Category Archives: Blog

Your blog category

ಶಾಂತಿ ಮಾತುಕತೆ ನಡುವೆಯೇ ಇರಾನ್​​ನಲ್ಲಿ ಅಮೆರಿಕ ದಾಳಿ, ಕ್ಷಿಪಣಿ ಉಡಾವಣಾ ತಾಣ, ಮೈನ್ ಬೋಟ್​ಗಳೇ ಟಾರ್ಗೆಟ್ – Kannada News | US Attacks Iran Missile Sites and Mine Boats Amidst Peace Talks: Self Defense Claim

ವಾಷಿಂಗ್ಟನ್, ಮೇ 26: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಇರಾನ್ ಜೊತೆಗಿನ ಮಾತುಕತೆಗಳು ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ, ಅಮೆರಿಕ ಸೇನೆಯು ದಕ್ಷಿಣ ಇರಾನ್‌ನಲ್ಲಿ ಭೀಕರ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯ ಬಳಿ ಕ್ಷಿಪಣಿ ಉಡಾವಣಾ ತಾಣಗಳು ಮತ್ತು ಗಣಿಗಳನ್ನು ಇರಿಸಲು ಯತ್ನಿಸುತ್ತಿದ್ದ ಇರಾನಿನ ದೋಣಿಗಳನ್ನು ಗುರಿಯಾಗಿಸಿಕೊಂಡು ಈ ಸ್ವ-ರಕ್ಷಣಾ ದಾಳಿಗಳನ್ನು ನಡೆಸಿರುವುದಾಗಿ ಯುಎಸ್ ಸೇನೆ ಪ್ರಕಟಿಸಿದೆ.

ಇರಾನ್ ಪಡೆಗಳಿಂದ ಎದುರಾಗಬಹುದಾದ ನೇರ ಬೆದರಿಕೆಗಳಿಂದ ಅಮೆರಿಕದ ಸೈನಿಕರನ್ನು ರಕ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಮೆರಿಕದ ಕೇಂದ್ರ ಕಮಾಂಡ್ (CENTCOM) ವಕ್ತಾರ ತಿಮೋತಿ ಹಾಕಿನ್ಸ್ ತಿಳಿಸಿದ್ದಾರೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗೆ ಸೇರಿದ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು ಇಡುವುದನ್ನು ಗಮನಿಸಿದ್ದವು. ತಕ್ಷಣವೇ ಕಾರ್ಯಪ್ರವೃತ್ತರಾದ ಅಮೆರಿಕದ ಪಡೆಗಳು ಐಆರ್‌ಜಿಸಿಯ ಎರಡೂ ದೋಣಿಗಳನ್ನು ಹಾಗೂ ಆ ಕ್ಷಿಪಣಿ ನೆಲೆಯನ್ನು ಸಂಪೂರ್ಣವಾಗಿ ನಾಶಪಡಿಸಿವೆ.

ಸೋಮವಾರ ಇರಾನ್‌ನ ದಕ್ಷಿಣ ಕರಾವಳಿಯುದ್ದಕ್ಕೂ ಇರುವ ಬಂದರ್ ಅಬ್ಬಾಸ್, ಸಿರಿಕ್ ಮತ್ತು ಜಾಸ್ಕ್ ಬಳಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಈ ದಾಳಿಗಳು ಕೇವಲ ರಕ್ಷಣಾತ್ಮಕವಾಗಿದ್ದು, ಸದ್ಯಕ್ಕೆ ಕಾರ್ಯಾಚರಣೆ ಮುಗಿದಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಮಿಲಿಟರಿ ಕ್ರಮವು ಅತ್ಯಂತ ಸೀಮಿತ ವ್ಯಾಪ್ತಿಯನ್ನು ಹೊಂದಿದ್ದು, ಇರಾನ್ ಜೊತೆಗೆ ಸಾಗುತ್ತಿರುವ ಕದನ ವಿರಾಮ ಒಪ್ಪಂದದ ಕುಸಿತವನ್ನು ಇದು ಸೂಚಿಸುವುದಿಲ್ಲ ಎಂದು ಅಮೆರಿಕದ ಮೂಲಗಳು ಖಚಿತಪಡಿಸಿವೆ.

ಮತ್ತಷ್ಟು ಓದಿ: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ಇರಾನ್ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಟ್ರಂಪ್ ಮತ್ತೊಂದು ದೊಡ್ಡ ಶರತ್ತನ್ನು ವಿಧಿಸಿದ್ದಾರೆ. ಇದರ ಪ್ರಕಾರ, ಸೌದಿ ಅರೇಬಿಯಾ, ಪಾಕಿಸ್ತಾನ, ಕತಾರ್, ಟರ್ಕಿ, ಈಜಿಪ್ಟ್ ಮತ್ತು ಜೋರ್ಡಾನ್ ದೇಶಗಳು ತಕ್ಷಣವೇ ‘ಅಬ್ರಹಾಂ ಒಪ್ಪಂದಕ್ಕೆ’ (ಇಸ್ರೇಲ್ ಜೊತೆಗಿನ ಸಂಬಂಧವನ್ನು ಸಾಮಾನ್ಯಗೊಳಿಸುವ ಒಪ್ಪಂದ) ಸಹಿ ಹಾಕಬೇಕು ಎಂದು ಟ್ರಂಪ್ ಹೇಳಿದ್ದಾರೆ. ಈ ಎಲ್ಲಾ ದೇಶಗಳು ಏಕಕಾಲದಲ್ಲಿ ಒಪ್ಪಂದಕ್ಕೆ ಸಹಿ ಹಾಕುವುದು ಕಡ್ಡಾಯವಾಗಿದ್ದು, ಆಗ ಮಾತ್ರ ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿ ನೆಲೆಸಲು ಸಾಧ್ಯ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕನ್ನಡ ಕಲಿತು ವೇದಿಕೆ ಮೇಲೆ ಮಾತನಾಡಿದ ಜಾನ್ವಿ ಕಪೂರ್ – Kannada News | Janhvi Kapoor Talks In Kannada Cute video goes viral

