Category Archives: Blog

Your blog category

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ.

ಜಂಟಿ ಟ್ಯಾಕ್ಸೇಶನ್ ಸಿಸ್ಟಂ ಹೇಗಿರುತ್ತೆ?

ಗಂಡ ಮತ್ತು ಹೆಂಡತಿ ಇಬ್ಬರೂ ಪ್ರತ್ಯೇಕವಾಗಿ ಟ್ಯಾಕ್ಸ್ ಫೈಲ್ ಮಾಡುವ ಬದಲು ಜಂಟಿಯಾಗಿ ಐಟಿ ರಿಟರ್ನ್ಸ್ ಸಲ್ಲಿಸಲು ಅವಕಾಶ ಇರುತ್ತದೆ. ಜಂಟಿಯಾಗಿ ಸಲ್ಲಿಸಿದಾಗ ಹೆಚ್ಚಿನ ವಿನಾಯಿತಿಗಳು ಸಿಗುತ್ತವೆ. ಮೂಲ ಡಿಡಕ್ಷನ್ ಪ್ರಮಾಣ ಹೆಚ್ಚುತ್ತದೆ. ಸರ್ಚಾರ್ಜ್ ಮಿತಿ ಹೆಚ್ಚುತ್ತದೆ.

ಇದನ್ನೂ ಓದಿ: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

ಸದ್ಯ ಇರುವ ಪ್ರಸ್ತಾಪದ ಪ್ರಕಾರ, ಜಂಟಿ ಟ್ಯಾಕ್ಸೇಶನ್​ನಲ್ಲಿ ಗಂಡ ಮತ್ತು ಹೆಂಡತಿ ಇಬ್ಬರ ಒಟ್ಟು ಆದಾಯದಲ್ಲಿ 8 ಲಕ್ಷ ರೂ ಟ್ಯಾಕ್ಸ್ ಎಕ್ಸೆಂಪ್ಷನ್ ಅಥವಾ ತೆರಿಗೆ ವಿನಾಯಿತಿ ಕೊಡಲಾಗುತ್ತದೆ. ಶೇ. 30 ತೆರಿಗೆ ಅನ್ವಯ ಆಗುವ ಆದಾಯ ಮಿತಿಯನ್ನು 48 ಲಕ್ಷ ರೂಗೆ ಏರಿಸಲಾಗಬಹುದು.

ಅಂದರೆ, ಕಳೆದ ವರ್ಷದ ಸ್ಲ್ಯಾಬ್ ದರದ ಪ್ರಕಾರ 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ಟ್ಯಾಕ್ಸ್ ಅನ್ವಯ ಆಗುತ್ತದೆ. ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂನಲ್ಲಿ 48 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ಟ್ಯಾಕ್ಸ್ ಅನ್ವಯ ಆಗಬಹುದು.

ಹಾಗೆಯೇ, ಈಗಿರುವ ವ್ಯವಸ್ಥೆಯಲ್ಲಿ 50 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಸರ್ಚಾರ್ಜ್ ಅನ್ವಯ ಆಗುತ್ತದೆ. ಶೇ. 10ರಿಂದ 25ರವರೆಗೂ ಸರ್ಚಾರ್ಜ್ ಇದೆ. ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂನಲ್ಲಿ ಸರ್ಚಾರ್ಜ್ 75 ಲಕ್ಷ ರೂ ಆದಾಯದಿಂದ ಶುರುವಾಗುತ್ತದೆ.

ಇದನ್ನೂ ಓದಿ: ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ವರದಿ; ಏನಿದರ ಮಹತ್ವ?

ಸಿಂಗಲ್ ಇನ್ಕಮ್ ಇರುವ ಕುಟುಂಬಗಳಿಗೆ ಅನುಕೂಲ

ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂನಿಂದ ಅನುಕೂಲಗಳು ಬಹಳಷ್ಟಾಗಬಹುದು. ಗಂಡ ಮತ್ತು ಹೆಂಡತಿ ಇಬ್ಬರಿದ್ದು ಗಂಡ ಮಾತ್ರವೇ ಕೆಲಸಕ್ಕೆ ಹೋಗುತ್ತಿದ್ದು, ಹೆಂಡತಿ ಗೃಹಿಣಿಯಾಗಿದ್ದರೆ, ಹಾಗೂ ಗಂಡನ ಆದಾಯ ಬಹಳ ಹೆಚ್ಚಿದ್ದರೆ ಆಗ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅತಿಹೆಚ್ಚು ಅನುಕೂಲ ತರುತ್ತದೆ.

