Category Archives: Blog

Your blog category

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಮೇ 25 ರಿಂದ ಮೇ 31ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯವನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಾನಗಳು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಶನಿ ಗ್ರಹ ಮೀನ ರಾಶಿಯಲ್ಲಿ, ಕುಜ ಮೇಷ ರಾಶಿಯಲ್ಲಿ, ರವಿ ವೃಷಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಗುರು, ಶುಕ್ರ ಮತ್ತು ಬುಧ ಗ್ರಹಗಳು ಮಿಥುನ ರಾಶಿಯಲ್ಲಿ ಸಂಚರಿಸಲಿವೆ. ಮೇ 29 ರಂದು ಬುಧ ಗ್ರಹ ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶಿಸಲಿದೆ.

ಈ ವಾರದಲ್ಲಿ ಕೊಕ್ಕಡ ಪುತ್ತಿಗೆ ವರ್ದಂತಿ, ಸರ್ವತ್ರ ಏಕಾದಶಿ, ಸೌರ ನರಸಿಂಹ ಜಯಂತಿ ಮತ್ತು ಪ್ರದೋಷದಂತಹ ಶುಭ ದಿನಗಳು ಇವೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಸಂಬಂಧಗಳು ಮತ್ತು ಪ್ರಯಾಣದ ಯೋಗಗಳ ಬಗ್ಗೆ ಸೂಕ್ತ ಸಲಹೆಗಳನ್ನು ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಅಲ್ಲದೆ, ಪ್ರತಿಯೊಂದು ರಾಶಿಯವರಿಗೆ ನಿರ್ದಿಷ್ಟ ದೇವಸ್ಥಾನಗಳಿಗೆ ಭೇಟಿ, ದಾನ, ಮಂತ್ರ ಜಪ ಮತ್ತು ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಈ ವಾರದಲ್ಲಿ ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಗುರೂಜಿ ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ – Kannada News | Digital Arrest Fraud: Elderly Woman Extorted of ₹24 Crore in Bengaluru, Five Arrested After Bank Manager Alerts Police

ಬೆಂಗಳೂರು, ಮೇ 24: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಖದೀಮರ ಹಣದ ದಾಹಕ್ಕೆ ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಡಲು ಬಂದು ವೃದ್ಧೆ ಬಚಾವ್​​ ಆಗಿದ್ದು, ಕಳೆದ ಜನವರಿಯಿಂದಲೇ ಆರೋಪಿಗಳು ಹಣ ವಸೂಲಿಗೆ ಇಳಿದಿದ್ದರು ಎಂಬುದು ಗೊತ್ತಾಗಿದೆ. ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಪ್ರಕರಣ ಬಯಲು
  • ವೃದ್ಧೆಯಿಂದ ಕೋಟಿ ಕೋಟಿ ಸುಲಿಗೆ ಮಾಡಿರುವ ಖದೀಮರು
  • ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ಎಂಬವರಿಗೆ ಪ್ರಾಪರ್ಟಿ ಮಾರಿದ್ದರಿಂದ ಕೋಟ್ಯಾಂತರ ರೂಪಾಯಿ ಹಣ ಬಂದಿತ್ತು. ಇವರ ಬ್ಯಾಂಕ್​​ ವಹಿವಾಟು ಮಾಹಿತಿ ಪಡೆದ ಆರೋಪಿಗಳು ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ಅವರನ್ನು ಬೆದರಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಹೆಸರಲ್ಲಿ ಲಕ್ಷ್ಮೀ ಅವರಿಗೆ ಭಯ ಹುಟ್ಟಿಸಿದ್ದ ಖದೀಮರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಒಟ್ಟು 24 ಕೋಟಿ ರೂಪಾಯಿ ಹಣವನ್ನು ಅವರಿಂದ ಪೀಕಿದ್ದಾರೆ. ಹೀಗಿದ್ದರೂ ಇವರ ಹಣದಾಹ ಮಾತ್ರ ತೀರಿರಲಿಲ್ಲ. ಹೀಗಾಗಿ ಮನೆಯಲ್ಲಿದ್ದ 1 ಕೆಜಿ 300 ಗ್ರಾಂ ಚಿನ್ನವನ್ನ ಅಡಿಟ್ಟು ಹಣ ಪಡೆಯಲು ಲಕ್ಷೀ ಬ್ಯಾಂಕ್​​ಗೆ ತೆರಳಿದ್ದರು. ಇದನ್ನು ಗಮನಿಸಿದ ಬ್ರಾಂಚ್ ಮ್ಯಾನೇಜರ್​​, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ; 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!

ಇನ್ನು ಕೂಡಲೇ ಬ್ಯಾಂಕ್​​ಗೆ ಬಂದ ಸಿಸಿಬಿ ಸೈಬರ್​​ ಪೊಲೀಸರು, ಲಕ್ಷ್ಮೀ ಅವರನ್ನು ಈ ಸಂಬಂಧ ವಿಚಾರಿಸಿದ್ದಾರೆ. ಆದರೆ ಆರಂಭದಲ್ಲಿ ಏನನ್ನೂ ಅವರು ಬಾಯು ಬಿಟ್ಟಿರಲಿಲ್ಲ. ಹೀಗಾಗಿ ತಮ್ಮದೇ ಸ್ಟೈಲ್​​ನಲ್ಲಿ ಪೊಲೀಸರು ಕೇಳಿದಾಗ ಡಿಜಿಟಲ್​​ ಅರೆಸ್ಟ್​​ ಸತ್ಯ ಹೊರಬಂದಿದೆ. ಕೂಡಲೇ ಸಂತ್ರಸ್ತೆಯಿಂದ ದೂರು ಪಡೆದಿರುವ ಪೊಲೀಸರು, ವಿದೇಶದಲ್ಲಿರುವ ಅವರ ಮಕ್ಕಳಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪ್ರಕರಣ ಸಂಬಂಧ ತನಿಖೆಗಿಳಿದ ಖಾಕಿ ಮುಂಬೈ ,ಅಲಹಬಾದ್, ದೆಹಲಿ ಮೂಲದ ಆರೋಪಿಗನ್ನು ಹೆಡೆಮುರಿ ಕಟ್ಟಿದೆ. ಗೌರವ್ ಕುಮಾರ್ , ಓಂ ಪ್ರಕಾಶ್ ರಾಜ್ ಪುತ್ ಸೇರಿದಂತೆ ಐವರನ್ನು ಅರೆಸ್ಟ್ ಮಾಡಲಾಗಿದೆ. ಸುಲಿಗೆ ಮಾಡಿದ್ದ ಹಣವನ್ನು ಆರೋಪಿಗಳು ಒಟ್ಟು 22 ಖಾತೆಗಳಿಗೆ ವರ್ಗಾಯಿಸಿದ್ದು, 60 ಲಕ್ಷ ಹಣ ಇರುವ ಅಕೌಂಟ್​​ನ ಪೊಲೀಸರು ಸೀಜ್​​ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:25 am, Sun, 24 May 26

