Category Archives: Blog

Your blog category

Daily Devotional: ಇಂದಿನಿಂದ ಗುರುಪುಷ್ಯ ಯೋಗ; ಯಾವ ರಾಶಿಗೆ ಏನೇನು ಫಲ? – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಗುರುಪುಷ್ಯ ಯೋಗ; ಯಾವ ರಾಶಿಗೆ ಏನೇನು ಫಲ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಮಹತ್ವಪೂರ್ಣ ಘಟನೆಯಾಗಿ ಗುರುತಿಸಲ್ಪಟ್ಟಿರುವ ಗುರು ಪುಷ್ಯ ಮಹಾಯೋಗವು 2026ರಲ್ಲಿ 61 ದಿನಗಳ ಕಾಲ ಸಂಭವಿಸಲಿದೆ. ಈ ವಿಶೇಷ ಯೋಗವು ಜೂನ್ 18, 2026, ಗುರುವಾರ ರಾತ್ರಿ 9:32 ರಿಂದ ಆಗಸ್ಟ್ 19, 2026, ಬುಧವಾರ ಬೆಳಗಿನ ಜಾವ 3:37 ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಗುರು ಗ್ರಹವು ಪುಷ್ಯ ನಕ್ಷತ್ರದಲ್ಲಿ ಸಂಚರಿಸುತ್ತದೆ. ಪುಷ್ಯ ನಕ್ಷತ್ರದ ಅಧಿಪತಿ ಶನಿ ಗ್ರಹವಾಗಿರುವುದರಿಂದ, ಧರ್ಮ ಕಾರಕನಾದ ಗುರು ಮತ್ತು ಕರ್ಮ ಕಾರಕನಾದ ಶನಿಯ ಈ ಸಂಯೋಗವು ಮಹಾ ಅದೃಷ್ಟದ ಯೋಗವೆಂದು ಪರಿಗಣಿಸಲಾಗಿದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಮನಸ್ಸನ್ನು ಗೆಲ್ಲುವ ಪ್ರಯತ್ನ… – Kannada News | Dina Rashi Bhavishya June 18, 2026: Daily Horoscope Predictions for Thursday

ಮೇಷ ರಾಶಿ:

ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ.

ವೃಷಭ ರಾಶಿ:

ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ನಿಮಗೆ ಬಾಣಲಿಯಿಂದ ಬೆಂಕಿಗೆ ಬಿದ್ದ ಅನುಭವವಾಗಬಹುದು. ಮನಸ್ಸು ಒಂದು ಕಡೆ ನಿಲ್ಲದೇ ಓಡಾಡುವುದು. ಕಳೆದುಕೊಂಡದ್ದನ್ನು ಪಡೆಯುವ ಹಠವಿರುವುದು. ಅದು ನಿಮ್ಮ ವ್ಯಕ್ತಿತ್ವವನ್ನೂ ತೋರಿಸುವುದು. ಪ್ರೀತಿಸುವವರನ್ನು ಮುಕ್ತವಾಗಿ ಬಿಡುವಿರಿ. ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ.

ಮಿಥುನ ರಾಶಿ:

ನಿಮ್ಮ ಮಗುವಿನ ಬಗ್ಗೆ ನೀವು ಹೆಮ್ಮೆಪಡುತ್ತೀರಿ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಐತಿಹಾಸಿಕ ದೇವಾಲಯವನ್ನು ನೋಡುವ ಹಂಬಲವಿರುವುದು. ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಲಿದೆ. ಅತಿಯಾದರೆ ಅಮೃತವೂ ವಿಷ. ದುರಭ್ಯಾಸವು ಗೊತ್ತಾಗದಂತೆ ನಿಮಗೆ ಬರಲಿದೆ. ಬಿಡಿಸಲು ಮನೆಯವರ ಪ್ರಯತ್ನ ಮಾಡುವರು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು.‌

ಕರ್ಕಾಟಕ ರಾಶಿ:

ಯಾರನ್ನೂ ಅವಲಂಬಿಸಬೇಕು ಅನ್ನಿಸದು. ನೀವು ಹಣಕಾಸಿನ ಲಾಭವನ್ನು ಆನಂದಿಸುವ ಸಾಧ್ಯತೆ ಇದೆದೆ. ಹುಟ್ಟಿನಿಂದ ಬಂದ ಸ್ವಭಾವವನ್ನು ತಿದ್ದಲಾಗದು. ಸಮಯವನ್ನು ತಿನ್ನುವವರಿಗೆ ಸಿಗದೇ ಇದ್ದರೆ ಒಳ್ಳೆಯದು. ಮನೆಯಲ್ಲಿ ನಿಮ್ಮ ಸ್ವಭಾವವನ್ನು ತಿದ್ದಲು ಪ್ರಯತ್ನಿಸುವರು. ಮಾಡಬೇಕು ಎಂದು ಅನ್ನಿಸಿದ್ದನ್ನು ಮಾಡಿ‌ಮುಗಿಸಿ. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು.

ಸಿಂಹ ರಾಶಿ:

ಸಮಯ ಮುಂದುವರೆದಂತೆ ನಿಮ್ಮ ಆಲೋಚನೆಗಳನ್ನು ಅಳವಡಿಸಿಕೊಳ್ಳುವುದು ಯಶಸ್ಸಿಗೆ ಕಾರಣವಾಗುತ್ತದೆ. ಹೊಸವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡುವುದು ಉಚಿತ. ಯಾರಿಗೂ ತಿಳಿಸದೇ ಎಲ್ಲಿಗೋ ಹೋಗುವಿರಿ. ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಸಮಾರಂಭದಲ್ಲಿ ಮುಖ್ಯಸ್ಥಾನವನ್ನು ಪಡೆಯುವಿರಿ. ಅಪವಾದಗಳನ್ನು ಕೇಳುವ ಸ್ಥಿತಿಯೂ ಬರಬಹುದು. ಮನಸ್ಸಿನಲ್ಲಿ ದೃಢತೆ ಇರಲಿ. ನಿಮ್ಮನ್ನು ಅಳೆಯುತ್ತಿರುವರು ಎಂಬುದನ್ನು ಗಮನಿಸಿ. ಬಹಳ‌ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವಿರಿ.

ಕನ್ಯಾ ರಾಶಿ:

ನಿಮ್ಮ ಬಿಡುವಿನ ವೇಳೆಯನ್ನು ಸ್ವಯಂ ಸೇವಕರಾಗಿ ಅಥವಾ ಇತರರಿಗೆ ಸಹಾಯ ಮಾಡಲು ಕಳೆಯಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದ್ದು ನಿಮಗೆ ಅಚ್ಚರಿಯಾಗಬಹುದು. ನಿಮ್ಮ ಮಾತು ಕೇಳುವುದಿಲ್ಲ ಎಂದೆನಿಸುವುದು. ಸದ್ಯ ಗ್ರಹಗತಿಗಳ ಬದಲಾವಣೆಯಿಂದ ಇದು ಸಾಧ್ಯವಾಗಿದೆ. ಅದನ್ನು ದುರುಪಯೋಗಪಡಿಸಿಕೊಳ್ಳಬೇಡಿ. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು.

