Category Archives: Blog

Your blog category

50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್ – Kannada News | Gilli Natas Inspiring Journey: From Bengaluru Struggles to Bigg Boss Victory and Future Dreams

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮಗೆ ಸಿಕ್ಕ 50 ಲಕ್ಷ ರೂಪಾಯಿ ಬಹುಮಾನದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದರ ಬಗ್ಗೆ ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ಅವರ ನೈಜತೆಯೇ ಗೆಲುವಿಗೆ ಕಾರಣವಾಯಿತು. ಹಿಂದಿನ ಸೀಸನ್‌ಗಳ ಸ್ಪರ್ಧಿಗಳಿಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ತಮ್ಮದೇ ಆದ ವ್ಯಕ್ತಿತ್ವದಿಂದ ಎಲ್ಲರನ್ನು ಗಮನ ಸೆಳೆದಿದ್ದಾರೆ. ಬೆಂಗಳೂರಿಗೆ ಬಂದಾಗ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಗಿಲ್ಲಿ, “ಊಟ, ಮನೆಗಾಗಿ  ಒದ್ದಾಡಿದ್ದೇನೆ. ಕೈಯಲ್ಲಿ ಹಣ ಇಲ್ಲದ ಸಮಯದಲ್ಲಿ ಬೆಂಗಳೂರಿಗೆ ಬಂದೆ, ಊಟಕ್ಕಾಗಿ ದೇವಾಲಯ, ಚೌಟ್ರಿಗಳನ್ನು ಹುಡುಕಿದೆ” ಎಂದು ತಮ್ಮ ಕಷ್ಟದ ದಿನಗಳನ್ನು ಹಂಚಿಕೊಂಡಿದ್ದಾರೆ. ಇದೀಗ 50 ಲಕ್ಷ ರೂಪಾಯಿ ಕೈಯಲ್ಲಿರುವಾಗ, ಬೆಂಗಳೂರಿನ ಜಂಜಾಟದಿಂದ ದೂರವಾಗಿ, ತಮ್ಮ ಊರಿನಲ್ಲಿ ಒಂದು ಜಮೀನು ಖರೀದಿಸಿ, ಫಾರ್ಮ್‌ಹೌಸ್ ನಿರ್ಮಿಸಿ ಕೃಷಿ ಮಾಡುವ ಕನಸು ಕಂಡಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ನಮ್ಮ ಹಳ್ಳಿಯಲ್ಲೇ ಉಳಿದುಕೊಳ್ಳುವ ಯೋಜನೆಯನ್ನು ಗಿಲ್ಲಿ ಹಾಕಿಕೊಂಡಿದ್ದಾರೆ.

ಬಿಗ್​​​ಬಾಸ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ಈ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು 15 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Can you tell which of these five people is the alien

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಒಗಟುಗಳನ್ನು ಬಿಡಿಸುವುದೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಪ್ರತಿನಿತ್ಯ ವೈರಲ್‌ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದ್ದು, ಇದರಲ್ಲಿ ಇರುವ ಅನ್ಯಗ್ರಹ ಜೀವಿಯನ್ನು ಹದಿನೈದು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ನಿಮ್ಮ ಬುದ್ಧಿವಂತಿಕೆಗೆ ಸವಾಲೆಸುಗುವ ಈ ಒಗಟಿನ ಚಿತ್ರ ಬಿಡಿಸಲು ನೀವು ರೆಡಿ ಇದ್ರೆ ಈಗಲೇ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಭ್ರಮೆಯ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮದುವೆಯ ಸುಂದರ ಕ್ಷಣಗಳನ್ನು ನೋಡುತ್ತೀರಿ. ಇಬ್ಬರೂ ಮದುವೆಯಾಗುತ್ತಿದ್ದು, ಉಳಿದ ಮೂವರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಐವರಲ್ಲಿ ಒಬ್ಬರು ಮಾತ್ರ ಏಲಿಯನ್. ಈ ಅನ್ಯಗ್ರಹ ಜೀವಿ ಯಾರೆಂದು ನೀವು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯವಕಾಶ 15 ಸೆಕೆಂಡುಗಳು ಮಾತ್ರ.

