Category Archives: Blog

Your blog category

ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು: ರಾಜೀವ್ ಗೌಡಗೆ ಕೋರ್ಟ್ ತರಾಟೆ – Kannada News | Shidlaghatta City Municipality Commissioner Threat Case: High Court Rebukes Rajeev Gowda Over FIR Quash Plea

ಬೆಂಗಳೂರು, ಜನವರಿ 20: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ (Rajeev Gowda) ಸದ್ಯ ತಲೆ ಮರೆಸಿಕೊಂಡಿದ್ದಾರೆ. ಕೈ ಮುಖಂಡ ಬಂಧನ ವಿಳಂಬ ಖಂಡಿಸಿ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಕ್ಷಮೆ ಕೂಡ ಕೇಳಿದ್ದರು. ಇನ್ನು ಎಫ್​​ಐಆರ್​​ FIR ರದ್ದು ಕೋರಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪೀಠ ರಾಜೀವ್ ಗೌಡಗೆ ತರಾಟೆ ತೆಗೆದುಕೊಂಡಿದ್ದು, ಆದೇಶ ಕಾಯ್ದಿರಿಸಿದೆ.

ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ: ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಜೀವ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ FIR ರದ್ದು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್​​ ಮುಖಂಡನ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದರು. ಫೋನ್ ಮೂಲಕ ಆಡಿದ ಮಾತಿಗೆ ಮಾಧ್ಯಮದಲ್ಲೇ ಕ್ಷಮೆ ಕೇಳಿದ್ದಾರೆ. ಬಿಎನ್‌ಎಸ್‌ ಸೆಕ್ಷನ್ 132 ಈ ಕೇಸಿನಲ್ಲಿ ಅನ್ವಯಿಸುವುದಿಲ್ಲ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ. ತನಿಖೆಗೆ ಸಹಕರಿಸಲು ಸಿದ್ಧರಿರುವುದರಿಂದ ರಕ್ಷಣೆಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜೀವ್‌ಗೌಡಗೆ ಜಾಮೀನು ನೀಡಲು ಕೋರ್ಟ್‌ ನಕಾರ: ‘ಕೈ’ ಮುಖಂಡನ ಬಂಧನಕ್ಕೆ ಅಡ್ಡಿ ಆಗಿದ್ದಾರಾ ಸಚಿವ?

ಇನ್ನು ಈ ವೇಳೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಅರ್ಜಿದಾರರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 74, 79 ಏಕೆ ಹಾಕಿಲ್ಲ? ಅರ್ಜಿದಾರನಿಗೆ ಮಹಿಳೆಯರೆಂದರೆ ಗೌರವ ಇಲ್ಲವೇ ಎಂದು ಪ್ರಶ್ನೆ ಮಾಡಿದೆ. ಅರ್ಜಿದಾರ ಇಂತಹ ಮಾತನ್ನೆಲ್ಲಾ ಹೇಗೆ ಆಡಲು ಸಾಧ್ಯ? ಒಮ್ಮೆ ಮಾತನಾಡಿದರೆ ವಾಪಸ್ ಪಡೆಯಲು ಆಗುವುದಿಲ್ಲ. ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ತರಾಟೆ ತೆಗೆದುಕೊಂಡ ಹೈಕೋರ್ಟ್, ಆ ಮೂಲಕ ರಾಜೀವ್ ಗೌಡ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ.

ಇದನ್ನೂ ಓದಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?

ಇನ್ನು ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು FIR ದಾಖಲಾಗಿವೆ. ಒಂದು ನಗರಸಭೆ ಪೌರಾಯುಕ್ತೆ ಅಮೃತಾಗೌಡ ನೀಡಿದ ದೂರು, ಮತ್ತೊಂದು ಶಾಸಕ ರವಿಕುಮಾರ್ ಪರ ಜೆಡಿಎಸ್ ಕೊಟ್ಟ ದೂರು. ಈ ನಡುವೆ ರಾಜೀವ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Bengaluru: ಜಿಬಿಎ ಅಧಿಕಾರಿ ಮೇಲೆ ಗುತ್ತಗೆದಾರನಿಂದ ದರ್ಪ, ಅವಾಚ್ಯ ಪದಗಳಿಂದ ನಿಂದನೆ – Kannada News | Contractor Allegedly Threatens GBA Female Officer Over Tender Dispute; Complaint Registered

ನೆಲಮಂಗಲ, ಜನವರಿ 20: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ರಾಜ್ಯದಲ್ಲಿನ್ನೂ ಚರ್ಚೆಯಲ್ಲಿದೆ. ಆರೋಪಿ ಬಂಧನವಾಗದಿರುವ ಬಗ್ಗೆ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಮಹಿಳಾ ಅಧಿಕಾರಿಯನ್ನು ಗುತ್ತಿಗೆದಾರನೋರ್ವ ನಿಂದಿಸಿ, ಆವಾಜ್​​ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕಚೇರಿಗೆ ನುಗ್ಗಿರುವ ಗುತ್ತಿಗೆದಾರ ಪುಂಡಾಟ ಮೆರೆದ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅವಾಚ್ಯ ಪದಗಳಿಂದ ನಿಂದನೆ ಆರೋಪ

ದಾಸರಹಳ್ಳಿ ಭಾಗದಲ್ಲಿ ಕಾಮಗಾರಿ ಕೆಲಸ ನಮಗೆ ಬರಬೇಕು. ನಮ್ಮ ಫೈಲ್ ಮೂವ್ ಮಾಡಬೇಕೆಂದು ಆವಾಜ್​​ ಹಾಕಿರುವ ಕಂಟ್ರಾಕ್ಟರ್ ನಂದೀಶ್, ಬಾಗಲಗುಂಟೆ ಜಿಬಿಎ ಕಚೇರಿಗೆ ನುಗ್ಗಿ ಜಿಬಿಎ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಸಂಗೀತಾಗೆ ನಿಂದಿಸಿದ್ದಾರೆ. ದಾಖಲಾತಿಗಳನ್ನು ಹರಿದು ಹಾಕಿದ್ದಲ್ಲದೆ, ಅವಾಚ್ಯ ಪದಗಳ ಬಳಕೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಟೆಂಡರ್ ಸಂಬಂಧ ಫೈಲ್ ಮೂವ್ ಮಾಡುವಂತೆ ಧಮ್ಕಿ ಹಾಕಿರೋದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ; ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ ಮುಖಂಡ?

