Category Archives: Blog

Your blog category

Saina Nehwal: ನಿವೃತ್ತಿ ಘೋಷಿಸಿದ ಸೈನಾ ನೆಹ್ವಾಲ್ – Kannada News | Saina Nehwal announced retirement from Badminton

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಲ್ಲದೆ ಇನ್ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.

ಸೈನಾ ನೆಹ್ವಾಲ್ ಕೊನೆಯ ಸ್ಪರ್ಧಾತ್ಮಕ ಪಂದ್ಯವಾಡಿದ್ದು 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಅವರು ಯಾವುದೇ ಅಧಿಕೃತ ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ.

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಕಂಬ್ಯಾಕ್ ಮಾಡಲು ಯತ್ನಿಸಿದ್ದರು. ಇದಾಗ್ಯೂ ಸಂಪೂರ್ಣ ಫಿಟ್​​ನೆಸ್ ಸಾಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ನಿವೃತ್ತಿ ಬಗ್ಗೆ ಸೈನಾ ಹೇಳಿದ್ದೇನು?

ಪಾಡ್‌ಕ್ಯಾಸ್ಟ್​ವೊಂದರಲ್ಲಿ ಮಾತನಾಡಿದ ಸೈನಾ ನೆಹ್ವಾಲ್,  ತನ್ನ ದೇಹವು ಇನ್ನು ಮುಂದೆ ತನ್ನ ಆಟವನ್ನು ಬೆಂಬಲಿಸುವುದಿಲ್ಲ. ಹೀಗಾಗಿ ಬ್ಯಾಡ್ಮಿಂಟನ್​ನಲ್ಲಿ ಇನ್ಮುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಏಕೆಂದರೆ ಈ ನೋವಿನೊಂದಿಗೆ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇನ್ಮುಂದೆ ನಾನು ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು 35 ವರ್ಷದ ಸೈನಾ ನೆಹ್ವಾಲ್ ಹೇಳಿದ್ದಾರೆ.

18 ಪದಕಗಳ ರಾಣಿ:

ಸೈನಾ ನೆಹ್ವಾಲ್ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಲ್ಲದೆ, ಇತರ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಹಲವಾರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಈ ಮೂಲಕ ತಮ್ಮ ವೃತ್ತಿಜೀವನದಲ್ಲಿ ಒಟ್ಟು 18 ಪದಕಗಳನ್ನು ಗೆದ್ದಿದ್ದಾರೆ.

ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು ಕಂಚು ಪದಕಗಳನ್ನು ಗೆಲ್ಲುವ ಮೂಲಕ ಅಭಿಯಾನ ಆರಂಭಿಸಿದ್ದ ಸೈನಾ ನೆಹ್ವಾಲ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮೂರು ಮತ್ತು ಉಬರ್ ಕಪ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

ಹಾಗೆಯೇ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳು, ಒಂದು ಬೆಳ್ಳಿ ಪದಕ ಮತ್ತು ಒಂದು ಕಂಚಿನ ಪದಕ ಸೇರಿದಂತೆ ಒಟ್ಟು ಐದು ಪದಕಗಳನ್ನು ಗೆದ್ದಿದ್ದಾರೆ. ಇನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಬಾರಿ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಇದರ ಜೊತೆಗೆ  ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಸಹ ಗೆದ್ದಿದ್ದಾರೆ.

ಇದನ್ನೂ ಓದಿ: ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ!

ಅಗ್ರಸ್ಥಾನ ಅಲಂಕರಿಸಿದ್ದ ಸೈನಾ:

ಸೈನಾ ನೆಹ್ವಾಲ್ 2015 ರಲ್ಲಿ ವಿಶ್ವದ ನಂ. 1 ಸ್ಥಾನ ಬ್ಯಾಡ್ಮಿಂಟನ್ ತಾರೆಯಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ 2009 ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 2010 ರಲ್ಲಿ ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇನ್ನು 2010 ರಲ್ಲಿ ಪದ್ಮಶ್ರೀ ಮತ್ತು 2016 ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ಸಹ ಸ್ವೀಕರಿಸಿದ್ದರು. ಇದೀಗ 35ನೇ ವಯಸ್ಸಿನಲ್ಲಿ ನಿವೃತ್ತಿ ಘೋಷಿಸುವ ಮೂಲಕ ಸೈನಾ ನೆಹ್ವಾಲ್ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ.

Source link

ಪಾಟ್ನಾದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆ – Kannada News | Patna Crime, Minor Girl’s Decapitated Head Found Police Probe Begin

