Category Archives: Blog

Your blog category

IPL 2026: ಕಣ್ಣೀರಿಟ್ಟಿದ್ದ ಅಭಿಮಾನಿ ಬಳಿ ಕ್ಷಮೆಯಾಚಿಸಿದ ರೋಹಿತ್ ಶರ್ಮಾ – Kannada News | Rohit Sharma Apologizes to Crying Fan: MI Star’s Kind Gesture Amidst IPL Struggles

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಈ ಸೀಸನ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಕೇವಲ 4 ಪಂದ್ಯಗಳನ್ನು ಗೆದ್ದು ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ. ತಂಡದ ಈ ಕಳಪೆ ಪ್ರದರ್ಶನಕ್ಕೆ ಆಟಗಾರರ ಸ್ಥಿರ ಪ್ರದರ್ಶನದಲ್ಲಿನ ಕೊರೆತೆಯೇ ಪ್ರಮುಖ ಕಾರಣ ಎನ್ನಬಹುದು. ಅದರಲ್ಲೂ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದು ಕೂಡ ತಂಡವನ್ನು ಸಂಕಷ್ಟಕ್ಕೆ ದೂಡಿತು. ರೋಹಿತ್ ಪಂದ್ಯವನ್ನು ಆಡದಿದ್ದರೂ ಅವರ ಅಭಿಮಾನಿಗಳ ಬಳಗ ಕೊಂಚವೂ ಕಡಿಮೆ ಆಗಿಲ್ಲ. ಅವರನ್ನು ನೋಡುವುದಕ್ಕಾಗಿಯೇ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ಬರುತ್ತಾರೆ. ಅದರಂತೆ ಅವರನ್ನು ನೋಡಲು ತಂಡದ ಹೋಟೆಲ್ ಹೊರಗೆ ಕಾಯುತ್ತಿದ್ದ ಅಭಿಮಾನಿಯೊಬ್ಬರಿಗೆ ರೋಹಿತ್ ದರ್ಶನವಾಗಿಲ್ಲ. ಇದರಿಂದ ಬೇಸರಗೊಂಡ ಆ ಅಭಿಮಾನಿ ಅಲ್ಲಿಯೇ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಸ್ವತಃ ರೋಹಿತ್ ಅವರೇ ಆ ಅಭಿಮಾನಿ ಬಳಿ ಕ್ಷಮೆಯಾಚಿಸಿದ್ದಾರೆ.

ಕಣ್ಣೀರಿಟ್ಟಿದ ಯುವತಿ

ವಾಸ್ತವವಾಗಿ ಈಡನ್ ಗಾರ್ಡನ್ಸ್‌ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆದಿತ್ತಿ. ಈ ಸಂದರ್ಭದಲ್ಲಿ, ಮುಂಬೈ ತಂಡ ತಂಗಿದ್ದ ಹೋಟೆಲ್ ಹೊರಗೆ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರ ರೋಹಿತ್ ಶರ್ಮಾ ಅವರನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಜಮಾಯಿಸಿದ್ದರು. ಆ ಜನಸಂದಣಿಯಲ್ಲಿ ಯುವತಿಯೂ ಕೂಡ ಬಹಳ ಹೊತ್ತು ರೋಹಿತ್​ಗಾಗಿ ಕಾಯುತ್ತಿದ್ದರು. ಆದಾಗ್ಯೂ, ಭಾರಿ ಜನಸಂದಣಿ ಮತ್ತು ಭದ್ರತಾ ಕಾರಣಗಳಿಂದಾಗಿ, ರೋಹಿತ್ ಅವರನ್ನು ಗಮನಿಸದೆ ತೆರಳಿದ್ದರು. ಇದರಿಂದ ನಿರಾಶೆಗೊಂಡಿದ್ದ ಆಕೆ ಅಲ್ಲಿಯೇ ಕಣ್ಣೀರಿಟ್ಟಿದ್ದರು. ಆ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕ್ಷಮೆಯಾಚಿಸಿದ ರೋಹಿತ್

