Category Archives: Blog

Your blog category

Guru Sanchara 2026: ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Dhanu Rashi 2026 Predictions: Jupiter Transit Effects, Opportunities, and Remedies

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಧನುಸ್ಸು ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರಲ್ಲಿ ಧನುಸ್ಸು ರಾಶಿಯವರಿಗೆ ಗುರು ಸಂಚಾರವು ಮಿಶ್ರ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ಗುರು ಎಂಟನೇ ಮನೆಗೆ ಪ್ರವೇಶಿಸುವುದರಿಂದ ಆರಂಭದಲ್ಲಿ ನಿಷ್ಟೂರ, ಅಪವಾದಗಳು ಎದುರಾಗಬಹುದು. ಬಂಧು ಮಿತ್ರರಿಂದ ಮತ್ತು ಕುಟುಂಬದ ಸದಸ್ಯರಿಂದ ಅಪವಾದಗಳು ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗ್ರತೆ ವಹಿಸಿ. ಆರೋಗ್ಯದ ಕಡೆ ಗಮನವಿರಲಿ.

ಅದೇ ಸಮಯದಲ್ಲಿ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು, ಶಿಕ್ಷಣ ಕ್ಷೇತ್ರದಲ್ಲಿನವರಿಗೆ ಪ್ರಗತಿ ಇರುತ್ತದೆ. ವಿವಾಹ ಯೋಗ ಬಲವಾಗಿದೆ, ವ್ಯಾಪಾರದಲ್ಲಿ ಲಾಭ, ಸರ್ಕಾರಿ ನೌಕರರಿಗೆ ಶುಭಫಲಗಳು ಇವೆ. ರಾಜಕೀಯ ವ್ಯಕ್ತಿಗಳು, ಮಹಿಳೆಯರು ಹಾಗೂ ವಿದೇಶದಿಂದ ಶುಭ ಸುದ್ದಿ ನಿರೀಕ್ಷಿಸಬಹುದು ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

“ನಾವೇನು ಫಿಲಂ ಸ್ಟಾರ್ಸ್ ಅಲ್ಲ”: ರಿಯಾನ್​ನತ್ತ ವೈಭವ್ ಓರೆಗಣ್ಣಿನ  ನೋಟ! – Kannada News | IPL 2026: Vaibhav Sooryavanshi Stares At Riyan Parag

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಮುಲ್ಲನ್​ಪುರ್​ಗೆ ಬಂದಿಳಿದಿದೆ. ನಾಳೆ (ಮೇ 27) ನಡೆಯಲಿರುವ ಈ ಪಂದ್ಯಕ್ಕಾಗಿ ಮುಂಬೈ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಆರ್​ಆರ್ ಆಟಗಾರರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು (ಛಾಯಾಗ್ರಾಹಕರು) ಸುತ್ತುವರಿದಿದ್ದರು. ಇದೇ ವೇಳೆ ಆಗಮಿಸಿದ ರಿಯಾನ್ ಪರಾಗ್​ಗೆ ಫೋಟೋ ಪೋಸ್ ನೀಡುವಂತೆ ಸೂಚಿಸಿದ್ದಾರೆ.

“ರಿಯಾನ್ ಭಾಯ್, ವೈಭವ್ ಜೊತೆ ಒಂದು ಫೋಟೋ ಪ್ಲೀಸ್, ಇಬ್ಬರೂ ಒಟ್ಟಿಗೆ ನಿಲ್ಲಿ” ಎಂದು ಛಾಯಾಗ್ರಾಹಕರೊಬ್ಬರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಿಯಾನ್ ಪರಾಗ್, “ನಾವು ಫಿಲಂ ಸ್ಟಾರ್​ಗಳಲ್ಲ” ಎಂದು ಹೇಳುತ್ತಾ ಮುಂದೆ ಸಾಗಿದ್ದಾರೆ.

ಆದರೆ ಇದೇ ವೇಳೆ ಅತ್ತ ವೈಭವ್ ಸೂರ್ಯವಂಶಿ ಪಾಪರಾಜಿಗಳಿಗೆ ಪೋಸ್ ನೀಡಲು ಸಜ್ಜಾಗುತ್ತಿದ್ದರು. ಇದರ ನಡುವೆ ರಿಯಾನ್ ಪರಾಗ್ ಹೇಳಿದ ಡೈಲಾಗ್ ಕೇಳಿ ವೈಭವ್ ಸೂರ್ಯವಂಶಿ ಒಂದು ಕ್ಷಣ ತಬ್ಬಿಬ್ಬಾದರು. ಅಲ್ಲದೆ ರಾಜಸ್ಥಾನ್ ರಾಯಲ್ಸ್  ನಾಯಕನನ್ನೇ ಒಂದು ವಿಚಿತ್ರ ಹಾಗೂ  ಓರೆಗಣ್ಣಿನ ನೋಟದಿಂದ ದಿಟ್ಟಿಸಿ ನೋಡಿದರು.

ವೈಭವ್ ಓರೆಗಣ್ಣಿನ  ನೋಟ!

ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಕೆಲವರು ರಿಯಾನ್ ಪರಾಗ್ ನಡೆಯನ್ನು ಸಮರ್ಥಿಸಿಕೊಂಡರೆ, ಇನ್ನೂ ಕೆಲವರು ಇಷ್ಟೊಂದು ಅಹಂ ಒಳ್ಳೆದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಎಲಿಮಿನೇಟರ್ ಪಂದ್ಯ:

ಇಂಡಿಯನ್ ಪ್ರೀಮಿಯರ್ ಲೀಗ್​ನ 72ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಮೇ 27 ರಂದು ಮುಲ್ಲನ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ. ಇನ್ನು ಸೋಲುವ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ.

ಅಂದರೆ ನಾಳೆ ನಡೆಯಲಿರುವ ಮ್ಯಾಚ್​ನಲ್ಲಿ ಒಂದು ತಂಡ ಹೊರಬೀಳುವುದು ಖಚಿತ. ಇನ್ನು ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋಲುವ ತಂಡದ ವಿರುದ್ಧ ದ್ವಿತೀಯ ಕ್ವಾಲಿಫೈಯರ್ ಮ್ಯಾಚ್ ಆಡಲಿದೆ.

ಇದನ್ನೂ ಓದಿ: ಟ್ರೋಲ್ ಮಾಡಿದವರಿಗೆ ಶ್ರೇಷ್ಠಾ ಅಯ್ಯರ್ ತಿರುಗೇಟು!

ಪ್ಲೇಆಫ್ ಸುತ್ತಿನ ವೇಳಾಪಟ್ಟಿ:

ಪಂದ್ಯ ದಿನಾಂಕ ಮುಖಾಮುಖಿ ಕ್ರೀಡಾಂಗಣ / ಸ್ಥಳ
ಕ್ವಾಲಿಫೈಯರ್ 1  ಮೇ 26, ಮಂಗಳವಾರ  ರಾಯಲ್ ಚಾಲೆಂಜರ್ಸ್​ ಬೆಂಗಳೂರು vs ಗುಜರಾತ್ ಟೈಟಾನ್ಸ್ ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ
ಎಲಿಮಿನೇಟರ್  ಮೇ 27, ಬುಧವಾರ ಸನ್​ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ ಮುಲ್ಲನ್‌ಪುರ್ ಸ್ಟೇಡಿಯಂ, ನ್ಯೂ ಚಂಡೀಗಢ್
ಕ್ವಾಲಿಫೈಯರ್ 2  ಮೇ 29, ಶುಕ್ರವಾರ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ vs ಎಲಿಮಿನೇಟರ್ ವಿಜೇತ ತಂಡ ಮುಲ್ಲನ್‌ಪುರ್ ಸ್ಟೇಡಿಯಂ, ನ್ಯೂ ಚಂಡೀಗಢ್
ಫೈನಲ್  ಮೇ 31, ಭಾನುವಾರ ಕ್ವಾಲಿಫೈಯರ್ 1 ವಿಜೇತರು vs ಕ್ವಾಲಿಫೈಯರ್ 2 ವಿಜೇತರು ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

Source link

‘ಮ್ಯಾಂಗೊ ಪಚ್ಚ’ ಟ್ರೈಲರ್: ಸಾಮ್ರಾಜ್ಯ ಕಟ್ಟಲು ಹೊರಟ ಸಾಮಾನ್ಯನ ಕತೆ – Kannada News | Mango Pachcha movie trailer this is a full packaged Kannada movie

ಕಿಚ್ಚ ಸುದೀಪ್ ಪ್ರಸ್ತುತ ಪಡಿಸುತ್ತಿರುವ, ಅವರ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸುದೀಪ್ ಅವರು ಈ ಸಿನಿಮಾವನ್ನು ಪದೇ ಪದೇ ಪ್ರಮೋಟ್ ಮಾಡುತ್ತಿದ್ದು, ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ನೋಡಿದರೆ ಇದೊಂದು ಸಾಮಾನ್ಯ ಯುವಕನ ಅಸಾಮಾನ್ಯ ಕತೆಯೆಂತೆ ತೋರುತ್ತಿದೆ. ‘ಶಕ್ತಿ ಇರುವವರು ಯುದ್ಧ ಗೆಲ್ಲುತ್ತಾರೆ, ಆತ್ಮಶಕ್ತಿ ಉಳ್ಳವರು ಸಾಮ್ರಾಜ್ಯ ಕಟ್ಟುತ್ತಾರೆ’ ಎಂಬ ಅಡಿಬರಹದೊಂದಿಗೆ ಬಿಡುಗಡೆ ಆಗಿರುವ ಈ ಟ್ರೈಲರ್ ಗಮನ ಸೆಳೆಯುತ್ತಿದೆ.