ಪಾಟ್ನಾ, ಜನವರಿ 20: ಬಿಹಾರ(Bihar)ದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆಯಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೋಮವಾರ ರಾತ್ರಿ ರಾಜಧಾನಿಯ ನಾಡಿ ಪೊಲೀಸ್ ಠಾಣೆ ಪ್ರದೇಶದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ಕತ್ತರಿಸಿದ ತಲೆ ಪತ್ತೆಯಾಗಿದೆ. ಪೊಲೀಸರು ರುಂಡ ವಶಕ್ಕೆ ಪಡೆದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಾಲಕಿಯ ತಲೆಯನ್ನು ಕತ್ತರಿಸಿದ ರೀತಿ ನೋಡಿದರೆ, ಆ ಬಾಲಕಿಯನ್ನು ಅಪರಾಧಿಗಳು ಎಷ್ಟು ಭಯಾನಕವಾಗಿ ಕೊಲೆ ಮಾಡಿರಬಹುದು ಎಂಬುದು ತಿಳಿಯುತ್ತದೆ. ಈ ಕೊಲೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಬಲಿ ನೀಡಿರಬಹುದು, ಎಲ್ಲೋ ಮಾಟ ಮಂತ್ರ ನಡೆದಿರಬಹುದು ಎನ್ನುವ ಶಂಕೆಯನ್ನು ಜನರು ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ, ಕತ್ತರಿಸಿದ ತಲೆಯನ್ನು ವಶಪಡಿಸಿಕೊಂಡು, ಪರೀಕ್ಷೆಗಾಗಿ ನಳಂದ ವೈದ್ಯಕೀಯ ಕಾಲೇಜಿಗೆ ಕಳುಹಿದೆ.ಮಗುವನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿರಬಹುದು ಎಂದು ಹೆಚ್ಚುವರಿ ಪೊಲೀಸ್ ಠಾಣಾಧಿಕಾರಿ ವಿವೇಕ್ ಕುಮಾರ್ ಹೇಳಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕತ್ತರಿಸಿದ ತಲೆ ಪತ್ತೆಯಾದ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲಿಸಲಾಗುತ್ತಿದೆ. ಕತ್ತರಿಸಿದ ತಲೆಯ ಕೆಳಗಿನ ಭಾಗವನ್ನು ಸಹ ಪೊಲೀಸರು ಶೋಧಿಸುತ್ತಿದ್ದಾರೆ. ಮಾನಸಿಕ ತನಿಖಾ ತಂಡವನ್ನು ಕರೆಯಲಾಗಿದೆ.

ಮತ್ತಷ್ಟು ಓದಿ: ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು

ಪಾಟ್ನಾದ ನದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ತಲೆ ಯಾರದ್ದು ಎಂಬುದಿನ್ನೂ ತಿಳಿದುಬಂದಿಲ್ಲ, ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಯಾರಾದರೂ ನಾಪತ್ತೆಯಾಗಿರುವ ಕುರಿತು ದೂರು ಕೊಟ್ಟಿದ್ದಾರಾ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣದ ಪ್ರತಿಯೊಂದು ಅಂಶವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಕಾಣೆಯಾದ ಮಕ್ಕಳ ಬಗ್ಗೆ ಪೊಲೀಸ್ ಠಾಣೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು – Kannada News | Karnataka PU Board Scraps Study Holiday for 2nd PUC; Focus on Result Improvement


ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ!

ಬೆಂಗಳೂರು, ಜನವರಿ 20: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ (Karnataka Education Department) ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ (Study holiday) ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ.

ಒಂದು ತಿಂಗಳ ಸ್ಟಡಿ ಹಾಲಿಡೇಗೆ ಬ್ರೇಕ್

ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ ಈ ವ್ಯವಸ್ಥೆಯಿಂದ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ ಎಂಬ ಕಾರಣದಿಂದ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಫೆಬ್ರವರಿ 26ರವರೆಗೆ ಕಾಲೇಜುಗಳನ್ನು ನಡೆಸಲು ಇಲಾಖೆ ನಿರ್ಧರಿಸಿದ್ದು, ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಉಪಾನ್ಯಾಸಕರ ನೇತೃತ್ವದಲ್ಲಿಯೇ ಮುಖ್ಯ ಪರೀಕ್ಷೆಗೆ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ ಶಾಲಾ ಮಕ್ಕಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ? ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್!

ಫಲಿತಾಂಶ ಸುಧಾರಣೆಗಾಗಿ ಈ ಮಹತ್ವದ ನಿರ್ಧಾರ

ಉಪನ್ಯಾಸಕರ ನೇತೃತ್ವದಲ್ಲಿ ಗ್ರೂಪ್ ಸ್ಟಡಿ ವ್ಯವಸ್ಥೆ ಜಾರಿಗೊಳಿಸಲು ಇಲಾಖೆ ಮುಂದಾಗಿದೆ. ಪಠ್ಯ ಪುನರವಲೋಕನ, ಅನುಮಾನ ನಿವಾರಣೆ, ಪ್ರಶ್ನೋತ್ತರ ಚರ್ಚೆಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಕಾಲೇಜುಗಳಿಗೆ ಸೂಚಿಸಲಾಗಿದೆ. ಜೊತೆಗೆ ಉಪನ್ಯಾಸಕರು ಕೂಡ ಪರೀಕ್ಷೆ ಮುಗಿಯುವವರೆಗೂ ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು ಎಂದು ಆದೇಶಿಸಲಾಗಿದೆ. ಈ ಹೊಸ ಕ್ರಮದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಲಿದೆ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಾಣಬಹುದು ಎಂಬ ವಿಶ್ವಾಸವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಕ್ತಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ – Kannada News | Who is DGP K Ramachandra Rao? The Karnataka IPS Officer Under Fire After Viral Video Scandal

ಬೆಂಗಳೂರು, ಜನವರಿ 20: ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ಮಹಿಳೆ ಜತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಡಿಜಿಪಿ ರಾಮಚಂದ್ರ ರಾವ್​ (DGP Ramachandra Rao) ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಡಿಜಿಪಿ ರಾಮಚಂದ್ರ ರಾವ್ ಮೇಲಿನ ರಾಸಲೀಲೆ ಆರೋಪ ಈಗ ಹೊಸದಾದರೂ ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಅವರ ಹೆಸರು ತಳಕುಹಾಕಿಕೊಂಡಿತ್ತು. ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಸೇರಿದಂತೆ ಅನೇಕ ಪ್ರಕರಣಗಳನ್ನು ಅವರು ಎದುರಿಸುತ್ತಿದ್ದಾರೆ.

