Category Archives: Blog

Your blog category

ಮೈಸೂರಿನ ಹೋಟೆಲ್​ನಲ್ಲಿ ಸರ್ಕಾರಿ ಅಧಿಕಾರಿ ಶವ ಪತ್ತೆ: RFO ಸಾವಿನ ಸುತ್ತ ಅನುಮಾನದ ಹುತ್ತ – Kannada News | Mysuru: T Narasipura RFO Kantaraj Chauhan Dies in Mysuru Hotel; Police Probe Underway

ಮೈಸೂರು, ಜನವರಿ 19: ನಗದರ ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​ಎಫ್​ಒ (RFO) ಶವವಾಗಿ ಪತ್ತೆ ಆಗಿರುವಂತಹ ಘಟನೆ ಮೈಸೂರು (Mysuru) ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಹೋಟೆಲ್​​ನಲ್ಲಿ ನಡೆದಿದೆ. ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

RFO ಕಾಂತರಾಜ್ ಚೌಹಾಣ್​​​ ಅವರು 15 ದಿನದ ಹಿಂದೆಯಷ್ಟೇ ನರಸೀಪುರಕ್ಕೆ ವರ್ಗವಾಗಿದ್ದರು. ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆಗೆ ನಿನ್ನೆ ಮಧ್ಯಾಹ್ನ ಮಲ್ಲನಗೌಡ ರೂಮ್​ ಬುಕ್ ಮಾಡಿದ್ದರು. ಆದರೆ ಏಕಾಏಕಿ ಮೃತಪಟ್ಟಿದ್ದಾರೆ. ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್​ ಹಿಂಭಾಗದ ಕಾರಿಡಾರ್​ನಲ್ಲಿ ಕಾಂತರಾಜ್ ಚೌಹಾಣ್​​​ ಶವ‌ ಬಿದ್ದಿತ್ತು. ಇನ್ನು ಇತ್ತ ಕಾಂತರಾಜ್ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿದ್ದಾರೆ.

ಪಾರ್ಕಿಂಗ್​ನಲ್ಲಿ ಮಲಗಿದ್ದ ಯುವಕರಿಬ್ಬರ ಮೇಲೆ ಹರಿದ ಕಾರು

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರೆಯಲ್ಲಿ ಪಾರ್ಕಿಂಗ್​ನಲ್ಲಿ ಮಲಗಿದ್ದ ಯುವಕರಿಬ್ಬರ ಮೇಲೆ ಕಾರು ಹರಿದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವಂತಹ ಘಟನೆ ನಡೆದಿದೆ. ಪ್ರದೀಪ್​​​ ಮೃತ ವ್ಯಕ್ತಿ, ರವಿ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು

ರವಿ ಸುತ್ತೂರು ಜಾತ್ರೆಯಲ್ಲಿ ಪಾರ್ಕಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದ. ಪ್ರದೀಪ್ ನಾಟಕ ನೋಡಲು ಸುತ್ತೂರಿಗೆ ಆಗಮಿಸಿದ್ದ. ತಡವಾದ ಹಿನ್ನೆಲೆ ರಾತ್ರಿ ಇಬ್ಬರು ಪಾರ್ಕಿಂಗ್​ನಲ್ಲೇ ಮಲಗಿದ್ದಾರೆ. ಚಾಲಕ ಮಧ್ಯರಾತ್ರಿ ಕಾರು ತೆಗೆಯುವಾಗ ಗಮನಿಸದ ದುರಂತ ಸಂಭವಿಸಿದೆ. ಬದನವಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳ್ಳದಲ್ಲಿ ಈಜಲು ಹೋಗಿ ಮುಳುಗಿ ಬಾಲಕ ಸಾವು

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಿದ್ಧಾರ್ಥ್(10) ಮೃತ ಬಾಲಕ. ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ? – Kannada News | Kichcha Sudeep Gave His Bigg Boss Finale Jacket To Dhanush

ಕಿಚ್ಚ ಸುದೀಪ್ ಅವರು ಹೋಸ್ಟ್ ಮಾಡುವಾಗ ಪ್ರತಿ ಬಾರಿ ಹೊಸ ಹೊಸ ರೀತಿಯ ಜಾಕೆಟ್ ಹಾಕಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯ ಬಿಗ್ ಬಾಸ್ ಫಿನಾಲೆ ದಿನ ಅವರು ಸಖತ್ ಆಗಿರೋ ಜಾಕೆಟ್ ಹಾಕಿ ಕಾಣಿಸಿಕೊಂಡಿದ್ದರು.

