Category Archives: Blog

Your blog category

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ.

ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ ಕಾರ್ಯಕ್ರಮದಡಿ ಪರಿಶೀಲನೆ 2024 ರಿಂದ ಚುರುಕುಗೊಂಡಿತ್ತು. 2024ರ ಮಾರ್ಚ್ ವೇಳೆಗೆ 27,380 ಜಾಗಗಳನ್ನು ಪರಿಶೀಲನೆ ನಡೆಸಲಾಗಿದ್ದರೆ, ಜುಲೈ ವೇಳೆಗೆ ಆ ಸಂಖ್ಯೆ 10.7 ಲಕ್ಷಕ್ಕೆ ಏರಿಕೆ ಕಂಡಿತ್ತು. ಸೆಪ್ಟೆಂಬರ್ ವೇಳೆಗೆ 13, ದಾಟಿತ್ತು. 2025ರ ಡಿಸೆಂಬರ್ 24ರ ವೇಳೆಗೆ ಒಟ್ಟು 13,94,519 ಸರ್ಕಾರಿ ಜಾಗಗಳನ್ನು ಪರಿಶೀಲನೆ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಹೇಗೆ ನಡೆದಿತ್ತು ಲ್ಯಾಂಡ್ ಬೀಟ್ ಡಿಜಿಟಲ್ ಸರ್ವೈಲೆನ್ಸ್?

ಗ್ರಾಮ ಲೆಕ್ಕಿಗರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು (ವಿಎಒ) ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ಭೂ ಗಡಿಗಳನ್ನು ಪರಿಶೀಲನೆ ನಡೆಸಿದ್ದರು. ಇದರಲ್ಲಿ ಅಧಿಕಾರಿಗಳು ಪ್ರತಿಯೊಂದು ಸ್ಥಳಕ್ಕೆ ಭೌತಿಕವಾಗಿ ಭೇಟಿ ನೀಡಿ, ಅದರ ಗಡಿಗಳಲ್ಲಿ ನಡೆದುಕೊಂಡು ಹೋಗಿ ಛಾಯಾಚಿತ್ರಗಳು ಮತ್ತು ಕಿರು ವೀಡಿಯೊಗಳನ್ನು ಅಪ್‌ಲೋಡ್ ಮಾಡಬೇಕಾಗಿತ್ತು.
ಈ ವ್ಯವಸ್ಥೆಯು ಕಚೇರಿಗಳಿಂದ ದತ್ತಾಂಶ ನಮೂದನ್ನು ತಡೆಯುತ್ತದೆ, ಇದು ಆನ್-ಗ್ರೌಂಡ್ ಪರಿಶೀಲನೆಯನ್ನು ಖಚಿತಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ಡಿಜಿಟಲ್ ಪರಿಶೀಲನೆಗಳು ಇತರ ನಿರ್ದಿಷ್ಟ ಕ್ರಮಗಳ ಮೂಲಕ ಶಿಸ್ತುಬದ್ಧವಾಗಿ ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ

ಹಿಂದೆ, ಕೆಲಸದ ಒತ್ತಡ ಮತ್ತು ಬಹು ಜವಾಬ್ದಾರಿಗಳಿಂದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಭೂಮಿ ಪರಿಶೀಲನೆ ಕಾರ್ಯವನ್ನು ತಪ್ಪಿಸುತ್ತಿದ್ದರು. ಅದಕ್ಕಾಗಿ ಲ್ಯಾಂಡ್ ಬೀಟ್ ವ್ಯವಸ್ಥೆಯನ್ನು ತರಬೇಕಾಯಿತು ಎಂದೂ ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್ – Kannada News | Vidarbha to maiden Vijay Hazare Trophy title

ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು.

318 ರನ್​ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್​ಗಳಲ್ಲಿ 279 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿದರ್ಭ ತಂಡವು 38 ರನ್​ಗಳ ಜಯ ಸಾಧಿಸಿದೆ. ವಿಶೇಷ ಎಂದರೆ ಇದು ವಿದರ್ಭ ತಂಡದ ಚೊಚ್ಚಲ ವಿಜಯ ಹಝಾರೆ ಟ್ರೋಫಿ. ಅಂದರೆ ಇದೇ ಮೊದಲ ಬಾರಿಗೆ ದೇಶೀಯ ಏಕದಿನ ಟೂರ್ನಿಯಲ್ಲಿ ವಿದರ್ಭ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

 

Source link

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ! – Kannada News | Virat Kohli and Rohit Sharma will be away from national duty until at least June

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ.

