Category Archives: Blog

Your blog category

ವಧು ನಕಲಿ ಆದ್ರೆ ದ್ರೋಹ ಮಾತ್ರ ನಿಜ, 42 ಕುಟುಂಬಗಳಿಗೆ ದ್ರೋಹ ಬಗೆದ ಮಹಿಳೆಯರು – Kannada News | MP Marriage Scam: 42 Families Cheated by Fake Brides, Lakhs Lost in Wedding Fraud

ಭೋಪಾಲ್, ಮೇ 26: ಮದುವೆ(Marriage) ಎಂಬ ಪವಿತ್ರ ಬಂಧನವನ್ನೇ ಬಂಡವಾಳ ಮಾಡಿಕೊಂಡು ಅಮಾಯಕರ ಭಾವನೆಗಳೊಂದಿಗೆ ಆಟವಾಡಿದ ವಂಚಕ ಚಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮದುವೆ ಹೆಸರಿನಲ್ಲಿ 42 ಕುಟುಂಬಗಳಿಗೆ ಮಹಿಳೆಯರು ಮೋಸ ಮಾಡಿದ್ದರು ಎಂಬುದು ತನಿಖೆ ವೇಳೆ ಬಯಲಿಗೆ ಬಂದಿದೆ.
ಮಧ್ಯಪ್ರದೇಶದ ವಿವಿಧ ಜಿಲ್ಲೆಗಳ ಬರೋಬ್ಬರಿ 42 ಟುಂಬಗಳಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಮದುವೆಯ ದಿರಿಸು ಧರಿಸಿ ಸಂಭ್ರಮದಿಂದ ಮಂಟಪಕ್ಕೆ ಬಂದ ವರರು ಕಾಯುತ್ತಲೇ ನಿಂತರೂ, ವಧುಗಳು ಮಾತ್ರ ಬರಲೇ ಇಲ್ಲ, ವು ಮೋಸ ಹೋಗಿರುವುದನ್ನು ಅರಿತ ಕುಟುಂಬಗಳು ಕಣ್ಣೀರು ಹಾಕುತ್ತಾ ಪೊಲೀಸ್ ಠಾಣೆಯ ಮೆಟ್ಟಿಲೇರಿವೆ.

ಭಾವನೆಗಳೊಂದಿಗೆ ಚೆಲ್ಲಾಟ: ವಂಚಕರ ಪಕ್ಕಾ ಸ್ಕೆಚ್
ಆರೋಪಿಗಳು ಸೂಕ್ತ ವಧುಗಳನ್ನು ಹುಡುಕಲು ಕಷ್ಟಪಡುತ್ತಿದ್ದ ಗಂಡು ಮಕ್ಕಳ ಕುಟುಂಬಗಳನ್ನು ಪ್ರಮುಖವಾಗಿ ಗುರಿಯಾಗಿಸಿಕೊಂಡಿದ್ದರು. ಅವರ ಭಾವನಾತ್ಮಕ ದುರ್ಬಲತೆಯನ್ನು ದುರುಪಯೋಗಪಡಿಸಿಕೊಂಡ ಖದೀಮರು, ಸಾಮಾಜಿಕ ಮಾಧ್ಯಮಗಳಿಂದ (Social Media) ಡೌನ್‌ಲೋಡ್ ಮಾಡಿದ ಸುಂದರ ಯುವತಿಯರು ಹಾಗೂ ಮಾಡೆಲ್‌ಗಳ  ಫೋಟೊಗಳನ್ನು ಮೊಬೈಲ್‌ನಲ್ಲಿ ತೋರಿಸಿ ನಂಬಿಸಿದ್ದರು.

ಈ ಹುಡುಗಿಯರೆಲ್ಲಾ ಇಂದೋರ್‌ನ ಅನಾಥಾಶ್ರಮದವರಾಗಿದ್ದು, ಇವರೊಂದಿಗೆ ಸರಿಯಾದ ವ್ಯವಸ್ಥೆಗಳ ಮೂಲಕ ಮೇ 25 ರಂದು ದೇವಾಸ್‌ನಲ್ಲಿ ಮದುವೆ ಮಾಡಿಸಿಕೊಡುವುದಾಗಿ ಭರವಸೆ ನೀಡಿ ಪ್ರತಿ ಕುಟುಂಬದಿಂದ 12,000 ರೂ. ನಿಂದ ಹಿಡಿದು 25,000 ರೂ. ವರೆಗೆ ಹಣ ವಸೂಲಿ ಮಾಡಿದ್ದರು. ಒಟ್ಟಾರೆ ಈ ಜಾಲವು 10 ಲಕ್ಷಕ್ಕೂ ಅಧಿಕ ಮೊತ್ತವನ್ನು ಲೂಟಿ ಮಾಡಿದೆ ಎಂದು ಅಂದಾಜಿಸಲಾಗಿದೆ.

ಸಂಘಟಕರ ಸೂಚನೆಯಂತೆ ಮೇ 24 ರಂದು ಮುಂಜಾನೆ 8 ಗಂಟೆಯಿಂದಲೇ ಹಲವಾರು ಜಿಲ್ಲೆಗಳಿಂದ ವರರು ಮತ್ತು ಅವರ ಸಂಬಂಧಿಕರು ಅತ್ಯಂತ ಸಂಭ್ರಮದಿಂದ ಸಿದ್ಧರಾಗಿ ದೇವಾಸ್‌ನ ರಾಧಾಗಂಜ್‌ನಲ್ಲಿರುವ ಕ್ಲಬ್ ಮೈದಾನಕ್ಕೆ ತಲುಪಿದ್ದರು. ಆದರೆ ಅಲ್ಲಿಗೆ ಹೋದಾಗ ಅವರಿಗೆ ಕಾದಿದ್ದು ಭಾರಿ ಆಘಾತ, ಅಲ್ಲಿ ಯಾವುದೇ ವಿವಾಹ ಮಂಟಪವಾಗಲಿ, ಮದುವೆಯ ಸಿದ್ಧತೆಯಾಗಲಿ ಇರಲಿಲ್ಲ. ಮುಖ್ಯವಾಗಿ ಮದುವೆಯಾಗಬೇಕಾದ ವಧುಗಳ ಸುಳಿವೇ ಇರಲಿಲ್ಲ.

