Category Archives: Blog

Your blog category

ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ – Kannada News | Mobile Phones to Be Completely Banned in Karnataka Pre University Colleges? Education Department Mulls Major Decision

ಬೆಂಗಳೂರು, ಜನವರಿ 19: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಲಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ಗೆದ್ರೆ ಕಾಲ ಕೆಳಗೆ ನುಗ್ತೀನಿ ಎಂದಿದ್ದ ಸತೀಶ್; ನುಡಿದಂತೆ ನಡೀತಾರಾ? – Kannada News | Gilli Wins Bigg Boss Kannada 12! Will Satish Keep His “Bow Down” Promise

ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12 ) ಸ್ಪರ್ಧಿ ಸತೀಶ್ ಅವರು ಇದ್ದಿದ್ದು ಕೆಲವೇ ವಾರ. ಅವರು ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಸದ್ದು ಮಾಡಲೇ ಇಲ್ಲ. ಆದರೆ, ಬಿಗ್ ಬಾಸ್​​​ನಿಂದ ಹೊರ ಬಂದ ಬಳಿಕ ಅವರ ಹೆಸರು ಚರ್ಚೆ ಆಯಿತು. ಅವರನ್ನು ಎಲ್ಲರೂ ಟೀಕಿಸಿದರು. ಆದರೂ ಅವರು ಮಾತ್ರ ಇದಕ್ಕೆ ಹೆಚ್ಚು ತಲೆಕೆಡಸಿಕೊಳ್ಳಲೇ ಇಲ್ಲ. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಸತೀಶ್ ಅವರು, ಗಿಲ್ಲಿ ಗೆಲ್ಲಬಾರದು ಎಂದು ಹಾರೈಸಿದ್ದರು. ಆದರೆ, ಅವರೇ ಗೆದ್ದಿದ್ದಾರೆ.

ಗಿಲ್ಲಿ ನಟ ಗೆಲ್ಲಲೇಬಾರದು ಎಂಬುದು ಸತೀಶ್ ಆಸೆ ಆಗಿತ್ತು. ರಕ್ಷಿತಾ ಶೆಟ್ಟಿ ಅಥವಾ ಅಶ್ವಿನಿ ಗೌಡ ಗೆಲ್ಲಬೇಕು ಎಂಬುದು ಅವರ ಕೋರಿಕೆ ಆಗಿತ್ತು. ಗಿಲ್ಲಿ ಎರಡನೇ ಸ್ಥಾನಕ್ಕೆ ಕಾಲಿಟ್ಟರೂ ಅದು ಸೋತಂತೆಯೇ ಎಂಬುದು ಸತೀಶ್ ಅಭಿಪ್ರಾಯ ಆಗಿತ್ತು. ‘ಗಿಲ್ಲಿ ಗೆದ್ದರೆ ಏನು’ ಎಂದು ಕೇಳಿದಾಗ, ‘ನಾನು ಅವರ ಕಾಲ ಕೆಳೆಗೆ ನುಗ್ತೀನಿ’ ಎಂದು ಹೇಳಿದ್ದರು ಸತೀಶ್.

ಈಗ ಗಿಲ್ಲಿ ನಟ ಭಾರೀ ಮತಗಳಿಂದ ಗೆದ್ದಾಗಿದೆ. 40 ಕೋಟಿಗೂ ಹೆಚ್ಚು ವೋಟ್ ಸಿಗೋದು ಎಂದರೆ ಅದು ಸಣ್ಣ ಮಾತೇ ಅಲ್ಲ. ಗಿಲ್ಲಿಗೆ ಈ ಅಭೂತಪೂರ್ವ ಗೆಲುವು ಟೀಕಾಕಾರರ ಮುಂದೆಯೇ ಸಿಕ್ಕಿದೆ ಎಂಬುದು ವಿಶೇಷ. ಹೀಗಾಗಿ, ಈ ಗೆಲುವಿನ ಬಳಿಕ ಸತೀಶ್ ಅವರು ಹೇಳಿದಂತೆ ನಡೆದುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇದಕ್ಕೆ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಏರಿದ ಏಣಿಯನ್ನು ಒದೆಯಲಿಲ್ಲ ಗಿಲ್ಲಿ ನಟ; ಬಿಗ್ ಬಾಸ್ ವಿನ್ನರ್ ನಡೆಗೆ ಮೆಚ್ಚುಗೆ

