Category Archives: Blog

Your blog category

ಇದು ವಿದ್ಯುತ್ ಕ್ರಾಂತಿ..! ವೈಫೈ ಇಂಟರ್ನೆಟ್ ರೀತಿ ವೈರ್ಲೆಸ್ ಎಲೆಕ್ಟ್ರಿಸಿಟಿ ರವಾನಿಸಿದ ಫಿನ್​ಲ್ಯಾಂಡ್ ವಿಜ್ಞಾನಿಗಳು – Kannada News | Finland scientists successfully transmit electric power through the air without using physical wires

ಹೆಲ್ಸಿಂಕಿ, ಜನವರಿ 19: ಡಾಟಾ ಸೆಂಟರ್​ಗಳ ಸಿಸ್ಟಂಗಳಿಂದ ಸೃಷ್ಟಿಯಾಗುವ ಶಾಖ ಬಳಸಿ ವಿದ್ಯುತ್ ಉತ್ಪಾದಿಸುವ ಆವಿಷ್ಕಾರ ಮಾಡಿರುವ ಫಿನ್​ಲ್ಯಾಂಡ್ ಸಂಶೋಧಕರು ಇದೀಗ ಕೇಬಲ್ ವೈರ್ ಇಲ್ಲದೆಯೇ ವಿದ್ಯುತ್ ಹರಿಯಿಸುವ ಪ್ರಯೋಗ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತಂತ್ರಜ್ಞಾನ ಅಭಿವೃದ್ದಿ ಆಗುತ್ತಿದ್ದು ಇತ್ತೀಚಿನ ಆರಂಭಿಕ ಪ್ರಯೋಗಗಳು ಯಶಸ್ವಿಯಾಗಿವೆ. ಮುಂಬರುವ ದಿನಗಳಲ್ಲಿ ಇಂಟರ್ನೆಟ್ ಬಳಸುವ ರೀತಿಯಲ್ಲಿ ವಿದ್ಯುತ್ ಬಳಸುವ ಒಂದು ಟೆಕ್ನಾಲಜಿ ಬರುವ ಸಾಧ್ಯತೆ ದಟ್ಟವಾಗಿದೆ.

ವೈರ್ಲೆಸ್ ವಿದ್ಯುತ್ ಹೇಗೆ ಸಾಧ್ಯ?

ವೈಫೈ ಮೂಲಕ ಡಾಟಾ ವರ್ಗಾವಣೆ ಸಾಧ್ಯವಾಗುವಂತೆ, ಎಲೆಕ್ಟ್ರೋಮ್ಯಾಗ್ನೆಟಿಕ್ ಫೀಲ್ಡ್ (ವಿದ್ಯುದ್ಕಾಂತೀಯ) ಮತ್ತು ರಿಸೋನೆಂಟ್ ಕಪ್ಲಿಂಗ್ ಟೆಕ್ನಿಕ್ (ಪ್ರತಿಧ್ವನಿಸುವ) ಉಪಯೋಗಿಸಿ ಗಾಳಿ ಮೂಲಕ ವಿದ್ಯುತ್ ಅನ್ನು ಪ್ರವಹಿಸಬಹುದು ಎಂಬುದನ್ನು ಫಿನ್ನಿಶ್ ಸಂಶೋಧಕರು ತಮ್ಮ ಪ್ರಯೋಗಗಳಿಂದ ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ

ಹಲವಾರು ವರ್ಷಗಳಿಂದ ಈ ಕ್ಷೇತ್ರದಲ್ಲಿ ಪ್ರಯೋಗಗಳು ನಡೆಯುತ್ತಲೇ ಇವೆ. ಟ್ರಾನ್ಸ್​ಮಿಟ್ಟರ್ ಮತ್ತು ರಿಸೀವರ್ ನಡುವೆ ಯಾವುದೇ ಕೇಬಲ್ ಕನೆಕ್ಷನ್ ಇಲ್ಲದೆಯೇ, ರೇಡಿಯೋ ಫ್ರೀಕ್ವೆಸ್ಸಿ ಹೊಂದಾಣಿಕೆ ಮೂಲಕ ವಿದ್ಯುತ್ ಅನ್ನು ಸಾಗಿಸಲು ಸಾಧ್ಯ. ಅದನ್ನು ಸಾಧ್ಯವಾಗಿಸುವಂತಹ ತಂತ್ರಜ್ಞಾನದ ಆವಿಷ್ಕಾರಕ್ಕೆ ಪ್ರಯೋಗಗಳು ನಡೆಯುತ್ತಿವೆ. ಫಿನ್​ಲ್ಯಾಂಡ್ ವಿಜ್ಞಾನಿಗಳು ಒಂದು ಹಂತಕ್ಕೆ ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸದ್ಯ ಬಹಳ ಕಿರು ಅಂತರಕ್ಕೆ ಮಾತ್ರ ಈ ವಿದ್ಯುತ್ ವರ್ಗಾವಣೆ ಮಾಡಲು ಸಾಧ್ಯ.

ಅಮೆರಿಕದ ‘ದರ್ಪ’ದಿಂದಲೂ ಇಂಥದ್ದೊಂದು ಪ್ರಯೋಗ

ಅಮೆರಿಕದ ಡಿಫೆನ್ಸ್ ರಿಸರ್ಚ್ ಸಂಸ್ಥೆಯಾದ ದರ್ಪ (DARPA) ಕೂಡ ವೈರ್ಲೆಸ್ ಎಲೆಕ್ಟ್ರಿಸಿಟಿ ತಂತ್ರಜ್ಞಾನದಲ್ಲಿ ಯಶಸ್ವಿಯಾಗಿದೆ. ಲೇಸರ್ ಮೂಲಕ ವೈರ್ಲೆಸ್ ಆಗಿ ಸುಮಾರು 8-9 ಕಿಮೀ ದೂರ ವಿದ್ಯುತ್ ಅನ್ನು ಹರಿಯಿಸಲು ಯಶಸ್ವಿಯಾಗಿದೆ. ಪರ್ಸಿಸ್ಟೆಂಟ್ ಆಪ್ಟಿಕಲ್ ವೈರ್ಲೆಸ್ ಎನರ್ಜಿ ರಿಲೇ ಯೋಜನೆ ಭಾಗವಾಗಿ ನಡೆದ ಇತ್ತೀಚಿನ ಪ್ರಯೋಗದಲ್ಲಿ 8.6 ಕಿಮೀ ದೂರಕ್ಕೆ 800 ವ್ಯಾಟ್​ನಷ್ಟು ವಿದ್ಯುತ್ ಅನ್ನು ರವಾನಿಸುವಲ್ಲಿ ಯಶಸ್ವಿ ಆಗಿದೆ. ಈ ಹಿಂದೆ ಇದೇ ಸಂಸ್ಥೆಯು 1.7 ಕಿಮೀ ದೂರ 25 ಸೆಕೆಂಡುಗಳ ಕಾಲ 230 ವ್ಯಾಟ್ ವಿದ್ಯುತ್ ಅನ್ನು ಹರಿಸಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್