Source link

‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್ – Kannada News | Rocking Star Yash talks about Toxic movie female characters ahead of release

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಹಾಗೂ ಬಹುಕೋಟಿ ವೆಚ್ಚದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ಸದ್ಯ ಬಿಡುಗಡೆಯ ಹಂತದಲ್ಲಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾ ಬಿಡುಗಡೆಗೂ ಮುನ್ನ ನಟ ಯಶ್ (Yash) ಈ ಚಿತ್ರದ ಕಥೆ ಮತ್ತು ಅದರಲ್ಲಿನ ಮಹಿಳಾ ಪಾತ್ರಗಳ ಕುರಿತು ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿರುವ ಮಹಿಳಾ ಪಾತ್ರಗಳು ಅತ್ಯಂತ ಶಕ್ತಿಶಾಲಿ ಹಾಗೂ ಬೋಲ್ಡ್ ಆಗಿ ಮೂಡಿಬಂದಿವೆ ಎಂದು ಅವರು ಹೇಳಿದ್ದಾರೆ.

‘ವೆರೈಟಿ ಇಂಡಿಯಾ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಯಶ್, ‘ಸಾಮಾನ್ಯವಾಗಿ ಪುರುಷರಿಗೆ ಗ್ಯಾಂಗ್‌ಸ್ಟರ್ ಜಗತ್ತು ಅಥವಾ ಮನುಷ್ಯರ ಕರಾಳ ಮುಖದ ಬಗ್ಗೆ ಮಾತನಾಡಲು ಹೆಚ್ಚಿನ ಅವಕಾಶಗಳು ಸಿಗುತ್ತವೆ. ಆದರೆ ಆಳವಾದ ಭಾವನೆಗಳ ತಿಳುವಳಿಕೆ ಇರುವ ಗೀತು ಮೋಹನ್‌ದಾಸ್ ಅವರಂತಹ ನಿರ್ದೇಶಕಿ ಈ ಕರಾಳ ಜಗತ್ತಿನ ಕಥೆಯನ್ನು ಕೈಗೆತ್ತಿಕೊಂಡಾಗ, ಪ್ರತಿಯೊಂದು ದೃಶ್ಯವೂ ವಿಭಿನ್ನ ತಿರುವು ಪಡೆದುಕೊಳ್ಳುತ್ತದೆ’ ಎಂದಿದ್ದಾರೆ.

ಮುಂದುವರಿದು ಮಾತನಾಡಿದ ಯಶ್ ಅವರು, ‘ನಮ್ಮ ಸಿನಿಮಾದಲ್ಲಿ ಕೆಲವು ಮಹಿಳಾ ಪಾತ್ರಗಳಿವೆ. ಅವರು ನಿಜಕ್ಕೂ ತುಂಬಾ ಬೋಲ್ಡ್ ಮತ್ತು ಶಕ್ತಿಶಾಲಿ ಮಹಿಳೆಯರು. ತಮ್ಮ ಜೀವನದ ಜವಾಬ್ದಾರಿಯನ್ನು ತಾವೇ ಹೊತ್ತು, ಯಾವುದೇ ಪರಿಸ್ಥಿತಿಯಲ್ಲೂ ಬದುಕುಳಿಯುವ ಧೀರರು. ಪ್ರತಿಯೊಬ್ಬ ಮನುಷ್ಯನಲ್ಲೂ ಒಂದು ರೀತಿಯ ವಿಭಿನ್ನ ಹಿಂಸೆ ಇರುತ್ತದೆ. ಆದ್ದರಿಂದ, ಅಂತಹ ಪ್ರಬಲ ವ್ಯಕ್ತಿತ್ವಗಳನ್ನು ಕಥೆಯೊಳಗೆ, ಅದೂ ಕೂಡ ಒಬ್ಬ ಮಹಿಳೆಯ ದೃಷ್ಟಿಕೋನದ ಮೂಲಕ ತಂದಾಗ ಅದು ಪ್ರೇಕ್ಷಕರಿಗೆ ಸಂಪೂರ್ಣ ಹೊಸ ಅನುಭವ ನೀಡುತ್ತದೆ’ ಎಂದು ಯಶ್ ವಿವರಿಸಿದ್ದಾರೆ.

‘ಟಾಕ್ಸಿಕ್’ ಒಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಗೀತು ಮೋಹನ್‌ದಾಸ್ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಕ್ಷಯ್ ಒಬೆರಾಯ್, ಸುದೇವ್ ನಾಯರ್, ಅಮಿತ್ ತಿವಾರಿ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.