ತುಲಾ ರಾಶಿ:

ವಾಹನದ ಖರೀದಿಗೆ ಸಾಲ ಮಾಡುವಂತೆ ಪ್ರೇರಣೆ ಬರಲಿದೆ. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಪುಣ್ಯಸ್ಥಳಕ್ಕೆ ಹೊರಟ ನಊರಿಂದ ಊರಿಗೆ ವರ್ಗಾವಣೆಯಾಗುತ್ತಿರುವುದಕ್ಕೆ ಬೇಸರ ಮಾಡಿಕೊಳ್ಳುವಿರಿ. ಅದಕ್ಕೆ ನಿಮ್ಮ ಸ್ನೇಹಿತರು ಸಮಾಧಾನವನ್ನು ಮಾಡುವುದು ಬಿಟ್ಟು ಸೊಪ್ಪು ಹಾಕುವರು. ಎಷ್ಟೋ ದಿನದ ಹಿಂದೆ ಹೊಸ ವಸ್ತುಗಳನ್ನು ಖರೀದಿಸಿದ್ದು ಇಂದು ನಿಮಗೆ ನೆನಪಾಗುವುದು. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.

ವೃಶ್ಚಿಕ ರಾಶಿ:

ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹುಣ್ಣನ್ನು ಕೆದಕಿದಷ್ಟೂ ಅದು ದೊಡ್ಡ ಗಾಯವಾಗುವುದು. ಮಾತನಾಡದೇ ಸುಮ್ಮನಿರಿ. ತಾನಾಗಿಯೇ ತಣ್ಣಗಾಗುವುದು. ಯೋಜನೆಯಿಲ್ಲದೇ ಖರ್ಚನ್ನು ಹೆಚ್ಚು ಮಾಡಿಕೊಳ್ಳುವಿರಿ. ಅಸಂಭಾವ್ಯ ವಿಚಾರವನ್ನು ಸಂಭಾವ್ಯ ಮಾಡಿಕೊಂಡು ಹತಾಶರಾಗುವಿರಿ. ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದಿಕೆಯಾಗಲಿದೆ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.

ಧನು ರಾಶಿ:

ದುರಭ್ಯಾಸದ ಜನರ ಸಹವಾಸ ಇರುವುದು. ಒಳ್ಳೆಯ ಕಾಲ ಬರುವುದೆಂದು ಕಾದು ಕುಳಿತರೆ ಪ್ರಯೋಜನವಿಲ್ಲ. ಅಗ್ನಿಯ ಭಯದಿಂದ ಏನನ್ನೂ ಮಾಡಲು ಬೆಚ್ಚುವಿರಿ. ನಿಮ್ಮ ಕೆಲಸವನ್ನು ನೀವು ಮಾಡಿ. ಕಾಲ ಬಂದಾಗ ಅದು ಮಾಡಬೇಕಾದುದನ್ನು ಮಾಡುತ್ತದೆ. ಮಕ್ಕಳ ಭವಿಷ್ಯವು ಚೆನ್ನಾಗಿರಲು ಅವರ ಹೆಸರಿನಲ್ಲಿ ಹೂಡಿಕೆ ಮಾಡುವಿರಿ. ಕಷ್ಟವಾದರೂ ಇರುವ ಉದ್ಯೋಗವು ಯಥಾಸ್ಥಿತಿಯಲ್ಲಿ ಇರಲಿ. ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ.

ಮಕರ ರಾಶಿ:

ಹೆಚ್ಚುವರಿ ಆದಾಯವನ್ನು ಗಳಿಸಲು ನಿಮ್ಮ ಕ್ರೀಯಾಶೀಲತೆ ಅಗತ್ಯವಾಗಿ ಬೇಕು. ಹಿರಿಯರ ಸೇವೆಯನ್ನು ಬಲವಾದ ಕಾರಣವಿಲ್ಲದೇ ಮಾಡಲಾರಿರಿ. ಭೂಮಿಯ ವ್ಯವಹಾರವನ್ನು ಸದ್ಯ ಮುಂದುವರಿಸಬೇಡಿ. ನ್ಯಾಯಾಲಯದ ಮೆಟ್ಟಿಲೇರಿದ ದೂರು ಇಂದು ಇತ್ಯರ್ಥವಾದೀತು. ಕಲೆಗಳಲ್ಲಿ ಆಸಕ್ತಿ ಇಲ್ಲದೇ ನೀರಸವಾಗಿ ಇರುವಿರಿ. ಕಛೇರಿಯಲ್ಲಿ ಗೌರವ ಸಿಗಲಿದೆ. ಎಂದೂ ನಂಬದವರ ಮಾತನ್ನು ನೀವು ಇಂದು ನಂಬಬೇಕಾಗುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು.

ಕುಂಭ ರಾಶಿ:

ಮನೆಗೆ ಅತಿಥಿಗಳ ಆಗಮನವು ಹೊಸ ಹೊಳಪು ಕೊಡುವುದು. ಗೆಲುವು ಸಣ್ಣದಾದರೂ ಸಂಭ್ರಮ ಮಾತ್ರ ದೊಡ್ಡದಾಗಿರುವುದು. ಮೇಲಧಿಕಾರಿಗಳ ವರ್ತನೆಯಿಂದ ಉದ್ಯೋಗವನ್ನು ಬಿಡುವ ಯೋಚನೆ ಮಾಡುವಿರಿ ಮತ್ತು ಮುಂದಿನ ವೃತ್ತಿಜೀವನದ ಬಗ್ಗೆ ಗೊಂದಲವೂ ಇರಬಹುದು. ಮಿತ್ರರ ಸಹಾಯದಿಂದ ಬಂದೊದಗಿದ ಅಪಾಯವನ್ನು ದೂರಮಾಡಿಕೊಳ್ಳುವಿರಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಚುಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ.