ಸಾಮಾನ್ಯವಾಗಿ ಎಷ್ಟೇ ದೊಡ್ಡ ಸ್ಟಾರ್ ಆಟಗಾರನಾಗಿದ್ದರೂ, ಇಂತಹ ಸಣ್ಣ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ಇದಕ್ಕೆ ತದ್ವೀರುದ್ದವಾಗಿರುವ ರೋಹಿತ್ ಶರ್ಮಾ ಯುವತಿಯ ಅಳುವ ವಿಡಿಯೋ ನೋಡಿದ ತಕ್ಷಣ ಪ್ರತಿಕ್ರಿಯಿಸಿದ್ದು, ‘ಕ್ಷಮಿಸಿ.. ಆ ಸಮಯದಲ್ಲಿ ನಾನು ನಿಮ್ಮನ್ನು ಈಡನ್ ಗಾರ್ಡನ್ಸ್‌ನಲ್ಲಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ನಾನು ನಿಮ್ಮ ವೀಡಿಯೊವನ್ನು ನೋಡಿದೆ. ಮೈದಾನದ ಹೊರಗೆ, ಹೋಟೆಲ್‌ನಲ್ಲಿ, ಕೆಲವೊಮ್ಮೆ ಬಹಳಷ್ಟು ಜನಸಂದಣಿ ಮತ್ತು ಜೋರಾದ ಶಬ್ದಗಳು ಇರುತ್ತವೆ. ಅದಕ್ಕಾಗಿಯೇ ನನ್ನ ಗಮನ ನಿಮ್ಮ ಮೇಲೆ ಬೀಳಲಿಲ್ಲ. ಆದರೆ ನಾನು ನಿಮಗೆ ಭರವಸೆ ನೀಡುತ್ತೇನೆ, ಮುಂದಿನ ಬಾರಿ ನಾನು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ಗೆ ಬಂದಾಗ, ನಾನು ಖಂಡಿತವಾಗಿಯೂ ನಿಮ್ಮನ್ನು ಭೇಟಿಯಾಗುತ್ತೇನೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

LSG vs PBKS: ಅರ್ಜುನ್ ತೆಂಡೂಲ್ಕರ್​ಗೆ ಕೊನೆಗೂ ಅವಕಾಶ ನೀಡಿದ ಲಕ್ನೋ – Kannada News | IPL 2026: PBKS Fights for Playoff Spot vs LSG in Do or Die Match 68; Arjun Tendulkar Debuts

ಐಪಿಎಲ್ 2026 (IPL 2026) ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (LSG vs PBKS) ತಂಡವನ್ನು ಎದುರಿಸುತ್ತಿದೆ. ಲೀಗ್ ಸುತ್ತಿನಲ್ಲಿ ಎರಡೂ ತಂಡಗಳ ಕೊನೆಯ ಪಂದ್ಯವಾಗಿದೆ. ಈ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಪ್ರಯಾಣ ಲೀಗ್ ಹಂತದಲ್ಲೇ ಅಂತ್ಯಗೊಂಡಿದೆ. ಇತ್ತ ಪ್ಲೇಆಫ್​ಗೇರಬೇಕೆಂದರೆ ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಗೆಲ್ಲಲೇಬೇಕು. ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಸೋತರೆ, ಅದು ಕೂಡ ಲೀಗ್​ನಿಂದ ಹೊರಬೀಳಲಿದೆ. ಇನ್ನು ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.

ಟಾಸ್ ಗೆದ್ದ ಪಂಜಾಬ್

ಟಾಸ್ ಗೆದ್ದ ಬಳಿಕ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಪಂಜಾಬ್ ತನ್ನ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ. ಅದರಂತೆ ಮಾರ್ಕೊ ಯಾನ್ಸನ್ ಮತ್ತು ವೈಶಾಕ್ ವಿಜಯ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಲಕ್ನೋ ಕೂಡ ತನ್ನ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿದ್ದು ಅರ್ಜುನ್ ತೆಂಡೂಲ್ಕರ್ ಮತ್ತು ಅರ್ಶಿನ್ ಕುಲಕರ್ಣಿಗೆ ತಂಡದಲ್ಲಿ ಅವಕಾಶ ನೀಡಿದೆ. ಮುಂಬೈ ತಂಡವನ್ನು ತೊರೆದು ಲಕ್ನೋ ಸೇರಿಕೊಂಡಿದ್ದ ಅರ್ಜುನ್​ಗೆ ಕೊನೆಗೂ ಆಡುವ ಅವಕಾಶ ಸಿಕ್ಕಿದೆ.