ಗುತ್ತಿಗೆದಾರನ ದಬ್ಬಾಳಿಕೆಯಿಂದ ಮನನೊಂದ ಸಂಗೀತಾ ಅವರು ಬಾಗಲಗುಂಟೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ಘಟನೆ ಮಹಿಳಾ ಅಧಿಕಾರಿಗಳಿಗೆ ಇರುವ ಗೌರವ ಮತ್ತು ಕೆಲಸ ಮಾಡುವ ವಾತಾವರಣದ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಹಿಳಾ ಅಧಿಕಾರಿಗಳಿಗೆ ಗೌರವ ಇಲ್ವಾ? ಬೆಲೆ ಇಲ್ವಾ? ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಶಿಡ್ಲಘಟ್ಟದಲ್ಲಿ ಪೌರಾಯುಕ್ತರಿಗೆ ಕೈ ಮುಖಂಡನಿಂದ ಆವಾಜ್​, ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದಂತಹ ಘಟನೆಗಳ ಸಾಲಿಗೆ ಮತ್ತೊಂದು ಸೇರ್ಪಡೆ ಈ ಮೂಲಕ ಆದಂತಾಗಿದೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ – Kannada News | Tesla India Internships: Elon Musk’s EV Giant Offers Student Opportunities Across 8 Cities

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಇಂಟರ್ನೆಟ್ ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ದೈತ್ಯ ಸಂಸ್ಥೆಯಾದ ಟೆಸ್ಲಾ ವಿಶ್ವದಾದ್ಯಂತ ತನ್ನದೇ ಆದ ಗುರುತನ್ನು ಹೊಂದಿದೆ. ಕೆಲವೇ ತಿಂಗಳುಗಳ ಹಿಂದೆ ಟೆಸ್ಲಾ ಅಧಿಕೃತವಾಗಿ ಭಾರತಕ್ಕೆ ಪ್ರವೇಶಿಸಿದ್ದು, ಈಗ ಭಾರತೀಯ ಯುವಕರಿಗೆ ಮತ್ತೊಂದು ದೊಡ್ಡ ಅವಕಾಶವನ್ನು ತೆರೆದಿಟ್ಟಿದೆ. ಟೆಸ್ಲಾ ಸಂಸ್ಥೆ ಭಾರತೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮೂಲಕ ತನ್ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿದೆ. ಈ ವಿಶೇಷ ಇಂಟರ್ನ್‌ಶಿಪ್ ನೇಮಕಾತಿ ಪ್ರಕ್ರಿಯೆ ಬೆಂಗಳೂರು ಸೇರಿದಂತೆ ದೇಶದ ಎಂಟು ಪ್ರಮುಖ ನಗರಗಳಲ್ಲಿ ನಡೆಯುತ್ತಿದೆ.

ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಆರಂಭಿಸಿದ್ದು, ಬೆಂಗಳೂರು, ದೆಹಲಿ, ಮುಂಬೈ, ಗುರುಗ್ರಾಮ್, ಹೈದರಾಬಾದ್, ಚೆನ್ನೈ, ಪುಣೆ ಮತ್ತು ಅಹಮದಾಬಾದ್ ನಗರಗಳಲ್ಲಿ ಇಂಟರ್ನ್‌ಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಎಂಟು ನಗರಗಳಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಸೇಲ್ಸ್ ಇಂಟರ್ನ್‌ಗಳಾಗಿ ತರಬೇತಿ ನೀಡಲಾಗುತ್ತದೆ. ಇದು ಭಾರತದಲ್ಲಿ ಟೆಸ್ಲಾದ ಚಿಲ್ಲರೆ ವ್ಯಾಪಾರ ವ್ಯವಸ್ಥೆಯನ್ನು ಬಲಪಡಿಸುವ ಮೊದಲ ಹೆಜ್ಜೆಯಾಗಿದೆ.

ಈ ಇಂಟರ್ನ್‌ಶಿಪ್ ಕಾರ್ಯಕ್ರಮವು ಕಾಲೇಜು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅವಕಾಶವೆಂದು ಪರಿಗಣಿಸಲಾಗುತ್ತಿದೆ. ಜಾಗತಿಕ ಮಟ್ಟದ ಎಲೆಕ್ಟ್ರಿಕ್ ವಾಹನ ಕಂಪನಿಯಾದ ಟೆಸ್ಲಾ ಜೊತೆ ನೇರವಾಗಿ ಕೆಲಸ ಮಾಡುವ ಅನುಭವವನ್ನು ಈ ಮೂಲಕ ವಿದ್ಯಾರ್ಥಿಗಳು ಪಡೆಯಬಹುದು. ಇಂಟರ್ನ್‌ಶಿಪ್ ಅವಧಿಯಲ್ಲಿ, ವಿದ್ಯಾರ್ಥಿಗಳು ಟೆಸ್ಲಾದ ಚಿಲ್ಲರೆ ವ್ಯಾಪಾರ ಮತ್ತು ಉತ್ಪಾದನಾ ಮಾರ್ಗಸೂಚಿಗಳನ್ನು ಅರ್ಥಮಾಡಿಕೊಳ್ಳುವ ಜೊತೆಗೆ, ವಾಸ್ತವಿಕ ಉದ್ಯೋಗ ಅನುಭವವನ್ನು ಕೂಡ ಸಂಪಾದಿಸಬಹುದು. ಈ ಪಾತ್ರದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮಾರಾಟ ಇಂಟರ್ನ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು!

ಇಂಟರ್ನ್‌ಶಿಪ್ ಸಮಯದಲ್ಲಿ ವಿದ್ಯಾರ್ಥಿಗಳು ಟೆಸ್ಲಾದ ಮಾರಾಟ ತಂಡದ ಮುಂಚೂಣಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಗ್ರಾಹಕರೊಂದಿಗೆ ನೇರ ಸಂವಹನ ನಡೆಸುವುದು, ವಾಹನಗಳ ಮಾರಾಟ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಮತ್ತು ಗ್ರಾಹಕರ ಅನುಭವವನ್ನು ರೂಪಿಸುವ ಜವಾಬ್ದಾರಿ ಇವರ ಮೇಲಿದೆ. ಟೆಸ್ಲಾ ಬಿಡುಗಡೆ ಮಾಡಿದ ಪಾತ್ರ ವಿವರಣೆಯ ಪ್ರಕಾರ, ಶೋರೂಮ್‌ಗೆ ಭೇಟಿ ನೀಡುವ ಗ್ರಾಹಕರಿಗೆ ಟೆಸ್ಲಾ ಬ್ರ್ಯಾಂಡ್, ಅದರ ಎಲೆಕ್ಟ್ರಿಕ್ ವಾಹನಗಳು ಹಾಗೂ ಜಗತ್ತನ್ನು ಸುಸ್ಥಿರ ಶಕ್ತಿಯತ್ತ ಕೊಂಡೊಯ್ಯುವ ಸಂಸ್ಥೆಯ ಮಹತ್ವದ ಧ್ಯೇಯವನ್ನು ವಿವರಿಸುವುದೂ ಇಂಟರ್ನ್‌ಗಳ ಕರ್ತವ್ಯವಾಗಿರುತ್ತದೆ.