ಸಾಮಾನ್ಯ ಯುವಕ ಪ್ರಶಾಂತ್, ಗೆಳೆಯರ ಬಾಯಲ್ಲಿ ಪಚ್ಚ ಆಗಿ ಆ ನಂತರ ವ್ಯವಸ್ಥೆಯ ಹೊಡೆತಕ್ಕೆ ಸಿಲುಕಿ ‘ಮ್ಯಾಂಗೊ ಪಚ್ಚ’ ಆಗುವುದು ಹೇಗೆಂಬುದನ್ನು ‘ಮ್ಯಾಂಗೊ ಪಚ್ಚ’ ಸಿನಿಮಾ ಒಳಗೊಂಡಿದೆ. ಸಾಮಾನ್ಯ ಬಡ ಮಧ್ಯಮ ಕುಟುಂಬದ ಯುವಕ ಸಾಮ್ರಾಜ್ಯ ಕಟ್ಟುವ ಕನಸು ಕಾಣುವುದು ಹಾಗೂ ಅದರ ಈಡೇರಿಕೆಗೆ ಮಾಡುವ ಪ್ರಯತ್ನಗಳು, ಆತನ ದಾರಿಗೆ ಅಡ್ಡಾಗುವ ವ್ಯಕ್ತಿಗಳು, ಅವರನ್ನು ನಾಯಕ ಹಿಮ್ಮೆಟ್ಟಿಸುವ ಬಗೆ ಇನ್ನಿತರೆಗಳನ್ನು ಈ ಸಿನಿಮಾ ಒಳಗೊಂಡಿದೆ ಎಂಬುದನ್ನು ಟ್ರೈಲರ್ ಹೇಳುತ್ತಿದೆ.

‘ಮ್ಯಾಂಗೊ ಪಚ್ಚ’ ಮೈಸೂರು ಭಾಗದಲ್ಲಿ ಒಂದು ದಶಕದ ಹಿಂದೆ ನಡೆಯುವ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟ್ರೈಲರ್​​ನಲ್ಲಿ ತೋರಿಸಿರುವಂತೆ ಇದೊಂದು ಸಂಪೂರ್ಣ ಪ್ಯಾಕೇಜ್ ಆಗಿರುವ ಕಮರ್ಶಿಯಲ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಆಕ್ಷನ್, ಫ್ಯಾಮಿಲಿ ಸೆಂಟಿಮೆಂಟ್, ಲವ್ ಸ್ಟೋರಿ, ಹಾಸ್ಯ ಎಲ್ಲವೂ ಇದೆ. ಸಿನಿಮಾದ ಮತ್ತೊಂದು ವಿಶೇಷವೆಂದರೆ ಇದು ಸುದೀಪ್ ಪುತ್ರಿ ಸಾನ್ವಿ ಸುದೀಪ್ ನಿರ್ಮಾಣ ಮಾಡುತ್ತಿರುವ ಮೊದಲ ಸಿನಿಮಾ ಆಗಿದೆ. ತಮ್ಮ ತಾಯಿ ಪ್ರಿಯಾ ಅವರೊಟ್ಟಿಗೆ ಸೇರಿ ಈ ಸಿನಿಮಾದ ಸಹ ನಿರ್ಮಾಣ ಮಾಡುತ್ತಿದ್ದಾರೆ ಅವರು.

ಟ್ರೈಲರ್​​ನಲ್ಲಿ ನಾಯಕ ಸಂಚಿತ್ ಸಂಜೀವ್ ಜೊತೆಗೆ ಇನ್ನೂ ಕೆಲವು ಪಾತ್ರಗಳ ಪರಿಚಯ ಮಾಡಲಾಗಿದೆ. ನಾಯಕನ ತಂದೆಯ ಪಾತ್ರದಲ್ಲಿ ಉಗ್ರಂ ಮಂಜು ನಟಿಸಿದ್ದಾರೆ. ನಾಯಕಿಯಾಗಿ ಕಾಜಲ್ ಕುಂದರ್, ವಿಲನ್ ಆಗಿ ನಟ ಮಯೂರ್ ಪಟೇಲ್ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ವಿವೇಕ. ಸಿನಿಮಾಕ್ಕೆ ಸುದೀಪ್ ಪುತ್ರಿ ಸಾನ್ವಿ ಅವರು ಬಂಡವಾಳ ಹಾಕಿರುವ ಜೊತೆಗೆ ಒಂದು ಹಾಡನ್ನೂ ಸಹ ಹಾಡಿದ್ದಾರಂತೆ. ಸಿನಿಮಾಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ. ಸಿನಿಮಾಕ್ಕೆ ಕೆಆರ್​​ಜಿ ಸಹ ಬಂಡವಾಳ ಹೂಡಿದ್ದು, ವಿತರಣೆ ಸಹ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs GT: 4 ಕಾರಣಗಳಿಂದ ಮೊದಲ ಕ್ವಾಲಿಫೈಯರ್​ ‘ಕುತೂಹಲ’ – Kannada News | IPL 2026, RCB vs GT Qualifier 1 Match in Dharamsala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಆದರೆ ಹೀಗೆ ಫೈನಲ್​ಗೆ ಎಂಟ್ರಿ ಕೊಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈ ಬಾರಿ ಮುಖಾಮುಖಿಯಾಗುತ್ತಿರುವುದು ಎರಡು ಬಲಿಷ್ಠ ತಂಡಗಳು.