LSG vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಉಮರ್ಜಾಯ್, ಮಾರ್ಕೊ ಯಾನ್ಸೆನ್, ವಿಜಯ್‌ಕುಮಾರ್ ವೈಶಾಖ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಇಂಪ್ಯಾಕ್ಟ್ ಪ್ಲೇಯರ್ಸ್​: ಹರ್‌ಪ್ರೀತ್ ಬ್ರಾರ್, ಮಾರ್ಕಸ್ ಸ್ಟೊಯಿನಿಸ್, ಕ್ಸೇವಿಯರ್ ಬಾರ್ಟ್ಲೆಟ್, ವಿಷ್ಣು ವಿನೋದ್, ಪ್ರವೀಣ್ ದುಬೆ.

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಜೋಶ್ ಇಂಗ್ಲಿಸ್, ಅರ್ಶಿನ್ ಕುಲಕರ್ಣಿ, ನಿಕೋಲಸ್ ಪೂರನ್, ಆಯುಷ್ ಬಡೋನಿ, ರಿಷಭ್ ಪಂತ್ (ನಾಯಕ), ಅಬ್ದುಲ್ ಸಮದ್, ಮುಕುಲ್ ಚೌಧರಿ, ಅರ್ಜುನ್ ತೆಂಡೂಲ್ಕರ್, ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್, ಮೊಹ್ಸಿನ್ ಖಾನ್.

ಇಂಪ್ಯಾಕ್ಟ್ ಪ್ಲೇಯರ್ಸ್​: ಶಹಬಾಜ್ ಅಹ್ಮದ್, ದಿಗ್ವೇಶ್ ಸಿಂಗ್ ರಾಠಿ, ಮಣಿಮಾರನ್ ಸಿದ್ಧಾರ್ಥ್, ಹಿಮ್ಮತ್ ಸಿಂಗ್, ಆಕಾಶ್ ಮಹಾರಾಜ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:26 pm, Sat, 23 May 26

Source link

ಕೇರಳ ಸಿಎಂ ಮುಖ್ಯಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್​​ ವಿರುದ್ಧ ಬಿಜೆಪಿ ಕಿಡಿ – Kannada News | Ratan Kelkar Appointed Kerala CM’s Chief Secretary; BJP sparks on Congress

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ ಸರ್ಕಾರದ ಆಡಳಿತ ಆರಂಭವಾಗಿದೆ. ಕೇರಳ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. ಇತ್ತೀಚಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾಧಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ರತನ್ ಯು ಕೇಳ್ಕರ್ (Ratan Kelkar)​​ ಅವರನ್ನು ಕೇರಳ ನೂತನ ಸಿಎಂ ವಿ.ಡಿ ಸತೀಷನ್​​ರವರ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಾಂಶಗಳು

  • ರತನ್ ಕೇಳ್ಕರ್ ನೇಮಕದ ಸುತ್ತ ರಾಜಕೀಯ ವಿವಾದ
  • ಕಾಂಗ್ರೆಸ್​ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ
  • ಕೇರಳ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆ

ಕಾಂಗ್ರೆಸ್​​ ವಿರುದ್ಧ ಬಿಜೆಪಿ ವಾಗ್ದಾಳಿ

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ 1990ರ ಬ್ಯಾಚ್‌ನ ಐಎಎಸ್ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಅವರನ್ನು ಬಿಜೆಪಿ ಸರ್ಕಾರ ತನ್ನ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿತ್ತು. ಪಕ್ಷಪಾತ ತೋರಿದವರಿಗೆ ಪ್ರತಿಫಲ ನೀಡಲಾಗುತ್ತಿದೆ ಎಂದು ಕಾಂಗ್ರೆಸ್​​ ಆರೋಪಿಸಿತ್ತು. ಆದರೆ ಇದೀಗ ರತನ್ ಕೇಳ್ಕರ್​ ಅವರನ್ನು ಸಿಎಂ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ್ದು, ಕಾಂಗ್ರೆಸ್​​ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