ಇದಲ್ಲದೆ, ಇಂಟರ್ನ್‌ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ತರಬೇತಿದಾರರಾಗಿ ಕೆಲಸ ಮಾಡುವ ಅವಕಾಶವೂ ದೊರೆಯುತ್ತದೆ. ಈ ಪಾತ್ರದಲ್ಲಿ, ಗ್ರಾಹಕರೊಂದಿಗೆ ತೊಡಗಿಸಿಕೊಳ್ಳುವುದು, ಗ್ರಾಹಕರ ಪ್ರೊಫೈಲ್‌ಗಳನ್ನು ಸಿದ್ಧಪಡಿಸುವುದು, ಟೆಸ್ಲಾ ಉತ್ಪನ್ನಗಳು ಮತ್ತು ಸೇವೆಗಳ ಕುರಿತು ಮಾಹಿತಿ ನೀಡುವುದು ಹಾಗೂ ಟೆಸ್ಟ್ ಡ್ರೈವ್‌ಗಳನ್ನು ನಿಗದಿಪಡಿಸುವುದರಲ್ಲಿ ಸಹಾಯ ಮಾಡಬೇಕಾಗುತ್ತದೆ. ಒಟ್ಟಿನಲ್ಲಿ, ಈ ಇಂಟರ್ನ್‌ಶಿಪ್ ಕಾರ್ಯಕ್ರಮವು ಭಾರತೀಯ ವಿದ್ಯಾರ್ಥಿಗಳಿಗೆ ಜಾಗತಿಕ ಸಂಸ್ಥೆಯೊಂದರೊಂದಿಗೆ ಕೆಲಸ ಮಾಡುವ ಅಮೂಲ್ಯ ಅನುಭವವನ್ನು ನೀಡುವ ದೊಡ್ಡ ಅವಕಾಶವಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು! – Kannada News | SWR Scraps Mysore Kushalnagar Rail Line: High Costs, Low Demand Cited

ಮೈಸೂರು, ಜ.20: ಬಹು ವರ್ಷಗಳಿಂದ ಭಾರೀ ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯ (Mysore-Kushalnagar railway project) ಬಗ್ಗೆ ಇಲಾಖೆ ಅಂತಿಮ ತಿರ್ಮಾನಕ್ಕೆ ಬಂದಿದೆ. ಇದೀಗ ಈ ಯೋಜನೆಯನ್ನು ಕೈಬಿಡಲಾಗಿದೆ. ರೈಲ್ವೆ ಅಧಿಕಾರಿಗಳು ಈ ರೈಲು ಮಾರ್ಗವು ಸುಮಾರು 87.2 ಕಿ.ಮೀ ಉದ್ದದ ಪ್ರಸ್ತಾವಿತ ರೈಲು ಕಾರಿಡಾರ್, ಆರ್ಥಿಕ ಮತ್ತು ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸುವುದಿಲ್ಲ ಹೇಳಿದೆ. ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ಹೇಳಿರುವ ಪ್ರಕಾರ, ಆರ್ಥಿಕ ಆದಾಯ ವಿಚಾರಗಳು ಹಾಗೂ ಈ ಯೋಜನೆಗೆ ಆಗುವ ವೆಚ್ಚದ ಬಗ್ಗೆಯೂ ನೋಡಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ರೈಲ್ವೆ ಮಾರ್ಗವೂ ಪ್ರಯಾಣಿಕರನ್ನು ಹಾಗೂ ಸರಕುಗಳನ್ನು ಸಾಗಾಣೆ ಮಾಡುವ ಸಾಮಾರ್ಥ್ಯವನ್ನು ಹೊಂದಿಲ್ಲ. ಇದಕ್ಕಾಗಿ ಹೆಚ್ಚಿನ ಅನುದಾನವನ್ನು ನೀಡಬೇಕಾಗುತ್ತದೆ, ಇದು ದೀರ್ಘಾವಧಿಯ ಆರ್ಥಿಕ ಲಾಭವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಈ ರೈಲು ಮಾರ್ಗ ಮೈಸೂರಿನಿಂದ ಕುಶಾಲನಗರಕ್ಕೆ ಸಂಪರ್ಕ ಕಲ್ಪಿಸಲು ಯೋಜನೆಯನ್ನು ಹಾಕಲಾಗಿತ್ತು. ಈ ರೈಲು ಮಾರ್ಗಕ್ಕೆ ಸುಮಾರು 1,379 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆರಂಭಿಕ ಅಂದಾಜಿನ ಪ್ರಕಾರ, ಈ ಯೋಜನೆಯ ವೆಚ್ಚ ಸುಮಾರು 1,800 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಆದರೆ ಇದು ಹೆಚ್ಚಾಗುತ್ತ ಹೋಯಿತು. ಈ ಯೋಜನೆಗೆ 2018–19ರ ಆರ್ಥಿಕ ವರ್ಷದಲ್ಲಿ ಅನುಮೋದನೆ ಸಿಕ್ಕಿತ್ತು. ಅಂತಿಮ ಸ್ಥಳ ಸಮೀಕ್ಷೆ (FLS) ಟೆಂಡರ್ ಅನ್ನು ಜೂನ್ 2022 ರಲ್ಲಿ ನೀಡಲಾಯಿತು. ಆದರೆ ರೈಲ್ವೆ ಅಧಿಕಾರಿಗಳು ಈಗ ಮಾರ್ಗದ ವೆಚ್ಚ ಹಾಗೂ ಮುಂದಿನ ದಿನಗಳಲ್ಲಿ ಎಷ್ಟು ಆದಾಯಗಳು ಬರುಬಹುದು ಎಂದು ಸಮೀಕ್ಷೆಯನ್ನು ನಡೆಸಬೇಕು ಎಂದು ಹೇಳಿದ್ದರು. ನಂತರ ಈ ಯೋಜನೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಈ ರೈಲ್ವೆ ಮಾರ್ಗ ನಿರ್ಮಾಣ ರದ್ದಾಗಲು ಪ್ರಮುಖ ಕಾರಣಗಳು:

ಕಡಿಮೆ ಬೇಡಿಕೆ (Low Demand): ಒಂದು ನಿರ್ದಿಷ್ಟ ಮಾರ್ಗದಲ್ಲಿ ಪ್ರಯಾಣಿಸುವವರ ಸಂಖ್ಯೆ ಅಥವಾ ಅಲ್ಲಿಂದ ಸಾಗಣೆಯಾಗುವ ಸರಕುಗಳ (Freight) ಪ್ರಮಾಣ ಕಡಿಮೆ ಇದ್ದಾಗ, ಅಲ್ಲಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಮಾಡುವುದು ಆರ್ಥಿಕವಾಗಿ ನಷ್ಟದಾಯಕವಾಗುತ್ತದೆ. ಇದೀಗ ಈ ರೈಲ್ವೆ ಮಾರ್ಗದಲ್ಲೂ ಕೂಡ ಇದೆ ಪರಿಸ್ಥಿತಿ.