ಮೀನ ರಾಶಿ:

ಇಂದು ನಿಮ್ಮ ಸಂತೋಷದ ಕ್ಷಣಗಳನ್ನು ನೀವೇ ಸೃಷ್ಟಿಸಿಕೊಳ್ಳುವಿರಿ. ಮನೆಯಲ್ಲಿ ನಿಮ್ಮ ಮಕ್ಕಳು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲಾರರು. ಅನುರೂಪ ಸಂಗಾತಿಯ ಭೇಟಿ ಮಾಡುವಿರಿ. ಆದರೆ ಅದು ನಿಮಗೆ ಗೊತ್ತಾಗದು. ಕುಟುಂಬದ ಹಿರಿಯರಿಗೆ ನೀಡಬೇಕಾದ ಗೌರವವನ್ನು ನೀಡಿ. ನಿದ್ರಾಹೀನತೆಯಿಂದ ಬಳಲುತ್ತಿದ್ದು ವಾತಾವರಣವು ನಿಮ್ಮ ನಿದ್ರೆಗೆ ಪೂರಕವಾಗಿರದೇ ಇರುವುದು ಕಾರಣವಾಗಿದೆ. ಕುಟುಂಬದಿಂದ ನಿರೀಕ್ಷಿಸುವ ವಸ್ತುವು ನಿಮಗೆ ಸಿಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಗಂಡ, ಕರಣ : ಬಾಲವ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:34, ಯಮಗಂಡ ಕಾಲ 05:55 – 07:32, ಗುಳಿಕ ಕಾಲ 09:48 – 10:44

-ಲೋಹಿತ್ ಹೆಬ್ಬಾರ್ – 8762924271 (what’s app only)

Source link

ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್ ಜೊತೆಗಿನ ವ್ಯಾಪಾರ ಒಪ್ಪಂದ ಜುಲೈ 15ರಿಂದ ಜಾರಿ – Kannada News | PM Modi’s Multi Alignment Approach Delivers Economic Outcomes India UK Trade Agreement will enter into force from July 15

ನವದೆಹಲಿ, ಜೂನ್ 17: ಪ್ರಧಾನಿ ನರೇಂದ್ರ ಮೋದಿ (PM Modi in France) ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಕೈಗೊಳ್ಳಲಾಗಿದೆ. ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ’ (CETA) ಮುಂಬರುವ ಜುಲೈ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಇದರೊಂದಿಗೆ ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಶೇ. 99ರಷ್ಟು ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ ಸಿಗಲಿದ್ದು, ಐಟಿ, ಫೈನಾನ್ಸ್ ಸೇರಿದಂತೆ 137ಕ್ಕೂ ಹೆಚ್ಚು ಸೇವಾ ವಲಯಗಳ ಉದ್ಯೋಗಿಗಳಿಗೆ ಮತ್ತು ಕಂಪನಿಗಳಿಗೆ ಭಾರಿ ಆರ್ಥಿಕ ಲಾಭವಾಗಲಿದೆ.

2021ರ ಮೇ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೈಗೊಂಡಿದ್ದ ‘ಭಾರತ-ಯುಕೆ ರೋಡ್‌ಮ್ಯಾಪ್ 2030’ರ ಅಡಿಯಲ್ಲಿ, 2030 ರ ವೇಳೆಗೆ ಉಭಯ ದೇಶಗಳ ದ್ವಿಪಕ್ಷೀಯ ವ್ಯಾಪಾರವನ್ನು 100 ಬಿಲಿಯನ್ ಡಾಲರ್‌ಗೆ ದ್ವಿಗುಣಗೊಳಿಸುವ ಗುರಿಯೊಂದಿಗೆ ಈ ಒಪ್ಪಂದವನ್ನು ರೂಪಿಸಲಾಗಿದೆ. 14 ಸುತ್ತುಗಳ ಸುದೀರ್ಘ ಮಾತುಕತೆಯ ನಂತರ 2025ರ ಜುಲೈನಲ್ಲಿ ಇದಕ್ಕೆ ಸಹಿ ಹಾಕಲಾಗಿತ್ತು, ಈಗ ಇದು ಜಾರಿಗೆ ಸಿದ್ಧವಾಗಿದೆ.

ಈ ಒಪ್ಪಂದದ ಅಡಿಯಲ್ಲಿ ಬ್ರಿಟನ್ ಮಾರುಕಟ್ಟೆಗೆ ರಫ್ತಾಗುವ ಭಾರತದ ಶೇ. 99ರಷ್ಟು ಸರಕುಗಳ ಮೇಲಿನ ಭಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳ ಮೇಲಿದ್ದ ಶೇ. 70ರವರೆಗೆ ಇದ್ದ ಸುಂಕ ಶೂನ್ಯವಾಗಲಿದೆ. ಕಡಲ ಉತ್ಪನ್ನಗಳ ಮೇಲಿನ ಶೇ. 21.5, ಎಂಜಿನಿಯರಿಂಗ್ ಮತ್ತು ಆಟೋ ಬಿಡಿಭಾಗಗಳ ಮೇಲಿನ ಶೇ. 18, ಚರ್ಮ ಮತ್ತು ಪಾದರಕ್ಷೆಗಳ ಮೇಲಿನ ಶೇ. 16 ಹಾಗೂ ಜವಳಿ ಮೇಲಿನ ಶೇ. 12ರಷ್ಟು ಸುಂಕಗಳು ಸಂಪೂರ್ಣ ರದ್ದಾಗಲಿವೆ.

ಇದನ್ನೂ ಓದಿ: ಸಿಗರೇಟ್ ಬಿಟ್ಟ ಮೆಲೋನಿ, ವಾಚ್ ಮರೆತ ಮ್ಯಾಕ್ರನ್, ಮತ್ತೆ ಮೆಲೋಡಿ ಮೋಡಿ; ಜಿ7 ಶೃಂಗಸಭೆಯ ವೈರಲ್ ಕ್ಷಣಗಳಿವು

ಇತ್ತೀಚಿನ ರಾಜತಾಂತ್ರಿಕ ಬಿಕ್ಕಟ್ಟುಗಳ ನಡುವೆಯೂ ಭಾರತ ಮತ್ತು ಕೆನಡಾ ನಡುವಿನ ಆರ್ಥಿಕ ಬಾಂಧವ್ಯ ಸುಧಾರಿಸುತ್ತಿರುವುದಕ್ಕೆ ಜಿ7 ಶೃಂಗಸಭೆ ಸಾಕ್ಷಿಯಾಗಿದೆ. ಉಭಯ ದೇಶಗಳ ನಾಯಕರ ಸಭೆಯ ಬಳಿಕ ಬಿಡುಗಡೆ ಮಾಡಲಾದ ಜಂಟಿ ಪ್ರಕಟಣೆಯಲ್ಲಿ, ‘ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ’ (CEPA) ಕುರಿತು ನಡೆಯುತ್ತಿರುವ ಮಾತುಕತೆಗಳ ಪ್ರಗತಿಯ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪ್ರಸಕ್ತ 2026ರ ವರ್ಷದ ಅಂತ್ಯದೊಳಗೇ ಈ ಮಹತ್ವದ ಒಪ್ಪಂದವನ್ನು ಅಂತಿಮಗೊಳಿಸುವ ಹಂಚಿಕೆಯ ಗುರಿಯನ್ನು ಉಭಯ ದೇಶಗಳು ಪುನರುಚ್ಚರಿಸಿವೆ.