ವೈರ್ಲೆಸ್ ವಿದ್ಯುತ್ ರವಾನೆ ತತ್ವ ಹೊಸದೇನಲ್ಲ. ಇದರ ಪ್ರಯೋಗ ಆರಂಭಕ್ಕೆ ಶತಮಾನಕ್ಕೂ ಹೆಚ್ಚಿನ ಇತಿಹಾಸ ಇದೆ. ಇತ್ತೀಚೆಗೆ ಈ ಬಗ್ಗೆ ಕುತೂಹಲ ಮತ್ತು ಆಸಕ್ತಿ ಹೆಚ್ಚುತ್ತಿದೆ. ಬಾಹ್ಯಾಕಾಶದಲ್ಲಿ ಸೂರ್ಯನ ಶಕ್ತಿ ಬಳಸಿ ವಿದ್ಯುತ್ ತಯಾರಿಸಿ ಭೂಮಿಗೆ ಹರಿಯಿಸುವ ತಂತ್ರಜ್ಞಾನದ ಆವಿಷ್ಕಾರಕ್ಕೂ ಪ್ರಯೋಗಗಳು ನಡೆಯುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಳೆಹಣ್ಣನ್ನು ಈ ಸಮಯದಲ್ಲಿ ತಿನ್ನುವುದರಿಂದ ಸಿಗುತ್ತೆ ಊಹಿಸಲೂ ಸಾಧ್ಯವಾಗದ ಪ್ರಯೋಜನ! – Kannada News | Best Time to Eat Bananas for Energy & Digestion

ವರ್ಷಪೂರ್ತಿ ಲಭ್ಯವಿರುವ ಹಣ್ಣುಗಳಲ್ಲಿ ಬಾಳೆಹಣ್ಣುಗಳು ಕೂಡ ಒಂದು. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಬಾಳೆಹಣ್ಣು (Bananas) ತಿನ್ನಲು ಇಷ್ಟಪಡುತ್ತಾರೆ. ಆದರೆ ಬಾಳೆಹಣ್ಣನ್ನು ಯಾವಾಗಲೂ ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯಕ್ಕೆ ಸೇವನೆ ಮಾಡಿದಾಗ ಮಾತ್ರವೇ ಸಾಕಷ್ಟು ಪ್ರಯೋಜನಗಳು ಸಿಗಲು ಸಾಧ್ಯವಾಗುತ್ತದೆ. ಜೊತೆಗೆ ಅವುಗಳಲ್ಲಿರುವ ಪೋಷಕಾಂಶಗಳು ಸಂಪೂರ್ಣವಾಗಿ ದೇಹ ಹೀರಿಕೊಳ್ಳಲು ಸಹಾಯ ಮಾಡುತ್ತೆ. ಹಾಗಾಗಿ ಬಾಳೆಹಣ್ಣುಗಳು ಒಳ್ಳೆಯದು ಎಂದು ಮನ ಬಂದಾಗ ತಿನ್ನುವುದನ್ನು ಬಿಟ್ಟು ಅದನ್ನು ಯಾವಾಗ ಸೇವನೆ ಮಾಡಿದರೆ ಒಳ್ಳೆಯದು ಎಂದು ತಿಳಿದುಕೊಂಡು ಅದನ್ನು ಪಾಲನೆ ಮಾಡುವುದು ಒಳಿತು. ಇದರಿಂದ ನೀವು ಊಹಿಸಲೂ ಸಾಧ್ಯವಾಗದಂತಹ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

  • ಬೆಳಿಗ್ಗೆ ಎದ್ದ ತಕ್ಷಣ ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ಇದರಲ್ಲಿರುವ ವಿಟಮಿನ್ ಬಿ6 ಮತ್ತು ಪೊಟ್ಯಾಸಿಯಮ್ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಮಲಬದ್ಧತೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಳಿಗ್ಗೆ ಎದ್ದು ಬಾಳೆಹಣ್ಣು ತಿನ್ನುವುದು ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
  • ಜಿಮ್‌ಗೆ ಹೋಗುವ ಮೊದಲು ಅಥವಾ ವ್ಯಾಯಾಮ ಮಾಡುವ ಮೊದಲು 1 ಅಥವಾ 2 ಬಾಳೆಹಣ್ಣುಗಳನ್ನು ತಿನ್ನುವುದು ಒಳ್ಳೆಯದು. ಬಾಳೆಹಣ್ಣಿನಲ್ಲಿರುವ ಕಾರ್ಬೋಹೈಡ್ರೇಟ್‌ಗಳು ವ್ಯಾಯಾಮಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುತ್ತವೆ. ಹೆಚ್ಚುವರಿಯಾಗಿ, ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.
  • ಊಟದ ನಂತರ ಬಾಳೆಹಣ್ಣು ತಿನ್ನುವುದರಿಂದ ಜೀರ್ಣಕ್ರಿಯೆ ವೇಗಗೊಳ್ಳುತ್ತದೆ. ಬಾಳೆಹಣ್ಣಿನಲ್ಲಿರುವ ನಾರಿನಾಂಶ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.
  • ಸಂಜೆ 4 ರಿಂದ 6 ಗಂಟೆಯ ನಡುವೆ ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಬಾಳೆಹಣ್ಣು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಇದು ಎಣ್ಣೆ ತಿಂಡಿ ತಿನ್ನುವ ಅಭ್ಯಾಸವನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಹಾಗಾಗಿ ಮಕ್ಕಳು ಶಾಲೆಯಿಂದ ಬಂದ ಬಳಿಕ ಒಂದು ಬಾಳೆಹಣ್ಣನ್ನು ಕೊಡಿ. ಆದರೆ ಯಾವುದೇ ಕಾರಣಕ್ಕೂ 7 ಗಂಟೆಯ ನಂತರ ಸಾಧ್ಯವಾದಷ್ಟು ಹಣ್ಣುಗಳ ಸೇವನೆ ಮಾಡುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ? – Kannada News | JDS MLA G.T. Devegowda Clarifies Rumours, Says He Will Remain in the Party

ಮೈಸೂರು, ಜನವರಿ 19: ರಾಜ್ಯದಲ್ಲಿ ಮುಂಬರಲಿರುವ ವಿಧಾನ ಸಭೆ ಚುನಾವಣೆಯಲ್ಲಿ JDSನಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ. ಮಹೇಶ್​ ಸ್ಪರ್ಧೆ ಮಾಡ್ತಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು. ಆ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಾಲಿ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್​​ ಕೊಡಲು ದಳಪತಿಗಳು ಮುಂದಾದ್ರಾ ಎನ್ನುವ ಪ್ರಶ್ನೆ ಉದ್ಭವಿಸಿತ್ತು. ಇದೇ ವಿಚಾರವಾಕ್ಕೀಗ ಸ್ವತಃ ಜಿಟಿಡಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಜಿ.ಟಿ. ದೇವೇಗೌಡರು ಹೇಳಿದ್ದೇನು?

ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದ್ದು, ನಮ್ಮ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಆತಂಕ ಬೇಡ. ಚುನಾವಣೆ ಬಂದಾಗ ಬೇರೆ ವಿಚಾರದ ಬಗ್ಗೆ ಚರ್ಚೆ ಮಾಡೋಣ. ಈಗ ಜೆಡಿಎಸ್​ನಲ್ಲಿ ಇದ್ದೇನೆ, ಜೆಡಿಎಸ್​ನಿಂದ ಒಂದು ಹೆಜ್ಜೆ ತೆಗೆದಿಲ್ಲ. ಕೆಲ ವಿಚಾರದಲ್ಲಿ ನೋವಾಗಿದೆ, ಅದು ನಾಯಕರಿಗೂ ಗೊತ್ತಿದೆ. ಹಾಗಂತ ನನಗೆ ನೋವಾಗಿದೆ ಅಂತಾ ಪಕ್ಷದಿಂದ ಹೊರ ಹೋಗಿಲ್ಲ. ಜೆಡಿಎಸ್ ವಿರುದ್ಧವಾಗಿ ನಾನು ಯಾವತ್ತೂ ಮಾತನಾಡಿಲ್ಲ. ಒಳ್ಳೆಯ ಟೈಮ್ ಬರುತ್ತದೆ, ಎಲ್ಲವೂ ಒಳ್ಳೆಯದಾಗುತ್ತೆ. ಕಾಲ ಕಳೆದಂತೆ ಎಲ್ಲಾ ಮುನಿಸು ನೋವು ಮಾಯವಾಗುತ್ತೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ಜಿ.ಟಿ. ದೇವೇಗೌಡರಿಗೆ ಭರ್ಜರಿ ಶಾಕ್​​ ಕೊಡುತ್ತಾ ಜೆಡಿಎಸ್​​? ವರಿಷ್ಠರ ನಡೆಯೇನು?