ಮತ್ತಷ್ಟು ಓದಿ: ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ

ಅಲ್ಲಿ ಸಿಕ್ಕ ಸಂಘಟಕರಾದ ಮುಖೇಶ್ ಬೈರಾಗಿ ಮತ್ತು ಆತನ ಪತ್ನಿ ಸುನೀತಾ, ವಧುಗಳು ಇಂದೋರ್‌ನಿಂದ ಹೊರಟಿದ್ದಾರೆ, ದಾರಿಯಲ್ಲಿದ್ದಾರೆ ಎಂದು ಮುಂಜಾನೆಯಿಂದ ರಾತ್ರಿಯವರೆಗೆ ನೆಪಗಳನ್ನು ಹೇಳುತ್ತಾ ಕಾಲಹರಣ ಮಾಡಿದ್ದಾರೆ. ರಾತ್ರಿ 10 ಗಂಟೆಯಾದರೂ ಯಾರೂ ಬರದಿದ್ದಾಗ ತಾವು ಸಂಪೂರ್ಣವಾಗಿ ಮೋಸ ಹೋಗಿರುವುದು ವರನ ಕಡೆಯವರಿಗೆ ಸ್ಪಷ್ಟವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜೈವೀರ್ ಭಡೋರಿಯಾ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಪ್ರೀತಿ ಕಟಾರೆ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದೆ. ವಂಚನೆಗೆ ಒಳಗಾದ ಅಭಿಷೇಕ್ ಎಂಬುವವರ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಮುಖ ಆರೋಪಿಗಳಾದ ಮುಖೇಶ್ ಬೈರಾಗಿ ಮತ್ತು ಆತನ ಪತ್ನಿ ಸುನೀತಾ ಬೈರಾಗಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವಿಚಾರಣೆ ವೇಳೆ ಮುಖೇಶ್, ಇಂದೋರ್‌ನಲ್ಲಿರುವ ತನ್ನ ಅಣ್ಣ ದಿನೇಶ್ ದಾಸ್ ಬೈರಾಗಿ ಹುಡುಗಿಯರ ಫೋಟೋ ಮತ್ತು ಫೋನ್ ನಂಬರ್ ನೀಡಿದ್ದಾಗಿ ಹಾಗೂ ಮಾವ ನರಸಿಂಗ್ ದಾಸ್ ಬೈರಾಗಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಪ್ಲಾನ್ ಉಲ್ಟಾ ಹೊಡೆಯುತ್ತಿದ್ದಂತೆ ದಿನೇಶ್ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ.

ಸೊಸೆಯಂದಿರನ್ನು ಮನೆಗೆ ಕರೆದೊಯ್ಯುವ ಭಾರಿ ಆಶಯದೊಂದಿಗೆ ಮದುವೆಯ ಬಟ್ಟೆ ಧರಿಸಿ ಬಂದಿದ್ದ 42 ಕುಟುಂಬಗಳ ಆಸೆಗಳು ಕ್ಷಣಾರ್ಧದಲ್ಲಿ ನುಚ್ಚುನೂರಾಗಿವೆ. ಅವರ ದಿನವು ಮಂಗಳ ವಾದ್ಯಗಳೊಂದಿಗೆ ಮುಕ್ತಾಯವಾಗುವ ಬದಲಿಗೆ ಪೊಲೀಸ್ ಠಾಣೆಯ ದೂರುಗಳೊಂದಿಗೆ ಕೊನೆಗೊಂಡಿದೆ. ಸದ್ಯ ತಲೆಮರೆಸಿಕೊಂಡಿರುವ ದಿನೇಶ್ ಮತ್ತು ನರಸಿಂಗ್ ದಾಸ್ ಪತ್ತೆಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದು, ಆರೋಪಿಗಳ ಪತ್ತೆಗೆ ವಿದಿಶಾ ಜಿಲ್ಲೆಗೆ ವಿಶೇಷ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 2:48 pm, Tue, 26 May 26

Source link

ಹೊಸ ಹೇರ್​​ಸ್ಟೈಲ್​​ನಲ್ಲಿ ಮಿಂಚಿದ ಮೌನ ಗುಡ್ಡೆಮನೆ; ಇಲ್ಲಿವೆ ಸುಂದರ ಫೋಟೋಸ್ – Kannada News | Mouna Guddemane’s Viral New Short Hairstyle: Kannada Actress Stuns Fans on Instagram

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More

Source link

5G Network Slicing: ಏರ್ಟೆಲ್​ನಿಂದ ಕಮರ್ಷಿಯಲ್ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್; ಉತ್ತಮ ವೇಗಕ್ಕೆ ಪ್ರೀಮಿಯಮ್ ದರ? – Kannada News | Airtel 5G Network Slicing India: Benefits, Drawbacks & Net Neutrality Debate

ಮೊಬೈಲ್ ಬಳಸುತ್ತಿರುವವರುImage Credit source: Getty Images

ನವದೆಹಲಿ, ಮೇ 26: ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಇತ್ತೀಚೆಗೆ ಅತ್ಯಂತ ದೊಡ್ಡ ತಾಂತ್ರಿಕ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ. ಭಾರತದಲ್ಲಿ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್ ಕಮರ್ಷಿಯಲ್ ಅಡಿ ಇಟ್ಟಿದೆ. ಇನ್ಮುಂದೆ, ಪ್ರೀಮಿಯಮ್ ಬಳಕೆದಾರರಿಗೆ ಸುಗಮ ವೇಗ, ಸಾಮಾನ್ಯ ಬಳಕೆದಾರರಿಗೆ ಮಂದಗತಿಯ ವೇಗದ ಸೇವೆ ಸಿಗುವ ಕಾಲ ಬಂದಂತಿದೆ. ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ಭಾರ್ತಿ ಏರ್‌ಟೆಲ್ (Bharti Airtel) ತನ್ನ ಗ್ರಾಹಕರಿಗಾಗಿ ದೇಶದಲ್ಲೇ ಮೊದಲ ಬಾರಿಗೆ 5G ನೆಟ್‌ವರ್ಕ್ ಸ್ಲೈಸಿಂಗ್ (Network Slicing) ತಂತ್ರಜ್ಞಾನ ಆಧಾರಿತ ‘ಪ್ರಯಾರಿಟಿ ಪೋಸ್ಟ್‌ಪೇಯ್ಡ್ (Priority Postpaid)’ ಸೇವೆಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದು ಕೇವಲ ಇಂಟರ್ನೆಟ್ ವೇಗವನ್ನು ಹೆಚ್ಚಿಸುವ ಬದಲಾಗಿ, ನೆಟ್‌ವರ್ಕ್ ಅನುಭವವನ್ನೇ ಸಂಪೂರ್ಣವಾಗಿ ಬದಲಾಯಿಸುವ ತಂತ್ರಜ್ಞಾನವಾಗಿದೆ. ಅದೇ ವೇಳೆ, ಸಾಮಾನ್ಯ ಗ್ರಾಹಕರು ಉತ್ತಮ ಇಂಟರ್ನೆಟ್ ಸರ್ವಿಸ್ ಪಡೆಯಲು ಹೆಚ್ಚಿನ ಹಣ ತೆರಬೇಕಾಗಬಹುದು.