ಇದನ್ನೂ ಓದಿ: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ

ಅನ್ಯಗ್ರಹ ಜೀವಿಯನ್ನು ಕಂಡು ಹಿಡಿಯಲು ಸಾಧ್ಯವಾಯಿತೇ?

ಒಗಟುಗಳನ್ನು ಬಿಡಿಸುವಲ್ಲಿ ಅನುಭವಿಗಳಾಗಿದ್ದರೂ ಈ ಟ್ರಿಕ್ಕಿ ಚಿತ್ರ ನೋಡಿದಾಗ ಒಂದು ಕ್ಷಣ ಗೊಂದಲಕ್ಕೆ ಒಳಗಾಗುತ್ತಾರೆ. ಈ ಚಿತ್ರದಲ್ಲಿರುವ ಐವರಲ್ಲಿ ಏಲಿಯನ್ ಯಾರೆಂದು ಕಂಡು ಹಿಡಿಯುವಲ್ಲಿ ಸಾಧ್ಯವಾಗಿದ್ದರೆ ನಿಮಗೆ ಅಭಿನಂದನೆಗಳು. ವಿಫಲರಾಗಿದ್ದೀರಿ ಎಂದಾದರೆ, ಚಿಂತಿಸಬೇಡಿ.ಈ ಐವರಲ್ಲಿ ವಧುವಿನ ಕೈಗಳನ್ನು ನೋಡಿ. ಅವಳಿಗೆ ಮೂರು ಕೈಗಳಿವೆ. ಅಂದರೆ ಅವಳು ಏಲಿಯನ್ ಆಗಿದ್ದು, ಉತ್ತರ ಸಿಕ್ಕಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral Story: ಪ್ರತಿ ದಿನ 100 ಜೀವಂತ ಕೀಟಗಳನ್ನು ತಿನ್ನುವ ವ್ಯಕ್ತಿ, ಕಾರಣವೇನು ಗೊತ್ತೇ? – Kannada News | Man Eats 100 Live Insects Daily: Carlos’s Bizarre Addiction Explained

ಜಗತ್ತಿನಲ್ಲಿ ವಿಚಿತ್ರ ಮನುಷ್ಯರಿದ್ದಾರೆ, ಅವರ ಅಭ್ಯಾಸಗಳು ಕೂಡ ವಿಚಿತ್ರವಾಗಿಯೇ ಇರುತ್ತದೆ. ಅದು ಬೇರೆಯವರಿಗೆ ವಿಚಿತ್ರವೆನಿಸಬಹುದು. ಕೆಲವರು ಮಾಂಸಾಹಾರಿಗಳಿದ್ದರೆ, ಇನ್ನು ಕೆಲವರು ಸಸ್ಯಾಹಾರಿಗಳಿದ್ದಾರೆ. ಸಾಮಾನ್ಯವಾಗಿ ಮಾಂಸಾಹಾರಿಗಳು(Non Vegetarian) ಕೋಳಿ, ಕುರಿ, ಮೊಟ್ಟೆ ಅಥವಾ  ಮೀನುಗಳನ್ನು ತಿನ್ನುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ನಿತ್ಯ 100 ಜೀವಂತ ಕೀಟಗಳನ್ನು ತಿನ್ನುತ್ತಾರಂತೆ.