ಈ ಬಲಿಷ್ಠತೆಯ ನಡುವೆ ನಾಲ್ಕು ಅಂಶಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಮತ್ತಷ್ಟು ರೋಮಾಂಚನಗೊಳಿಸಲಿವೆ. ಅಂದರೆ ಈ ಹಿಂದಿನ ಅಂಕಿ ಅಂಶಗಳನ್ನು ಗಮನಿಸಿದರೆ ಇಂದಿನ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಕಂಡು ಬರುವುದು ದಿಟ. ಏಕೆಂದರೆ…

  • ಗುಜರಾತ್ ಟೈಟಾನ್ಸ್ ತಂಡಕ್ಕೆ ಧರ್ಮಶಾಲಾದ ಮೈದಾನದ ಪರಿಚಯವಿಲ್ಲ. 2022 ರಲ್ಲಿ ಐಪಿಎಲ್‌ಗೆ ಪ್ರವೇಶಿಸಿದ ಗುಜರಾತ್ ಟೈಟಾನ್ಸ್ ಧರ್ಮಶಾಲಾದಲ್ಲಿ ಈವರೆಗೆ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಇದೇ ಮೊದಲ ಬಾರಿಗೆ ಹೆಚ್​ಪಿಸಿಎ ಮೈದಾನದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಏತನ್ಮಧ್ಯೆ, ಆರ್‌ಸಿಬಿ ಈಗಾಗಲೇ ಐಪಿಎಲ್ 2026 ರಲ್ಲಿ ಇಲ್ಲಿ ಒಂದು ಪಂದ್ಯವನ್ನು ಆಡಿದ್ದು, ಆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅನ್ನು 23 ರನ್‌ಗಳಿಂದ ಸೋಲಿಸಿ ಭರ್ಜರಿ ಜಯ ಸಾಧಿಸಿತ್ತು.
  • ಮೊದಲ ಕ್ವಾಲಿಫೈಯರ್ ಪಂದ್ಯದ ಬಗ್ಗೆ ಕುತೂಹಲ ಹೆಚ್ಚಿಸಿರುವ ಮತ್ತೊಂದು ಅಂಶವೆಂದರೆ ಆರ್‌ಸಿಬಿ ಮತ್ತು ಜಿಟಿ ಮೊದಲ ಬಾರಿಗೆ ಪ್ಲೇಆಫ್‌ನಲ್ಲಿ ಎದುರಾಗುತ್ತಿರುವುದು. ಈ ಎರಡೂ ತಂಡಗಳು ಐಪಿಎಲ್‌ನಲ್ಲಿ ಎಂಟು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದಾಗ್ಯೂ, ಉಭಯ ತಂಡಗಳು  ಪ್ಲೇಆಫ್‌ನಲ್ಲಿ ಪರಸ್ಪರ ಮುಖಾಮುಖಿಯಾಗಿರಲಿಲ್ಲ.
  • ಕಳೆದ ಮೂರು ಸೀಸನ್​ಗಳಲ್ಲಿ ಎರಡೂ ತಂಡಗಳ ಅಂಕಿಅಂಶಗಳನ್ನು ಗಣನೆಗೆ ತೆಗೆದುಕೊಂಡರೆ, ಇಂದಿನ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಏಕೆಂದರೆ 2023 ರಿಂದ, ಆರ್‌ಸಿಬಿ ಮತ್ತು ಜಿಟಿ ಐಪಿಎಲ್‌ನಲ್ಲಿ ಎರಡು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿದೆ. ಗಮನಾರ್ಹ ವಿಷಯವೆಂದರೆ ಈ ಅವಧಿಯಲ್ಲಿ, ಎರಡೂ ತಂಡಗಳ ಗೆಲುವು-ಸೋಲಿನ ದಾಖಲೆ ಒಂದೇ ಆಗಿದೆ. ಅಂದರೆ ಆರ್‌ಸಿಬಿ ಮತ್ತು ಜಿಟಿ ಎರಡೂ 34 ಪಂದ್ಯಗಳನ್ನು ಗೆದ್ದಿವೆ. ಹಾಗೆಯೇ 24 ಪಂದ್ಯಗಳನ್ನು ಸೋತಿವೆ.
  • ಮೊದಲ ಕ್ವಾಲಿಫೈಯರ್ ಪಂದ್ಯದ ಮತ್ತೊಂದು ಕುತೂಹಲಕಾರಿ ವಿಷಯವೆಂದರೆ ಕ್ವಾಲಿಫೈಯರ್ 1 ರ ವಿಜೇತರು ಕಳೆದ ಎಂಟು ಸತತ ಸೀಸನ್‌ಗಳನ್ನು ಒಳಗೊಂಡಂತೆ 12 ಬಾರಿ ಐಪಿಎಲ್ ಚಾಂಪಿಯನ್ ಆಗಿದ್ದಾರೆ. ಈ ಅಂಕಿಅಂಶವು ಆರ್‌ಸಿಬಿ vs ಜಿಟಿ ಸುತ್ತಲಿನ ಉತ್ಸಾಹವನ್ನು ಹೆಚ್ಚಿಸಿದ್ದು, ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದನ್ನೂ ಓದಿ: ಟ್ರೋಲ್ ಮಾಡಿದವರಿಗೆ ಶ್ರೇಷ್ಠಾ ಅಯ್ಯರ್ ತಿರುಗೇಟು!