ಇದನ್ನೂ ಓದಿ: ಮೋದಿ ಬಹಳ ಸುಂದರ ವ್ಯಕ್ತಿ, ಕೆಲಸದ ವಿಷಯದಲ್ಲಿ ಮಾತ್ರ ಕಿಲ್ಲರ್; ಗೆಳೆಯನನ್ನು ಹೊಗಳಿದ ಟ್ರಂಪ್

ಯಾವುದೇ ಒಂದು ನಿರ್ದಿಷ್ಟ ಜಾಗತಿಕ ಬಣಕ್ಕೆ ಸೀಮಿತವಾಗದೆ ಜಗತ್ತಿನ ಎಲ್ಲಾ ಪ್ರಮುಖ ರಾಷ್ಟ್ರಗಳೊಂದಿಗೆ ಸಮಾನ ಮತ್ತು ಸೌಹಾರ್ದಯುತ ಸಂಬಂಧವನ್ನು ಕಾಯ್ದುಕೊಳ್ಳುವ ಪ್ರಧಾನಿ ಮೋದಿಯವರ ‘ಮಲ್ಟಿ-ಅಲೈನ್‌ಮೆಂಟ್’ ವಿದೇಶಾಂಗ ನೀತಿಯು ಭಾರತಕ್ಕೆ ದೊಡ್ಡ ಮಟ್ಟದ ಆರ್ಥಿಕ ಯಶಸ್ಸನ್ನು ತಂದುಕೊಡುತ್ತಿದೆ. ಬ್ರಿಟನ್, ಕೆನಡಾ ಮತ್ತು ಇಡೀ ಯುರೋಪ್ ಮಾರುಕಟ್ಟೆಗಳು ಭಾರತದ ಪಾಲಿಗೆ ಮುಕ್ತವಾಗುತ್ತಿರುವುದು ಮುಂಬರುವ ದಿನಗಳಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಭಾರಿ ಕೊಡುಗೆ ನೀಡಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:20 pm, Wed, 17 June 26

Source link

ಒಮಾನ್​ನಲ್ಲಿ ಅಮೆರಿಕದ ದಾಳಿಗೆ ಬಲಿಯಾಗಿದ್ದ ಇಬ್ಬರು ಭಾರತೀಯ ನಾವಿಕರ ಶವಗಳು ಭಾರತಕ್ಕೆ ರವಾನೆ – Kannada News | Bodies of 2 Indian sailors killed in Oman after US attack brought home

ನವದೆಹಲಿ, ಜೂನ್ 17: ಒಮಾನ್ ಕೊಲ್ಲಿಯಲ್ಲಿ ಎಂಟಿ ಸೆಟೆಬೆಲೊ ವ್ಯಾಪಾರಿ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯ ನಾವಿಕರ ಶವಗಳನ್ನು ಭಾರತಕ್ಕೆ ತರಲಾಗಿದೆ. ಅಮೆರಿಕದ ದಾಳಿಗಳಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದು, ರಾಜತಾಂತ್ರಿಕ ಕಳವಳಗಳನ್ನು ಹುಟ್ಟುಹಾಕಿದೆ ಮತ್ತು ಸಂಘರ್ಷ ವಲಯಗಳಲ್ಲಿ ನಾಗರಿಕ ಹಡಗುಗಳ ಸುರಕ್ಷತೆಯ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಳೆದ ವಾರ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಗಲ್ಫ್ ಆಫ್ ಒಮಾನ್ ಸಮುದ್ರ ವಲಯದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಸರಕು ಸಾಗಣೆ ಹಡಗೊಂದರ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ಭಾರಿ ದಾಳಿ ನಡೆಸಿದ್ದವು. ಈ ಭೀಕರ ದಾಳಿಯಲ್ಲಿ ಹಡಗಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಭಾರತೀಯ ನಾವಿಕರು ಜೀವ ಕಳೆದುಕೊಂಡಿದ್ದರು. ಈ ಘಟನೆಯು ಭಾರತ ಮತ್ತು ಅಮೆರಿಕ ನಡುವಿನ ರಾಜತಾಂತ್ರಿಕ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು ಹಾಗೂ ಭಾರತ ಸರ್ಕಾರ ಇವರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಎಲ್ಲಾ ನಾವಿಕರು ಸೇಫ್; ಒಮಾನ್ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ಸುಳ್ಳೆಂದ ಭಾರತ

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರಂತರ ಪ್ರಯತ್ನ ಹಾಗೂ ರಾಜತಾಂತ್ರಿಕ ಪ್ರಕ್ರಿಯೆಗಳ ನಂತರ, ಸಾವನ್ನಪ್ಪಿದ ಇಬ್ಬರು ನಾವಿಕರ ಪಾರ್ಥಿವ ಶರೀರಗಳನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಯಶಸ್ವಿಯಾಗಿ ತರಲಾಗಿದೆ. ವಿಮಾನ ನಿಲ್ದಾಣಕ್ಕೆ ಶವಗಳು ತಲುಪುತ್ತಿದ್ದಂತೆ ಮೃತರ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ವಿಮಾನ ನಿಲ್ದಾಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮೃತರ ದೇಹಗಳನ್ನು ಸ್ವೀಕರಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಪಾರ್ಥಿವ ಶರೀರಗಳನ್ನು ಅವರವರ ಸ್ವಗ್ರಾಮಗಳಿಗೆ ಸಕಲ ಗೌರವಗಳೊಂದಿಗೆ ಅಂತಿಮ ಸಂಸ್ಕಾರಕ್ಕಾಗಿ ರವಾನಿಸಲಾಗಿದೆ. ಮೂರನೇ ನಾವಿಕನ ಶವವನ್ನು ತರಲು ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ಮೇಲೆ ದಾಳಿಯಾದರೆ ಅಮೆರಿಕ ರಕ್ಷಣೆಗೆ ಧಾವಿಸುತ್ತದೆ; ಮೋದಿಗೆ ಟ್ರಂಪ್ ಭರವಸೆ

“ಎಂಟಿ ಸೆಟೆಬೆಲೊ ಮೇಲಿನ ದಾಳಿಯಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡ ಆದಿತ್ಯ ಶರ್ಮಾ ಮತ್ತು ಶಿವಾನಂದ್ ಚೌರಾಸಿಯಾ ಅವರ ಮೃತದೇಹಗಳನ್ನು ಭಾರತಕ್ಕೆ ತರಲಾಗಿದೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು” ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ದ್ವಿಪಕ್ಷೀಯ ಮಾತುಕತೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಂದೆ ಈ ನಾವಿಕರ ಸಾವಿನ ವಿಷಯವನ್ನು ಅತ್ಯಂತ ಗಂಭೀರವಾಗಿ ಪ್ರಸ್ತಾಪಿಸಿದ್ದರು. ಜಾಗತಿಕ ಸಮುದ್ರ ಮಾರ್ಗಗಳಲ್ಲಿ ಲಕ್ಷಾಂತರ ಭಾರತೀಯ ನಾವಿಕರು ಕೆಲಸ ಮಾಡುತ್ತಿದ್ದು, ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ಮುಂಬರುವ ಒಪ್ಪಂದಗಳಲ್ಲಿ ಇವರ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಮೋದಿ ಒತ್ತಾಯಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಣ್ಣಗಾಗಿದ್ದ ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ – Kannada News | Another Communal Clash in Bhatkal: Protest Erupts Outside Police Station