Source link

ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್​​​, ಬಿಗ್​​​ಬಾಸ್​​​ ವಿನ್ನರ್ ತಂದೆ ಹೇಳಿದ್ದೇನು? – Kannada News | Bigg Boss Winner Gillis Father: “Well Marry Whichever Girl He Approves

ಬಿಗ್ ಬಾಸ್ ಕನ್ನಡ 12 ವಿಜೇತ ಗಿಲ್ಲಿಯ ತಂದೆ ಮಗನ ಗೆಲುವಿನ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಮಗನ ಯಶಸ್ಸು ತನಗೆ ಕನಸಿನಂತೆ ಭಾಸವಾಗುತ್ತಿದೆ ಎಂದಿದ್ದಾರೆ. ಮಧ್ಯಾಹ್ನ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದು, ಆರು ತಿಂಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ, ಮಗನಿಗಾಗಿ ಬರುವುದಾಗಿ ಹೇಳಿದ್ದಾರೆ. ಗಿಲ್ಲಿಯ ಮದುವೆಯ ಬಗ್ಗೆ ಕೇಳಿದಾಗ, ಅದು ಗಿಲ್ಲಿಯ ವೈಯಕ್ತಿಕ ಆಯ್ಕೆ ಎಂದು ತಂದೆ ಸ್ಪಷ್ಟಪಡಿಸಿದ್ದಾರೆ. ಗಿಲ್ಲಿ ಇಷ್ಟಪಟ್ಟ ಹುಡುಗಿಯನ್ನೇ ಮದುವೆ ಮಾಡುತ್ತೇವೆ, ಅದಕ್ಕೆ ಬಲವಂತ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಬಿಗ್​​ ಬಾಸ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ – Kannada News | CM Siddaramaiah Refuses Fan’s Mantralayam Raghavendra Swamy Photo, Sparks Political Row, Watch Video

ಬೆಂಗಳೂರು, ಜನವರಿ 19: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಕುಂಕುಮ, ಪೇಟ ತಿರಸ್ಕರಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು. ಅದೇ ರೀತಿ ಇದೀಗ ರಾಯರ ಫೋಟೊ ತಿರಸ್ಕರಿಸಿದ್ದೂ ಚರ್ಚೆಗೆ ಗ್ರಾಸವಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯಗೆ ಹಿಂದೂ ದೇವರನ್ನು ಕಂಡರೆ ಆಗಿ ಬರಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೇ ಆಗಿ ಬರುವುದಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ. ಟಿಪ್ಪು ಜಯಂತಿ ಮಾಡಿದರು, ಆಗ ಕೋಮು ಗಲಭೆಗಳು ಆದವು. ಕೋಗಿಲು ಲೇಔಟ್​​​ನ ಮುಸ್ಲಿಮರಿಗೆ ಮನೆಗಳು ಕೊಡುವುದು ಇತ್ಯಾದಿ ಅದು ಅವರ ನಿರಂತರ ಪ್ರಕ್ರಿಯೆ ಎಂದು ಕಿಡಿಕಾರಿದರು.

ಹಿಂದೂಗಳು ಕೂಡ ಎಚ್ಚರಿಕೆಯಿಂದ ಇರಬೇಕು. ಬಹುಸಂಖ್ಯಾತ ಹಿಂದೂಗಳು ಸಿದ್ದರಾಮಯ್ಯಗೆ ಪಾಠ ಕಲಿಸಬೇಕು. ಇಲ್ಲದಿದ್ದರೆ ಸಿದ್ದರಾಮಯ್ಯ ತಮ್ಮ ಚಾಳಿಯನ್ನು ಮುಂದುವರಿಸುತ್ತಾರೆ ಎಂದು ಅಶೋಕ್ ಎಚ್ಚರಿಕೆ ನೀಡಿದರು.