ಏರ್ಟೆಲ್​ನ ಈ ನಡೆಯನ್ನು ಭಾರತದ ಸೆಲೂಲಾರ್ ಆಪರೇಟರ್ಸ್ ಅಸೋಷಿಯೇಶನ್​ನ ಮಹಾನಿರ್ದೇಶಕ ಡಾ. ಎಸ್.ಪಿ. ಕೋಚರ್ (Dr. S.P. Kochar) ಸ್ವಾಗತಿಸಿದ್ದಾರೆ. ಅಮೆರಿಕ, ಸಿಂಗಾಪುರ, ಚೀನಾ ಹಾಗು ಕೆಲ ಐರೋಪ್ಯ ದೇಶಗಳಲ್ಲಿ ಇರುವ 5ಜಿ ನೆಟ್ವರ್ಕ್ ಸ್ಲೈಸಿಂಗ್ ತಂತ್ರಜ್ಞಾನವನ್ನು ನಮ್ಮದೇ ಒಂದು ಕಂಪನಿ ಭಾರತಕ್ಕೆ ತಂದಿರುವುದು ಖುಷಿ ಕೊಟ್ಟಿದೆ ಎಂದು ಅವರು ಹೇಳಿದ್ದಾರೆ. ಏರ್​ಟೆಲ್​ನ ಪ್ರಯಾರಿಟಿ ಪೋಸ್ಟ್​ಪೇಡ್ ಪ್ಲಾನ್​ಗಳು ವೈಯಕ್ತಿಕ ಗ್ರಾಹಕರಾದರೆ ತಿಂಗಳಿಗೆ 449 ರೂನಿಂದ ಆರಂಭವಾಗುತ್ತದೆ.

ನೆಟ್‌ವರ್ಕ್ ಸ್ಲೈಸಿಂಗ್ ಎಂದರೇನು?

ಒಂದೇ ದೊಡ್ಡ ಹೆದ್ದಾರಿಯಲ್ಲಿ ಬಸ್, ಬೈಕ್, ಆಂಬ್ಯುಲೆನ್ಸ್ ಎಲ್ಲವೂ ಒಟ್ಟಿಗೆ ಚಲಿಸಿದಾಗ ಟ್ರಾಫಿಕ್ ಜಾಮ್ ಆಗುತ್ತದೆ. ಆದರೆ ಅದೇ ಹೆದ್ದಾರಿಯಲ್ಲಿ ಆಂಬ್ಯುಲೆನ್ಸ್ ಅಥವಾ ವಿವಿಐಪಿ ವಾಹನಗಳಿಗಾಗಿ ಒಂದು ವಿಶೇಷ ‘ಮೀಸಲು ಲೇನ್’ (Dedicated Lane) ನಿರ್ಮಿಸಿದರೆ ಹೇಗಿರುತ್ತದೆಯೋ, ಹಾಗೆಯೇ 5G ನೆಟ್‌ವರ್ಕ್ ಸ್ಲೈಸಿಂಗ್ ಕೆಲಸ ಮಾಡುತ್ತದೆ.

ಇದು ಒಂದೇ ಭೌತಿಕ 5G ನೆಟ್‌ವರ್ಕ್ ಮೂಲಸೌಕರ್ಯದೊಳಗೆ ತಂತ್ರಜ್ಞಾನದ ಮೂಲಕ ಹಲವು ಸ್ವತಂತ್ರ, ವರ್ಚುವಲ್ (Virtual) ನೆಟ್‌ವರ್ಕ್ ಪದರಗಳನ್ನು (Slices) ಸೃಷ್ಟಿಸುತ್ತದೆ. ಕ್ರಿಕೆಟ್ ಸ್ಟೇಡಿಯಂ ಅಥವಾ ಜನನಿಬಿಡ ಮಾರುಕಟ್ಟೆಯಂತಹ ಟ್ರಾಫಿಕ್ ಹೆಚ್ಚಿರುವ ಜಾಗದಲ್ಲೂ ಪ್ರಯಾರಿಟಿ ಗ್ರಾಹಕರಿಗೆ ಯಾವುದೇ ಅಡ್ಡಿಯಿಲ್ಲದ ಇಂಟರ್ನೆಟ್ ಸಿಗುವಂತೆ ಇದು ಮಾಡುತ್ತದೆ.

ಇದನ್ನೂ ಓದಿ: ವಿದೇಶೀ ಹೂಡಿಕೆದಾರರು ಸದ್ಯಕ್ಕೆ ಭಾರತಕ್ಕೆ ಬರಲ್ಲ ಎಂದ ಅಮರ್ ಅಂಬಾನಿ; ಎಫ್​ಐಐಗಳ ಆಗನಕ್ಕೆ ಬೇಕು ಈ 3 ಕಾರಣಗಳು