ಹೂಡಿಕೆಯ ಮೇಲಿನ ಲಾಭ (ROI): ಬೃಹತ್ ಯೋಜನೆಗಳಿಗೆ ಬ್ಯಾಂಕ್‌ಗಳಿಂದ ಅಥವಾ ವಿದೇಶಿ ಸಂಸ್ಥೆಗಳಿಂದ ಸಾಲ ಪಡೆಯಲಾಗುತ್ತದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದರೆ ಆ ಸಾಲವನ್ನು ಮರುಪಾವತಿಸಲು ಕಷ್ಟವಾಗುತ್ತದೆ. ಮೈಸೂರು-ಕುಶಾಲನಗರ ರೈಲು ಮಾರ್ಗ ಹೆಚ್ಚಿನ ಅನುದಾನ ನೀಡಬೇಕಾದರೆ, ಈ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.

ಪರ್ಯಾಯ ಮಾರ್ಗಗಳು: ಈಗಾಗಲೇ ಉತ್ತಮ ರಸ್ತೆ ಅಥವಾ ರೈಲ್ವೆ ಸಂಪರ್ಕವಿದ್ದು, ಹೊಸ ಯೋಜನೆಯಿಂದ ಹೆಚ್ಚಿನ ಬದಲಾವಣೆ ಸಾಧ್ಯವಿಲ್ಲ

ಯೋಜನೆಯ ರದ್ದತಿ ಅಥವಾ ವಿಳಂಬ: ಇತ್ತೀಚೆಗೆ ಕೇರಳದ ‘ಸಿಲ್ವರ್ ಲೈನ್’ (SilverLine) ರೈಲ್ವೆ ಯೋಜನೆಯ ವಿಷಯದಲ್ಲೂ ಇಂತಹದ್ದೇ ಚರ್ಚೆಗಳು ನಡೆದಿದ್ದವು. ವೆಚ್ಚಕ್ಕೆ ಹೋಲಿಸಿದರೆ ಅದರಿಂದ ಸಿಗುವ ಆರ್ಥಿಕ ಲಾಭ ಕಡಿಮೆ ಎಂಬ ಕಾರಣಕ್ಕೆ ಅನೇಕ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Oxfam Report: ವಿಶ್ವದ 400 ಕೋಟಿ ಜನರದ್ದಕ್ಕೆ ಸಮ ಈ 12 ಮಂದಿಯ ಶ್ರೀಮಂತಿಕೆ – Kannada News | World top 12 rich people have more wealth than half of world population

ನವದೆಹಲಿ, ಜನವರಿ 20: ಕಳೆದ ವರ್ಷ (2025) ಜಗತ್ತಿನಲ್ಲಿ ಬಿಲಿಯನೇರ್​ಗಳ (Billionaires) ಸಂಖ್ಯೆ 3,000 ಗಡಿ ದಾಟಿದೆ. ಇದು ಹೊಸ ದಾಖಲೆಯಾಗಿದೆ. ಈ ಇಷ್ಟೂ ಬಿಲಿಯನೇರ್​ಗಳ ಒಟ್ಟೂ ಸಂಪತ್ತು 18.3 ಟ್ರಿಲಿಯನ್ ಡಾಲರ್​ನಷ್ಟು ಇರಬಹುದು ಎನ್ನಲಾಗಿದೆ. ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಗೆ ಮುನ್ನ ಆಕ್ಸ್​ಫ್ಯಾಮ್ (Oxfam) ಸಂಸ್ಥೆ ಬಿಡುಗಡೆ ಮಾಡಿದ ವರದಿಯಲ್ಲಿ ಬಿಲಿಯನೇರ್​ಗಳ ಮಾಹಿತಿ ಕೊಡಲಾಗಿದೆ.

ಈ ಮೂರು ಸಾವಿರ ಬಿಲಿಯನೇರ್​ಗಳಿರುವ ಒಟ್ಟೂ ಆಸ್ತಿಯು ಚೀನಾದಂತಹ ದೈತ್ಯ ದೇಶದ ಜಿಡಿಪಿಗೆ ಸಮವಾಗಿದೆ. 2025ರಲ್ಲಿ ಇವರ ಒಟ್ಟಾರೆ ಸಂಪತ್ತು ಶೇ. 16ರಷ್ಟು ವೃದ್ಧಿಯಾಗಿದೆ. 2020ರಲ್ಲಿ ಜಾಗತಿಕ ಬಿಲಿಯನೇರ್​ಗಳು ಹೊಂದಿದ್ದ ಸಂಪತ್ತಿಗೆ ಹೋಲಿಸಿದರೆ ಈಗ ಅದು ಶೇ. 81ರಷ್ಟು ಹೆಚ್ಚಿದೆ ಎಂದು ಆಕ್ಸ್​ಫ್ಯಾಮ್ ವರದಿಯಿಂದ ತಿಳಿದುಬರುತ್ತದೆ.

ಬಿಲಿಯನೇರ್​ಗಳೆಂದರೆ ಯಾರು?

ಒಂದು ಬಿಲಿಯನ್ ಅಮೆರಿಕನ್ ಡಾಲರ್​ನಷ್ಟು ಮೌಲ್ಯದ ಸಂಪತ್ತು ಹೊಂದಿರುವವರನ್ನು ಬಿಲಿಯನೇರ್​ಗಳೆಂದು ಪರಿಗಣಿಸಲಾಗುತ್ತದೆ. ಒಂದು ಬಿಲಿಯನ್ ಎಂದರೆ ನೂರು ಕೋಟಿ. ಭಾರತೀಯ ರುಪಾಯಿ ಲೆಕ್ಕದಲ್ಲಿ ಒಂದು ಬಿಲಿಯನ್ ಡಾಲರ್ ಎಂದರೆ ಸುಮಾರು 9,000 ಕೋಟಿ ರೂ.

ಇದನ್ನೂ ಓದಿ: ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ?