ಯಾರು ಏನೇ ನೀಡಿದರೂ ಸ್ವೀಕರಿಸುವುದು ಸೌಜನ್ಯತೆಯ ನಡೆ. ಪ್ರೀತಿಯಿಂದ ಕೊಟ್ಟರೇ ಅವರ ನಂಬಿಕೆ ಭಾವನೆಗೆ ಗೌರವ ನೀಡಬೇಕು. ಜನರ ಭಾವನೆಗಳನ್ನು ಗೌರವಿಸುವ ಜವಾಬ್ದಾರಿ ಜನಪ್ರತಿನಿಧಿಗೆ ಇರುತ್ತದೆ. ಯಾವುದೇ , ಧರ್ಮ, ಏನೇ ಇದ್ದರೂ ಭಾವನೆಗಳನ್ನು ಗೌರವಿಸಬೇಕು. ವ್ಯಕ್ತಿ ತಂದುಕೊಟ್ಟಿದ್ದನ್ನು ಸ್ವೀಕಾರ ಮಾಡುವುದು ಸೌಜನ್ಯತೆ ನಡವಳಿಕೆ. ಸಿದ್ದರಾಮಯ್ಯನವರಂತಹ ನಾಯಕರಿಂದ ಇಂತಹ ನಡೆ ನಿರೀಕ್ಷಿಸಿರಲಿಲ್ಲ. ಸಿದ್ದರಾಮಯ್ಯ ಹೀಗೆ ನಡೆದುಕೊಂಡಿದ್ದರೆ ಅದನ್ನು ಖಂಡಿಸುತ್ತೇನೆ ಎಂದು ಬಿಜೆಪಿ ನಾಯಕ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದಾರೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ – Kannada News | Election Commission to Use Ballot Papers for GBA Elections, Sparks Debate

ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ. ಇವಿಎಂ ವ್ಯವಸ್ಥೆಯ ಮೇಲೆ ಸಾರ್ವಜನಿಕರಲ್ಲಿ ಮೂಡಿರುವ ನಂಬಿಕೆಗೆ ಇದು ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಕಾಂಗ್ರೆಸ್ ಪಕ್ಷವು ಇವಿಎಂ ಕುರಿತು ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದು, ಈ ನಿರ್ಧಾರವು ಅದಕ್ಕೆ ಪುಷ್ಟಿ ನೀಡಿದಂತಾಗಬಹುದು ಎಂಬ ಚರ್ಚೆ ನಡೆಯುತ್ತಿದೆ. ಹಿಂದಿನ ಬಿಬಿಎಂಪಿ ಚುನಾವಣೆಗಳಲ್ಲಿ ಇವಿಎಂ ಬಳಸಲಾಗಿತ್ತು ಎಂಬ ಅಂಶವೂ ಇಲ್ಲಿ ಗಮನಾರ್ಹ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ

ಗಿಲ್ಲಿ ಹಾಗೂ ಕಾವ್ಯಾ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಇವರ ಬಾಂಧವ್ಯ ಅಭಿಮಾನಿಗಳಿಗೆ ಇಷ್ಟ ಆಗಿದೆ. ಅವರ ಮದುವೆ ಮಾಡಿಸುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇದಕ್ಕೆ ಗಿಲ್ಲಿ ತಾಯಿ ಉತ್ತರ ನೀಡಿದ್ದಾರೆ. ‘ಗಿಲ್ಲಿ ಯಾರನ್ನು ಮದುವೆ ಆಗಬೇಕು ಎಂದು ಇಷ್ಟಪಡುತ್ತಾನೋ ಅವರ ಜೊತೆ ಮದುವೆ ಮಾಡಿಸುತ್ತೇನೆ’ ಎಂದು ತಾಯಿ ಹೇಳಿದ್ದಾರೆ. ಅವರ ಹೇಳಿಕೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ. ಗಿಲ್ಲಿ ಹಾಗೂ ಕಾವ್ಯಾ ಬೆಸ್ಟ್​ ಫ್ರೆಂಡ್ಸ್. ಈ ಗೆಳೆತನ ಮುಂದುವರಿಯಲಿ ಎಂಬುದು ಅಭಿಮಾನಿಗಳ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜಿಬಿಎ ಕರಡು ಮತದಾರರ ಪಟ್ಟಿ ಪ್ರಕಟ; ತಿದ್ದುಪಡಿಗೆ ಲಾಸ್ಟ್ ಡೇ ಯಾವಾಗ ಗೊತ್ತಾ? – Kannada News | GBA Election 2026: Bengaluru Draft Voter List Out, May 25 Polls Expected