ಇದನ್ನೂ ಓದಿ: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ: ಯಶ್ ಸಿನಿಮಾದ ತೆರೆಹಿಂದೆ 10 ಸಾವಿರಕ್ಕೂ ಹೆಚ್ಚು ತಂತ್ರಜ್ಞರು

ಈ ಚಿತ್ರವನ್ನು ಏಕಕಾಲದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಆ್ಯಕ್ಷನ್ ಸೀಕ್ವೆನ್ಸ್‌ಗಳಿಗಾಗಿ ಹಾಲಿವುಡ್‌ನ ಪ್ರಸಿದ್ಧ ‘ಜಾನ್ ವಿಕ್’ ಸಿನಿಮಾ ಖ್ಯಾತಿಯ ಜೆಜೆ ಪೆರ್ರಿ ಸಾಹಸ ನಿರ್ದೇಶನ ಮಾಡಿದ್ದರೆ, ಭಾರತದ ಖ್ಯಾತ ಅನ್ಬರಿವ್ ಜೋಡಿ ಕೂಡ ಕೆಲವು ಪ್ರಮುಖ ಸಾಹಸ ದೃಶ್ಯಗಳನ್ನು ಸಂಯೋಜಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ – Kannada News | PM Kisan Samman Nidhi Yojana, registration, eligibility, beneficiaries number and other details

ನವದೆಹಲಿ, ಮೇ 24: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಆರಕ್ಕೂ ಹೆಚ್ಚು ವರ್ಷಗಳಾಗಿದ್ದು, ಇದು ವಿಶ್ವದ ಅತಿದೊಡ್ಡ ಡಿಬಿಟಿ ಸ್ಕೀಮ್ ಎನಿಸಿದೆ. ಅತಿಹೆಚ್ಚು ಜನರಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರ ವ್ಯವಸಾಯಕ್ಕೆ ಸಹಾಯಧನ ನೀಡಲೆಂದು ಶುರುವಾದ ಈ ಯೋಜನೆಯಲ್ಲಿ ಈವರೆಗೂ ಫಲಾನುಭವ ಪಡೆದಿರುವವರ ಸಂಖ್ಯೆ 11 ಕೋಟಿಗೂ ಅಧಿಕ ಇದೆ. ಸದ್ಯ 9.46 ಕೋಟಿ ಜನರು ಇದರ ಫಲಾನುಭವ ಪಡೆಯುತ್ತಿದ್ದಾರೆ.

ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ ಅನ್ನು ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇಲ್ಲಿಯವರೆಗೆ 22 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. 2026ರ ಮಾರ್ಚ್ 13ರಂದು ಕೊನೆಯ ಕಂತು ಬಿಡುಗಡೆಯಾಗಿದ್ದು. 23ನೇ ಕಂತು 2026ರ ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿಎಷ್ಟಿದೆ?

ಕರ್ನಾಟಕದಲ್ಲಿ 44 ಲಕ್ಷ ಮಂದಿ ಫಲಾನುಭವಿಗಳು

ಪಿಎಂ ಕಿಸಾನ್ ಸ್ಕೀಮ್​ನಲ್ಲಿ ದೇಶಾದ್ಯಂತ ಸದ್ಯ 9.46 ಕೋಟಿ ಫಲಾನುಭವಿಗಳಿದ್ದು, ಇದರಲ್ಲಿ ಕರ್ನಾಟಕದ 44-45 ಲಕ್ಷ ಮಂದಿ ರೈತರು ನೊಂದಾಯಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಜ್ಯದಲ್ಲಿ ಎರಡು ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಯುಪಿ ನಂಬರ್ ಒನ್. ಕೇರಳದಲ್ಲಿ ತಮಿಳುನಾಡಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಿಎಂ ಕಿಸಾನ್ ಪ್ರಯೋಜನ ಪಡೆಯುತ್ತಿದ್ದಾರೆ. ಈ ಸ್ಕೀಮ್​ನಲ್ಲಿ ಅತಿಹೆಚ್ಚು ಫಲಾನುಭವಿಗಳನ್ನು ಹೊಂದಿರುವ ರಾಜ್ಯಗಳಿವು:

  1. ಉತ್ತರಪ್ರದೇಶ: 2.18 ಕೋಟಿ
  2. ಮಹಾರಾಷ್ಟ್ರ: 90 ಲಕ್ಷ
  3. ಮಧ್ಯಪ್ರದೇಶ: 82 ಲಕ್ಷ
  4. ಬಿಹಾರ: 73 ಲಕ್ಷ
  5. ರಾಜಸ್ಥಾನ: 66 ಲಕ್ಷ
  6. ಗುಜರಾತ್: 51 ಲಕ್ಷ
  7. ಪಶ್ಚಿಮ ಬಂಗಾಳ: 45 ಲಕ್ಷ
  8. ಕರ್ನಾಟಕ: 42 ಲಕ್ಷ
  9. ಆಂಧ್ರಪ್ರದೇಶ: 39 ಲಕ್ಷ
  10. ಒಡಿಶಾ: 34 ಲಕ್ಷ

ಇದನ್ನೂ ಓದಿ: ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು

ಪಿಎಂ ಕಿಸಾನ್ ಸ್ಕೀಮ್​ಗೆ ಯಾರು ನೊಂದಾಯಿಸಬಹುದು?

ಸ್ವಂತ ಕೃಷಿ ಜಮೀನು ಹೊಂದಿರುವ ಯಾವುದೇ ಭಾರತೀಯ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆದರೆ, ಕೆಲ ಷರತ್ತುಗಳಿವೆ. ಒಂದು ಕುಟುಂಬದಲ್ಲಿ ಒಬ್ಬರೇ ಫಲಾನುಭವಿ ಇರಲು ಸಾಧ್ಯ. ಕುಟುಂಬದಲ್ಲಿ ಇಬ್ಬರ ಹೆಸರಲ್ಲಿ ಜಮೀನು ಇದ್ದರೂ ಒಬ್ಬರಿಗೆ ಮಾತ್ರ ಸಿಗುತ್ತದೆ. ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಉದ್ಯೋಗಿಗಳು, ಪಿಂಚಣಿದಾರರು, ಶಾಸಕರು, ಸಂಸದರು ಮೊದಲಾದವರು ಸ್ವಂತ ಕೃಷಿಭೂಮಿ ಹೊಂದಿದ್ದರೂ ಅವರು ಫಲಾನಭವಕ್ಕೆ ಅರ್ಹರಾಗಿರುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:33 am, Sun, 24 May 26

