Headlines

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ – Kannada News | Karnataka Power Tussle: Congress High command calls Siddaramaiah, here Is Here Is Inside Details

ಬೆಂಗಳೂರು, (ಮೇ 25): ಕರ್ನಾಟಕ ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್​ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ. ಸದ್ಯ…

Read More

ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬಿಟ್ಟು ಎತ್ತುಗಳಿಂದ ಉಳುಮೆ – Kannada News | Fuel price hike forces farmers to return to bullock plowing as tractor costs rise

ಎತ್ತುಗಳಿಂದ ಉಳುಮೆ ಮಾಡುತ್ತಿರುವುದು Image Credit source: tv9 kannada ಬೀದರ್​​, ಮೇ 25: ರಾಜ್ಯದಲ್ಲಿ ತೈಲ ಬೆಲೆ ಏರಿಕೆಯ ಬಿಸಿ (Fuel Price Hike) ಇದೀಗ ನೇರವಾಗಿ ದೇಶದ ಅಣ್ಣದಾತನಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಕೃಷಿ ಚಟುವಟಿಕೆಗಳ ವೆಚ್ಚ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ. ಟ್ರ್ಯಾಕ್ಟರ್ ಬಾಡಿಗೆ ದರ ದುಬಾರಿಯಾದ ಹಿನ್ನೆಲೆಯಲ್ಲಿ, ಬೀದರ್ (bidar) ಜಿಲ್ಲೆಯ ರೈತರು ಮತ್ತೆ ಹಳೆಯ ಸಾಂಪ್ರದಾಯಿಕ ಕೃಷಿ ಪದ್ಧತಿಯತ್ತ ಮುಖ ಮಾಡಿದ್ದಾರೆ. ಟ್ರ್ಯಾಕ್ಟರ್ ಬದಲಿಗೆ ಎತ್ತುಗಳನ್ನು ಖರೀದಿಸಿ…

Read More

Video: ಭಾರತದಲ್ಲಿ ವಿದೇಶಿಗನ ಏಕಾಂಗಿ ಪ್ರಯಾಣ; ಟ್ರಿಪ್‌ ಅನುಭವ ಹಂಚಿಕೊಂಡ ಆಫ್ರಿಕನ್ ವ್ಯಕ್ತಿ – Kannada News | India feels like a fantasy world: Why is an African person like this?

ವಿದೇಶಿ ಪ್ರಜೆಗಳು (foreigner) ಭಾರತಕ್ಕೆ ಆಗಾಗ ಭೇಟಿ ಕೊಡ್ತಾರೆ. ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇತಿಹಾಸಗಳನ್ನು ಕೆದಕುತ್ತಾರೆ. 21 ವರ್ಷದ ಆಫ್ರಿಕನ್ ವ್ಯಕ್ತಿಯೊಬ್ಬರು (African) ಏಕಾಂಗಿಯಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಏಕಾಂಗಿ ಪ್ರವಾಸದ ವೇಳೆ ಈ ದೇಶದ ಆಧ್ಯಾತ್ಮಿಕತೆ, ಅವ್ಯವಸ್ಥೆ ಮತ್ತು ಇತಿಹಾಸವು ತಾನು ಜಗತ್ತನ್ನು ನೋಡುವ ವಿಧಾನವನ್ನು ಆಳವಾಗಿ ಬದಲಾಯಿಸಿತು ಎಂದು ಹೇಳಿಕೊಂಡಿದ್ದಾರೆ. ತಾನು ಕಲಿತ ಐದು ಪಾಠಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ. @hunchsquare ಬಳಕೆದಾರ ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ…

Read More

ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ ನೋಡಿ.. – Kannada News | Ram Charan Peddi movie press meet in Bengaluru with Shivarajkumar Janhvi Kapoor watch live video