ಗಿಲ್ಲಿ ನಟ ಅವರ ಮೇಲೆ ಸತೀಶ್​​ಗೆ ಕೋಪ ಬರಲೂ ಒಂದು ಕಾರಣವೂ ಇತ್ತು. ಗಿಲ್ಲಿ ತುಂಬಾನೇ ಟಾರ್ಚರ್ ಕೊಟ್ಟಿದ್ದಾರೆ ಎಂಬುದು ಸತೀಶ್ ಅಭಿಪ್ರಾಯ. ಈ ಕಾರಣದಿಂದಲೇ ಗಿಲ್ಲಿ ನಟ ಅವರನ್ನು ದ್ವೇಷಿಸುತ್ತಾ ಬಂದರು. ಆ ಬಳಿಕ ಟೀಕೆ ಎದುರಿಸಬೇಕಾಯಿತು. ಈಗ ಅವರು ಗಿಲ್ಲಿ ಗೆಲುವನ್ನು ಹೇಗೆ ಸ್ವೀಕರಿಸಿದ್ದಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:12 pm, Mon, 19 January 26

Source link

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ: ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಯಂಘೋಷಿತ ಪವಾಡ ಪುರುಷ! – Kannada News | Swamiji Creates Disturbance at Lakkundi Excavation Site, Flees After Locals Object

ಗದಗ, ಜನವರಿ 19: ಲಕ್ಕುಂಡಿಯಲ್ಲಿ ಇಂದು ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್​​ ಹೈಡ್ರಾಮಾ ನಡೆಸಿದ ಪ್ರಸಂಗ ನಡೆದಿದೆ. ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ. ಲಕ್ಕುಂಡಿ ಹಾಗೂ ಚಾಮುಂಡಿ ಇತಿಹಾಸಕ್ಕೂ ಸಂಬಂಧವಿಲ್ಲ. ನಮ್ಮೂರಿಗೆ ಬಂದು ಸುಳ್ಳು ಹೇಳ್ತಿಯಾ ಎಂದು ತರಾಟೆಗೆ ಪಡೆದಿದ್ದಾರೆ. ಜನರ ಆಕ್ರೋಶಕ್ಕೆ ಹೆದರಿದ ಸ್ವಾಮೀಜಿ ಹಿಂಗಾಲಿನಲ್ಲಿ ಓಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

25 ಲಕ್ಷ ರೂಪಾಯಿ ಹಣವನ್ನು ಏನ್​​ ಮಾಡ್ತೀರಾ? ಇದನ್ನು ಖರೀದಿಸುವುದು ನನ್ನ ಆಸೆ ಎಂದ ರಕ್ಷಿತಾ – Kannada News | Bigg Boss Kannada 12 Runner Up Rakshita Shetty Reflects on Her Journey and Future Endeavours

ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೊದಲ ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್‌ನಿಂದ ಪಡೆದ 25 ಲಕ್ಷ ರೂಪಾಯಿ ಬಹುಮಾನದ ಹಣದಲ್ಲಿ 20 ಹಸುಗಳನ್ನು ಖರೀದಿಸಲು ಯೋಜನೆ ಹಾಕಿಕೊಂಡಿದ್ದಾರೆ. ಹೆಚ್ಚುವರಿ 5 ಲಕ್ಷ ರೂಪಾಯಿಗಳನ್ನು ಹಸುಗಳ ಆರೈಕೆ, ಆಹಾರ ಮತ್ತು ನಿರ್ವಹಣೆಗೆ ಮೀಸಲಿಡುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ಮನೆಯೊಂದಿಗಿನ ತಮ್ಮ ಭಾವನಾತ್ಮಕ ಸಂಬಂಧದ ಬಗ್ಗೆ ರಕ್ಷಿತಾ ಶೆಟ್ಟಿ ಮಾತನಾಡಿದ್ದಾರೆ. ಮೂರು ತಿಂಗಳ ಕಾಲ ಮನೆಯಲ್ಲಿ ಕಳೆದ ನಂತರ ಆ ಮನೆ ಕೇವಲ ಮನೆಯಾಗಿರಲಿಲ್ಲ, ಅದೊಂದು ಕುಟುಂಬವಾಯಿತು ಎಂದು ಅವರು ವಿವರಿಸಿದರು. ಮನೆಯಲ್ಲಿನ ಸುಖ-ದುಃಖಗಳು, ನಗು, ಹಬ್ಬಗಳು ಮತ್ತು ವಿಭಿನ್ನ ಭಾವನೆಗಳು ಅವರನ್ನು ಅಲ್ಲಿನ ಸದಸ್ಯರೊಂದಿಗೆ ಬಲವಾಗಿ ಬಂಧಿಸಿದೆ. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ರಾತ್ರಿ ಮಲಗಲು ಕೂಡ ಒದ್ದಾಡಿದ್ದೇನೆ. ಸುದೀಪ್ ಸರ್ ಅವರನ್ನು ಭೇಟಿಯಾಗಿ, ಅವರೊಂದಿಗಿನ ಮಾತುಕತೆ ಮತ್ತು ಸಮಾಧಾನದ ಬಗ್ಗೆಯೂ ರಕ್ಷಿತಾ ನೆನಪಿಸಿಕೊಂಡರು.

ಬಿಗ್​​ ಬಾಸ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! – Kannada News | Bangalore Yellow Line Gets 8th Driverless Metro: Namma Metro Expands Operations

ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು !

ಬೆಂಗಳೂರು, ಜನವರಿ 19: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದ ಟಿಟಾಘರ್‌ನಿಂದ ಹೊರಟಿದ್ದ ಎಂಟನೇ ಚಾಲಕರಹಿತ ಮೆಟ್ರೋ ರೈಲು ಇಂದು ಬೆಳಗ್ಗೆ ಬೆಂಗಳೂರಿನ ಹೆಬ್ಬಗೊಡಿ ಮೆಟ್ರೋ ಡಿಪೋಗೆ ಸುರಕ್ಷಿತವಾಗಿ ಆಗಮಿಸಿದೆ. ಆರು ಕೋಚ್‌ಗಳನ್ನು ಒಳಗೊಂಡ ಈ ಮೆಟ್ರೋ ರೈಲು ಜನವರಿ 10ರಂದು ಟಿಟಾಘರ್‌ನಿಂದ ಹೊರಟಿದ್ದು, ಇದೀಗ ಯೆಲ್ಲೋ ಲೈನ್ ಕಾರ್ಯಾಚರಣೆಗೆ ಸಿದ್ಧಗೊಳ್ಳುತ್ತಿದೆ.

ನಾಳೆಯಿಂದ ಟೆಸ್ಟಿಂಗ್ ಆರಂಭ

ಸದ್ಯ ಬೆಂಗಳೂರು ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಏಳು ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ಹೊಸದಾಗಿ ಆಗಮಿಸಿದ ಎಂಟನೇ ರೈಲಿನ ತಾಂತ್ರಿಕ ಪರಿಶೀಲನೆಗಳನ್ನು ನಾಳೆಯಿಂದ (ಜನವರಿ 20) ಆರಂಭಿಸಲಾಗುತ್ತದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಸುರಕ್ಷತಾ ಹಾಗೂ ತಾಂತ್ರಿಕ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡ ಬಳಿಕ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡಲಾಗುವುದು.