ವಿಶ್ವದ ಅತಿಶ್ರೀಮಂತ 12 ಮಂದಿಯ ಕೈಲಿ ಇರುವ ಸಂಪತ್ತು ಎಷ್ಟು?

ಜಾಗತಿಕವಾಗಿ ಸಂಪತ್ತು ಹೆಚ್ಚುತ್ತಿದೆ. ಶ್ರೀಮಂತರು ಹೆಚ್ಚುತ್ತಿದ್ದಾರೆ. ಹಾಗೆಯೇ, ಆರ್ಥಿಕ ಅಸಮಾನತೆಯೂ ಹೆಚ್ಚುತ್ತಿರುವ ಟ್ರೆಂಡ್ ಮುಂದುವರಿಯುತ್ತಿದೆ. ಆಕ್ಸ್​ಫ್ಯಾಮ್ ವರದಿ ಪ್ರಕಾರ ವಿಶ್ವದ ಅತೀ ಶ್ರೀಮಂತ 12 ಮಂದಿಯ ಬಳಿ ಇರುವ ಆಸ್ತಿಯ ಮೌಲ್ಯವು ಜಗತ್ತಿನ ಶೇ. 50ಕ್ಕಿಂತ ಹೆಚ್ಚು ಜನರ ಸಂಪತ್ತಿಗೆ ಸಮ ಎನ್ನಲಾಗುತ್ತಿದೆ.

ಅಂದರೆ, ಕೆಳಸ್ತರದಲ್ಲಿರುವ 400 ಕೋಟಿಗೂ ಅಧಿಕ ಜನರು ಹೊಂದಿರುವ ಒಟ್ಟೂ ಸಂಪತ್ತಿಗಿಂತ ಹೆಚ್ಚಿನದು ಅಗ್ರ 12 ಜನರ ಬಳಿ ಇದೆಯಂತೆ. ಎನ್​ವಿಡಿಯಾ, ಟೆಸ್ಲಾ ಇತ್ಯಾದಿ ಕಂಪನಿಗಳ ವ್ಯಾಲ್ಯುಯೇಶನ್ ಗಣನೀಯವಾಗಿ ಹೆಚ್ಚಿರುವುದು ಶ್ರೀಮಂತರನ್ನು ಇನ್ನೂ ದೊಡ್ಡ ಶ್ರೀಮಂತರನ್ನಾಗಿಸಿದೆ. ವರ್ಷದ ಹಿಂದೆ 200-300 ಬಿಲಿಯನ್ ಡಾಲರ್ ಹಣವಂತರಾಗಿದ್ದ ಇಲಾನ್ ಮಸ್ಕ್ ಇದೀಗ ಜಗತ್ತಿನ ಮೊದಲ ಟ್ರಿಲಿಯನೇರ್ ಆಗುವತ್ತ ದಾಪುಗಾಲಿಕ್ಕಿದ್ದಾರೆ.

ಫೋರ್ಬ್ಸ್ ಪಟ್ಟಿಯಲ್ಲಿ ಟಾಪ್-10 ಬಿಲಿಯನೇರ್ಸ್

  1. ಇಲಾನ್ ಮಸ್ಕ್: 779.6 ಬಿಲಿಯನ್ ಡಾಲರ್
  2. ಲ್ಯಾರಿ ಪೇಜ್: 270 ಬಿಲಿಯನ್ ಡಾಲರ್
  3. ಜೆಫ್ ಬೇಜೋಸ್: 249.1 ಬಿಲಿಯನ್ ಡಾಲರ್
  4. ಸೆರ್ಗೀ ಬ್ರಿನ್: 249.1 ಬಿಲಿಯನ್ ಡಾಲರ್
  5. ಲ್ಯಾರಿ ಎಲಿಸನ್: 240.6 ಬಿಲಿಯನ್ ಡಾಲರ್
  6. ಮಾರ್ಕ್ ಜುಕರ್ಬರ್ಗ್: 212.8 ಬಿಲಿಯನ್ ಡಾಲರ್
  7. ಬರ್ನಾರ್ಡ್ ಆರ್ನಾಲ್ಟ್: 182.4 ಬಿಲಿಯನ್ ಡಾಲರ್
  8. ಜೆನ್ಸೆನ್ ಹುವಾಂಗ್: 161.7 ಬಿಲಿಯನ್ ಡಾಲರ್
  9. ವಾರನ್ ಬಫೆಟ್: 146.1 ಬಿಲಿಯನ್ ಡಾಲರ್
  10. ಅಮಾನ್ಷಿಯೋ ಆರ್ಟೆಗಾ: 143.1 ಬಿಲಿಯನ್ ಡಾಲರ್

ಇದನ್ನೂ ಓದಿ: ಇದು ವಿದ್ಯುತ್ ಕ್ರಾಂತಿ..! ವೈಫೈ ಇಂಟರ್ನೆಟ್ ರೀತಿ ವೈರ್ಲೆಸ್ ಎಲೆಕ್ಟ್ರಿಸಿಟಿ ರವಾನಿಸಿದ ಫಿನ್​ಲ್ಯಾಂಡ್ ವಿಜ್ಞಾನಿಗಳು

ಭಾರತೀಯ ಬಿಲಿಯನೇರ್​ಗಳ ಪೈಕಿ ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಮೊದಲೆರಡು ಸ್ಥಾನದಲ್ಲಿ ಮುಂದುವರಿಯುತ್ತಾರೆ. ಅಂಬಾನಿ 104.6 ಟ್ರಿಲಿಯನ್ ಡಾಲರ್, ಅದಾನಿ 89.6 ಬಿಲಿಯನ್ ಡಾಲರ್ ಮೌಲ್ಯದ ಕುಬೇರರಾಗಿದ್ದಾರೆ. ಸಾವಿತ್ರಿ ಜಿಂದಾಲ್ 40.2 ಬಿಲಿಯನ್ ಡಾಲರ್​ನೊಂದಿಗೆ ಮೂರನೇ ಸ್ಥಾನ ಪಡೆಯುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್​​ ಶಾಕ್: ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್ – Kannada News | Fighting Cervical Cancer: Rural Karnataka’s Challenge and Solutions for Women

ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್ (Cervical Cancer )ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ಮಾಡಿದಿರುವುದೇ ಕಾರಣ ಎಂದು ಹೇಳಿದ್ದಾರೆ. ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಆಂಕೊಲಾಜಿಸ್ಟ್ ಸಲಹೆಗಾರ ಡಾ. ಎಸ್.ಡಿ. ಶ್ಯಾಮಸುಂದರ್​​ ಅವರು ಹೇಳಿರುವ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ರೋಗಗಳು ಕಂಡು ಬಂದಿದೆ. ಒಂದು ಕಡೆ ನಗರ ಪ್ರದೇಶಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬಂದರೆ, ಗರ್ಭಕಂಠದ ಕ್ಯಾನ್ಸರ್ ಗ್ರಾಮೀಣ ಕರ್ನಾಟಕದ ಅನೇಕ ಮಹಿಳೆಯರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ, ಬಹು ಹೆರಿಗೆ, ಮನೆಯಲ್ಲಿಯೇ ಹೆರಿಗೆ ಮಾಡಿಸುವುದು, ಮುಟ್ಟಿನ ನೈರ್ಮಲ್ಯದ ಕೊರತೆ ಮತ್ತು ಅರಿವಿನ ಕೊರತೆ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

ಗರ್ಭಕಂಠದ ಕ್ಯಾನ್ಸರ್ HPV ವೈರಸ್‌ನ ನಿರಂತರ ಸೋಂಕಿನಿಂದ ಉಂಟಾಗುತ್ತದೆ. ಇದರ ಜತೆಗೆ ಹೆರಿಗೆಯ ಸಮಯದಲ್ಲಿ ಅಸಮರ್ಪಕ ನೈರ್ಮಲ್ಯ, ಸಾಂಸ್ಥಿಕವಲ್ಲದ ಹೆರಿಗೆಗಳು, ಚಿಕ್ಕ ವಯಸ್ಸಿನಲ್ಲಿ ಹೆರಿಗೆ ಆಗುವುದು. ಈ ಎಲ್ಲ ಅಂಶಗಳು ಅಪಾಯವನ್ನು ಹೆಚ್ಚಿಸುತ್ತವೆ. ನಗರ ಪ್ರದೇಶಗಳಲ್ಲಿಯೂ ಈಗಲ್ಲೂ ಇದರ ಚಿಕಿತ್ಸೆ ಪಡೆಯಲು ಹಿಂಜರಿಯುತ್ತಿದ್ದರೆ ಎಂಬುದು ಕೂಡ ಅಚ್ಚರಿಯ ವಿಚಾರವಾಗಿದೆ. ಹಾಗೂ ಮಹಿಳೆಯರು ಸಾಮಾನ್ಯವಾಗಿ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಲು ಹಿಂಜರಿಯುತ್ತಾರೆ ಎಂದು ರಂಗದೊರೆ ಸ್ಮಾರಕ ಆಸ್ಪತ್ರೆಯ ಕನ್ಸಲ್ಟೆಂಟ್ ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಕವಿತಾ ಜೈನ್ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

ಗರ್ಭಕಂಠದ ಕ್ಯಾನ್ಸರ್ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಲು ಪ್ರಮುಖ ಕಾರಣ:

ಅರಿವಿನ ಕೊರತೆ: ರೋಗದ ಲಕ್ಷಣಗಳ ಬಗ್ಗೆ ಮತ್ತು ಸ್ಕ್ರೀನಿಂಗ್ (Screening) ಮಹತ್ವದ ಬಗ್ಗೆ ಗ್ರಾಮೀಣ ಮಹಿಳೆಯರಲ್ಲಿ ಮಾಹಿತಿ ಕಡಿಮೆ ಇರುವುದು.

ತಡವಾಗಿ ಚಿಕಿತ್ಸೆ: ಶೇ. 60-70 ರಷ್ಟು ಪ್ರಕರಣಗಳು ಕೊನೆಯ ಹಂತದಲ್ಲಿ ಪತ್ತೆಯಾಗುತ್ತಿವೆ. ಇದರಿಂದ ಚಿಕಿತ್ಸೆ ಫಲಕಾರಿಯಾಗುವುದು ಕಷ್ಟವಾಗುತ್ತಿದೆ.

ಸಾಮಾಜಿಕ ಮತ್ತು ಆರ್ಥಿಕ ಕಾರಣಗಳು: ಬಾಲ್ಯ ವಿವಾಹ, ಚಿಕ್ಕ ವಯಸ್ಸಿನಲ್ಲಿ ಗರ್ಭಧಾರಣೆ, ಹೆಚ್ಚು ಮಕ್ಕಳನ್ನು ಪಡೆಯುವುದು ಮತ್ತು ಪೌಷ್ಟಿಕಾಂಶದ ಕೊರತೆ ಅಪಾಯವನ್ನು ಹೆಚ್ಚಿಸುತ್ತಿವೆ.

ನೈರ್ಮಲ್ಯದ ಕೊರತೆ: ಮುಟ್ಟಿನ ಅವಧಿಯಲ್ಲಿ ಸರಿಯಾದ ನೈರ್ಮಲ್ಯ ಕಾಪಾಡಿಕೊಳ್ಳದಿರುವುದು ಸೋಂಕಿಗೆ ದಾರಿ ಮಾಡಿಕೊಡುತ್ತಿದೆ.

ಇದನ್ನೂ ಓದಿ: ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ

ರೋಗದ ಲಕ್ಷಣಗಳು:

ಅಸಹಜ ಯೋನಿ ರಕ್ತಸ್ರಾವ (ಮುಟ್ಟಿನ ನಡುವೆ ಅಥವಾ ದೈಹಿಕ ಸಂಬಂಧದ ನಂತರ).

ಕೆಟ್ಟ ವಾಸನೆಯಿಂದ ಕೂಡಿದ ಸ್ರಾವ.

ಕೆಳಹೊಟ್ಟೆ ಅಥವಾ ಸೊಂಟದ ಭಾಗದಲ್ಲಿ ನಿರಂತರ ನೋವು.

ಕಾಲುಗಳಲ್ಲಿ ಊತ ಮತ್ತು ಅತಿಯಾದ ಸುಸ್ತು.

ಈ ಬಗ್ಗೆ ಸರ್ಕಾರದ ಹೊಸ ಕ್ರಮಗಳು (2025-26):

ಉಚಿತ ಎಚ್‌ಪಿವಿ ಲಸಿಕೆ (HPV Vaccine): ಕಲ್ಯಾಣ ಕರ್ನಾಟಕದ ಭಾಗದ 14 ವರ್ಷದ ಬಾಲಕಿಯರಿಗೆ ಉಚಿತವಾಗಿ ಎಚ್‌ಪಿವಿ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ.

ಗೃಹ ಆರೋಗ್ಯ ಯೋಜನೆ: ಈ ಯೋಜನೆಯಡಿ ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮತ್ತು ಅರಿವು ಮೂಡಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಪೈಲಟ್ ಪ್ರಾಜೆಕ್ಟ್: ಗರ್ಭಕಂಠದ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಇಲ್ಲಿ ವಿಶೇಷ ಸ್ಕ್ರೀನಿಂಗ್ ಕ್ಯಾಂಪ್‌ಗಳನ್ನು ಆಯೋಜಿಸಲಾಗಿದೆ.