Source link

ಎಬೋಲಾ ಆತಂಕ; ಕಾಂಗೋ, ಉಗಾಂಡಾ, ದಕ್ಷಿಣ ಸುಡಾನ್‌ ಪ್ರಯಾಣಿಕರಿಗೆ ಭಾರತದಿಂದ ಮಾರ್ಗಸೂಚಿ ಬಿಡುಗಡೆ – Kannada News | Ebola Outbreak India issues guidelines for passengers traveling to Congo, Uganda and South Sudan

ನವದೆಹಲಿ, ಮೇ 24: ಆಫ್ರಿಕಾ ದೇಶಗಳಲ್ಲಿ ಹರಡುತ್ತಿರುವ ಭೀಕರ ಎಬೋಲಾ (Ebola) ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನಮ್ಮ ದೇಶದ ನಾಗರಿಕರಿಗೆ ಅತ್ಯಂತ ಮಹತ್ವದ ಮಾರ್ಗಸೂಚಿಯನ್ನು (Travel Advisory) ಬಿಡುಗಡೆ ಮಾಡಿದೆ. ಕಾಂಗೋ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಅನಗತ್ಯವಾಗಿ ಪ್ರಯಾಣಿಸಬೇಡಿ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾರತೀಯರಿಗೆ ಸೂಚಿಸಿದೆ.

ಇತ್ತೀಚೆಗೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ಮತ್ತು ಉಗಾಂಡಾ ದೇಶಗಳಲ್ಲಿ ಎಬೋಲಾ ವೈರಸ್‌ನ ಅತ್ಯಂತ ಅಪರೂಪದ ಹಾಗೂ ಅಪಾಯಕಾರಿ ತಳಿಯಾದ ‘ಬುಂಡಿಬುಗ್ಯೊ’ (Bundibugyo strain) ಭಾರಿ ಪ್ರಮಾಣದಲ್ಲಿ ಹರಡುತ್ತಿದೆ. ಈಗಾಗಲೇ ಅಲ್ಲಿ ನೂರಾರು ಜನರು ಈ ರೋಗಕ್ಕೆ ತುತ್ತಾಗಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ವಿಶ್ವ ಆರೋಗ್ಯ ಸಂಸ್ಥೆ (WHO) ಇದನ್ನು ‘ಅಂತಾರಾಷ್ಟ್ರೀಯ ಆತಂಕದ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ (PHEIC) ಎಂದು ಘೋಷಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಕಾಂಗೋ ಮತ್ತು ಉಗಾಂಡಾದ ಗಡಿಗೆ ಹೊಂದಿಕೊಂಡಿರುವ ದಕ್ಷಿಣ ಸುಡಾನ್ ದೇಶಕ್ಕೂ ಈ ರೋಗ ಹರಡುವ ಭಾರಿ ಅಪಾಯ ಇರುವುದರಿಂದ ಈ ಮೂರೂ ದೇಶಗಳನ್ನು ‘ಹೆಚ್ಚಿನ ಅಪಾಯವಿರುವ ವಲಯ’ ಎಂದು ವರ್ಗೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದಿಂದ ಪ್ರಮುಖ ಸೂಚನೆಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (DGHS) ಹೊರಡಿಸಿರುವ ಪ್ರಮುಖ ಮಾರ್ಗಸೂಚಿಗಳು ಹೀಗಿವೆ:

ಅನಗತ್ಯ ಪ್ರಯಾಣ ಬೇಡ:

ಮುಂದಿನ ಆದೇಶದವರೆಗೆ ಭಾರತೀಯ ನಾಗರಿಕರು ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಯಾವುದೇ ತುರ್ತು ಕೆಲಸವಿಲ್ಲದಿದ್ದರೆ ಪ್ರಯಾಣಿಸುವುದನ್ನು ಕಡ್ಡಾಯವಾಗಿ ತಪ್ಪಿಸಬೇಕು.

ಸ್ಥಳೀಯ ನಿಯಮ ಪಾಲನೆ:

ಪ್ರಸ್ತುತ ಆ ದೇಶಗಳಲ್ಲಿ ವಾಸಿಸುತ್ತಿರುವ ಅಥವಾ ಈಗಾಗಲೇ ಅಲ್ಲಿಗೆ ಪ್ರಯಾಣಿಸಿರುವ ಭಾರತೀಯರು ಅಲ್ಲಿನ ಸ್ಥಳೀಯ ಆರೋಗ್ಯ ಇಲಾಖೆ ನೀಡಿರುವ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಭಾರತಕ್ಕೆ ಮರಳುವವರಿಗೆ ಕಟ್ಟುನಿಟ್ಟಿನ ತಪಾಸಣೆ:

ಸೋಂಕಿತ ದೇಶಗಳಿಂದ ಭಾರತದ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಿಗೆ ಆಗಮಿಸುವ ಅಥವಾ ಅಲ್ಲಿಂದ ಟ್ರಾನ್ಸಿಟ್ ಮೂಲಕ ಬರುವ ಪ್ರತಿಯೊಬ್ಬ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ.

ಇದನ್ನೂ ಓದಿ: ಕಾಂಗೋ, ಉಗಾಂಡಾದಲ್ಲಿ ಎಬೋಲಾ ರುದ್ರನರ್ತನ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ದೆಹಲಿ, ಕೊಚ್ಚಿ, ಹೈದರಾಬಾದ್ ಸೇರಿದಂತೆ ದೇಶದ ಎಲ್ಲಾ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್ ಅನ್ನು ತೀವ್ರಗೊಳಿಸಲಾಗಿದೆ. ಪ್ರಯಾಣಿಕರು ಭಾರತಕ್ಕೆ ಬಂದಿಳಿಯುವ ಮುನ್ನವೇ ವಿಮಾನದಲ್ಲಿ ಸ್ವಯಂ-ಘೋಷಣಾ ಪತ್ರಗಳನ್ನು ಭರ್ತಿ ಮಾಡಬೇಕಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಮತ್ತು ದೇಶದ ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ, ಮೇ 28ರಿಂದ ದೆಹಲಿಯಲ್ಲಿ ನಡೆಯಬೇಕಾಗಿದ್ದ ‘ಭಾರತ-ಆಫ್ರಿಕಾ ಫೋರಂ ಶೃಂಗಸಭೆ’ಯನ್ನು (India-Africa Forum Summit) ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದೂಡಲಾಗಿದೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Unique Traditions: ಜಗತ್ತಿನಾದ್ಯಂತ ಭಾನುವಾರ ವಾರದ ರಜೆ; ಆದರೆ ನೇಪಾಳದಲ್ಲೇಕೆ ಶನಿವಾರ ರಜೆ? ಇಲ್ಲಿದೆ ಅಸಲಿ ಕಾರಣ! – Kannada News | Why Nepal’s Weekly Holiday is Saturday? Unveiling unique traditions and working Sundays