Source link

ಏರಿದ ಏಣಿಯನ್ನು ಒದೆಯಲಿಲ್ಲ ಗಿಲ್ಲಿ ನಟ; ಬಿಗ್ ಬಾಸ್ ವಿನ್ನರ್ ನಡೆಗೆ ಮೆಚ್ಚುಗೆ – Kannada News | BBK 12 Winner Gilli’s Gratitude: Thanks to Sudeep, His Gang and Zee Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅವರ ಹೆಸರನ್ನು ಘೋಷಣೆ ಮಾಡಲಾಯಿತು ಎಂಬುದು ವಿಶೇಷ. ಗಿಲ್ಲಿ ನಟನಿಗೆ ಎಲ್ಲ ಕಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಜೊತೆಗೆ ಗಿಲ್ಲಿ ನಟನ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಕಿಚ್ಚನಿಗೆ ಧನ್ಯವಾದ

112 ದಿನಗಳ ಬಿಗ್ ಬಾಸ್ ಜರ್ನಿಯಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿಯನ್ನು ಅನೇಕ ಬಾರಿ ತಿದ್ದಿದ್ದಾರೆ. ತಪ್ಪಾದಾಗ ತಪ್ಪು ಎಂದು ಹೇಳಿದ್ದಾರೆ. ಉತ್ತಮವಾಗಿ ಆಡಿದಾಗ ಚಪ್ಪಾಳೆ ನೀಡಿದ್ದಾರೆ. ಇದೆಲ್ಲವನ್ನೂ ಗಿಲ್ಲಿ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ‘ಸಾಯೋವರೆಗೂ ನಿಮ್ಮನ್ನು ಮರೆಯಲ್ಲ’ ಎಂದು ಗಿಲ್ಲಿ ಹೇಳಿದ್ದಾರೆ. ಈ ಮೂಲಕ ಕಿಚ್ಚನಿಗೆ ವಿಶೇಷ ಗೌರವ ನೀಡಿದ್ದಾರೆ.

ಗ್ಯಾಂಗ್​​ನ ಮರೆತಿಲ್ಲ ಗಿಲ್ಲಿ

ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿ ತಮ್ಮದೇ ಆದ ಗ್ಯಾಂಗ್ ಕಟ್ಟಿಕೊಂಡಿದ್ದರು. ಇದರಲ್ಲಿ ರಕ್ಷಿತಾ ಶೆಟ್ಟಿ, ರಘು ಹಾಗೂ ಕಾವ್ಯಾ ಪ್ರಮುಖರು. ಇವರಿಗೆ ವೇದಿಕೆ ಮೇಲೆಯೇ ಸುದೀಪ್ ಧನ್ಯವಾದ ಹೇಳಿದ್ದಾರೆ. ‘ನನ್ನ ಜರ್ನಿಯಲ್ಲಿ ಹೊರಗೆ ಅಭಿಮಾನಿಗಳು ಹೇಗೆ ಬೆಂಬಲವಾಗಿ ನಿಂತರೋ ಮನೆ ಒಳಗೆ ರಘು ಅಣ್ಣ, ರಕ್ಷಿತಾ ಹಾಗೂ ಕಾವ್ಯಾ ಬೆಂಬಲವಾಗಿ ನಿಂತರು. ಅವರಿಗೂ ಧನ್ಯವಾದ’ ಎಂದು ಗಿಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ

ಜೀ ಕನ್ನಡದ ಪೋಸ್ಟ್

ಜೀ ಕನ್ನಡ ವಾಹಿನಿಯಲ್ಲಿ ಹಲವು ಶೋಗಳನ್ನು ಮಾಡಿದವರು ಗಿಲ್ಲಿ ನಟ. ಅವರ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಜೀ ಕನ್ನಡ. ಹೀಗಾಗಿ, ಜೀ ಶುಭಾಶಯ ತಿಳಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ‘ತನ್ನ ಕಾಮಿಡಿ ಟೈಮಿಂಗ್, ಅಮೋಘ ಪ್ರತಿಭೆಯ ಮೂಲಕ ವಿಜೇತನಾಗಿ ಕರುನಾಡಿನ ಮನಗೆದ್ದ ನಮ್ಮ ಗಿಲ್ಲಿಗೆ ಅಭಿನಂದನೆ’ ಎಂದಿದೆ ಜೀ. ಈ ಪೋಸ್ಟ್​​ನ ಗಿಲ್ಲಿ ನಟ ಖುಷಿಯಿಂದ ಹಂಚಿಕೊಂಡಿದ್ದಾರೆ. ಅವರು ಏರಿದ ಏಣಿಯನ್ನು ಮರೆತಿಲ್ಲ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:32 am, Mon, 19 January 26