16 ಚಾಲಕರಹಿತ ಮೆಟ್ರೋ ರೈಲುಗಳ ನಿರೀಕ್ಷೆ

ಆರ್.ವಿ. ರಸ್ತೆದಿಂದ ಬೊಮ್ಮಸಂದ್ರದವರೆಗೆ 19.15 ಕಿಲೋಮೀಟರ್ ವ್ಯಾಪ್ತಿಯ ಯೆಲ್ಲೋ ಲೈನ್‌ನಲ್ಲಿ ಒಟ್ಟು 16 ನಿಲ್ದಾಣಗಳಿವೆ. ಈ ಮಾರ್ಗದ ಸಮರ್ಪಕ ಕಾರ್ಯಾಚರಣೆಗೆ ಒಟ್ಟು 16 ಚಾಲಕರಹಿತ ಮೆಟ್ರೋ ರೈಲುಗಳನ್ನು ಆರ್ಡರ್ ಮಾಡಲಾಗಿದ್ದು, ಈಗಾಗಲೇ ಎಂಟು ರೈಲುಗಳು ಬೆಂಗಳೂರು ತಲುಪಿವೆ. ಉಳಿದ ಎಂಟು ರೈಲುಗಳು ಪ್ರತಿ 10ರಿಂದ 20 ದಿನಗಳಿಗೊಮ್ಮೆ ಹಂತ ಹಂತವಾಗಿ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ಪ್ರಸ್ತುತ ಯೆಲ್ಲೋ ಲೈನ್‌ನಲ್ಲಿ 10ರಿಂದ 12 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚಾರ ನಡೆಯುತ್ತಿದ್ದು, ಹೊಸ ರೈಲಿನ ಪರೀಕ್ಷೆ ಮುಗಿಸಿ ವಾಣಿಜ್ಯ ಸಂಚಾರ ಆರಂಭವಾದ ಬಳಿಕ 8ರಿಂದ 10 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುವ ಸಾಧ್ಯತೆ ಇದೆ. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ (Vande Bharat Sleeper Train) ಹಲವು ಫೀಚರ್​ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್​ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ.

ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ….

ವಂದೇ ಭಾರತ್ ಸ್ಲೀಪರ್ ಟ್ರೈನ್​ಗಳಲ್ಲಿ ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಟಿಕೆಟ್ ಕ್ಯಾನ್ಸಲ್ ಮಾಡಿದರೆ ಕನಿಷ್ಠವೆಂದರು ಶೇ. 25ರಷ್ಟು ಡಿಡಕ್ಷನ್ ಮಾಡಲಾಗುತ್ತದೆ. 72 ಗಂಟೆಗೂ ಹೆಚ್ಚು ಕಾಲ ಮುಂಚೆ ನೀವು ಟಿಕೆಟ್ ಕ್ಯಾನ್ಸಲ್ ಮಾಡಿದರೆ ಶೇ. 25ರಷ್ಟು ಟಿಕೆಟ್ ಹಣ ಮುರಿದುಕೊಳ್ಳಲಾಗುತ್ತದೆ.

ಟ್ರೈನ್ ಹೊರಡುವ ಮುಂದಿನ 72 ಗಂಟೆಯಿಂದ 8 ಗಂಟೆವರೆಗೆ​ ಅವಧಿಯಲ್ಲಿ ಟಿಕೆಟ್ ರದ್ದುಗೊಳಿಸಿದರೆ ಶೇ. 50ರಷ್ಟು ಹಣವನ್ನು ಕಡಿತಗೊಳಿಸಲಾಗುತ್ತದೆ. ಟ್ರೈನ್ ಹೊರಡುವ 8 ಗಂಟೆ ಮುಂಚೆ ನೀವು ಟಿಕೆಟ್ ಕ್ಯಾನ್ಸಲ್ ಮಾಡಿದರೆ ಯಾವುದೇ ರೀಫಂಡ್ ಇರುವುದಿಲ್ಲ.

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್

120 ಕಿಮೀ ವೇಗದಲ್ಲಿ ಹೋಗುವ ರೈಲು

ಈ ಟ್ರೈನ್ ಗಂಟೆಗೆ 180 ಕಿಮೀ ವೇಗದಲ್ಲಿ ಸಾಗುವ ಸಾಮರ್ಥ್ಯ ಹೊಂದಿದೆ. ಆದರೆ, ಈಗಿರುವ ರೈಲು ಹಳಿ ವ್ಯವಸ್ಥೆಯಲ್ಲಿ ಇದು 120-130 ಕಿಮೀ ವೇಗದಲ್ಲಿ ಹೋಗಬಲ್ಲುದು. ಇದರ ಬರ್ತ್​ಗಳಲ್ಲಿ (ಸೀಟು) ವಿಶ್ವ ದರ್ಜೆಯ ಸಸ್ಪೆನ್ಸ್ ಸಿಸ್ಟಂ ಇದ್ದು, ಇದರ ಡಿಸೈನ್ ಕೂಡ ವಿಶೇಷವಾಗಿದೆ. ಕೂರಲು ಆರಾಮವಾಗಿರುವಂತೆ ವಿನ್ಯಾಸ ಮಾಡಲಾಗಿದೆ.