ಗಂಡ ಮತ್ತು ಹೆಂಡತಿ ಇಬ್ಬರೂ ದುಡಿಯುತ್ತಿದ್ದರೆ ಜಂಟಿಯಾಗಿಯೇ ಐಟಿಆರ್ ಸಲ್ಲಿಸಬೇಕೆಂದು ಕಡ್ಡಾಯ ಪಡಿಸಲಾಗುವುದಿಲ್ಲ. ಪ್ರತ್ಯೇಕವಾಗಿ ಸಲ್ಲಿಸಬಹುದು, ಅಥವಾ ಜಂಟಿಯಾಗಿಯೂ ಸಲ್ಲಿಸಬಹುದು. ಟ್ಯಾಕ್ಸ್ ಬಾಧ್ಯತೆ ಮತ್ತು ಅನುಕೂಲತೆಗಳನ್ನು ಎಣಿಸಿ ನಿರ್ಧಾರ ತೆಗೆದುಕೊಳ್ಳಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಖಾಸಗಿ ಯಾಚ್​​​ನಲ್ಲಿ ನಯನತಾರಾ-ತ್ರಿಶಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

Source link

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ! – Kannada News | Hidden Ancient Temple Discovered Inside House During Excavation in Lakkundi, Gadag

ಗದಗ, ಜನವರಿ 20: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಐದನೇ ದಿನವೂ ಮುಂದುವರಿದೆ. ಈ ಮಧ್ಯೆ, ಉತ್ಖನನದ ವೇಳೆ ಮನೆಯೊಂದರ ಆವರಣದೊಳಗೆ ಪುರಾತನ ದೇವಾಲಯ ಪತ್ತೆಯಾಗಿದೆ. ಈ ದೇವಾಲಯ ಕಲ್ಯಾಣ ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲಕ್ಕೆ ಸಂಬಂಧಿಸಿದ್ದು ಇರಬಹುದು ಎಂದು ಇತಿಹಾಸ ತಜ್ಞರು ಅಂದಾಜಿಸಿದ್ದಾರೆ. ಈ ದೇಗುಲ ಹೊರಗಿನಿಂದ ಸಾಮಾನ್ಯ ಮನೆಯಂತೆ ಕಂಡರೂ, ಒಳಗೆ ವಿಶಿಷ್ಟ ಶಿಲ್ಪಕಲೆಗಳನ್ನು ಒಳಗೊಂಡಿದೆ. ದೇಗುಲದಲ್ಲಿ ಈಶ್ವರ ಮತ್ತು ಅರ್ಧನಾರೀಶ್ವರ ವಿಗ್ರಹಗಳಿವೆ. ಸುಮಾರು ನಾಲ್ಕು ತಲೆಮಾರುಗಳಿಂದ ಈ ಮನೆಯಲ್ಲಿ ವಾಸಿಸುತ್ತಿರುವ ಕುಟುಂಬವು ಈ ದೇವಾಲಯಗಳನ್ನು ಪೂಜಿಸಿಕೊಂಡು ಬಂದಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತವು ಈ ಹುದುಗಿದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಯೋಜನೆ ರೂಪಿಸಿವೆ. ಸೂಕ್ತ ಪರಿಹಾರ ನೀಡಿದ್ದಲ್ಲಿ ದೇವಾಲಯಗಳನ್ನು ಸರ್ಕಾರದ ವಶಕ್ಕೆ ನೀಡಲು ಸಿದ್ಧರಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೂಡ್ಸ್​​ ವಾಹನದಲ್ಲಿ ಗಾಂಜಾ ಸಾಗಾಟ: ಫಿಲ್ಮಿ ಸ್ಟೈಲ್​​ನಲ್ಲಿ ಖಾಕಿ ರೇಡ್​ ; ಇಬ್ಬರು ಅರೆಸ್ಟ್​​ – Kannada News | Mangaluru Drug Bust: Film Style Operation Seizes 106 kg of Ganja; Two Peddlers Arrested

ಮಂಗಳೂರು, ಜನವರಿ 20: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಡ್ರಗ್ಸ್​​ ದಂಧೆಕೋರರ ಹುಟ್ಟಡಗಿಸುತ್ತಿದ್ದು, ಒಂದೊಂದೇ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಮಂಗಳೂರು ಸಿಸಿಬಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು. ಆ ಬೆನ್ನಲ್ಲೇ ಇದೀಗ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸೀಜ್​​ ಮಾಡಿದೆ.

ಸುಮಾರು 106 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು ಇದರ ಮೌಲ್ಯ ಸುಮಾರು 53 ಲಕ್ಷ ರೂಪಾಯಿಗಳು ಎನ್ನಲಾಗಿದೆ. ಪ್ರಕರಣ ಸಂಬಂಧ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ನಿವಾಸಿಗಳಾದ ಅಬ್ದುಲ್ ಸಾದಿಕ್ (37) ಮತ್ತು ರಫೀಕ್ ಪಿ. (37) ಎಂಬವರನ್ನು ಬಂಧಿಸಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ; ಪ್ರಾಣಿ ದಾಳಿಯೋ? ಕೊಲೆಯೋ?