ತಮ್ಮ ಅನುಪಸ್ಥಿತಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸಭೆ ವಿಚಾರ ಸಂಬಂಧವೂ ಮಾತನಾಡಿರುವ ಅವರು, ಯಾರಿಗೂ ದ್ರೋಹ ಮಾಡುವ ಬುದ್ಧಿ ನನಗಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್​ಗೆ ಹೋದ ಮೇಲೆ JDS ಕಟ್ಟಿದ್ದೇನೆ. ಹೆಚ್​.ಡಿ. ದೇವೇಗೌಡ, H.D. ಕುಮಾರಸ್ವಾಮಿ ಜೊತೆಗೆ ಒಟ್ಟಾಗಿ ಇದ್ದೇನೆ. ಕುಮಾರಸ್ವಾಮಿ ಸಿಎಂ ಆಗಬೇಕೆಂದು ಪಕ್ಷ ಕಟ್ಟಿದ್ದೇನೆ. ಜೆಡಿಎಸ್​ನಲ್ಲಿ ಗಟ್ಟಿಯಾಗಿ ಇದ್ದೇನೆ‌, ಜೆಡಿಎಸ್​ನಲ್ಲೇ ಇರುತ್ತೇನೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಜಾಸ್ತಿ ಇದೆ ಎಂದವರು ಹೇಳಿದ್ದಾರೆ.

ಜಿಟಿಡಿ ಮೇಲೆ ಮುಖಂಡರ ಮುನಿಸೇಕೆ?

ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಪಕ್ಷಕ್ಕೆ ಮೋಸ ಮಾಡಿದ್ದಾರೆ . MLC ಚುನಾವಣೆಯಲ್ಲೂ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ ಎಂಬುದು ಜೆಡಿಎಸ್​​ ಮುಖಂಡರ ಪ್ರಮುಖ ಆರೋಪ. ಅಲ್ಲದೆ ಜೆಡಿಎಸ್​​ ಶಾಸಕರಾಗಿರುವ ಜಿಟಿಡಿ ಪದೇ ಪದೇ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರನ್ನು ಹೊಗಳುತ್ತಿದ್ದಿದ್ದು ಪಕ್ಷಕ್ಕೆ ಮುಜುಗರವನ್ನೂ ತಂದಿದೆ ಎಂಬುದು ಕೆಲ ನಾಯಕರ ಅಭಿಪ್ರಾಯ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ತಮಿಳುನಾಡು ಚುನಾವಣೆ, ಜನವರಿ 23ರಂದು ಎನ್​ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ – Kannada News | Narendra Modi Set to Sound Poll Bugle in Tamil Nadu as NDA Gears Up

ಚೆನ್ನೈ, ಜನವರಿ 19: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಪ್ರಧಾನಿ ನರೇಂದ್ರ ಮೋದಿ ಜನವರಿ 23 ರಂದು ಮಧುರಾಂತಕಂನಿಂದ ಎನ್‌ಡಿಎ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಎನ್‌ಡಿಎ ಚುನಾವಣಾ ಪ್ರಚಾರವನ್ನು ಔಪಚಾರಿಕವಾಗಿ ಪ್ರಾರಂಭಿಸುವ ಮೂಲಕ ಪ್ರಧಾನಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ.

ಎನ್‌ಡಿಎ ಮಿತ್ರಪಕ್ಷಗಳ ಅಂತಿಮ ಪಟ್ಟಿಯ ಬಗ್ಗೆ ಕೇಳಿದಾಗ, ನಾಗೇಂದ್ರನ್ ಹೆಸರುಗಳ ಬಗ್ಗೆ ಮೌನವಾಗಿದ್ದರು ಆದರೆ ತಮ್ಮ ಪಕ್ಷವು ಬಲವಾದ ಪ್ರದರ್ಶನ ನೀಡುವ ಭರವಸೆ ನೀಡಿದರು.
ಎನ್‌ಡಿಎ ಮೈತ್ರಿಕೂಟದ ಅಂತಿಮ ಪಟ್ಟಿಯಲ್ಲಿ ಟಿಟಿವಿ ದಿನಕರನ್ ಅವರ ಎಎಂಎಂಕೆ, ಮಾಜಿ ಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ಮತ್ತು ಡಿಎಂಡಿಕೆ ಸೇರ್ಪಡೆಯಾಗುವ ಸಾಧ್ಯತೆಯ ಬಗ್ಗೆ ನಿರಂತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಾಗೇಂದ್ರನ್, ಯಾವುದೇ ನಿರ್ದಿಷ್ಟ ಪಕ್ಷ ಅಥವಾ ನಾಯಕನ ಹೆಸರನ್ನು ಹೇಳಲು ನಿರಾಕರಿಸಿದರು.

ಎಐಎಡಿಎಂಕೆ ಈಗಾಗಲೇ ಪಿಎಂಕೆಯ ಒಂದು ಬಣದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಸಂಸ್ಥಾಪಕ ಡಾ. ರಾಮದಾಸ್ ತಮ್ಮ ಮಗ ಅನ್ಬುಮಣಿ ರಾಮದಾಸ್ ಅವರನ್ನು ಹೊರಹಾಕಿದ ನಂತರ ಪಕ್ಷ ವಿಭಜನೆಯಾಗಿದೆ.ತಂದೆ ಇನ್ನೂ ಮೈತ್ರಿಗಳ ಬಗ್ಗೆ ತಮ್ಮ ಅಂತಿಮ ನಿಲುವನ್ನು ಬಹಿರಂಗಪಡಿಸಿಲ್ಲ, ಆದರೆ ಅನ್ಬುಮಣಿ ಈಗಾಗಲೇ ಎಐಎಡಿಎಂಕೆ ಜೊತೆ ಕೈಜೋಡಿಸಿ ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಟಿವಿಕೆ ಡಿಎಂಕೆ ಮತ್ತು ಬಿಜೆಪಿ ಎರಡರಿಂದಲೂ ಬಹಿರಂಗವಾಗಿ ಸಮಾನ ಅಂತರ ಕಾಯ್ದುಕೊಂಡಿದೆ.

ಮತ್ತಷ್ಟು ಓದಿ: ತಮಿಳುನಾಡು ಚುನಾವಣೆಗೆ ನಟ ವಿಜಯ್ ಸಿಎಂ ಅಭ್ಯರ್ಥಿ; ಟಿವಿಕೆ ಅಧಿಕೃತ ಘೋಷಣೆ

ಆದಾಗ್ಯೂ, ಎಐಎಡಿಎಂಕೆಯ ಒಂದು ಭಾಗ ನಾಯಕರು ವಿಜಯ್ ತಂಡದೊಂದಿಗೆ ರಹಸ್ಯ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರ ಆಕ್ರೋಶವು ಈ ಬಾರಿ ಆಡಳಿತಾರೂಢ ಸ್ಟಾಲಿನ್ ಸರ್ಕಾರವನ್ನು ದುರ್ಬಲಗೊಳಿಸಬಹುದು ಎಂಬುದು ಬಿಜೆಪಿಯ ನಂಬಿಕೆಯಾಗಿದೆ.

