Category Archives: Blog

Your blog category

ಮೃತರನ್ನೂ ಬಿಡದ ಕಳ್ಳರು: ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು – Kannada News | Udupi: Gold Jewellery Weighing 18 Grams Stolen from Accident Victim

ಉಡುಪಿ, ಮೇ 24: ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡವರನ್ನೂ ಬಿಡದ ಕಳ್ಳರು, ಮೃತ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಲಪಟಾಯಿಸಿರುವ (gold theft) ಅಮಾನವೀಯ ಘಟನೆ ಉಡುಪಿ (udupi) ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಖ್ಯಾಂಶಗಳು

  • ಮೃತ ಮಹಿಳೆ ಮೈಮೇಲಿದ್ದ ಒಡವೆಗೆ ಕನ್ನ ಹಾಕಿದ ಖದೀಮರು
  • ಅಪಘಾತದಲ್ಲಿ ಮೃತಪಟ್ಟವರನ್ನೂ ಬಿಡದ ಕಳ್ಳರು
  • ಕೊಲ್ಲೂರು ಠಾಣೆಯಲ್ಲಿ ದೂರು ದಾಖಲು

ನಡೆದಿದ್ದೇನು?

ಮೇ 17ರಂದು ಕೊಲ್ಲೂರಿನ ದಳಿ ಎಂಬಲ್ಲಿ ಕೇರಳಂ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ​ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಆದರೆ, ಅಪಘಾತದ ಕರುಣಾಜನಕ ಪರಿಸ್ಥಿತಿಯಲ್ಲೂ ಕಳ್ಳರು ತಮ್ಮ ವಿಕೃತ ಬುದ್ಧಿ ತೋರಿಸಿದ್ದು, ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದಾರೆ.

ಇದನ್ನೂ ಓದಿ: ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ

ಅಪಘಾತ ನಡೆದ ಸ್ಥಳದಲ್ಲಿ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನೇ ಬಂಡವಾಳ ಮಾಡಿಕೊಂಡ ಖದೀಮರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದು ಒಂದು ವಾರದ ಬಳಿಕ ಜ್ಯೋತಿ ಅವರ ಕುಟುಂಬಸ್ಥರಿಗೆ ಚಿನ್ನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದ್ದು, ಇದೀಗ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತರೊಬ್ಬರ ಒಡವೆಗಳನ್ನು ಕದ್ದ ಕಳ್ಳರ ಈ ನೀಚ ಕೃತ್ಯಕ್ಕೆ ಸ್ಥಳೀಯರು ತೀವ್ರ ಆಕ್ರೋಶ ಹಾಗೂ ಬೇಸರ ವ್ಯಕ್ತಪಡಿಸಿದ್ದಾರೆ.

ಕಾರಿನಲ್ಲಿ ಬಂದು ಸರ ಕದಿದ್ದ ಹೈಟೆಕ್ ಕಳ್ಳನ ಬಂಧನ

ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದ ಬಳಿ ಮೇ 23ರಂದು ನಡೆದ ಸರಗಳ್ಳತನ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಫೋರ್ಡ್ ಇಕೋಸ್ಪೋರ್ಟ್ ಕಾರಿನಲ್ಲಿ ಬಂದು ಯುವತಿಯ ಕೊರಳಿನಲ್ಲಿದ್ದ 10 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಹೈಟೆಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಬಂಧಿತ ಆರೋಪಿ.

ಇದನ್ನೂ ಓದಿ: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಆರೋಪಿ ಮಂಜುನಾಥ್​​ ಮೇ 13ರಂದಷ್ಟೇ ವಿವಾಹವಾಗಿದ್ದ. ಶೋಕಿಗಾಗಿ ಸರಗಳ್ಳತನ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಮಂಜುನಾಥ್‌ನನ್ನು ಬಂಧಿಸಿದ್ದು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು 10 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:37 pm, Sun, 24 May 26

Source link

ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ.  ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ.  ಇನ್ನುಳಿದ  11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ.

ಮುಖ್ಯಾಂಶಗಳು

  • ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ
  • ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಘಟನೆ
  • ತಟ್ಟೆಹಕ್ಕಲು ನದಿಯಲ್ಲಿ 11 ಜನರು ನೀರುಪಾಲಾಗಿರುವ ಶಂಕೆ
  • ಮೂವರ ಮೃತದೇಹ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್
  • ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ಒಂದೇ ಕುಟುಂಬದ 14 ಜನ
  • ತಟ್ಟೆಹಕ್ಕಲು ನದಿಯಲ್ಲಿ ನೀರುಪಾಲಾಗಿರುವ 11 ಜನರಿಗಾಗಿ ಶೋಧ
  • ಘಟನಾ ಸ್ಥಳಕ್ಕೆ ಭಟ್ಕಳ ಠಾಣೆ ಪೊಲೀಸರ ಭೇಟಿ, ಪರಿಶೀಲನೆ

ಕಪ್ಪೆಚಿಪ್ಪು ತೆಗೆಯಲು ಹೋಗದ 14 ಜನರ ಪೈಕಿ ಮೂವರ ಮೃತದೇಹಗಳು ಪತ್ತೆಯಾಗಿದ್ದು,  ಮೃತದೇಹಗಳನ್ನ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ, ಇನ್ನುಳಿದ 11 ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಕಪ್ಪೆಚಿಪ್ಪು ತೆಗೆಯಲು ಹೋದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಎಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.