ಬೆಂಗಳೂರು, ಜನವರಿ 19: ಜಿಬಿಎ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಸೇರಿದಂತೆ ಎಲ್ಲಾ ನಗರ ಪಾಲಿಕೆಗಳ ಆಯುಕ್ತರು ಭಾಗವಹಿಸಿದ್ದರು.

ಅಬ್ಜೆಕ್ಷನ್‌ ಸಲ್ಲಿಸಲು ಕೊನೆ ದಿನ ಯಾವಾಗ?

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಾಳೆಯಿಂದ ಆಕ್ಷೇಪಣೆ (ಅಬ್ಜೆಕ್ಷನ್) ಸಲ್ಲಿಸಲು ಅವಕಾಶ ನೀಡಲಾಗಿದ್ದು, ಫೆಬ್ರವರಿ 6ರವರೆಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪಿರುವುದು, ಹೆಸರು ಬಿಟ್ಟು ಹೋಗಿರುವುದು, ಲಿಂಗ, ವಯಸ್ಸು ಅಥವಾ ವಿಳಾಸದ ತಪ್ಪುಗಳಿದ್ದರೆ ಅವನ್ನು ಈ ಅವಧಿಯಲ್ಲಿ ಸರಿಪಡಿಸಿಕೊಳ್ಳಬಹುದು ಎಂದು ಆಯುಕ್ತರು ತಿಳಿಸಿದ್ದಾರೆ.

ನಾಳೆಯಿಂದಲೇ ಬೂತ್ ಲೆವೆಲ್ ಅಧಿಕಾರಿಗಳು (ಬಿಎಲ್‌ಓಗಳು) ಮನೆಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದು, ಮತದಾರರ ಪಟ್ಟಿಯ ಶುದ್ಧೀಕರಣ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಇದರಿಂದ ಪಾರದರ್ಶಕ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶವಿದೆ ಎಂದು ತಿಳಿಸಲಾಗಿದೆ.

ಅಬ್ಜೆಕ್ಷನ್‌ ಸಲ್ಲಿಸುವುದು ಹೇಗೆ ?

  1. ಬೂತ್ ಲೆವೆಲ್ ಅಧಿಕಾರಿ (BLO) ಮೂಲಕ:ನಿಮ್ಮ ಪ್ರದೇಶದ ಬಿಎಲ್‌ಒ ಮನೆಗೆ ಭೇಟಿ ನೀಡುವಾಗ ಅಥವಾ ನೇರವಾಗಿ ಬಿಎಲ್‌ಒರನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳ ಪ್ರತಿಯನ್ನು ನೀಡುವ ಮೂಲಕ ಪ್ರತಿಯಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದು.
  2. ಸಂಬಂಧಪಟ್ಟ ನಗರ ಪಾಲಿಕೆ / ಮತದಾರರ ನೋಂದಣಿ ಕಚೇರಿ: ನಿಮ್ಮ ವಾರ್ಡ್‌ಗೆ ಸಂಬಂಧಿಸಿದ ಸಹಾಯಕ ಮತದಾರರ ನೋಂದಣಿ ಅಧಿಕಾರಿ (AERO) ಕಚೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ಫಾರಂ ಭರ್ತಿ ಮಾಡಿ ಸಲ್ಲಿಸಬಹುದು.

ಅವಶ್ಯಕ ದಾಖಲೆಗಳೇನು?

  • ಗುರುತಿನ ಚೀಟಿ (ಆಧಾರ್ / ಮತದಾರರ ಗುರುತಿನ ಚೀಟಿ)
  • ವಿಳಾಸದ ದಾಖಲೆ
  • ಜನ್ಮ ದಿನಾಂಕದ ದಾಖಲೆ (ವಯಸ್ಸು ತಿದ್ದುಪಡಿಗೆ)

ಜಿಬಿಎ ವ್ಯಾಪ್ತಿಯ ಮತದಾರರೆಷ್ಟು?