ವಂದೇ ಭಾರತ್​ನಲ್ಲಿ ಸ್ವಚ್ಛತೆ, ಸುರಕ್ಷತೆ

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಹೊಸ ಹೊಸ ಸೋಂಕುನಿವಾರಕ ತಂತ್ರಜ್ಞಾನ ಹೊಂದಿದ್ದು, ಶೇ. 99ರಷ್ಟು ಸೂಕ್ಷ್ಮಜೀವಿಗಳನ್ನು ಕೊಲ್ಲಬಲ್ಲುದು. ಈ ಟ್ರೈನ್​ನಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಲಾಗಿದೆ.

ಇದನ್ನೂ ಓದಿ: ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ?

ಈ ರೈಲಿನಲ್ಲಿ ಕವಚ್ ಎನ್ನುವ ಆಟೊಮ್ಯಾಟಿಕ್ ಪ್ರೊಟೆಕ್ಷನ್ ಸಿಸ್ಟಂ ಇರುತ್ತದೆ. ಇದರಲ್ಲಿ ಸ್ಲೈಡಿಂಗ್ ಡೋರ್ ಇದ್ದು, ನಿಲ್ದಾಣ ಬಂದಾಗ ಮಾತ್ರ ಇದು ತೆರೆಯುವಂತೆ ಪ್ರೋಗ್ರಾಮ್ ಮಾಡಲಾಗಿರುತ್ತದೆ.

ಹೌರಾದಿಂದ ಕಾಮಾಖ್ಯವರೆಗಿನ ಮಾರ್ಗದ ವಂದೇ ಭಾರತ್ ಸ್ಲೀಪರ್ ಟ್ರೈನ್​ನ ಟಿಕೆಟ್ ದರ 2,300 ರೂನಿಂದ 3,600 ರೂ ಇದೆ. ಪ್ರಯಾಣಿಕರಿಗೆ ಆಹಾರವೂ ಕೂಡ ಟಿಕೆಟ್ ದರದಲ್ಲೇ ಒಳಗೊಳ್​ಳಲಾಗುತ್ತದೆ. ಸ್ಥಳೀಯ ಶೈಲಿಯ ಆಹಾರವನ್ನು ಪ್ರಯಾಣಿಕರಿಗೆ ಒದಗಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪುಟ್ಟ ಮನೆಯಲ್ಲಿ ಸಾಧನೆಯ ಭಂಡಾರ: ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು – Kannada News | Gillis Triumphant Return: Dadadapura Village Celebrates BBK12 Winners Success Story