Source link

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ – Kannada News | India US Energy: Jaishankar Highlights Stable, Affordable Supply & Trade Boost

ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI

ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ ಇಂಧನ (Energy) ವ್ಯಾಪಾರವು ಇತ್ತೀಚಿನ ದಿನಗಳಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ಎಸ್. ಜೈಶಂಕರ್ ಅವರು ಅಮೆರಿಕ ಮತ್ತು ಭಾರತದ ನಡುವಿನ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದರು. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆಯೂ ಉಭಯ ದೇಶಗಳ ಇಂಧನ ವ್ಯಾಪಾರದಲ್ಲಿ ಭಾರಿ ಏರಿಕೆ (Uptick) ಕಂಡುಬಂದಿದೆ ಎಂದರು. “ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಮತ್ತು ಜವಾಬ್ದಾರಿಯೆಂದರೆ ಭಾರತದ 140 ಕೋಟಿ ಜನರಿಗೆ ಕೈಗೆಟುಕುವ ದರದಲ್ಲಿ ಹಾಗೂ ಸುಲಭವಾಗಿ ಇಂಧನ ಸಿಗುವಂತೆ ಮಾಡುವುದಾಗಿದೆ” ಎಂದು ಜೈಶಂಕರ್ ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

ಇದನ್ನೂ ಓದಿ: ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ

ಪಶ್ಚಿಮ ಏಷ್ಯಾ ಪ್ರಕ್ಷುಬ್ಧತೆ ಮತ್ತು ಜಾಗತಿಕ ಸವಾಲುಗಳು

ಪಶ್ಚಿಮ ಏಷ್ಯಾದಲ್ಲಿ (Middle East) ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾಗುತ್ತಿರುವ ಅಡೆತಡೆಗಳ ಕುರಿತು ಇಬ್ಬರೂ ನಾಯಕರು ಸುದೀರ್ಘವಾಗಿ ಚರ್ಚಿಸಿದರು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಭಾರತದ ಇಂಧನ ಭದ್ರತೆಯನ್ನು ಕಾಪಾಡುವಲ್ಲಿ ಅಮೆರಿಕದೊಂದಿಗಿನ ಸಹಕಾರವು ಅತ್ಯಂತ ಪ್ರಮುಖವಾಗಿದೆ ಎಂದು ಭಾರತದ ಕಡೆಯಿಂದ ವಿವರಿಸಲಾಯಿತು.

ಕೇವಲ ಸಾಂಪ್ರದಾಯಿಕ ಇಂಧನ ಮಾತ್ರವಲ್ಲದೆ, ಪರಮಾಣು ಇಂಧನ (Nuclear Energy) ವಲಯದಲ್ಲೂ ಸಹಕಾರವನ್ನು ಹೆಚ್ಚಿಸುವ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಯಿತು. ಇದರೊಂದಿಗೆ, ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಂಬಂಧವನ್ನು ಗಟ್ಟಿಗೊಳಿಸಲು ರಕ್ಷಣಾ ಪಾಲುದಾರಿ ಚೌಕಟ್ಟು, ಮುಕ್ತ ಇಂಡೋ-ಪೆಸಿಫಿಕ್ ವಲಯದ ಸುರಕ್ಷತೆ ಮತ್ತು ಕ್ವಾಡ್ (Quad) ಒಕ್ಕೂಟದ ಮುಂದಿನ ಕಾರ್ಯಸೂಚಿಗಳ ಬಗ್ಗೆಯೂ ಚರ್ಚೆಗಳು ನಡೆದವು.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವೇಗ

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರ ಭಾರತದ ಭೇಟಿಯು ಉಭಯ ದೇಶಗಳ ನಡುವಿನ ವ್ಯಾಪಾರ, ಹೂಡಿಕೆ, ಇಂಧನ ಮತ್ತು ಅತ್ಯಾಧುನಿಕ ತಂತ್ರಜ್ಞಾನ (Critical Technology) ವಲಯದ ಮೈತ್ರಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟರು.

ಜಗತ್ತಿನ ಎರಡು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕಗಳು ಜಾಗತಿಕ ಸವಾಲುಗಳನ್ನು ಒಟ್ಟಾಗಿ ಎದುರಿಸಲು ಬದ್ಧವಾಗಿವೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಪುನರುಚ್ಚರಿಸಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಆರಂಭ; ಸಂಬಳ ಮತ್ತು ಅರ್ಹತಾ ವಿವರ ಇಲ್ಲಿದೆ – Kannada News | SSC CGL recruitment 2026: What are the positions for which CGL recruitment is available

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ

ದೇಶದ ಅತಿ ದೊಡ್ಡ ಮತ್ತು ಪ್ರತಿಷ್ಠಿತ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಒಂದಾದ ಸಿಬ್ಬಂದಿ ಆಯ್ಕೆ ಆಯೋಗದ (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) 2026 ರ ಪರೀಕ್ಷೆಯ ಅರ್ಜಿ ಪ್ರಕ್ರಿಯೆಯು ಅಧಿಕೃತವಾಗಿ ಪ್ರಾರಂಭವಾಗಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ಬಯಸುವ ಲಕ್ಷಾಂತರ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 22 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಪ್ರಕ್ರಿಯೆಯು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರತಿಷ್ಠಿತ ‘ಗ್ರೂಪ್ ಬಿ’ ಮತ್ತು ‘ಗ್ರೂಪ್ ಸಿ’ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ವಿವಿಧ ಹುದ್ದೆಗಳಿಗೆ ನಿಗದಿಪಡಿಸಲಾದ ಸಂಬಳ, ವಯೋಮಿತಿ ಮತ್ತು ಅರ್ಹತೆಯ ಸಂಪೂರ್ಣ ವಿವರ ಇಲ್ಲಿದೆ.