ರಾಹುಲ್​ ಗಾಂಧಿ ವಿರುದ್ಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಕಿಡಿ

ಈ ಬಗ್ಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್​​ ಟ್ವೀಟ್ ಮಾಡಿದ್ದು, ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ಅವರನ್ನು ಬಿಜೆಪಿ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದಾಗ ‘ಕಳ್ಳತನ ಎಷ್ಟು ದೊಡ್ಡದೋ, ಬಹುಮಾನವೂ ಅಷ್ಟೇ ದೊಡ್ಡದು’ ಎಂದು ರಾಹುಲ್ ಗಾಂಧಿ ಅವರು ಕೂಗಾಡಿದ್ದರು. ಆದರೆ ಕೇರಳದಲ್ಲಿ ಸಿಎಂ ವಿ.ಡಿ ಸತೀಷನ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇರಳದ ಮುಖ್ಯ ಚುನಾವಣಾಧಿಕಾರಿ ರತನ್ ಕೇಳ್ಕರ್​​​ರನ್ನು ಸಿಎಂ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಹಾಗಾದರೆ ರಾಹುಲ್ ಗಾಂಧಿ ಅವರೇ ಕೇರಳದಲ್ಲಿ ನಡೆದಿರುವುದು ‘ಕಳ್ಳತನಕ್ಕೆ ಸಿಕ್ಕ ಬಹುಮಾನವೇ ಅಥವಾ ಇದ್ದಕ್ಕಿದ್ದಂತೆ ಪ್ರಜಾಪ್ರಭುತ್ವದ ಸೌಂದರ್ಯವಾಗಿ ಬದಲಾಯಿತೇ?’ ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಟೀಕೆಗಳಿಗೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಚುನಾವಣಾ ಅಧಿಕಾರಿಗೆ ಮುಖ್ಯಕಾರ್ಯದರ್ಶಿ ಸ್ಥಾನವನ್ನು ನೀಡಿ ಗೌರವಿಸಲಾಗಿದೆ. ಆದರೆ, ಕೇರಳದಲ್ಲಿ ರತನ್ ಕೇಳ್ಕರ್​​ಗೆ ನೀಡಿರುವುದು ಕೇವಲ ಸಿಎಂ ಆಡಳಿತಾತ್ಮಕ ಹಾಗೂ ಸಲಹಾತ್ಮಕ ಸ್ವರೂಪದ ಸೆಕ್ರೆಟರಿ ಹುದ್ದೆಯಷ್ಟೇ. ಹೀಗಾಗಿ, ಇವೆರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ಹೋಲಿಸುವುದು ಸರಿಯಲ್ಲ ಎನ್ನಲಾಗುತ್ತಿದೆ.

ಯಾರಿದು ರತನ್ ಕೇಳ್ಕರ್​​? 

2003ರ ಬ್ಯಾಚ್‌ನ ಕೇರಳ ಕೆಡರ್ ಅಧಿಕಾರಿ ರತನ್ ಕೇಳ್ಕರ್​​ ಮೂಲತಃ ಮಹಾರಾಷ್ಟ್ರ ಮೂಲದವರು. ವಿವಿಧ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಡಿಸೆಂಬರ್ 2024ರಿಂದ ಕೇರಳದ ಮುಖ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಏಪ್ರಿಲ್ 9 ರಂದು ನಡೆದ ಕೇರಳ ವಿಧಾನಸಭಾ ಚುನಾವಣೆ ಇವರ ನೇತೃತ್ವದಲ್ಲೇ ನಡೆದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On – 7:11 pm, Sat, 23 May 26

Source link

TV9 Kannada News Live: ವರ್ಕ್ ಫ್ರಮ್ ಹೋಂಗೆ ಐಟಿ ಕಂಪನಿಗಳ ವಿರೋಧ: ಮಳೆಗಾಗಿ ಶಾಸಕ ಡಾ. ರಂಗನಾಥ್ ವಿಶೇಷ ಪೂಜೆ, ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Uber Cab Driver Brutally Assaulted in Wilson Garden; Actress Radhika Narayan Flashes Her New Luxury Car

ಬೆಂಗಳೂರು, ಮೇ.23: ಮೋದಿ ವರ್ಕ್ ಫ್ರಮ್ ಹೋಂಗೆ ಕರೆಗೆ ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. ಮಳೆಗಾಗಿ ಯಡಿಯೂರು ಸಿದ್ಧಲಿಂಗೇಶ್ವರನಿಗೆ ಹೋಮ-ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ರಂಗನಾಥ್. ಸಿಲಿಕಾನ್ ಸಿಟಿಯಲ್ಲಿ ನಡುರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ಕೂಡ ವೈರಲ್​ ಆಗಿದೆ. ಇನ್ನು ಹೊಸ ದುಬಾರಿ ಕಾರು ಖರೀದಿಸಿ ಸಂಭ್ರಮಿಸಿದ ಚಂದನವನದ ನಟಿ ರಾಧಿಕಾ ನಾರಾಯಣ್.