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More

Source link

ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ; ಭಾವುಕರಾದ ಹೇಮಾ ಮಾಲಿನಿ ಮಗಳು – Kannada News | Bollywood Legend Dharmendra Receives Posthumous Padma Vibhushan: Family’s Emotional Moment

ಬಾಲಿವುಡ್‌ನ ಹಿರಿಯ ನಟ, ‘ಹೀ-ಮ್ಯಾನ್’ ಎಂದೇ ಪ್ರಸಿದ್ಧರಾಗಿದ್ದ ಧರ್ಮೇಂದ್ರ (Dharmendra) ಅವರಿಗೆ ಮೇ 25 ರಂದು ಮರಣೋತ್ತರವಾಗಿ ದೇಶದ ಪ್ರತಿಷ್ಠಿತ ‘ಪದ್ಮವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ಧರ್ಮೇಂದ್ರ ಅವರ ಪರವಾಗಿ ಅವರ ಪತ್ನಿ, ನಟಿ ಹೇಮಾ ಮಾಲಿನಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇಡೀ ವಾತಾವರಣವೇ ಭಾವನಾತ್ಮಕವಾಗಿತ್ತು. ಪ್ರಶಸ್ತಿ ಸ್ವೀಕರಿಸುವಾಗ ಹೇಮಾ ಮಾಲಿನಿ ಅವರ ಮುಖದಲ್ಲಿ ಪತಿಯನ್ನು ಕಳೆದುಕೊಂಡ ದುಃಖ ಹಾಗೂ ಹೆಮ್ಮೆಯ ಭಾವ ಒಟ್ಟಿಗೇ ಎದ್ದು ಕಾಣುತ್ತಿತ್ತು.

ಈ ವಿಶೇಷ ಸಮಾರಂಭದಲ್ಲಿ ಹೇಮಾ ಮಾಲಿನಿ ಅವರೊಂದಿಗೆ ಮಗಳು ಅಹಾನಾ ಡಿಯೋಲ್ ಮತ್ತು ಅಳಿಯ ವೈಭವ್ ವೋಹ್ರಾ ಉಪಸ್ಥಿತರಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ತಂದೆಗೆ ಸಿಕ್ಕ ಅತ್ಯುನ್ನತ ಗೌರವವನ್ನು ನೋಡಿದಾಗ ಅಹಾನಾ ಅವರಿಗೆ ತಮ್ಮ ಭಾವನೆಗಳನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ. ಅವರ ಕಣ್ಣುಗಳು ಆನಂದಭಾಷ್ಪದಿಂದ ತುಂಬಿಬಂದವು. ಆ ವೇಳೆ ಪಕ್ಕದಲ್ಲೇ ಇದ್ದ ಪತಿ ವೈಭವ್ ವೋಹ್ರಾ ಅವರು ಪತ್ನಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಮಾರಂಭದಲ್ಲಿ ಗುಲಾಬಿ ಬಣ್ಣದ ಸೀರೆಯನ್ನು ಉಟ್ಟಿದ್ದ ಹೇಮಾ ಮಾಲಿನಿ, ಅತ್ಯಂತ ಸರಳ ಹಾಗೂ ಆಕರ್ಷಕವಾಗಿ ಕಾಣಿಸುತ್ತಿದ್ದರು.

ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ಹೇಮಾ ಮಾಲಿನಿ, ‘ನಮ್ಮ ಮತ್ತೊಬ್ಬ ಪುತ್ರಿ ಇಶಾ ಡಿಯೋಲ್ ಕೂಡ ಈ ಸಮಾರಂಭದಲ್ಲಿ ಇರಬೇಕಿತ್ತು. ಆದರೆ ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಅವರಿಗೆ ಬರಲು ಸಾಧ್ಯವಾಗಲಿಲ್ಲ. ಇದು ಇಡೀ ಕುಟುಂಬಕ್ಕೆ ಅತ್ಯಂತ ಹೆಮ್ಮೆಯ ಮತ್ತು ಅಷ್ಟೇ ಭಾವುಕ ಕ್ಷಣವಾಗಿದೆ. ಧರ್ಮೇಂದ್ರ ಅವರಿಗೆ ದೊರೆತ ಈ ಗೌರವದಿಂದ ಇಡೀ ಕುಟುಂಬ ಸಂತೋಷವಾಗಿದೆ. ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ’ ಎಂದು ಹೆಳಿದರು.

300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ

ನಟ ಧರ್ಮೇಂದ್ರ ಅವರು ತಮ್ಮ ಜೀವಿತಾವಧಿಯಲ್ಲಿ ಭಾರತೀಯ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸುಮಾರು ಆರು ದಶಕಗಳ ಸುದೀರ್ಘ ಸಿನಿ ಪಯಣದಲ್ಲಿ ಅವರು 300ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು. ತಮ್ಮ ವಿಶಿಷ್ಟ ನಟನೆ ಹಾಗೂ ಅದ್ಭುತ ವ್ಯಕ್ತಿತ್ವದಿಂದಾಗಿ ಅವರು ಕೋಟ್ಯಂತರ ಪ್ರೇಕ್ಷಕರ ಹೃದಯ ಗೆದ್ದಿದ್ದರು. ‘ಶೋಲೆ’, ‘ಫೂಲ್ ಔರ್ ಪತ್ತರ್’, ‘ಅನ್ಪದ್’, ‘ಹಕಿಕತ್’, ‘ಬಂದಿನಿ’, ‘ಸೀತಾ ಔರ್ ಗೀತಾ’, ‘ಮೇರಾ ಗಾಂವ್ ಮೇರಾ ದೇಶ್’ ಸೇರಿದಂತೆ ಅಸಂಖ್ಯಾತ ಸೂಪರ್‌ಹಿಟ್ ಚಿತ್ರಗಳ ಮೂಲಕ ಅವರು ಹಿಂದಿ ಚಿತ್ರರಂಗದ ಅಪ್ರತಿಮ ನಾಯಕನಾಗಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ

1960 ರಲ್ಲಿ ಬಿಡುಗಡೆಯಾದ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ಧರ್ಮೇಂದ್ರ ಬೆಳ್ಳಿಪರದೆಗೆ ಪಾದಾರ್ಪಣೆ ಮಾಡಿದ್ದರು. ಇನ್ನು ಅವರು ನಿಧನರಾದ ನಂತರ ತೆರೆಕಂಡ ‘ಇಕ್ಕಿಸ್’ ಅವರ ವೃತ್ತಿಜೀವನದ ಕೊನೆಯ ಸಿನಿಮಾವಾಯಿತು. ತಮ್ಮ ಬದುಕಿನ ಕೊನೆಯ ದಿನಗಳವರೆಗೂ ನಟನೆಯಲ್ಲಿ ಸಕ್ರಿಯರಾಗಿದ್ದ ಧರ್ಮೇಂದ್ರ ಅವರು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ, ಅವರು ನಟಿಸಿದ ಸಿನಿಮಾಗಳು ಮತ್ತು ಅವರ ನೆನಪುಗಳು ಚಿತ್ರಪ್ರೇಮಿಗಳ ಮನಸ್ಸಿನಲ್ಲಿ ಎಂದಿಗೂ ಶಾಶ್ವತವಾಗಿ ಉಳಿಯಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ವಾರದ 7 ದಿನಗಳಲ್ಲಿ ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Colours and Fortune: A Guide to Wearing the Right Shade for Daily Well being

ವಾರದ ದಿನಗಳಿಗೆ ಸೂಕ್ತವಾದ ಬಣ್ಣImage Credit source: Pinterest

ನಮ್ಮ ಬದುಕಿನಲ್ಲಿ ಬಣ್ಣಗಳು ಅಗಾಧ ಪ್ರಭಾವವನ್ನು ಬೀರುತ್ತವೆ. ವಾರದ ಏಳು ದಿನಗಳಿಗೆ ಏಳು ಬಣ್ಣಗಳ ಮಹತ್ವವಿದೆ. ಪ್ರತಿದಿನವೂ ಅದರದೇ ಆದ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಗ್ರಹಗಳ ಅನುಗ್ರಹ ಮತ್ತು ಸಕಾರಾತ್ಮಕ ಪ್ರಭಾವಗಳನ್ನು ಪಡೆಯಬಹುದು. ಇದನ್ನು ಕಲರ್ ಥೆರಪಿ ಅಥವಾ ಬಣ್ಣ ಚಿಕಿತ್ಸೆ ಎಂದೂ ಕರೆಯುತ್ತಾರೆ. ಬಣ್ಣಗಳು ಮನುಷ್ಯನ ವ್ಯಕ್ತಿತ್ವ, ಏಳಿಗೆ, ಅಭಿವೃದ್ಧಿ ಹಾಗೂ ಅವನತಿಯ ಮೇಲೆ ಸಹ ಪರಿಣಾಮ ಬೀರುತ್ತವೆ. ಸರಿಯಾದ ಬಣ್ಣಗಳು ಸಂತೋಷ ಮತ್ತು ಸಮೃದ್ಧಿಯನ್ನು ತರಬಲ್ಲವು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ವಾರದ ದಿನಗಳಿಗೆ ಸೂಕ್ತವಾದ ಬಣ್ಣಗಳು ಮತ್ತು ಅವುಗಳ ಮಹತ್ವ:

ಸೋಮವಾರ (ಚಂದ್ರನ ದಿನ):

ಸೋಮವಾರವು ಚಂದ್ರನಿಗೆ ಮೀಸಲಾದ ದಿನ. ಈ ದಿನ ಬಿಳಿ ಅಥವಾ ಶ್ವೇತ ವರ್ಣದ ಬಟ್ಟೆಗಳನ್ನು ಧರಿಸುವುದು ಶುಭ. ಇದು ಮನಸ್ಸಿಗೆ ಶಾಂತಿ, ನೆಮ್ಮದಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ. ಮಹಿಳೆಯರು ಮತ್ತು ಪುರುಷರು ಇಬ್ಬರೂ ಬಿಳಿ ಬಟ್ಟೆಗಳನ್ನು ಧರಿಸಬಹುದು.

ಮಂಗಳವಾರ (ಕುಜನ ದಿನ):

ಮಂಗಳವಾರವು ಕುಜ (ಮಂಗಳ), ಸುಬ್ರಮಣ್ಯ ಮತ್ತು ಹನುಮಂತನಿಗೆ ಸಮರ್ಪಿತವಾಗಿದೆ. ಈ ದಿನ ಕೇಸರಿ ಮಿಶ್ರಿತ ಬಟ್ಟೆಗಳನ್ನು ಅಥವಾ ಕೇಸರಿ ಬಣ್ಣದ ಛಾಯೆ ಇರುವ ಬಟ್ಟೆಗಳನ್ನು ಧರಿಸುವುದು ಉತ್ತಮ. ಹಣೆಗೆ ಸಿಂಧೂರವನ್ನು ಧರಿಸುವುದರಿಂದಲೂ ಶಕ್ತಿ ವೃದ್ಧಿಸುತ್ತದೆ. ಇದು ಕುಟುಂಬದಲ್ಲಿ ನೆಮ್ಮದಿ, ಕಲಹಗಳಿಂದ ಮುಕ್ತಿ ಮತ್ತು ಧೈರ್ಯವನ್ನು ನೀಡುತ್ತದೆ.