ಈ ವ್ಯಕ್ತಿಯ ಹೆಸರು ಕಾರ್ಲೋಸ್, ಇವರು ಅಮೆರಿಕದ ಚಿಕಾಗೋದಲ್ಲಿ ವಾಸಿಸುತ್ತಾರೆ. ಅವರೇ ಹೇಳುವಂತೆ ಕೀಟಗಳು ಅವರ ನೆಚ್ಚಿನ ತಿಂಡಿಗಳಲ್ಲಿ ಒಂದು, ಅವುಗಳ ರುಚಿ ತುಂಬಾ ಇಷ್ಟ, ಅವು ಬೆಣ್ಣೆ ಸವರಿದ ಪಾಪ್‌ಕಾರ್ನ್‌ನಂತಿರುತ್ತವೆ. 26 ವರ್ಷದ ಕಾರ್ಲೋಸ್ ಇತ್ತೀಚೆಗೆ ಟಿಎಲ್‌ಸಿಯ “ಮೈ ಸ್ಟ್ರೇಂಜ್ ಅಡಿಕ್ಷನ್” ಕಾರ್ಯಕ್ರಮದ ವೇಳೆ ಜೀವಂತ ಕೀಟಗಳು ಮತ್ತು ಜಿರಳೆಗಳನ್ನು ತಿನ್ನುತ್ತಿರುವುದು ಕಂಡುಬಂದಿದೆ.ಕಾರ್ಲೋಸ್ ಜಿರಳೆಗಳನ್ನು ರುಚಿಕರವಾದ ತರಕಾರಿಗೆ ಹೋಲಿಸುತ್ತಾರೆ.

ಈ ಕೀಟಗಳು ನಾಲಿಗೆಗೆ ಮಸಾಜ್ ಮಾಡುತ್ತವೆ ಎಂದು ಹೇಳಿಕೊಳ್ಳುತ್ತಾರೆ. ಬೇರೆ ಯಾವುದೇ ರೀತಿಯ ಆಹಾರದಿಂದಲೂ ತನಗೆ ಅಷ್ಟು ಖುಷಿ ಸಿಗುವುದಿಲ್ಲ ಎಂದು ಕಾರ್ಲೋಸ್ ಹೇಳುತ್ತಾರೆ.ಕಾರ್ಲೋಸ್ ನಿರುದ್ಯೋಗಿಯಾಗಿದ್ದರೂ ಇನ್ನೂ ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆ. ಕಾರ್ಲೋಸ್ ಕೀಟಗಳ ಅಂಗಡಿಯಿಂದ ಹುಳುಗಳು ಮತ್ತು ಜಿರಳೆಗಳನ್ನು ಖರೀದಿಸಲು 8 ಡಾಲರ್ ಹಣವ್ನು ಖರ್ಚು ಮಾಡುತ್ತಿದ್ದಾರೆ.ಕಾರ್ಲೋಸ್ ಈ ವಿಚಿತ್ರ ಹವ್ಯಾಸವನ್ನು ಬಾಲ್ಯದಿಂದಲೂ ಬೆಳೆಸಿಕೊಂಡಿದ್ದಾಗಿ ಅವರೇ ಹೇಳಿದ್ದಾರೆ.

ಮತ್ತಷ್ಟು ಓದಿ: ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ

ನಾನು ಚಿಕ್ಕ ವಯಸ್ಸಿನಿಂದಲೂ ಜೀವಂತ ಹುಳುಗಳನ್ನು ತಿನ್ನುವ ಬಯಕೆಯನ್ನು ಹೊಂದಿದ್ದೆ, 4 ವರ್ಷ ವಯಸ್ಸಿನವನಾಗಿದ್ದಾಗ, ಮತ್ತು ನಾನು ಕೀಟಗಳನ್ನು ತಿನ್ನುತ್ತಿದ್ದೆ. ಈಗ, ಕಾರ್ಲೋಸ್ ಪ್ರತಿದಿನ 100 ಜೀವಂತ ಕೀಟಗಳನ್ನು ತಿನ್ನುತ್ತಾರೆ. ಕಾರ್ಲೋಸ್ ಜೀವಂತ ಕೀಟಗಳನ್ನು ಏಕೆ ತಿನ್ನುತ್ತಾನೆ ಎಂದು ನಿಖರವಾಗಿ ಹೇಳುವುದು ಕಷ್ಟ, ಆದರೆ ಅವರೇ ಒಂದು ವಿಚಿತ್ರ ಕಾರಣವನ್ನು ನೀಡುತ್ತಾರೆ.