ಶೈಕ್ಷಣಿಕ ಅರ್ಹತೆ:

SSC CGL ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Degree) ಪಾಸ್ ಆಗಿರಬೇಕು. ಹೆಚ್ಚಿನ ಹುದ್ದೆಗಳಿಗೆ ಸಾಮಾನ್ಯ ಪದವಿ ಸಾಕಾಗುತ್ತದೆ. ಆದರೆ, ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ (JSO) ಮತ್ತು ಸ್ಟ್ಯಾಟಿಸ್ಟಿಕಲ್ ಇನ್ವೆಸ್ಟಿಗೇಟರ್‌ನಂತಹ ವಿಶೇಷ ಹುದ್ದೆಗಳಿಗೆ ಅಂಕಿಅಂಶಗಳಿಗೆ (Statistics) ಸಂಬಂಧಿಸಿದ ನಿರ್ದಿಷ್ಟ ಶೈಕ್ಷಣಿಕ ಅರ್ಹತೆ ಅತ್ಯಗತ್ಯವಾಗಿದೆ.

ವಿವಿಧ ಪೇ-ಲೆವೆಲ್ ಹಾಗೂ ಹುದ್ದೆಗಳ ವಿವರ:

ಕೇಂದ್ರ ಸರ್ಕಾರದ ಈ ಹುದ್ದೆಗಳನ್ನು ವೇತನ ಶ್ರೇಣಿಯ ಆಧಾರದ ಮೇಲೆ ವಿವಿಧ ಹಂತಗಳಾಗಿ ವಿಂಗಡಿಸಲಾಗಿದೆ:

ಪೇ ಲೆವೆಲ್-8 (Pay Level-8):

  • ಪ್ರಮುಖ ಹುದ್ದೆಗಳು: ಸಹಾಯಕ ಲೆಕ್ಕಪರಿಶೋಧಕ ಅಧಿಕಾರಿ (Assistant Audit Officer) ಮತ್ತು ಸಹಾಯಕ ಲೆಕ್ಕಪತ್ರ ಅಧಿಕಾರಿ (Assistant Accounts Officer).
  • ಇಲಾಖೆ: ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ (C&AG) ಅಡಿಯಲ್ಲಿ ಈ ನೇಮಕಾತಿ ನಡೆಯುತ್ತದೆ.
  • ವೇತನ ಶ್ರೇಣಿ: 47,600 ರಿಂದ 1,51,100ರೂ. ವರೆಗೆ.
  • ವಯೋಮಿತಿ: 18 ರಿಂದ 30 ವರ್ಷಗಳು.

ಪೇ ಲೆವೆಲ್-7 (Pay Level-7):

  • ಪ್ರಮುಖ ಹುದ್ದೆಗಳು: ಸಹಾಯಕ ವಿಭಾಗ ಅಧಿಕಾರಿ (ASO), ಆದಾಯ ತೆರಿಗೆ ನಿರೀಕ್ಷಕರು (Income Tax Inspector), ಕೇಂದ್ರ ಅಬಕಾರಿ ನಿರೀಕ್ಷಕರು (Central Excise Inspector), ಜಾರಿ ನಿರ್ದೇಶನಾಲಯದಲ್ಲಿ (ED) ಸಹಾಯಕ ಜಾರಿ ಅಧಿಕಾರಿ ಮತ್ತು ಸಿಬಿಐ (CBI) ನ ಸಬ್-ಇನ್ಸ್‌ಪೆಕ್ಟರ್.
  • ವೇತನ ಶ್ರೇಣಿ: 44,900 ರಿಂದ 1,42,400 ರೂ. ವರೆಗೆ.
  • ವಯೋಮಿತಿ: ಹೆಚ್ಚಿನ ಹುದ್ದೆಗಳಿಗೆ 18 ರಿಂದ 30 ವರ್ಷಗಳು.

ಪೇ ಲೆವೆಲ್-6 (Pay Level-6):

  • ಪ್ರಮುಖ ಹುದ್ದೆಗಳು: ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ (JSO), ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ (NIA) ಸಬ್-ಇನ್ಸ್‌ಪೆಕ್ಟರ್, ರಿಸರ್ಚ್ ಅಸಿಸ್ಟೆಂಟ್ ಮತ್ತು ಡಿವಿಷನಲ್ ಅಕೌಂಟೆಂಟ್.
  • ವೇತನ ಶ್ರೇಣಿ: 35,400 ರಿಂದ 1,12,400 ರೂ. ವರೆಗೆ.
  • ವಯೋಮಿತಿ: ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ ವಯಸ್ಸಿನ ಮಿತಿ 32 ವರ್ಷಗಳು.