ನೆಟ್‌ವರ್ಕ್ ಸ್ಲೈಸಿಂಗ್‌ನ ಅನುಕೂಲಗಳು

  • ಸ್ಥಿರ ಹಾಗೂ ಅಡೆತಡೆಯಿಲ್ಲದ ಕನೆಕ್ಟಿವಿಟಿ: ಹಬ್ಬಗಳು, ಸಾರ್ವಜನಿಕ ಸಭೆಗಳು ಅಥವಾ ಕನ್ಸರ್ಟ್‌ಗಳಂತಹ ಅತಿ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಸಾಮಾನ್ಯ ನೆಟ್‌ವರ್ಕ್ ಜಾಮ್ ಆದರೂ, ಈ ಸ್ಲೈಸಿಂಗ್ ಪಡೆದ ಗ್ರಾಹಕರಿಗೆ ನಿರಂತರ ಹೈ-ಸ್ಪೀಡ್ ಇಂಟರ್ನೆಟ್ ಸಿಗುತ್ತದೆ. ಆಫೀಸ್ ಕಾಲ್‌ಗಳು ಅಥವಾ ತುರ್ತು ಡಿಜಿಟಲ್ ಪೇಮೆಂಟ್‌ಗಳು ಸುಲಭವಾಗಿ ಆಗುತ್ತವೆ.
  • ವಿವಿಧ ಅಗತ್ಯಗಳಿಗೆ ತಕ್ಕಂತೆ ನೆಟ್‌ವರ್ಕ್: ವಿಡಿಯೋ ಸ್ಟ್ರೀಮಿಂಗ್‌ಗೆ ಹೆಚ್ಚಿನ ಬ್ಯಾಂಡ್‌ವಿಡ್ತ್ ಬೇಕು, ಆನ್‌ಲೈನ್ ಗೇಮಿಂಗ್‌ಗೆ ಕಡಿಮೆ ಲ್ಯಾಟೆನ್ಸಿ (Latency – ಡೇಟಾ ತಲುಪಲು ತೆಗೆದುಕೊಳ್ಳುವ ಸಮಯ) ಬೇಕು. ನೆಟ್‌ವರ್ಕ್ ಸ್ಲೈಸಿಂಗ್ ಆಯಾ ಅಗತ್ಯಕ್ಕೆ ತಕ್ಕಂತೆ ನೆಟ್‌ವರ್ಕ್ ಅನ್ನು ಪ್ರತ್ಯೇಕವಾಗಿ ಹೊಂದಿಸಬಲ್ಲದು.
  • ಉದ್ಯಮಗಳಿಗೆ ವರದಾನ (Enterprise Use): ಭವಿಷ್ಯದಲ್ಲಿ ಆಸ್ಪತ್ರೆಗಳು (ದೂರಸ್ಥ ಶಸ್ತ್ರಚಿಕಿತ್ಸೆ), ಸ್ವಯಂಚಾಲಿತ ವಾಹನಗಳು (Autonomous Vehicles) ಮತ್ತು ಕೈಗಾರಿಕೆಗಳ ಸ್ಮಾರ್ಟ್ ಯಂತ್ರೋಪಕರಣಗಳಿಗೆ ಅತ್ಯಂತ ಸುರಕ್ಷಿತ ಹಾಗೂ ಮೀಸಲಾದ ನೆಟ್‌ವರ್ಕ್ ಒದಗಿಸಲು ಇದು ಸಹಕಾರಿ.

ನೆಟ್ವರ್ಕ್ ಸ್ಲೈಸಿಂಗ್​ನಿಂದ ಅನಾನುಕೂಲಗಳು

  • ನೆಟ್ ನ್ಯೂಟ್ರಾಲಿಟಿ (Net Neutrality) ವಿವಾದ: ಇದು ಪ್ರಸ್ತುತ ಟೆಲಿಕಾಂ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇಂಟರ್ನೆಟ್‌ನಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎನ್ನುವುದು ನೆಟ್ ನ್ಯೂಟ್ರಾಲಿಟಿ ನಿಯಮ. ಆದರೆ ಹಣ ನೀಡುವ ಪೋಸ್ಟ್‌ಪೇಯ್ಡ್ ಗ್ರಾಹಕರಿಗೆ ಮಾತ್ರ ಪ್ರತ್ಯೇಕ ‘ವೇಗದ ಲೇನ್’ ನೀಡುವುದರಿಂದ ಸಾಮಾನ್ಯ ಅಥವಾ ಪ್ರಿಪೇಯ್ಡ್ ಗ್ರಾಹಕರಿಗೆ ಅನ್ಯಾಯವಾಗಬಹುದು ಎಂಬ ಆತಂಕ ತಜ್ಞರಲ್ಲಿದೆ. ಆದರೆ ಏರ್‌ಟೆಲ್ ಸಂಸ್ಥೆಯು ತಾವು ಯಾವುದೇ ನಿರ್ದಿಷ್ಟ ಆ್ಯಪ್‌ಗಳಿಗೆ ಆದ್ಯತೆ ನೀಡುತ್ತಿಲ್ಲ, ಕೇವಲ ನೆಟ್‌ವರ್ಕ್ ಸಾಮರ್ಥ್ಯ ನಿರ್ವಹಣೆ ಮಾಡುತ್ತಿರುವುದರಿಂದ ಇದು ನೆಟ್ ನ್ಯೂಟ್ರಾಲಿಟಿ ನಿಯಮ ಉಲ್ಲಂಘಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.
  • ಬೆಲೆ ಏರಿಕೆಯ ಹೊರೆ: ಸಾಮಾನ್ಯ ಗ್ರಾಹಕರು ಈ ವಿಶೇಷ ಸೇವೆಯನ್ನು ಪಡೆಯಬೇಕಾದರೆ ಹೆಚ್ಚಿನ ಹಣ ನೀಡಿ ಪ್ರೀಮಿಯಂ ಪೋಸ್ಟ್‌ಪೇಯ್ಡ್ ಪ್ಲಾನ್‌ಗಳನ್ನು ಖರೀದಿಸಬೇಕಾಗುತ್ತದೆ.
  • ಸಾಮಾನ್ಯ ಗ್ರಾಹಕರ ನೆಟ್‌ವರ್ಕ್ ಕುಸಿತದ ಭೀತಿ: ಲಭ್ಯವಿರುವ ಸ್ಪೆಕ್ಟ್ರಮ್ ಲಿಮಿಟೆಡ್ ಆಗಿರುವುದರಿಂದ, ಪ್ರೀಮಿಯಂ ಗ್ರಾಹಕರಿಗೆ ಹೆಚ್ಚಿನ ನೆಟ್‌ವರ್ಕ್ ಹಂಚಿಕೆ ಮಾಡಿದಾಗ ಸಾಮಾನ್ಯ ಪ್ರಿಪೇಯ್ಡ್ ಗ್ರಾಹಕರ ಇಂಟರ್ನೆಟ್ ವೇಗ ಕುಸಿಯುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಚೀನಾದಲ್ಲಿ ವಿಶ್ವದ ಅತಿದೊಡ್ಡ ಹೈಸ್ಪೀಡ್ ರೈಲ್ವೆ ನಿಲ್ದಾಣ; ಬೆಟ್ಟವನ್ನೇ ಸವರಿ, ರೋಬೋಟ್, ಎಐ ಬಳಸಿ ಆಯಿತು ನಿರ್ಮಾಣ

ಜಾಗತಿಕ ಮಾರುಕಟ್ಟೆಯೊಂದಿಗೆ ಹೋಲಿಕೆ

ಭಾರತದಲ್ಲಿ ಏರ್‌ಟೆಲ್ ಈಗಷ್ಟೇ ಈ ತಂತ್ರಜ್ಞಾನವನ್ನು ವಾಣಿಜ್ಯಿಕವಾಗಿ ಸಾರ್ವಜನಿಕರಿಗೆ ಪರಿಚಯಿಸುತ್ತಿದೆ. ಆದರೆ ಜಾಗತಿಕವಾಗಿ ಈ ತಂತ್ರಜ್ಞಾನ ಈಗಾಗಲೇ ಮುಂಚೂಣಿಯಲ್ಲಿದೆ. ಆದರೆ, ಅಮೆರಿಕ, ಸಿಂಗಾಪುರ, ಬ್ರಿಟನ್, ಚೀನಾ ಮೊದಲಾದ ದೇಶಗಳಲ್ಲಿ ಟೆಲಿಕಾಂ ಕಂಪನಿಗಳು ಉದ್ಯಮಗಳು ಹಾಗೂ ಸಾರ್ವಜನಿಕ ವಲಯಗಳಿಗೆ ಈ ಸ್ಲೈಸಿಂಗ್ ಸರ್ವಿಸ್ ನೀಡುತ್ತಿವೆ. ಭಾರತದಲ್ಲಿ ವಿಸ್ತೃತವಾಗಿ ನೀಡಲಾಗುತ್ತಿದೆ.