ನಿನ್ನೆಯೂ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ವಿದ್ಯಾರ್ಥಿಗಳಿಗೆ ಡ್ರಗ್ಸ್​ ಮಾರುತ್ತಿದ್ದ ಕೇರಳ ಮೂಲದ ಯುವಕ ಜೂಡ್ ಮಾಥ್ಯೂ(20) ಎಂಬಾತನನ್ನು ಬಂಧಿಸಿದ್ದರು. ಕೇರಳದ ಎರ್ನಾಕುಲಂ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ ಬೈಕ್​ನಲ್ಲಿ ಎಂಡಿಎಂಎ ಸಾಗಿಸುತ್ತಿದ್ದಾಗ ಪದವು ಗ್ರಾಮದ ಕೈಲಾಸ ಕಾಲೋನಿ ಬಳಿ ದಾಳಿ ಮಾಡಿದ್ದ ಕದ್ರಿ ಪೊಲೀಸರು ಬೈಕ್​​ ಮತ್ತು ಮಾದಕ ವಸ್ತುವನ್ನು ಜಪ್ತಿ ಮಾಡಿದ್ದರು. ಸೀಜ್​​ ಮಾಡಲಾದ ವಸ್ತುಗಳ ಮೌಲ್ಯ 70 ಸಾವಿರ ಎನ್ನಲಾಗಿದ್ದು, ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲೆಯ ಆರು​ ಪೆಡ್ಲರ್​ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಬಂಧಿಸಿದ್ದರು. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್​​ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದರು. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ನಡೆದಿದ್ದ ಈ ಕಾರ್ಯಾಚರಣೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಳಗಾವಿ: ಅಪ್ರಾಪ್ತ ಬಾಲಕಿಯ ಕಾಮಿಸಿ ಕಾಟಕೊಡುತ್ತಿದ್ದ ಪೂಜಾರಿ, ಸಂತ್ರಸ್ತೆಯ ತಮ್ಮನಿಂದಲೇ ಭೀಕರ ಕೊಲೆ – Kannada News | Belagavi Horror: Priest Harassing Minor Girl Brutally Killed by Victim’s Brother

ಬೆಳಗಾವಿ, ಜನವರಿ 20: ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಪೂಜಾರಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆತ ಬಾಲಕಿಯೊಬ್ಬಳನ್ನು ಕಾಮಿಸಿ ನಿರಂತರವಾಗಿ ಕಾಡುತ್ತಿದ್ದ. ಇದರಿಂದ ಬಾಲಕಿಯ ಅಪ್ರಾಪ್ತ ವಯಸ್ಸಿನ ತಮ್ಮ ರೊಚ್ಚಿಗೆದ್ದು, ಆತನನ್ನು ಹಾರೆಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ರಾಜಾಪುರ ಗ್ರಾಮದ ನಿವಾಸಿ ಮಂಜುನಾಥ ಸುಭಾಷ್ ಎಣ್ಣಿ (23) ಎಂದು ಗುರುತಿಸಲಾಗಿದೆ. ಮಂಜುನಾಥ ಕಳೆದ ಹಲವು ವರ್ಷಗಳಿಂದ ಅಪ್ರಾಪ್ತ ಯುವತಿಯನ್ನು ಹಿಂಬಾಲಿಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಯುವತಿಯ 17 ವರ್ಷದ ತಮ್ಮ ಹಲವು ಬಾರಿ ‘ಅಕ್ಕನ ಉಸಾಬರಿಗೆ ಬರಬೇಡ’ ಎಂದು ಎಚ್ಚರಿಕೆ ನೀಡಿದ್ದ. ಆದರೆ ಎಚ್ಚರಿಕೆಯನ್ನೂ ಲೆಕ್ಕಿಸದೆ ಮಂಜುನಾಥ ಯುವತಿಯನ್ನು ಕಾಡುತ್ತಿದ್ದ ಎನ್ನಲಾಗಿದೆ.