ಅಂದಹಾಗೆ ಇಂದಿನ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಬೇಕಾಗುತ್ತದೆ. ಅಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಿದರೆ, ಸೋತ ತಂಡ ಎಲಿಮೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ ಮುಖಾಮುಖಿಯಾಗಲಿದೆ. ಈ ಮೂಲಕ ದ್ವಿತೀಯ ಕ್ವಾಲಿಫೈಯರ್ ಪಂದ್ಯದ ಮೂಲಕ ಫೈನಲ್​ಗೇರುವ ಅವಕಾಶ ಪಡೆಯಲಿದೆ.

Source link

Guru Sanchara 2026: ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ! – Kannada News | Scorpio Horoscope 2026: Jupiters Favourable Transit and its Impact

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ವೃಶ್ಚಿಕ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ವೃಶ್ಚಿಕ ರಾಶಿಯವರಿಗೆ ಅತ್ಯಂತ ಶುಭಕರವಾಗಿದೆ. ಗುರುವು ಒಂಬತ್ತನೇ ಮನೆಯಲ್ಲಿ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ಗುರುಬಲ ಪ್ರಾಪ್ತವಾಗಲಿದೆ. ಗುರುವು ವೃಶ್ಚಿಕ ರಾಶಿಯನ್ನು ವೀಕ್ಷಿಸುವುದರಿಂದ ಡಬಲ್ ಧಮಾಕ ಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು, ವಿವಾಹ ವಿಷಯಗಳಲ್ಲಿ ಅನುಕೂಲ, ಮತ್ತು ಉನ್ನತ ಶಿಕ್ಷಣಕ್ಕೆ ಒಳ್ಳೆಯ ಸಮಯವಾಗಿದೆ.

ರಾಜಕೀಯ ವ್ಯಕ್ತಿಗಳಿಗೆ ಅನೇಕ ಅವಕಾಶಗಳು ಮತ್ತು ಜವಾಬ್ದಾರಿಗಳು ಸಿಗುತ್ತವೆ. ವ್ಯಾಪಾರದಲ್ಲಿ ಲಾಭ, ಕಾನೂನು ವಿಷಯಗಳಲ್ಲಿ ಶುಭ ಮತ್ತು ಅಪವಾದಗಳಿಂದ ಮುಕ್ತಿ ದೊರೆಯಲಿದೆ. ಮಹಿಳೆಯರಿಗೆ ತವರು ಮತ್ತು ಗಂಡನ ಮನೆ ಕಡೆಯಿಂದ ಬೆಂಬಲ ಹೆಚ್ಚುತ್ತದೆ. ಸಾಲ ತೀರಿಸಲು, ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದು ಸಕಾಲ. ಭೂಮಿ ಖರೀದಿ ಮತ್ತು ಹೊಸ ಉದ್ಯಮ ಪ್ರಾರಂಭಿಸುವ ಯೋಗವಿದೆ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಆದರೆ, ಶುಭ ಕಾರ್ಯಗಳಲ್ಲಿ ಅತಿಯಾದ ಖರ್ಚು ಮತ್ತು ಹಣಕಾಸಿನ ವ್ಯವಹಾರಗಳಲ್ಲಿ ಜಾಗ್ರತೆ ವಹಿಸಬೇಕು. ಪ್ರತಿದಿನ ಗಾಯತ್ರಿ ಮಂತ್ರ ಜಪಿಸುವುದು ಮತ್ತು ಗುರುವಾರ ಹಸುವಿಗೆ ಕಡಲೆಬೇಳೆ-ಬೆಲ್ಲ ನೀಡುವುದು ಶುಭ ತರಲಿದೆ. ಒಟ್ಟಾರೆ ವೃಶ್ಚಿಕ ರಾಶಿಯವರಿಗೆ ಇದು ಅದೃಷ್ಟದ ಸಮಯ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ – Kannada News | A little girl who touched her own foot and bowed

ಪುಟಾಣಿಗಳು (little kids) ಏನು ಮಾಡಿದ್ರೂ ಚಂದನೇ. ಕೆಲವೊಮ್ಮೆ ಈ ಪುಟ್ಟ ಮಕ್ಕಳ ನಡೆನುಡಿಯಲ್ಲಿ ಮುಗ್ಧತೆ ಎದ್ದು ಕಾಣುತ್ತದೆ. ಹೆತ್ತವರು ಮಕ್ಕಳಿಗೆ ಏನು ಹೇಳಿಕೊಡುತ್ತಾರೆ ಅದನ್ನು ಚಾಚು ತಪ್ಪದೇ ಕಲಿಯುತ್ತದೆ. ಇದೀಗ ಪುಟಾಣಿಯೊಂದು ತನ್ನ ಕಾಲನ್ನು ತಾನೇ ಸ್ಪರ್ಶಿಸಿ ಆಶೀರ್ವಾದ ಪಡೆದುಕೊಂಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಈ ಪುಟ್ಟ ಹುಡುಗಿಯ ಮುಗ್ಧತೆಗೆ ಫಿದಾ ಆಗಿದ್ದಾರೆ.