ನಾನು ಜೀವಂತ ಕೀಟಗಳನ್ನು ತಿಂದು ಅಗಿಯುವಾಗ, ಅವುಗಳ ಅದೃಷ್ಟ ನನ್ನ ನಿಯಂತ್ರಣದಲ್ಲಿದೆ ಎಂದು ನನಗೆ ಅನಿಸುತ್ತದೆ ಮತ್ತು ಅವು ನನ್ನ ನಾಲಿಗೆಯನ್ನು ಮುದ್ದಿಸುವ ರೀತಿ ನನಗೆ ತುಂಬಾ ಇಷ್ಟ ಎಂದೆಲ್ಲಾ ಕಾರಣಗಳನ್ನು ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ – Kannada News | Rakshitha Shetty Gave Flying kiss after She became Bigg boss runner Up

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನ ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ! – Kannada News | Hunsur Gold Robbery: Two Bihar Accused Arrested for Sky Gold and Diamonds Robbery

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ

ಮೈಸೂರು, ಜನವರಿ 19: ಜಿಲ್ಲೆಯ ಹುಣಸೂರಿನಲ್ಲಿ ನಡೆದ ಭಾರೀ ಚಿನ್ನದಂಗಡಿ ದರೋಡೆ  (Gold and Diamond Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಐದು ಜನರಿದ್ದ ಕಳ್ಳರ ಗ್ಯಾಂಗ್, ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್​​ ಅನ್ನು ಕೇವಲ 5 ನಿಮಿಷಗಳಲ್ಲಿ ದೋಚಿತ್ತು. ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಬಿಹಾರ ಮತ್ತು ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆ

ಆರೋಪಿಗಳನ್ನು ಬಿಹಾರದ ಭಾಗಲ್ಪುರ್ ಜಿಲ್ಲೆಯ ಪಂಕಜ್ ಕುಮಾರ್ ಹಾಗೂ ದರ್ಭಾಂಗ್ ಜಿಲ್ಲೆಯ ಹೃಷಿಕೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಬಿಹಾರ ಮತ್ತು ಕರ್ನಾಟಕ ರಾಜ್ಯಗಳ ಪೊಲೀಸರ ಸಂಯುಕ್ತ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಂದು ಚಿನ್ನದ ಸರ, ಒಂದು ಉಂಗುರ, ಒಂದು ಲಕ್ಷ ರೂಪಾಯಿ ನಗದು, ಚಿನ್ನಾಭರಣ ಸಂಗ್ರಹಿಸುವ ಸ್ಟೊರೇಜ್ ಕೇಸ್ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಪಂಕಜ್ ಕುಮಾರ್ ಬಿಹಾರ ಪೊಲೀಸರಿಗೆ 16 ವಿವಿಧ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದು, ಬಿಹಾರ, ಕರ್ನಾಟಕ, ರಾಜಸ್ಥಾನ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ದರೋಡೆ, ಡಕಾಯಿತಿ ಮತ್ತು ಕೊಲೆ ಯತ್ನ ಸೇರಿದಂತೆ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ ಹುಣಸೂರು ಚಿನ್ನದಂಗಡಿ ದರೋಡೆ: ರಾಬರಿ ಆಗಿದ್ದು 7 ಕೆ.ಜಿ ಬಂಗಾರ; ಡೈಮಂಡ್​​ ಕೂಡ ಕಳವು

ಐವರಲ್ಲಿ ಇಬ್ಬರು ಅಂದರ್, ಮೂವರಿಗಾಗಿ ಹುಡುಕಾಟ

ಕಳೆದ ಡಿಸೆಂಬರ್ 28ರಂದು ಬಂಧಿತರೂ ಸೇರಿದಂತೆ ಐವರ ತಂಡ ಕೇವಲ ಐದು ನಿಮಿಷಗಳಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಕೆಜಿ ಚಿನ್ನವನ್ನು ದರೋಡೆ ಮಾಡಿ ಪರಾರಿಯಾಗಿತ್ತು. ಈ ಘಟನೆ ಇಡೀ ಮೈಸೂರು ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು. ಪ್ರಕರಣದ ಪತ್ತೆಗೆ ಮೈಸೂರು ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಿದ್ದರು. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಳಿದ ಮೂವರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷ ಪತ್ತೆ – Kannada News | Ancient Axe Shaped Artifact Unearthed on Day 4 of Excavation in Lakkundi