ಮಂಜುನಾಥ ಎಣ್ಣಿ ರಾಜಾಪುರ ಗ್ರಾಮದ ಚೂನಮ್ಮ ದೇವಿಯ ದೇವಸ್ಥಾನದ ಪೂಜಾರಿಯಾಗಿದ್ದ. ಬುಧವಾರ ಬೆಳಿಗ್ಗೆ ದೇವಾಲಯಕ್ಕೆ ಪೂಜೆ ಮಾಡಲು ಬಂದಿದ್ದ ವೇಳೆ, ದೇವಸ್ಥಾನದಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಅಪ್ರಾಪ್ತ ಬಾಲಕ, ಹಾರೆಯಿಂದ ಮಂಜುನಾಥನ ಮೇಲೆ ದಾಳಿ ನಡೆಸಿದ್ದಾನೆ. ಬೆನ್ನಿಗೆ ಬಲವಾಗಿ ಹಾರೆಯಿಂದ ಹೊಡೆದ ಪರಿಣಾಮ ಮಂಜುನಾಥ ಗಂಭೀರವಾಗಿ ಗಾಯಗೊಂಡು, ತೀವ್ರ ರಕ್ತಸ್ರಾವದಿಂದ ದೇವಸ್ಥಾನ ಆವರಣದಲ್ಲೇ ಪ್ರಾಣಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಳಗಾವಿ: ಸರ್ಕಾರಿ ಆಸ್ಪತ್ರೆ ವೈದ್ಯನ ಮನೆಯಲ್ಲೇ ಇತ್ತು ಗಾಂಜಾ ಸ್ಟಾಕ್!

ಘಟನೆಗೆ ಸಂಬಂಧಿಸಿ ಘಟಪ್ರಭಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ದೊರೆತ ಮಾಹಿತಿ ಆಧರಿಸಿ ಆರೋಪಿಯಾಗಿರುವ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಗ್ರಾಮದಲ್ಲಿ ಆತಂಕ ಮತ್ತು ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಮಹಿಳೆಯರಿಗೆ ಸೇಫ್​ ಅಲ್ಲ: ಜಾಗಿಂಗ್ ಹೋಗುತ್ತಿದ್ದ ಮಹಿಳೆಯ ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ ಬಾಲಕರು – Kannada News | Rising Harassment in Bengaluru: Aavalahalli Incident and Women’s Safety Concerns

ಬೆಂಗಳೂರು, ಜ.20: ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ (Bangalore women safety) ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದಲ್ಲೇ ಬೆಂಗಳೂರು ಸೇಫ್​​ ಅಲ್ಲ ಎಂಬ ಅಭಿಪ್ರಾಯಕ್ಕೆ ಹೆಚ್ಚಿನ ಮಹಿಳೆಯರು ಬಂದಿದ್ದಾರೆ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಳಿಯ ಆವಲಹಳ್ಳಿ ಅರಣ್ಯದಲ್ಲಿ ಓಡುತ್ತಿದ್ದಾಗ ಮಕ್ಕಳ ಗುಂಪೊಂದು ಅವರಿಗೆ ಕಿರುಕುಳ ನೀಡಿದ್ದಾರೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಖಾಸಗಿ ಭಾಗದ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಅವರ ಮಾತುಗಳನ್ನು ಕೇಳಲು ಸಾಧ್ಯವಾಗದಷ್ಟು ಕೆಟ್ಟಾಗಿತ್ತು. ಹುಡುಗರಿಗೆ ಏನ್​​ ಕಲಿಸಬೇಕು ಎನ್ನುವುದಕ್ಕಿಂತ, ಹುಡುಗಿಯರು ತಮ್ಮನ್ನು ಮುಚ್ಚಿಕೊಳ್ಳುವುದನ್ನು ಕಲಿಸಬೇಕಾಗಿದೆ ಎಂದು ಇನ್ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ.

“ಜಾಗಿಂಗ್ ಮುಗಿಸಿ ಮನೆಯ ಕಡೆಗೆ ಹೋಗುವ ವೇಳೆ, 13 ವರ್ಷಕ್ಕಿಂತ ಕಿರಿಯರಾಗಿರುವ ಈ ಬಾಲಕರು, ನನ್ನ ದೇಹದ ಬಗ್ಗೆ ಕಮೆಂಟ್​ ಮಾಡಿದ್ದಾರೆ. ಆರಂಭದಲ್ಲಿ ಅದಕ್ಕೆ ನಾನು ಗಮನ ನೀಡಲಿಲ್ಲ. ನಂತರದಲ್ಲಿ ಅವರ ಮಾತುಗಳು ಅತಿಯಾಗಿತ್ತು. ಈ ಬಗ್ಗೆ ನಾನು ಅವರನ್ನು ಪ್ರಶ್ನೆ ಮಾಡಿದೆ. ನಿಮ್ಮ ಮನೆಯಲ್ಲಿ ಇದನ್ನೇ ಕಲಿಸುವುದ ಎಂದು ಗದರಿದೆ” ಎಂದು ಪೋಸ್ಟ್​​​ನಲ್ಲಿ ಮಹಿಳೆ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ನೆಟ್ಟಿಗರು ಮಕ್ಕಳಿಗೆ ಹೆತ್ತವರು ಸರಿಯಾದ ವಿಚಾರಗಳನ್ನು ಕಲಿಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

