Category Archives: Blog

Your blog category

ಭಾರತದ ಪರ ನಿಂತ 14 ಮಂಡಳಿಗಳು; ಬಾಂಗ್ಲಾದೇಶಕ್ಕೆ 24 ಗಂಟೆ ಗಡುವು ನೀಡಿದ ಐಸಿಸಿ – Kannada News | ICC Rejects Bangladesh’s T20 WC India Relocation Demand; Threatens Expulsion

ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಲು ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುವುದಿಲ್ಲ ಎಂಬ ಹೊಸ ಖ್ಯಾತೆ ತೆಗೆದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಇದೀಗ ಐಸಿಸಿ ಬಿಗ್ ಶಾಕ್ ನೀಡಿದೆ. ಭಾರತದ ಬದಲು ತನ್ನ ಪಂದ್ಯಗಳನ್ನು ಶ್ರೀಲಂಕಾಕ್ಕೆ ಬದಲಿಸಬೇಕು ಎಂಬ ಬಾಂಗ್ಲಾ ಮಂಡಳಿಯ ಮನವಿಯನ್ನು ಐಸಿಸಿ ನಿರಾಕರಿಸಿದೆ.

ಇದು ಮಾತ್ರವಲ್ಲದೆ ತನ್ನ ಅಂತಿಮ ನಿರ್ಧಾರವನ್ನು ತಿಳಿಸಲು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಇನ್ನೂ 24 ಗಂಟೆಗಳ ಕಾಲಾವಕಾಶ ನೀಡಿದೆ. ಒಂದು ವೇಳೆ ಬಾಂಗ್ಲಾ ಕ್ರಿಕೆಟ್ ಮಂಡಳಿ ತನ್ನ ನಿಲುವಿನಲ್ಲಿ ಮುಂದುವರಿದರೆ, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ನಿಂದ ಹೊರಹಾಕಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಐಸಿಸಿ ನೀಡಿದೆ.

ವಾಸ್ತವವಾಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಕೈಬಿಟ್ಟ ನಂತರ ಬಾಂಗ್ಲಾದೇಶ ಬಿಸಿಸಿಐ ವಿರುದ್ಧ ಕೆರಳಿದೆ. ಹೀಗಾಗಿ ಮೇಲೆ ಹೇಳಿದ ಬಾಂಗ್ಲಾದೇಶ ತನ್ನ ಪಂದ್ಯವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸುತ್ತಿದ್ದು, ಬಾಂಗ್ಲಾದೇಶ ತಂಡಕ್ಕೆ ಭಾರತದಲ್ಲಿ ಸುರಕ್ಷತೆ ಇಲ್ಲ ಆದ್ದರಿಂದ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಯನ್ನು ಕೇಳುತ್ತಿದೆ.

ಬಾಂಗ್ಲಾದೇಶ ಬೇಡಿಕೆಯಂತೆ ಸ್ಥಳವನ್ನು ಬದಲಾಯಿಸುವ ಕುರಿತು ಐಸಿಸಿ ಮತದಾನ ನಡೆಸಿತು. ಇದರಲ್ಲಿ ಬಾಂಗ್ಲಾದೇಶ ಮಂಡಳಿ 2-14 ಅಂತರದಿಂದ ಸೋಲನುಭವಿಸಿದೆ. ಮಂಡಳಿ ಮತ್ತು ಪಾಕಿಸ್ತಾನ ಮಾತ್ರ ಬಾಂಗ್ಲಾದೇಶದ ಪರವಾಗಿ ಮತ ಚಲಾಯಿಸಿದವು. ಉಳಿದ ತಂಡಗಳ ಮಂಡಳಿಗಳು ಭಾರತವನ್ನು ಬೆಂಬಲಿಸಿ ಮತ ಚಲಾಯಿಸಿದವು.

ಹೀಗಾಗಿ ಬಹುಮತದ ಪ್ರಕಾರ ಬಾಂಗ್ಲಾದೇಶ ಭಾರತದಲ್ಲಿ ತನ್ನ ಪಂದ್ಯಗಳನ್ನು ಆಡಲೇಬೇಕೆಂದು ಐಸಿಸಿ ಸೂಚಿಸಿದೆ. ಮಾತ್ರವಲ್ಲದೆ. ಐಸಿಸಿ ತನ್ನ ಸರ್ಕಾರವನ್ನು ಮನವೊಲಿಸಲು ಬಾಂಗ್ಲಾದೇಶ ಮಂಡಳಿಗೆ ಸ್ಪಷ್ಟವಾಗಿ ಸೂಚನೆ ನೀಡಿದೆ. ಹಾಗೆಯೇ ಬಾಂಗ್ಲಾದೇಶ ಭಾರತದಲ್ಲಿ ಆಡದಿದ್ದರೆ, ಬೇರೆ ತಂಡಕ್ಕೆ ಅವಕಾಶ ನೀಡುವುದಾಗಿಯೂ ತಿಳಿಸಿದೆ. ಒಂದು ವೇಳೆ ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದ ಹೊರಬಿದ್ದರೆ, ಸ್ಕಾಟ್ಲೆಂಡ್ ಅದರ ಸ್ಥಾನದಲ್ಲಿ ಆಡಲಿದೆ.

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಬಿದ್ದರೆ, ಅದು ಅಲ್ಲಿನ ಆಟಗಾರರಿಗೆ ಭಾರಿ ನಷ್ಟವನ್ನುಂಟು ಮಾಡಲಿದೆ. ಹಲವಾರು ಮಾಜಿ ಬಾಂಗ್ಲಾದೇಶ ಕ್ರಿಕೆಟಿಗರು ಇದನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಿದರೆ ನಾನು ಸುರಕ್ಷಿತವಾಗಿರುವುದಿಲ್ಲ ಎಂದು ಪ್ರಸ್ತುತ ಟಿ20 ನಾಯಕ ಲಿಟ್ಟನ್ ದಾಸ್ ಕೂಡ ಹೇಳಿದ್ದಾರೆ. ಪ್ರಸ್ತುತ ಬಾಂಗ್ಲಾದೇಶ ಆಟಗಾರರು ಸಹ ಟಿ20 ವಿಶ್ವಕಪ್‌ನಲ್ಲಿ ಆಡಲು ಬಯಸುತ್ತಿದ್ದು, ಈಗ ನಿರ್ಧಾರ ಬಾಂಗ್ಲಾದೇಶ ಸರ್ಕಾರದ ಮೇಲಿದೆ.