ಇದನ್ನೂ ಓದಿ: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಪೇ ಲೆವೆಲ್-5 ಮತ್ತು ಪೇ ಲೆವೆಲ್-4:

  • ಪ್ರಮುಖ ಹುದ್ದೆಗಳು: ಆಡಿಟರ್ (Auditor), ಅಕೌಂಟೆಂಟ್ (Accountant), ತೆರಿಗೆ ಸಹಾಯಕ (Tax Assistant), ಅಂಚೆ ಸಹಾಯಕ (Postal Assistant) ಮತ್ತು ಹಿರಿಯ ಕಾರ್ಯದರ್ಶಿ ಸಹಾಯಕ (SSA).
  • ವೇತನ ಶ್ರೇಣಿ: ಆರಂಭಿಕ ವೇತನ 25,500 ರಿಂದ 92,300 ರೂ. ವರೆಗೆ ಇರುತ್ತದೆ.
  • ವಯೋಮಿತಿ: ಹೆಚ್ಚಿನ ಹುದ್ದೆಗಳಿಗೆ 18 ರಿಂದ 27 ವರ್ಷಗಳು.

ಅಭ್ಯರ್ಥಿಗಳ ಗಮನಕ್ಕೆ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಾವು ಆಯ್ಕೆ ಮಾಡಿಕೊಳ್ಳುವ ನಿರ್ದಿಷ್ಟ ಹುದ್ದೆಯ ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ ಮತ್ತು ದೈಹಿಕ ಸಾಮರ್ಥ್ಯದ (ಅನ್ವಯಿಸುವ ಹುದ್ದೆಗಳಿಗೆ ಮಾತ್ರ) ನಿಯಮಾವಳಿಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಎಚ್ಚರಿಕೆಯಿಂದ ಪರಿಶೀಲಿಸಿ, ಕೊನೆಯ ದಿನಾಂಕದ (ಜೂನ್ 22) ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:10 pm, Sun, 24 May 26

Source link

IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

Source link

MI vs RR IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ – Kannada News | IPL, IPL 2026, Mumbai Indians vs Rajasthan Royals score updates, Mumbai Indians vs Rajasthan Royals score, Mumbai Indians vs Rajasthan Royals score now, Mumbai Indians vs Rajasthan Royals today, IPL score today, IPL score now, live cricket score, cricket score online, today match score

ಐಪಿಎಲ್ 2026 ಈಗ ಅಂತಿಮ ಹಂತವನ್ನು ತಲುಪುತ್ತಿದೆ. ಲೀಗ್ ಹಂತವು ಮೇ 24 ರ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಈ ಸುತ್ತಿನ ಕೊನೆಯ ಎರಡು ಪಂದ್ಯಗಳು ಡಬಲ್ ಹೆಡರ್‌ಗಳಾಗಿ ನಡೆಯಲಿವೆ. ದಿನದ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಮುಂಬೈ ತಂಡವು ಕಳೆದುಕೊಳ್ಳಲು ಏನೂ ಇಲ್ಲ, ಆದರೆ ರಾಜಸ್ಥಾನವು ಗೆಲುವಿನೊಂದಿಗೆ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಳ್ಳವ ಇರಾದೆಯಲ್ಲಿದೆ.

Source link

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ – Kannada News | Jana Nayagan movie producer Venkat K Narayan talks about movie’s release

ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ ನಾಯಗನ್’ ಸಿನಿಮಾದ ಸೆನ್ಸಾರ್ ಪ್ರಮಾಣ ಪತ್ರ ಮತ್ತು ಸಿನಿಮಾದ ಬಿಡುಗಡೆ ಕುರಿತಾಗಿ ಮಾತನಾಡಿದ್ದಾರೆ. ಸಿನಿಮಾ ಬಿಡುಗಡೆ ಬಗ್ಗೆ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ತಿರುಚೆಂದೂರಿನ ಅರುಲ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಿರ್ಮಾಪಕ ವೆಂಕಟ್ ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮಗಳೊಟ್ಟಿಗೆ ಮಾತನಾಡಿ ಚಿತ್ರದ ಬಿಡುಗಡೆಯ ಕುರಿತು ಮಾತನಾಡಿದರು. ‘ನಾನು ಇಲ್ಲಿಗೆ ಶಾಂತಿ ಮತ್ತು ದೇವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ‘ಜನ ನಾಯಗನ್’ ಚಿತ್ರಕ್ಕೆ ಇನ್ನೂ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ, ಆದರೆ ಅದು ಯಾವುದೇ ಕ್ಷಣದಲ್ಲಾದರೂ ಸಿಗಬಹುದು. ಸೆನ್ಸಾರ್ ಪ್ರಮಾಣಪತ್ರ ಕೈ ಸೇರಿದ ತಕ್ಷಣ, ನಾವು ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೇವೆ. ಇದು ಶೀಘ್ರದಲ್ಲೇ ನಡೆಯಲಿದೆ’ ಎಂದು ತಿಳಿಸಿದ್ದಾರೆ. ಇದೇ ವೇಳೆ ವಿಜಯ್ ಅವರು ಮುಖ್ಯಮಂತ್ರಿಯಾಗಿರುವುದಕ್ಕೆ ತಮ್ಮ ಸಂತೋಷವನ್ನು ಹಂಚಿಕೊಂಡ ಅವರು, ಚಿತ್ರದ ಸುತ್ತಲಿನ ವಿವಾದಗಳಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದರು.

ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಿದ ನಂತರ, ಸಿನಿಮಾ ರಂಗದಿಂದ ದೂರ ಸರಿಯುವ ಮುನ್ನ ‘ಜನ ನಾಯಕನ್’ ತಮ್ಮ ಕೊನೆಯ ಚಿತ್ರವಾಗಲಿದೆ ಎಂದು ಘೋಷಿಸಿದ್ದರು. ಆ ಭಾವನಾತ್ಮಕ ಕಾರಣದಿಂದಾಗಿ, ಅಭಿಮಾನಿಗಳು ಈ ಚಿತ್ರಕ್ಕೆ ಸಂಬಂಧಿಸಿದ ಪ್ರತಿಯೊಂದು ಅಪ್‌ಡೇಟ್‌ ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಚಿತ್ರತಂಡವು ಈ ಚಿತ್ರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲು ಯೋಜಿಸಿತ್ತು ಮತ್ತು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿತ್ತು ಎನ್ನಲಾಗಿದೆ. ಆದರೆ, ಸೆನ್ಸಾರ್ ಮಂಡಳಿಯು ಪ್ರಮಾಣಪತ್ರ ನೀಡದ ಕಾರಣ, ನಿರ್ಮಾಣ ಸಂಸ್ಥೆಯು ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಕಾನೂನು ಹೋರಾಟದ ನಂತರವೂ ಯಾವುದೇ ಸಕಾರಾತ್ಮಕ ಫಲಿತಾಂಶ ಸಿಗಲಿಲ್ಲ. ಈ ವಿಳಂಬದಿಂದಾಗಿ, ಸಿನಿಮಾ ಚಿತ್ರಮಂದಿರಗಳಲ್ಲಿ ಎಂದಿಗೂ ಬಿಡುಗಡೆಯಾಗದೇ ಇರಬಹುದು ಎಂದು ಅನೇಕ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್

ಕೆಲವು ತಿಂಗಳುಗಳ ಹಿಂದೆ ಇಡೀ ಸಿನಿಮಾ ಆನ್‌ಲೈನ್‌ನಲ್ಲಿ ಸೋರಿಕೆಯಾಯ್ತು. ಚಿತ್ರಕ್ಕೆ ಇನ್ನೂ ಸೆನ್ಸಾರ್ ಮಂಡಳಿಯ ಅನುಮತಿಯೇ ಸಿಗದ ಹಂತದಲ್ಲಿ ಈ ಘಟನೆ ನಡೆದಿದ್ದು, ಅಭಿಮಾನಿಗಳಿಗೆ ಮತ್ತು ಚಿತ್ರರಂಗಕ್ಕೆ ದೊಡ್ಡ ಆಘಾತವನ್ನು ಉಂಟುಮಾಡಿತ್ತು. ಈ ಸೋರಿಕೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ತಾನೆ ಅವರಿಗೆ ಜಾಮೀನನ್ನು ಸಹ ನ್ಯಾಯಾಲಯ ತಿರಸ್ಕರಿಸಿದೆ. ‘ಜನ ನಾಯಗನ್’ ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದರೆ, ಬಾಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟಿ ಮಮಿತಾ ಬೈಜು ಕೂಡ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ವರದಿಗಳ ಪ್ರಕಾರ, ಸಿನಿಮಾದ ಟೈಟಲ್ ಕಾರ್ಡ್‌ನಲ್ಲಿ ‘ಮುಖ್ಯಮಂತ್ರಿ’ ವಿಜಯ್ ಎಂಬ ಪದವನ್ನು ಬಳಸಲು ಚಿತ್ರತಂಡ ಯೋಜಿಸಿದೆಯಂತೆ ಆದರೆ ಅದನ್ನು ವಿರೋಧಿಸಿರುವ ಸಿಎಂ ವಿಜಯ್, ‘ಮುಖ್ಯಮಂತ್ರಿ’ ಬದಲಾಗಿ ಈ ಹಿಂದಿನಂತೆ ‘ದಳಪತಿ’ ಎಂಬ ಬಿರುದನ್ನೇ ಮುಂದುವರಿಸುವಂತೆ ವಿಜಯ್ ಚಿತ್ರತಂಡಕ್ಕೆ ವಿನಂತಿಸಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದ ವೀಸಾ ಸಮಸ್ಯೆ ಬಗ್ಗೆ ಸಚಿವ ಜೈಶಂಕರ್ ಕಳವಳ; ಭಾರತವನ್ನು ಟಾರ್ಗೆಟ್ ಮಾಡಿಲ್ಲ ಎಂದ ರೂಬಿಯೊ – Kannada News | Minister S Jaishankar Points US visa troubles in Joint Press Conference Marco Rubio says not targeted at India

ನವದೆಹಲಿ, ಮೇ 24: ಭಾರತಕ್ಕೆ 4 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸುಂಕದ ನೀತಿಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಅಮೆರಿಕ ನಡುವೆ ಉಂಟಾಗಿದ್ದ ರಾಜತಾಂತ್ರಿಕ ಹಾಗೂ ವ್ಯಾಪಾರ ಉದ್ವಿಗ್ನತೆಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಅತ್ಯಂತ ಮಹತ್ವದ್ದಾಗಿದೆ.