ಮೇಡಂ ನೀವು ಆ ಮಕ್ಕಳ ಬಗ್ಗೆ ವಿಡಿಯೋ ಮಾಡಿ ಹಾಕಬೇಕಿತ್ತು. ಆಗಾ ಅವರಿಗೆ ಬುದ್ಧಿ ಬರುತ್ತಿತ್ತು ಎಂದು ಒಬ್ಬರು ಹೇಳಿದ್ದಾರೆ. ಈ ಕಮೆಂಟ್​​ಗೆ ಆ ಮಹಿಳೆ ಕೂಡ ಉತ್ತರಿಸಿದ್ದಾರೆ. ನನಗೂ ಆಸೆ ಇತ್ತು. ಆದರೆ ಆ ಮಕ್ಕಳು ಇನ್ನು ಬೆಳೆಯಬೇಕಿದೆ. ಅವರ ಮುಖ ನೋಡುವಾಗ ಅವರ ಭವಿಷ್ಯ ನನ್ನ ಕಣ್ಮುಂದೆ ಬಂತು ಎಂದು ಹೇಳಿದರು. ನಾನೂ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಇದೊಂದು ಸಮಾಜದ ಪಿಡುಗು ಆಗಿದೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ನೀವು ಹೇಳಿರುವ ಮಾತು ನಿಜ, ಹುಡುಗರು ಹಾಗೂ ಹುಡುಗಿಯರು ಕಲಿಬೇಕಾಗಿರುವುದು ಇನ್ನೂ ಇದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ. ಹೆಣ್ಮಕ್ಕಳು ಇಂದಿಗೂ ಇಂತಹ ಪರಿಸ್ಥಿತಿ ಅನುಭವಿಸಬೇಕಲ್ಲ ಎಂಬ ನೋವು ನಮಗಿದೆ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡ

Source link

ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ! ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – Kannada News | Mysore Udayagiri Shock: Youth Stabbed to Death Amid Rising Violence

ಮೈಸೂರು, ಜನವರಿ 20: ಉದಯಗಿರಿಯಲ್ಲಿ ಕಳೆದ ವರ್ಷ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಅಷ್ಟೇ ಅಲ್ಲದೆ ಎರಡು ದಿನಗಳ ಹಿಂದೆ ಯುವಕರು ಮಚ್ಚು, ಲಾಂಗು ಹಿಡಿದು ಓಡಾಡಿದ ವೀಡಿಯೋ ಸಹ ಭಾರಿ ಸುದ್ದಿ ಮಾಡಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮೊದಲೇ ಮತ್ತೊಂದು ಭೀಕರ ಘಟನೆ ಉದಯಗಿರಿಯಲ್ಲಿ (Udayagiri) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನೊಬ್ಬನ ಕೊಲೆಯಾಗಿದ್ದು, ಮತ್ತೊಮ್ಮೆ ಮೈಸೂರಿನಲ್ಲಿ ಹಲ್ ಚಲ್ ಎಬ್ಬಿಸಿದೆ.

ಇತ್ತೀಚೆಗಷ್ಟೇ ಮಚ್ಚು ಹಿಡಿದು ಓಡಾಡಿದ್ದ ಯುವಕರು

ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ ಘಟನೆ ಭಾನುವಾರ ನಡೆದಿತ್ತು. ಇದರ ದೃಶ್ಯಾವಳಿಗಳು ಎಲ್ಲೆಡೆ ಹರಿದಾಡಿ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿತ್ತು. ಈ ಭೀಕರತೆಯ ಸದ್ದು ಅಡಗುವ ಮುನ್ನವೇ ಇದೇ ಉದಯಗಿರಿಯಲ್ಲಿ ಯುವನೋರ್ವನನ್ನು ಚಾಕು ಇರಿದು ಹತ್ಯೆಮಾಡಲಾಗಿದೆ.

ಫೈನಾನ್ಸ್ ವಿಷಯಕ್ಕೆ ನಡೆದ ಕೊಲೆ

ಗೌಸಿಯಾ ನಗರ ನಿವಾಸಿ ಶಹಬಾಜ್ (26) ಮೃತ ದುರ್ದೈವಿ. ನಗರದ ಬೀಡಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಜುಬೇರ್ ಎಂಬಾತನೇ ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ನಡೆಸಿದ ಆರೋಪ ಕೇಳಿಬಂದಿದೆ. ಪ್ರಾಥಮಿಕವಾಗಿ ಸಿಕ್ಕ ಮಾಹಿತಿಯ ಪ್ರಕಾರ ಸಣ್ಣಪುಟ್ಟ ವಿಷಯಕ್ಕೆ ಯುವಕರ ನಡುವೆ ನಡೆದ ಗಲಾಟೆ ಕೊಲೆಯಾಗಿ ಪರಿಣಮಿಸಿದೆ.