Ishanvi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಮುಗ್ಧತೆ ತುಂಬಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಪುಟ್ಟ ಹುಡುಗಿಯೊಂದು ಬಗ್ಗಿಕೊಂಡು ತನ್ನ ಕಾಲನ್ನು ತಾನೇ ಮುಟ್ಟಿ ಆಶೀರ್ವಾದ ಪಡೆದುಕೊಂಡಿದೆ. ಹೀಗೆ ನಾಲ್ಕೈದು ಬಾರಿ ನಮಸ್ಕರಿಸಿದ್ದು, ಈ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ

ಈ ವಿಡಿಯೋ 4 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮಕ್ಕಳು ಎಷ್ಟು ಮುಗ್ಧರು ಎಂದು ಹೇಳಿದ್ದಾರೆ. ಇನ್ನೊಬ್ಬರು, ಬೇರೆಯವರಿಗೆ ಗೌರವ ಕೊಡೋದು ಎಷ್ಟು ಮುಖ್ಯವೋ ನಮ್ಗೆ ನಾವು ಗೌರವಿಸೋದು ಅಷ್ಟೇ ಮುಖ್ಯ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇದು ಆತ್ಮಗೌರವ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:01 pm, Tue, 26 May 26

Source link

‘ಅನನ್ಯಾ ಪಾಂಡೆ ಡ್ಯಾನ್ಸ್ ನೋಡಿ ಕಣ್ಣಲ್ಲಿ ರಕ್ತ ಬಂತು’ – Kannada News | Ananya Panday’s Bharatanatyam In Chand Mera Dil Sparks Online Backlash

ಬಾಲಿವುಡ್ (Bollywood) ನಟಿ ಅನನ್ಯಾ ಪಾಂಡೆ, ನಟನೆ ಬಿಟ್ಟು ಬೇರೆ ಕಾರಣಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಸಂದರ್ಶನಗಳಲ್ಲಿ ಚಿತ್ರ-ವಿಚಿತ್ರ ಮಾತುಗಳು, ಬಿಕಿನಿ ಚಿತ್ರಗಳು, ಬದಲಾಗುವ ಬಾಯ್​​ಫ್ರೆಂಡ್ ಇಂಥಹುದೇ ಕಾರಣಕ್ಕೆ ಸುದ್ದಿಯಲ್ಲಿರುವ ಅನನ್ಯಾ, ನಟನೆಯ ಕಾರಣಕ್ಕೆ ಸುದ್ದಿಗೆ ಬರುವುದೇ ಅಪರೂಪ. ಕೇವಲ ನೆಪೊಟಿಸಮ್​​ನಿಂದ ವೃತ್ತಿ ಜೀವನ ನಡೆಸುತ್ತಿರುವ ಅನನ್ಯಾ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಲ್ಲಿರುವುದು ಅವರ ಕೆಟ್ಟ ನೃತ್ಯ ಪ್ರದರ್ಶನದಿಂದ. ಅನನ್ಯಾ ಪಾಂಡೆ ನಟಿಸಿರುವ ಸಿನಿಮಾ ಒಂದು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಅನನ್ಯಾ ಪಾಂಡೆ ಮಾಡಿರುವ ಡ್ಯಾನ್ಸ್ ನೋಡಿ ನೆಟ್ಟಿಗರು ಹಣೆ-ಹಣೆ ಚಚ್ಚಿಕೊಂಡಿದ್ದಾರೆ. ಕೆಲವರು ಚಿತ್ರಮಂದಿರದಲ್ಲೇ ಉರುಳಾಡಿ ನಕ್ಕಿದ್ದಾರೆ. ಆದರೆ ಕೆಲ ಭರತನಾಟ್ಯ ನೃತ್ಯಪಟುಗಳು ಅನನ್ಯಾರ ಡ್ಯಾನ್ಸ್​​ ಅನ್ನು ವಿಮರ್ಶಿಸಿದ್ದು ಟೀಕೆ ವ್ಯಕ್ತಪಡಿಸಿದ್ದಾರೆ.

ಅನನ್ಯಾ ಪಾಂಡೆ ಮತ್ತು ಲಕ್ಷ್ಯ್ ನಟನೆಯ ‘ಚಾಂದ್ ಮೇರಾ ದಿಲ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಅನನ್ಯಾ ಪಾಂಡೆ ಬಹುಮುಖ ಪ್ರತಿಭೆ ಹೊಂದಿರುವ ಕಾಲೇಜು ಯುವತಿಯ ಪಾತ್ರದಲ್ಲಿ ನಟಿಸಿದ್ದಾರೆ. ಕ್ರೀಡೆ, ಓದು, ಗಾಯನ, ನೃತ್ಯ, ವಿಜ್ಞಾನ ಪ್ರಯೋಗ ಎಲ್ಲದರಲ್ಲೂ ಮುಂದಿರುವ ಯುವತಿ ಚಾಂದಿನಿ ಪಾತ್ರದಲ್ಲಿ ಅನನ್ಯಾ ನಟಿಸಿದ್ದು, ಕಾಲೇಜು ಕಾರ್ಯಕ್ರಮದಲ್ಲಿ ಅನನ್ಯಾ ಭರತನಾಟ್ಯ ಮಾಡುವ ದೃಶ್ಯವೊಂದು ಸಿನಿಮಾನಲ್ಲಿದೆ. ಡ್ಯಾನ್ಸ್ ದೃಶ್ಯದಲ್ಲಿ ಅನನ್ಯಾ ಅವರು ಭರತನಾಟ್ಯ ಮತ್ತು ಹಿಪ್-ಹಾಪ್ ಮಿಶ್ರಿತ ‘ಫ್ಯೂಷನ್’ ನೃತ್ಯ ಮಾಡಿದ್ದಾರೆ. ಅನನ್ಯಾರ ಆ ನೃತ್ಯಕ್ಕೆ ತೀವ್ರ ವಿರೋಧ ಮತ್ತು ವ್ಯಂಗ್ಯ ವ್ಯಕ್ತವಾಗಿದೆ.