ಜಾಗತಿಕವಾಗಿ ನೆಟ್ ನ್ಯೂಟ್ರಾಲಿಟಿ ನಿಯಮಗಳನ್ನು ಈ ತಂತ್ರಜ್ಞಾನಕ್ಕೆ ಪೂರಕವಾಗಿ ಮಾರ್ಪಡಿಸಲಾಗಿದೆ ಅಥವಾ ವಿಶೇಷ ವಿನಾಯಿತಿ ನೀಡಲಾಗಿದೆ. ಭಾರತದಲ್ಲಿ TRAI ಮತ್ತು ದೂರಸಂಪರ್ಕ ಇಲಾಖೆ (DoT) ಈ ವ್ಯವಸ್ಥೆಯು ಸಾಮಾನ್ಯ ಗ್ರಾಹಕರ ಇಂಟರ್ನೆಟ್ ಅನುಭವವನ್ನು ಕೆಡಿಸುತ್ತಿದೆಯೇ ಎಂದು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ – Kannada News | Karnataka education Department issues guidelines Over School reopen From June 1st

ಬೆಂಗಳೂರು (ಮೇ.26): ಬೇಸಿಗೆ ರಜೆ (Summer Holidays) ಅಂತ್ಯವಾಗಲಿದ್ದು, ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು (Schools) ಆರಂಭವಾಗಲಿವೆ. ಇನ್ನು ಮಕ್ಕಳು (Students) ಸಹ ಬೇಸಿಗೆ ರಜೆ ಮುಗಿಸಿ ಶಾಲೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಇನ್ನು ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಿದೆ. ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಶಾಲೆ ಆರಂಭಕ್ಕೆ ಕೌಂಟ್ ಡೌನ್
  • ಶಾಲೆಗಳ ಆಂಭಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ
  • ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟ
  • ಶಾಲಾ ಕಟ್ಟಡಗಳ ಸುರಕ್ಷತೆಗೆ ಆದ್ಯತೆ ಕೊಡಲು ಒತ್ತು

ಸುರಕ್ಷತೆಗೆ ಆದ್ಯತೆ ನೀಡಲು ಸೂಚನೆ

ಶಿಕ್ಷಣ ಇಲಾಖೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ಶಾಲಾ ಕಟ್ಟಡಗಳ ಸುರಕ್ಷತೆಗೆ ಆದ್ಯತೆ ಕೊಡಲು ಒತ್ತು ನೀಡಲಾಗಿದೆ. ಶಾಲಾ ಕಟ್ಟಡಗಳು, ಶೌಚಾಲಯಗಳು ಅಥವಾ ಅಡುಗೆ ಕೋಣೆಗಳು ಶಿಥಿಲಗೊಂಡಿದ್ರೆ, ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ದುರಸ್ತಿ ಅಥವಾ ತೆರವುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಶಾಲೆ ಕಟ್ಟಡದ ಸುರಕ್ಷತೆಗೆ ಕ್ರಮ ವಹಿಸಲು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ಮಕ್ಕಳೇ ಮುಗಿಯಿತು ಸಮ್ಮರ್ ಹಾಲಿಡೇಸ್ ಮಜಾ!: ಮೇ 29 ರಿಂದಲೇ ಸ್ಕೂಲ್ ಬೆಲ್ ರೆಡಿ; ಈ ಬಾರಿ ಸಿಗಲಿದೆ ಭರ್ಜರಿ ದಸರಾ ರಜೆ!

ಮಾರ್ಗಸೂಚಿಯ ಪ್ರಮುಖಾಂಶಗಳು

  • ಶಾಲಾ ಕಟ್ಟಡಗಳು, ಶೌಚಾಲಯಗಳು ಅಥವಾ ಅಡುಗೆ ಕೋಣೆಗಳು ಶಿಥಿಲಗೊಂಡಿದ್ದರೆ ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ದುರಸ್ತಿ ಅಥವಾ ತೆರವುಗೊಳಿಸಬೇಕು.
  • 6 ರಿಂದ 14 ವರ್ಷದ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.
  • ಉರ್ದು-ಇಂಗ್ಲೀಷ್ ದ್ವಿಭಾಷಾ ಮಾಧ್ಯಮವೂ ಸಹ ಈ ವರ್ಷವೇ ಆರಂಭ
  • ದ್ವಿಭಾಷಾ ಶಿಕ್ಷಣಕ್ಕೆ ಇಲಾಖೆಯಿಂದ ಪೂರ್ವಾನುಮತಿ ಪಡೆದಿರುವ ಶಾಲೆಗಳಲ್ಲಿ ದ್ವಿಭಾಷಾ ಬೋಧನಾ ಪದ್ಧತಿಯನ್ನು ಅನುಷ್ಠಾನಕ್ಕೆ ತರಲು ಸೂಚನೆ.
  • ಮೇ 28 ಶಾಲೆಗಳ ಸಂಪೂರ್ಣ ಸ್ವಚ್ಛತೆ, ಕುಡಿಯುವ ನೀರು ಮತ್ತು ಸುರಕ್ಷತಾ ತಪಾಸಣೆಗಳನ್ನು ಪೂರ್ಣಗೊಳಿಸಲು ಕೊನೆಯ ದಿನಾಂಕ.
  • ಮೇ 29 ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು.
  • ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳ ದಾಖಲಾತಿ ಪ್ರಕ್ರಿಯೆ ಅಧಿಕೃತವಾಗಿ ಆರಂಭ.
  • ಜೂನ್ 30 – ದಾಖಲಾತಿ ಆಂದೋಲನ ಮುಕ್ತಾಯ.
  • ವಿದ್ಯಾರ್ಥಿಗಳು & ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ.