ತಡೆಗಟ್ಟುವ ಕ್ರಮಗಳು:

ಪ್ಯಾಪ್ ಸ್ಮೀಯರ್ ಟೆಸ್ಟ್ (Pap Smear): 25 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ 3-5 ವರ್ಷಕ್ಕೊಮ್ಮೆ ಈ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಲಸಿಕೆ: 9 ರಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಲಸಿಕೆ ಕೊಡಿಸುವುದು ಅತ್ಯಂತ ಪರಿಣಾಮಕಾರಿ ಮಾರ್ಗ

Source link

ಬಿಗ್ ಬಾಸ್: ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ – Kannada News | Kavya Shaiva first reaction after Gilli Nata Win in Bigg Boss Kannada Season 12

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ಅವರು ತುಂಬ ಕ್ಲೋಸ್ ಆಗಿದ್ದರು. ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದರು. ಕಾವ್ಯಾ ಶೈವ (Kavya Shaiva) ಅವರು 3ನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ (Gilli Nata) ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್ಯಾಗೆ ಖುಷಿ ಆಗಿದೆ. ‘ಗಿಲ್ಲಿ ಗೆದ್ದಿದ್ದಕ್ಕೆ ನನಗೆ ತುಂಬಾ ಖುಷಿ ಇದೆ. ಆ ಗೆಲುವಿಗೆ ಅವನು ಅರ್ಹ. ಇಷ್ಟು ಜನರ ಪ್ರೀತಿ ಗಳಿಸಿದ್ದಕ್ಕೆ ಫ್ರೆಂಡ್ ಆಗಿ ನನಗೆ ಅವನ ಬಗ್ಗೆ ಬಹಳ ಹೆಮ್ಮೆ ಇದೆ. ಅವನ ಜೊತೆ ಇನ್ನೂ ಮಾತಾಡೋಕೆ ಆಗಿಲ್ಲ. ಮಾತನಾಡಬೇಕು’ ಎಂದು ಕಾವ್ಯಾ ಶೈವ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ – Kannada News | An elephant taught wisdom to a dog that barked at him

ಆನೆಗಳು (Elephants) ಮಾಡುವ ಚೇಷ್ಟೆಗಳು, ತುಂಟಾಟಗಳು ನೋಡುವುದೇ ಖುಷಿ. ಆನೆಗಳ ತುಂಟಾಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಈ ಆನೆಗಳಿಗೆ ಕೋಪಬಂದರೆ ಅತೀರೇಕವಾಗಿ ವರ್ತಿಸುತ್ತವೆ. ಸುಖಾ ಸುಮ್ಮನೆ ತನ್ನೊಂದಿಗೆ ಕಿರಿಕ್ ಮಾಡಲು ಬರುವ ಯಾರನ್ನು ಕೂಡ ಸುಮ್ಮನೆ ಬಿಡಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತನಗೆ ಬೊಗಳಿದ ಶ್ವಾನವನ್ನು ಆನೆಯು ಒದ್ದು ಓಡಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಲೆಕ್ ಚೈರ್ಲಟ್ (lek_chailert) ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಆನೆಗಳು ಸೇರಿರುವುದನ್ನು ನೀವು ನೋಡುತ್ತೀರಿ. ಅಲ್ಲೇ ಒಂದು ಬಿಳಿ ಶ್ವಾನವು ನಿಂತಿದೆ. ಈ ನಾಯಿಯೂ ಆನೆಯನ್ನು ನೋಡಿದ ತಕ್ಷಣ ಬೊಗಳಲು ಶುರು ಮಾಡುತ್ತದೆ. ಆದರೆ ಗಜರಾಜ ಪ್ರಾರಂಭದಲ್ಲಿ ಈ ಶ್ವಾನವನ್ನು ನಿರ್ಲಕ್ಷ್ಯ ಮಾಡುತ್ತದೆ. ನಾಯಿಯೂ ಮತ್ತೆ ಮತ್ತೆ ಬೊಗಳುತ್ತಿದ್ದಂತೆ ಆನೆಯು ಒದ್ದು ಬುದ್ಧಿ ಕಲಿಸುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಿನ್ನಲು ಹಣ್ಣು ನೀಡಿದ ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದು ನಿಂತ ಮರಿಯಾನೆ

ಈ ವಿಡಿಯೋ ಒಂದು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ನೋಡಲು ತುಂಬಾನೇ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, 01% ದಾಳಿ ಹಾಗೂ 0% ಡ್ಯಾಮೇಜ್ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನನಗೆ ಈ ರೀತಿ ಬ್ಯಾಕ್ ಕಿಕ್ ಇಷ್ಟ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:58 pm, Tue, 20 January 26

Source link

ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ – Kannada News | Shocking Incident In Hassan: Girl Panicked After Stranger Follows Her, Police Launch Manhunt

ಹಾಸನ, (ಜನವರಿ 20): ಹಾಸನ (Hassan) ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬಾಲಕಿ ಮನೆ ಕಡೆಗೆ ಓಡೋಡಿ ಬಂದಿದ್ದು, ಗೇಟು ಹಾಕಿಕೊಂಡು ಅಮ್ಮ ಅಮ್ಮ ಬಾಗಿಲು ತೆಗಿ ಎಂದು ಆತಂಕದಿಂದ ಕಿರಿಚಿದ್ದಾಳೆ. ಇನ್ನೊಂದೆಡೆ ಆಗಂತುಕ ಸಹ ಬಾಲಕಿಯನ್ನ ಬೆನ್ನಟ್ಟಿ ಮನೆ ಗೇಟ್ ವರೆಗೂ ಬಂದಿದ್ದಾನೆ. ಈ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿದರೆ ಬೆಚ್ಚಿಬೀಳಿಸುವಂತಿದೆ. ಜನವರಿ 17ರ ಶನಿವಾರ ಮಧ್ಯಾಹ್ನ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಗಂತುಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್‌ ಟ್ರಿಕ್‌ ಪಾಲಿಸಿ – Kannada News | Follow this simple trick to avoid getting cold while riding a two wheeler