ನವದೆಹಲಿಯಲ್ಲಿ ಇಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಜೊತೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಎಸ್. ಜೈಶಂಕರ್ ಅಮೆರಿಕದ ವೀಸಾ ಪಡೆಯುವಲ್ಲಿ ಭಾರತೀಯ ಪ್ರಯಾಣಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಕ್ರಮ ವಲಸೆಯ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ತೊಂದರೆ ಅನುಭವಿಸಬಾರದು ಎಂದು ಭಾರತ ನಿರೀಕ್ಷಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ

ವೀಸಾ ಪ್ರಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಎರಡೂ ದೇಶಗಳ ನಡುವಿನ ವ್ಯವಹಾರ, ತಂತ್ರಜ್ಞಾನ ಮತ್ತು ಸಂಶೋಧನಾ ಸಹಕಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಅಕ್ರಮ ಮತ್ತು ಅನಿಯಮಿತ ವಲಸೆಯನ್ನು ನಿಭಾಯಿಸುವಲ್ಲಿ ಭಾರತ ಅಮೆರಿಕದೊಂದಿಗೆ ಸಹಕರಿಸುವುದನ್ನು ಮುಂದುವರೆಸಿದೆ. ಆದರೆ, ನಿಜವಾದ ಪ್ರಯಾಣಿಕರು ಅನಗತ್ಯ ಅಡೆತಡೆಗಳನ್ನು ಎದುರಿಸಬಾರದು ಎಂದು ಸಚಿವ ಜೈಶಂಕರ್ ಒತ್ತಿ ಹೇಳಿದರು.

ವೀಸಾ ವಿಳಂಬ ಮತ್ತು ಕಠಿಣ ಕಾರ್ಯವಿಧಾನಗಳ ಬಗ್ಗೆ ಅನೇಕ ಭಾರತೀಯ ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ಪ್ರಯಾಣಿಕರು ಕಳವಳ ವ್ಯಕ್ತಪಡಿಸಿರುವ ಸಮಯದಲ್ಲಿ ಅವರ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ; ಅಮೆರಿಕದ ಹೊಸ ಒಪ್ಪಂದದಲ್ಲೇನಿದೆ?

ಇದಕ್ಕೆ ಪ್ರತಿಕ್ರಿಯಿಸಿದ ಯುಎಸ್ ವಿದೇಶಾಂಗ ಕಾರ್ಯದರ್ಶಿ ರೂಬಿಯೊ, ಅಮೆರಿಕ ಮಾಡಿರುವ ಈ ಬದಲಾವಣೆಗಳು ಭಾರತವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. “ಇದು ಭಾರತವನ್ನು ಗುರಿಯಾಗಿಸಿಕೊಂಡ ವ್ಯವಸ್ಥೆಯಲ್ಲ. ಇದನ್ನು ಜಾಗತಿಕವಾಗಿ ಅನ್ವಯಿಸಲಾಗುತ್ತಿದೆ. ನೀವು ಯಾವುದಾದರೂ ಹೊಸ ಸುಧಾರಣೆಗಳನ್ನು ಕೈಗೊಂಡಾಗ, ಪರಿವರ್ತನೆ ಮತ್ತು ಘರ್ಷಣೆಗಳೆರಡೂ ಇರುತ್ತವೆ. ಆದರೆ, ಭವಿಷ್ಯಕ್ಕಾಗಿ ತನ್ನ ವಲಸೆ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಅದನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಅಮೆರಿಕ ಹೆಚ್ಚು ಆದ್ಯತೆ ನೀಡುತ್ತಿದೆ. ನಾವು 21ನೇ ಶತಮಾನಕ್ಕಾಗಿ ಯುಎಸ್ ವಲಸೆ ವ್ಯವಸ್ಥೆಯನ್ನು ಆಧುನೀಕರಿಸುತ್ತಿದ್ದೇವೆ” ಎಂದು ರುಬಿಯೊ ಹೇಳಿದರು.

ಅಕ್ರಮ ವಲಸೆಯ ಬಗ್ಗೆ ಮಾತನಾಡಿದ ರುಬಿಯೊ, “ಇತ್ತೀಚಿನ ವರ್ಷಗಳಲ್ಲಿ ಅಮೆರಿಕವು ಪ್ರಮುಖ ಸವಾಲುಗಳನ್ನು ಎದುರಿಸಿದೆ. 20 ಮಿಲಿಯನ್ ಜನರನ್ನು ಅಕ್ರಮವಾಗಿ ಅಮೆರಿಕಕ್ಕೆ ಪ್ರವೇಶಿಸಿದ್ದಾರೆ. ಹೀಗಾಗಿ, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ – Kannada News | Bengaluru: Karnataka Bank Defrauded of Rs 16 Lakh by Gold Appraiser