ಕೊಲೆಯಾದ ಯುವಕ ಶಹಬಾಜ್ ವೆಲ್ಡಿಂಗ್ ಶಾಪ್ ಹೊಂದಿದ್ದು, ಫೈನಾನ್ಸ್ ವಿಷಯಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ತಿಳಿದುಬಂದಿದೆ. ಏರಿಯಾದಲ್ಲಿ ನಡೆಯುತ್ತಿದ್ದ ಫೈನಾನ್ಸ್ ಹಾವಳಿಗೆ ಒಳಗಾಗಿದ್ದವರಿಂದ ಪೊಲೀಸ್ ಠಾಣೆಗೆ ಶಹಬಾಸ್ ಕಂಪ್ಲೇಂಟ್ ಕೊಡಿಸಿದ್ದ. ಈ ಕಾರಣಕ್ಕಾಗಿಯೇ ನಾಲ್ಕು ತಿಂಗಳ ಹಿಂದೆ ಆರೋಪಿ ತನ್ನ ಸ್ನೇಹಿತರೊಂದಿಗೆ ಶಹಬಾಜ್ ಅಂಗಡಿ ಮುಂದೆ ಬಂದು ಗಲಾಟೆ ಮಾಡಿದ್ದ. ಇದೀಗ ಮತ್ತೊಮ್ಮೆ ನಿನ್ನೆ (ಜನವರಿ 19) ರಾತ್ರಿ 1 ಗಂಟೆ ವೇಳೆ ಅಂಗಡಿ ಮುಚ್ಚಿ ಕುಳಿತಿದ್ದ ಶಹಬಾಜ್ ಮೇಲೆ ಏಕಾಏಕಿ ದಾಳಿ ನಡೆದಿದ್ದು, ಆರೋಪಿಗಳು ತಲೆ, ಎದೆ, ಕತ್ತು, ಹೊಟ್ಟೆಗೆ ಚುಚ್ಚಿ ಹಲ್ಲೆ ನಡೆಸಿದ್ದಾರೆ.

ಇದನ್ನೋ ಓದಿ ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ

ಸ್ಥಳೀಯರು ತಕ್ಷಣ ಶಹಬಾಜ್ ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ. ಕೆ.ಆರ್.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೊಲೆ ನಂತರ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಈ ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್ – Kannada News | Rajasthan Acid Attack: Photographer Targets Teen Girl for Refusing Conversation

ಜೈಪುರ, ಜನವರಿ 20: ಅಪರಿಚಿತರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಫೋಟೊಗ್ರಾಫರ್ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್(Acid) ಎರಡಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹುಡುಕಾಟದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪೊಲೀಸ್ ತನಿಖೆಯ ಸಮಯದಲ್ಲಿ, ಆರೋಪಿ, ಚಂದ್ರರಾಮ್ ಮೇಘವಾಲ್ ಅವರ ಪುತ್ರ 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ, ತಾನು ಫೋಟೊಗ್ರಾಫರ್ ಆಗಿ ಹೋಗಿದ್ದ ಮದುವೆಯಲ್ಲಿ ಆಕೆಯನ್ನು ನೋಡಿದ್ದಾಗಿ ಹೇಳಿದ್ದಾನೆ. ಸ್ವಲ್ಪ ದಿನಗಳ ನಂತರ ಓಂಪ್ರಕಾಶ್ ಹುಡುಗಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಆಕೆ ಕೋಪಗೊಂಡು ಗದರಿದ್ದಾಳೆ, ಅದು ಅವನಿಗೆ ನೋವುಂಟು ಮಾಡಿತ್ತು, ನಂತರ ಅವನು ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ.

ಶ್ರೀ ಗಂಗಾನಗರ ಜಿಲ್ಲೆಯ ಸುಭಾಷ್ ಪಾರ್ಕ್ ಪ್ರದೇಶದಲ್ಲಿ ತನ್ನ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಓಂಪ್ರಕಾಶ್ ಕಾರು ಚಲಾಯಿಸಿಕೊಂಡು ಹೋಗಿ ಆಕೆಯ ಮೇಲೆ ಆ್ಯಸಿಡ್ ಬಾಟಲಿ ಎಸೆದಿದ್ದಾನೆ. ಬಾಲಕಿಯ ಬಟ್ಟೆ ಮತ್ತು ಬೆರಳಿಗೆ ಸುಟ್ಟ ಗಾಯಗಳಾಗಿದ್ದರೂ, ದೊಡ್ಡ ದುರಂತವೊಂದು ತಪ್ಪಿದೆ.

ಆರೋಪಿಯು ಆ್ಯಸಿಡ್ ದಾಳಿಗೆ ಯೋಜನೆ ರೂಪಿಸಿದ್ದಲ್ಲದೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹ ಸಿದ್ಧತೆ ನಡೆಸಿದ್ದ. ಮುಖವನ್ನು ಬಟ್ಟೆ ಮತ್ತು ಹೆಲ್ಮೆಟ್‌ನಿಂದ ಮುಚ್ಚಿಕೊಂಡು, ಬೈಕ್‌ನ ನಂಬರ್ ಪ್ಲೇಟ್ ಅನ್ನು ಮತ್ತೊಂದು ಬಟ್ಟೆಯಿಂದ ಸುತ್ತಿಕೊಂಡಿದ್ದ.

