Headlines

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು! – Kannada News | Drunk Friends Kill Man; Wild Animals Devour Body in Hassan

ಹಾಸನ/ಕಲಬುರಗಿ, ಜನವರಿ 21: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಜ.19ರಂದು ಜಮೀನು ಕಾವಲು ಕಾಯಲು ಗಣೇಶ್​ ಹೋಗಿದ್ದು, ಈ ವೇಳೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ…

Read More

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ – Kannada News | Hubballi Slum Board Homes: 42 Thousand Homes are to be Handed Over on January 24

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಹುಬ್ಬಳ್ಳಿ, ಜನವರಿ 21: ಸ್ವಂತದಾದ ಸೂರು ಹೊಂದಬೇಕು ಎನ್ನುವುದು ಬಡ ಮತ್ತು ಮಧ್ಯಮ ವರ್ಗದವರ ಕನಸು. ರಾಜ್ಯ ಸರ್ಕಾರ ಈ ಕನಸನ್ನು ಈಡೇರಿಸಲು ಮುಂದಾಗಿದ್ದು, ರಾಜ್ಯದಲ್ಲಿ ನಲವತ್ತೆರಡು ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣ ಮಾಡಿದೆ. ಈ ಮನೆಗಳ ಹಂಚಿಕೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇದೇ ಜನವರಿ 24ರಂದು ಹುಬ್ಬಳ್ಳಿಯಲ್ಲಿ (Hubballi) ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಒಂದು ವರ್ಷ ಕಾಯಿಸಿದ ಸರ್ಕಾರ! ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ…

Read More

VIDEO: ಮೊದಲ ಓವರ್​ನಲ್ಲಿ ಗೆರೆ ದಾಟಿ ಔಟಾದ ಬಾಬರ್ ಆಝಂ – Kannada News | Babar Azam Dismissed For A Duck in BBL 2026

ಬಿಗ್ ಬ್ಯಾಷ್ ಲೀಗ್​ನಲ್ಲಿ ಬಾಬರ್ ಆಝಂ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ. ಈ ಕಳಪೆ ಪ್ರದರ್ಶನದ ನಡುವೆ ಕ್ವಾಲಿಫೈಯರ್ ಪಂದ್ಯದಲ್ಲಿ ಔಟಾದ ರೀತಿ ಈಗ ಚರ್ಚೆಗೆ ಕಾರಣವಾಗಿದೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಹಾಗೂ ಪರ್ತ್ ಸ್ಕಾಚರ್ಸ್​​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್​ ಸ್ಕಾಚರ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 147 ರನ್​ಗಳು ಮಾತ್ರ. ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್…

Read More

Red Coral Gemstone: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ – Kannada News | Red Coral Gemstone: Astrological Benefits and How to Wear Guide for Mars

ವೈದಿಕ ಜ್ಯೋತಿಷ್ಯದಲ್ಲಿ ಹವಳವನ್ನು ಮಂಗಳ ಗ್ರಹಕ್ಕೆ ಸಂಬಂಧಿಸಿದ ಅತ್ಯಂತ ಶಕ್ತಿಶಾಲಿ ರತ್ನವೆಂದು ಪರಿಗಣಿಸಲಾಗುತ್ತದೆ. ಇದು ಶಕ್ತಿ, ಧೈರ್ಯ, ಕ್ರಿಯಾಶೀಲತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿನಿಧಿಸುತ್ತದೆ. ಜಾತಕದಲ್ಲಿ ಮಂಗಳ ದುರ್ಬಲವಾಗಿದ್ದರೆ ಅಥವಾ ಅಶುಭ ಗ್ರಹಗಳ ಪ್ರಭಾವದಲ್ಲಿದ್ದರೆ, ಭಯ, ಅತಿಯಾದ ಕೋಪ, ಶಕ್ತಿಯ ಕೊರತೆ ಹಾಗೂ ವೈವಾಹಿಕ ಅಥವಾ ವೃತ್ತಿಜೀವನದ ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಿಕೆ ಇದೆ. ಹವಳವು ಸಮುದ್ರ ಜೀವಿಗಳಿಂದ ಉತ್ಪತ್ತಿಯಾದ ನೈಸರ್ಗಿಕ ರತ್ನವಾಗಿದ್ದು, ಮುಖ್ಯವಾಗಿ ಮೆಡಿಟರೇನಿಯನ್ ಸಮುದ್ರ ಪ್ರದೇಶದಲ್ಲಿ ಕಂಡುಬರುತ್ತದೆ. ಇದರ ಬಣ್ಣ ತಿಳಿ ಕೆಂಪಿನಿಂದ ಹಿಡಿದು…