ಇದನ್ನೂ ಓದಿ:ಡ್ಯಾನ್ಸ್​ಗಾಗಿ ಎಂತ ರಿಸ್ಕ್ ತಗೊಂಡ್ರಾ ನೋಡಿ ಅನನ್ಯಾ ಅಮರ್

ಅನನ್ಯಾ ಅವರು ಸಿನಿಮಾನಲ್ಲಿ ಮಾಡಿರುವ ನೃತ್ಯ ಬಹಳ ಕೆಟ್ಟದಾಗಿದ್ದು, ಭರತನಾಟ್ಯದ ಗಂಧ-ಗಾಳಿಯೂ ಇಲ್ಲದ ವ್ಯಕ್ತಿಯೊಬ್ಬರು ಸುಮ್ಮನೆ, ಕೈ-ಕಾಲು ಆಡಿಸಿದಂತಿದೆ ಅನನ್ಯಾ ಮಾಡಿರುವ ನೃತ್ಯ ಪ್ರದರ್ಶನ. ಸಿನಿಮಾನಲ್ಲಿ ತೋರಿಸಿರುವಂತೆ ಆ ನೃತ್ಯ ಪ್ರದರ್ಶನ ನೋಡಿ ನಾಯಕ ಮಂತ್ರ ಮುಗ್ಧನಾಗುವಂತೆ ತೋರಿಸಲಾಗಿದೆ. ಆ ದೃಶ್ಯವನ್ನಂತೂ ನೆಟ್ಟಿಗರು ಇದೀಗ ವಿಪರೀತ ಟ್ರೋಲ್ ಮಾಡುತ್ತಿದ್ದಾರೆ. ಭರತನಾಟ್ಯದ ಮರ್ಯಾದೆಯನ್ನೇ ಅನನ್ಯಾ ಕಳೆದಿದ್ದಾರೆ ಎಂದೆಲ್ಲ ಆಕ್ರೋಶ ಹೊರಹಾಕಿದ್ದಾರೆ.

‘ಭರತನಾಟ್ಯವು ಕ್ರಿಸ್ತಪೂರ್ವ 200 ರಲ್ಲಿ ಹುಟ್ಟಿಕೊಂಡಿತು ಮತ್ತು 2026 ರಲ್ಲಿ ಅನನ್ಯಾ ಪಾಂಡೆ ಅವರಿಂದ ಕೊನೆಗೊಂಡಿತು’ ಎಂದು ನೆಟ್ಟಿಗನೊಬ್ಬ ಪೋಸ್ಟ್ ಹಾಕಿದ್ದಾನೆ. ಮತ್ತೊಬ್ಬ ನೆಟ್ಟಿಗ ತೀವ್ರವಾಗಿ ಪ್ರತಿಕ್ರಿಯಿಸಿ, ‘ಅನನ್ಯಾ ಪಾಂಡೆ ಭರತನಾಟ್ಯವನ್ನು ಸಂಪೂರ್ಣವಾಗಿ ‘ಭರ್ತಾ’ (ಗೊಜ್ಜು) ಮಾಡಿದ್ದಾರೆ. ಅವರ ಹಸ್ತಮುದ್ರೆಗಳು ರೋಬೋಟ್‌ನಂತೆ ಕಾಣುತ್ತಿವೆ ಮತ್ತು ಮುಖದ ಭಾವನೆಗಳು ಕೇವಲ ಆಶ್ಚರ್ಯದ ಇಮೋಜಿಯಂತೆ ಇವೆ. ಇದನ್ನು ನೋಡುತ್ತಿದ್ದರೆ ನನ್ನ ಕಣ್ಣುಗಳಿಂದ ರಕ್ತ ಬರುತ್ತಿರುವಂತಿದೆ” ಎಂದು ಬರೆದುಕೊಂಡಿದ್ದಾರೆ.