ನೇಪಾಳದಲ್ಲೇಕೆ ಶನಿವಾರ ರಜೆ? Image Credit source: gemini ai

ವಿಶ್ವದ ಬಹುತೇಕ ದೇಶಗಳಲ್ಲಿ ಭಾನುವಾರ ಬಂತೆಂದರೆ ಸಾಕು ಹಾಲಿಡೇ ಮೂಡ್ ಶುರುವಾಗುತ್ತದೆ. ಶಾಲೆ-ಕಾಲೇಜುಗಳಿಂದ ಹಿಡಿದು ಸರ್ಕಾರಿ ಕಚೇರಿಗಳವರೆಗೆ ಎಲ್ಲದಕ್ಕೂ ಭಾನುವಾರವೇ ವಾರದ ಅಧಿಕೃತ ರಜೆ (Weekly Holiday). ಭಾರತದ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೋಲುವ, ನಮ್ಮ ಪಕ್ಕದಲ್ಲೇ ಇರುವ ಹಿಂದೂ ರಾಷ್ಟ್ರ ನೇಪಾಳವು ಕೂಡ ಹೆಚ್ಚಿನ ವಿಷಯಗಳಲ್ಲಿ ಭಾರತವನ್ನೇ ಅನುಸರಿಸುತ್ತದೆ. ಆದರೆ, ರಜೆಯ ವಿಷಯಕ್ಕೆ ಬಂದರೆ ಮಾತ್ರ ನೇಪಾಳದ ನಿಯಮವೇ ಬೇರೆ. ನೇಪಾಳದಲ್ಲಿ ಭಾನುವಾರ ಯಾವುದೇ ರಜೆ ಇರುವುದಿಲ್ಲ. ಬದಲಿಗೆ ಅಲ್ಲಿ ಶನಿವಾರ ವಾರದ ಅಧಿಕೃತ ರಜಾದಿನವಾಗಿರುತ್ತದೆ. ಇದರ ಹಿಂದಿರುವ ವಿಶೇಷ ಕಾರಣಗಳು ಮತ್ತು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ:

ಶನಿವಾರವೇ ಅಲ್ಲಿ ಅಧಿಕೃತ ವಿಶ್ರಾಂತಿ ದಿನ:

ನೇಪಾಳ ಸರ್ಕಾರದ ಅಧಿಕೃತ ಕ್ಯಾಲೆಂಡರ್ ಪ್ರಕಾರ, ಶನಿವಾರವು ವಾರದ ಏಕೈಕ ಅಧಿಕೃತ ರಜಾದಿನವಾಗಿದೆ. ಈ ದಿನ ನೇಪಾಳದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಶಾಲೆಗಳು ಮತ್ತು ಹೆಚ್ಚಿನ ಖಾಸಗಿ ಸಂಸ್ಥೆಗಳು ಸಂಪೂರ್ಣವಾಗಿ ಮುಚ್ಚಿರುತ್ತವೆ.

ಭಾನುವಾರದಿಂದಲೇ ವಾರದ ಕೆಲಸದ ಆರಂಭ:

ನಮಗೆ ಸೋಮವಾರ ವಾರದ ಮೊದಲ ಕೆಲಸದ ದಿನವಾದರೆ, ನೇಪಾಳಿಗರಿಗೆ ಭಾನುವಾರವೇ ಸಾಮಾನ್ಯ ಕೆಲಸದ ದಿನಗಳ ಆರಂಭವನ್ನು ಸೂಚಿಸುತ್ತದೆ. ಅಂದರೆ, ಶನಿವಾರದ ರಜೆಯ ಮಜಾ ಮುಗಿಸಿ ಭಾನುವಾರ ಬೆಳಗ್ಗೆಯೇ ಅವರೆಲ್ಲರೂ ಕಚೇರಿ ಮತ್ತು ಶಾಲೆಗಳತ್ತ ಹೆಜ್ಜೆ ಹಾಕುತ್ತಾರೆ.

ಧಾರ್ಮಿಕ ನಂಬಿಕೆ ಮತ್ತು ಶತಮಾನಗಳ ಸಂಪ್ರದಾಯ:

ನೇಪಾಳದಲ್ಲಿ ಹಿಂದೂ ಜನಸಂಖ್ಯೆ ಹೆಚ್ಚಾಗಿದೆ. ಹಿಂದೂ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದ ನಂಬಿಕೆಗಳ ಪ್ರಕಾರ, ವಾರದ ದಿನಗಳಲ್ಲಿ ಶನಿವಾರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನವನ್ನು ಸಂಕಟಮೋಚನ ಹನುಮಂತ ಮತ್ತು ಶನಿ ದೇವರ ಪೂಜೆಗೆ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ವರ್ಷಗಳಿಂದ ನಡೆದುಕೊಂಡು ಬಂದಿರುವ ಇದೇ ಧಾರ್ಮಿಕ ಸಂಪ್ರದಾಯದ ಹಿನ್ನೆಲೆಯಲ್ಲಿ ಶನಿವಾರವನ್ನು ಅಲ್ಲಿ ವಾರಾಂತ್ಯದ ರಜೆಯಾಗಿ ಸ್ವೀಕರಿಸಲಾಗಿದೆ.