ಇದನ್ನೇ ಲಾಭ ಮಾಡಿಕೊಳ್ಳಲು ಪ್ರಧಾನಿ ಮೋದಿಯವರಿಂದ ಪ್ರಚಾರವನ್ನು ಮೊದಲೇ ಪ್ರಾರಂಭಿಸಲು ಮುಂದಾಗಿದೆ. ಪ್ರಧಾನಿ ಮೋದಿ ಮುಂಬರುವ ವಾರಗಳಲ್ಲಿ ತಮಿಳುನಾಡಿನಾದ್ಯಂತ ಸರಣಿ ಪ್ರಚಾರ ಆರಂಭಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ – Kannada News | T20 World Cup 2026: ICC Resolves India Visa Issues for Pakistan Origin Players

ವಾಸ್ತವವಾಗಿ, ಪಾಕಿಸ್ತಾನದೊಂದಿಗಿನ ಸಂಬಂಧಗಳು ಹದಗೆಟ್ಟಿರುವುದರಿಂದ, ಭಾರತ ಸರ್ಕಾರ ಇತ್ತೀಚೆಗೆ ಈ ವೀಸಾ ನೀತಿಯನ್ನು ಅಳವಡಿಸಿಕೊಂಡಿದೆ. ಭಾರತ ಪ್ರವಾಸ ಮಾಡುವ ಯಾವುದೇ ತಂಡದಲ್ಲಿ ಪಾಕಿಸ್ತಾನಿ ಮೂಲದ ಸದಸ್ಯರಿಗೆ ವೀಸಾ ಪರಿಶೀಲನೆ ಹೆಚ್ಚು ಕಠಿಣವಾಗಿದ್ದು, ಆಗಾಗ್ಗೆ ವಿಳಂಬಕ್ಕೆ ಕಾರಣವಾಗುತ್ತದೆ.

Source link

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಈ ವೇಳೆ ಬಡವರ ಮಕ್ಕಳು ಬೆಳೆಯಬೇಕು ಎಂಬ ವಾದದ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

‘ಬಡವರ ಮಕ್ಕಳು ಗೆಲ್ಲಬೇಕು ಅಂತ ಎಲ್ಲರೂ ಹೇಳುತ್ತಾರೆ. ಅದು ಈಗ ಹೊರಗಡೆ ಏನೇನೋ ಆಗಿದೆ. ಆದರೆ ನಮ್ಮನ್ನು ನಾವು ಪ್ರಶ್ನೆ ಮಾಡಿಕೊಳ್ಳಬೇಕು ಅಲ್ವಾ? ಇದೆಲ್ಲ ನಿಜಾನಾ? ಇದು ವ್ಯಕ್ತಿತ್ವಗಳ ಆಟ ಅಂತ ಆದಾಗ, ಬಡವರ ಮಕ್ಕಳು ಅಂತ ನೀವು ಟ್ಯಾಗ್​ಲೈನ್ ಕೊಡುವಾಗ, ನಿಜವಾಗಿಯೂ ನೀವು ಬಡವರ ಮಕ್ಕಳಿಗೆ ಕಪ್ ಕೊಟ್ಟಿದ್ದೀರಾ’ ಎಂದು ಅಶ್ವಿನಿ ಗೌಡ ಅವರು ಪ್ರಶ್ನೆ ಮಾಡಿದ್ದಾರೆ.

‘ಬಡವರ ಮಕ್ಕಳಿಗೆ ಕಪ್ ಕೊಟ್ಟಿದ್ದೇವೆ ಎಂಬ ಸಾರ್ಥಕತೆ ನಿಮಗೆ ಇದೆಯಾ? ಬಡವರ ಮಕ್ಕಳು ಎಂಬುದು ಬೇರೆ. ಬಡವರ ಮಕ್ಕಳು ಎಂಬ ರೀತಿಯಲ್ಲಿ ನಟನೆ ಮಾಡಿಕೊಂಡು ಜೀವಿಸುವುದು ಬೇರೆ. ಇದರಲ್ಲಿ ತುಂಬಾ ವ್ಯತ್ಯಾಸ ಇದೆ. ಹಾಗಾಗಿ ನನಗೆ ಅದು ಏನೂ ಅನಿಸಲಿಲ್ಲ. ಆಟಕ್ಕೋಸ್ಕರ ಗಿಲ್ಲಿ ನಟ ಏನು ಮಾಡಬೇಕೋ ಅದನ್ನು ಮಾಡಿದ್ದಾರೆ. ಫೇಕ್ ಅಥವಾ ರಿಯಲ್ ಆಗಿದ್ರೂ ಜನರು ಅದನ್ನು ಮೆಚ್ಚಿದ್ದಾರೆ. ನನ್ನ ವ್ಯಕ್ತಿತ್ವ ಬಿಟ್ಟುಕೊಡದೇ ನಾನು ಇಲ್ಲಿಯ ತನಕ ಬಂದು ನಿಂತಿದ್ದೇನೆ’ ಎಂದಿದ್ದಾರೆ ಅಶ್ವಿನಿ ಗೌಡ.

‘ಪ್ರತಿ ಸಂದರ್ಭದಲ್ಲೂ ನನಗೆ ಗಿಲ್ಲಿ ಅವರನ್ನು ಅರ್ಥ ಮಾಡಿಕೊಳ್ಳಲು ಕಷ್ಟ ಆಗುತ್ತಿತ್ತು. ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತಾರೆ ಅನಿಸುತ್ತಿತ್ತು. ಅವರು ಮೊದಲೇ ಬಿಗ್ ಬಾಸ್ ನೋಡಿಕೊಂಡು ಬಂದಿದ್ದರು. ಎಲ್ಲಿ ಯಾವ ಕಾರ್ಡ್ ವರ್ಕ್ ಆಗುತ್ತದೆ ಎಂಬುದು ಅವರಿಗೆ ಗೊತ್ತಿತ್ತು. ಮೊದಲ ದಿನದಿಂದ ಕೊನೇ ದಿನದ ತನಕ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಲೇ ಇದ್ದರು’ ಎಂದು ಅಶ್ವಿನಿ ಗೌಡ ಹೇಳಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟ ವಿನ್ನರ್: ಅಶ್ವಿನಿ ಗೌಡ ಮೊದಲ ಪ್ರತಿಕ್ರಿಯೆ; ನಿರಾಸೆ ವ್ಯಕ್ತಪಡಿಸಿದ ಛಲಗಾರ್ತಿ

‘ಯಾರು ಮುಂದೆ ಹೋದರೂ ಪರವಾಗಿಲ್ಲ, ಆದರೆ ಅಶ್ವಿನಿ ಗೌಡ ಮುಂದೆ ತನಗೆ ಮುಳುವಾಗುತ್ತಾರೆ ಎಂಬುದನ್ನು ಗಿಲ್ಲಿ ಅವರಲ್ಲಿ ನಾನು ನೋಡಿದ್ದೆ. ಗಿಲ್ಲಿ ಎಲ್ಲಿಯೂ ಜಗಳ ಆಡುತ್ತಿರಲಿಲ್ಲ. ಯಾರ ಪರವಾಗಿಯೂ ನಿಲ್ಲುತ್ತಿರಲಿಲ್ಲ. ಇನ್ನೊಬ್ಬರ ವ್ಯಕ್ತಿತ್ವವನ್ನು ಕೆಳಗೆ ಇಟ್ಟು ಮಾತನಾಡುತ್ತಿದ್ದರು’ ಎಂದು ಅಶ್ವಿನಿ ಗೌಡ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