ಗದಗ, ಜನವರಿ 19: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ ಪುರಾತನ ಕಾಲದ ಕೊಡಲಿ ಆಕಾರದ ಅವಶೇಷವೊಂದು ಪತ್ತೆಯಾಗಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಶಿಲೆಯು ಮೂರು ಅಡಿ ಆಳದಲ್ಲಿ ದೊರಕಿದೆ. ಈ ಹಿಂದೆ ಉತ್ಖನನದ ಮೊದಲ ದಿನ ಶಿವಲಿಂಗ ಪಾಣಿಪೀಠ ಮತ್ತು ನಿನ್ನೆ ಶಿವಲಿಂಗ ಹಾಗೂ ನಾಗರ ಚಿತ್ರವಿರುವ ಅವಶೇಷಗಳು ಪತ್ತೆಯಾಗಿದ್ದವು. ಲಕ್ಕುಂಡಿ ಗ್ರಾಮವು ಚಾಲುಕ್ಯರು ಮತ್ತು ರಾಷ್ಟ್ರಕೂಟರ ಕಾಲದ ಸುಮಾರು 101 ದೇವಸ್ಥಾನಗಳು ಮತ್ತು 101 ಭಾವಿಗಳನ್ನು ಹೊಂದಿದ್ದು, ಇದು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ. ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ನಾಲ್ಕರಿಂದ ಐದು ಅಡಿ ಆಳದಲ್ಲಿ ಇನ್ನಷ್ಟು ಪ್ರಮುಖ ಅವಶೇಷಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ದೊರೆತ ಕೊಡಲಿ ಆಕಾರದ ಅವಶೇಷವನ್ನು ಹೆಚ್ಚಿನ ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದ್ದು, ಅದರ ಕಾಲಮಾನ ಮತ್ತು ಮಹತ್ವದ ಬಗ್ಗೆ ತಜ್ಞರು ನಿರ್ಧರಿಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಹೋಗಿದ್ದ ತಂದೆ ಹೃದಯಾಘಾತದಿಂದ ಸಾವು – Kannada News | Heart Attack: 35 Year Old Assam Man Dies During Son’s Result Collection

ಅಸ್ಸಾಂ, ಜನವರಿ 19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ(Heart Attack)ದ ಅಪಾಯ ಹೆಚ್ಚಾಗಿದೆ. ತಂದೆಯೊಬ್ಬರು ಯುಕೆಜಿಯಲ್ಲಿ ಓದುತ್ತಿದ್ದ ಮಗನ ಮಾರ್ಕ್ಸ್​ಕಾರ್ಡ್​ ತರಲು ಶಾಲೆಗೆ ಹೋದವರು ಹೃದಯಾಘಾತದಿಂದ ಪ್ರಾಣಬಿಟ್ಟಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ದೀಪಂಕರ್ ಬೋರ್ಡೊಲೊಯ್(35) ಮೃತ ವ್ಯಕ್ತಿ. ಮಗನ ಫಲಿತಾಂಶ ಬರುತ್ತೆ ಮಾರ್ಕ್ಸ್​ಕಾರ್ಡ್​ ತರಲು ಹೋಗಬೇಕೆಂದು, ಒಂದು ದಿನ ಕೆಲಸಕ್ಕೆ ರಜೆ ಹಾಕಿ ಅಸ್ಸಾಂನ ಜೋರ್ಹತ್‌ನ ಸ್ಯಾಮ್‌ಫೋರ್ಡ್ ಶಾಲೆಗೆ ಹೋಗಿದ್ದರು.