ಬಿಗ್​​​ಬಾಸ್​​​​​ ಕನ್ನಡ 12 ವಿಜೇತ ಗಿಲ್ಲಿ ಅವರ ಯಶಸ್ಸನ್ನು ಅವರ ಹುಟ್ಟೂರು ದಡದಪುರ ಅದ್ಧೂರಿಯಾಗಿ ಆಚರಿಸುತ್ತಿದೆ. ದಡದಪುರದಲ್ಲಿರುವ ಗಿಲ್ಲಿ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಲು ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಗಿಲ್ಲಿ ತುಂಬಾ ಬಡತನದ ಮನೆಯಿಂದ ಬಂದವರು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಒಂದಿಷ್ಟು ಹಣವನ್ನು ಸಂಪಾದಿಸಿದ್ದಾರೆ. ಅದರೂ ಅವರು ಇಂದಿಗೂ ಪುಟ್ಟ ಮನೆಯಲ್ಲೇ ವಾಸವಾಗಿದ್ದಾರೆ. ಅವರ ಮನೆ ಹೇಗಿದೆ ಎಂಬುದನ್ನು ಟಿವಿ9 ಕನ್ನಡ ತೋರಿಸಿದೆ ನೋಡಿ. ಇದು ಗಿಲ್ಲಿ ಆಡಿ ಬೆಳೆದ ಪುಟ್ಟ ಮನೆ. ಬಡತನದ ಹಿನ್ನೆಲೆಯಿಂದ ಬಂದ ಗಿಲ್ಲಿ ಇಂದು  ಎತ್ತರಕ್ಕೆ ಬೆಳೆದಿರುವುದು ವಿಶೇಷ. ಅವರು ತಮ್ಮ ಪ್ರತಿಭೆಯಿಂದ ಸಾಕಷ್ಟು ಹೆಸರು ಗಳಿಸಿದ್ದಾರೆ. ಗಿಲ್ಲಿ ಕೇವಲ ಬಡವರ ಮಗ ಮಾತ್ರವಲ್ಲ, ಅವರು ಅಸಾಧಾರಣ ಪ್ರತಿಭಾವಂತರು. ಅವರ ಈ ಪ್ರತಿಭೆಯೇ ಅವರ ಇಷ್ಟೊಂದು ದೊಡ್ಡ ಯಶಸ್ಸಿಗೆ ಕಾರಣವಾಯಿತು. ಮೊದಲು ಯೂಟ್ಯೂಬ್ ಮೂಲಕ ಜನಪ್ರಿಯತೆ ಗಳಿಸಿದ ಗಿಲ್ಲಿ, ನಂತರ ಬೆಳ್ಳಿ ಪರದೆಗೂ ಕಾಲಿಟ್ಟಿದ್ದಾರೆ. ಗಿಲ್ಲಿ ಅವರ ಮನೆಯಲ್ಲಿ, ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದ ಫೋಟೋಗಳು, ನಟರೊಂದಿಗೆ ತೆಗೆಸಿಕೊಂಡ ಚಿತ್ರಗಳು, ಮತ್ತು ಅಭಿಮಾನಿಗಳು ಅವರಿಗೆ ನೀಡಿದ ಪ್ರಶಸ್ತಿಗಳು ಹಾಗೂ ಉಡುಗೊರೆಗಳನ್ನು ಇಟ್ಟಿದ್ದಾರೆ. ಇವೆಲ್ಲವೂ ಅವರ ಯಶಸ್ಸಿನ ಪಯಣಕ್ಕೆ ಸಾಕ್ಷಿಯಾಗಿವೆ. ಗ್ರಾಮಸ್ಥರು ಸಹ ಗಿಲ್ಲಿಯ ಈ ಸಾಧನೆಗೆ ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ.

ಬಿಗ್​​ ಬಾಸ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ: ನಾಲ್ವರು ಪ್ರಮುಖ ಆಟಗಾರರು ಔಟ್ – Kannada News | Australia T20 Squad For Pakistan Series

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

Source link

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ – Kannada News | Bengaluru Police Use Safe City Tech and Namma 112 to Rapidly Rescue Missing Children

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ.

ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್ ಆಧಾರಿತ ಪೇಟ್ರೋಲ್ ವಾಹನಗಳ ನಿಯೋಜನೆ ಹಾಗೂ ನಿಯಂತ್ರಣ ಕೊಠಡಿ ಮತ್ತು ಸ್ಥಳೀಯ ಸಿಬ್ಬಂದಿ ನಡುವೆ ಸಮನ್ವಯ ಸಾಧ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ. ನಿಯಂತ್ರಣ ಕೊಠಡಿ ಮತ್ತು ಕ್ಷೇತ್ರದಲ್ಲಿರುವ ಸಿಬ್ಬಂದಿ ನಡುವಿನ ಸಮನ್ವ ಈ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ನಗರದಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆಗೆ ನೀಡಿರುವ ಮಹತ್ವವನ್ನು ಇದು ಸಾಬೀತು ಮಾಡಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ; 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ

ಮೊದಲ ಘಟನೆ 2025ರ ಡಿಸೆಂಬರ್ 27ರಂದು ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಮಾನಸಿಕವಾಗಿ ಅಸ್ಥಿರಳಾಗಿದ್ದ ಮಹಿಳೆಯೊಬ್ಬರು ಎರಡು ವರ್ಷದ ಮಗುವನ್ನು ಕರೆದೊಯ್ಯಲು ಯತ್ನಿಸಿದ್ದರು. ಘಟನೆಯನ್ನು ಗಮನಿಸಿದ ಸಹಾಯಕ ಉಪನಿರೀಕ್ಷಕರು ತಕ್ಷಣ ನಮ್ಮ-112ಗೆ ಮಾಹಿತಿ ನೀಡಿದ್ದು, ಐದು ನಿಮಿಷಗಳೊಳಗೆ ಹೋಯ್ಸಳಾ ಪೇಟ್ರೋಲ್ ವಾಹನ ಸ್ಥಳಕ್ಕೆ ತಲುಪಿ ಮಗುವನ್ನು ಸುರಕ್ಷಿತವಾಗಿ ತಾಯಿಗೆ ಒಪ್ಪಿಸಲಾಗಿದೆ.