ಎರಡು ದಿನ ರಜೆ ನೀಡಲು ಹೋಗಿ ಕೈಬಿಟ್ಟ ಸರ್ಕಾರ:

ಕೆಲವು ವರ್ಷಗಳ ಹಿಂದೆ, ನೇಪಾಳ ಸರ್ಕಾರವು ಜಾಗತಿಕ ನಿಯಮಗಳಿಗೆ ಹೊಂದಿಕೊಳ್ಳುವ ಪ್ರಯತ್ನ ಮಾಡಿತ್ತು. ಶನಿವಾರದ ಜೊತೆಗೆ ಭಾನುವಾರವನ್ನೂ ಸೇರಿಸಿ ವಾರಕ್ಕೆ ಎರಡು ದಿನ ರಜೆ ನೀಡುವ ನಿಯಮವನ್ನು ಜಾರಿಗೆ ತಂದಿತ್ತು. ಆದರೆ, ಇದರಿಂದ ದೇಶದ ಆಡಳಿತ ಮತ್ತು ಆರ್ಥಿಕತೆಗೆ ಹಿನ್ನಡೆಯಾದ ಕಾರಣ, ಕೆಲವೇ ದಿನಗಳಲ್ಲಿ ಆ ನಿಯಮವನ್ನು ರದ್ದುಗೊಳಿಸಲಾಯಿತು. ಮತ್ತೆ ಹಳೆಯ ಸಂಪ್ರದಾಯದಂತೆ ಕೇವಲ ಶನಿವಾರವನ್ನು ಮಾತ್ರ ಅಧಿಕೃತ ರಜಾದಿನವೆಂದು ಘೋಷಿಸಲಾಯಿತು.

ಇದನ್ನೂ ಓದಿ: ಮನೆಯ ಮೇಲೆ ಹಾರಾಡಲಿ ಹನುಮದ್ ಧ್ವಜ; ಇಲ್ಲಿದೆ ಅಸಲಿ ವಾಸ್ತು ರಹಸ್ಯ!

ಪ್ರಪಂಚದ ಇತರ ದೇಶಗಳಲ್ಲಿ ರಜೆಯ ನಿಯಮ ಹೇಗಿದೆ?

ವಿವಿಧ ಧರ್ಮ ಮತ್ತು ಇತಿಹಾಸದ ಆಧಾರದ ಮೇಲೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ರಜೆಯ ದಿನಗಳು ನಿರ್ಧಾರವಾಗಿವೆ:

ಇಸ್ಲಾಮಿಕ್ ರಾಷ್ಟ್ರಗಳು (ಶುಕ್ರವಾರ ರಜೆ):

ಪ್ರಪಂಚದ ಹೆಚ್ಚಿನ ಮುಸ್ಲಿಂ ರಾಷ್ಟ್ರಗಳಲ್ಲಿ ಶುಕ್ರವಾರದಂದು ವಾರದ ರಜೆ ಇರುತ್ತದೆ. ಇಸ್ಲಾಂ ಧರ್ಮದಲ್ಲಿ ಈ ದಿನವನ್ನು ‘ಜುಮ್ಮಾ’ ಎಂದು ಕರೆಯಲಾಗುವ ವಿಶೇಷ ಪ್ರಾರ್ಥನೆಯ ದಿನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನ ಮುಸ್ಲಿಮರಿಗೆ ಅತ್ಯಂತ ಪವಿತ್ರ ಹಾಗೂ ವಿಶೇಷವಾಗಿದೆ.

ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳು (ಭಾನುವಾರ ರಜೆ):

ಇತಿಹಾಸದ ಪುಟಗಳನ್ನು ತಿರುವಿದರೆ, ಬ್ರಿಟಿಷ್ ಗವರ್ನರ್ ಜನರಲ್ ಲಾರ್ಡ್ ಹಾರ್ಡಿಂಜ್ (Lord Hardinge) ಅವರು ಮೊದಲು ಭಾನುವಾರವನ್ನು ಅಧಿಕೃತ ರಜಾದಿನವೆಂದು ಘೋಷಿಸಿದರು. ಕ್ರಿಶ್ಚಿಯನ್ ಧರ್ಮದ ನಂಬಿಕೆಯ ಪ್ರಕಾರ, ಭಾನುವಾರದಂದು ಜನರು ಚರ್ಚ್‌ಗೆ ಹೋಗಿ ಅಲ್ಲಿ ನಡೆಯುವ ವಿಶೇಷ ಪ್ರಾರ್ಥನೆಗಳಲ್ಲಿ ಭಾಗವಹಿಸಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಿಟಿಷರು ತಂದ ಈ ನಿಯಮ ಇಂದಿಗೂ ಜಗತ್ತಿನ ಬಹುತೇಕ ಭಾಗಗಳಲ್ಲಿ ಮುಂದುವರಿದಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:19 am, Sun, 24 May 26

Source link

Optical Illusion: ಈ ಚಿತ್ರದಲ್ಲಿ o ಅಕ್ಷರಗಳ ನಡುವೆ ಇರುವ ಸೊನ್ನೆಯನ್ನು ಗುರುತಿಸಬಲ್ಲಿರಾ – Kannada News | Optical illusion: If your eyes are sharp, can you tell where the zero is in this picture

ಆಪ್ಟಿಕಲ್‌ ಇಲ್ಯೂಷನ್‌ Image Credit source: Tv9 Telugu

ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲ, ಬುದ್ಧಿವಂತಿಕೆಗೆ ಸವಾಲಾಗಿದೆ. ಈ ಇಲ್ಯೂಷನ್ ಚಿತ್ರವನ್ನು ನೋಡುವಾಗ ಸುಲಭವಾಗಿ ಕಂಡರೂ ಒಗಟು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದೀಗ ವೈರಲ್ ಆಗಿರುವ ಒಗಟಿನ ಚಿತ್ರದಲ್ಲಿ o ಅಕ್ಷರಗಳ ನಡುವೆ ಅಡಗಿರುವ ಸೊನ್ನೆಯನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯಾವಕಾಶ 10 ಸೆಕೆಂಡುಗಳು ಮಾತ್ರ ಎಂಬುದು ತಲೆಯಲ್ಲಿರಲಿ.

