Headlines

ಅಮೆರಿಕದ ಯುದ್ಧವೆಲ್ಲವೂ ತೈಲಕ್ಕಾಗಿಯೇ; ಇವಿ, ಸೋಲಾರ್ ದಾಂಗುಡಿ ಇಟ್ಟರೂ ಆಯಿಲ್​ಗೆ ಯಾಕಿಷ್ಟು ಬೇಡಿಕೆ? ಈ ಕಪ್ಪು ಚಿನ್ನ ಅಂತಿಂಥದ್ದಲ್ಲ – Kannada News | Beyond Fuel: Crude Oil Demand to Soar Despite EVs & Green Shift – Petrochemicals Drive It

ಜಗತ್ತಿನಲ್ಲಿ ಯುದ್ಧ ಆಗೋದು ಒಂದು ಹೆಣ್ಣಿಗಾಗಿ, ಮತ್ತೊಂದು ಮಣ್ಣಿಗಾಗಿ. ಇಲ್ಲಿ ಮಣ್ಣು ಎಂದರೆ ಸಂಪನ್ಮೂಲ. ಕಳೆದ ಕೆಲ ಶತಮಾನಗಳಿಂದ ಜಗತ್ತಿನ ಹೆಚ್ಚಿನ ಯುದ್ಧಗಳು ಸಂಪನ್ಮೂಲಗಳಿಗಾಗಿ ನಡೆದಿವೆ. ಎಂಜಿನ್​ಗಳ ಕಾಲ ಬಂದ ಬಳಿಕ ಕಚ್ಚಾ ತೈಲ ಬಹಳ ಪ್ರಮುಖ ಸಂಪನ್ಮೂಲವೆನಿಸಿದೆ. ತೈಲಕ್ಕಾಗಿ (Oil) ಸಾಲು ಸಾಲು ಯುದ್ಧಗಳೇ ಸಂಭವಿಸಿವೆ. ಎರಡನೇ ವಿಶ್ವ ಮಹಾಯುದ್ಧದಲ್ಲಿ ಜಪಾನ್ ಆಕ್ರಮಣಕಾರಿ ವರ್ತನೆ, 40ರ ದಶಕದಲ್ಲಿ ಬೊಲಿವಿಯಾ, ಪರಗ್ವೆ ನಡುವಿನ ಯುದ್ಧ, 90ರ ದಶಕದ ಇರಾಕ್ ಕುವೇತ್ ಯುದ್ಧ; ನಂತರ ಇರಾಕ್ ಮೇಲೆ ಅಮೆರಿಕದ…

Read More

Chanakya Niti: ಈ ಅಭ್ಯಾಸಗಳು ವ್ಯಕ್ತಿಯ ಗೌರವವನ್ನು ಸಂಪೂರ್ಣವಾಗಿ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that these qualities completely destroy a person’s respect

ಶ್ರೀಮಂತಿಕೆ ಮಾತ್ರವಲ್ಲ ಸಮಾಜದಲ್ಲಿ ಗೌರವವೂ (reputation) ಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಈ ಗೌರವವನ್ನು ಗಳಿಸುವಲ್ಲಿ ವ್ಯಕ್ತಿಯ ನಡವಳಿಕೆ ಮತ್ತು ಅಭ್ಯಾಸಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೌದು ಒಳ್ಳೆಯ ನಡವಳಿಕೆ, ಅಭ್ಯಾಸಗಳು ಸಮಾಜದಲ್ಲಿ ವ್ಯಕ್ತಿಯ ಗೌರವವನ್ನು ಹೆಚ್ಚಿಸುವಂತೆ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು, ಕೆಲವೊಂದು ದೈನಂದಿನ ಕೆಟ್ಟ ಅಭ್ಯಾಸಗಳು ಕುಟುಂಬ, ಸಮಾಜ ಮತ್ತು ಕೆಲಸದ ಸ್ಥಳದಲ್ಲಿ ವ್ಯಕ್ತಿಯ ಗೌರವನ್ನು ಹಾಳು ಮಾಡುತ್ತದೆ ಮತ್ತು ಆ ವ್ಯಕ್ತಿ ಅಪಹಾಸ್ಯಕ್ಕೆ ಗುರಿಯಾಗುತ್ತಾನೆ. ನಿಮಗೂ ಈ ಅಭ್ಯಾಸಗಳಿದ್ದರೆ ತಕ್ಷಣ ಅದನ್ನು ಬದಲಿಸಿ ಎಂದು…

Read More

ಥೈರಾಯ್ಡ್ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳನ್ನು ನಂಬಬೇಡಿ! ಹಾಗಿದ್ರೆ ಯಾವುದು ನಿಜ? ತಜ್ಞರಿಂದ ತಿಳಿದುಕೊಳ್ಳಿ – Kannada News | Don’t Fall For These Thyroid Myths: World Thyroid Day 2026 Awareness Guide