Published On – 7:33 pm, Wed, 21 January 26

Source link

Chanakya Niti: ಈ ಭಯವನ್ನು ತೆಗೆದುಹಾಕಿದರೆ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ – Kannada News | Chanakya Niti: Chanakya says that if you are afraid of these things, you will never be successful in life

ಯಶಸ್ಸನ್ನು (success) ಸಾಧಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಆದರೆ ಕೆಲವೊಂದು ತಪ್ಪುಗಳಿಂದ ಅನೇಕರಿಗೆ ತಾವು ಅಂದುಕೊಂಡ ಮಟ್ಟಿಗೆ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಜೊತೆಗೆ ತಾವು ಅಂದುಕೊಂಡ ಕೆಲಸವನ್ನು ಸಹ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದಕ್ಕೆ ನಮ್ಮಲ್ಲಿರುವ ಭಯವು ಸಹ ಒಂದು ಮುಖ್ಯ ಕಾರಣ. ಯಶಸ್ಸನ್ನು ಸಾಧಿಸಲು ಬಯಸುವವರು ಆ ಭಯವನ್ನು ತ್ಯಜಿಸಲೇಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಶಸ್ಸಿಗೆ ತೊಡಕಾಗುವ ಆ ಭಯ ಯಾವುವು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

ಯಶಸ್ಸು ಬಯಸುವವರು ಈ ನಾಲ್ಕು ವಿಷಯಗಳಿಗೆ ಹೆದರಬಾರದು:

ಸತ್ಯ ಹೇಳಲು ಭಯಪಡಬಾರದು: ಜನರು ತಮ್ಮ ತಪ್ಪುಗಳನ್ನು ಮರೆಮಾಡಲು ಸುಳ್ಳು ಹೇಳುತ್ತಾರೆ ಅಲ್ಲದೆ ತಪ್ಪುಗಳು ನಡೆದಾಗ ಅದರ ಬಗ್ಗೆ ಸತ್ಯ ಹೇಳಲು ಭಯಪಡುತ್ತಾರೆ. ಆದರೆ ಸತ್ಯ ಹೇಳಲು ಯಾವುದೇ ರೀತಿಯಲ್ಲೂ ಭಯಪಡಬಾರದು ಎನ್ನುತ್ತಾರೆ ಚಾಣಕ್ಯ. ಸತ್ಯ ಹೇಳುವುದು ಒಬ್ಬ ವ್ಯಕ್ತಿಯ ದೊಡ್ಡ ಶಕ್ತಿ. ಸತ್ಯ ಹೇಳುವುದರಿಂದ, ಒಬ್ಬ ವ್ಯಕ್ತಿಯು ಎಲ್ಲರ ವಿಶ್ವಾಸವನ್ನು ಗಳಿಸುತ್ತಾನೆ, ಸಮಾಜದಲ್ಲಿ ಉತ್ತಮ ಇಮೇಜ್ ಅನ್ನು ಸೃಷ್ಟಿಸುತ್ತಾನೆ ಮತ್ತು ಪ್ರಗತಿ ಸಾಧಿಸುತ್ತಾನೆ. ಹಾಗಾಗಿ ಸತ್ಯ ಹೇಳಲು ಹಿಂಜರಿಕೆ ಬೇಡ.

ಕಠಿಣ ಪರಿಶ್ರಮ ಪಡಲು ಭಯಬೇಡ: ಅನೇಕ ಜನರು ಕಠಿಣ ಪರಿಶ್ರಮ ಬೇಡ  ಸುಲಭವಾಗಿ ಯಶಸ್ಸು ಸಿಗಬೇಕೆಂದು ಬಯಸುತ್ತಾರೆ. ಕಠಿಣ ಪರಿಶ್ರಮವಿಲ್ಲದೆ, ಜೀವನದಲ್ಲಿ ಯಾವುದೇ ಗುರಿಯನ್ನು ಸಾಧಿಸಲಾಗುವುದಿಲ್ಲ. ಕಠಿಣ ಪರಿಶ್ರಮಕ್ಕೆ ಭಯಪಡಬಾರದು. ನೀವು ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ, ಕಷ್ಟಪಟ್ಟು ಕೆಲಸ ಮಾಡಿ. ಕಠಿಣ ಪರಿಶ್ರಮವು ವ್ಯಕ್ತಿಯನ್ನು ಬಲಪಡಿಸುತ್ತದೆ ಮತ್ತು ಆತನನ್ನು ಯಶಸ್ವಿಗೊಳಿಸುತ್ತದೆ.

ಇದನ್ನೂ ಓದಿ: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ತತ್ವಗಳನ್ನು ಪಾಲಿಸಿ

ಬದಲಾವಣೆಗಳಿಗೆ ಹೆದರಬಾರದು: ಒಬ್ಬ ವ್ಯಕ್ತಿಯು ಜೀವನದಲ್ಲಿ ಬದಲಾವಣೆಯನ್ನು ಸ್ವೀಕರಿಸಬೇಕು. ಬದಲಾವಣೆಗೆ ಹೆದರುವವರು ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಜೀವನದಲ್ಲಿ ಬರುವ ಬದಲಾವಣೆಗಳನ್ನು ಸ್ವೀಕರಿಸಿ. ಬದಲಾವಣೆಯೊಂದಿಗೆ ಹೊಸ ಜೀವನವನ್ನು ನಡೆಸಬೇಕು, ಆಗ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ ಎನ್ನುತ್ತಾರೆ ಚಾಣಕ್ಯ.

ಹೋರಾಟಗಳಿಗೆ ಭಯ ಬೇಡ: ಜೀವನವೇ ಒಂದು ಹೋರಾಟ ಇದ್ದಂತೆ. ಜೀವನದಲ್ಲಿ ಬರುವಂತಹ ಹೋರಾಟಗಳು ವ್ಯಕ್ತಿಯನ್ನು ಬಲಿಷ್ಠನನ್ನಾಗಿ ಮಾಡುತ್ತದೆ, ಆ ಹೋರಾಟಗಳು ತಾಳ್ಮೆ ಮತ್ತು ಜೀವ ಪಾಠವನ್ನು ಕಲಿಸಿಕೊಡುತ್ತದೆ.  ಜೀವನದಲ್ಲಿನ ಹೋರಾಟಗಳು ನಮಗೆ ಮುಂದುವರಿಯುವುದು ಹೇಗೆ ಎಂಬುದನ್ನು ಕಲಿಸುತ್ತವೆ ಎಂದಿದ್ದಾರೆ ಚಾಣಕ್ಯ. ಅದೇ ಜೀವನದಲ್ಲಿ ಎದುರಾಗುವ  ಹೋರಾಟಗಳಿಗೆ ಹೆದರುವವರು ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ – Kannada News | Bigg Boss Kannada 12: Rakshita Shetty receives a grand well come in Udupi

ಬಿಗ್​​ಬಾಸ್ (Bigg Boss) ಶೋನಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಭಾರಿ ಜನಪ್ರಿಯತೆಯಂತೂ ಕಟ್ಟಿಟ್ಟ ಬುತ್ತಿ. ಇದೀಗ ರಕ್ಷಿತಾ ಶೆಟ್ಟಿಗೂ ಇದರ ಅನುಭವ ಆಗುತ್ತಿದೆ. ಬಿಗ್​​ಬಾಸ್​​ಗೆ ಹೋಗುವ ಮುನ್ನ ಯೂಟ್ಯೂಬರ್ ಆಗಿದ್ದ ರಕ್ಷಿತಾ ಶೆಟ್ಟಿ ಈಗ ಸೆಲೆಬ್ರಿಟಿ ಆಗಿದ್ದಾರೆ. ಬಿಗ್​​ಬಾಸ್​ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗಿದೆ. ರಕ್ಷಿತಾ ಮೇಲೆ ಹೂವಿನ ಮಳೆ ಸುರಿಸಾಗಿದೆ. ಚಂಡೆ-ಮದ್ದಳೆಗಳನ್ನು ಭಾರಿಸುತ್ತಾ ಮೆರವಣಿಗೆಯನ್ನು ರಕ್ಷಿತಾರನ್ನು ಕರೆದುಕೊಂಡು ಬರಲಾಗಿದೆ. ರಕ್ಷಿತಾರನ್ನು ನೋಡಲು ನೂರಾರು ಮಂದಿ ರಸ್ತೆಗಳಲ್ಲಿ ಕಾದು ನಿಂತಿದ್ದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ – Kannada News | 19 Year Old Paramedical Student Zakiya Mulla Murdered, Body Found on Dharwad Outskirts

ಧಾರವಾಡ, (ಜನವರಿ 21): ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ (Dharwad) ಗಾಂಧಿ ಚೌಕ್​​​​​​ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್​​​​​ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ ಜನರೆಲ್ಲ ಬೆಚ್ಚಿ ಬಿದ್ದಿದ್ದಾರೆ.

ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಶವವಾಗಿ ಬಿದ್ದಿರುವ ಈ ಚೆಲುವೆ ಝಕಿಲಾ ಮುಲ್ಲಾ.. 21 ವರ್ಷ ವಯಸ್ಸು.. ಧಾರವಾಡದ ಗಾಂಧಿ ಚೌಕ್​​​​​​ನ ನಿವಾಸಿ ಆಗಿದ್ದ ಯುವತಿ, ಪ್ಯಾರಾಮೆಡಿಕಲ್ ಪೂರೈಸಿದ್ಳು. ನಿನ್ನೆ ಸಂಜೆ ಲ್ಯಾಬ್​​ಗಳಲ್ಲಿ ಕೆಲಸ ಹುಡುಕಲೆಂದು ಮನೆಯಿಂದ ಹೊರಟಿದ್ಳು. ಆದ್ರೆ ರಾತ್ರಿಯಾದ್ರೂ ಮನೆಗೆ ಬಂದಿರಲಿಲ್ಲ.. ಮನೆಯವ್ರು ಧಾರವಾಡ ಟೌನ್​​​ ಪೊಲೀಸರಿಗೆ ದೂರು ನೀಡಿದ್ರು. ಇಂದು ಬೆಳಗ್ಗೆ ಝಕಿಯಾ ಶವ ಪತ್ತೆ ಆಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್​​​​​ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಎದ್ದಿದೆ.

ಇದನ್ನೂ ನೋಡಿ: ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​?

ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಇನ್ನು ಈ ಬಗ್ಗೆ ಧಾರವಾಡ ಎಸ್ಪಿ ಗುಂಜನ್ ಆರ್ಯ ಪ್ರತಿಕ್ರಿಯಿಸಿದ್ದು, ಝಕಿಯಾ ಎನ್ನುವ ಯುವತಿಯ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರಹೋಗಿದ್ದಳು. ನಮಗೆ ಇಂದು ಮುಂಜಾನೆ ಶವ ಬಿದ್ದಿರುವ ಬಗ್ಗೆ ಮಾಹಿತಿ ಬಂದಿತ್ತು. ಕತ್ತು ಹಿಸುಕಿ ಸಾವಾಗಿದೆ ಎಂದು ಸದ್ಯ ನಮಗೆ ಮಾಹಿತಿ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದೇವೆ. ಸುಕೋ ಟೀಂ ಪರಿಶೀಲನೆ ನಡೆಸಿದ್ದು, ಮೆಡಿಕಲ್ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಕುಟುಂಬದವರಿಗೆ ನಿನ್ನೆ ರಾತ್ರಿ ಮೆಸೆಜ್ ಕೂಡಾ ಮಾಡಿದ್ದಾಳೆ. ಅದರ ಬಗ್ಗೆ ಕೂಡಾ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಧಾರವಾಡದ ಸಾಧನಕೇರಿಯ ಯುವಕನನ್ನ ಝಕಿಯಾ ಇಷ್ಟಪಟ್ಟಿದ್ದು, ಮದ್ವೆಗೂ ಮನೆಯವರು ಒಪ್ಪಿದ್ದರು. ಹೀಗಾಗಿ ಮುಂದಿನ ತಿಂಗಳು ನಿಶ್ಚಿತಾರ್ಥಕ್ಕೆ ಮಾಡಲು ತೀರ್ಮಾನಿಸಿದ್ದರು. ಆದ್ರೆ, ಇದೀಗ ಚೆಲುವೆಯ ಹತ್ಯೆಯಾಗಿದ್ದು, ಹತ್ತಾರು ಪ್ರಶ್ನೆ ಹುಟ್ಟುಹಾಕಿದೆ. ಪೊಲೀಸರು ಸದ್ಯ ಕೊಲೆಗಾರರ ಪತ್ತೆಗೆ ಮುಂದಾಗಿದ್ದಾರೆ. ಟೆಕ್ನಿಕಲ್ ಎವಿಡೆನ್ಸ್​​ಗಳ ಹಿಂದೆ ಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:00 pm, Wed, 21 January 26

Source link

ಗಿಲ್ಲಿ ಶ್ರೀಮಂತನಾ? ಬಡವನ? ಯಾರು ಏನು ಹೇಳಿದರು? – Kannada News | Criticism against Bigg Boss Winner Gilli what his friends saying

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ಮುಗಿದಿದ್ದು ನಿರೀಕ್ಷೆಯಂತೆ ಗಿಲ್ಲಿ ಗೆದ್ದಿದ್ದಾರೆ. 50 ಲಕ್ಷ ಬಹುಮಾನದ ಜೊತೆಗೆ ಇನ್ನೂ ಹಲವು ಉಡುಗೊರೆಗಳು, ಇತರೆ ಕೆಲವು ನಗದು ಬಹುಮಾನಗಳು ಸಹ ಗಿಲ್ಲಿಗೆ ದೊರೆತಿವೆ. ಆದರೆ ಗಿಲ್ಲಿ ಗೆದ್ದ ಬಳಿಕ ಗಿಲ್ಲಿಯ ಗೆಲುವಿನ ಬಗ್ಗೆ ಕೆಲವರು ಅಪಸ್ವರಗಳನ್ನು ಎತ್ತುತ್ತಿದ್ದಾರೆ. ಇದೇ ಸೀಸನ್​​ನ ಕೆಲವು ಸ್ಪರ್ಧಿಗಳು ಗಿಲ್ಲಿ ಗೆಲುವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಗಿಲ್ಲಿಗೆ ಆರಂಭದಿಂದಲೂ ಪ್ರಬಲ ಪೈಪೋಟಿ ಕೊಡುತ್ತಾ ಬಂದಿದ್ದ ಅಶ್ವಿನಿ ಅವರು, ಹೊರಗೆ ಬಂದ ಬಳಿಕ ಗಿಲ್ಲಿ ಸುಳ್ಳು ಹೇಳಿ ಆಟ ಆಡಿದ್ದಾನೆ, ನನಗೆ ಬಂದಿರುವ ಮಾಹಿತಿ ಪ್ರಕಾರ ಗಿಲ್ಲಿಗಿಂತಲೂ ನನಗೆ ಹೆಚ್ಚಿನ ಮತಗಳು ಬಂದಿವೆ ಎಂದೆಲ್ಲ ಹೇಳಿದ್ದಾರೆ. ಅಶ್ವಿನಿ ಮಾತ್ರವೇ ಅಲ್ಲದೆ ಇನ್ನೂ ಕೆಲವು ಸ್ಪರ್ಧಿಗಳು ಗಿಲ್ಲಿ ಬಗ್ಗೆ ಮಾತನಾಡಿದ್ದಾರೆ.