ಮಾರ್ಕ್ಸ್​ಕಾರ್ಡ್​ ಪಡೆದು ಶಾಲೆಯಿಂದ ಹೊರಗೆ ಬರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಜನವರಿ 15 ರಂದು ಈ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೂಡಲೇ ಶಾಲೆಯ ಸಿಬ್ಬಂದಿ ಹಾಗೂ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ಘಟನೆಯ ನಂತರ, ಶಾಲಾ ಆವರಣದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಮಗುವಿನ ಪೋಷಕರು ಹಠಾತ್ ನಿಧನದಿಂದ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಮತ್ತಷ್ಟು ಓದಿ: ಶಾಲಾ ಬಸ್ ಚಾಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ: ಮುಂದೇನಾಯ್ತು?

ಬೋರ್ಡೊಲೊಯ್ ಅವರು ಅಸ್ಸಾಂ ಸರ್ಕಾರದ ಟಿಯೋಕ್ ವಿಭಾಗದ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಪತ್ನಿ ಗೃಹಿಣಿ. ಕುಟುಂಬದ ಪ್ರಕಾರ, ಬೋರ್ಡೊಲೊಯ್​ಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ.

ಘಟನೆಯ ವಿಡಿಯೋ

ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವಾರ, ಜನವರಿ 11 ರಂದು, ಗಾಯಕ ಮತ್ತು ನಟ ಪ್ರಶಾಂತ್ ತಮಾಂಗ್ , 43, ಹೃದಯಾಘಾತದಿಂದ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ತಿಂಗಳ ಆರಂಭದಲ್ಲಿ, ವೇದಾಂತ ಅಧ್ಯಕ್ಷ ಅನಿಲ್ ಅಗರ್ವಾಲ್ ಅವರ ಪುತ್ರ ಅಗ್ನಿವೇಶ್ ಅಗರ್ವಾಲ್ (49 ) ನ್ಯೂಯಾರ್ಕ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟೀಮ್ ಇಂಡಿಯಾದ ಮುಂದಿನ ಸರಣಿ ಯಾರ ವಿರುದ್ಧ? ಇಲ್ಲಿದೆ ವೇಳಾಪಟ್ಟಿ – Kannada News | India vs new zealand t20 series 2026 schedule

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಜನವರಿ 21 ರಿಂದ ಟಿ20 ಸರಣಿ ಶುರುವಾಗಲಿದೆ.

ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ರಾಯ್ಪುರದ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಗುವಾಹಟಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ. ಹಾಗೆಯೇ ನಾಲ್ಕನೇ ಮತ್ತು ಐದನೇ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ ಮತ್ತು ತಿರುವನಂತಪುರದಲ್ಲಿ ಜರುಗಲಿದೆ.

ಈ ಐದು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಜನವರಿ 31 ರಂದು ಐದು ಮ್ಯಾಚ್​ಗಳ ಸರಣಿ ಮುಗಿಯಲಿದ್ದು, ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರಿಗೆ ಕೆಲ ದಿನಗಳ ವಿಶ್ರಾಂತಿ ಸಿಗಲಿದೆ. ಆ ಬಳಿಕ ಟೀಮ್ ಇಂಡಿಯಾ ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯು ಭಾರತ ತಂಡದ ಪಾಲಿಗೆ ಮಹತ್ವದ್ದಾಗಿ ಪರಿಣಮಿಸಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್.

ಇದನ್ನೂ ಓದಿ: ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00 ಗಂಟೆಗೆ ಶುರು
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00 ಗಂಟೆಗೆ ಶುರು
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00 ಗಂಟೆಗೆ ಶುರು
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00 ಗಂಟೆಗೆ ಶುರು
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00 ಗಂಟೆಗೆ ಶುರು

Published On – 9:55 am, Mon, 19 January 26

Source link

Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಬಿದ್ದ ತಂದೆ-ಮಗನನ್ನು ರಕ್ಷಿಸಿದ ಆರ್​ಪಿಎಫ್ ಸಿಬ್ಬಂದಿ – Kannada News | Seconds From Disaster, Railway Officer’s Brave Rescue Caught on Camera