ಕಾರವಾರ, ಜೂನ್​​ 17: ಹಿಂದೂ ಯುವತಿಯನ್ನು ಕರೆದುಕೊಂಡು ಕಾಡಿನತ್ತ ಹೋಗುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಸಂಘಟನೆಯ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಭಟ್ಕಳದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದರು. ಹಿಂದೂ ಯುವತಿ ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಭಟ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ತಡೆದಿದ್ದಾರೆ. ಭಟ್ಕಳದಿಂದ ಸಾಗರದ ಕಾಡಿನತ್ತ ಕರೆದೊಯ್ಯುತ್ತಿರುವುದು ಏಕೆ ಎಂದು ಮುಖಂಡರ ಪ್ರಶ್ನೆಗೆ ಉತ್ತರಿಸದ ಹಿನ್ನೆಲೆ ಬುದ್ಧಿವಾದ ಹೇಳುವಂತೆ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರಿಗೆ ಒಪ್ಪಿಸಿದ್ದ ಶ್ರೀಕಾಂತ್ ನಾಯ್ಕ್, ಕುಮಾರ್ ನಾಯ್ಕ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಸಂಘಟನೆ ಮುಖಂಡರು ಗರಂ ಆಗಿದ್ದು, ಪ್ರತಿಭಟನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IND W vs NED W: ನೆದರ್ಲ್ಯಾಂಡ್ಸ್ ವಿರುದ್ಧ 95 ರನ್‌ಗಳಿಂದ ಗೆದ್ದು ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ – Kannada News | India Women Shatter Records: Dominant 95 Run Win vs Netherlands in T20 World Cup 2026

ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ 2026 ರ 10 ನೇ ಪಂದ್ಯದಲ್ಲಿ ಭಾರತ ತಂಡ, ನೆದರ್ಲ್ಯಾಂಡ್ಸ್ ತಂಡವನ್ನು 95 ರನ್‌ಗಳಿಂದ ಸೋಲಿಸಿತು. ಈ ಮೂಲಕ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ರನ್‌ಗಳ ವಿಷಯದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆಯನ್ನು ಸೃಷ್ಟಿಸಿತು. ಈ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 209 ರನ್ ಗಳಿಸಿತು. 210 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ 114 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಶ್ರೀ ಚರಣಿ ನಾಲ್ಕು ವಿಕೆಟ್ ಪಡೆದರೆ, ಶಫಾಲಿ ವರ್ಮಾ ಮೂರು ವಿಕೆಟ್ ಪಡೆದರು. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದು ಗ್ರೂಪ್ ಎ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Source link

ಆಹಾರ ಕಲಬೆರಕೆ ಕುರಿತ ‘ದಿ ಇಂಡಿಯಾ ಸ್ಟೋರಿ’ ಸಿನಿಮಾಗೆ ಲೀಗಲ್ ನೋಟಿಸ್; ಕಾರಣ ಏನು? – Kannada News | Legal Notice to The India Story Movie ft Shreyas Talpade Kajal Aggarwal

ಬಾಲಿವುಡ್‌ನ ಪ್ರಸಿದ್ಧ ನಟ ಶ್ರೇಯಸ್ ತಲ್ಪಾಡೆ (Shreyas Talpade) ಹಾಗೂ ನಟಿ ಕಾಜಲ್ ಅಗರ್ವಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ, ಬಿಡುಗಡೆಗೆ ಸಿದ್ಧವಾಗಿರುವ ‘ದಿ ಇಂಡಿಯಾ ಸ್ಟೋರಿ: ಸ್ಲೋ ಪಾಯ್ಸನ್ ಇನ್ ಪ್ರೋಗ್ರೆಸ್’ (The India Story) ಸಿನಿಮಾ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದ ಟೀಸರ್ ಮತ್ತು ಪ್ರಚಾರದ ಇತರೆ ಕಂಟೆಂಟ್​ಗಳಲ್ಲಿ ಭಾರತೀಯ ಕೃಷಿ ಮತ್ತು ಡೈರಿ ಉದ್ಯಮವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಚಿತ್ರತಂಡಕ್ಕೆ ಲೀಗಲ್ ನೋಟಿಸ್ (Legal Notice) ನೀಡಲಾಗಿದೆ. ‘ಅಗ್ರಿ ಬಿಸಿನೆಸ್ ಸೆಂಟರ್’ ಮಾಲೀಕರಾದ ಭವೇಶ್ ಸೋಧಾ ಅವರ ಪರವಾಗಿ ವಕೀಲ ಹಿರಣ್ಯ ಪಾಂಡೆ ಅವರು ಜೂನ್ 15ರಂದು ಜೀ ಸ್ಟುಡಿಯೋಸ್, ಎಂಐಜಿ ಪ್ರೊಡಕ್ಷನ್ & ಸ್ಟುಡಿಯೋಸ್ ಹಾಗೂ ಚಿತ್ರದ ನಿರ್ಮಾಪಕರಿಗೆ 18 ಪುಟಗಳ ಸುದೀರ್ಘ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಭಾರತದ ಕೃಷಿ ವ್ಯವಸ್ಥೆಯನ್ನು ‘ಸ್ಲೋ ಪಾಯ್ಸನ್’ ಎಂದು ಚಿತ್ರೀಕರಿಸಿರುವುದು, ಕೀಟನಾಶಕಗಳ ಬಳಕೆ, ಆಹಾರ ಕಲಬೆರಕೆ ಮತ್ತು ಕ್ಯಾನ್ಸರ್ ಪ್ರಕರಣಗಳ ಹೆಚ್ಚಳದ ಬಗ್ಗೆ ಸಿನಿಮಾದಲ್ಲಿ ವೈಜ್ಞಾನಿಕ ಆಧಾರವಿಲ್ಲದ ಅಂಕಿ-ಅಂಶಗಳನ್ನು ನೀಡಿ ಉತ್ಪ್ರೇಕ್ಷೆ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಗಂಭೀರವಾಗಿ ಆಕ್ಷೇಪಿಸಲಾಗಿದೆ. ಇಂತಹ ದೃಶ್ಯಗಳು ದೇಶದ ಲಕ್ಷಾಂತರ ರೈತರು, ಹೈನುಗಾರರು, ಕೋಳಿ ಸಾಕಾಣಿಕೆದಾರರು ಮತ್ತು ಕೃಷಿ ಉದ್ಯಮಿಗಳ ಗೌರವಕ್ಕೆ ಧಕ್ಕೆ ತರುತ್ತವೆ ಹಾಗೂ ಸಾರ್ವಜನಿಕರಲ್ಲಿ ಅನಗತ್ಯ ಭೀತಿ ಹುಟ್ಟಿಸುತ್ತವೆ ಎಂದು ದೂರುದಾರರು ವಾದಿಸಿದ್ದಾರೆ.