ಕೆ ರಾಮಚಂದ್ರ ರಾವ್ ಹಿನ್ನೆಲೆ

ಡಾ. ಕೆ ರಾಮಚಂದ್ರ ರಾವ್ 1993 ರ ಬ್ಯಾಚ್​​ನ (ಕರ್ನಾಟಕ ಕೇಡರ್) ಐಪಿಎಸ್ ಅಧಿಕಾರಿ. ಮೂಲತಃ ಆಂಧ್ರ ಪ್ರದೇಶದ ಗುಂಟೂರಿನವರು. ಮೂಲತಃ ಆಂಧ್ರದವರಾದರೂ ಕರ್ನಾಟಕ ಕೇಡರ್ ಅಧಿಕಾರಿ ಆಗಿದ್ದರಿಂದ ವೃತ್ತಿಪರ ಜೀವನದ ಬಹುಪಾಲು ಕರ್ನಾಟಕದ ವಿವಿಧ ಭಾಗಗಳಲ್ಲಿ (ದಾವಣಗೆರೆ, ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಂಗಳೂರು) ಸೇವೆ ಸಲ್ಲಿಸಿದ್ದಾರೆ. 2023 ರ ಸೆಪ್ಟೆಂಬರ್​​ನಲ್ಲಿ ಡಿಜಿಪಿ ಹುದ್ದೆಗೆ ಬಡ್ತಿ ಪಡೆದಿದ್ದರು. ಇದೀಗ ರಾಸಲೀಲೆ ಪ್ರಕರಣದಲ್ಲಿ ಅಮಾನತಾಗುವ ಸದರ್ಭ ಅವರು ಕರ್ನಾಟಕದ ನಾಗರಿಕ ಹಕ್ಕುಗಳ ಜಾರಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯಲ್ಲಿದ್ದರು.

ಎರಡನೇ ಮದುವೆಯಾಗಿದ್ದ ರಾಮಚಂದ್ರ ರಾವ್

ಡಿಜಿಪಿ ರಾಮಚಂದ್ರ ರಾವ್​ಗೆ ಎರಡನೇ ಮದುವೆಯಾಗಿತ್ತು. ಅವರು ಎರಡನೇ ಮದುವೆಯಾದ ಮಹಿಳೆಗೆ ಮೊದಲ ಪತಿಯಿಂದ ಜನಿಸಿದ್ದಾಕೆಯೇ ನಟಿ ರನ್ಯಾ ರಾವ್. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್ ಸಿಕ್ಕಿಬಿದ್ದಾಗ ರಾಚಂದ್ರ ರಾವ್ ಆಕೆಯಿಂದ ಅಂತರ ಕಾಯ್ದುಕೊಂಡಿದ್ದರು.

ಕೆ ರಾಮಚಂದ್ರ ರಾವ್ ಹಿಂದಿನ ಪ್ರಕರಣಗಳು

ದುಬೈನಿಂದ 14.2 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆ ರಾಮಚಂದ್ರ ರಾವ್ ಮಲಮಗಳು ನಟಿ ರನ್ಯಾ ರಾವ್ ಅವರನ್ನು ಬಂಧಿಸಿದಾಗ ರಾವ್ ಬಗ್ಗೆಯೂ ಆರೋಪಗಳು ಕೇಳಿಬಂದಿದ್ದವು. ಬಳಿಕ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಅದಾದ ನಂತರ 2025 ರ ಆಗಸ್ಟ್​​ನಲ್ಲಿ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಯಿತು. ಮಲಮಗಳ ಚಟುವಟಿಕೆಗಳಿಂದ ದೂರವಿದ್ದು, ಆಕೆ ಜತೆ ಇತ್ತೀಚಿನ ದಿನಗಳಲ್ಲಿ ಯಾವುದೇ ಸಂಪರ್ಕವಿಲ್ಲ ಎಂದು ಹೇಳಿದ್ದರು.