ಬಹುತೇಕ ಹೆಚ್ಚಿನವರು ಕಾಲೇಜು, ಕೆಲಸಕ್ಕೆ ಬೈಕ್‌, ಸ್ಕೂಟಿಯಲ್ಲಿಯೇ ಹೋಗುತ್ತಾರೆ. ಹೀಗೆ ದ್ವಿಚಕ್ರ ವಾಹನದಲ್ಲಿ (two-wheeler) ಪ್ರಯಾಣಿಸುವಾಗ ಅದರಲ್ಲೂ ಬೆಳಗ್ಗಿನ ಸಮಯದಲ್ಲಿ ಸಿಕ್ಕಾಪಟ್ಟೆ ಚಳಿಯಾಗುತ್ತದೆ. ಬಲವಾದ, ತಂಪಾದ ಗಾಳಿಯು ನೇರವಾಗಿ ದೇಹವನ್ನು ಬಡಿದು, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾಗುತ್ತದೆ. ಇದರಿಂದ ವಾಹನ ಚಲಾಯಿಸಲು ಕೂಡ ಕಷ್ಟಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಒಂದು ಸರಳ ಹ್ಯಾಕ್‌ ಅನುಸರಿಸುವ ಮೂಲಕ ಚಳಿಯಾಗದಂತೆ ನೋಡಿಕೊಳ್ಳಬಹುದು ಮತ್ತು ದೇಹವನ್ನು ಬೆಚ್ಚಗಿಡಬಹುದು. ಈ ಹ್ಯಾಕನ್ನು ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ದೀಪ್ತಿ ಕಪೂರ್ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ.

ಬೈಕ್‌ನಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಏನು ಮಾಡಬೇಕು?

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ನಿಮಗೆ ಚಳಿ ಆಗಬಾರದೆಂದರೆ ನೀವು ನಿಮ್ಮ ಜಾಕೆಟ್ ಅಥವಾ ಸ್ವೆಟರ್ ಒಳಗೆ ನ್ಯೂಸ್‌ ಪೇಪರ್‌ ಇಟ್ಟುಕೊಳ್ಳಬೇಕು.  ಈ ವಿಧಾನವು ವಿಚಿತ್ರವೆನಿಸಬಹುದು, ಆದರೆ ಇದು ತುಂಬಾ ಪರಿಣಾಮಕಾರಿಯಾಗಿದೆ. ಪತ್ರಿಕೆಯು ಒಂದು ರೀತಿಯ ನಿರೋಧನ ಪದರವಾಗಿ ಕಾರ್ಯನಿರ್ವಹಿಸುತ್ತದೆ, ಇದು ತಣ್ಣನೆಯ ಗಾಳಿಯು ದೇಹವನ್ನು ಪ್ರವೇಶಿಸುವುದನ್ನು ತಡೆಯುತ್ತದೆ ಮತ್ತು ದೇಹದ ಶಾಖವು ಹೊರಹೋಗುವುದನ್ನು ತಡೆಯುತ್ತದೆ.  ಇದು ತಂಪಾದ ಗಾಳಿಯು ನಿಮ್ಮ ದೇಹವನ್ನು ನೇರವಾಗಿ ಸಂಪರ್ಕಿಸುವುದನ್ನು ತಡೆಯುತ್ತದೆ, ಶೀತದಿಂದ ನಿಮ್ಮನ್ನು ಸುರಕ್ಷಿತವಾಗಿರಿಸುತ್ತದೆ.

ವೃತ್ತಪತ್ರಿಕೆ ದೇಹ ಸೇರದಂತೆ ಗಾಳಿಯನ್ನು ನಿರ್ಬಂಧಿಸುತ್ತದೆ ಮತ್ತು ದೇಹದ ಶಾಖವನ್ನು ಹಿಡಿದಿಟ್ಟುಕೊಳ್ಳುತ್ತದೆ. ಇದು ತುಂಬಾ ಅಗ್ಗದ, ಸುರಕ್ಷಿತ ಮತ್ತು ತ್ವರಿತ ಪರಿಹಾರವಾಗಿದೆ. ಇದಕ್ಕಾಗಿ ನೀವು ಮೊದಲು ಜಾಕೆಟ್‌ ಹಾಕಿ, ನ್ಯೂಸ್‌ ಪೇಪರ್‌ ತೆಗೆದುಕೊಂಡು ಎದೆ ಮತ್ತು ಹೊಟ್ಟೆಯ ಭಾಗ ಕವರ್‌ ಆಗುವಂತೆ ಅದನ್ನು ಜಾಕೆಟ್‌ ಒಳಗೆ ಇರಿಸಿ, ಜಾಕೆಟ್ ಝಿಪ್‌ ಹಾಕಿ. ಈ ತಂತ್ರ ದೇಹ ಬೆಚ್ಚಗಾಗಿರಲು ಸಹಾಯ ಮಾಡುತ್ತದೆ.

ವಿಡಿಯೋ ಇಲ್ಲಿದೆ ನೋಡಿ:‌

ಇದನ್ನೂ ಓದಿ: ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ರೀತಿಯಾಗಿ ಉಪಯೋಗಿಸಿ

ಈ ಹ್ಯಾಕ್ ಅನ್ನು ಅನುಸರಿಸುವುದರ ಜೊತೆಗೆ, ಚಳಿಗಾಲದಲ್ಲಿ ಬೈಕ್ ಸವಾರಿ ಮಾಡುವಾಗ ಯಾವಾಗಲೂ ನಿಮ್ಮ ಕಿವಿ, ಕುತ್ತಿಗೆ, ಕೈಗಳು ಮತ್ತು ಪಾದಗಳನ್ನು ಮುಚ್ಚಿಕೊಳ್ಳಿ. ಕೈಗವಸುಗಳು, ಮಫ್ಲರ್, ಟೋಪಿ ಮತ್ತು ಉತ್ತಮ ಬೂಟುಗಳನ್ನು ಧರಿಸಿ, ಏಕೆಂದರೆ ದೇಹದ ಈ ಭಾಗಗಳು  ಶೀತ ಚಳಿಗೆ ಹೆಚ್ಚು ಒಳಗಾಗುತ್ತವೆ. ತೀವ್ರ ಚಳಿಯ ಸಮಯದಲ್ಲಿ ಬೆಳಿಗ್ಗೆ ಬೇಗನೆ ಪ್ರಯಾಣಿಸುವುದನ್ನು ತಪ್ಪಿಸಿ, ಏಕೆಂದರೆ ಆ ಸಮಯದಲ್ಲಿ ಚಳಿ ಹೆಚ್ಚು. ನೀವು ಪ್ರಯಾಣಿಸಬೇಕಾದರೆ, ಬೆಚ್ಚಗಿನ ನೀರನ್ನು ಕುಡಿಯಿರಿ ಅಥವಾ ಬೆಚ್ಚಗಿನ ಪಾನೀಯವನ್ನು ಕುಡಿಯಿರಿ. ಇದು ನಿಮ್ಮ ದೇಹವನ್ನು ಸ್ವಲ್ಪ ಸಮಯದವರೆಗೆ ಬೆಚ್ಚಗಿಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link