ಪ್ರಕಟಿಸಲಾದ ಅಂಕಿಅಂಶಗಳ ಪ್ರಕಾರ,  ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಇದರಲ್ಲಿ 45,69,193 ಪುರುಷ ಮತದಾರರು, 43,20,583 ಮಹಿಳಾ ಮತದಾರರು ಹಾಗೂ 1,635 ಇತರೆ ವರ್ಗದ ಮತದಾರರು ಸೇರಿದ್ದಾರೆ.

ಕರಡು ಮತದಾರರ ಪಟ್ಟಿ ಪರಿಶೀಲನೆ ಹಾಗೂ ಅಂತಿಮ ಪಟ್ಟಿಯ ಪ್ರಕಟಣೆ ಬಳಿಕ, ಮೇ 25ರ ನಂತರ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ಎಷ್ಟು ಮತದಾರರಿದ್ದಾರೆ?

  1. ಬೆಂಗಳೂರು ಕೇಂದ್ರ
    ಒಟ್ಟು ವಾರ್ಡ್-63
    ಮತಗಟ್ಟೆಗಳು-1305
    ಮತದಾರರು-14,25,483
  2. ಬೆಂಗಳೂರು ಉತ್ತರ
    ಒಟ್ಟು ವಾರ್ಡ್-72
    ಮತಗಟ್ಟೆಗಳು-1716
    ಮತದಾರರು-19,54,206
  3. ಬೆಂಗಳೂರು ದಕ್ಷಿಣ
    ಒಟ್ಟು ವಾರ್ಡ್-72
    ಮತಗಟ್ಟೆಗಳು-1716
    ಮತದಾರರು-1744270
  4. ಬೆಂಗಳೂರು ಪೂರ್ವ
    ಒಟ್ಟು ವಾರ್ಡ್-50
    ಮತಗಟ್ಟೆಗಳು-916
    ಮತದಾರರು-10,41,738
  5. ಬೆಂಗಳೂರು ಪಶ್ಚಿಮ
    ಒಟ್ಟು ವಾರ್ಡ್-112
    ಮತಗಟ್ಟೆಗಳು-2493
    ಮತದಾರರು-27,25,714

ಒಟ್ಟು ವಾರ್ಡ್-369, ಮತಗಟ್ಟೆಗಳು-8044, ಮತದಾರರು-88,91,411, ಒಟ್ಟು ಮತಗಟ್ಟೆಗಳ ಸಂಖ್ಯೆ  8044

ವರದಿ: ಅರುಣ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು ಸಲ್ಲಿಕೆ – Kannada News | Excise Minister RB Timmapur Faces Lokayukta Complaint Over Bribe Allegations

ಬೆಂಗಳೂರು, ಜನವರಿ 19: ಲಂಚ ಪಡೆವಾಗ ಅಬಕಾರಿ ಡಿಸಿ ಜಗದೀಶ್ ನಾಯಕ ಬಂಧನ ಪ್ರಕರಣ ಸಂಬಂಧ ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರಗೂ ಸಂಕಷ್ಟ ಸಾಧ್ಯತೆ ಇದೆ. ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಲಕ್ಷ್ಮೀನಾರಾಯಣ ಎಂಬವರು ದೂರು ನೀಡಿದ್ದು, ಪ್ರಕರಣದಲ್ಲಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಅಬಕಾರಿ ಡಿಸಿ ಜಗದೀಶ್​ ಮಾತಾಡಿದ್ದ ಆಡಿಯೋವನ್ನು ಸಹ ಲಕ್ಷ್ಮೀ ನಾರಾಯಣ ಬಿಡುಗಡೆ ಮಾಡಿದ್ದರು. ಹೀಗಾಗಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆಯೂ ದೂರಲ್ಲಿ ಆಗ್ರಹಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಟಿ20 ವಿಶ್ವಕಪ್​​​ನಿಂದ ಹಿಂದೆ ಸರಿಯಲು ಪಾಕಿಸ್ತಾನ್ ಚಿಂತನೆ..! – Kannada News | Pakistan To Review Participation In T20 World Cup 2026