ಮೈಸೂರಿನ ಇಲವಾಲದಲ್ಲಿ 2014ರಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಹಣವನ್ನು ದುರ್ಬಳಕೆ ಮಾಡಿದ್ದ ಆರೋಪ ರಾಮಚಂದ್ರ ರಾವ್ ವಿರುದ್ಧ ಕೇಳಿಬಂದಿತ್ತು. ಬಸ್ಸಿನಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಗೂ ಹೆಚ್ಚಿನ ಹಣ ದರೋಡೆಯಾಗಿತ್ತು. ಆಗ ರಾಮಚಂದ್ರ ರಾವ್ ದಕ್ಷಿಣ ವಲಯದ ಐಜಿಪಿ ಆಗಿದ್ದರು. ದರೋಡೆ ಮಾಡಿದ್ದವರಿಂದ ವಶಕ್ಕೆ ಪಡೆಯಲಾಗಿದ್ದ ಹಣ ದುರ್ಬಳಕೆ ‌ಮಾಡಿಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೇ ಪ್ರಕರಣದಲ್ಲಿ ರಾಮಚಂದ್ರ ರಾವ್​ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಸಿಐಡಿ ತನಿಖೆಯಲ್ಲಿ ಆರೋಪ ಸಾಬೀತಾಗಿರಲಿಲ್ಲ. ಹೀಗಾಗಿ ಪ್ರಕರಣ ನ್ಯಾಯಾಲಯದಲ್ಲಿ ವಜಾಗೊಂಡಿತ್ತು.

ಇದನ್ನೂ ಓದಿ: ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

2017 ರ ನವೆಂಬರ್ 30 ರಂದು ಭೀಮಾತೀರದ ನಟೋರಿಯಸ್ ಹಂತಕ ಧರ್ಮರಾಜ ಚಡಚಣ ಸಂಶಯಾಸ್ಪದ ಪೊಲೀಸ್ ಎನ್‌ಕೌಂಟರ್ ಮತ್ತು ಗಂಗಾಧರ ಚಡಚಣ ಸಂಶಯಾಸ್ಪದ ಕೊಲೆ ಪ್ರಕರಣಗಳಲ್ಲಿ ರಾಮಚಂದ್ರ ರಾವ್ ಹೆಸರು ಕೇಳಿಬಂದಿತ್ತು. ನಂತರ ಸಿಐಡಿ ತನಿಖೆ ನಡೆದು ರಾಮಚಂದ್ರ ರಾವ್ ಪಾತ್ರ ಇಲ್ಲ ಎಂಬುದು ಸಾಬೀತಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:04 am, Tue, 20 January 26

Source link

Penguin Awareness Day 2026: ಬದಲಾಗುತ್ತಿರುವ ಹವಾಮಾನದಿಂದಾಗಿ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಎದುರಾಗಿದೆ ಅಪಾಯ – Kannada News | Penguin Awareness Day 2026: Know the history and significance of Penguin Awareness Day

ಪೆಂಗ್ವಿನ್‌ ಜಾಗೃತಿ ದಿನImage Credit source: Unsplash

ಪೆಂಗ್ವಿನ್‌ಗಳು (Penguin) ದಕ್ಷಿಣ ಗೋಳಾರ್ಧಕ್ಕೆ ಸ್ಥಳೀಯವಾಗಿರುವ ಜಲಚರ ಪಕ್ಷಿಗಳು. ಆಹಾರ ಸರಪಳಿಯ ಸಮತೋಲನವನ್ನು ಕಾಪಾಡಿಕೊಳ್ಳುವ ಮೂಲಕ ಸಮುದ್ರ ಪರಿಸರ ವ್ಯವಸ್ಥೆಯಲ್ಲಿ ಪೆಂಗ್ವಿನ್‌ಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಕ್ರಿಲ್, ಸ್ಕ್ವಿಡ್ ಸೇರಿದಂತೆ ಮತ್ತಿತರ ಮೀನುಗಳನ್ನು ತಿಂದು ಬದುಕುವ ಇವುಗಳು ಸಮುದ್ರ ಜೀವಿಗಳ ಸಂಖ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಇಂದು ಇಂದು ಈ ಪಕ್ಷಿಗಳು ಹವಾಮಾನ ಬದಲಾವಣೆ, ಅತಿಯಾದ ಮೀನುಗಾರಿಕೆ ಮತ್ತು ಆವಾಸಸ್ಥಾನದ ನಾಶದಿಂದಾಗಿ ಪೆಂಗ್ವಿನ್‌ಗಳ ಸಂತತಿ ಅಳಿವಿನಂಚಿಗೆ ತಲುಪಿವೆ. ಹಾಗಾಗಿ ಈ ಪಕ್ಷಿಯ ಸಂತತಿಯನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಪ್ರತಿವರ್ಷ ಜನವರಿ 20 ರಂದು ಪೆಂಗ್ವಿನ್‌ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

ಪೆಂಗ್ವಿನ್ ಜಾಗೃತಿ ದಿನದ ಇತಿಹಾಸ:

ಪೆಂಗ್ವಿನ್‌ ಪಕ್ಷಿಗಳ ಜಾಗತಿಕ ಮನ್ನಣೆ ಮತ್ತು ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ಅವುಗಳ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪೆಂಗ್ವಿನ್ ಜಾಗೃತಿ ದಿನವನ್ನು ಸ್ಥಾಪಿಸಲಾಯಿತು. 1972 ರಲ್ಲಿ ಕ್ಯಾಲಿಫೋರ್ನಿಯಾದ ಅಲಮೊಗೊರ್ಡೊದ ಗೆರ್ರಿ ವ್ಯಾಲೇಸ್‌ ಅವರ ಪತ್ನಿ ಅಲೆಟಾ ಪೆಂಗ್ವಿನ್‌ ದಿನದ ಬಗ್ಗೆ ಉಲ್ಲೇಖಿಸಿದರು. ಅಂದಿನಿಂದ ಪ್ರತಿವರ್ಷ ಜನವರಿ 20 ರಂದು ಈ ಪಕ್ಷಿಗಳ ಸಂತತಿಯನ್ನು ಉಳಿಸಬೇಕು ಎನ್ನುವ ನಿಟ್ಟಿನಲ್ಲಿ ಪೆಂಗ್ವಿನ್‌ ಜಾಗೃತಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಪೆಂಗ್ವಿನ್‌ಗಳ ಸಂಖ್ಯೆ ಕಡಿಮೆಯಾಗಲು ಕಾರಣವೇನು?