Source link

Bengaluru Air Quality: ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ! – Kannada News | Bangalore Air Pollution Crisis: Mangaluru’s Air Quality got worst than Bengaluru

ಬೆಂಗಳೂರು ಜೊತೆ ಮಂಗಳೂರಿನಲ್ಲೂ ಸಿಗುತ್ತಿಲ್ಲ ಶುದ್ಧ ಗಾಳಿ!

ಬೆಂಗಳೂರು, ಜನವರಿ 19: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality) ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರ ಜೊತೆಗೆ ಮಂಗಳೂರಿನಲ್ಲೂ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ

ಬೆಂಗಳೂರಿನ ಗಾಳಿಯ ಗುಣಮಟ್ಟ 169 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಅದರೊಂದಿಗೆ ಮಂಗಳೂರಿನ ಗಾಳಿಯಗುಣಮಟ್ಟ 185ಕ್ಕೆ ತಲುಪಿದ್ದು, ತೀರಾ ಕಳಪೆ ಮಟ್ಟಕ್ಕೆ ಕುಸಿದಿದೆ. ನಗರದಲ್ಲಿ PM2.5 ಮಟ್ಟ 84 ಹಾಗೂ PM10 ಮಟ್ಟ 116ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ.

ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –169
  • ಮಂಗಳೂರು-185
  • ಮೈಸೂರು – 104
  • ಬೆಳಗಾವಿ – 80
  • ಕಲಬುರ್ಗಿ-84
  • ಶಿವಮೊಗ್ಗ – 64
  • ಬಳ್ಳಾರಿ – 168
  • ಹುಬ್ಬಳ್ಳಿ- 86
  • ಉಡುಪಿ –171
  • ವಿಜಯಪುರ –68

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್​, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ – Kannada News | Public Panic in Mysuru’s Udayagiri as Youths Run Amok with Deadly Weapons, Clash Video Goes Viral

ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ ಕಾರಣವಾಗಿದೆ. ಭಾನುವಾರ ನಡೆದ ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸರಿಯಾಗಿದೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Train Accident: ಸ್ಪೇನ್​ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು – Kannada News | Train Tragedy in Southern Spain Claims Dozens of Lives

ಸ್ಪೇನ್, ಜನವರಿ 19: ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಂಡಲೂಸಿಯನ್ ನಗರಗಳಾದ ಕಾರ್ಡೋಬಾ, ಸೆವಿಲ್ಲೆ, ಮಲಗಾ ಮತ್ತು ಹುಯೆಲ್ವಾ ನಡುವಿನ ಹೈ-ಸ್ಪೀಡ್ ಸೇವೆಗಳನ್ನು ಕನಿಷ್ಠ ಸೋಮವಾರ ಪೂರ್ತಿ ಸ್ಥಗಿತಗೊಳಿಸಲಾಗುವುದು ಎಂದು ಅಡಿಫ್ ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

೩೭ ವರ್ಷಗಳ ಬಳಿಕ ಟೀಮ್ ಇಂಡಿಯಾದ ‘ಗರ್ವಭಂಗ’ – Kannada News | India lose an ODI series to New Zealand at home for the first time in 37 years

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಸರಣಿ ಶುರುವಾಗಿದ್ದು 1988 ರಲ್ಲಿ. ಮೊದಲ ಸರಣಿಯಲ್ಲೇ ಟೀಮ್ ಇಂಡಿಯಾ ಕಿವೀಸ್ ಪಡೆಯನ್ನು 4-0 ಅಂತರದಿಂದ ಸೋಲಿಸಿದ್ದರು. ಇದಾದ ಬಳಿಕ ಭಾರತಕ್ಕೆ ಆಗಮಿಸಿದ ನ್ಯೂಝಿಲೆಂಡ್ 2-3 (1995) 2-3 (1999), 0-5 (2010), 2-3 (2016), 1-2 (2017), 0-3 (2023) ಅಂತರದಿಂದ ಸರಣಿಗಳನ್ನು ಸೋತಿದ್ದರು.

Source link