ಪ್ರಮುಖವಾಗಿ ಮೂರು ದೃಶ್ಯ ಹಾಗೂ ಪ್ರತಿಪಾದನೆಗಳನ್ನು ನೋಟಿಸ್‌ನಲ್ಲಿ ಪ್ರಶ್ನಿಸಲಾಗಿದೆ. ಭಾರತದಲ್ಲಿ ಕೀಟನಾಶಕಗಳನ್ನು ಅತಿಯಾಗಿ ಬಳಸಲಾಗುತ್ತಿದೆ ಎಂದು ಟೀಸರ್‌ನಲ್ಲಿ ಬಿಂಬಿಸಲಾಗಿದೆ. ಆದರೆ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪ್ರತಿ ಹೆಕ್ಟೇರ್‌ಗೆ ಬಳಸುವ ಕೀಟನಾಶಕದ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ ಎಂದು ಲೀಗಲ್ ನೋಟಿಸ್​ನಲ್ಲಿ ಹೇಳಲಾಗಿದೆ. ಭಾರತದಲ್ಲಿ ಸಿಗುವ ಬಹುತೇಕ ಹಾಲು ಕಲಬೆರಕೆಯಾಗಿದೆ ಎಂದು ಸಿನಿಮಾದಲ್ಲಿ ತೋರಿಸಿರುವುದನ್ನು ದೂರುದಾರರು ವಿರೋಧಿಸಿದ್ದಾರೆ. ಸತ್ತ ಕೋಳಿಗೆ ಇಂಜೆಕ್ಷನ್ ನೀಡುತ್ತಿರುವ ದೃಶ್ಯ ಟೀಸರ್‌ನಲ್ಲಿದ್ದು, ಇದು ವೈಜ್ಞಾನಿಕವಾಗಿ ಅಸಾಧ್ಯ ಮತ್ತು ಜನರನ್ನು ದಾರಿ ತಪ್ಪಿಸುವಂತಿದೆ ಎಂದು ಹೇಳಲಾಗಿದೆ. ಅಲ್ಲದೆ, ಕೃಷಿ ಪದ್ಧತಿಗೂ ಕ್ಯಾನ್ಸರ್ ಹೆಚ್ಚಳಕ್ಕೂ ನೇರ ಸಂಬಂಧ ಕಲ್ಪಿಸಲು ಸೂಕ್ತ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಚಿತ್ರದಲ್ಲಿ ಬಳಸಿರುವ ಅಂಕಿ-ಅಂಶಗಳು ಮತ್ತು ದೃಶ್ಯಗಳಿಗೆ ಇರುವ ಮೂಲ ಆಧಾರ ಹಾಗೂ ವೈಜ್ಞಾನಿಕ ಪುರಾವೆಗಳನ್ನು ಬಹಿರಂಗಪಡಿಸಬೇಕು ಎಂದು ನೋಟಿಸ್‌ನಲ್ಲಿ ಒತ್ತಾಯಿಸಲಾಗಿದೆ. ಇದರೊಂದಿಗೆ, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಈ ಟೀಸರ್ ಅನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಕೋರಲಾಗಿದೆ. ಈ ನೋಟಿಸ್‌ನ ಪ್ರತಿಯನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಅಂದರೆ, ಸೆನ್ಸಾರ್ ಮಂಡಳಿಗೂ ಕಳುಹಿಸಲಾಗಿದೆ. ವಿವಾದಿತ ದೃಶ್ಯಗಳನ್ನು ತೆಗೆದುಹಾಕುವವರೆಗೆ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಬಾರದು. ಒಂದು ವೇಳೆ ಈಗಾಗಲೇ ನೀಡಿದ್ದರೆ ಅದನ್ನು ಹಿಂಪಡೆಯಬೇಕು ಎಂದು ಮನವಿ ಮಾಡಲಾಗಿದೆ.

ಇದನ್ನೂ ಓದಿ: ಭಾರತದ ಆಹಾರ ಕಲಬೆರಕೆ ದಂಧೆ ಬಿಚ್ಚಿಡಲಿದೆ ‘ದಿ ಇಂಡಿಯಾ ಸ್ಟೋರಿ’; ಗಮನ ಸೆಳೆದ ಟೀಸರ್

ಚಿತ್ರತಂಡಕ್ಕೆ ಈ ಬೇಡಿಕೆಗಳನ್ನು ಈಡೇರಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದ್ದು, ತಪ್ಪಿದರೆ ಚಿತ್ರದ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್‌ನಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ದೂರುದಾರರು ಎಚ್ಚರಿಕೆ ನೀಡಿದ್ದಾರೆ. ಚೇತನ್ ಡಿ.ಕೆ. ನಿರ್ದೇಶನದ ಈ ಸಿನಿಮಾ ಜುಲೈ 24ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ ಕಾನೂನಿನ ತೊಡಕು ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ – Kannada News | India UK Free Trade Agreement to be implemented from 2026 July 15th, says report

ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI

ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ ಮಹತ್ವದ ಒಪ್ಪಂದವು ಜುಲೈ 15 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಹಲವಾರು ವರ್ಷಗಳ ಮಾತುಕತೆ, ಜಿ -7 ಶೃಂಗಸಭೆಯ ಚರ್ಚೆಗಳು ಮತ್ತು ಎರಡೂ ದೇಶಗಳಲ್ಲಿನ ಸರ್ಕಾರಿ ಬದಲಾವಣೆಗಳ ನಂತರ ಈ 6.5 ಬಿಲಿಯನ್ ಡಾಲರ್ (ಸುಮಾರು ₹60,000 ಕೋಟಿಗೂ ಅಧಿಕ) ಮೌಲ್ಯದ ಈ ಐತಿಹಾಸಿಕ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದೆ. ಆರಂಭಿಕ ಹಂತದಲ್ಲೇ ಇದು 6.5 ಬಿಲಿಯನ್ ಡಾಲರ್ ಮೌಲ್ಯದ ಹೆಚ್ಚುವರಿ ವ್ಯಾಪಾರ ವೃದ್ಧಿಗೆ ಕಾರಣವಾಗಲಿದ್ದು, 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದುಪ್ಪಟ್ಟುಗೊಳಿಸುವ ಗುರಿ ಹೊಂದಿದೆ.

ಭಾರತಕ್ಕೆ ಆಗುವ ಪ್ರಮುಖ ಲಾಭಗಳೇನು?