ಕರ್ನಾಕಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿದ್ದೇನು ನೋಡಿ – Kannada News | High Command Aware of Blackmail Tactics: Rebel MLA Yatnal Slams BSY Family Over Karnataka BJP President Change Rumours

ಬೆಂಗಳೂರು, ಮೇ 26: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಕ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ ಎಂದಿದ್ದಾರೆ. ಪಕ್ಷದಲ್ಲಿ ವ್ಯವಸ್ಥಿತವಾಗಿ ಕೆಲಸ ನಡೆಯುತ್ತಿಲ್ಲ, ವ್ಯಕ್ತಿ ಪೂಜೆ ಅತಿಯಾಗಿದೆ ಹಾಗೂ ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣ ಹೆಚ್ಚಾಗಿದೆ ಎಂದು ಅವರು ಟೀಕಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಅನ್ನು ಬ್ಲಾಕ್‌ಮೇಲ್ ಮಾಡುವಂತಹ ತಂತ್ರಗಳು ನಡೆಯುತ್ತಿವೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ನಡೆದ ಸ್ವಾಮೀಜಿಗಳ ಮೆರವಣಿಗೆ ಇಂತಹ ಕಾರ್ಯತಂತ್ರದ ಭಾಗವಾಗಿತ್ತು. ಹೈಕಮಾಂಡ್‌ಗೆ ಈ ಕುರಿತು ಮನವರಿಕೆಯಾಗಿದೆ ಎಂದು ಯತ್ನಾಳ್ ಹೇಳಿದರು.

ಒಂದು ಕುಟುಂಬವು ತಮ್ಮ ಶಕ್ತಿ ದೊಡ್ಡದಿದೆ ಎಂದು ಹೇಳಿ ಪಕ್ಷವನ್ನು ಒತ್ತಾಯಿಸುವ ಪ್ರಯತ್ನ ಮಾಡಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರೋಕ್ಷವಾಗಿ ಪಕ್ಷ ಒಂದು ಕುಟುಂಬದ ಹಿಡಿತದಿಂದ ಮುಕ್ತವಾಗುತ್ತಿದೆ ಎಂಬ ಸುಳಿವು ನೀಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೆ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ತೆಗೆದುಕೊಂಡ ಆ ಕುಟುಂಬದವರ (ಯಡಿಯೂರಪ್ಪರನ್ನು ಉದ್ದೇಶಿಸಿ) ಕೊನೆಯ ಫೋಟೋ ಇದನ್ನೇ ಸೂಚಿಸುತ್ತದೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​! – Kannada News | Medical Shock in Bidar: Doctor Accused of Cheating Patient by Faking Surgery and Charging Rupees 37,000

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?Image Credit source: Tv9 Kannada

ಬೀದರ್​​, ಮೇ 26: ವೈದ್ಯೋ ನಾರಾಯಣೋ ಹರಿಃ ಅಂದರೆ ವೈದ್ಯನು ಸಾಕ್ಷಾತ್ ಭಗವಂತನ (ನಾರಾಯಣನ) ಸ್ವರೂಪ ಎಂಬ ಮಾತಿದೆ. ಎಂತಹ ಕಷ್ಟ ಕಾಲದಲ್ಲೂ ಮುಷ್ಯನ ಜೀವ ಉಳಿಸಬಹುದಾದ ಶಕ್ತಿ ವೈದ್ಯರಿಗಿರುವ ಕಾರಣ ಅವರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದರೆ ಇದೇ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಇತ್ತೀಚೆಗೆ ಕೆಲವರು ಹಣ ಮಾಡುವ ಉದ್ಯೋಗವನ್ನಾಗಿಸಿಕೊಂಡಿದ್ದಾರೆ. ರೋಗಿಗೆ ಏನಾದರೂ ಪರವಾಗಿಲ್ಲ ನಮಗೆ ದುಡ್ಡಾದರೆ ಸಾಕು ಎಂಬ ಮನಸ್ಥಿತಿಗೆ ತಲುಪಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತಹ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ.

ಮುಖ್ಯಾಂಶಗಳು

  • ಆಪರೇಷನ್ ಮಾಡದೆ ಮಾಡಿದ್ದೇವೆಂದು ಹೇಳಿ ಹಣ ವಸೂಲಿ?
  • ಮನ್ನಾಖೇಳಿಯ ಆಸ್ಪತ್ರೆಯ ವೈದ್ಯರಿಂದ ನಡೀತಾ ಕಳ್ಳಾಟ?
  • ಆಪರೇಷನ್​​ ಹೆಸರಲ್ಲಿ ಹಣ ಪಡೆದು ವಂಚಿಸಿತಾ ಆಸ್ಪತ್ರೆ?

ಬೀದರ್ ತಾಲೂಕಿನ ‌ಮನ್ನಾಖೇಳಿ ಗ್ರಾಮದಲ್ಲಿರುವ ಸೇಡಂಕರ್ ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಆಪರೇಷನ್ ಮಾಡದೆ ಮಾಡಿದ್ದೇವೆಂದು ದುಡ್ಡು ಪಡೆದಿದ್ದಾರೆ ಎಂದು ದೂರಲಾಗಿದೆ. ರೋಗಿಗೆ ಕೇವಲ ಬ್ಯಾಂಡೇಜ್​ ಸುತ್ತಿ 37 ಸಾವಿರ ರೂ. ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬುಜ ನೋವಾಗುತ್ತಿದೆ ಎಂದು ಸ್ಕ್ಯಾನ್ ಮಾಡಿಸಿದಾಗ ಆಪರೇಷನ್ ಮಾಡದೆ ಇರುವ ವಿಷಯ ಬಹಿರಂಗವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ; ಹನಿ ನೀರಿಗೂ ಜನರ ಪರದಾಟ!

ಬೀದರ್ ತಾಲೂಕಿನ ಬಸಲಾಪುರ ಗ್ರಾಮದ ಪ್ರಜ್ವಲ್ ಎಂಬವರ ಬುಜದ ಎಲಬು ರಸ್ತೆ ಅಪಘಾತದಲ್ಲಿ ಮುರಿದಿತ್ತು. ಹೀಗಾಗಿ ಚಿಕಿತ್ಸೆಗೆಂದು ತೆರಳಿದ್ದಾಗ ಆಪರೇಷನ್ ಮಾಡಿ ಮುರಿದಿದ್ದ ಎಲುಬಿಗೆ ರಾಡ್ ಹಾಕಬೇಕು ಎಂದು ವೈದ್ಯರು ತಿಳಿಸಿದ್ದರು. ಅದರಂತೆ 37 ಸಾವಿರ ರೂಪಾಯಿಯನ್ನು ಕಟ್ಟಿಸಿಕೊಂಡಿದ್ದರು. ಆದರೆ ಆಪರೇಷನ್​​ ಮಾಡದೆ ಪ್ರಜ್ವಲ್​​ ಕೈಗೆ ಹಾಗೇ ಬ್ಯಾಂಡೇಜ್​​ ಸುತ್ತಲಾಗಿದೆ. ಆಪರೇಷನ್​​ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್​​ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ. ಮುರಿದಿದ್ದ ಬುಜದ ಎಲುಬು ಹಾಗೇ ಇದೆ ಎನ್ನಲಾಗಿದ್ದು, ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:17 pm, Tue, 26 May 26

Source link

IPL 2026: ಈ ಮೂರು ವಿಕೆಟ್ ಪಡೆದ್ರೆ RCB ಅರ್ಧ ಪಂದ್ಯ ಗೆದ್ದಂತೆ..!