ಬುಧವಾರ (ವಿಷ್ಣು, ಕಾಲಭೈರವ, ವಿನಾಯಕ, ವೆಂಕಟೇಶ್ವರನ ದಿನ):

ಬುಧವಾರವು ವಿಷ್ಣು, ಕಾಲಭೈರವ, ವಿನಾಯಕ (ಗಣೇಶ) ಮತ್ತು ವೆಂಕಟೇಶ್ವರ ಸ್ವಾಮಿಗೆ ಮೀಸಲಾಗಿದೆ. ಈ ದಿನ ಹಸಿರು ಮಿಶ್ರಿತ ಬಟ್ಟೆಗಳನ್ನು ಧರಿಸುವುದು ಶುಭ. ಉದಾಹರಣೆಗೆ, ಮಹಿಳೆಯರು ಸೀರೆಯ ಅಂಚಿನಲ್ಲಿ ಹಸಿರು ಬಣ್ಣವಿರುವ ಬಟ್ಟೆಯನ್ನು ಅಥವಾ ಹಸಿರು ಛಾಯೆಯ ಉಡುಪುಗಳನ್ನು ಧರಿಸಬಹುದು. ಇದು ಬುದ್ಧಿ ಶಕ್ತಿಯನ್ನು ಚುರುಕುಗೊಳಿಸುತ್ತದೆ, ಕೆಲಸಗಳಲ್ಲಿ ಉತ್ತಮ ಯೋಜನೆಗಳಿಗೆ ಸಹಕರಿಸುತ್ತದೆ ಮತ್ತು ಸಂವಹನ ಕೌಶಲ್ಯವನ್ನು ಸುಧಾರಿಸುತ್ತದೆ.

ಗುರುವಾರ (ಗುರುಗಳ ದಿನ):

ಗುರುವಾರವು ಬೃಹಸ್ಪತಿ (ಗುರು) ಗ್ರಹಕ್ಕೆ ಸಂಬಂಧಿಸಿದೆ. ಈ ದಿನ ಹಳದಿ ಬಣ್ಣದ ವಸ್ತ್ರಗಳನ್ನು ಧರಿಸುವುದರಿಂದ ಸಾಕಷ್ಟು ಶುಭ ಫಲಗಳು ದೊರೆಯುತ್ತವೆ. ಇದು ನೆಮ್ಮದಿ, ತೃಪ್ತಿ ಮತ್ತು ಬಯಸಿದ ಫಲಗಳನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ!

ಶುಕ್ರವಾರ (ಮಹಾಲಕ್ಷ್ಮಿಯ ದಿನ):

ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಉತ್ತಮ ದಿನ. ಈ ದಿನ ಮಿಶ್ರಿತ ಬಣ್ಣಗಳ ಬಟ್ಟೆಗಳನ್ನು ಧರಿಸುವುದು ಶುಭ – ಉದಾಹರಣೆಗೆ, ಹಸಿರು ಮತ್ತು ಕೆಂಪು ಮಿಶ್ರಿತ ಬಟ್ಟೆಗಳು. ಬಿಳಿ ಬಣ್ಣವೂ ಸಹ ಈ ದಿನಕ್ಕೆ ಸೂಕ್ತವಾಗಿದೆ. ಮಿಶ್ರಿತ ಹೂವುಗಳನ್ನು ಅಮ್ಮನಿಗೆ ಅರ್ಪಿಸುವುದರಿಂದ ಸಮೃದ್ಧಿ ಮತ್ತು ಮಂಗಳಕರ ಫಲಗಳು ದೊರೆಯುತ್ತವೆ.

ಶನಿವಾರ (ಶನಿಯ ದಿನ):

ಶನಿವಾರದಂದು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಅಥವಾ ನೀಲಿ ಬಣ್ಣದ ಪ್ರಭಾವ ಹೆಚ್ಚಿರುವ ಬಟ್ಟೆಗಳನ್ನು ಆಯ್ಕೆ ಮಾಡುವುದು ಉತ್ತಮ. ನೀಲಿಯೊಂದಿಗೆ ಕಪ್ಪು ಬಣ್ಣವನ್ನು ಧರಿಸುವುದರಿಂದ ದುಷ್ಟ ಶಕ್ತಿಗಳ ಕಾಟ ಕಡಿಮೆಯಾಗುತ್ತದೆ ಮತ್ತು ರಕ್ಷಣೆ ಸಿಗುತ್ತದೆ ಎಂದು ಹೇಳಲಾಗುತ್ತದೆ.

ಭಾನುವಾರ (ಸೂರ್ಯನ ದಿನ):

ಭಾನುವಾರವು ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನ ಕೆಂಪು ಅಥವಾ ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಮಾನಸಿಕ ತೃಪ್ತಿ ಸಿಗುತ್ತದೆ. ಇದು ಮನೆಯಲ್ಲಿ ನಡೆಯುವ ಚರ್ಚೆಗಳು ಮತ್ತು ಸಂಭಾಷಣೆಗಳು ಸಕಾರಾತ್ಮಕವಾಗಿ ಅಂತ್ಯಗೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ.