ಈ ಒಪ್ಪಂದದಿಂದಾಗಿ ಭಾರತದ ಪ್ರಮುಖ ರಫ್ತು ವಲಯಗಳಿಗೆ ಭಾರಿ ಉತ್ತೇಜನ ಸಿಗಲಿದೆ. ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಜವಳಿ (Textiles), ಸಿದ್ಧ ಉಡುಪುಗಳು, ಚರ್ಮದ ಉತ್ಪನ್ನಗಳು, ಆಭರಣಗಳು ಮತ್ತು ಕೃಷಿ ಉತ್ಪನ್ನಗಳ ಮೇಲಿನ ರಫ್ತು ಸುಂಕ ಭಾರಿ ಪ್ರಮಾಣದಲ್ಲಿ ಕಡಿತಗೊಳ್ಳಲಿದೆ. ಇದರಿಂದ ಭಾರತೀಯ ವಸ್ತುಗಳಿಗೆ ಬ್ರಿಟನ್ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಬರಲಿದೆ.

ಇದನ್ನೂ ಓದಿ: ಗಣಿತ ಪರೀಕ್ಷೆಯಲ್ಲಿ 51 ಅಂಕ ಗಳಿಸಿದ್ದ ಹುಡುಗ ಇವತ್ತು ಭಾರತದ ಅತಿದೊಡ್ಡ ಖಾಸಗಿ ಬಾಹ್ಯಾಕಾಶ ಕಂಪನಿ ಒಡೆಯ

ಭಾರತದ ಪ್ರಮುಖ ಮಾಹಿತಿ ತಂತ್ರಜ್ಞಾನ (IT) ಕಂಪನಿಗಳು ಮತ್ತು ವೃತ್ತಿಪರರಿಗೆ (ಎಂಜಿನಿಯರ್‌ಗಳು, ಆರೋಗ್ಯ ಸಿಬ್ಬಂದಿ) ಬ್ರಿಟನ್‌ನಲ್ಲಿ ಸುಲಭವಾಗಿ ಸೇವೆ ಒದಗಿಸಲು ಮತ್ತು ವೀಸಾ ಪ್ರಕ್ರಿಯೆಗಳನ್ನು ಸರಳಗೊಳಿಸಲು ಈ ಒಪ್ಪಂದ ನೆರವಾಗಲಿದೆ.

ಬ್ರಿಟನ್ (UK) ದೇಶಕ್ಕೆ ಸಿಗುವ ಅನುಕೂಲಗಳೇನು?

ಬ್ರಿಟನ್‌ನಿಂದ ಭಾರತಕ್ಕೆ ಆಮದಾಗುವ ಪ್ರಸಿದ್ಧ ಸ್ಕಾಚ್ ವಿಸ್ಕಿ (Scotch Whisky), ಪ್ರೀಮಿಯಂ ಕಾರುಗಳು ಮತ್ತು ಅತ್ಯಾಧುನಿಕ ಯಂತ್ರೋಪಕರಣಗಳ ಮೇಲಿನ ಆಮದು ಸುಂಕವನ್ನು (Import Duties) ಭಾರತವು ಹಂತಹಂತವಾಗಿ ಕಡಿಮೆ ಮಾಡಲಿದೆ.

ಬ್ರಿಟನ್‌ನ ಹಣಕಾಸು ಸೇವೆಗಳು, ಬ್ಯಾಂಕಿಂಗ್ ಮತ್ತು ವಿಮಾ ಕಂಪನಿಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಹಾದಿ ಸುಗಮವಾಗಲಿದೆ.

ರಾಜತಾಂತ್ರಿಕ ಮಹತ್ವ

ಬ್ರಿಟನ್‌ನಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದೊಂದಿಗೆ ಮಾಡಿಕೊಳ್ಳುತ್ತಿರುವ ಮೊದಲ ಅತಿ ದೊಡ್ಡ ಜಾಗತಿಕ ಒಪ್ಪಂದ ಇದಾಗಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ವೀಸಾ ನಿಯಮಗಳು ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳ (Intellectual Property Rights) ವಿಷಯದಲ್ಲಿ ಉಂಟಾಗಿದ್ದ ಬಿಕ್ಕಟ್ಟನ್ನು ಉಭಯ ನಾಯಕರು ಈ ಮಾತುಕತೆಯ ಮೂಲಕ ಯಶಸ್ವಿಯಾಗಿ ಬಗೆಹರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಐಐಎಂ ಕ್ಯಾಂಪಸ್​ನಲ್ಲಿ ಹೊಸ ಕಾಲೇಜು; ಎರಡು ಪದವಿ ಕೋರ್ಸ್​ಗಳು ಆಫರ್; ಟಾಟಾ ಟ್ರಸ್ಟ್ಸ್​ನಿಂದ ಅನುದಾನ

ಉದ್ಯೋಗ ಸೃಷ್ಟಿಯ ನಿರೀಕ್ಷೆ

ಈ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ ಭಾರತದಲ್ಲಿ ಉತ್ಪಾದನಾ ವಲಯ ಚುರುಕುಗೊಳ್ಳಲಿದ್ದು, ಮುಂದಿನ ಐದು ವರ್ಷಗಳಲ್ಲಿ ಲಕ್ಷಾಂತರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಇದು ಜಾಗತಿಕ ಪೂರೈಕೆ ಸರಪಳಿಯಲ್ಲಿ (Global Supply Chain) ಭಾರತದ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಮೋಡ ಕವಿದ ವಾತಾವರಣ’: ಹೊಸ ಹೀರೋ ಪರಿಚಯಕ್ಕೆ ಟೀಸರ್ ತೋರಿಸಿದ ಸಿಂಪಲ್ ಸುನಿ – Kannada News | Simple Suni new movie Moda Kavida Vaatavarana hero teaser ft Sheelam M Swamy Moksha Kushal

ನಿರ್ದೇಶಕ ಸಿಂಪಲ್ ಸುನಿ (Simple Suni) ಅವರ ಸಿನಿಮಾಗಳಲ್ಲಿ ಒಂದಲ್ಲಾ ಒಂದು ವಿಶೇಷತೆ ಇದ್ದೇ ಇರುತ್ತದೆ ಎಂಬ ನಂಬಿಕೆ ಅಭಿಮಾನಿಗಳಿಗೆ ಇದೆ. ಪ್ರತಿ ಸಿನಿಮಾದಲ್ಲಿ ಸುನಿ ಅವರ ಆ ನಂಬಿಕೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಸ್ಟಾರ್ ಸಿನಿಮಾ ಆಗಿರಲಿ, ಹೊಸಬರ ಸಿನಿಮಾ ಆಗಿರಲಿ, ಸುನಿ ನಿರ್ದೇಶನದಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ. ಈಗ ಅವರು ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾದಲ್ಲಿ ಹೊಸ ನಟ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆ ಆಯಿತು.

