂ. 30000x(15/26)x5) = 86,538.46 ರೂ ಆಗುತ್ತದೆ.

7 ವರ್ಷಗಳ ಸೇವೆಗೆ, ಗ್ರಾಚ್ಯುಟಿ ರೂ. 1,21,153.84 ಆಗುತ್ತದೆ. ನೀವು 15 ವರ್ಷಗಳ ಕಾಲ ಕೆಲಸ ಮಾಡಿ ಕೊನೆಯ ಸಂಬಳ ರೂ. 30,000 ಆಗಿದ್ದರೆ, ಗ್ರಾಚ್ಯುಟಿ ಈ ಕೆಳಗಿನಂತಿರುತ್ತದೆ: ಗ್ರಾಚ್ಯುಟಿ = (15 x 30,000 x 15) / 26 = ರೂ. 2,59,615

ಗರಿಷ್ಠ ಗ್ರಾಚ್ಯುಟಿ ಮೊತ್ತ 20 ಲಕ್ಷ ರೂಗಿಂತ ಹೆಚ್ಚು ಇದ್ದರೆ ಅದನ್ನು ಎಕ್ಸ್-ಗ್ರೇಷಿಯಾ ಎಂದು ಪರಿಗಣಿಸಲಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್

Source link

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.

Source link

ಬೆಂಗಳೂರಿನ ಬಡ ರೋಗಿಗಳಿಗೆ ಸಿಹಿಸುದ್ದಿ: ಕೆ ಸಿ ಜನರಲ್ ಆಸ್ಪತ್ರೆಯನ್ನು ಹೈಟೆಕ್ ಮಾಡಲು ಮುಂದಾದ ಆರೋಗ್ಯ ಇಲಾಖೆ – Kannada News | KCG Hospital Malleswaram Boosts Patient Care with 50 Bed Trauma Unit and DNB Block

ಬೆಂಗಳೂರು, ಜ.21: ಬೆಂಗಳೂರು ಜನರಿಗೆ ಒಂದು ಸಿಹಿಸುದ್ದಿ ಇದೆ. ವಿಕ್ಟೋರಿಯಾ ಬೌರಿಂಗ್ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊವಿಡ್ ಬಳಿಕ ವಿಕ್ಟೋರಿಯಾದಲ್ಲಿ ನಿರಂತರವಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಒತ್ತಡ ಹೆಚ್ಚಾಗಿದೆ . ಇದೀಗ ಈ ಒತ್ತಡವನ್ನು ಕಡಿಮೆ ಮಾಡಲು, ಮಲ್ಲೇಶ್ವರಂನಲ್ಲಿ ಪ್ರತಿಷ್ಠಿತ ಕೆ ಸಿ ಜನರಲ್ ಆಸ್ಪತ್ರೆಯನ್ನು (K C General Hospital) ಹೈಟೆಕ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಕೆಸಿಜಿ ಆಸ್ಪತ್ರೆಯಲ್ಲಿ ಮುಂದಿನ ತಿಂಗಳಿನಿಂದ 50 ಬೆಡ್ ವ್ಯವಸ್ಥೆಯ ಟ್ರಾಮಾ ಎಮೆರ್ಜೆನ್ಸಿ ಕೇರ್ ಹಾಗೂ ಬ್ಲಡ್ ಬ್ಯಾಂಕ್ ಡಿಎನ್ ಬಿ ಬ್ಲಾಕ್ ಶುರು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಈ ನಿರ್ಧಾರದಿಂದ ಬೆಂಗಳೂರಿನಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಬಡ ರೋಗಿಗಳಿಗೆ ಇದು ತುಂಬಾ ಪ್ರಯೋಜನ ನೀಡಿಲಿದೆ. ಟ್ರಾಮಾ ಕೇರ್ ಸೆಂಟರ್ ತುರ್ತು ಎಮೆರ್ಜೆನ್ಸಿ ಚಿಕಿತ್ಸೆ ಘಟಕದ ಕಟ್ಟಡ ಕೆಲಸ ಶೇ 80% ಪೂರ್ಣಗೊಂಡಿದ್ದು, ಮುಂದಿನ ತಿಂಗಳ ಸೇವೆಗೆ ಲಭ್ಯವಾಗಲಿದೆ. 50ಬೆಡ್ ಸೌಲಭ್ಯದ ಟ್ರಾಮಾ ಕೇರ್ ಸೆಂಟರ್ 14HDU ಬೆಡ್ 2 OT ಸೌಲಭ್ಯ 15 ಐಸಿಯು ಹಾಗೂ ಎಚ್​​​​ಡಿಯೂ ಬೆಡ್ ವ್ಯವಸ್ಥೆಗಳು ಇರಲಿದೆ ಎಂದು ಹೇಳಲಾಗಿದೆ.