Read More

ಹೇಳಿದ್ದೇ ಒಂದು, ಅಲ್ಲಿ ಮಾಡಿದ ಕಥೆಯೇ ಇನ್ನೊಂದು; ಫ್ಲಾಪ್ ಚಿತ್ರದ ಬಗ್ಗೆ ರಶ್ಮಿಕಾ ಮಾತು – Kannada News | Rashmika Mandanna Exposes ‘Sikandar’ Script Change, Flop Film Controversy

ಯಾವುದೇ ಸಿನಿಮಾ ಹಿಟ್ ಆದರೆ ಅದರ ಹುಳುಕುಗಳು ಏನಿವೆ ಎಂಬುದು ಚರ್ಚೆಗೆ ಬರೋದೇ ಇಲ್ಲ. ಎಲ್ಲಾ ಕಲಾವಿದರು ಪ್ರೀತಿಯಿಂದ ಮಾತನಾಡುತ್ತಾರೆ. ಒಬ್ಬರನ್ನೊಬ್ಬರು ಹೊಗಳುತ್ತಾರೆ. ನಿರ್ದೇಶಕರ ಶ್ರಮವನ್ನು ಮೆಚ್ಚುತ್ತಾರೆ. ಅದೇ ಸಿನಿಮಾ ಫ್ಲಾಪ್ ಆಯಿತು ಎಂದುಕೊಳ್ಳಿ, ಆಗ ಶುರುವಾಗುತ್ತೆ ನೋಡಿ ಕಿತ್ತಾಟ. ‘ಸಿಕಂದರ್’ ಸಿನಿಮಾ ವಿಷಯದಲ್ಲಿ ಹೀಗೇ ಆಯಿತು. ಸಲ್ಮಾನ್ ಸೆಟ್​​ಗೆ ತಡವಾಗಿ ಬರುತ್ತಾರೆ ಎಂದು ನಿರ್ದೇಶಕ ಎಆರ್ ಮುರುಗದಾಸ್ ಆರೋಪಿಸಿದ್ದರು. ಇದಕ್ಕೆ ಸಲ್ಲು ಕೌಂಟರ್ ಕೂಡ ಕೊಟ್ಟಿದ್ದರು. ಈಗ ಈ ಫ್ಲಾಪ್ ಚಿತ್ರದ ಮತ್ತೊಂದು ಹುಳುಕನ್ನು ರಶ್ಮಿಕಾ…

Read More

ನಿಧಿ ಸಿಕ್ಕಿದ್ದೇ ಸಿಕ್ಕಿದ್ದು, ಲಕ್ಕುಂಡಿಯಲ್ಲಿ ಜಮೀನಿನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ – Kannada News | Gold Treasure Discovery Sparks Land Price Boom in Gdag’s Lakkundi, Rates Hit All Time High

ಗದಗ, ಜನವರಿ 21: ಗದಗದ (Gadag) ಲಕ್ಕುಂಡಿಯಲ್ಲಿ (Lakkundi) ಮನೆಗೆ ಪಾಯ ಆಗೆಯುವಾಗ ಬಂಗಾರದ ನಿಧಿ ಸಿಕ್ಕಿದ್ದು ನಂತರ ಹಲವಾರು ಬೆಳವಣಿಗೆಗೆ ಸಾಕ್ಷಿಯಾಗಿದೆ. ಇದೀಗ ಲಕ್ಕುಂಡಿಯಲ್ಲಿ ಸರ್ಕಾರದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು ಆರನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನಗಳ ಉತ್ಖನನದಲ್ಲಿ ಅನೇಕ ಐತಿಹಾಸಿಕ ವಸ್ತುಗಳು ದೊರೆತಿದ್ದು ಪಟ್ಟಣದ ಪಾರಂಪರಿಕ ಮಹತ್ವ ಹೆಚ್ಚಿಸಿದೆ. ಮತ್ತೊಂದೆಡೆ, ಈ ಎಲ್ಲ ಬೆಳವಣಿಗೆಗಳಿಂದಾಗಿ ಲಕ್ಕುಂಡಿಯಲ್ಲಿ ಜಮೀನಿನ ಬೆಲೆ ಎರಡು ವರ್ಷಗಳ ಹಿಂದಿನ ದರಕ್ಕೆ ಹೋಲಿಸಿದರೆ ದುಪ್ಪಟ್ಟಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಈ…