ಟಿ20 ವಿಶ್ವಕಪ್​​ನಲ್ಲಿ ಬಾಂಗ್ಲಾದೇಶ್ ತಂಡದ ಭಾಗವಹಿಸುವಿಕೆ ತೂಗುಯ್ಯಾಲೆಯಲ್ಲಿರುವಾಗಲೇ ಟೂರ್ನಿಯಿಂದ ಹಿಂದೆ ಸರಿಯಲು ಪಾಕಿಸ್ತಾನ್ ತಂಡ ಚಿಂತನೆ ನಡೆಸಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಮನವಿಗೆ ಐಸಿಸಿ ಪ್ರಾಮುಖ್ಯತೆ ನೀಡದಿರುವುದು. ಅಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ. ಈ ಮನವಿಯ ಹೊರತಾಗಿಯೂ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿ ಒಪ್ಪಿಗೆ ಸೂಚಿಸಿಲ್ಲ.

ಅತ್ತ ಐಸಿಸಿ ಕಡೆಯಿಂದ ಸಕರಾತ್ಮಕ ಸ್ಪಂದನೆ ದೊರೆಯದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ, ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಬೆಂಬಲ ಪಡೆಯಲು ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಈಗಾಗಲೇ ಬಿಸಿಬಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಚರ್ಚೆಯ ವೇಳೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನಿಂದ ಸಕರಾತ್ಮಕ ಸ್ಪಂದನೆ ದೊರೆತಿದೆ. ಅಲ್ಲದೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಸಮಸ್ಯೆಯನ್ನು ಬಗೆಹರಿಸದಿದ್ದರೆ, ಪಾಕಿಸ್ತಾನವು ಟಿ20 ವಿಶ್ವಕಪ್​​ನಲ್ಲಿ ತನ್ನ ಭಾಗವಹಿಸುವಿಕೆಯನ್ನು ಮರುಪರಿಶೀಲಿಸಲಿದೆ ಎಂದು ಪಾಕ್ ಸರ್ಕಾರದ ಮೂಲಗಳು ತಿಳಿಸಿದೆ.

ಅಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಬೇಡಿಕೆಯನ್ನು ಈಡೇರಿಸದೇ ಇದ್ದರೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿಯುವುದಾಗಿ ಪರೋಕ್ಷವಾಗಿ ತಿಳಿಸಿದೆ. ಈ ಮೂಲಕ ಐಸಿಸಿ ಮೇಲೆ ಒತ್ತಡ ಹೇರಲು ಎರಡು ಕ್ರಿಕೆಟ್ ಬೋರ್ಡ್​ ಮುಂದಾಗಿದೆ.

ಇತ್ತ ಐಸಿಸಿಯು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ತನ್ನ ನಿಲುವು ತಿಳಿಸಲು ಗಡುವು ವಿಧಿಸಿದೆ. ಅದರಂತೆ ಜನವರಿ 21 ರೊಳಗೆ ಟಿ20 ವಿಶ್ವಕಪ್ ಆಡುತ್ತೀರಾ ಅಥವಾ ಇಲ್ಲವಾ ಎಂಬುದನ್ನು ತಿಳಿಸುವಂತೆ ಸೂಚಿಸಲಾಗಿದೆ. ಐಸಿಸಿಯ ಈ ಗಡುವಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೂಡ ಎಂಟ್ರಿ ಕೊಟ್ಟಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬಾಂಗ್ಲಾದೇಶ್​ನ ಬೇಡಿಕೆಯೇನು?

ಟಿ20 ವಿಶ್ವಕಪ್​ನ ತನ್ನೆಲ್ಲಾ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಪಟ್ಟು ಹಿಡಿದಿದೆ. ಬಾಂಗ್ಲಾ ಆಟಗಾರರ ಸುರಕ್ಷತೆಯ ದೃಷ್ಟಿಯಿಂದಾಗಿ ಭಾರತದಲ್ಲಿ ವಿಶ್ವಕಪ್ ಆಡಲು ಬಿಸಿಬಿ ಹಿಂದೇಟು ಹಾಕುತ್ತಿದ್ದು, ಹೀಗಾಗಿ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸುವಂತೆ ಕೋರಲಾಗಿದೆ. ಇದಾಗ್ಯೂ ಐಸಿಸಿ, ಭಾರತದಲ್ಲೇ ಟೂರ್ನಿ ಆಡಬೇಕೆಂದು ತಿಳಿಸಿದೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಪಾಕ್ ಕ್ರಿಕೆಟ್ ಮಂಡಳಿಯ ನೆರವು ಪಡೆಯಲು ಮುಂದಾಗಿದೆ.