ಗಿಲ್ಲಿಯ ಹಿನ್ನೆಲೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಗಿಲ್ಲಿ ಬಡವ ಎಂದು ಹೇಳಿಕೊಂಡು ಮೋಸ ಮಾಡಿ ಗೆದ್ದಿದ್ದಾನೆ ಎಂಬರ್ಥದ ಮಾತುಗಳನ್ನು ಅಶ್ವಿನಿ ಗೌಡ ಅವರು ಆಡಿದ್ದಾರೆ. ಧ್ರುವಂತ್ ಸಹ ಈ ಬಗ್ಗೆ ಮಾತನಾಡಿದ್ದು, ‘ಗಿಲ್ಲಿ ತಾನು ಬಡವ ಎಂದು ಹೇಳಿಕೊಂಡಿಲ್ಲ ಆದರೆ ತೋರಿಸಿಕೊಂಡಿದ್ದಾರೆ. ಅವರು 24 ಲಕ್ಷ ರೂಪಾಯಿ ಬೆಲೆಯ ಕಾರಿನಲ್ಲಿ ಓಡಾಡುತ್ತಿದ್ದಾರೆ ಅವರನ್ನು ಬಡವ ಎನ್ನಲು ಆಗುತ್ತ’ ಎಂದು ಧ್ರುವಂತ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್

ಇದೇ ವಿಷಯವಾಗಿ ಮಾತನಾಡಿರುವ ಇದೇ ಸೀಸನ್​​ನ ಮತ್ತೊಬ್ಬ ಸ್ಪರ್ಧಿ ಅಭಿಷೇಕ್, ‘ಗಿಲ್ಲಿ ಬಡವನೋ ಶ್ರೀಮಂತನೋ ಅದು ಚರ್ಚೆಯ ವಿಷಯವೇ ಅಲ್ಲ. ಕೆಲವರು ಹೇಳುತ್ತಿದ್ದಾರೆ ಅವನ ಬಳಿ ಆ ಕಾರು ಇದೆ, ಈ ಕಾರು ಇದೆ ಎಂದೆಲ್ಲ. ಆದರೆ ಅದೆಲ್ಲ ವಿಷಯ ಅಲ್ಲ, ಆತ ಬಿಗ್​​ಬಾಸ್ ಮನೆಯಲ್ಲಿ ಸಿಂಪತಿ ಬಳಸಿ ಆಟ ಆಡಿಲ್ಲ, ಸಿಂಪತಿ ಬಳಸಿ ಗೆದ್ದು ಸಹ ಇಲ್ಲ. ಆತ ಒಳ್ಳೆಯ ಕಲಾವಿದ, ಒಬ್ಬಿಬ್ಬರನ್ನೇ ನಗಿಸುವುದು ಬಹಳ ಕಷ್ಟ ಹಾಗಿರುವಾಗ ಗಿಲ್ಲಿ ಇಡೀ ರಾಜ್ಯವನ್ನು ನಗಿಸಿದ್ದಾರೆ. ಅವನಿಗಾಗಿ ಜನ ಖುಷಿಯಿಂದ ಶೋ ನೋಡುತ್ತಿದ್ದರು. ನನಗಂತೂ ಅವನು ಗೆದ್ದಿದ್ದು ಬಹಳ ಖುಷಿ ಇದೆ. ಗಿಲ್ಲಿಗೆ ಒಳ್ಳೆಯದಾಗಲಿ’ ಎಂದಿದ್ದಾರೆ.

ಇನ್ನು ಇದೇ ಸೀಸನ್​​ಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಹೋಗಿದ್ದ ಸೂರಜ್ ಮಾತನಾಡಿ, ‘ಗಿಲ್ಲಿ ಬಡವನೊ, ಶ್ರೀಮಂತನೊ ಎಂಬ ವಿಷಯ ಚರ್ಚೆ ಆಗಲೇ ಬೇಕಿಲ್ಲ. ಅವನು ಪ್ರತಿಭಾವಂತ ಅದರ ಬಗ್ಗೆ ಚರ್ಚೆ ಆಗಬೇಕಿದೆ. ಈಗ ಶೋ ಮುಗಿದು ಹೋಗಿದೆ, ಗಿಲ್ಲಿ ಗೆದ್ದಿದ್ದು ಆಗಿದೆ, ಈಗ ಚರ್ಚೆ ಮಾಡುವುದು ಅನವಶ್ಯಕ’ ಎಂದು ಸೂರಜ್ ಹೇಳಿದ್ದಾರೆ. ಇನ್ನು ಕಾವ್ಯಾ ಸಹ ಇದೇ ರೀತಿಯ ಮಾತುಗಳನ್ನಾಡಿದ್ದು, ‘ಗಿಲ್ಲಿ ಇಡೀ ಶೋನಲ್ಲಿ ನಾನು ಬಡವ ಎಂದು ಒಮ್ಮೆ ಸಹ ಹೇಳಿಕೊಂಡಿಲ್ಲ, ಇಡೀ ಶೋನಲ್ಲಿ ತಮ್ಮ ಕಷ್ಟಗಳನ್ನು ಹೇಳಿಕೊಂಡು ಆತ ಸಿಂಪತಿ ಗಳಿಸಿಕೊಳ್ಳುವ ಪ್ರಯತ್ನ ಮಾಡಿಲ್ಲ, ಹಾಗಿದ್ದ ಮೇಲೆ ಅವನ ಹಿನ್ನೆಲೆ ಹೇಗಿದ್ದರೇನು, ಅವನು ತನ್ನ ಸ್ವಂತ ಪ್ರತಿಭೆಯಿಂದ ಮಾತ್ರವೇ ಗೆದ್ದಿದ್ದಾನೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು? – Kannada News | Karnataka Governor Rejects Joint Session Speech; Constitutional Crisis Expected

ಬೆಂಗಳೂರು, ಜನವರಿ 21: ನಾಳೆಯಿಂದ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ನಿಯಮದಂತೆ ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್​​ ಭಾಷಣ ಮಾಡಬೇಕು. ಆದರೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ಗವರ್ನರ್ ನಿರಾಕರಿಸಿರುವ ಹಿನ್ನೆಲೆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರು ಆರಂಭಿಸಬೇಕು. ಆದರೆ ಗವರ್ನರ್​​ ನಡೆ ಗಮನಿಸಿದೆ ನಾಳೆಯಿಂದ ವಿಶೇಷ ಅಧಿವೇಶನ ಆರಂಭವಾಗುವ ಸಾಧ್ಯತೆಯಿಲ್ಲ ಎನ್ನುವ ಮಾತುಗಳೀಗ ಕೇಳಿಬಂದಿವೆ. ಈ ನಡುವೆ ಲೋಕಭವನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ನಿಯೋಗ ಭೇಟಿ ನೀಡಿ ರಾಜ್ಯಪಾಲರಿಗೆ ಸಾಂವಿಧಾನಿಕ ಹುದ್ದೆ ಸ್ಥಾನಮಾನಗಳ ಬಗ್ಗೆ ಮಾಹಿತಿ ನೀಡಿದೆ.

ನಿಯಮಾವಳಿ ಹೇಳೋದೇನು?