ಬೆಂಗಳೂರು, ಮೇ 24: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ 16.53 ಲಕ್ಷ ರೂ ಮೊತ್ತದ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಈ ವಂಚನೆಯ ಸೂತ್ರಧಾರಿಯಾಗಿದ್ದು, ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕುಮಾರ್ ಹಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನ ಎಂದು ಹೇಳಿ ಬ್ಯಾಂಕ್‌ಗೆ ವಂಚಿಸಿದ್ದಾನೆ. ಚಿನ್ನ ಮೌಲ್ಯಮಾಪಕ ರವಿಕುಮಾರ್ ಬ್ಯಾಂಕ್‌ಗೆ ಸಲ್ಲಿಸಿದ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ ಗ್ರಾಹಕರಿಗೆ ಸಾಲ ನೀಡುವಂತೆ ಮಾಡಿದ್ದಾನೆ. ಈ ಮೂಲಕ ಬ್ಯಾಂಕ್‌ಗೆ ಮೋಸ ಮಾಡಿದ್ದಾನೆ. ಈತನ ಮೇಲೆ ಅನುಮಾನ ಬಂದು ಪರಿಶೀಲಿಸಿದಾಗ ನಕಲಿ ಚಿನ್ನದ ಕಳ್ಳಾಟ ಬಯಲಾಗಿದೆ. ಸದ್ಯ ಪೊಲೀಸರು ರವಿಕುಮಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವರದಿ: ವಿಕಾಸ್​​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ: ಕೋಚ್ ಎಂಟ್ರಿಗೆ ಅವಕಾಶ! – Kannada News | ICC New Rules: Head Coaches May Soon Enter Field During ODI Drinks

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಏಕದಿನ ಕ್ರಿಕೆಟ್ (ODI) ಇತಿಹಾಸದಲ್ಲೇ ಅತ್ಯಂತ ಪ್ರಮುಖ ಹಾಗೂ ಕ್ರಾಂತಿಕಾರಕ ನಿಯಮ ಬದಲಾವಣೆಯೊಂದನ್ನು ತರಲು ಗಂಭೀರ ಆಲೋಚನೆ ನಡೆಸಿದೆ. ಪಂದ್ಯದ ಮಧ್ಯದಲ್ಲಿ ತಂತ್ರಗಳನ್ನು ರೂಪಿಸಲು ಮತ್ತು ಆಟಗಾರರಿಗೆ ನೇರ ಮಾರ್ಗದರ್ಶನ ನೀಡಲು, ಇನ್ಮುಂದೆ ‘ಡ್ರಿಂಕ್ಸ್ ಬ್ರೇಕ್’ (ಪಾನೀಯ ವಿರಾಮ) ಸಮಯದಲ್ಲಿ ತಂಡದ ಮುಖ್ಯ ತರಬೇತುದಾರರು ನೇರವಾಗಿ ಮೈದಾನದೊಳಗೆ ಪ್ರವೇಶಿಸಲು ಅನುಮತಿ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಐಸಿಸಿ ಮುಖ್ಯ ಕಾರ್ಯನಿರ್ವಾಹಕರ ಸಮಿತಿ (CEC) ಸಭೆಯಲ್ಲಿ ಈ ವಿಷಯ ಈಗಾಗಲೇ ಚರ್ಚೆಯಾಗಿದ್ದು, 2026ರ ಮೇ 30 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಸಿಸಿ ಮಂಡಳಿ ಸಭೆಯಲ್ಲಿ ಇದಕ್ಕೆ ಅಂತಿಮ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಪ್ರಸ್ತಾವಿತ ನಿಯಮದ ಪ್ರಮುಖ ಅಂಶಗಳು:

  • ನೇರ ಸಂವಹನ: ಪ್ರಸ್ತುತ ನಿಯಮಗಳ ಪ್ರಕಾರ, ಹೆಚ್ಚುವರಿ ಆಟಗಾರರು (Substitutes) ಮಾತ್ರ ಮೈದಾನಕ್ಕೆ ನೀರು ಮತ್ತು ಕಿಟ್‌ಗಳನ್ನು ಕೊಂಡೊಯ್ಯಬಹುದು. ಹೊಸ ನಿಯಮ ಜಾರಿಗೆ ಬಂದರೆ, ಕೋಚ್‌ಗಳು ನೇರವಾಗಿ ಪಿಚ್ ಬಳಿ ಬಂದು ನಾಯಕ ಮತ್ತು ಆಟಗಾರರೊಂದಿಗೆ ಮುಖಾಮುಖಿ ಚರ್ಚೆ ನಡೆಸಬಹುದು.
  • ಒಡಿಐನಲ್ಲಿ ಎರಡು ಬಾರಿ ಅವಕಾಶ: ಏಕದಿನ ಪಂದ್ಯಗಳ ಪ್ರತಿ ಇನ್ನಿಂಗ್ಸ್‌ನಲ್ಲಿ ತಲಾ 2 ಡ್ರಿಂಕ್ಸ್ ಬ್ರೇಕ್‌ಗಳನ್ನು ನೀಡಲಾಗುತ್ತದೆ. ಕೋಚ್‌ಗಳಿಗೆ ಈ ಎರಡೂ ವಿರಾಮಗಳಲ್ಲಿ ಮೈದಾನಕ್ಕಿಳಿಯುವ ಅವಕಾಶ ಸಿಗಲಿದೆ.
  •  ಟಿ20 ಪ್ರೇರಿತ ಬದಲಾವಣೆ: ಈಗಾಗಲೇ ಟಿ20 ಅಂತರರಾಷ್ಟ್ರೀಯ ಪಂದ್ಯಗಳು ಹಾಗೂ ಐಪಿಎಲ್‌ನಂತಹ ಲೀಗ್‌ಗಳಲ್ಲಿ ‘ಸ್ಟ್ರಾಟೆಜಿಕ್ ಟೈಮ್‌ಔಟ್’ ವೇಳೆ ಕೋಚ್‌ಗಳು ಮೈದಾನಕ್ಕೆ ಬರುವ ನಿಯಮವಿದೆ. ಇದನ್ನು ಈಗ 50 ಓವರ್‌ಗಳ ಕ್ರಿಕೆಟ್‌ಗೂ ವಿಸ್ತರಿಸಲಾಗುತ್ತಿದೆ.
  • ಅನುಷ್ಠಾನದ ಸಮಯ: ಮೇ 30ರ ಸಭೆಯಲ್ಲಿ ಮಂಡಳಿಯು ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದರೆ, ಈ ಹೊಸ ನಿಯಮವು ಅಕ್ಟೋಬರ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಚರ್ಚೆಯಲ್ಲಿರುವ ಇತರ ಪ್ರಮುಖ ನಿಯಮಗಳು:

ಹೆಡ್ ಕೋಚ್ ಪ್ರವೇಶದ ಜೊತೆಗೆ, ಕ್ರಿಕೆಟ್‌ನ ಸ್ವರೂಪವನ್ನೇ ಬದಲಿಸಬಲ್ಲ ಇನ್ನೂ ಕೆಲವು ಪ್ರಮುಖ ಪ್ರಸ್ತಾಪಗಳು ಐಸಿಸಿ ಮುಂದಿವೆ:

  • ಟೆಸ್ಟ್ ಪಂದ್ಯದಲ್ಲಿ ಪಿಂಕ್ ಬಾಲ್ ಬಳಕೆ: ಹವಾಮಾನ ವೈಪರೀತ್ಯ ಅಥವಾ ಮಂದ ಬೆಳಕಿನಿಂದಾಗಿ ಟೆಸ್ಟ್ ಪಂದ್ಯಗಳು ರದ್ದಾಗುವುದನ್ನು ತಪ್ಪಿಸಲು, ಸಾಂಪ್ರದಾಯಿಕ ಕೆಂಪು ಚೆಂಡಿನ ಬದಲಿಗೆ ಫ್ಲಡ್‌ಲೈಟ್‌ಗಳ ಅಡಿಯಲ್ಲಿ ‘ಪಿಂಕ್ ಬಾಲ್’ ಬಳಸಿ ಪಂದ್ಯ ಮುಂದುವರಿಸಲು ಉಭಯ ತಂಡಗಳ ಒಪ್ಪಿಗೆಯೊಂದಿಗೆ ಅವಕಾಶ ನೀಡುವ ಚಿಂತನೆ ಇದೆ.
  •  ಟಿ20 ಇನ್ನಿಂಗ್ಸ್ ವಿರಾಮ ಕಡಿತ: ಟಿ20 ಪಂದ್ಯಗಳ ವೇಗವನ್ನು ಹೆಚ್ಚಿಸಲು ಎರಡು ಇನ್ನಿಂಗ್ಸ್‌ಗಳ ನಡುವಿನ ವಿರಾಮದ ಸಮಯವನ್ನು 20 ನಿಮಿಷಗಳಿಂದ 15 ನಿಮಿಷಗಳಿಗೆ ಇಳಿಸಲು ಉದ್ದೇಶಿಸಲಾಗಿದೆ.
  • ಅಕ್ರಮ ಬೌಲಿಂಗ್ ಆಕ್ಷನ್‌ಗೆ ಹಾಕ್-ಐ: ಮೈದಾನದಲ್ಲಿರುವ ಅಂಪೈರ್‌ಗಳಿಗೆ ಇನ್ಮುಂದೆ ರಿಯಲ್-ಟೈಮ್ ಹಾಕ್-ಐ ತಂತ್ರಜ್ಞಾನದ ಪ್ರವೇಶ ಸಿಗಲಿದೆ. ಇದರಿಂದ ಬೌಲರ್‌ಗಳ ಶಂಕಾಸ್ಪದ ಅಥವಾ ಅಕ್ರಮ ಬೌಲಿಂಗ್ ಆಕ್ಷನ್ ಅನ್ನು ಪಂದ್ಯದ ಮಧ್ಯದಲ್ಲೇ ಗುರುತಿಸಿ ಕ್ರಮ ಕೈಗೊಳ್ಳಬಹುದು.

ಇದನ್ನೂ ಓದಿ: 27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ?

ಒಟ್ಟಾರೆಯಾಗಿ ಹೇಳುವುದಾದರೆ, ಐಸಿಸಿಯ ಈ ಪ್ರಸ್ತಾಪಗಳು ಜಾರಿಗೆ ಬಂದರೆ ಕ್ರಿಕೆಟ್‌ನ ಸ್ವರೂಪವೇ ಬದಲಾಗಲಿದೆ. ಕೇವಲ ಡ್ರೆಸ್ಸಿಂಗ್ ರೂಮ್‌ಗೆ ಸೀಮಿತವಾಗಿದ್ದ ತರಬೇತುದಾರರು, ಇನ್ಮುಂದೆ ಲೈವ್ ಪಂದ್ಯದ ಗತಿಯನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಫುಟ್‌ಬಾಲ್‌ನಂತೆ ಕ್ರಿಕೆಟ್‌ನಲ್ಲೂ ತಂತ್ರಜ್ಞಾನ ಮತ್ತು ತರಬೇತುದಾರರ ನೇರ ಹಸ್ತಕ್ಷೇಪ ಹೆಚ್ಚಾಗುತ್ತಿರುವುದು ಆಟವನ್ನು ಮತ್ತಷ್ಟು ರೋಚಕಗೊಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ.

Source link