JDS ಮುಖಂಡೆ ಪುತ್ರನ ಕಿರುಕುಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ: ಸಿಡಿದೆದ್ದ ಕ್ರಿಶ್ಚಿಯನ್ ಸಮುದಾಯ – Kannada News | Karwar: Rishala D’Souza suicide case: Mother Demands Justice for Rishel

ಕಾರವಾರ, ಜನವರಿ 19: ಕಾರವಾರ ಜೆಡಿಎಸ್​​ (JDS) ಮುಖಂಡೆ ಪುತ್ರನ ಕಿರುಕಳಕ್ಕೆ ರಿಶೇಲ ಡಿಸೋಜಾ ಆತ್ಮಹತ್ಯೆ (suicide) ಪ್ರಕರಣ ಈಗಾಗಲೇ ಗ್ರಾಮಗಳ ಮಧ್ಯೆ ವೈಮನಸ್ಸಿಗೆ ಕಾರಣವಾಗಿದೆ. ಇತ್ತೀಚೆಗೆ ಕದ್ರಾ ಪಿಎಸ್​​​ಐಯನ್ನು ಅಮಾನತು ಕೂಡ ಮಾಡಲಾಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡು ಇವತ್ತಿಗೆ 11ನೇ ದಿನ. ಇದುವರೆಗೂ ಆರೋಪಿಯನ್ನ ಏಕೆ ಬಂಧಿಸಿಲ್ಲ? ಇದರಲ್ಲಿ ರಾಜಕೀಯ ಪ್ರಭಾವವಿರುವುದು ಗೊತ್ತಾಗುತ್ತಿದೆ ಎಂದು ಮೃತ ಯುವತಿಯ ತಾಯಿ ರೀನಾ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ.

ಕಾಣದ ಕೈಗಳು ನನ್ನ ಮಗಳ ಪ್ರಕರಣದಲ್ಲಿ ಕೆಲಸ ಮಾಡುತ್ತಿವೆ: ರೀನಾ ಡಿಸೋಜಾ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೀನಾ ಡಿಸೋಜಾ, ನನ್ನ ಮಗಳ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಈಗ ಪಿಎಸ್​ಐ ಸಸ್ಪೆಂಡ್​ ಮಾಡಲಾಗಿದೆ. ಆದರೆ ಇದರಲ್ಲಿ ಅವರ ಮೇಲಿನವರ ಕೈವಾಡದ ಶಂಕೆ ಇದೆ. ಕಾಣದ ಕೈಗಳು ನನ್ನ ಮಗಳ ಪ್ರಕರಣದಲ್ಲಿ ಕೆಲಸ ಮಾಡುತ್ತಿವೆ. ಅವರ ವಿರುದ್ಧ ಏಕೆ ಇದುವರೆಗೂ ಕ್ರಮಕೈಗೊಂಡಿಲ್ಲ? ಯಾರೆಲ್ಲಾ ತಪ್ಪು ಮಾಡಿದ್ದಾರೆ ಅವರಿಗೆಲ್ಲಾ ಶಿಕ್ಷೆ ಆಗಲೇಬೇಕು ಎಂದಿದ್ದಾರೆ.

ಇದನ್ನೂ ಓದಿ: ಪ್ರೀತಿಸುವಂತೆ ಕಾಟ: ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

ನನ್ನ ಮಗಳು ಚಿರಾಗ್​​ ನನ್ನ ಪ್ರೀತಿಸುತ್ತಿದ್ದಳು ಎಂಬುವುದು ನನಗೆ ಗೊತ್ತಿರಲಿಲ್ಲ. ನನ್ನ ಗಮನಕ್ಕೆ ಬಂದಾಗ ಮಗಳಿಗೆ ಒಮ್ಮೆ ಬುದ್ದಿ ಹೇಳಿದ್ದೆ. ಕೆಲವು ದಿನ ನನ್ನ ಮಗಳು ಚಿರಾಗ್​ ಜೊತೆಗೆ ಮಾತನಾಡಿರಲಿಲ್ಲ. ಆಗ ಅವರ ಕಡೆಯಿಂದ ಓರ್ವ ನನಗೆ ಕರೆ ಮಾಡಿ ಬೆದರಿಸಿದ್ದ. ರಿಶೇಲ, ಚಿರಾಗ್ ಜೊತೆ ಏಕೆ ಮಾತನಾಡುತ್ತಿಲ್ಲ, ಏನು ಹೇಳಿದ್ದೀಯಾ ಅವಳಿಗೆ. ಅವಳು ಚಿರಾಗ್​ ಜೊತೆಗೆ ಮಾತನಾಡದಿದ್ದರೆ ಸರಿ ಇರಲ್ಲ ಎಂದಿದ್ದರು. ಆದರೆ ನಾನು ಅದಕ್ಕೆಲ್ಲಾ ಜಾಸ್ತಿ ತಲೆ ಕೆಡಿಸಿಕೊಂಡಿರಲಿಲ್ಲ ಎಂದು ರಿಶೇಲ ತಾಯಿ ಹೇಳಿದ್ದಾರೆ.

ಅದಾದ ಬಳಿಕ ಅವರಿಬ್ಬರು ಯಾವಾಗ ಪ್ರೀತಿಸಲು ಆರಂಭಿಸಿದರು ಗೊತ್ತಿಲ್ಲ. ಚಿರಾಗ್​ ತಾಯಿಗೆ ನನ್ನ ಮಗಳು ಅವರ ಮನೆಗೆ ಬರುತ್ತಿದ್ದಾಳೆ ಅಂತ ಗೊತ್ತಿದ್ದರೆ ಅವರ ತಾಯಿ ಏಕೆ ಒಮ್ಮೆಯೂ ನನಗೆ ಫೋನ್ ಮಾಡಿ ಹೇಳಿಲ್ಲ. 20 ವರ್ಷದ ಮಗ ಹುಡುಗಿನಾ ಮನೆಗೆ ಕರೆದುಕೊಂಡು ಬಂದರೂ ಏಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದ್ದಾರೆ.

ಸಾವಿಗೂ ಮುನ್ನ ನನ್ನ ಮಗಳಿಗೆ ಏನು ಮಾಡಿದ್ದಾನೆ ಗೊತ್ತಾಗಬೇಕು

ನನ್ನ ಮಗಳು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ರೀಲ್ಸ್ ಬಗ್ಗೆ ನಮಗೆ ಮಾಹಿತಿ ಇಲ್ಲ. ನನ್ನ ಮಗಳ ಸಾವಿಗೆ ನ್ಯಾಯ ಬೇಕು. ಸಾವಿಗೂ ಮುನ್ನ ಅವಳನ್ನ ಆ ಹುಡುಗ ಏನು ಮಾಡಿದ್ದಾನೆ, ಎಲ್ಲಿಗೆ ಕರೆದುಕೊಂಡು ಹೋಗಿ ಹಾಳು ಮಾಡಿದ್ದಾನೆ ಎಂಬುವುದು ಗೊತ್ತಾಗಬೇಕು. ನನ್ನ ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ನಾನು ಸುಮ್ಮನಿರುವುದಿಲ್ಲ. ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಆಗಬೇಕೆಂದು ಡಿಸಿ ಮತ್ತು ಎಸಿಗೆ ಮನವಿ ಸಲ್ಲಿಸಿದ್ದಾನೆ ಎಂದು ರೀನಾ ಡಿಸೋಜಾ ಹೇಳಿದ್ದಾರೆ.