ಮತ್ತಷ್ಟು ಓದಿ: ನಿಮ್ಮ ಕಣ್ಣೆದುರೇ ಆ್ಯಸಿಡ್ ದಾಳಿ ನಡೆದರೆ, ತಕ್ಷಣಕ್ಕೆ ನೀವು ಮಾಡಬೇಕಾಗಿರುವುದು ಏನು? ಇಲ್ಲಿದೆ ಮಾಹಿತಿ

ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಆದರೆ ಆರೋಪಿ ಮುಖ ಮತ್ತು ವಾಹನದ ನಂಬರ್ ಪ್ಲೇಟ್ ಅನ್ನು ಮುಚ್ಚಿಕೊಂಡಿದ್ದರಿಂದ, ಆ ವ್ಯಕ್ತಿಯನ್ನು ಗುರುತಿಸುವುದು ಪೊಲೀಸರಿಗೆ ಕಷ್ಟಕರವಾಗಿತ್ತು. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಬಹುಮಾನ ನೀಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮೃತಾ ದುಹಾನ್ ಘೋಷಿಸಿದ್ದರು.

ಸೋಮವಾರ ಬಂಧನದ ನಂತರ, ಸಾರ್ವಜನಿಕರಲ್ಲಿ ಕಾನೂನಿನ ಭಯವನ್ನು ಹುಟ್ಟುಹಾಕಲು ಮತ್ತು ಇದೇ ರೀತಿಯ ಘಟನೆಗಳನ್ನು ತಡೆಯಲು ಪೊಲೀಸರು ಆರೋಪಿಗಳನ್ನು ಮಾರುಕಟ್ಟೆಯಲ್ಲಿ ಮೆರವಣಿಗೆ ಮಾಡಿದರು. ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಕೆಜಿಎಫ್’ ಸಿನಿಮಾದಿಂದ ದೊಡ್ಡ ಪಾಠ ಕಲಿತ ಪ್ರಭಾಸ್: ಏನದು? – Kannada News | Prabhas how KGF changed his perception about movie watching

ಕೆಜಿಎಫ್’ (KGF) ಸಿನಿಮಾ ಸರಣಿ ಕರ್ನಾಟಕದ ಮಟ್ಟಿಗೆ ಮಾತ್ರವಲ್ಲ ಭಾರತೀಯ ಚಿತ್ರರಂಗದ ಪಾಲಿಗೆ ಮಹತ್ವದ ಕಮರ್ಶಿಯಲ್ ಸಿನಿಮಾ. ಕಮರ್ಶಿಯಲ್ ಸಿನಿಮಾ ನಿರ್ದೇಶಕರುಗಳಿಗೆ ಒಂದು ಮಾದರಿಯನ್ನು ಹಾಕಿಕೊಟ್ಟ ಸಿನಿಮಾ ಅದು. ‘ಕೆಜಿಎಫ್’ನ ಸೂತ್ರಗಳನ್ನೇ ಇರಿಸಿಕೊಂಡು ಆ ನಂತರ ಹಲವು ಸಿನಿಮಾಗಳು ಬಂದವು. ಸೂಪರ್ ಸ್ಟಾರ್ ನಟರುಗಳು ಸಹ ‘ಕೆಜಿಎಫ್’ ಮೂಲಕ ಸಾಕಷ್ಟು ಕಲಿತಿದ್ದಾರೆ. ಖುದ್ದು ಪ್ರಭಾಸ್ ಈ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ‘ಕೆಜಿಎಫ್’ ಮೂಲಕ ತಾವು ಕಲಿತ ಪಾಠವೇನು ಅದರಿಂದಾದ ಲಾಭವೇನು ಎಂದು ಅವರು ಹಂಚಿಕೊಂಡಿದ್ದಾರೆ.

ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಪ್ರಭಾಸ್, ‘ಕೆಜಿಎಫ್’ ಬಿಡುಗಡೆ ಆದಾಗ ನಾನು ನೋಡಿರಲಿಲ್ಲ. ಬಳಿಕ ನಾನು ನನ್ನ ಕೆಲವು ಆಪ್ತ ಗೆಳೆಯರು, ನನ್ನ ಸಹೋದರರು, ಸಂಬಂಧಿಗಳು ಎಲ್ಲ ಒಟ್ಟು 40 ಮಂದಿಯನ್ನು ಸೇರಿಸಿಕೊಂಡು ಸಿನಿಮಾ ನೋಡುವ ಪ್ಲಾನ್ ಮಾಡಿದೆವು, ಬಲೂನ್​​ಗಳು, ವಿಷಲ್​​ಗಳು ಎಲ್ಲವನ್ನೂ ಖರೀದಿಸಿ, ಪ್ರಸಾದ್ ಲ್ಯಾಬ್​​ನಲ್ಲಿ ಶೋ ಹಾಕಿಕೊಂಡು ಒಟ್ಟಿಗೆ ಸಿನಿಮಾ ನೋಡಿದೆವು’ ಎಂದು ಪ್ರಭಾಸ್ ವಿವರಿಸಿದ್ದಾರೆ.