  • ಹವಾಮಾನ ಬದಲಾವಣೆ, ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಕರಗುತ್ತಿರುವ ಮಂಜುಗಡ್ಡೆ ಮತ್ತು ಸಮುದ್ರ ಮಟ್ಟದಲ್ಲಿನ ಬದಲಾವಣೆಗಳು ಪೆಂಗ್ವಿನ್‌ಗಳ ಆವಾಸಸ್ಥಾನದ ಮೇಲೆ ತೀವ್ರ ಪರಿಣಾಮ ಬೀರಿವೆ.
  • ಪೆಂಗ್ವಿನ್‌ಗಳ ಮುಖ್ಯ ಆಹಾರವಾಗಿರುವ ಕ್ರಿಲ್‌ನ ಸಂಖ್ಯೆ ಕಡಿಮೆಯಾಗಿರುವುದು ಸಹ ಈ ಪಕ್ಷಿಗಳ ಸಂಖ್ಯೆ ಕ್ಷೀಣಿಸಲು ಮುಖ್ಯ ಕಾರಣ.
  • ಸಮುದ್ರ ಮಾಲಿನ್ಯ ಮತ್ತು ಬೇಟೆಯಿಂದಲೂ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಅಪಾಯ ಉಂಟಾಗಿದೆ.

ಇದನ್ನೂ ಓದಿ: ನವೋದ್ಯಮಿಗಳ ಸ್ವಂತ ಬಿಸ್ನೆಸ್‌ ಕನಸನ್ನು ನನಸಾಗಿಸುತ್ತಿವೆ ಸ್ಟಾರ್ಟ್‌ಅಪ್‌

ಪೆಂಗ್ವಿನ್‌ ಜಾಗೃತಿ ದಿನದ ಮಹತ್ವವೇನು?

  • ಪೆಂಗ್ವಿನ್‌ಗಳ ಸಂರಕ್ಷಣೆ ಮತ್ತು ಅವುಗಳ ನೈಸರ್ಗಿಕ ಆವಾಸಸ್ಥಾನದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
  • ಈ ಮುದ್ದದ ಪಕ್ಷಿಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಅವುಗಳ ರಕ್ಷಣೆಗೆ ಕೊಡುಗೆ ನೀಡಲು ಈ ದಿನ ಒಂದು ಅವಕಾಶವಾಗಿದೆ.
  • ಪೆಂಗ್ವಿನ್‌ಗಳು ಪರಿಸರ ವ್ಯವಸ್ಥೆಯ ಭಾಗ ಮಾತ್ರವಲ್ಲದೆ ಸಮುದ್ರ ಜೀವಿಗಳ ಆರೋಗ್ಯಕ್ಕೂ ಪ್ರಮುಖವಾಗಿದ್ದು, ಅವುಗಳ ರಕ್ಷಣೆ ಅತ್ಯಗತ್ಯ ಎಂಬುದನ್ನು ಈ ದಿನ ಒತ್ತಿ ಹೇಳುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ! – Kannada News | Bangladesh sought to swap T20 World Cup 2026 groups with Ireland

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಇದಾಗ್ಯೂ ಬಾಂಗ್ಲಾದೇಶ್ ತಂಡ ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆಯಾ ಎಂಬುದು ಖಚಿತವಾಗಿಲ್ಲ. ಏಕೆಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಐಸಿಸಿಗೆ ಮನವಿ ಮಾಡಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದರೂ ಬಿಸಿಬಿ ತನ್ನ ನಿಲುವನ್ನು ಬದಲಿಸಿಲ್ಲ. ಇದೀಗ ಐರ್ಲೆಂಡ್ ತಂಡದ ಗ್ರೂಪ್ ಬದಲಿಸಿ ಪಂದ್ಯವಾಡಲು ಅವಕಾಶ ಮಾಡಿಕೊಡುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಹೊಸ ಬೇಡಿಕೆಯನ್ನಿಟ್ಟಿದೆ.

ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಐರ್ಲೆಂಡ್ ತಂಡವು ಗ್ರೂಪ್-2 ನಲ್ಲಿ ಕಾಣಿಸಿಕೊಂಡಿದೆ. ಅತ್ತ ಬಾಂಗ್ಲಾದೇಶ್ ತಂಡವಿರುವುದು ಗ್ರೂಪ್- 3 ನಲ್ಲಿ. ಇದೀಗ ನಮ್ಮನ್ನು ಗ್ರೂಪ್-2 ಕ್ಕೆ ಸೇರಿಸಿ ಐರ್ಲೆಂಡ್ ತಂಡವನ್ನು ಗ್ರೂಪ್-3 ನಲ್ಲಿ ಕಣಕ್ಕಿಳಿಯುವಂತೆ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಐಸಿಸಿಗೆ ಮನವಿ ಮಾಡಿದೆ.