ಪ್ರಕರಣ ಖಂಡಿಸಿ ನಾಳೆ ಪ್ರತಿಭಟನೆ

ಕಾರವಾರ ಕ್ರಿಶ್ಚಿಯನ್ ಫೋರಂ ಅಧ್ಯಕ್ಷ ಲಿಯೋ ಲೂಯಿಸ್​​ ಮಾತನಾಡಿ, ಪ್ರಕರಣ ಖಂಡಿಸಿ ನಾಳೆ (ಜ.20) ಕಾರವಾರದಲ್ಲಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ರಿಶೇಲ ಸಾವಿಗೆ ನ್ಯಾಯ ಕೋರಿ ಕ್ರಿಶ್ಚಿಯನ್ ಸಂಘಟನೆಯಿಂದ ಕಾರವಾರ ನಗರದ ಮಿತ್ರ ಸಮಾಜ ಸರ್ಕಲ್​ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು

ಮೊದಲ ಮರಣೋತ್ತರ ವರದಿ ನೊಡಿದಾಗ ತಪ್ಪು ಕಂಡುಬರುತ್ತದೆ. ಬಹಳ ಬೇಜವಾಬ್ದಾರಿಯಿಂದ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಕೆಲವು ವಿಚಾರದ ಬಗ್ಗೆ ವೈದ್ಯರನ್ನ ಪ್ರಶ್ನಿಸಿದಾಗ ಪೊಲೀಸ್ ಹಿರಿಯ ಅಧಿಕಾರಿಗಳು ನಮ್ಮ‌ ಗಮನಕ್ಕೆ ತಂದಿಲ್ಲ ಅಂತ ಹೇಳಿದ್ದಾರೆ. ಈಗ ಓರ್ವ PSI ನನ್ನ ಸಸ್ಪೆಂಡ್ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಇನ್ನೂ ಕಾಣದ ಕೈಗಳಿವೆ. ಪೊಲೀಸ್ ಇಲಾಖೆ ಅಧಿಕಾರಿ ಹಾಗೂ ವೈದ್ಯಕೀಯ ಸಿಬ್ಬಂದಿಗೂ ಶಿಕ್ಷೆ ಆಗಬೇಕು. ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಿ ಯುವತಿಯ ಸಾವಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | If you want happiness in life, adopt these habits

ಪ್ರತಿಯೊಬ್ಬರೂ ಸಂತೋಷವಾಗಿರಲು (happiness) ಬಯಸುತ್ತಾರೆ, ಆದರೆ ಇಂದಿನ ಒತ್ತಡದ ಜೀವನದಲ್ಲಿ, ಸಂತೋಷವಾಗಿರುವುದು ಒಂದು ದೊಡ್ಡ ಸವಾಲಿನ ಸಂಗತಿಯಾಗಿದೆ. ಜನರು ತಮಗಾಗಿ ಸಮಯ ಕಂಡುಕೊಳ್ಳಲು ಅಥವಾ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಅನೇಕರು ಖಿನ್ನತೆ ಮತ್ತು ಆತಂಕಕ್ಕೆ ಬಲಿಯಾಗುತ್ತಿದ್ದಾರೆ. ಇವುಗಳನ್ನು ನಿವಾರಿಸುವ ಏಕೈಕ ಮಾರ್ಗವೆಂದರೆ ನಮ್ಮನ್ನು ನಾವು ಸಂತೋಷವಾಗಿಟ್ಟುಕೊಳ್ಳುವುದು. ದೈನಂದಿನ ಜೀವನದಲ್ಲಿ ಈ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ನಿಮ್ಮನ್ನು ಮತ್ತು ನಿಮ್ಮ ಸುತ್ತಮುತ್ತಲಿನವರನ್ನು ಸಂತೋಷವಾಗಿಡಬಹುದು. ಸಂತೋಷವಾಗಿರಲು ಸಹಾಯ ಮಾಡುವ ಆ ಅಭ್ಯಾಸಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಜೀವನದಲ್ಲಿ ಸಂತೋಷವಾಗಿರಲು ಅಳವಡಿಸಿಕೊಳ್ಳಬೇಕಾದ ಅಭ್ಯಾಸಗಳು:

ಒಳ್ಳೆಯ ಆಲೋಚನೆಗಳೊಂದಿಗೆ ದಿನವನ್ನು ಪ್ರಾರಂಭಿಸಿ: ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಮನಸ್ಸನ್ನು ಸಕಾರಾತ್ಮಕ ಆಲೋಚನೆಗಳಿಂದ ತುಂಬಿಸಿ. ದಿನದ ಸಕಾರಾತ್ಮಕ ಆರಂಭವು ಇಡೀ ದಿನದ ಮೇಲೆ ಪರಿಣಾಮ ಬೀರುತ್ತದೆ. ಮತ್ತು ಇದು ನಿಮಗೆ ಆಂತರಿಕ ಸಂತೋಷವನ್ನು ತರುತ್ತದೆ.

ಯಾವಾಗಲೂ ನಗುತ್ತಿರಿ: ನೆನಪಿಡಿ, ಒಂದು ಸರಳ ನಗು ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು. ನೀವು ನಗುವಾಗ, ಸಕಾರಾತ್ಮಕ ಆಲೋಚನೆಗಳು ಸ್ವಯಂಚಾಲಿತವಾಗಿ ಮನಸ್ಸಿಗೆ ಬರುತ್ತವೆ. ಇದು ನಿಮ್ಮನ್ನು ಒತ್ತಡ ಮುಕ್ತವಾಗಿಡಲು ಸಹಾಯ ಮಾಡುತ್ತದೆ.

ಹೊಸ ವಿಷಯಗಳನ್ನು ಪ್ರಯತ್ನಿಸಿ: ನಾವು ಪ್ರತಿದಿನ ಒಂದೇ ಕೆಲಸವನ್ನು ಮಾಡಿದಾಗ, ನಮ್ಮ ಮೆದುಳು ಗಮನ ಹರಿಸುವುದನ್ನು ನಿಲ್ಲಿಸುತ್ತದೆ. ಆದ್ದರಿಂದ, ನಿಮ್ಮ ದಿನಚರಿಗೆ ತಾಜಾತನವನ್ನು ಸೇರಿಸಲು ಹೊಸ ವಿಷಯಗಳನ್ನು ಪ್ರಯತ್ನಿಸಿ. ಉದಾಹರಣೆಗೆ, ಹೊಸ ಖಾದ್ಯವನ್ನು ಪ್ರಯತ್ನಿಸುವುದು ಇತ್ಯಾದಿ.

ಆರೋಗ್ಯಕರ ಜೀವನಶೈಲಿ: ಸಂತೋಷವಾಗಿರುವುದಕ್ಕೆ ಆರೋಗ್ಯಕರ ದೇಹ ಮತ್ತು ಮನಸ್ಸು ಅತ್ಯಗತ್ಯ. ಇದನ್ನು ಸಾಧಿಸಲು, ಪ್ರತಿದಿನ ವ್ಯಾಯಾಮ ಮಾಡಿ, ಸಮತೋಲಿತ ಆಹಾರವನ್ನು ಸೇವಿಸಿ ಮತ್ತು ಸಾಕಷ್ಟು ನಿದ್ರೆ ಮಾಡಿ. ಮಾನಸಿಕ ಶಾಂತಿ ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಲು ನಿಮ್ಮ ದೈನಂದಿನ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿಕೊಳ್ಳಿ.ಈ ಅಭ್ಯಾಸಗಳು ಸಂತೋಷವಾಗಿಡಲು ಸಹಾಯ ಮಾಡುತ್ತದೆ.