‘ನನ್ನ ಜೊತೆಗೆ ಅಂದು ಸಿನಿಮಾ ನೋಡಿದವರ್ಯಾರು ಚಿತ್ರರಂಗಕ್ಕೆ ಸಂಬಂಧಿಸಿದವರಲ್ಲ, ಅವರು ಸಾಮಾನ್ಯ ಪ್ರೇಕ್ಷಕರಕ್ಕೆ. ಅಂದು ಅವರೊಟ್ಟಿಗೆ ‘ಕೆಜಿಎಫ್’ ನೋಡುವಾಗ ನನಗೆ ನಿಜವಾದ ಚಿತ್ರಮಂದಿರದ ಅನುಭವ ಆಯ್ತು, ಅವರು ಯಾವುದಕ್ಕೆ ವಿಷಲ್ ಹಾಕಿದರು, ಯಾವ ಸೀನ್​​ಗೆ ನಕ್ಕರು, ಯಾವ ಸೀನ್​​ ಅವರನ್ನು ಭಾವುಕರನ್ನಾಗಿಸಿತು ಎಂಬುದು ನನಗೆ ಸ್ಪಷ್ಟವಾಗಿ ಅರ್ಥವಾಯ್ತು’ ಎಂದಿದ್ದಾರೆ ಪ್ರಭಾಸ್.

ಇದನ್ನೂ ಓದಿ:ನಡುರಾತ್ರಿ ರೌಡಿ ಶೀಟರ್​​ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್​​ ವಾರ್ನಿಂಗ್​​ ಕೊಟ್ಟ ಶಿವಾಂಶು ರಜಪೂತ್

ಅದಾದ ಬಳಿಕ ನಾನು ಅದನ್ನು ಒಂದು ಸಂಪ್ರದಾಯದಂತೆ ಪಾಲಿಸುತ್ತಿದ್ದೇನೆ. ನನ್ನ ಸಿನಿಮಾಗಳನ್ನು ಸಹ ನಾನು ಬಿಡುಗಡೆ ಆಗುವ ಮುಂಚೆಯೇ ಅವರುಗಳೊಟ್ಟಿಗೆ ಚಿತ್ರಮಂದಿರದಲ್ಲಿ ನೋಡುತ್ತೇನೆ. ಆಗ ನನಗೆ ಸಿನಿಮಾ ಹೇಗಿದೆ, ಯಾವ ಸೀನ್ ಜನರನ್ನು ತಲುಪಲಿದೆ ಯಾವ ಸೀನ್ ವೀಕ್ ಆಗಿದೆ ಎಂಬುದು ಅರ್ಥವಾಗುತ್ತದೆ ಎಂದು ಪ್ರಭಾಸ್ ಹೇಳಿದ್ದಾರೆ.

‘ಸಲಾರ್’ ಸಿನಿಮಾದ ಉದಾಹರಣೆ ನೀಡಿದ ಪ್ರಭಾಸ್, ‘ಸಲಾರ್​​ನಲ್ಲಿ ನಾನು ಪೃಥ್ವಿರಾಜ್ ಅವರ ಪಾತ್ರಕ್ಕೆ ಸಾರಿ ಕೇಳುವ ದೃಶ್ಯವಿದೆ. ಆ ದೃಶ್ಯ ಶೂಟ್ ಮಾಡುವಾಗ ಈ ದೃಶ್ಯಕ್ಕೆ ಜನ ನಗುತ್ತಾರೆ ಎಂದು ನೀಲ್ ಹೇಳಿದ್ದರು. ನಾನು ಗೆಳೆಯರೊಟ್ಟಿಗೆ ಸಿನಿಮಾ ನೋಡುವಾಗ ಅವರು ಅದೇ ಸೀನ್​​ಗೆ ನಕ್ಕರು. ನೀಲ್ ಬಿಡಿ, ಅವರು ದೊಡ್ಡ ನಿರ್ದೇಶಕ, ಅವರಿಗೆ ಪ್ರೇಕ್ಷಕರ ಪಲ್ಸ್ ಚೆನ್ನಾಗಿ ಅರ್ಥ ಆಗುತ್ತದೆ’ ಎಂದಿದ್ದಾರೆ ಪ್ರಭಾಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link