ಬಾಂಗ್ಲಾದೇಶ್ ಪ್ಲ್ಯಾನ್​ ಏನು?

ಭಾರತದಲ್ಲಿನ ತನ್ನ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸುತ್ತಿದೆ. ಇದಾಗ್ಯೂ ಬಾಂಗ್ಲಾ ಬೇಡಿಕೆಗೆ ಐಸಿಸಿ ಸಮ್ಮತಿ ಸೂಚಿಸಿಲ್ಲ. ಇದೀಗ ಗ್ರೂಪ್ ಸ್ವಾಪ್ ಮಾಡುವಂತೆ ಬಿಸಿಬಿ ಹೊಸ ಬೇಡಿಕೆಯನ್ನಿಟ್ಟಿದೆ.

ಈ ಬೇಡಿಕೆಗೆ ಮುಖ್ಯ ಕಾರಣ, ಗ್ರೂಪ್-2 ನಲ್ಲಿರುವ ಐರ್ಲೆಂಡ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುತ್ತಿರುವುದು. ಐರ್ಲೆಂಡ್ ಲೀಗ್​ ಹಂತದಲ್ಲಿ ಆಡಲಿರುವ 4 ಪಂದ್ಯಗಳನ್ನೂ ಶ್ರೀಲಂಕಾದ ಆರ್​. ಪ್ರೇಮದಾಸ ಹಾಗೂ ಪಲ್ಲೆಕೆಲೆ ಸ್ಟೇಡಿಯಂಗಳಲ್ಲಿ ಆಡಲಿದೆ.

ಇತ್ತ ಗ್ರೂಪ್ ಸ್ವಾಪ್ ಮಾಡುವುದರಿಂದ ಬಾಂಗ್ಲಾದೇಶ್ ತಂಡವು ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಬಹುದು. ಈ ಮೂಲಕ ಪಂದ್ಯಗಳ ಸ್ಥಳಾಂತರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಇದೇ ಪ್ಲ್ಯಾನಿಂಗ್​ನೊಂದಿಗೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಇದೀಗ ಗ್ರೂಪ್ ಸ್ವಾಪ್​ಗಾಗಿ ಬೇಡಿಕೆಯನ್ನಿಟ್ಟಿದೆ. ಅದರಂತೆ ಗ್ರೂಪ್-2 ನಲ್ಲಿರುವ ಐರ್ಲೆಂಡ್ ತಂಡವು ಗ್ರೂಪ್-3 ನಲ್ಲಿ, ಗ್ರೂಪ್-3 ನಲ್ಲಿರುವ ಬಾಂಗ್ಲಾದೇಶ್ ಗ್ರೂಪ್-2 ನಲ್ಲಿ ಕಣಕ್ಕಿಳಿಯಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಐಸಿಸಿ ಗಡುವು:

ಭಾರತದಿಂದ ತನ್ನ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಬೇಕೆಂದು ಪಟ್ಟು ಹಿಡಿದಿರುವ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ತನ್ನ ಅಂತಿಮ ನಿಲುವು ಸ್ಪಷ್ಟಪಡಿಸುವಂತೆ ಗಡುವು ನೀಡಿದೆ. ಅದರಂತೆ ಜನವರಿ 21 ರೊಳಗೆ ಟಿ20 ವಿಶ್ವಕಪ್ ಆಡುತ್ತೀರಾ ಅಥವಾ ಟೂರ್ನಿಯಿಂದ ಹಿಂದೆ ಸರಿಯುತ್ತೀರಾ ಎಂಬುದನ್ನು ಖಚಿತಪಡಿಸಲು ತಿಳಿಸಲಾಗಿದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ.

Source link

ಗದಗ: ಮನೆ ಮುಂದೆ ಹಾರ್ನ್​ ಹೊಡೆದಿದ್ದಕ್ಕೆ ನಡೆಯಿತು ರಕ್ತಪಾತ! ಗಂಭೀರ ಸ್ಥಿತಿಯಲ್ಲಿ ತಂದೆ-ಮಗ – Kannada News | Gadag Father Son Stabbed, Mysuru Youth Murdered Over Trivial Issues

ಮನೆ ಮುಂದೆ ಹಾರ್ನ್​ ಹೊಡೆದಿಕ್ಕೆ ನಡೆಯಿತು ರಕ್ತಪಾತ!

ಗದಗ, ಜನವರಿ 20: ಮನೆ ಮುಂದೆ ಹಾರ್ನ್ ಹೊಡೆದ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಭೀಕರ ಜಗಳ ಉಂಟಾಗಿ ತಂದೆ–ಮಗನನಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ತಂದೆ-ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಕುಟುಂಬಗಳ ನಡುವೆ ಹಿಂದಿನಿಂದಲೂ ಇತ್ತು ವೈಷಮ್ಯ