ಈ ಚಿತ್ರದಲ್ಲಿ ಏನಿದೆ ಎಂದು ನೋಡಿ

ಮೆದುಳಿನ ಕಸರತ್ತು ಆಟಗಳಲ್ಲಿ ಇದು ಒಂದು. ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಸೊನ್ನೆಗಳು ಕಾಣಿಸುತ್ತದೆ. ಆದರೆ ಇದು ಸೊನ್ನೆಗಳಲ್ಲ, o ಅಕ್ಷರಗಳು. ಇವುಗಳ ನಡುವೆ ಸೊನ್ನೆ ಸಂಖ್ಯೆಯೂ ಇದೆ. ಈ ಶೂನ್ಯ ಸಂಖ್ಯೆಯನ್ನು ನೀವು 10 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ನೀವು ಈ ಸವಾಲಿಗೆ ಸಿದ್ಧರಿದ್ದರೆ, ನಿಮ್ಮ ಟೈಮ್ ಈಗ ಶುರುವಾಗುತ್ತದೆ.

ಇದನ್ನೂ ಓದಿ: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ವೃತ್ತಗಳನ್ನು ಗುರುತಿಸಬಲ್ಲಿರಾ

ನಿಮಗೆ ಉತ್ತರ ಕಂಡುಹಿಡಿಯಲು ಸಾಧ್ಯವಾಯಿತೇ?

ಈ ಚಿತ್ರ ನೋಡಿದಾಗ ನಿಮ್ಮ ಕಾಣಿಸುವುದೆಲ್ಲವೂ ಸೊನ್ನೆಗಳು ಎಂದು ಅಂದುಕೊಂಡರೆ ನಿಮ್ಮ ಊಹೆ ತಪ್ಪು. ಅವೆಲ್ಲವೂ ‘O’ ಅಕ್ಷರಗಳು. ಇಲ್ಲಿ ಶೂನ್ಯ (0) ಸಂಖ್ಯೆಯಿದ್ದು, ನೀವು ಉತ್ತರ ಗುರುತಿಸಲು ಸಾಧ್ಯವಾದರೆ ನಿಮಗೆ ಅಭಿನಂದನೆಗಳು. ನೀವು ತುಂಬಾ ಬುದ್ಧಿವಂತರು ಎನ್ನುವುದು ಖಚಿತವಾಯಿತು. ಉತ್ತರ ಸಿಗದಿದ್ದಕ್ಕೆ ಹೆಚ್ಚು ಚಿಂತಿಸಬೇಡಿ. ಕೆಳಗಿನ ಫೋಟೋದಲ್ಲಿ ನಿಮಗಾಗಿ ಉತ್ತರವನ್ನು ಗುರುತಿಸಿದ್ದೇವೆ. ಶೂನ್ಯ ಸಂಖ್ಯೆ ನಿಮ್ಮ ಕಾಣಿಸಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ! – Kannada News | Karnataka Rain Havoc: One Dead in Koppal, Hailstorms Lash Belagavi, Alerts Issued

ಕೊಪ್ಪಳ, ಮೇ 24: ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರ್ಗಿ, ಜಂಬಗಿ ಮತ್ತು ಕಲುತ್ತಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಬಿದ್ದಿದೆ. ಗಾಳಿ ಸಹಿತ ಮಳೆಗೆ ಹಲವು ಕಡೆ ಮರಗಳು ಧರೆಗುರುಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Gold Rate: ಹತ್ತು ದಿನದಲ್ಲಿ ಚಿನ್ನದ ಬೆಲೆ 300 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 24th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 24: ಚಿನ್ನದ ಬೆಲೆಯಲ್ಲಿ ಏರಿಳಿತದ ಆಟ ನಡೆಯುತ್ತಿದೆ. ಶುಕ್ರವಾರ ಗ್ರಾಮ್​ಗೆ 40 ರೂ ಹೆಚ್ಚಿದ್ದ ಇದರ ಬೆಲೆ ಈಗ ಅಷ್ಟೇ ಪ್ರಮಾಣದಲ್ಲಿ ಕಡಿಮೆಗೊಂಡಿದೆ. ಕಳೆದ 10 ದಿನದಲ್ಲಿ ಏರುಪೇರುಗಳೊಂದಿಗೆ ಚಿನ್ನದ ಬೆಲೆಯಲ್ಲಿ (Gold Rates) ಸುಮಾರು 300 ರೂನಷ್ಟು ಕಡಿಮೆ ಆಗಿರುವುದು ಗಮನಾರ್ಹ. ವಿದೇಶಗಳಲ್ಲೂ ಈ ಏರಿಳಿಕೆಯ ಆಟ ನಡೆಯುತ್ತಿದೆ. ಬೆಳ್ಳಿ ಬೆಲೆಯಲ್ಲೂ ಹೀಗೆ ಏರಿಕೆ, ಇಳಿಕೆಗಳು ಆಗುತ್ತಲೇ ಇವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,906 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,580 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,929 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,906 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,580 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,580 ರೂ
  • ಚೆನ್ನೈ: 14,730 ರೂ
  • ಮುಂಬೈ: 14,580 ರೂ
  • ದೆಹಲಿ: 14,595 ರೂ
  • ಕೋಲ್ಕತಾ: 14,580 ರೂ
  • ಕೇರಳ: 14,580 ರೂ
  • ಅಹ್ಮದಾಬಾದ್: 14,585 ರೂ
  • ಜೈಪುರ್: 14,595 ರೂ
  • ಲಕ್ನೋ: 14,595 ರೂ
  • ಭುವನೇಶ್ವರ್: 14,580 ರೂ