ಬಟ್ಟೆಗಳ ಬಣ್ಣ, ಹೂವುಗಳ ಬಣ್ಣ, ಮನೆಯ ಬಣ್ಣ ಹೀಗೆ ನಾವು ನೋಡುವ ಪ್ರತಿಯೊಂದು ಬಣ್ಣವೂ ನಮ್ಮ ಮನಸ್ಥಿತಿ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಾಚೀನ ನಂಬಿಕೆ. ಈ ಬಣ್ಣಗಳ ಮಹತ್ವವನ್ನು ನಂಬುವವರಿಗೆ ಮಾತ್ರ ಇದರ ಪ್ರಯೋಜನಗಳು ಲಭ್ಯ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ! ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ‘ಸಾಹುಕಾರ’ – Kannada News | KPCC President Post Race: Satish Jarkiholi Rushes to Delhi Following CM Siddaramaiah and DiCM DK Shivakumar

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಯಲ್ಲಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಭೇಟಿ ಮಹತ್ವ ಪಡೆದಿದೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ ಆದ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಇದೇ ವೇಳೆ, ಸಚಿವ ಪ್ರಿಯಾಂಕ್ ಖರ್ಗೆ ಕೂಡ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಇನ್ನೂ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಜಾರಕಿಹೊಳಿ ಹೇಳಿದ್ದು, ಸಭೆಯಲ್ಲಿ ಅಜೆಂಡಾ ಆಧರಿಸಿ ನಿರ್ಧಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ.

ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು?

ಸೋಮವಾರ (ಮೇ 25) ಹಾರ್ದಿಕ್ ಪಾಂಡ್ಯ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಲ್ಯಾಪ್ ಟಾಪ್, ಮೊಬೈಲ್ ಇತ್ತು. ಆ ಮೊಬೈಲ್ ಸ್ಕ್ರೀನ್ ಮೇಲೆ ಸಮಯ 07:07 ಎಂದು ತೋರಿಸಲಾಗಿತ್ತು. ಕ್ರಿಕೆಟ್ ಲೋಕದಲ್ಲಿ ‘7’ ಎಂದರೆ ಅದು ಎಂ.ಎಸ್. ಧೋನಿ. ಧೋನಿ.

ಹೀಗಾಗಿ, ಹಾರ್ದಿಕ್ ಪಾಂಡ್ಯ ಬೇಕೆಂದೇ ಧೋನಿ ಅವರ ನಂಬರ್ ಇರುವ ಸಮಯದ ಫೋಟೋ ಹಾಕಿ, ತಾವು CSK ಸೇರುವ ಬಗ್ಗೆ ಸುಳಿವು ನೀಡಿದ್ದಾರೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಲಾರಂಭಿಸಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಈ ಬಾರಿಯ ಐಪಿಎಲ್​ ನಡುವೆ  ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್​ಗೆ ಟ್ರೇಡ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಪಾಂಡ್ಯ ಹಂಚಿಕೊಂಡಿರುವ ಪೋಸ್ಟ್​ನಿಂದಾಗಿ ಈ ಸುದ್ದಿಯು ಮಹತ್ವ ಪಡೆದುಕೊಂಡಿದೆ.

;

ಮುಂಬೈ ನಾಯಕನ ಮೇಲೆ ಸಿಎಸ್​ಕೆ ಕಣ್ಣು?

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಳೆದ ಎರಡು ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಹೀಗಾಗಿಯೇ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕೈ ಬಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇದರ ನಡುವೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಮೈದಾನದಲ್ಲಿ ಸುದೀರ್ಘ ಚರ್ಚೆ ನಡೆಸುತ್ತಿರುವುದು ಕಂಡುಬಂದಿತ್ತು.

ಈ ಮಾತುಕತೆ ಬೆನ್ನಲ್ಲೇ ಸಿಎಸ್​ಕೆ ರುತುರಾಜ್ ಗಾಯಕ್ವಾಡ್ ಅಥವಾ ಶಿವಂ ದುಬೆಯನ್ನು ನೀಡಿ ಹಾರ್ದಿಕ್ ಪಾಂಡ್ಯರನ್ನು ಟ್ರೇಡ್ ಮಾಡಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿತ್ತು. ಇದೀಗ ಹಾರ್ದಿಕ್ ಪಾಂಡ್ಯ ಹಂಚಿಕೊಂಡ ಒಂದೇ ಒಂದು ಪೋಸ್ಟ್​ನಿಂದ ಈ ಸುದ್ದಿಗಳು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: RCB ಪರ ಇನಿಂಗ್ಸ್ ಆರಂಭಿಸುವವರು ಯಾರು?

ಇದಾಗ್ಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಡೆಯಿಂದಾಗಲಿ, ಅಥವಾ ಚೆನ್ನೈ ಸೂಪರ್ ಕಿಂಗ್ಸ್ ಕಡೆಯಿಂದಾಗಲಿ ಈ ಟ್ರೇಡಿಂಗ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಡುವ ಬಗ್ಗೆ ಖಚಿತತೆ ಸಿಗಲು ಮತ್ತೊಂದಷ್ಟು ದಿನಗಳವರೆಗೆ ಕಾಯಲೇಬೇಕಾಗುತ್ತದೆ.

Source link

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI ಇಂದು 55 ರಿಂದ 69ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದು ಸಾಧಾರಣ ಎಂದು ಹೇಳಲಾಗಿದೆ. ಮಳೆಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು PM2.5 ಮತ್ತು PM10 ಇದೆ. ಹೆಬ್ಬಾಳ ಮತ್ತು ಜಯನಗರದಲ್ಲಿ ವಾಯು ಗುಣಮಟ್ಟ ಉತ್ತಮವಾಗಿದ್ದರೆ, ಸಿಲ್ಕ್ ಬೋರ್ಡ್‌ನಂತಹ ದಟ್ಟ ಟ್ರಾಫಿಕ್ ವಲಯಗಳಲ್ಲಿ ಮಾತ್ರ ಕೊಂಚ ಹೆಚ್ಚಿನ ಮಾಲಿನ್ಯ ಕಂಡುಬಂದಿದೆ.

ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಮಡಿಕೇರಿ ಜಿಲ್ಲೆಗಳಲ್ಲಿ ಇಂದು ವಾಯು ಗುಣಮಟ್ಟವು ‘Good’ (ಉತ್ತಮ – 50ಕ್ಕಿಂತ ಕಡಿಮೆ) ವಲಯದಲ್ಲಿದೆ. ಇಲ್ಲಿ ನಿರಂತರ ಗಾಳಿ ಮತ್ತು ಮಳೆಯ ಮುನ್ಸೂಚನೆ ಇರುವುದರಿಂದ ವಾತಾವರಣವು ಕಂಪ್ಲೀಟ್ ಫ್ರೆಶ್ ಆಗಿದೆ. ಶ್ವಾಸಕೋಶದ ತೊಂದರೆ ಇರುವವರು ಹಾಗೂ ಹಿರಿಯ ನಾಗರಿಕರು ಮುಕ್ತವಾಗಿ ಹೊರಗೆ ಓಡಾಡಬಹುದು.

ಇದನ್ನೂ ಓದಿ: ರಾಜ್ಯದ ಜನತೆಗೆ ಸಿಕ್ತು ಬಿಸಿಲಿನಿಂದ ಬಿಗ್ ರಿಲೀಫ್!; ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು? – Kannada News | Salman Khan’s Instagram Account Vanishes and Reappears: The Mysterious 30 Minute Disappearance

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan), ಸದಾ ಸಿನಿಮಾಗಳ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಹೊಸ ಸಿನಿಮಾ ‘ಮಾತೃಭೂಮಿ’ ಹಾಗೂ ಇತ್ತೀಚಿನ ಪಾಪರಾಜಿ ವಿವಾದಗಳಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಪಾಪರಾಜಿಗಳ ವರ್ತನೆಗೆ ತೀವ್ರ ಕೋಪ ವ್ಯಕ್ತಪಡಿಸಿದ್ದ ನಟ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಕೆಲವು ನಿಗೂಢ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು.

ಅಭಿಮಾನಿಗಳು ಇನ್‌ಸ್ಟಾಗ್ರಾಮ್‌ನಲ್ಲಿ ಸಲ್ಮಾನ್ ಖಾನ್ ಅವರ ಪ್ರೊಫೈಲ್ ಹುಡುಕಿದಾಗ, ಅವರ ಅಧಿಕೃತ ಖಾತೆ ಯಾರಿಗೂ ಕಾಣಿಸಲಿಲ್ಲ. ಬದಲಿಗೆ ‘ಕ್ಷಮಿಸಿ, ಈ ಪುಟ ಲಭ್ಯವಿಲ್ಲ’ ಎಂಬ ಸಂದೇಶವೊಂದು ಪರದೆಯ ಮೇಲೆ ಮೂಡಿಬರುತ್ತಿತ್ತು. ಇದನ್ನು ನೋಡಿದ ತಕ್ಷಣವೇ ಸಲ್ಮಾನ್ ಅಭಿಮಾನಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಭಾಯಿಜಾನ್ ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ಯಾರಾದರೂ ಹ್ಯಾಕ್ ಮಾಡಿದ್ದಾರೋ? ಅಥವಾ ಅವರೇ ಅದನ್ನು ಪರ್ಮನೆಂಟ್ ಆಗಿ ಡಿಲೀಟ್ ಮಾಡಿದ್ದಾರೋ? ಇಲ್ಲವೇ ಸದ್ಯದ ವಿವಾದಗಳಿಂದ ಬೇಸತ್ತು ಕೆಲವು ದಿನಗಳ ಮಟ್ಟಿಗೆ ತಾವೇ ಅಕೌಂಟ್ ಅನ್ನು ಡೀಆಕ್ಟಿವೇಟ್ (ನಿಷ್ಕ್ರಿಯ) ಮಾಡಿಕೊಂಡಿದ್ದಾರೋ? ಎಂಬ ಗೊಂದಲದಲ್ಲಿ ಮುಳುಗಿದ್ದರು.

ಸಲ್ಮಾನ್ ಖಾನ್ ಅವರ ಇನ್‌ಸ್ಟಾಗ್ರಾಮ್ ಖಾತೆ ಮಾಯವಾಗುತ್ತಿದ್ದಂತೆಯೇ, ಅದಕ್ಕೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳು ಮತ್ತು ಅಭಿಮಾನಿಗಳ ಆತಂಕದ ಪ್ರತಿಕ್ರಿಯೆಗಳು ಇಡೀ ಇಂಟರ್ನೆಟ್‌ನಲ್ಲಿ ಕಾಳ್ಗಿಚ್ಚಿನಂತೆ ಹರಡಿದವು. ಇದರಿಂದ ಕಂಗಾಲಾದ ನಟನ ಕೋಟ್ಯಂತರ ಅಭಿಮಾನಿಗಳು ವೇದಿಕೆಯಲ್ಲಿ ಭಾಯಿಜಾನ್ ಅಕೌಂಟ್ ಬಗ್ಗೆಯೇ ನಿರಂತರವಾಗಿ ಚರ್ಚೆ ಆರಂಭಿಸಿದರು. ಪ್ರಾರ್ಥನೆಗಳ ಮೂಲಕ ಅವರ ಖಾತೆಗೆ ಏನೂ ಆಗಿರಬಾರದು ಎಂದು ಆಶಿಸಿದರು. ಖಾತೆ ಕಣ್ಮರೆಯಾದ ಕೇವಲ 30 ನಿಮಿಷಗಳಲ್ಲೇ ಸಲ್ಮಾನ್ ಅವರ ಇನ್‌ಸ್ಟಾಗ್ರಾಮ್ ಖಾತೆ ಮತ್ತೆ ಯಥಾಸ್ಥಿತಿಗೆ ಮರಳಿತು. ಇದು ಅಭಿಮಾನಿಗಳಿಗೆ ನಿರಾಳತೆ ತಂದರೂ, ಅಚ್ಚರಿ ಮೂಡಿಸಿದೆ.