ನಿಯಮಾವಳಿ ಪ್ರಕಾರ ರಾಜ್ಯಪಾಲರು ಸದನಕ್ಕೆ ಹಾಜರಾಗುವುದಿಲ್ಲ ಎಂದು ನಿರಾಕರಿಸಲು ಸಾಧ್ಯವಿಲ್ಲ. ಅವರ ಕಡ್ಡಾಯ ಕರ್ತವ್ಯಗಳಲ್ಲಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವುದೂ ಕೂಡ ಒಂದು. ಆರ್ಟಿಕಲ್​​ 176(1)ರ ಪ್ರಕಾರ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಬೇಕು. ಪ್ರತಿ ವರ್ಷದ ಮೊದಲ ಅಧಿವೇಶನ ಅಥವಾ ಹೊಸ ಸರ್ಕಾರ ರಚನೆಯಾದ ನಂತರದ ಮೊದಲ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ಕಡ್ಡಾಯ. ಭಾಷಣದ ವಿಷಯದ ಮೇಲೆ ರಾಜ್ಯಪಾಲರು ಸ್ವತಂತ್ರ ನಿರ್ಣಯ ಕೈಗೊಳ್ಳುವಂತಿಲ್ಲ. ರಾಜ್ಯಪಾಲರು ಹೀಗೆ ನಿರಾಕರಿಸಿದರೆ ಅದು ಸಾಂವಿಧಾನಿಕ ಬಿಕ್ಕಟ್ಟು. ಕಾನೂನು ಬಾಹಿರ ಎಂಬುದಕ್ಕಿಂತ ಹೆಚ್ಚಾಗಿ ಇದು ಸಾಂವಿಧಾನಿಕ ಕರ್ತವ್ಯದ ನಿರಾಕರಣೆ ಎನ್ನಲಾಗಿದೆ. ಇನ್ನು ​ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದ ಕರಡು ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ ರವಾನಿಸಲಾಗುತ್ತದೆ. ಡ್ರಾಫ್ಟ್​​ ಸ್ಪೀಚ್​​ನಲ್ಲಿ ರಾಜ್ಯಪಾಲರಿಗೆ ಸಮ್ಮತಿಯಿಲ್ಲದ ಅಂಶಗಳಿದ್ದರೆ ಅಥವಾ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ನಡೆದಿದೆ ಎಂದು ಅನಿಸಿದರೆ ಆಕ್ಷೇಪ ವ್ಯಕ್ತಪಡಿಸಬಹುದು. ಆದರೆ ರಾಜ್ಯಪಾಲರು ಸ್ವತಂತ್ರ ನಿರ್ಣಯ ಕೈಗೊಳ್ಳುವಂತಿಲ್ಲ.

ಇದನ್ನೂ ಓದಿ: ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ; ಕಾರಣ ಏನು?

ಸರ್ಕಾರದ ಮುಂದಿರುವ ಆಯ್ಕೆಗಳೇನು?

  • ಸಂವಿಧಾನದ 176ನೇ ವಿಧಿಯ ಪ್ರಕಾರ ರಾಜ್ಯಪಾಲರು ಕಡ್ಡಾಯವಾಗಿ ಭಾಷಣವನ್ನ ಓದಲೇಬೇಕೆಂಬ ವಾದ ಮುಂದಿಡುವುದು
  • ವೈಯಕ್ತಿಕ ಅಂಶಗಳನ್ನು ಓದಲು ಇಲ್ಲವೇ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇಲ್ಲ ಎಂದು ಪ್ರತಿಪಾದಿಸುವುದು
  • ಇದಕ್ಕೂ ಒಪ್ಪದೇ ಇದ್ದಲ್ಲಿ ರಾಜ್ಯಪಾಲರ ಮನವೊಲಿಕೆ ಯತ್ನ ನಡೆಸುವುದು
  • ಈ ವೇಳೆ ನರೇಗಾ ವಿಚಾರವನ್ನ ಭಾಷಣದಲ್ಲಿ ಕೈಬಿಡಬೇಕೆಂದು ರಾಜ್ಯಪಾಲರ ಪಟ್ಟು ಹಿಡಿಯುವ ಸಾಧ್ಯತೆ
  • ಆಗಲೂ ರಾಜ್ಯಪಾಲರ ಮಾತಿಗೆ ಒಪ್ಪದಿದ್ದಲ್ಲಿ ತುರ್ತು ಸಚಿವ ಸಂಪುಟ ಸಭೆ ಕರೆಯುವ ಸಾಧ್ಯತೆ
  • ಕೆಲ ಕಾಲ ವಿಶೇಷ ಅಧಿವೇಶನ ಮುಂದೂಡಿ ತುರ್ತು ಸಚಿವ ಸಂಪುಟ ಕರೆಯಲು ಅವಕಾಶ
  • ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಳ್ಳಲು ಅವಕಾಶ
  • ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳಿ ಎಂದು ಒತ್ತಾಯಿಸಿ ಕೇಂದ್ರಕ್ಕೆ ನಿರ್ಣಯ ಪಾಸ್ ಮಾಡುವ ಸಾಧ್ಯತೆ
  • ಜೊತೆಗೆ ರಾಜ್ಯಪಾಲರ ನಡೆ ವಿರೋಧಿಸಿ ರಾಷ್ಟ್ರಪತಿಗಳಿಗೆ ದೂರು ನೀಡಲು ಅವಕಾಶ
  • ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ನಡೆಸಬಹುದು

ಸ್ಪೀಕರ್​​, ಸಭಾಪತಿ ಅಭಿಪ್ರಾಯವೇನು?

ಸರ್ಕಾರ ಬರೆದುಕೊಟ್ಟ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ಸರ್ಕಾರ ಕೊಟ್ಟಿದ್ದೇ ಫೈನಲ್ ಆಗಿದ್ದು, ರಾಜ್ಯಪಾಲರು ತಮ್ಮದೇ ಲೈನ್ ಸೇರಿಸಲು ಕಟ್ ಮಾಡಲು ಬರಲ್ಲ. ಸರ್ಕಾರ ನೀಡಿದ ಭಾಷಣವನ್ನ ಓದೋದು ರಾಜ್ಯಪಾಲರ ಕರ್ತವ್ಯ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಮ್ಮ ರಾಜ್ಯಪಾಲರು ಪ್ರಬುದ್ಧರು, ಹಿರಿಯರು, ಸಂವಿಧಾನ, ನಿಯಮ ಎಲ್ಲ ಗೊತ್ತಿದೆ. ಅವರು ಸಂವಿಧಾನದ ಪ್ರಕಾರ ನಡೆಯುತ್ತಾರೆ ಅಂತಾ ನನಗೆ ನಂಬಿಕೆ ಇದೆ. ಸರ್ಕಾರ ಕೊಟ್ಟ ಭಾಷಣವನ್ನು ರಾಜ್ಯಪಾಲರು ಓದಬೇಕು ಅಂತಾ ಸಭಾಪತಿ ಹೊರಟ್ಟಿ ಹೇಳಿರೋದನ್ನ ನಾನು ಅನುಮೋದಿಸುತ್ತೇನೆ ಎಂದು ಸ್ಪೀಕರ್​​ ಖಾದರ್​​ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ, ಯಾವುದು ಗೊತ್ತಾ? – Kannada News | Republic Day 2025: Karnataka’s Innovative Tableau Highlights Agri Tech and Atmanirbhar Bharat