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ಸಾಮಾನ್ಯ ಆರೋಗ್ಯ ಸಮಸ್ಯೆಯಾಗುತ್ತಿದೆ. ಆದರೆ ಈ ಕಾಯಿಲೆಯ ಬಗ್ಗೆ ಜನರಲ್ಲಿ ಹಲವಾರು ತಪ್ಪು ಕಲ್ಪನೆಗಳು ಇನ್ನೂ ಹರಿದಾಡುತ್ತಿವೆ. ಕೆಲವರು ಥೈರಾಯ್ಡ್ ಬಂದರೆ ಜೀವಪೂರ್ತಿ ಔಷಧಿ ತಿನ್ನಲೇಬೇಕು ಎಂದು ಹೇಳುತ್ತಾರೆ ಮತ್ತೊಂದಿಷ್ಟು ಜನ ಇದು ಮಹಿಳೆಯರಿಗೆ ಮಾತ್ರ ಬರುವ ಕಾಯಿಲೆ ಎಂದು ಭಾವಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ಯಾವುದು ಸತ್ಯ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಅನಿವಾರ್ಯ. ಅದಕ್ಕಾಗಿಯೇ ಜನರಿಗೆ ಈ ಬಗ್ಗೆ ಸರಿಯಾಗಿ ಅರ್ಥಮಾಡಿಸಲು ಪ್ರತಿ ವರ್ಷ ಮೇ 25 ರಂದು…

Read More

ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ – Kannada News | Lokayukta Raids Kolar City Municipal Council Over Dual Birth Certificate registration

ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು…

Read More

ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಶಿವಮೊಗ್ಗ KSCA ಮೈದಾನದಲ್ಲಿ ಅಕ್ಷಯ್ ಅಂತಿಮ ದರ್ಶನ – Kannada News | Karnataka former ranji Cricket Player akshay dead Body Comes Shivamogga Who Dies due to heart attack In Bengaluru

ಶಿವಮೊಗ್ಗ, (ಮೇ 25): ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಭಾನುವಾರ ನಡೆದ ಕೆಎಸ್‌ಸಿಎ ಡಿವಿಷನ್ 3 ಕ್ರಿಕೆಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಬಳಿಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಮೂಲದ ಅಕ್ಷಯ್, ವಿನಯ್ ಕುಮಾರ್ ಅವರಂತಹ ದಿಗ್ಗಜರಿದ್ದ ಕಾಲದಲ್ಲೂ ಕರ್ನಾಟಕ ಪರ 6 ಪ್ರಥಮ ದರ್ಜೆ, 3 ಲಿಸ್ಟ್ ‘ಎ’ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದರು. ನಿವೃತ್ತಿಯ ನಂತರ ರಾಜ್ಯ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇಂದು…

Read More

SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ

ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ…

Read More

ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ – Kannada News | Dhurandhar actor Ranveer Singh banned by FWICE due to Don 3 dispute with Farhan Akhtar

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್‌ (Ranveer Singh) ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಸಿನಿಮಾ ನೌಕರರ ಒಕ್ಕೂಟವು (FWICE) ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಕಳೆದ ವಾರ ಈ ವಿಷಯದ ಕುರಿತು ಗಂಭೀರ…

Read More

ಇಲಿ ಕಡಿತವನ್ನು ಸಾಮಾನ್ಯ ಎಂದು ಪರಿಗಣಿಸಿ ಪ್ರಾಣಕ್ಕೇ ಅಪಾಯ ತಂದುಕೊಳ್ಳಬೇಡಿ, ತಪ್ಪದೇ ಈ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ – Kannada News | Bitten By A Rat? Follow These 3 Life Saving Tips From Experts Without Fail

ಇಲಿಗಳ ಹಾವಳಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇ ಸಾಮಾನ್ಯ, ಇದರ ಬಗ್ಗೆ ಯಾರೂ ಹೆಚ್ಚಾಗಿ ಗಮನಹರಿಸುವುದಿಲ್ಲ ಹಾಗೇ ಗಂಭೀರವಾಗಿಯೂ ಪರಿಗಣಿಸುವುದಿಲ್ಲ. ಮನೆಯಲ್ಲಿ ಇಲಿಗಳ ಓಡಾಟ ಎಷ್ಟು ಕಿರಿಕಿರಿ ಉಂಟುಮಾಡುತ್ತದೆಯೋ, ಅದು ಕಡಿದರೆ ಅಷ್ಟೇ ಅಪಾಯವನ್ನೂ ಉಂಟುಮಾಡುತ್ತದೆ. ಏಕೆಂದರೆ ಇಲಿ ಕಡಿತವನ್ನು (Rat Bite) ವಿಷವೆಂದು ಪರಿಗಣಿಸಲಾಗುತ್ತದೆ ಹಾಗೂ ತಕ್ಷಣದ ವೈದ್ಯಕೀಯ ನೆರವೂ ಅಗತ್ಯವಾಗಿರುತ್ತದೆ. ಇಲಿಯ ಕಡಿತ, ಪರಚುವಿಕೆ ಸಣ್ಣ ಸಂಗತಿಯಲ್ಲ, ಇದು ಜೀವಕ್ಕೆ ಅಪಾಯ ತಂದೊಡ್ಡಬಹುದು. ಜೊತೆಗೆ ಇಲಿಯ ವೀರ್ಯ, ಮಲ, ಮೂತ್ರಗಳಿಂದಲೂ ಸೋಂಕುಗಳು ಹರಡುತ್ತವೆ….