ಖ್ಯಾತ ನಟ ರಾಮ್ ಚರಣ್ (Ram Charan) ಅವರು ಬೆಂಗಳೂರಿಗೆ ಬಂದಿದ್ದಾರೆ. ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಭಾಗಿ ಆಗಿದ್ದಾರೆ. ಅವರ ಜೊತೆ ನಾಯಕಿ ಜಾನ್ವಿ ಕಪೂರ್, ನಟ ಶಿವರಾಜ್​ಕುಮಾರ್ (Shivarajkumar) ಸೇರಿದಂತೆ ಚಿತ್ರತಂಡದ ಹಲವರು ಪಾಲ್ಗೊಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡಕ್ಕೂ ಡಬ್ ಆಗಿ ತೆರೆಕಾಣಲಿದೆ. ಹಾಗಾಗಿ ಬೆಂಗಳೂರಿಗೆ ಬಂದಿರುವ ರಾಮ್ ಚರಣ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರಿಗೆ ವಿಶೇಷ ಪಾತ್ರವಿದೆ. ಆ…

Read More

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಇನ್ನಿಬ್ಬರಿಂದ 47 ಲಕ್ಷ ರೂ ಮೌಲ್ಯದ ಬಿಟ್‌ಕಾಯಿನ್ ಜಪ್ತಿ ಮಾಡಿದ ಇಡಿ – Kannada News | Bitcoin Scam: ED Seizes 47 Lakh Worth Bitcoin from Sriki and Two Others

ಬೆಂಗಳೂರು, ಮೇ 25: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಾಗೂ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಬಿಟ್‌ಕಾಯಿನ್ ಹಗರಣದ ಮೂಲ ಮತ್ತು ಇಡಿ ತನಿಖೆ ಮೂವರು ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಬಿಟ್‌ಕಾಯಿನ್ ವಶಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳು 50 ಸಾವಿರ ಯುಎಸ್​​ಡಿಟಿ ಮೌಲ್ಯದ ಬಿಟ್‌ಕಾಯಿನ್ ಜಪ್ತಿ…

Read More

ಕುಂಭ ರಾಶಿಯಲ್ಲಿ ರಾಹುವಿನ ಉಲ್ಟಾ ನಡೆ!: ಈ 3 ರಾಶಿಗಳಿಗೆ 18 ವರ್ಷಗಳ ಕಾಲ ಲಾಟರಿ ಹೊಡೆಯೋದು ಗ್ಯಾರಂಟಿ – Kannada News | Rahu Transit and Dasha: Decoding Mixed Effects and Good Fortune for 12 Zodiacs

ಕುಂಭ ರಾಶಿಯು ರಾಹುವಿಗೆ ಅತ್ಯಂತ ಬಲವಾದ ಹಾಗೂ ಸ್ವಕ್ಷೇತ್ರಕ್ಕೆ ಸಮಾನವಾದ ರಾಶಿಯೆಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಗಣಿಸಲಾಗುತ್ತದೆ. ಇದರೊಂದಿಗೆ ರಾಹುವು ಶನಿಯ ದ್ರೇಕ್ಕಾಣ ಮತ್ತು ತ್ರಿಂಶಾಂಶ, ರವಿಯ ಹೋರೆ, ಗುರುವಿನ ನವಾಂಶ ಹಾಗೂ ಶುಕ್ರನ ದ್ವಾದಶಾಂಶದಲ್ಲಿದ್ದು ಮಿಶ್ರ ಫಲವನ್ನು ನೀಡುತ್ತಾನೆ. ​ರಾಹುವಿನ ಸಂಚಾರ : ​ದ್ವಾದಶ ರಾಶಿಗಳ ಫಲವನ್ನು ತಿಳಿಯುವ ಮುನ್ನ ರಾಹುವಿನ ಈ ಷಡ್ವರ್ಗ ಸ್ಥಿತಿಯ ಆಂತರಿಕ ಬಲವನ್ನು ಅರ್ಥಮಾಡಿಕೊಳ್ಳಬೇಕು. ​ಕುಂಭ ರಾಶಿ : ರಾಹು ಶನಿಯ ಮನೆಯಲ್ಲಿದ್ದು, ಶನಿಯದೇ ದ್ರೇಕ್ಕಾಣ ಹಾಗೂ ತ್ರಿಂಶಾಂಶದಲ್ಲಿ ಇರುವುದರಿಂದ ಅತ್ಯಂತ…