ಶ್ರೀಲಂಕಾದಲ್ಲಿ ಆಡಲಿರುವ ಪಾಕಿಸ್ತಾನ್:

ಮುಂಬರುವ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಕಳೆದ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್​ಗೆ ತೆರಳಲು ಭಾರತ ಹಿಂದೇಟು ಹಾಕಿದ್ದರಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಐಸಿಸಿ ಟೂರ್ನಿಯಲ್ಲಿ ತಮ್ಮ ಪಂದ್ಯಗಳನ್ನು ಕೂಡ ತಟಸ್ಥ ಸ್ಥಳದಲ್ಲಿ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು.

ಇದನ್ನೂ ಓದಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ!

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​​ನ ಈ ಬೇಡಿಕೆಗೆ ಐಸಿಸಿ ಸಮ್ಮತಿ ಸೂಚಿಸಿತ್ತು. ಅದರಂತೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಇತ್ತ ಬಾಂಗ್ಲಾದೇಶ್ ಕೂಡ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ಆಯೋಜಿಸುವಂತೆ ಮನವಿ ಮಾಡಿರುವುದು ಐಸಿಸಿಗೆ ತಲೆನೋವಾಗಿ ಪರಿಣಮಿಸಿದೆ.

Source link

ಜ. 21ರಂದು ಟಿವಿ9 ನೆಟ್ವರ್ಕ್​ನ ‘Auto9 Awards 2026’; ನಿತಿನ್ ಗಡ್ಕರಿ ಮುಖ್ಯ ಅತಿಥಿ – Kannada News | Auto9 Awards 2026: Nitin Gadkari to be Chief Guest at TV9 Network’s Biggest Celebration of Automotive Excellence

ನವದೆಹಲಿ, ಜನವರಿ 19: ಇಲ್ಲಿಯ ತಾಜ್ ಪ್ಯಾಲೇಸ್​ನಲ್ಲಿ ಟಿವಿ9 ನೆಟ್ವರ್ಕ್ ವತಿಯಿಂದ ಬುಧವಾರ (ಜ. 21) ‘Auto9 Awards 2026’ ಪ್ರಶಸ್ತಿ ಕಾರ್ಯಕ್ರಮ ನಡೆಯಲಿದೆ. ಭಾರತದ ವಾಹನೋದ್ಯಮದಲ್ಲಿನ (Automotive) ಪ್ರಗತಿ, ಶ್ರೇಷ್ಠತೆಯನ್ನು ಆಚರಿಸಲು ಆಯೋಜಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಮುಖ್ಯ ಅತಿಥಿಯಾಗಿದ್ದಾರೆ.

ಆಟೊ9 ಅಡಾರ್ಡ್ಸ್ ಬಗ್ಗೆ

ಟಿವಿ9 ನೆಟ್ವರ್ಕ್ ಕೈಗೊಂಡಿರುವ ಹಲವು ಉಪಕ್ರಮಗಳಲ್ಲಿ ಆಟೊ9 ಅವಾರ್ಡ್ಸ್ ಒಂದು. ಭಾರತದ ವಾಹನೋದ್ಯಮಕ್ಕೆ ಕೊಡುಗೆ ನೀಡಿರುವ ವಿಶೇಷ ಕಾರುಗಳು, ದ್ವಿಚಕ್ರ ವಾಹನಗಳು, ಸಂಘಟನೆಗಳು, ಇನ್ನೋವೇಟರ್​ಗಳು, ವ್ಯಕ್ತಿಗಳನ್ನು ಗೌರವಿಸುವ ಒಂದು ಪ್ರಶಸ್ತಿ ಸಮಾರಂಭವಾಗಿದೆ. ಈ ವರ್ಷ ಐದು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ

  1. ಉತ್ಪನ್ನಗಳು (ಕಾರು ಮತ್ತು ಬೈಕು)
  2. ಮಾಧ್ಯಮ ಮತ್ತು ಸಂವಹನ
  3. ರಾಷ್ಟ್ರೀಯ ಪರಿಣಾಮ ಮತ್ತು ನಾಯಕತ್ವ
  4. ಬ್ಯುಸಿನೆಸ್, ಇಕೋಸಿಸ್ಟಂ ಮತ್ತು ವ್ಯಾಪಕತೆ
  5. ಇವಿ ಮತ್ತು ಇನ್ನೋವೇಶನ್

ಈ ಮೇಲಿನ ಐದು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 2025ರ ಜನವರಿ 1ರಿಂದ ಡಿಸೆಂಬರ್ 31ರ ನಡುವೆ ಬಿಡುಗಡೆಯಾದ ಅಥವಾ ವಿತರಣೆ ಆರಂಭವಾದ ವಾಹನಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.

ಪ್ರಶಸ್ತಿಗೆ ವಾಹನವೊಂದನ್ನು ಪರಿಗಣಿಸಲು ಅದರ ಜನಪ್ರಿಯತೆಯು ಮಾನದಂಡವಾಗಿರುವುದಿಲ್ಲ. ಅದು ನೈಜವಾಗಿ ಎಷ್ಟು ಕ್ಷಮತೆ ಹೊಂದಿದೆ, ಎಂತಹ ನಾವೀನ್ಯತೆ ಹೊಂದಿದೆ ಎಂಬುದು ಮುಖ್ಯವಾಗುತ್ತದೆ. ದೆಹಲಿಯ ಬುದ್ಧ್ ಇಂಟರ್ನ್ಯಾಷನಲ್ ಸರ್ಕ್ಯೂಟ್​ನಲ್ಲಿ ಈಗಾಗಲೇ ಸುಮಾರು 58 ಕಾರು ಮತ್ತು ದ್ವಿಚಕ್ರ ವಾಹನಗಳ ಸಮಗ್ರ ಪರೀಕ್ಷೆ ಮಾಡಲಾಗಿದೆ. ವಾಹನದ ಕ್ಷಮತೆ, ಸುರಕ್ಷತೆ, ತಂತ್ರಜ್ಞಾನ ಮತ್ತು ನಾವೀನ್ಯತೆ ಇತ್ಯಾದಿ ಮಾನದಂಡಗಳನ್ನು ಗಮನಿಸಲಾಗಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್

ವಾಹನೋದ್ಯಮದ ಅನುಭವಿಗಳು, ಪತ್ರಕರ್ತರು, ಎಂಜಿನಿಯರುಗಳು, ಸಂಸ್ಥಾಪಕರು, ಮೊಬಿಲಿಟಿ ತಜ್ಞರು ಇತ್ಯಾದಿ 30 ಜನರಿರುವ ತೀರ್ಪುಗಾರ ಮಂಡಳಿಯು ಈ 58 ವಾಹನಗಳ ಮೌಲ್ಯಪಾಪನ ಮಾಡುತ್ತಿದೆ.

ಟಿವಿ9 ನೆಟ್ವರ್ಕ್​ನ ‘Auto9 Awards 2026’

ಆಟೊ9 ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾತ್ರವಲ್ಲ, ಉದ್ಯಮದ ಹೊಸ ಟ್ರೆಂಡ್​ಗಳ ಬಗ್ಗೆ ಪ್ಯಾನಲ್ ಡಿಸ್ಕಶನ್​ಗಳು, ಸಂವಾದ ಇತ್ಯಾದಿ ಕಾರ್ಯಕ್ರಮಗಳೂ ನಡೆಯಲಿವೆ. ಜನವರಿ 21ರಂದು ನಿತಿನ್ ಗಡ್ಕರಿ ಅವರಿಂದ ಮುಖ್ಯ ಭಾಷಣ ಇರುತ್ತದೆ. ದೇಶದ ವಾಹನೋದ್ಯಮದ ಬೆಳವಣಿಗೆ, ಮೂಲಸೌಕರ್ಯ ಅಭಿವೃದ್ದಿ ಇತ್ಯಾದಿ ಬಗ್ಗೆ ಅವರು ಬೆಳಕು ಚೆಲ್ಲಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link