Read More

ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು ‘ಪಂಕ್ಚರ್ ಮಾಫಿಯಾ’ ಆಟ! ರಸ್ತೆ ತುಂಬಾ ಮೊಳೆಗಳನ್ನು ಚೆಲ್ಲಿ ಕೃತ್ಯ! – Kannada News | Shocking Bengaluru Puncture Scam: Police Station Front, Driver Safety Risk

ಬೆಂಗಳೂರು, ಮೇ,25: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಲೂಟಿ ಮಾಡುವ ಹಾಗೂ ವಾಹನ ಸವಾರರ ಜೀವಕ್ಕೆ ಕುತ್ತು ತರುವ ಕುಖ್ಯಾತ ‘ಪಂಕ್ಚರ್ ಮಾಫಿಯಾ’ (Puncture Mafia) ಮತ್ತೆ ಸಕ್ರಿಯವಾಗಿದೆ. ಈ ಬಾರಿ ಈ ಜಾಲದ ಧೈರ್ಯ ಎಷ್ಟು ಹೆಚ್ಚಾಗಿದೆಯೆಂದರೆ, ನೇರವಾಗಿ ಪೊಲೀಸ್ ಠಾಣೆಯೊಂದರ ಮುಂಭಾಗದ ರಸ್ತೆಯಲ್ಲೇ ನೂರಾರು ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಚೆಲ್ಲಿ ವಾಹನ ಸವಾರರಿಗೆ ಭೀಕರ ಬಲೆ ಬೀಸಲಾಗಿದೆ! ಈ ದಂಧೆಕೋರರ ಮೋಡಸ್ ಆಪರೇಟಿ (ಕಾರ್ಯವೈಖರಿ) ಅತ್ಯಂತ ಸರಳ ಆದರೆ ಅಷ್ಟೇ ಕ್ರೂರವಾಗಿದೆ. ಸಾರ್ವಜನಿಕರು ಹೆಚ್ಚಾಗಿ ಸಂಚರಿಸುವ…

Read More

Video: ಆಟೋ ಚಾಲಕಿಯನ್ನು ಶ್ಲಾಘಿಸಿದ ಬೆಂಗಳೂರಿನ ಅಮೆಜಾನ್ ಉದ್ಯೋಗಿ, ಕಾರಣ ಇದೇ ನೋಡಿ – Kannada News | Bengaluru: Amazon employee in Bengaluru shocked after hearing woman auto driver’s words

ಬೆಂಗಳೂರು, ಮೇ 25: ಮಹಿಳೆಯರು ಆಟೋ ಓಡಿಸುವುದು ದೂರದ ಮಾತು ಎನ್ನುವ ಕಾಲವಿತ್ತು. ಆದರೆ, ಇದೀಗ ಆಟೋವನ್ನೇ ಬದುಕಿಗೆ ಆಧಾರವಾಗಿಸಿಕೊಂಡ ಮಹಿಳೆಯರು ನಮ್ಮ ಸುತ್ತಮುತ್ತಲಿನಲ್ಲಿದ್ದಾರೆ. ಹೌದು, ಬೆಂಗಳೂರಿನ (Bengaluru) ಅಮೆಜಾನ್ ಉದ್ಯೋಗಿಯೊಬ್ಬರು ಆಟೋ ಓಡಿಸುವ ಮಹಿಳೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಇದೇ ವೇಳೆ ಆಟೋ ಚಾಲಕಿ ಈ ಕೆಲಸ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಕಾರಣ ರಿವೀಲ್ ಮಾಡಿದ್ದು ಇದನ್ನು ಕೇಳಿ ಅಮೆಜಾನ್ ಉದ್ಯೋಗಿ ಶಾಕ್ ಆಗಿದ್ದಾರೆ. ಈ ಕುರಿತಾದ ವಿಡಿಯೋ ಹಂಚಿಕೊಂಡಿದ್ದು ಗಟ್ಟಿಗಿತ್ತಿ ಮಹಿಳಾ ಆಟೋ ಚಾಲಕಿಯನ್ನು…

Read More