ಸಕಾರಾತ್ಮಕವಾಗಿ ಯೋಚಿಸಿ: ಸಕಾರಾತ್ಮಕ ಚಿಂತನೆಯು ಪ್ರತಿಯೊಂದು ಸವಾಲನ್ನು ಸುಲಭವಾಗಿ ಕಾಣುವಂತೆ ಮಾಡುತ್ತದೆ. ಆದ್ದರಿಂದ, ಪ್ರತಿಯೊಂದು ಸನ್ನಿವೇಶದಲ್ಲೂ ಸಕಾರಾತ್ಮಕತೆಯನ್ನು ನೋಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇದು ಮನಸ್ಸಿನ ಶಾಂತಿಯನ್ನು ತರುವುದಲ್ಲದೆ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ

ಸಂಗೀತ ಆಲಿಸಿ: ಯಾವುದೇ ಕೆಲಸದಿಂದ ಬೇಸರವಾದಾಗ, ನಿಮ್ಮ ನೆಚ್ಚಿನ ಹಾಡನ್ನು ಕೇಳಬಹುದು. ಸಂಗೀತ ಕೇಳುವುದರಿಂದ ನೀವು ಸಂತೋಷವಾಗಿರುತ್ತೀರಿ.

ಎಲ್ಲಾದರೂ ಹೋಗಿ: ಒತ್ತಡವನ್ನು ನಿವಾರಿಸಲು, ಸಂತೋಷವಾಗಿರಲು ಕೆಲಸದಿಂದ ಕೊಂಚ ಬ್ರೇಕ್‌ ತೆಗೆದುಕೊಂಡು ಎಲ್ಲಾದರೂ ಟ್ರಿಪ್‌ ಹೋಗಿ. ಖಂಡಿತವಾಗಿಯೂ ಇದು ನಿಮ್ಮ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ.

ನಿಮಗಾಗಿ ಸಮಯ ತೆಗೆದುಕೊಳ್ಳಿ: ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಯಾರೂ ಕೂಡ ತಮಗಾಗಿ ಸಮಯವನ್ನು ಮೀಸಲಿಡುವುದಿಲ್ಲ. ಜೀವನದಲ್ಲಿ ಸಂತೋಷ ಬೇಕೆಂದರೆ ನಮಗಾಗಿ ನಾವು ಸಮಯವನ್ನು ಮೀಸಲಿಡಬೇಕು. ಇದಲ್ಲದೆ ನೀವು ಯಾವಾಗಲೂ ನಗುತ್ತಿರಿ. ಇದು ಮನಸ್ಸಿಗೆ ಸಂತೋಷವನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಗುಡ್​​​ ನ್ಯೂಸ್: ಕೊನೆಗೂ ಈ ರಸ್ತೆ ನಿರ್ಮಾಣಕ್ಕೆ NHAI ಒಪ್ಪಿಗೆ – Kannada News | Bengaluru Airport Traffic: Sadahalli Underpass Unlocks Fast, Signal Free KIA Travel

ಬೆಂಗಳೂರು, ಜ.19: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಹೋಗುವ ಈ ರಸ್ತೆಯಲ್ಲಿ ಯಾವಗಲೂ ಟ್ರಾಪಿಕ್​​​​, ಇದೊಂದು ಪ್ರಯಾಣಿಕರಿಗೆ ದಿನನಿತ್ಯದ ಗೋಳಾಗಿತ್ತು. ಇದೀಗ ಇದಕ್ಕೆ ಮುಕ್ತಿ ಸಿಗಲಿದೆ. ಬಳ್ಳಾರಿ ರಸ್ತೆಯನ್ನು ಬೆಂಗಳೂರಿನ ಅತ್ಯಂತ ವೇಗದ ಹೆದ್ದಾರಿಯನ್ನಾಗಿ ಬದಲಾವಣೆ ಮಾಡಲಾಗತ್ತಿದೆ. ಎತ್ತರದ ಕಾರಿಡಾರ್‌ಗಳು, ಫ್ಲೈಓವರ್‌ಗಳು ಮತ್ತು ಸಿಗ್ನಲ್-ಮುಕ್ತ ಮಾರ್ಗಗಳು ನಿರ್ಮಾಣ ಮಾಡಲಾಗುತ್ತಿದೆ. ಇದರ ತೆಗೆ ಹೆಬ್ಬಾಳದಿಂದ ಕೇವಲ 22 ಕಿ.ಮೀ ದೂರದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೋಗಲು ಸಾದಹಳ್ಳಿ ಜಂಕ್ಷನ್‌ನಲ್ಲಿ ಇರುವ ಟ್ರಾಫಿಕ್ ಸಿಗ್ನಲ್​​ಗೆ ಬ್ರೇಕ್​ ಹಾಕಲಾಗುತ್ತದೆ. ವಿಮಾನ ನಿಲ್ದಾಣಕ್ಕೆ ಹೋಗಲು ಇರುವ ಸಾದಹಳ್ಳಿ ಜಂಕ್ಷನ್‌ ಸಿಗ್ನಲ್​​ನ್ನ್ನು ತೆಗೆದು, ಸಾದಹಳ್ಳಿ ಜಂಕ್ಷನ್‌ನಲ್ಲಿ 750 ಮೀಟರ್ ಉದ್ದದ, ಆರು ಪಥಗಳ ಅಂಡರ್‌ಪಾಸ್ ನಿರ್ಮಿಸುವ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪುನರುಜ್ಜೀವನಗೊಳಿಸಿದೆ. ಈ ಅಂಡರ್‌ಪಾಸ್ ಪೂರ್ಣಗೊಂಡ ನಂತರ, ವಿಮಾನ ನಿಲ್ದಾಣಕ್ಕೆ ಯಾವುದೇ ತಡೆ ಇಲ್ಲದೆ ಸಂಚಾರ ಮಾಡಬಹುದು.

ಇದು ನಗರದ ಅತ್ಯಂತ ನಿರ್ಣಾಯಕ ಕಾರಿಡಾರ್‌ಗಳಲ್ಲಿ ಒಂದಾಗಿದೆ. ಹೆಬ್ಬಾಳ ಮತ್ತು ಟ್ರಂಪೆಟ್ ಇಂಟರ್ಚೇಂಜ್ ನಡುವಿನ ಸಿಗ್ನಲ್ ಮುಕ್ತ ಪ್ರದೇಶದಲ್ಲಿ ಈ ಸಾದಹಳ್ಳಿ ಜಂಕ್ಷನ್‌ ಸಿಗ್ನಲ​​​ ದೊಡ್ಡ ತಲೆನೋವಾಗಿತ್ತು. ಜಕ್ಕೂರು, ಯಲಹಂಕ ಮತ್ತು ಇತರ ಜಂಕ್ಷನ್‌ಗಳಲ್ಲಿ ವಿಮಾನ ನಿಲ್ದಾಣದ ಸಂಚಾರ ಫ್ಲೈಓವರ್‌ಗಳ ಮೇಲೆ ಹಾದು ಹೋಗುತ್ತದೆ. ಸ್ಥಳೀಯ ಸಂಚಾರಕ್ಕೆ ಮಾತ್ರ ಸ್ವಲ್ಪ ತಡೆಯಲಾಗಿದೆ. ವಿಶೇಷವಾಗಿ ಪೀಕ್ ಅವರ್‌ಗಳು, ಅಂತರರಾಷ್ಟ್ರೀಯ ವಿಮಾನ ನಿರ್ಗಮನದ ಸಮಯದಲ್ಲಿ ಈ ಹಿಂದೆ ಸಮಸ್ಯೆಯಾಗುತ್ತಿತ್ತು. ಇದೀಗ ಇದನ್ನು ಪರಿಹಾರ ಮಾಡಲಾಗಿದೆ.