ಪ್ರಯಾಗ್​ರಾಜ್, ಜನವರಿ 19: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ರೈಲಿನಡಿಗಾಗುತ್ತಿದ್ದ ತಂದೆ-ಮಗನನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 15018 ಕಾಶಿ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್‌ನಿಂದ ಹೊರಬರಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ತನ್ನ ಚಿಕ್ಕ ಮಗನನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ರೈಲು ಚಲಿಸುತ್ತಿದ್ದಾಗಲೇ ಅದನ್ನು ಹತ್ತಲು ಪ್ರಯತ್ನಿಸಿದ್ದರು, ಈ ಪ್ರಯತ್ನದಲ್ಲಿ, ಅವರು ಕಾಲು ತಪ್ಪಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಜಾರಿದ್ದರು. ಕರ್ತವ್ಯದಲ್ಲಿದ್ದ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿ ಮತ್ತು ಬಾಲಕನನ್ನು ಸುರಕ್ಷಿತವಾಗಿ ಎಳೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಮ್ಮ ಮನೆ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಥಳಿಸಿ, ಮೂತ್ರ ಕುಡಿಸಿದ ಕುಟುಂಬ ಸದಸ್ಯರು – Kannada News | Bhopal Man Brutally Tortured for Love: Forced to Drink Urine and Assaulted by Family

ಭೋಪಾಲ್, ಜನವರಿ 19: ತಮ್ಮ ಮನೆ ಹುಡುಗಿಯ ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಥಳಿಸಿದ ಕುಟುಂಬದವರು ಆತನಿಗೆ ಬಲವಂತವಾಗಿ ಮೂತ್ರ(Urine) ಕುಡಿಸಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಭೋಪಾಲ್‌ನ ಕೋಲಾರದ ನಿವಾಸಿ 18 ವರ್ಷದ ಸೋನು ಎಂಬಾತನನ್ನು ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಅಪಹರಿಸಿ, ಮೂರು ದಿನಗಳ ಕಾಲ ಬಂಧಿಯಾಗಿರಿಸಿ,  ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಆಘಾತಕಾರಿ ಅಲೆಗಳನ್ನು ಸೃಷ್ಟಿಸಿರುವ ಹಲ್ಲೆಯ ವೀಡಿಯೊ ಈಗ ವೈರಲ್ ಆಗಿದೆ.

ಈ ದೃಶ್ಯಾವಳಿಯಲ್ಲಿ ಸೋನು ಅವರನ್ನು ಹಲವಾರು ಪುರುಷರು ನಿರ್ದಯವಾಗಿ ಥಳಿಸುತ್ತಿರುವುದನ್ನು ಮತ್ತು ಬಿಯರ್ ಬಾಟಲಿಯಿಂದ ಮೂತ್ರವನ್ನು ಕುಡಿಯುವಂತೆ ಒತ್ತಾಯಿಸುತ್ತಿರುವುದನ್ನು ಕಾಣಬಹುದು.
ಪೊಲೀಸ್ ಮೂಲಗಳ ಪ್ರಕಾರ, ಸೋನು ಝಾಲಾವರ್ ಜಿಲ್ಲೆಯ ಪುಲೋರೋ ಗ್ರಾಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದ. ಸುಮಾರು 15 ದಿನಗಳ ಹಿಂದೆ, ಆ ಯುವತಿ ತನ್ನ ಮನೆಯನ್ನು ಬಿಟ್ಟು ಭೋಪಾಲ್‌ಗೆ ಬಂದು, ಅಲ್ಲಿ ಸೋನು ಜೊತೆ ವಾಸಿಸುತ್ತಿದ್ದಳು. ಬಳಿಕ ಅವರು ಮಗಳನ್ನು ಮನೆಗೆ ಕರೆದುಕೊಂಡು ಹೋದರು.

