Headlines

ಮೌಂಟ್ ಎವರೆಸ್ಟ್ ಏರಿದ ಬೆಂಗಳೂರಿನ ಪರ್ವತಾರೋಹಿಗಳು: ಕೆಎಂಎ 60ನೇ ವರ್ಷಾಚರಣೆ ಪ್ರಯುಕ್ತ ಸಾಧನೆ – Kannada News | Bengaluru Duo Scales Mount Everest: Santhosh Devarajappa and Dr Chinmayee Thrishulamurthy Conquered World’s Highest Peak

ಮೌಂಟ್ ಎವರೆಸ್ಟ್ ತುತ್ತತುದಿಯಲ್ಲಿ ಡಾ. ಚಿನ್ಮಯಿ ತ್ರಿಶೂಲಮೂರ್ತಿ, ಸಂತೋಷ್ ದೇವರಾಜಪ್ಪ ಸಂಭ್ರಮದ ಕ್ಷಣImage Credit source: The New Indian Express ಬೆಂಗಳೂರು, ಮೇ 25: ಕರ್ನಾಟಕ (Karnataka) ಪರ್ವತಾರೋಹಣ ಸಂಸ್ಥೆಯ (KMA) 60ನೇ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲಿ ಬೆಂಗಳೂರಿನ ಇಬ್ಬರು ಸಾಹಸಿಗಳು ಜಗತ್ತಿನ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರು ಮೂಲದ 40 ವರ್ಷದ ಉದ್ಯಮಿ ಸಂತೋಷ್ ದೇವರಾಜಪ್ಪ ಮತ್ತು 45 ವರ್ಷದ ನೇತ್ರ ತಜ್ಞೆ (Ophthalmologist) ಡಾ….

Read More

Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More

ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಬೆಂಗಳೂರು, ಮೇ 25: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಸುಮಾರು 100 ಕೋಟಿ ರೂಪಾಯಿ ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಯೋಜನೆಯ ಲಾಭವನ್ನು ಸರಿಯಾದ ಫಲಾನುಭವಿಗಳಿಗೆ ತಲುಪಿಸಲು ಸರ್ಕಾರ ಬದ್ಧವಾಗಿದೆ. ಸತ್ತವರಿಗೂ ಹಣ ಹೋಗುತ್ತಿರುವುದು ಮತ್ತು ತಪ್ಪು ದೂರವಾಣಿ ಸಂಖ್ಯೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ, ಪರಿಶೀಲನೆಗೆ ಸೂಚಿಸಲಾಗಿದೆ. ಜತೆಗೆ ಫಲಾನುಭವಿಗಳು ತಮ್ಮ…

Read More

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ – Kannada News | Padma Awards 2026 Dharmendra Mammootty Alka Yagnik R Madhavan honoured on 25 May

Dharmendra, R. Madhavan, Mammootty ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ ಪ್ರಶಸ್ತಿ 2026’ (Padma Awards 2026) ಪ್ರದಾನ ಸಮಾರಂಭವು ರಾಜಧಾನಿ ನವದೆಹಲಿಯಲ್ಲಿ ಇಂದು (ಮೇ 25) ಸಂಜೆ 5 ಗಂಟೆಗೆ ಅದ್ಧೂರಿಯಾಗಿ ಜರುಗಲಿದೆ. ಈ ಬಾರಿ ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಹಲವು ಧೀಮಂತ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಈ ವರ್ಷ…

Read More

ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ​​​: 6 ಆರೋಪಿಗಳ ಬಂಧನ – Kannada News | Karnataka Police Crack State’s Biggest Digital Arrest Scam; 6 Accused Arrested

ಬೆಂಗಳೂರು, ಮೇ 25: ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣವೊಂದು (Digital Arrest Fraud) ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಕರ್ನಾಟಕದಲ್ಲೂ ತನ್ನ ಗ್ಯಾಂಗ್​ನ್ನು​ ವಿಸ್ತರಿಸಿಕೊಂಡಿದ್ದ ಆರೋಪಿಗಳು ರಾಜ್ಯದಲ್ಲಿ ಹುಡುಗರನ್ನು ಇಟ್ಟುಕೊಂಡು ಮಾಹಿತಿ ಪಡೆಯುತ್ತಿದ್ದರು ಎಂಬ…

Read More

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ – Kannada News | Hera Pheri 3 Controversy: Paresh Rawal Exits? Priyadarshan Reacts to Bollywood Rumors

ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ಉದ್ಯೋಗ ಭವಿಷ್ಯ: ಈ ವಾರ ಬಾಸ್‌ನಿಂದ ಮೆಚ್ಚುಗೆಯೋ ಅಥವಾ ಕೆಲಸದಲ್ಲಿ ಕಿರಿಕಿರಿಯೋ?: ಕೆರಿಯರ್ ಗ್ರಹಗತಿಯಲ್ಲಿ ಮಹತ್ವದ ಬದಲಾವಣೆ – Kannada News | Career Forecast May 24 30: Astrological Insights for Your Job Future

ಮೇ 24ರಿಂದ ಮೇ 30ರವರೆಗಿನ ಕೊನೆಯ ವಾರವಾಗಿದ್ದು ಗ್ರಹರ ದೃಷ್ಟಿಯಿಂದ ಉದ್ಯೋಗದಲ್ಲಿ ಉನ್ನತಿ, ಅವನತಿಗಳು ಆಗಲಿವೆ. ದೃಷ್ಟಿದೋಷವನ್ನು ಗ್ರಹರ ಸ್ತೋತ್ರದ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ​​ಮೇಷ ರಾಶಿ : ​ಸ್ವಕ್ಷೇತ್ರದ ಮಂಗಳನ ಪ್ರಭಾವದಿಂದ ಉದ್ಯೋಗದಲ್ಲಿ ಧೈರ್ಯ ಹಾಗೂ ನಾಯಕತ್ವ ಗುಣ ಹೆಚ್ಚಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದ್ದು, ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಅಧಿಕಾರದಲ್ಲಿ ಪ್ರಗತಿ ಕಂಡುಬರಲಿದೆ. ​ವೃಷಭ ರಾಶಿ : ​ಸೂರ್ಯನ ಸ್ಥಿತಿಯಿಂದಾಗಿ ಉದ್ಯೋಗ ಬದಲಾವಣೆಗೆ ಯೋಚಿಸುವಿರಿ. ಮೇಲಾಧಿಕಾರಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು, ತಾಳ್ಮೆ ಇರಲಿ….

Read More

ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ – Kannada News | Kollywood actor Vijay Sethupathi requests Tamil Nadu CM Vijay to launch Government OTT Platform

ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಪ್ರೋತ್ಸಾಹಕ್ಕಾಗಿ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ (OTT) ಪ್ಲಾಟ್‌ಫಾರ್ಮ್ ಪ್ರಾರಂಭಿಸುವ ಬಗ್ಗೆ ಯೋಚಿಸಬೇಕು ಎಂದು ಅವರು ವಿನಂತಿಸಿದ್ದಾರೆ. ವಿಜಯ್ ಸೇತುಪತಿ (Vijay Sethupathi) ಅವರ ಈ ಹೇಳಿಕೆಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರರಂಗದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಬೆಳವಣಿಗೆಯ ಬಗ್ಗೆ ಮಾತನಾಡಿದ…

Read More

ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ, 15 ಮಂದಿ ಸಾವು, 10 ಜನರಿಗೆ ಗಾಯ – Kannada News | Bangladesh Truck Crash: 15 Laborers Dead, 10 Injured Traveling for Eid

ಢಾಕಾ, ಮೇ 25: ಬಾಂಗ್ಲಾದೇಶ(Bangladesh)ದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈದ್ ಅಲ್-ಅಧಾ’ ಆಚರಣೆಗಾಗಿ ತಮ್ಮ ಕುಟುಂಬಗಳನ್ನು ಸೇರಲು ತಾಯ್ನಾಡಿಗೆ ಹೊರಟಿದ್ದ ಬಡ ದಿನಗೂಲಿ ಕಾರ್ಮಿಕರಿದ್ದ ಟ್ರಕ್ ಪಲ್ಟಿಯಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ವಾಯುವ್ಯಕ್ಕೆ ಸುಮಾರು 83 ಕಿಲೋಮೀಟರ್ ದೂರದಲ್ಲಿರುವ ತಂಗೈಲ್ ಜಿಲ್ಲೆಯ ಸೊರಾಟೊಯಿಲ್ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ನಡೆದಿದ್ದೇನು? ಪೊಲೀಸ್…

Read More

ಮಂಡ್ಯ: ಜಿಂಕೆ ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ! – Kannada News | 10 Foot Long Python Swallows Deer, Rescued Near Water Pipeline

ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ…

Read More