ಇದನ್ನೂ ಓದಿ: Petrol Diesel Price Hike: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 556 ರಿಂಗಿಟ್ (13,398 ರುಪಾಯಿ)
  • ದುಬೈ: 503 ಡಿರಾಮ್ (13,097 ರುಪಾಯಿ)
  • ಅಮೆರಿಕ: 141 ಡಾಲರ್ (13,484 ರುಪಾಯಿ)
  • ಸಿಂಗಾಪುರ: 180.20 ಸಿಂಗಾಪುರ್ ಡಾಲರ್ (13,464 ರುಪಾಯಿ)
  • ಕತಾರ್: 500 ಕತಾರಿ ರಿಯಾಲ್ (13,118 ರೂ)
  • ಸೌದಿ ಅರೇಬಿಯಾ: 514 ಸೌದಿ ರಿಯಾಲ್ (13,099 ರುಪಾಯಿ)
  • ಓಮನ್: 53.55 ಒಮಾನಿ ರಿಯಾಲ್ (13,302 ರುಪಾಯಿ)
  • ಕುವೇತ್: 41.63 ಕುವೇತಿ ದಿನಾರ್ (12,997 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು? – Kannada News | Bengaluru’s Pothole Ridden Roads Allegedly Cost Student a UPSC Exam Chance

ಬೆಂಗಳೂರು, ಮೇ 24: ಸದಾ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಲ್ಲಿರುವ ಬೆಂಗಳೂರಿನ (Bengaluru) ರಸ್ತೆಗಳ ದುರಾವಸ್ಥೆ ಈಗ ಮತ್ತೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಗರದ ಕಿತ್ತುಹೋದ ರೋಡ್​​ಗಳಿಂದ ವಿದ್ಯಾರ್ಥಿಯೋರ್ವ UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಯ ಶ್ರಮ ನೀರಲ್ಲಿ ಹೋಮ ಮಾಡಿದಂತಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಮುಖ್ಯಾಂಶಗಳು

  • ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರು ರಸ್ತೆಗಳು ದುರಾವಸ್ಥೆ ವಿಚಾರ
  • ನಗರದ ರಸ್ತೆಗುಂಡಿಗಳಿಗೆ ವಿದ್ಯಾರ್ಥಿಯ UPSC ಕನಸು ಬಲಿ?
  • ವಿದ್ಯಾರ್ಥಿ ಪರೀಕ್ಷಾ ಕೇಂದ್ರ ತಲುಪುವುದರೊಳಗೆ ಗೇಟ್​​ ಕ್ಲೋಸ್​​!

ವಿದ್ಯಾರ್ಥಿಯ ಬೇಸರ

ಇನ್ನು ಹದಗೆಟ್ಟ ರಸ್ತೆಗಳ ಕಾರಣ ಪರೀಕ್ಷಾ ಕೇಂದ್ರ ತಲುಪಲು ತಡವಾಗಿ ಪರೀಕ್ಷೆಯಿಂದ ವಂಚಿತರಾಗಿರುವ ವಿದ್ಯಾರ್ಥಿ ಪ್ರಮೋದ್​​ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ವೈಟ್​​ಫೀಲ್ಡ್​​ನಲ್ಲಿರುವ ತನ್ನ ಮನೆಯಿಂದ ಮುಂಜಾನೆ 7 ಗಂಟೆಗೆ ಹೊರಟಿದ್ದೆ. ಮೆಜೆಸ್ಟಿಕ್​​ನಿಂದ ಪರೀಕ್ಷಾ ಕೇಂದ್ರದವರೆಗೆ ಆಟೋದಲ್ಲಿ ಬಂದಿದ್ದೇನೆ. ವೈಟ್​​ಫೀಲ್ಡ್​​ , ಮಹಾದೇವಪುರ ರಸ್ತೆ ಸರಿಯಿಲ್ಲದ ಕಾರಣ, ಆಟೋಗಳು ಬರಲ್ಲ. ಹೀಗಾಗಿ ಪರೀಕ್ಷಾ ಕೇಂದ್ರ ತಲುಪುವಾಗ ತಡವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಯುಪಿಎಸ್​​ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಅಧಿಕಾರಿಗಳಿಗೂ ಮನವಿ ಮಾಡಿದ್ದೇನೆ. ಬೆಂಗಳೂರಿನ ರೋಡ್​​ಗಳ ಸ್ಥಿತಿ ಬಗ್ಗೆ ನಿಮಗೆ ಗೊತ್ತಿದೆ. ಹೀಗಾಗಿ ಮನವಿಯನ್ನು ದಯವಿಟ್ಟು ಪರಿಗಣಿಸಿ ಎಂದಿದ್ದೆ. ಆದರೆ ಪ್ರವೇಶದ ಸ್ಕ್ರೀನಿಂಗ್ ಕ್ಲೋಸ್ ಹಿನ್ನಲೆ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ ಎಂದು ವಿದ್ಯಾರ್ಥಿ ಅಳಲುತೋಡಿಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್

ಇನ್ನು ಒಟ್ಟು 6 ವಿದ್ಯಾರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ಕಾರಣ ಎಕ್ಸಾಂ ವಂಚಿತರಾಗಿದ್ದಾರೆ. 9 ಗಂಟೆಗೆ ಕರೆಕ್ಟ್ ಗೇಟ್ ಕ್ಲೋಸ್ ಮಾಡಿದ್ದು, ಒಂದು ನಿಮಿಷ ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದ ಕಾರಣ ಯುಪಿಎಸ್​​ಸಿ ಬರೆಯಲು ಕೆಲವರಿಗೆ ಸಾಧ್ಯವಾಗಿಲ್ಲ. ನೀಟ್ ಪರೀಕ್ಷೆಯ ಗಲಾಟೆ ಗದ್ದಲಗಳ ನಡುವೆ ಬೆಂಗಳೂರು ಸೇರಿ ದೇಶಾದ್ಯಂತ ಯುಪಿಎಸ್​ಸಿ ಪ್ರಿಲಿಮ್ಸ್‌ ಪರೀಕ್ಷೆ ನಡೆದಿದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ UPSC ಪೂರ್ವಭಾವಿ ಪರೀಕ್ಷೆಗೆ ಸೂಕ್ತ ಪೊಲೀಸ್​​ ಭದ್ರತೆ ಕೈಗೊಳ್ಳಲಾಗಿದ್ದು, ರಾಜ್ಯದ ಬೆಂಗಳೂರು, ಧಾರವಾಡ ಮತ್ತು ಮೈಸೂರಿನಲ್ಲಿ ಪ್ರಿಲಿಮ್ಸ್‌ ಪರೀಕ್ಷೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link