Read More

Gold Rate Today Bangalore: ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬೆಳ್ಳಿಯೂ ಬೆಂಕಿ – Kannada News | Gold Price Today on 21st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 21: ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿದೆ. ಒಂದೇ ದಿನ ಚಿನ್ನದ ಬೆಲೆ (Gold Rate) ಬರೋಬ್ಬರಿ 690 ರೂ ಹೆಚ್ಚಿದೆ. 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬಹುತೇಕ 7,000 ರುಗಳಷ್ಟು ಬೆಲೆ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 15,000 ರೂ ಗಡಿ ದಾಟಿದೆ. ಕಳೆದ ಮೂರು ದಿನದಲ್ಲಿ ಗ್ರಾಮ್​ಗೆ 1,000 ರೂನಷ್ಟು ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆಯೂ ಚಿನ್ನದ…

Read More

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ – Kannada News | Violent Clash Inside Hindalaga Jail in Belagavi, Prisoner Attacked with Stone Over STD Phone Dispute

ಬೆಳಗಾವಿ, ಜನವರಿ 21: ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವ ಕೈದಿ ಗಾಯಗೊಂಡಿದ್ದಾನೆ. ಎಸ್‌ಟಿಡಿ ಫೋನ್ ಕಾಲ್ ವಿಚಾರವಾಗಿ ಕೈದಿಗಳ ಮಧ್ಯೆ ಘರ್ಷಣೆ ಶುರುವಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಮೂಲದ ಫಯಾನ್, ಬೆಳಗಾವಿ ಮೂಲದ ಮತ್ತೊಬ್ಬ ಅತ್ಯಾಚಾರ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ದಾನೆ. ಗಾಯಾಳು ಸುರೇಶ್​​ನನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Shinzo Abe Murder Case: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ – Kannada News | Life Behind Bars for a Political Shock: Shinzo Abe Assassin Sentenced in Japan

ಜಪಾನ್, ಜನವರಿ 21: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ(Shinzo Abe) ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಜುಲೈ 8, 2022 ರಂದು ಜಪಾನ್‌ನ ನಾರಾದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಶೂಟರ್ ಟೆಟ್ಸುಯಾ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಗುಂಡು ತಗಲಿದ ಪರಿಣಾಮ ರಕ್ತಸ್ರಾವದಿಂದ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಇದು ಜಪಾನ್‌ನಲ್ಲಿ ದಶಕಗಳ ನಂತರ ನಡೆದ ಮೊದಲ ರಾಜಕೀಯ ಹತ್ಯೆಯಾಗಿತ್ತು. ಶೂಟರ್ ಅಬೆಗೂ,…

Read More

ಟ್ರಂಪ್ ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – Kannada News | Trump’s Air Force One Glitch: Technical Snag Delays Davos Trip to Switzerland

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಷಿಂಗ್ಟನ್‌ಗೆ ಮರಳಿದೆ. ವಿಮಾನದಲ್ಲಿ ಸಿಬ್ಬಂದಿಗೆ ಸಣ್ಣ ವಿದ್ಯುತ್ ಸಮಸ್ಯೆ ಕಂಡುಬಂದಿತ್ತು. ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ವಿಶ್ವದ ಅನೇಕ ನಾಯಕರನ್ನು ಭೇಟಿಯಾಗಲು ಅಧ್ಯಕ್ಷರು ಹೊರಟಿದ್ದರು. ವಿಮಾನ ಹಾರಾಟ ಆರಂಭಿಸಿದ ಬಳಿಕ AF1 ಸಿಬ್ಬಂದಿ ಸಣ್ಣ ವಿದ್ಯುತ್ ಸಮಸ್ಯೆಯನ್ನು ಪತ್ತೆ ಹಚ್ಚಿದ್ದರು. ಅಧ್ಯಕ್ಷರು…

Read More