ಅದೇ ರಾತ್ರಿ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ 16 ವರ್ಷದ ಮಾನಸಿಕವಾಗಿ ಸವಾಲುಗಳನ್ನು ಎದುರಿಸುತ್ತಿದ್ದ ಬಾಲಕನನ್ನು ತುರ್ತು ಕರೆ ಬಂದ ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ತಾಯಿಯೊಂದಿಗೆ ಮರಳಿ ಸೇರಿಸಲಾಗಿದೆ. ಬೆಳ್ಳಂದೂರು, ರಾಜಗೋಪಾಲನಗರ, ಕಾಡುಗೋಡಿ ಹಾಗೂ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಂಟಿಯಾಗಿ ಕಂಡುಬಂದ ಮಕ್ಕಳನ್ನು ಪತ್ತೆಹಚ್ಚಿ ಅವರ ಕುಟುಂಬಗಳಿಗೆ ಸುರಕ್ಷಿತವಾಗಿ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 14ರಂದು ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೆರಹಳ್ಳಿ ಫ್ಲೈಓವರ್ ಸಮೀಪ ನಡೆದಿದ್ದು, ಗದ್ದಲಭರಿತ ರಸ್ತೆಯಲ್ಲಿ ಒಂದು ಮಗುವಿನ ಓಡಾಟ ಗಮನಕ್ಕೆ ಬಂದಿದೆ. ನಾಲ್ಕು ನಿಮಿಷಗಳೊಳಗೆ ಸ್ಥಳ ತಲುಪಿದ ಪೊಲೀಸ್​​ ಸಿಬ್ಬಂದಿ ಪರಿಶೀಲನೆ ಬಳಿಕ ಮಗುವನ್ನು ಪೋಷಕರಿಗೆ ಒಪ್ಪಿಸಿದೆ. ಈ ಎಲ್ಲ ಘಟನೆಗಲಲ್ಲಿಯೂ ಪೊಲೀಸರ ಪ್ರತಿಕ್ರಿಯೆಯ ಸಮಯ 20 ನಿಮಿಷಗಳ ಒಳಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:03 pm, Mon, 19 January 26

Source link

Video: ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ – Kannada News | Teacher Shaves Her Head to Stand With Student Battling Cancer

ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿನಿಗೆ ಕ್ಯಾನ್ಸರ್ ಬಂದಿದ್ದಕ್ಕೆ ಶಿಕ್ಷಕಿ ನಡೆದುಕೊಂಡ ರೀತಿ ಎಲ್ಲರ ಮನ ಗೆದ್ದಿದೆ. ಕ್ಯಾನ್ಸರ್ ಬಂದಾಗ ಕೀಮೋ ಥೆರಪಿ ಮಾಡುವುದು ಸಾಮಾನ್ಯ, ಆಗ ತಲೆ ಕೂದಲನ್ನು ತೆಗೆಯುತ್ತಾರೆ.  ಶಾಲೆಗೆ ಬಂದಾಗ ಈ ವಿದ್ಯಾರ್ಥಿನಿಗೆ   ಮುಜುಗರವಾಗುವುದು ಸಹಜ, ಹಾಗಾಗಬಾರದೆಂದು ಶಿಕ್ಷಕಿಯೊಬ್ಬರು ತಾನು ತಲೆ ಬೋಳಿಸಿಕೊಂಡಿದ್ದಲ್ಲದೆ, ವಿದ್ಯಾರ್ಥಿನಿಯ ಸಹಪಾಠಿಯ ಕೂದಲನ್ನೂ ತೆಗೆಸಿರುವ ವಿಡಿಯೋ ವೈರಲ್ ಆಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link