ಇದರ ಜತೆಗೆ ಬ್ಲಡ್ ಬ್ಯಾಂಕ್, ಡಿಎನ್ ಬಿ ಜೊತೆ ಟ್ರಾಮಾ ಕೇರ್ ಸೆಂಟರ್ ಬಹಳಷ್ಟು ಜನರಿಗೆ ಇದು ಸಹಾಯವಾಗಲಿದೆ. ಜೊತೆಗೆ ಕೆಸಿಜಿ ಆವರಣದಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆ ಡಿಸೆಂಬರ್​ನಲ್ಲಿ ಲೋಕಾರ್ಪಣೆ ಸಿದ್ಧವಾಗುತ್ತಿದೆ. ಹೀಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಶೀಲನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಬ್ಬಂದಿ ಕೊರತೆ ಸರಿ ಮಾಡುತ್ತಿದ್ದೇವೆ. ಇನ್ನು ಟ್ರಾನ್ಸಫರ್ ತೊಂದರೆಯನ್ನು ಅನುಭವಿಸುತ್ತಿರುವ ವೈದ್ಯರನ್ನು ಗುತ್ತಿಗೆಯಲ್ಲಿ ತಗೆದುಕೊಳ್ಳಲು ಮುಂದಾಗಿವೆ. ಮುಂದಿನ ತಿಂಗಳ ಕೊನೆಯಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಇದಕ್ಕೆ ಸಿಎಂ ಚಾಲನೆ ನೀಡಲಿದ್ದು, ಜನರ ಸೇವೆಗೆ ಸಾಹಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​​ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ

ರಾಜಧಾನಿಯಲ್ಲಿ ವರ್ಷದಿಂದ ವರ್ಷಕ್ಕೆ ನಾಯಿ ಕಡಿತ ಹಾಗೂ ಹಾವು ಕಡಿತ ಹೆಚ್ಚಾಗಿದ್ದು ಈ ಕಾರಣದಿಂದ ಪಿಎಚ್ ಸಿ ಸೆಂಟರ್​​​ಗಳಲ್ಲಿ ಆಂಟಿ-ರೇಬೀಸ್ , ಆ್ಯಂಟಿ ಸ್ನೇಕ್ ವೆನಮ್ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆ ಬೆಂಗಳೂರಿನ ಎಲ್ಲ ಪಿಎಚ್ ಸಿ ಸೆಂಟರ್​​​​ಗಳಲ್ಲಿ ಔಷಧ ಶೇಖರಣೆಗೆಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ ಆಂಟಿ-ರೇಬೀಸ್ ಚುಚ್ಚುಮದ್ದು ಇರಲೇಬೇಕು ಎಂದು ಸೂಚನೆ ನೀಡಿದ್ದೇನೆ. ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಅನಕೂಲಕ್ಕೆ ತುರ್ತು ಚಿಕಿತ್ಸೆ ನೀಡುವ ಉದ್ದೇಶದಿಂದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹೈಟೇಕ್ ಟ್ರಾಮಾ ಕೇರ್ ಸೆಂಟರ್, ಬ್ಲಡ್ ಬ್ಯಾಂಕ್ ಸೇರಿದ್ದಂತೆ, ಬೇರೆ ಬೇರೆ ಚಿಕಿತ್ಸೆಗೆ ಅವಕಾಶ ನೀಡುವ ಗುರಿಯನ್ನು ಹೊಂದಿದ್ದು, ಈ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದೇವೆ. ಮುಂದಿನ ತಿಂಗಳ ಕೊನೆಯಲ್ಲಿ ಜನರ ಸೇವೆಗೆ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ – Kannada News | Ambigara Chowdaiya Jayantotsava: Massive Procession and Floral Tribute Held in Kalaburagi

ಕಲಬುರಗಿ, ಜ.21: ಜಿಲ್ಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಇದು ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವವಾಗಿದ್ದು, ಈ ಸಂದರ್ಭದಲ್ಲಿ ಕಲಬುರಗಿ ನಗರವು ವಿಶೇಷ ಮೆರವಣಿಗೆ ಮತ್ತು ಕಾರ್ಯಕ್ರಮಗಳಿಗೆ ಸಾಕ್ಷಿಯಾಯಿತು. ಜಯಂತ್ಯೋತ್ಸವದ ಅಂಗವಾಗಿ, ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೂ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಮೆರವಣಿಗೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಕೊಂಡೊಯ್ಯಲಾಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯ ಶೋಭೆಯನ್ನು ಹೆಚ್ಚಿಸಿದವು. ಒಂಟೆಗಳು, ಕುದುರೆಗಳು, ಹಾಗೆಯೇ ಪುರುಷ ಮತ್ತು ಮಹಿಳಾ ಕಲಾ ತಂಡಗಳು ತಮ್ಮ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ, ಜನರ ಗಮನ ಸೆಳೆದವು. ಮೆರವಣಿಗೆ ಜಗತ್ ವೃತ್ತವನ್ನು ತಲುಪಿದ ನಂತರ, ಅಂಬಿಗರ ಚೌಡಯ್ಯನವರ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಭವ್ಯ ಪುಷ್ಪ ವೃಷ್ಟಿ ಮಾಡಲಾಯಿತು. ಈ ಅಪೂರ್ವ ಪುಷ್ಪ ವೃಷ್ಟಿಯು ಸಮಾರಂಭಕ್ಕೆ ಮತ್ತಷ್ಟು ಕಳೆ ತಂದಿತು. ಈ ಮೂಲಕ ನಿಜಶರಣ ಅಂಬಿಗರ ಚೌಡಯ್ಯನವರಿಗೆ ಗೌರವ ಸಲ್ಲಿಸಲಾಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link