ಖ್ಯಾತ ಭರತನಾಟ್ಯ ನೃತ್ಯಗಾರ್ತಿ ಅನಿತಾ ರತ್ನಂ ಅವರು ಕೂಡ ಈ ನೃತ್ಯದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ‘ಈ ವಿಡಿಯೋ ಕ್ಲಿಪ್ ನೋಡುತ್ತಿದ್ದರೆ ಭರತನಾಟ್ಯ ಕಲೆಯನ್ನೇ ಯಾರೋ ಅಪಹರಿಸಿ, ಅದರ ತಪ್ಪು ಗ್ರಹಿಕೆಯನ್ನು ಮಾತ್ರವೇ ಪ್ರದರ್ಶಿಸಿದಂತೆ ಭಾಸವಾಗುತ್ತಿದೆ. ಕೈಗಳನ್ನು ಮನಬಂದಂತೆ ಆಡಿಸುವುದು ಮತ್ತು ಅಸ್ತವ್ಯಸ್ತವಾದ ಕ್ಯಾಮೆರಾ ಮೂವ್‌ಮೆಂಟ್‌ಗಳ ನಡುವೆ, ಭರತನಾಟ್ಯವು ಸದ್ದಿಲ್ಲದೆ ಪಲಾಯನ ಮಾಡಿದಂತೆ ಕಾಣುತ್ತಿದೆ. ಭರತನಾಟ್ಯವು ಸಂಯಮ, ಸಂಪ್ರದಾಯ ಮತ್ತು ಭಾವನೆಗಳ ಮೇಲೆ ನಿಂತಿರುತ್ತದೆ. ಆದರೆ ಈ ಕ್ಲಿಪ್‌ನಲ್ಲಿ ಅದನ್ನು ಲಘು ಭೂಕಂಪದ ಸಮಯದಲ್ಲಿ ನಡೆಯುವ ಮದುವೆ ಸಂಭ್ರಮದ ನೃತ್ಯದಂತೆ ಬಿಂಬಿಸಲಾಗಿದೆ’ ಎಂದು ಅವರು ವಿಮರ್ಶಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!ಅಚ್ಚರಿಯ ಹೇಳಿಕೆ ನೀಡಿದ ಕೆ.ಎನ್. ರಾಜಣ್ಣ – Kannada News | Delay in Karnatakas Political Shifts: KN Rajanna Discusses Dalit CM Demand and Party Unity.

ಬೆಂಗಳೂರು, ಮೇ.26: ಕೆ.ಎನ್. ರಾಜಣ್ಣ ಅವರು “ಸೆಪ್ಟೆಂಬರ್ ಕ್ರಾಂತಿ” ವಿಳಂಬದ ಕುರಿತು ಮಾತನಾಡಿ, ರಾಜಕಾರಣದಲ್ಲಿ ಇಂತಹ ಬದಲಾವಣೆಗಳು ಸಹಜ ಪ್ರಕ್ರಿಯೆ ಎಂದು ತಿಳಿಸಿದ್ದಾರೆ. ತಾವು ಮೊದಲು ಪ್ರಸ್ತಾಪಿಸಿದ “ಸೆಪ್ಟೆಂಬರ್ ಕ್ರಾಂತಿ” ವಿಳಂಬವಾಗಿದ್ದು, ಇದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಪುನರುಚ್ಚರಿಸಿದ್ದಾರೆ. ಬದಲಾವಣೆಗಳು ಕೇವಲ ಕಾಂಗ್ರೆಸ್‌ಗೆ ಸೀಮಿತವಲ್ಲ, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಲ್ಲೂ ಗೊಂದಲಗಳಿವೆ ಮತ್ತು ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾದ ನಂತರ ದಲಿತ ಸಿಎಂ ನೀಡಬೇಕು, ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ತಮ್ಮ ಹಿಂದಿನ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ರಾಜಣ್ಣ ಹೇಳಿದ್ದಾರೆ. ಆದರೆ, ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಮಾತ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶವಿದೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದ್ದು, ಅದರ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಂತ್ರಿಗಳು ಹೈಕಮಾಂಡ್ ಭೇಟಿ ಮಾಡಲು ಹೋಗಿರುವುದು ಸ್ಥಾನ ಕಳೆದುಕೊಳ್ಳುವ ಭೀತಿಯಿಂದಲ್ಲ, ಬದಲಿಗೆ ಪಕ್ಷದ ಕೆಲಸಕ್ಕಾಗಿ ತಮ್ಮನ್ನು ನಿಯೋಜಿಸುವಂತೆ ಬೇಡಿಕೆ ಇಡಲು ಎಂದು ಕೆ.ಎನ್. ರಾಜಣ್ಣ ವಿವರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ದಿಢೀರ್​​ ಸಭೆಯ ಕಾರಣ ಇನ್ನೂ ನಿಗೂಢ – Kannada News | High Command’s Sudden Meeting With DK Shivakumar, Siddaramaiah Sparks Speculation in Karnataka Congress

ನವದೆಹಲಿ/ ಬೆಂಗಳೂರು, ಮೇ 26: ಕಾಂಗ್ರೆಸ್ ಹೈಕಮಾಂಡ್‌ ನಾಯಕರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್​​ ಗಾಂಧಿ,  ವೇಣುಗೋಪಾಲ್, ಮತ್ತು ಸುರ್ಜೆವಾಲ ಸೇರಿದಂತೆ ಹಿರಿಯ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದು, ಸಭೆಯ ಅಜೆಂಡಾ ಗೌಪ್ಯವಾಗಿಯೇ ಉಳಿದಿದೆ. ಸಿಎಂ ಮತ್ತು ಡಿಸಿಎಂ ಇಬ್ಬರಿಗೂ ಕೂಡ ಚರ್ಚೆಯ ಮುಖ್ಯ ವಿಷಯಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಎಂದು ವರದಿಯಾಗಿದ್ದು, ಹೈಕಮಾಂಡ್​​ ಕೂಡ ಈ ವಿಚಾರದಲ್ಲಿ ರಹಸ್ಯ ಕಾದುಕೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link