‘ಒಂದು ಸರಳ ಪ್ರೇಮಕಥೆ’, ‘ಗತ ವೈಭವ’ ಸಿನಿಮಾಗಳ ಬಳಿಕ ಸಿಂಪಲ್ ಸುನಿ ಅವರ ನಿರ್ದೇಶನದಲ್ಲಿ ಬರುತ್ತಿರುವ ಮತ್ತೊಂದು ಸೊಗಸಾದ ಪ್ರೇಮ ಕಥೆಯ ಚಿತ್ರವೇ ‘ಮೋಡ ಕವಿದ ವಾತಾವರಣ’. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಈ ಚಿತ್ರದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಪ್ರಚಾರದ ಭಾಗವಾಗಿ ಟೀಸರ್ ರಿಲೀಸ್ ಆಗಿದೆ.

ಟೀಸರ್ ಬಿಡುಗಡೆ ಬಳಿಕ ಸುನಿ ಅವರು ಸಿನಿಮಾ ಮತ್ತೆ ಮಾತನಾಡಿದರು. ‘ಮೋಡ ಕವಿದ ವಾತಾವರಣ ನನ್ನ ಜೀವನದ ಸ್ಪೆಷಲ್ ಸಿನಿಮಾ. ನಾನು ಟ್ರೇಲರ್ ಚೆನ್ನಾಗಿ ಕಟ್ ಮಾಡುತ್ತೇನೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ ಈ ಸಿನಿಮಾ ಚಾಲೆಂಜ್ ಏನೆಂದರೆ ಟ್ರೇಲರ್ ಕಟ್ ಚೆನ್ನಾಗಿ ಮಾಡಲು ಆಗುವುದಿಲ್ಲ. ಚಿತ್ರದ ಅರ್ಧ ಪಾರ್ಟ್ ನಾನು ಚಿತ್ರಮಂದಿರದಲ್ಲೇ ರಿವೀಲ್ ಮಾಡುವುದು. ಸಿನಿಮಾದಲ್ಲಿ ಏನೋ ಒಂದು ಅಂಶವಿದೆ. ಅದನ್ನು ಥಿಯೇಟರ್​ನಲ್ಲೇ ನೋಡಬೇಕು. ಹೀಗಾಗಿ ಅರ್ಧ ಸಿನಿಮಾದಲ್ಲಿ ಟ್ರೇಲರ್ ಕಟ್ ಮಾಡಿದ್ದೇವೆ’ ಎಂದು ಅವರು ಹೇಳಿದರು.

‘ಮೋಡ ಕವಿದ ವಾತಾವರಣ’ ಸಿನಿಮಾದ ಟೀಸರ್:

ಹೀರೋ ಆಗಿದ್ದಕ್ಕೆ ನಟ ಶೀಲಮ್ ಅವರಿಗೆ ಸಖತ್ ಖುಷಿ ಇದೆ. ಈ ಕುರಿತು ಅವರು ಮಾತನಾಡಿದ್ದಾರೆ. ‘ಎಲ್ಲರೂ ಹೀರೋ ಆಗಲು ಸಾಧ್ಯವಿಲ್ಲ. ಎಷ್ಟೇ ದುಡ್ಡಿದ್ದರೂ, ಎಷ್ಟೇ ನಟನೆ ಗೊತ್ತಿದ್ದರೂ, ನೋಡಲು ಚೆನ್ನಾಗಿದ್ದರೂ ಆಗಲ್ಲ. ಎಲ್ಲವನ್ನೂ ದಾಟಿ ಪವಾಡ ಆಗಬೇಕು. ನನ್ನ ಜೀವನದಲ್ಲಿ ಅದು ಆಗಿದೆ. ಇದಕ್ಕೆ ಕಾರಣ ಸುನಿ ಸರ್. ನಿರ್ಮಾಪಕ ರಮೇಶ್ ಸರ್ ಈ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸಿಂಪಲ್ ಸುನಿ

ಜೂನ್ 26ಕ್ಕೆ ‘ಮೋಡ ಕವಿದ ವಾತಾವರಣ’ ಸಿನಿಮಾ ಬಿಡುಗಡೆ ಆಗಲಿದೆ. ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ‘ರಾಮ್‌ ಮೂವೀಸ್’ ಈಗ ಈ ಸಿನಿಮಾವನ್ನು ನಿರ್ಮಿಸಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ, ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ. ಸಂತೋಷ್ ರೈ ಪಾತಾಜೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಅವರ ಸಂಗೀತ ನಿರ್ದೇಶನ ಮತ್ತು ಆದಿತ್ಯ ಕಶ್ಯಪ್ ಅವರ ಸಂಕಲನ‌ ಈ ಚಿತ್ರಕ್ಕಿದೆ. ಈ ಸಿನಿಮಾದಲ್ಲಿ ಸೈಂಟಿಫಿಕ್‌ ಫಿಕ್ಷನ್‌ ಲವ್ ಸ್ಟೋರಿ ಇದೆ ಎಂದು ಚಿತ್ರತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ – Kannada News | Major Blow! Shreyanka Patil Seriously Injured at 2026 Women’s T20 World Cup

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಖಚಿತವಾಗಿ ತಿಳಿಯಲಿದೆ.

ಟೀಂ ಇಂಡಿಯಾ ನೀಡಿದ 209 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡದ ಇನ್ನಿಂಗ್ಸ್‌ನ ಆರನೇ ಓವರ್‌ನ ಮೊದಲ ಎಸೆತದಲ್ಲಿ ಈ ದುರಂತ ಸಂಭವಿಸಿತು. ಈ ಪಂದ್ಯದಲ್ಲಿ ಮೊದಲ ಓವರ್ ಬೌಲ್ ಮಾಡಲು ಬಂದ ಶ್ರೇಯಾಂಕ ಪಾಟೀಲ್ ಎಸೆದ ಮೊದಲ ಎಸೆತವನ್ನು ಸ್ಟ್ರೈಕ್‌ನಲ್ಲಿದ್ದ ಮೊಲ್ಕೆನ್‌ಬೋರ್ ಮಿಡ್-ಆನ್ ಕಡೆಗೆ ಆಡಿದರು. ಹೀಗಾಗಿ ಶ್ರೇಯಾಂಕ ಬೌಲಿಂಗ್ ಮಾಡಿದ ಬಳಿಕ ಚೆಂಡನ್ನು ಹಿಡಿಯಲು ಅದರ ಹಿಂದೆ ಓಡಿದರು. ಚೆಂಡಿನ ಬಳಿ ಹೋದ ಶ್ರೇಯಾಂಕ ಅದನ್ನು ತೆಗೆದುಕೊಳ್ಳಲು ಕೆಳಕ್ಕೆ ಬಾಗಿದರು. ಈ ಪ್ರಕ್ರಿಯೆಯಲ್ಲಿ ಶ್ರೇಯಾಂಕ ಸಮತೋಲನ ಕಳೆದುಕೊಂಡರು. ಹೀಗಾಗಿ ಅವರ ಬಲಗಾಲು ತಿರುಚಿತು.

Published On – 10:06 pm, Wed, 17 June 26

Source link