Read More

ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ – Kannada News | Amitabh Bachchan dismisses hospitalisation rumours greets fans outside Jalsa for Sunday Darshan

ಬಾಲಿವುಡ್‌ನ ಹಿರಿಯ ನಟ, ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಆರೋಗ್ಯದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹ ಹಾಗೂ ವದಂತಿಗಳಿಗೆ ಸ್ವತಃ ಬಿಗ್ ಬಿ ಅವರು ಭಾನುವಾರ (ಮೇ 24) ಪೂರ್ಣ ವಿರಾಮ ಇಟ್ಟಿದ್ದಾರೆ. 83 ವರ್ಷದ ಅಮಿತಾಭ್ ಬಚ್ಚನ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಅವರು ಮುಂಬೈನ ತಮ್ಮ ನಿವಾಸದ ಹೊರಗೆ ಬಂದು ಎಂದಿನಂತೆ ಅಭಿಮಾನಿಗಳಿಗೆ ದರ್ಶನ (Sunday Darshan) ನೀಡುವ ಮೂಲಕ…

Read More

ಮಕ್ಕಳೇ ಮುಗಿಯಿತು ಸಮ್ಮರ್ ಹಾಲಿಡೇಸ್ ಮಜಾ!: ಮೇ 29 ರಿಂದಲೇ ಸ್ಕೂಲ್ ಬೆಲ್ ರೆಡಿ; ಈ ಬಾರಿ ಸಿಗಲಿದೆ ಭರ್ಜರಿ ದಸರಾ ರಜೆ! – Kannada News | Karnataka Schools 2026 27: Reopening Dates, Long Dasara Holidays & Dropout Campaign

ಬೆಂಗಳೂರು, ಮೇ.25 : ಪ್ರಸ್ತುತ ಬೇಸಿಗೆ ರಜೆಯ ಮಜಾದಲ್ಲಿರುವ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂಬರುವ 2026-27ನೇ ಶೈಕ್ಷಣಿಕ ಸಾಲಿನ (Academic Year) ಅಧಿಕೃತ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಸರ್ಕಾರ ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ (Aided) ಮತ್ತು ಅನುದಾನರಹಿತ (Unaided) ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ. ವಿದ್ಯಾರ್ಥಿಗಳಿಗೆ 18 ದಿನಗಳ ದಸರಾ ರಜೆ!:…

Read More

ಭಾರತದ ಆರ್ಥಿಕ ಸವಾಲುಗಳಿಗೆ ಬಾಹ್ಯ ಪರಿಣಾಮ ಕಾರಣ: ನಿರ್ಮಲಾ ಸೀತಾರಾಮನ್ – Kannada News | Nirmala Sitharaman: India’s Economy Resilient Amidst Global Challenges & MSME Support

ಮುಂಬೈ (ಮೇ 25): ಭಾರತದ ಪ್ರಸ್ತುತ ಆರ್ಥಿಕ ಸವಾಲುಗಳು ದೇಶದ ಒಳಗಿನದ್ದಲ್ಲ, ಬದಲಿಗೆ ಜಾಗತಿಕ ವಿದ್ಯಮಾನಗಳಿಂದ (ಬಾಹ್ಯವಾಗಿ) ಎದುರಾಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ವಾಣಿಜ್ಯ ನಗರಿಯಲ್ಲಿ ನಡೆದ ಸಿಡ್ಬಿ (SIDBI – ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ಸಂಸ್ಥೆಯ 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಮತ್ತು ನಿರಾಶಾದಾಯಕ ವಾತಾವರಣ ಸೃಷ್ಟಿಸುತ್ತಿರುವ ವಿಮರ್ಶಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ….

Read More

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ – Kannada News | Rahul Gandhi Attack on PM Modi government over Fuel price hike

ನವದೆಹಲಿ, ಮೇ 25: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಪೆಟ್ರೋಲ್-ಡೀಸೆಲ್ ಬೆಲೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ಮೋದಿ ಸರ್ಕಾರ…

Read More