ದೆಹಲಿ, ಜ.21: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಈ ಹಿಂದೆಯೂ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಹಲವಾರು ಬಾರಿ ಅವಕಾಶಗಳು ಸಿಕ್ಕಿತು. ಇದೀಗ ಮತ್ತೊಮ್ಮೆ ಕರ್ನಾಟಕಕ್ಕೆ ಅವಕಾಶ ಸಿಕ್ಕಿದೆ. ಈ ಬಾರಿ ವಿಶೇಷ ಸ್ತಬ್ಧಚಿತ್ರಗಳನ್ನು ಕರ್ನಾಟಕ ನೀಡಿಲಿದೆ. ಇದಕ್ಕೂ ಮುನ್ನ ಇದರ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​ ನಡೆಯಲಿದೆ. ಈ ಬಾರಿ ಟ್ಯಾಬ್ಲೋ ಮಿಲೆಟ್ಸ್ ಟು ಮೈಕ್ರೋಚಿಪ್ ಪರಿಕಲ್ಪನೆಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆಯ ಬಗ್ಗೆ ಈ ಟ್ಯಾಬ್ಲೋದಲ್ಲಿ ಪ್ರದರ್ಶನ ಮಾಡಲಾಗುವುದು. ಇದರ ಜತೆಗೆ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಟ್ಯಾಬ್ಲೋದಲ್ಲಿ ಮಾಹಿತಿ ನೀಡಲಾಗುವುದು. ಈ ಮೂಲಕ ಆತ್ಮನಿರ್ಭರ ಭಾರತದ ಹಾದಿ ಸ್ವಾವಲಂಬನೆ ಬಗ್ಗೆ ಮಾಹಿತಿ ನೀಡಲಾಗುವುದು. ಇದು ರಾಜ್ಯಗಳಿಂದ ಪ್ರಾರಂಭಾಗಲಿದೆ ಎಂಬ ಉದ್ದೇಶವನ್ನು ಕೂಡ ಈ ಟ್ಯಾಬ್ಲೋದಲ್ಲಿ ತಿಳಿಸಲಾಗುವುದು. ಆತ್ಮನಿರ್ಭರ ಭಾರತಕ್ಕೆ ಕರ್ನಾಟಕದ ಕೊಡುಗೆ ಏನು ಎಂಬ ಬಗ್ಗೆ ಇಲ್ಲಿ ತಿಳಸಲಾಗುವುದು. ಕರ್ನಾಟಕದ ವಿಶಿಷ್ಟ ಕಲೆಗಳಾದ ಯಕ್ಷಗಾನ ಅಥವಾ ಕಂಸಾಳೆ ನೃತ್ಯದ ಲೋಗೋಗಳನ್ನು ಸ್ತಬ್ಧಚಿತ್ರದ ವಿವಿಧ ಭಾಗಗಳಲ್ಲಿ ಅಳವಡಿಸಲಾಗುವುದು.

ಇದನ್ನೂ ಓದಿ: ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ?

ಖ್ಯಾತ ಕಲಾ ನಿರ್ದೇಶಕರು ಮತ್ತು ರಾಜ್ಯದ ಹಿರಿಯ ಕಲಾವಿದರು ಈ ಸ್ತಬ್ಧಚಿತ್ರದ ವಿನ್ಯಾಸ ಮಾಡಿದ್ದಾರೆ. ಇದರ ಜತೆಗೆ ಈ ಸ್ತಬ್ಧಚಿತ್ರಕ್ಕೆ ಹಿನ್ನಲೆ ಸಂಗೀತವಾಗಿ ಕರ್ನಾಟಕದ ಜನಪದ ಶೈಲಿಯ ಸಂಗೀತ ಮತ್ತು ನಾಡಗೀತೆಯ ಧಾಟಿಯನ್ನು ಬಳಸಲಾಗುತ್ತದೆ. ಕಳೆದ ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೊತ್ಸವ ಪರೇಡ್‌ನಲ್ಲಿ ಐತಿಹಾಸಿಕ ನಗರವಾದ ಲಕ್ಕುಂಡಿಯ ವೈಶಿಷ್ಟ್ಯಪೂರ್ಣ ಹಾಗೂ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರ ಗಮನ ಸೆಳೆದಿತ್ತು. ಕರ್ನಾಟಕವು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸತತವಾಗಿ ಭಾಗವಹಿಸುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. 2023 ರಲ್ಲಿ ‘ನಾರಿ ಶಕ್ತಿ’ ಅಡಿಯಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿತ್ತು. 2024ರಲ್ಲಿ ‘ಮೈಸೂರು ಪೇಟ’ ಮತ್ತು ಸಾಂಸ್ಕೃತಿಕ ಪರಂಪರೆಯ ಸ್ತಬ್ಧಚಿತ್ರ ಪ್ರದರ್ಶಿಸಲಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಟಾಸ್ ಸೋತ ಭಾರತ, ಕಿಶನ್​ಗೆ ಅವಕಾಶ; ಹೀಗಿದೆ ಪ್ಲೇಯಿಂಗ್ 11 – Kannada News | Ind vs NZ 1st T20: Head to Head, toss and Playing XI updates

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಏಕದಿನ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಮಾತ್ರವಲ್ಲದೆ 2026 ರ ಟಿ20 ವಿಶ್ವಕಪ್‌ಗೆ (2026 T20 World Cup) ಸಿದ್ಧತೆ ನಡೆಸುವತ್ತಲೂ ತನ್ನ ಗಮನಹರಿಸಲಿದೆ. ಟೀಂ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ, ಮಿಚೆಲ್ ಸ್ಯಾಂಟ್ನರ್ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಟಾಸ್ ಸೋತ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್ ನಾವು ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್‌ ಮಾಡುತ್ತಿದ್ದೇವು. ಏಕೆಂದರೆ ಕಳೆದೆರಡು ದಿನಗಳಿಂದ ನಾವಿಲ್ಲಿ ಅಭ್ಯಾಸ ನಡೆಸಿದ್ದು, ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗಲಿದೆ ಎಂದಿದ್ದಾರೆ. ಇನ್ನು ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊದರ ಬಳಗವೂ ಹೊರಬಿದ್ದಿದೆ.

ಹೆಡ್ ಟು ಹೆಡ್ ದಾಖಲೆ

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇದುವರೆಗೆ ಒಟ್ಟು 25 ಟಿ20 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ, ಟೀಂ ಇಂಡಿಯಾ 14 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 10 ಪಂದ್ಯಗಳನ್ನು ಗೆದ್ದಿದೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. 11 ಟಿ20 ಪಂದ್ಯಗಳಲ್ಲಿ ಏಳರಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿರುವ ಟೀಂ ಇಂಡಿಯಾ ಭಾರತದಲ್ಲಿಯೂ ಮೇಲುಗೈ ಸಾಧಿಸಿದೆ. ಮತ್ತೊಂದೆಡೆ, ಕಿವೀಸ್ ಭಾರತದಲ್ಲಿ ಕೇವಲ ನಾಲ್ಕು ಟಿ20 ಪಂದ್ಯಗಳನ್ನು ಗೆದ್ದಿದೆ.