ಮತ್ತಷ್ಟು ಓದಿ: ಬೇಸಿಗೆಯಲ್ಲೂ ಪದೇ ಪದೇ ಮೂತ್ರ ಬರುತ್ತಾ? ನಿಮ್ಮ ದೇಹದಲ್ಲಿ ಶುರುವಾಗಿದೆ ಈ ಸಮಸ್ಯೆ

ಸ್ವಲ್ಪ ಸಮಯದ ನಂತರ, ಸೋನುಗೆ ಆ ಯುವತಿ ಕರೆ ಮಾಡಿ ತನ್ನನ್ನು ಭೇಟಿಯಾಗಲು ರಾಜಸ್ಥಾನಕ್ಕೆ ಬರುವಂತೆ ಕೇಳಿಕೊಂಡಿದ್ದಾಳೆ. ಆ ಕರೆಯನ್ನು ನಂಬಿ, ಆತ ಪುಲೋರೋ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದ. ಆದರೆ ಅದು ಹೊಂಚು ದಾಳಿಯಾಗಿತ್ತು.ಆತ ಗ್ರಾಮವನ್ನು ತಲುಪಿದ ತಕ್ಷಣ, ಯುವತಿಯ ಕುಟುಂಬದ ಸದಸ್ಯರು ಅವನನ್ನು ಅಪಹರಿಸಿ ಮನೆಯಲ್ಲಿ ಇರಿಸಿದರು, ನಂತರ ಗಂಟೆಗಳ ಕಾಲ ನಿರಂತರ ಹಿಂಸೆ ಕೊಟ್ಟಿದ್ದಾರೆ.

ಸೋನು ಮೇಲೆ ಗಂಟೆಗಟ್ಟಲೆ ಕ್ರೂರವಾಗಿ ಹಲ್ಲೆ ನಡೆಸಲಾಯಿತು, ಒದೆಯಲಾಯಿತು, ಹೊಡೆದರು ಮತ್ತು ಬೆದರಿಕೆ ಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ರಹಿಂಸೆ ದೈಹಿಕ ಹಿಂಸೆಯನ್ನು ಮೀರಿ ಹೋಯಿತು. ಅವನನ್ನು ಮಾನಸಿಕವಾಗಿ ಕುಗ್ಗಿಸಲು ಮತ್ತು ಅವಮಾನ ಮಾಡಲು, ಆರೋಪಿಗಳು ಅವನಿಗೆ ಮೂತ್ರ ಕುಡಿಸುವಂತೆ ಒತ್ತಾಯಿಸಿದ್ದರು, ಆ ಕೃತ್ಯವನ್ನು ರೆಕಾರ್ಡ್​ ಮಾಡಲಾಗಿದೆ.

ನಂತರ ಆ ವಿಡಿಯೋವನ್ನು ಭೋಪಾಲ್‌ನಲ್ಲಿರುವ ಸೋನು ಅವರ ಕುಟುಂಬಕ್ಕೆ ಕಳುಹಿಸಲಾಯಿತು, ಇದು ಭಯ ಮತ್ತು ಹತಾಶೆಯನ್ನು ಉಂಟುಮಾಡಿತು. ಕುಟುಂಬವು ತಕ್ಷಣ ಸಹಾಯಕ್ಕಾಗಿ ಕೋಲಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿತು. ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಕೋಲಾರ ಪೊಲೀಸರು ದೃಢಪಡಿಸಿದ್ದಾರೆ.

ವಿಶೇಷ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ನಾವು ರಾಜಸ್ಥಾನ ಪೊಲೀಸರೊಂದಿಗೆ ನಿರಂತರ ಸಮನ್ವಯದಲ್ಲಿದ್ದೇವೆ. ಯುವಕನ ಹೇಳಿಕೆ ದಾಖಲಿಸಲಾಗುತ್ತಿದೆ ಮತ್ತು ವೀಡಿಯೊವನ್ನು ಪರಿಶೀಲಿಸಲಾಗುತ್ತಿದೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇನ್ಸ್‌ಪೆಕ್ಟರ್ ಸಂಜಯ್ ಸೋನಿ ಹೇಳಿದ್ದಾರೆ.

ಅಪಹರಣ, ಕಾನೂನುಬಾಹಿರ ಬಂಧನ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಮಾನವೀಯ ಕೃತ್ಯಗಳಿಗೆ ಸಂಬಂಧಿಸಿದ ಬಹು ವಿಭಾಗಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link