ಕಂಬಳಿ ಕುಟುಂಬ ಮತ್ತು ಚಕ್ರಣ್ಣವರ ಕುಟುಂಬದ ನಡುವೆ ನಡೆದ ಗಲಾಟೆಯಲ್ಲಿ 17 ವರ್ಷದ ಶರಣಬಸಪ್ಪ ಕಂಬಳಿ ಹಾಗೂ ಅವರ ತಂದೆ 45 ವರ್ಷದ ಹೂವಪ್ಪ ಕಂಬಳಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಗಳ ಬಿಡಿಸಲು ಹೋದ ಸಹೋದರ ಮಲ್ಲಪ್ಪ ಕಂಬಳಿ ಮೇಲೂ ಹಲ್ಲೆ ನಡೆಸಲಾಗಿದೆ. ಚಕ್ರಣ್ಣವರ​ ಕುಟುಂಬದ ಈರಪ್ಪ, ಚಿನ್ನಪ್ಪ, ದೊಡ್ಡ ಯಲ್ಲಪ್ಪ ಹಾಗೂ ರಮೇಶ್ ಎಂಬವರು ಚಾಕು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಪ್ರತಿಯಾಗಿ ಇನ್ನೊಂದು ಗುಂಪಿನ ಈರವ್ವ ಹಾಗೂ ದೊಡ್ಡ ಯಲ್ಲಪ್ಪನಿಗೂ ಗಾಯಗಳಾಗಿವೆ. ಎರಡು ಕುಟುಂಬಗಳ ನಡುವೆ ಹಿಂದಿನಿಂದಲೂ ವೈಷಮ್ಯವಿದ್ದು, ಈ ಹಿಂದೆ ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ನಡೆಸಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ನಡೆದ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು

ಮೈಸೂರಿನಲ್ಲಿ ಯುವಕನ ಕೊಲೆ

ಮೈಸೂರಿನ ಉದಯಗಿರಿ ಬೀಡಿ ಕಾಲೋನಿ ಬಳಿ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಗೌಸಿಯಾ ನಗರದ ನಿವಾಸಿ ಶಹಬಾಜ್ (26) ಎಂಬ ಯುವಕನನ್ನು ಜುಬೇರ್ ಎಂಬಾತನು ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಉಂಟಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:53 am, Tue, 20 January 26

Source link

ಶಮರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ – Kannada News | Sabarimala Gold Theft Case: ED Raids in Karnataka’s Bengaluru, Ballari and Thiruvananthapuram in Kerala

ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

ಬೆಂಗಳೂರು, ಜನವರಿ 20: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ (Bangalore) ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಪ್ರತಿಷ್ಠಿತ ರೊದ್ದಂ ಜ್ಯುವೆಲ್ಲರಿ ಅಂಗಡಿ ಮತ್ತು ಅದರ ಮಾಲೀಕ ಗೋವರ್ಧನ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 9 ಮಂದಿ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.

ಚಿನ್ನ ಕಳವು ಪ್ರಕರಣದಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಪಾತ್ರ ಪ್ರಮುಖವಾಗಿದೆ ಎನ್ನಲಾಗಿದೆ. ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದೇವಸ್ಥಾನದಿಂದ ಕಳವು ಮಾಡಿದ್ದ ಚಿನ್ನವನ್ನು ಗೋವರ್ಧನ್‌ಗೆ ಮಾರಾಟ ಮಾಡಿದ್ದ ಎಂಬ ಆರೋಪವಿದೆ. ಅಕ್ರಮವಾಗಿ 470 ಗ್ರಾಂ ಚಿನ್ನವನ್ನು ಖರೀದಿಸಿದ ಆರೋಪದ ಮೇಲೆ ಕೇರಳ ಎಸ್‌ಐಟಿ (SIT) ಅಧಿಕಾರಿಗಳು ಗೋವರ್ಧನ್‌ನನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಈ ಪ್ರಕರಣದಲ್ಲಿ ದೊಡ್ಡ ಮಟ್ಟದ ಹಣ ಅಕ್ರಮ ವರ್ಗಾವಣೆ ನಡೆದಿರುವ ಶಂಕೆ ವ್ಯಕ್ತವಾಗಿದರಿಂದ ಇಡಿ ಈಗ ಮನಿ ಲಾಂಡರಿಂಗ್ ಕಾಯ್ದೆಯಡಿ (PMLA) ತನಿಖೆ ಆರಂಭಿಸಿದೆ. ಅಲ್ಲದೆ, ಶಬರಿಮಲೆ ಚಿನ್ನ ಕಳವು ಪ್ರಕರಣ ಕಳ್ಳತನಕ್ಕಷ್ಟೇ ಸೀಮಿತವಾಗಿಲ್ಲ, ಇದರಲ್ಲಿ ಪ್ರಭಾವಿಗಳ ಕೈವಾಡವಿದೆ ಎಂಬ ಆರೋಪವೂ ಕೇಳಿಬಂದಿತ್ತು.