ಇನ್‌ಸ್ಟಾಗ್ರಾಮ್ ಖಾತೆ ದಿಢೀರ್ ಮಾಯವಾಗಿ, ಅರ್ಧ ಗಂಟೆಯಲ್ಲೇ ವಾಪಸ್ ಬಂದ ಈ ಇಡೀ ಹೈಡ್ರಾಮಾ ಬಗ್ಗೆ ನಟ ಸಲ್ಮಾನ್ ಖಾನ್ ಆಗಲಿ ಅಥವಾ ಅವರ ಪಿಆರ್ (PR) ತಂಡವಾಗಲಿ ಈವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಹಾಗಾಗಿ, ಇನ್‌ಸ್ಟಾಗ್ರಾಮ್‌ನಲ್ಲಿ ಉಂಟಾದ ಯಾವುದಾದರೂ ತಾಂತ್ರಿಕ ದೋಷದಿಂದ ಹೀಗಾಯಿತೇ? ಅಥವಾ ಸಲ್ಮಾನ್ ಅವರೇ ಸ್ವತಃ ಅಕೌಂಟ್ ಕ್ಲೋಸ್ ಮಾಡಿದ್ದರೇ? ಅಥವಾ ಬೇರೆ ಯಾರಾದರೂ ಅವರ ಖಾತೆಯನ್ನು ಹ್ಯಾಕ್ ಮಾಡಲು ಪ್ರಯತ್ನಿಸಿದಾಗ ಇನ್‌ಸ್ಟಾಗ್ರಾಮ್ ಭದ್ರತಾ ಕಾರಣಗಳಿಗಾಗಿ ಅದನ್ನು ಬ್ಲಾಕ್ ಮಾಡಿತ್ತೇ? ಎಂಬ ಅಸಲಿ ಸತ್ಯ ಇನ್ನು ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: ಆಸ್ಪತ್ರೆ ಎದುರು ಗಲಾಟೆ; ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ರಾಜಿ ಮಾಡಿಕೊಂಡ ಪಾಪರಾಜಿಗಳು

ಇಲ್ಲಿ ಗಮನಿಸಬೇಕಾದ ಪ್ರಮುಖ ವಿಷಯವೆಂದರೆ, ಸಲ್ಮಾನ್ ಖಾನ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 72 ಮಿಲಿಯನ್‌ಗಿಂತಲೂ 7.2 ಕೋಟಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಅವರು ನಿಯಮಿತವಾಗಿ ತಮ್ಮ ಮುಂಬರುವ ಚಿತ್ರಗಳ ಅಪ್‌ಡೇಟ್‌ಗಳು, ಜಿಮ್ ಫಿಟ್‌ನೆಸ್ ವಿಡಿಯೋಗಳು ಮತ್ತು ಕುಟುಂಬದ ಜೊತೆಗಿನ ಸುಂದರ ಕ್ಷಣಗಳನ್ನು ಈ ವೇದಿಕೆಯ ಮೂಲಕವೇ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇಂತಹ ಪ್ರಭಾವಿ ಖಾತೆ ದಿಢೀರ್ ಕಣ್ಮರೆಯಾಗಿರುವುದು ಸದ್ಯ ಬಾಲಿವುಡ್ ಅಂಗಳದಲ್ಲಿ ದೊಡ್ಡ ಇಂಟರೆಸ್ಟಿಂಗ್ ಸುದ್ದಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ – Kannada News | Belagavi Road Accident: Parents and 9 Month Old Baby Killed on the Spot as Wrong Side Goods Auto Rams Bike in Rayabag

ಅಪಘಾತದ ತೀವ್ರತೆಗೆ ಗೂಡ್ಸ್ ಆಟೋ ಪಲ್ಟಿಯಾಗಿರುವುದುImage Credit source: tv9

ಬೆಳಗಾವಿ, ಮೇ 26: ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ರಾಂಗ್ ಸೈಡ್​ನಲ್ಲಿ ಬಂದ ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಕಂದಮ್ಮ ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಒಂಬತ್ತು ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗುವಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮುಖ್ಯಾಂಶಗಳು

  • ಬೈಕ್‌ಗೆ ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು.
  • ಬೊಮ್ಮನಾಳ ಗ್ರಾಮದಿಂದ ರಾಯಬಾಗಕ್ಕೆ ತೆರಳುವ ರಸ್ತೆಯಲ್ಲಿ ಘಟನೆ.
  • ಆಟೋ ಚಾಲಕನ ಬೇಜವಾಬ್ದಾರಿಯೇ ದುರಂತಕ್ಕೆ ಕಾರಣ.