14 ವರ್ಷಗಳ ಭಾರತದ ಪ್ರಾಬಲ್ಯ

ಕಳೆದ 14 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ ಭಾರತದ ವಿರುದ್ಧ ಟಿ20 ಸರಣಿಯನ್ನು ಗೆದ್ದಿಲ್ಲ. 2012 ರಲ್ಲಿ, ನ್ಯೂಜಿಲೆಂಡ್ ಭಾರತದ ವಿರುದ್ಧ ತವರಿನಲ್ಲಿ ತನ್ನ ಏಕೈಕ ಟಿ20 ಸರಣಿಯನ್ನು ಗೆದ್ದಿತು. ಆ ಸಮಯದಲ್ಲಿ ಭಾರತ 0-1 ಅಂತರದಲ್ಲಿ ಸರಣಿ ಸೋತಿತ್ತು.

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಟಿಮ್ ರಾಬಿನ್ಸನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಇಶ್ ಸೋಧಿ ಮತ್ತು ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:41 pm, Wed, 21 January 26

Source link

ಡಾಲರ್ ಎದುರು ರುಪಾಯಿ ಮೌಲ್ಯ 91.70ಕ್ಕೆ ಕುಸಿತ; ಇದೇ ಟ್ರೆಂಡ್ ಇದ್ದರೆ 93ಕ್ಕೆ ಇಳಿಯಬಹುದು ಎಂದ ತಜ್ಞರು – Kannada News | Rupee fell to new low of 91.70 against Dollar on Jan 21st

ನವದೆಹಲಿ, ಜನವರಿ 21: ಭಾರತದ ರುಪಾಯಿ ಕರೆನ್ಸಿಯ ದುರ್ಬಲ ಪ್ರದರ್ಶನ (Dollar vs Rupee) ಮುಂದುವರಿದಿದೆ. ಬೇರೆ ಬೇರೆ ಕಾರಣಗಳಿಗೆ ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ಮುಂದುವರಿದಿದೆ. ನಿನ್ನೆ 90.98 ಇದ್ದ ರುಪಾಯಿ ಮೌಲ್ಯ ಇವತ್ತು 91 ದಾಟಿ ಹೋಗಿದೆ. ಬುಧವಾರ ಒಂದು ಹಂತದಲ್ಲಿ 76 ಪೈಸೆ ಕುಸಿತಗೊಂಡು 91.74ಕ್ಕೆ ಹೋಗಿದ್ದ ರುಪಾಯಿ, ಅಂತಿಮವಾಗಿ 91.70ಗೆ ನಿಂತಿದೆ. ಇದು ಡಾಲರ್ ಎದುರು ರುಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಎನಿಸಿದೆ.

ಡಾಲರ್ ಎದುರು ರುಪಾಯಿ ದುರ್ಬಲ ಪ್ರದರ್ಶನಕ್ಕೆ ಕಾರಣಗಳಿವು..

ವಿದೇಶೀ ಹೂಡಿಕೆಗಳು ಹೊರಹೋಗುವುದು ಮುಂದುವರಿಯುತ್ತಲೇ ಇದೆ; ಆಮದು ಅವಶ್ಯಕತೆ ಹೆಚ್ಚುತ್ತಿದೆ; ಡಾಲರ್ ಕರೆನ್ಸಿ ಪ್ರಬಲಗೊಳ್ಳುತ್ತಿದೆ. ರುಪಾಯಿ ಮೌಲ್ಯ ಕುಸಿಯಲು ಕಾರಣವಾಗಿರುವ ಅಂಶಗಳಲ್ಲಿ ಈ ಮೂರು ಇವೆ. ಅಮೆರಿಕದ ಟ್ಯಾರಿಫ್ ಬೆದರಿಕೆಯೂ ಹೂಡಿಕೆಗಳ ಹೊರಹರಿವಿಗೆ ಕಾರಣವಾಗಿರಬಹುದು.

ಡಾಲರ್ ಎದುರು ರುಪಾಯಿ ಕರೆನ್ಸಿ ಮೌಲ್ಯ ಡಿಸೆಂಬರ್​ನಲ್ಲಿ ಕನಿಷ್ಠ ಮಟ್ಟಕ್ಕೆ ಹೋಗಿತ್ತು. ಜನವರಿಯಲ್ಲಿ ಚೇತರಿಸಿಕೊಂಡಿತ್ತು. ಆದರೆ, ಕಳೆದ ಐದಾರು ಸೆಷನ್​ಗಳಿಂದ ರುಪಾಯಿ ಸತತವಾಗಿ ಹಿನ್ನಡೆ ಕಾಣುತ್ತಿದೆ.

ಇದನ್ನೂ ಓದಿ: ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ?

ಡಾಲರ್ ಎದುರು 93ಕ್ಕೆ ಕುಸಿಯುತ್ತಾ ರುಪಾಯಿ?

ಈಗಿರುವ ಒತ್ತಡಗಳು ಹೀಗೇ ಮುಂದುವರಿದಲ್ಲಿ ರುಪಾಯಿ ಮೌಲ್ಯವು 92.5ರಿಂದ 93ರವರೆಗೆ ಕುಸಿಯಬಹುದು ಎಂದು ಎಎನ್​ಝಡ್ ರಿಸರ್ಚ್​ನ ಧೀರಜ್ ನಿಮ್ ಹೇಳುತ್ತಾರೆ. ಆದರೆ, ಜಿಡಿಪಿ ಉತ್ತಮವಾಗಿ ವೃದ್ಧಿಸಿದರೆ, ಕಾರ್ಪೊರೇಟ್ ಗಳಿಕೆಗಳು ಉತ್ತಮವಾಗಿದ್ದರೆ, ಎಫ್​ಡಿಐ ಒಳಹರಿವು ಹೆಚ್ಚಿದರೆ ರುಪಾಯಿ ಕರೆನ್ಸಿ ಮತ್ತೆ ಬಲಗೊಳ್ಳಬಹುದು ಎನ್ನುವುದು ಇವರ ಅನಿಸಿಕೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್ – Kannada News | Chinnaswamy IPL Doubt: RCB Hesitates, KCA Promises Cricket Return to Bengaluru

ಚಿನ್ನಸ್ವಾಮಿ ಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆದು ಹತ್ತಿರ ಹತ್ತಿರ ವರ್ಷವಾಗುತ್ತಾ ಬರುತ್ತಿದೆ. ಆರ್​ಸಿಬಿ (RCB) ವಿಜಯೋತ್ಸವದ ಮೆರವಣಿಗೆಯಲ್ಲಿ ಆದ ಅವಘಡದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಆದರೆ ವೆಂಕಟೇಶ್ ಪ್ರಸಾದ್ ಕೆಎಸ್​ಸಿಎ ಅಧ್ಯಕ್ಷ ಸ್ಥಾನಕ್ಕೇರಿದ ಬಳಿಕ ಚಿನ್ನಸ್ವಾಮಿಗೆ ಕ್ರಿಕೆಟ್ ಮರಳಿ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಮುಂಬರುವ ಐಪಿಎಲ್​ (IPL) ಪಂದ್ಯಾವಳಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬಹುದು ಎಂದು ಆಸೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇದುವರೆಗೆ ಸಿಹಿ ಸುದ್ದಿ ಸಿಕ್ಕಿಲ್ಲ. ಇದೆಲ್ಲದರ ನಡುವೆ ಇಂದು ಕೆಎಸ್​ಸಿಎಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಚಿನ್ನಸ್ವಾಮಿಗೆ ಕ್ರಿಕೆಟ್ ಪಂದ್ಯಗಳನ್ನು ಮರಳಿ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸರ್ಕಾರ ಕೂಡ ನಮ್ಮ ಜೊತೆಗಿದೆ. ಆದರೆ ಆರ್​ಸಿಬಿ ಯಾಕೋ ಬೆಂಗಳೂರಿನಲ್ಲಿ ಪಂದ್ಯಗಳನ್ನು ನಡೆಸಲು ಅಷ್ಟು ಒಲವು ತೋರಿಸುತ್ತಿಲ್ಲ ಎಂದಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಅನುಮಾನ ಎಂದು ತೋರುತ್ತಿದೆ.