Source link

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್ – Kannada News | Ranveer Singh asks apology in Chamundi temple for mocking Daiva

ನಟ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಹಿಟ್ ಆಯ್ತು. ಆದರೆ ಎರಡೂ ಸಿನಿಮಾಗಳ ಬಹುತೇಕ ಕ್ರೆಡಿಟ್ ಹೋಗಿದ್ದು ನಿರ್ದೇಶಕ ಆದಿತ್ಯ ಧರ್​​ಗೆ. ‘ಧುರಂಧರ್’ ಬಳಿಕ ದೊಡ್ಡ ಸಿನಿಮಾನಲ್ಲಿ ರಣ್ವೀರ್ ನಟಿಸಲಿದ್ದಾರೆ ಎಂದುಕೊಳ್ಳುತ್ತಿದ್ದಂತೆ ಅವರನ್ನು ಬಾಲಿವುಡ್​​ನಿಂದಲೇ ಬ್ಯಾನ್ ಮಾಡಲಾಗಿದೆ. ಆದರೆ ಈ ಬ್ಯಾನ್ ಘೋಷಣೆ ಆಗುತ್ತಿದ್ದಂತೆ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ರಣ್ವೀರ್ ಸಿಂಗ್​​ ಅವರಿಗೆ ಮಾಡಿದ ತಪ್ಪಿಗೆ ಕ್ಷಮೆ ಕೇಳುವಂತೆ ಹೈಕೋರ್ಟ್ ಸೂಚಿಸಿತ್ತು. ಈಗ ಜೀವನದಲ್ಲಿ ದೊಡ್ಡ ಹಿನ್ನಡೆ ಆಗುತ್ತಿದ್ದಂತೆ ಚಾಮುಂಡಿ ತಾಯಿಯ ಬಳಿ ಕ್ಷಮೆ ಕೇಳಲು ಬಂದಿದ್ದಾರೆ ರಣ್ವೀರ್ ಸಿಂಗ್.

ಕೆಲ ತಿಂಗಳ ಹಿಂದೆ ಗೋವಾನಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ವದಲ್ಲಿ ವಿಶೇಷ ಅತಿಥಿಯಾಗಿ ರಣ್ವೀರ್ ಸಿಂಗ್ ಭಾಗವಹಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ಸಹ ವೇದಿಕೆಯ ಮುಂದೆ ಇದ್ದರು. ಈ ವೇಳೆ ರಿಷಬ್ ಅವರನ್ನು ಮಾತನಾಡಿಸುವ ಸಂದರ್ಭದಲ್ಲಿ ಅತಿಯಾಗಿ ಆಡಿದ ರಣ್ವೀರ್ ಸಿಂಗ್ ತೀರ ಕೆಟ್ಟದಾಗಿ, ಅಸಹ್ಯಕರ ರೀತಿಯಲ್ಲಿ ದೈವವನ್ನು ಅನುಕರಣೆ ಮಾಡಿದ್ದರು. ರಿಷಬ್ ಶೆಟ್ಟಿ ಬೇಡವೆಂದರೂ ಸಹ ಅನುಕರಣೆ ನಿಲ್ಲಿಸಲಿಲ್ಲ ರಣ್ವೀರ್ ಸಿಂಗ್.

ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಯ್ತು. ಮರು ದಿನವೇ ರಣ್ವೀರ್ ಸಿಂಗ್ ಕ್ಷಮೆ ಕೇಳಿದರಾದರೂ, ಈ ಬಗ್ಗೆ ಹೈಕೋರ್ಟ್​​ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ರಣ್ವೀರ್ ಸಿಂಗ್ ಮಾಡಿರುವುದು ತಪ್ಪೆಂದು ತೀರ್ಮಾನಿಸಿ, ಚಾಮುಂಡಿ ದೇವಾಲಯದಲ್ಲಿ ರಣ್ವೀರ್ ಸಿಂಗ್ ಕ್ಷಮೆ ಕೇಳಬೇಕು ಎಂದು ಕೆಲ ವಾರಗಳ ಹಿಂದೆ ಸೂಚನೆ ನೀಡಿತ್ತು. ಆದರೆ ರಣ್ವೀರ್ ಸಿಂಗ್ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ಆದರೆ ಇದೀಗ ತಮ್ಮ ಜೀವನದಲ್ಲಿ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಿದ್ದಂತೆ ಇಂದು (ಮೇ 26) ಚಾಮುಂಡಿ ಬೆಟ್ಟಕ್ಕೆ ಆಗಮಿಸಿರುವ ನಟ ರಣ್ವೀರ್ ಸಿಂಗ್ ಚಾಮುಂಡಿ ದೇವಾಲಯದ ಗರ್ಭಗುಡಿಯಲ್ಲಿ ಕೂತು ತಾಯಿಯ ಮುಂಚೆ ಕ್ಷಮೆ ಯಾಚನೆ ಮಾಡಿದ್ದಾರೆ. ಅಲ್ಲದೆ, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಹ ಮಾಡಿಸಿದ್ದಾರೆ. ಕೆಲ ಹರಕೆಗಳನ್ನು ಸಹ ರಣ್ವೀರ್ ಸಿಂಗ್ ಹೊತ್ತಿದ್ದಾರೆ ಎನ್ನಲಾಗುತ್ತಿದೆ. ರಣ್ವೀರ್ ಸಿಂಗ್ ಚಾಮುಂಡಿ ದೇವಾಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡಿರುವ ಚಿತ್ರ ಮತ್ತು ವಿಡಿಯೋ ಇದೀಗ ವೈರಲ್ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇಬ್ಬರು ಕನ್ನಡಿಗರ ಮಧ್ಯೆ ಸಿಕ್ಕಿಹಾಕಿಕೊಂಡ ಸಮಂತಾ – Kannada News | Samantha’s ‘Maa Inti Bangaram’ Trailer Unleashes Dual Shade Action; Diganth Co stars