35 ಕೋಟಿ ರೂ.ಗಳ ಯೋಜನೆಗೆ NHAI ಪ್ರಧಾನ ಕಚೇರಿಯಿಂದ ಅನುಮೋದನೆ ದೊರೆತಿದ್ದು, ಅಧಿಕೃತ ಚಾಲನೆ ನೀಡಲಾಗಿದೆ. ಫೆಬ್ರವರಿಯಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗುವ ನಿರೀಕ್ಷೆಯಿದೆ. ಸುಮಾರು ಒಂದು ದಶಕದ ಹಿಂದೆ, NHAI ಮೊದಲು ಸಾದಹಳ್ಳಿ ಸಿಗ್ನಲ್ ಅನ್ನು ತೆಗೆದುಹಾಕುವ ಪ್ರಸ್ತಾಪವನ್ನು ಮಾಡಿತ್ತು. ಈ ಯೋಜನೆಯು ಆರಂಭದಲ್ಲಿ ಮೇಲ್ಸೇತುವೆಯನ್ನು ನಿರ್ಮಿಸಲು ಯೋಜನೆಯನ್ನು ಹಾಕಿತ್ತು. ಆದರೆ ಕೆಲವೊಂದು ಕಾರಣಗಳಿಂದ ಈ ಯೋಜನೆಯ ಒಪ್ಪಿಗೆ ವಿಳಂಬವಾಗಿತ್ತು. ಆದರೆ ಸಂಚಾರ ಬದಲಾವಣೆಗಳೊಂದಿಗೆ ಕೆಲಸವು ಅಂತಿಮವಾಗಿ 2019 ರಲ್ಲಿ ಪ್ರಾರಂಭವಾಯಿತು. ಆದರೆ ಅಧಿಕಾರಿಗಳು ಈ ರಸ್ತೆಯ ಮ್ಯಾಪಿಂಗ್ ಹಾಗೂ ಡಿಸೈನ್​​ನಲ್ಲಿ ಕೆಲವೊಂದು ಬದಲಾವಣೆಗಳು ಆಗಬೇಕು ಎಂದು ಮತ್ತೆ ಈ ಯೋಜನೆ ವಿಳಂಬವಾಗಿತ್ತು. ಇದರಿಂದ ಸಾರ್ವಜನಿಕರಿಗೆ ನಿರಾಸೆ ಕೂಡ ಆಗಿತ್ತು. ಆದರೆ ಇದೀಗ ಇದಕ್ಕೆ ಸಂಪೂರ್ಣ ಬೆಂಬಲ ಸಿಕ್ಕಿದ್ದು, ಕೆಲಸ ಆರಂಭವಾಗಿದೆ.

ಮುಖ್ಯ ರಸ್ತೆಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಕಾರಣ, ಸಾದಹಳ್ಳಿ ಜಂಕ್ಷನ್‌ನಲ್ಲಿ ಸುಮಾರು ಎರಡು ವರ್ಷಗಳ ಕಾಲ ಸಂಚಾರ ಮಾಡಲ ಅವಕಾಶ ಇರುವುದಿಲ್ಲ ಜತೆಗೆ ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಸೂಚನೆ ನೀಡಲಾಗಿದೆ. ಹೆದ್ದಾರಿಯ ಎರಡೂ ಬದಿಗಳಲ್ಲಿ ದ್ವಿಪಥ ಸರ್ವಿಸ್ ರಸ್ತೆಗಳನ್ನು ವಿಸ್ತರಿಸಲು NHAI ಯೋಜಿಸಿದೆ. ಸಾದಹಳ್ಳಿ ಮತ್ತು ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳು ಅನುಕೂಲಕ್ಕೆ ಹಾಗೂ ಸಂಚಾರವನ್ನು ವೇಗಗೊಳಿಸಲು ಕಾಂಕ್ರೀಟ್ ಸ್ಲ್ಯಾಬ್ ಅನ್ನು ಸಹ ನಿರ್ಮಾಣ ಮಾಡಲಾಗುವುದು ಎಂದು ಇಲಾಖೆ ಹೇಳಿದೆ. ವಿಮಾನ ನಿಲ್ದಾಣದ ಪ್ರಯಾಣಿಕರು ಸುಗಮ ಸಂಚಾರಕ್ಕಾಗಿ ಕಾಯುತ್ತಿದ್ದು, ಸಾದಹಳ್ಳಿ, ಚೌಡೇನಹಳ್ಳಿ, ಚನ್ನಹಳ್ಳಿ, ಗಡೇನಹಳ್ಳಿ ಮತ್ತು ಹತ್ತಿರದ ಹಳ್ಳಿಗಳಿಗೂ ಇದು ತುಂಬಾ ಅನುಕೂಲ ಆಗಲಿದೆ. ದೈನಂದಿನ ಪ್ರಯಾಣ, ಶಾಲಾಗೆ ಹೋಗುವವರಿಗೆ, ಕೃಷಿ ಸಾರಿಗೆ ಮತ್ತು ದೇವನಹಳ್ಳಿ ಮತ್ತು ನಗರಕ್ಕೆ ಪ್ರವೇಶಕ್ಕಾಗಿ ಈ ಜಂಕ್ಷನ್ ಒಂದು ಪ್ರಮುಖ ಕ್ರಾಸಿಂಗ್ ಪಾಯಿಂಟ್ ಆಗಿದೆ.

ಇದನ್ನೂ ಓದಿ: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ

ಎನ್‌ಎಚ್‌ಎಐ ಯಲಹಂಕ ವಾಯುಪಡೆ ನಿಲ್ದಾಣದ ಬಳಿ ಕಟ್-ಅಂಡ್-ಕವರ್ ವಿಧಾನವನ್ನು ಬಳಸಿಕೊಂಡು 70 ಕೋಟಿ ರೂ. ಅಂದಾಜು ವೆಚ್ಚದಲ್ಲಿ 1 ಕಿಮೀ ಉದ್ದದ ಸರ್ವಿಸ್​ ರಸ್ತೆಯನ್ನು ನಿರ್ಮಿಸುತ್ತಿದೆ. ಹೆಬ್ಬಾಳ ಮತ್ತು ಟ್ರಂಪೆಟ್ ಇಂಟರ್‌ಚೇಂಜ್ ನಡುವಿನ ಏಕೈಕ ಸರ್ವಿಸ್​ ರಸ್ತೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆಬ್ಬಾಳ ಮೇಲ್ಸೇತುವೆ ಬಳಿಯ ಸರ್ವಿಸ್ ರಸ್ತೆಗಳನ್ನು ಅಗಲಗೊಳಿಸುವುದು ಮತ್ತು ಜಕ್ಕೂರು ಏರೋಡ್ರೋಮ್ ಬಳಿ ಡಾಂಬರೀಕರಣ ಸೇರಿದಂತೆ ನವೀಕರಣ ಮಾಡಿದ್ರೆ ಖಂಡಿತ ವಿಮಾನ ನಿಲ್ದಾಣಕ್ಕೆ ವೇಗವಾಗಿ ತಲುಪಬಹುದು. ಸಾದಹಳ್ಳಿ ಮತ್ತು ಯಲಹಂಕ ವಾಯುಪಡೆ ನಿಲ್ದಾಣದಲ್ಲಿನ ಯೋಜನೆಗಳು ಪೂರ್ಣಗೊಂಡ ನಂತರ, ಕೆಐಎ ರಸ್ತೆಯಲ್ಲಿ ಸಂಚಾರ ಯಾವುದೇ ಅಡೆತಡೆಯಿಲ್ಲದೆ ಹೋಗಬಹುದು ಎಂದು ರಾಷ್ಟ್ರೀಯ ರಸ್ತೆ ಸಾರಿಗೆ ಇಲಾಖೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಮ್ ಮಾಡಿ

Source link