ಗ್ರಾಮದಲ್ಲಿ ಸೂತಕದ ಛಾಯೆ

ಮಹಾಂತೇಶ್ ಮಾನೆ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ಬೈಕ್‌ನಲ್ಲಿ ರಾಯಬಾಗ ಪಟ್ಟಣಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಮತ್ತು ರಾಂಗ್ ಸೈಡ್‌ನಲ್ಲಿ ಬಂದ ಗೂಡ್ಸ್ ಆಟೋ ಚಾಲಕ ಬೈಕ್‌ಗೆ ನೇರವಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಆಟೋ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ ಮೂವರು ಅಸುನೀಗಿರುವುದಕ್ಕೆ ಬೊಮ್ಮನಾಳ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ

ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆಟೋ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾನು ಮಗಳನ್ನು ಕಳೆದುಕೊಂಡಿದ್ದೇನೆ, ಮಮತಾ ಅಧಿಕಾರವನ್ನು, ಆರ್​ಜಿ ಕರ್ ಸಂತ್ರಸ್ತೆಯ ತಾಯಿಯ ಭಾವುಕ ಮಾತು – Kannada News | Mamata Defeat: RG Kar Victim’s Mother Calls It Justice’s First Step

ಕೋಲ್ಕತ್ತಾ, ಮೇ 26: ಪಶ್ಚಿಮ ಬಂಗಾಳ(West Bengal)ದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರ ಪತನಗೊಂಡು, ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಇದರ ಬೆನ್ನಲ್ಲೇ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದ ವೈದ್ಯೆಯ ತಾಯಿ ಹಾಗೂ ಪ್ರಸ್ತುತ ಪಾಣಿಹಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ನಬನ್ನಾದ 14ನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಭೇಟಿಯಾದ ನಂತರ ರತ್ನಾ ದೇಬ್ನಾಥ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರಾಮಾಣಿಕತೆಯ ಶಕ್ತಿ ಅಪಾರವಾಗಿದೆ. ಅನ್ಯಾಯದ ವಿರುದ್ಧ ತಾಳ್ಮೆಯಿಂದ ಹೋರಾಡುವುದು ಮಾತ್ರ ನಮಗೆ ಅಗತ್ಯವಾಗಿತ್ತು ಎಂದು ಬರೆದಿರುವ ಅವರು, ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ಚುನಾವಣಾ ಸೋಲನ್ನು ತಮ್ಮ ಮಗಳ ಸಾವಿಗೆ ಹೋಲಿಸಿದ್ದಾರೆ.

ರತ್ನಾ ದೇಬ್ನಾಥ್ ಅವರ ವರ್ಷದ ಮಗಳು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆಯಾಗಿದ್ದರು. 2024ರ ಆಗಸ್ಟ್ 8 ಮತ್ತು 9ರ ಮಧ್ಯರಾತ್ರಿ ಆಸ್ಪತ್ರೆಯ ಸೆಮಿನಾರ್ ಕೋಣೆಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಯು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಮತ್ತಷ್ಟು ಓದಿ: ಸುವೇಂದು ಆಪ್ತ ಸಹಾಯಕ ಚಂದ್ರನಾಥ್ ರಥ್ ಕೊಲೆಯಾಗಿದ್ದು ಹೇಗೆ? ಭೀಕರ ಕೃತ್ಯದ ವಿವರ ಇಲ್ಲಿದೆ

ಹಿಂದಿನ ಟಿಎಂಸಿ ಸರ್ಕಾರ ಮತ್ತು ಕೋಲ್ಕತ್ತಾ ಪೊಲೀಸರು ಆರೋಪಿಗಳನ್ನು ರಕ್ಷಿಸಲು ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಮೊದಲಿನಿಂದಲೂ ಆರೋಪಿಸುತ್ತಾ ಬಂದಿದ್ದಾರೆ. ಕೋಲ್ಕತ್ತಾ ಹೈಕೋರ್ಟ್​ ನಿರ್ದೇಶನದಂತೆ ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದರ ತನಿಖೆ ನಡೆಸುತ್ತಿದ್ದು, ಕಳೆದ ವಾರವಷ್ಟೇ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಅಧಿಕಾರಕ್ಕೆ ಬಂದ ತಕ್ಷಣವೇ ಆ್ಯಕ್ಷನ್‌ಗೆ ಇಳಿದಿರುವ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಆರ್‌ಜಿ ಕರ್ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಹಾಗೂ ಪ್ರಮುಖ ಹುದ್ದೆಗಳಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿಗಳಾದ ವಿನೀತ್ ಗೋಯಲ್, ಇಂದಿರಾ ಮುಖರ್ಜಿ ಮತ್ತು ಅಭಿಷೇಕ್ ಗುಪ್ತಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಅಲ್ಲದೆ, ಈ ಮೂವರ ವಿರುದ್ಧ ಇಲಾಖಾ ವಿಚಾರಣೆಗೂ ಆದೇಶಿಸಿದ್ದಾರೆ.

ನಾನು ಇಂದು ಶಾಸಕಿಯಾಗಿರಬಹುದು, ಆದರೆ ನನ್ನ ಜೀವನದ ಎಲ್ಲಾ ಸಂತೋಷಗಳು ಮಗಳೊಂದಿಗೆ ಹೋಗಿವೆ. ನನ್ನ ಏಕೈಕ ಉದ್ದೇಶ ನನ್ನ ಮಗಳಿಗೆ ನ್ಯಾಯ ಸಿಗುವುದಾಗಿದೆ. ಈ ಹಿಂದೆ ತನಿಖಾಧಿಕಾರಿಗಳಿಗೆ ನೀಡಿದ್ದ ಪ್ರಮುಖ ಶಂಕಿತರ ಹೆಸರುಗಳ ಪಟ್ಟಿಯನ್ನು ಈಗ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೂ ಸಲ್ಲಿಸಿದ್ದೇನೆ ಎಂದು ರತ್ನಾ ದೇಬ್ನಾಥ್ ಭಾವುಕರಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link