ಟಾಲಿವುಡ್​​ನ ಸ್ಟಾರ್ ನಾಯಕಿ ಸಮಂತಾ (Samantha) ಹಾಗೂ ಕನ್ನಡಿಗ ದಿಗಂತ್ ಮಂಚಾಲೆ ಅಭಿನಯದ ‘ಮಾ ಇಂಟಿ ಬಂಗಾರಂ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರು ಆ್ಯಕ್ಷನ್ ಮೆರೆದಿದ್ದಾರೆ. ಅವರು ಈ ಚಿತ್ರಕ್ಕೆ ನಿರ್ಮಾಪಕಿ ಕೂಡ ಹೌದು. ಸಮಂತಾ ಅವರು ಕೇವಲ ನಾಯಕಿಯಾಗಿ ಮಾತ್ರವಲ್ಲದೆ, ನಿರ್ಮಾಪಕಿಯಾಗಿಯೂ ಈ ಚಿತ್ರದ ಮೂಲಕ ಗಮನ ಸೆಳೆಯಲಿದ್ದಾರೆ.

ಟ್ರೇಲರ್‌ನಲ್ಲಿ ಸಮಂತಾ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಟ್ರೇಲರ್‌ನಲ್ಲಿ ಸ್ಯಾಮ್ ಎರಡು ಭಿನ್ನ ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಒಂದೆಡೆ ಅತ್ಯಂತ ಸಾಂಪ್ರದಾಯಿಕ ಹಾಗೂ ಮುಗ್ಧ ಸೊಸೆಯಾಗಿ ಇಷ್ಟವಾಗುವ ಅವರು, ಮತ್ತೊಂದೆಡೆ ಅನಿವಾರ್ಯವಾಗಿ ಭೂಗತ ಜಗತ್ತಿಗೆ ಎಂಟ್ರಿ ಕೊಟ್ಟು ಗೂಂಡಾಗಳ ಎದೆಯಲ್ಲಿ ನಡುಕ ಹುಟ್ಟಿಸುವ ರಗಡ್ ಮಹಿಳೆಯಾಗಿ ಅಬ್ಬರಿಸಿದ್ದಾರೆ. ‘ನನ್ನ ಜೀವ ಅಪಾಯದಲ್ಲಿದ್ದರೂ ಸಹ ನನ್ನ ಕುಟುಂಬಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುತ್ತೇನೆ’ ಎಂಬ ಸಮಂತಾ ಬಾಯಿಂದ ಬರುವ ಪವರ್‌ಫುಲ್ ಡೈಲಾಗ್‌ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ.

ಇದನ್ನೂ ಓದಿ: ಟಾಲಿವುಡ್​​​ನಲ್ಲಿ ಮತ್ತೊಂದು ಸಮಂತಾ ಆಗ್ತಾರಾ ಜಾನ್ವಿ ಕಪೂರ್ ?

ಸಮಂತಾ ‘ಓ ಬೇಬಿ’ ಹೆಸರಿನ ಸಿನಿಮಾ ಮಾಡಿದ್ದರು. ಈ ಚಿತ್ರವನ್ನು ನಿರ್ದೇಶಿಸಿದ್ದ ನಂದಿನಿ ರೆಡ್ಡಿ ಅವರೇ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಮಂತಾ ಪತಿ, ನಿರ್ದೇಶಕ ರಾಜ್ ನಿಡಿಮೋರು ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಮಂತಾ ತಮ್ಮದೇ ಆದ ‘ತ್ರಲಾಲಾ ಮೂವಿಂಗ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಮಾ ಇಂಟಿ ಬಂಗಾರಂ ಟ್ರೇಲರ್

ಕನ್ನಡಿಗ ದಿಗಂತ್ ಸೇರಿದಂತೆ ತಾರಾಗಣದಲ್ಲಿ ಯಾರಿದ್ದಾರೆ?

ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಒಂದಾಗಿದೆ. ವಿಶೇಷವಾಗಿ ಕನ್ನಡದ ಚಾಕಲೇಟ್ ಹೀರೊ ದಿಗಂತ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಅವರೊಂದಿಗೆ ಮತ್ತೋರ್ವ ಕನ್ನಡಿಗ ಗುಲ್ಶನ್ ದೇವಯ್ಯ ಇದ್ದಾರೆ. ಇದರಲ್ಲಿ ದಿಗಂತ್ ಹಾಲಿ ಪತಿ ಆದರೆ, ಗುಲ್ಶನ್ ಮಾಜಿ ಪತಿ ಎನ್ನಲಾಗಿದೆ. ಇಬ್ಬರ ಮಧ್ಯೆ ಸಮಂತಾ ಸಿಕ್ಕಿ ಹಾಕಿಕೊಳ್ಳುತ್ತಾರೆ. ಜೂನ್ 19 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Guru Sanchara 2026: ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Dhanu Rashi 2026 Predictions: Jupiter Transit Effects, Opportunities, and Remedies

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಧನುಸ್ಸು ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರಲ್ಲಿ ಧನುಸ್ಸು ರಾಶಿಯವರಿಗೆ ಗುರು ಸಂಚಾರವು ಮಿಶ್ರ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ಗುರು ಎಂಟನೇ ಮನೆಗೆ ಪ್ರವೇಶಿಸುವುದರಿಂದ ಆರಂಭದಲ್ಲಿ ನಿಷ್ಟೂರ, ಅಪವಾದಗಳು ಎದುರಾಗಬಹುದು. ಬಂಧು ಮಿತ್ರರಿಂದ ಮತ್ತು ಕುಟುಂಬದ ಸದಸ್ಯರಿಂದ ಅಪವಾದಗಳು ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗ್ರತೆ ವಹಿಸಿ. ಆರೋಗ್ಯದ ಕಡೆ ಗಮನವಿರಲಿ.

ಅದೇ ಸಮಯದಲ್ಲಿ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು, ಶಿಕ್ಷಣ ಕ್ಷೇತ್ರದಲ್ಲಿನವರಿಗೆ ಪ್ರಗತಿ ಇರುತ್ತದೆ. ವಿವಾಹ ಯೋಗ ಬಲವಾಗಿದೆ, ವ್ಯಾಪಾರದಲ್ಲಿ ಲಾಭ, ಸರ್ಕಾರಿ ನೌಕರರಿಗೆ ಶುಭಫಲಗಳು ಇವೆ. ರಾಜಕೀಯ ವ್ಯಕ್ತಿಗಳು, ಮಹಿಳೆಯರು ಹಾಗೂ ವಿದೇಶದಿಂದ ಶುಭ ಸುದ್ದಿ ನಿರೀಕ್ಷಿಸಬಹುದು ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link