ಆರ್​ಸಿಬಿ ಒಲವು ತೋರಿಸುತ್ತಿಲ್ಲ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್, ‘ಬೆಂಗಳೂರಿನಲ್ಲಿ ಮತ್ತೆ ಐಪಿಎಲ್​ ಪಂದ್ಯ ಆಡಿಸಲು ಸಿದ್ಧರಿದ್ದೇವೆ. ಆದ್ರೆ ಆರ್​ಸಿಬಿ ಮ್ಯಾನೇಜ್​ಮೆಂಟ್​ ಅಷ್ಟು ಒಲವು ತೋರಿಸುತ್ತಿಲ್ಲ. ಹೀಗಾಗಿ ಇಲ್ಲಿನ ಕ್ರಿಕೆಟ್ ಅಭಿಮಾನಿಗಳಿಗಾಗಿ ನೀವೂ ಇಲ್ಲಿ ಆಡಬೇಕು ಎಂದು ಆರ್​ಸಿಬಿ ಮ್ಯಾನೇಜ್​ಮೆಂಟ್ ಬಳಿ ಮನವಿ ಮಾಡುತ್ತಿದ್ದೇವೆ. ಅಲ್ಲದೆ ನಿಮಗೆ ಏನೇ ಸಂಶಯಗಳಿದ್ರು ಸರ್ಕಾರದ ಜೊತೆ ಮಾತನಾಡಿ ಎಂಬ ಸಲಹೆಯನ್ನು ನೀಡಿದ್ದೇವೆ. ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ ತನ್ನ ಪಂದ್ಯಗಳನ್ನು ಆಡಬೇಕು ಅನ್ನೋದು ನಮ್ಮ ಆಶಯ.

‘ಆದಷ್ಟು ಬೇಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜಿಸುತ್ತೇವೆ. ಅಂತಾರಾಷ್ಟ್ರೀಯ, ಐಪಿಎಲ್ ಪಂದ್ಯಗಳನ್ನು ಮತ್ತೆ ಬೆಂಗಳೂರಿಗೆ ತರುತ್ತೇವೆ. ಕರ್ನಾಟಕ ಸರ್ಕಾರ ನಮ್ಮ ಜೊತೆಗಿದೆ. ನಾವೂ ಸರ್ಕಾರದ ಇಲಾಖೆಗಳಿಗೆ ಮನವೊಲಿಸುತ್ತೇವೆ. ಜಿಬಿಎ, ಬೆಸ್ಕಾಂ, BWSSB, ಪೊಲೀಸ್ ಎಲ್ಲರ ವಿಶ್ವಾಸ ಗಿಟ್ಟಿಸುವ ಭರವಸೆ ಇದೆ. ಎಲ್ಲವನ್ನು ಕೂಡಲೇ ಮಾಡುವುದು ಅಷ್ಟು ಸುಲಭವಲ್ಲ. ಆದ್ರೆ ನಾವು ಮ್ಯಾನೇಜ್ ಮಾಡುತ್ತೇವೆ. ಆ ಕೆಲಸವನ್ನು ನಮ್ಮ ಕಮಿಟಿ ಮಾಡಲಿದೆ. ನಾವು ಕ್ರಿಕೆಟ್ ಅಭಿಮಾನಿಗಳಿಗೆ ಮಾತು ಕೊಡುತ್ತಿದ್ದೇವೆ. ಮತ್ತೇ ಚಿನ್ನಸ್ವಾಮಿ ಯಲ್ಲಿ ಪದ್ಯಗಳನ್ನು ಆದಷ್ಟು ಬೇಗ ಆಯೋಜಿಸುತ್ತೇವೆ ಎಂದಿದ್ದಾರೆ.

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಗೃಹ ಇಲಾಖೆ ಗ್ರೀನ್‌ಸಿಗ್ನಲ್‌: ತವರಿಗೆ ಮರಳುತ್ತಾ ಆರ್​ಸಿಬಿ?

ಅವರೇ ಉತ್ತರ ಕೊಡಬೇಕು

ಇನ್ನು ಕಾಲ್ತುಳಿತ ಪ್ರಕರಣದಲ್ಲಿ ಆರ್​ಸಿಬಿಯನ್ನು ಟಾರ್ಗೆಟ್ ಮಾಡಿದ್ದಕ್ಕೆ, ಆಡಳಿತ ಮಂಡಳಿ ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ನಡೆಸಲು ಹಿಂಜರಿಕೆ ಮಾಡುತ್ತಿದ್ದೇಯಾ ಎಂಬ ಪ್ರಶ್ನೆಗೆ ಉತ್ತರಿಸಿದ ವೆಂಕಟೇಶ ಪ್ರಸಾದ್,‘ ಇರಬಹುದೇನೋ ಆದರೆ ಅವರೇ ಉತ್ತರ ಕೊಡಬೇಕು. ಆದರೆ ನಾವು ಗೇಟ್​ಗಳು, ಸ್ಟ್ಯಾಂಡ್​ಗಳ ದುರಸ್ತಿ ಮಾಡಿದ್ದೇವೆ. ಈ ಮೂಲಕ ಫೈರ್ ಇಂಜಿನ್ ಒಳಗೆ ಬರಲು ಅನುಕೂಲ ಆಗುತ್ತೆ. ಹಾಗೇ ಗೇಟ್ ಆರು ಮೀಟರ್ ಅಗಲ ಮಾಡುತ್ತಿದ್ದೆವೆ. ಗೋಡೆಗಳನ್ನು ದುರಸ್ತಿ ಮಾಡುತ್ತಿದ್ದೇವೆ. ಅಗ್ನಿ ಶಾಮಕ ಕಾಮಗಾರಿ ಈಗಾಗಲೇ ಮುಗಿದಿದೆ. ಇನ್ನು ಕೆಲವು ಕಾಮಗಾರಿ ಹಂತ ಹಂತವಾಗಿ ನಡೆಯುತ್ತಿದೆ. 50 ಸಾವಿರ ಲೀಟರ್ ಸಾಮರ್ಥ್ಯ ಟ್ಯಾಂಕ್ ಮಾಡುತ್ತಿದ್ದೇವೆ. ಬೆಸ್ಕಾಂ ಕೆಲಸ ಕೂಡ ಈಗಾಗಲೇ ಮುಗಿದಿದೆ. ಹಾಗೇ ಒಂದು ವಾರದಲ್ಲಿ ಆರ್ ಸಿಬಿಯನ್ನು ಸಂಪರ್ಕಿಸಿದ್ದೆವೆ. ಆದರೆ ಅವರಿಂದ ಯಾವುದೇ ಸ್ಪಷ್ಟ ಸಂದೇಶ ಬಂದಿಲ್ಲ ಎಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:50 pm, Wed, 21 January 26

Source link