ಶಬರಿಮಲೆ ಚಿನ್ನ ಕಳವು ಪ್ರಕರಣ ಹಾಗೂ ಕರ್ನಾಟಕ ಲಿಂಕ್​ ಹಿನ್ನೆಲೆ

2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಬಗ್ಗೆ ಕೇರಳ ಹೈಕೋರ್ಟ್ ತನಿಖೆಗೆ ಆದೇಶಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಬರಿಮಲೆಯ ಮಾಜಿ ಮುಖ್ಯ ಅರ್ಚಕ (ತಂತ್ರಿ) ಕಂದರಾರು ರಾಜೀವ್, ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಸೇರಿದಂತೆ ಈಗಾಗಲೇ 12ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ

ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯಿಂದ ಚಿನ್ನ ಖರೀದಿ ಮಾಡಿದ ಆರೋಪ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಮೇಲಿದೆ. ಈ ಸಂಬಂಧ ಕೇರಳ ಎಸ್​ಐಟಿ ಈಗಾಗಲೇ ಗೋವರ್ಧನ್​ರನ್ನು ವಿಚಾರಣೆಗೆ ಒಳಪಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ – Kannada News | Kaithi 2 Delay: Lokesh Kanagaraj’s Rs 75 Cr Fee and Karthi’s Disappointment Revealed

2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಡಿಲ್ಲಿ ಪಾತ್ರ ಮೆಚ್ಚುಗೆ ಪಡೆಯಿತು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ (Lokesh Kanagaraj) ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ ಯಾವುದೇ ಟಾಕ್ ಇಲ್ಲ. ನಿರ್ದೇಶಕನ ಅತಿ ಆಸೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

‘ಕೈದಿ’ ಬಳಿಕ ಲೋಕೇಶ್ ಅವರು ‘ಮಾಸ್ಟರ್’, ‘ವಿಕ್ರಮ್’, ‘ಲಿಯೋ’, ‘ಕೂಲಿ’ ಸಿನಿಮಾ ನಿರ್ದೇಶನ ಮಾಡಿದರು. ವಿಕ್ರಮ್ ಹೊರತುಪಡಿಸಿ ಉಳಿದೆಲ್ಲವೂ ಸಾಧಾರಣ ಎನಿಸಿಕೊಂಡಿತು. ಆದಾಗ್ಯೂ ಅವರಿಗೆ ಇರೋ ಬೇಡಿಕೆ ಕಡಿಮೆ ಆಗಿಲ್ಲ. ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ‘ಕೈದಿ 2’ ಬಗ್ಗೆ ಚರ್ಚೆ ನಡೆದಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೈದಿ 2’ ಈಗಾಗಲೇ ಸೆಟ್ಟೇರಬೇಕಿತ್ತು. ಆದರೆ, ಲೋಕೇಶ್ ಅವರ ಅತಿ ಆಸೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಅವರು ಈ ಚಿತ್ರ ನಿರ್ದೇಶನ ಮಾಡಲು 75 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರಂತೆ. ನಿರ್ಮಾಪಕರ ಪಾಲಿಗೆ ಇದು ನಿಜಕ್ಕೂ ದೊಡ್ಡ ಹೊರೆ. ಇಷ್ಟು ಮೊತ್ತದ ಸಂಭಾವನೆಯನ್ನು ನಿರ್ದೇಶಕರಿಗೆ ಕೊಡಲು ನಿರ್ಮಾಪಕರು ರೆಡಿ ಇಲ್ಲ.

ಇತ್ತೀಚೆಗೆ ಲೋಕೇಶ್ ಸಿನಿಮಾಗಳು ಬಾಕ್ಸ್ ಆಫೀಸ್​​​ನಲ್ಲಿ ನೀಡುತ್ತಿರುವ ಪರ್ಫಾರ್ಮೆನ್ಸ್ ನೋಡಿದರೆ ಹಾಕಿದ ಹಣ ಮರಳುತ್ತದೆ ಎಂಬ ಭರವಸೆ ಇಲ್ಲ. ಹೀಗಾಗಿ, ಸುಖಾಸುಮ್ಮನೆ ಬಜೆಟ್ ಹೆಚ್ಚಿಸಿಕೊಳ್ಳುವ ಬದಲು ಸುಮ್ಮನೆ ಇರೋದೆ ಬೆಸ್ಟ್ ಎಂಬ ಆಲೋಚನೆ ನಿರ್ಮಾಪಕರಿಗೆ ಬಂದಿದೆಯಂತೆ.

ಇದನ್ನೂ ಓದಿ: ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ರಚಿತಾ ರಾಮ್?

ಇತ್ತೀಚೆಗೆ ‘ಕೈದಿ 2’ ಬಗ್ಗೆ ಕಾರ್ತಿಗೆ ಕೇಳಲಾಗಿದೆ. ‘ನಿರ್ದೇಶಕರೇ ಆ ಬಗ್ಗೆ ಮಾಹಿತಿ ಕೊಡ್ತಾರೆ’ ಎಂದು ಹೇಳಿ ಜಾರಿಕೊಂಡಿದ್ದಾರೆ. ಅವರು ಈ ವಿಷಯದಲ್ಲಿ ಬೇಸರದಲ್ಲಿ ಇರುವುದು ಸ್ಪಷ್ಟವಾಗಿದೆ. ಕಾರ್ತಿ ಹಾಗೂ ಲೋಕೇಶ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತು ಕೂಡ ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:03 am, Tue, 20 January 26

Source link

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು – Kannada News | DGP Ramachandra Rao Suspended Following Viral Video Controversy in Office

ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಡಿಜಿಪಿ ರಾಮಚಂದ್ರರಾವ್, ಇದು ಎಐ ಸೃಷ್ಟಿ ಮತ್ತು ತಮ್ಮ ವಿರುದ್ಧದ ಷಡ್ಯಂತ್ರ ಎಂದು ಸ್ಪಷ್ಟೀಕರಣ ನೀಡಿದ್ದರು. ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link