‘ವರ್ಕ್ ಫ್ರಮ್ ಹೋಮ್’ ಆದೇಶಕ್ಕೆ ಐಟಿ ಕಂಪನಿಗಳ ತೀವ್ರ ವಿರೋಧ!:

ಮೋದಿ ವರ್ಕ್ ಫ್ರಮ್ ಹೋಂಗೆ ಕರೆಗೆ ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. ಔಟರ್ ರಿಂಗ್ ರೋಡ್ (ORR) ಭಾಗದಲ್ಲಿರುವ ಸುಮಾರು 4,500 ಕ್ಕೂ ಹೆಚ್ಚು ಐಟಿ ಕಂಪನಿಗಳ ಒಕ್ಕೂಟ ಮತ್ತು ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ಈ ಕುರಿತು ಮಹತ್ವದ ಸ್ಪಷ್ಟನೆ ನೀಡಿದೆ. ಈಗಾಗಲೇ ಹಲವು ಪ್ರಮುಖ ಕಂಪನಿಗಳು ಹೈಬ್ರೀಡ್ ಮಾಡಲ್ (ಕೆಲ ದಿನ ಕಚೇರಿ, ಕೆಲ ದಿನ ಮನೆ) ಮೂಲಕ ಕಾರ್ಯನಿರ್ವಹಿಸುತ್ತಿವೆ. ಆದರೆ ಸಂಪೂರ್ಣ ವರ್ಕ್ ಫ್ರಮ್ ಹೋಮ್ ನೀಡುವುದು ಪ್ರಾಯೋಗಿಕವಾಗಿ ಅಸಾಧ್ಯ. ಬೆಂಗಳೂರಿನ ಐಟಿ ಸಂಸ್ಥೆಗಳು ಅಮೆರಿಕ ಸೇರಿದಂತೆ ಹಲವು ವಿದೇಶಿ ಕ್ಲೈಂಟ್‌ಗಳ ಜೊತೆ ಕೆಲಸ ಮಾಡುತ್ತವೆ. ಬಿಪಿಒ (BPO) ಗಳಲ್ಲಂತೂ ಡೇಟಾ ಸುರಕ್ಷತೆಯ ಕಾರಣದಿಂದಾಗಿ ಇದು ಸಾಧ್ಯವೇ ಇಲ್ಲ. ಕಂಪನಿ, ವರ್ಕರ್ಸ್ ಹಾಗೂ ವಿದೇಶಿ ಕ್ಲೈಂಟ್‌ಗಳು ಒಪ್ಪಿದರೆ ಮಾತ್ರ ಇದು ಸಾಧ್ಯ. ಸದ್ಯಕ್ಕೆ ಸರ್ಕಾರದಿಂದ ಯಾವುದೇ ಅಧಿಕೃತ ಕಡ್ಡಾಯ ಮಾರ್ಗಸೂಚಿಗಳು ಬಂದಿಲ್ಲದ ಕಾರಣ, ಯಾವುದೇ ರೀತಿಯ ಬಿಗ್ ವರ್ಕ್ ಫ್ರಮ್ ಹೋಮ್ ಇರುವುದಿಲ್ಲ ಎಂದು ಐಟಿ ಸಂಸ್ಥೆಗಳು ಖಡಕ್ ಆಗಿ ತಿಳಿಸಿವೆ.

ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ರಂಗನಾಥ್:

ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಸಕಾಲಕ್ಕೆ ಮಳೆಯಾಗದೆ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಈ ಹಿನ್ನೆಲೆಯಲ್ಲಿ ಇಡೀ ತಾಲೂಕು ಮತ್ತು ರಾಜ್ಯದಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಲಿ ಎಂದು ಪ್ರಾರ್ಥಿಸಿ ಕುಣಿಗಲ್ ಕ್ಷೇತ್ರದ ಜನಪ್ರಿಯ ಶಾಸಕ ಡಾ. ರಂಗನಾಥ್ ಅವರು ಇತಿಹಾಸ ಪ್ರಸಿದ್ಧ ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಹವನಗಳನ್ನು ನೆರವೇರಿಸಿದ್ದಾರೆ. ಕ್ಷೇತ್ರದ ರೈತರ ಹಿತದೃಷ್ಟಿಯಿಂದ ದೇವರ ಮೊರೆ ಹೋಗಿರುವುದಾಗಿ ಶಾಸಕರು ತಿಳಿಸಿದ್ದು, ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಮಳೆಗಾಗಿ ಪ್ರಾರ್ಥಿಸಿದರು.

ನಡುರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

ಐಟಿ ಹಬ್ ಬೆಂಗಳೂರಿನಲ್ಲಿ ರಸ್ತೆ ಪುಂಡರ ಹಾವಳಿ ಮಿತಿಮೀರಿದ್ದು, ನಡುರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನೊಬ್ಬನ ಮೇಲೆ ಅತ್ಯಂತ ಭೀಕರವಾಗಿ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಹೆಚ್. ರಸ್ತೆಯಲ್ಲಿ ಮೇ 22ರಂದು ಈ ಕೃತ್ಯ ನಡೆದಿದೆ. ಕ್ಯಾಬ್ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು, ಚಾಲಕನನ್ನು ಬಲವಂತವಾಗಿ ಹೊರಗೆಳೆದು ಮನಬಂದಂತೆ ಥಳಿಸಿದೆ. ಈ ಭೀಕರ ಹಲ್ಲೆಯ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿಲ್ಸನ್ ಗಾರ್ಡನ್ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ‘ದೇಶ ಇಂತಹ ಪ್ರಧಾನಿಯನ್ನು ಎಂದೂ ನೋಡಿಲ್ಲ!’: ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್

ಹೊಸ ದುಬಾರಿ ಕಾರು ಖರೀದಿಸಿ ಸಂಭ್ರಮಿಸಿದ ಚಂದನವನದ ನಟಿ ರಾಧಿಕಾ ನಾರಾಯಣ್!

‘ರಂಗಿತರಂ’, ‘ಯೂ ಟರ್ನ್’ ಹಾಗೂ ‘ಡಿಟೆಕ್ಟಿವ್ ಶಿವಾಜಿ’ ಮುಂತಾದ ಹಿಟ್ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ಪ್ರತಿಭಾವಂತ ನಟಿ ರಾಧಿಕಾ ನಾರಾಯಣ್ ಅವರು ತಮ್ಮ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಹೊಸ ಐಷಾರಾಮಿ ಮತ್ತು ದುಬಾರಿ ಕಾರೊಂದನ್ನು ಖರೀದಿಸಿರುವ ನಟಿ, ಕಾರಿನೊಂದಿಗೆ ಸಂಭ್ರಮದಿಂದ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಹಾಗೂ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಈ ಹೊಸ ಕಾರಿನ ಬೆಲೆ ಮತ್ತು ಅದರ ಗ್ಲಾಮರಸ್ ಫೋಟೋಗಳು ಸದ್ಯ ಸ್ಯಾಂಡಲ್‌ವುಡ್ ವಲಯದಲ್ಲಿ ಮತ್ತು ಅವರ ಅಭಿಮಾನಿ ಬಳಗದಲ್ಲಿ ಭಾರಿ ಸೌಂಡ್ ಮಾಡುತ್ತಿದ್ದು, ಅಭಿಮಾನಿಗಳು ಅವರಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಬಂಗಾಳದಲ್ಲಿ ಮಮತಾ ಕಾಲದ ನಿಯಮಕ್ಕೆ ಬಿಜೆಪಿ ಬ್ರೇಕ್!

ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಬಕ್ರೀದ್ ಹಬ್ಬದ ರಜೆ ಹಾಗೂ ಪ್ರಾಣಿ ಬಲಿ ನಿಯಮಗಳ ಕುರಿತು ಭಾರಿ ಚರ್ಚೆ ಮತ್ತು ವಿವಾದ ಆರಂಭವಾಗಿದೆ. ರಾಜ್ಯದ ಹೊಸ ಬಿಜೆಪಿ ಸರ್ಕಾರವು ಬಕ್ರೀದ್ ಹಬ್ಬಕ್ಕೆ ನೀಡಲಾಗುತ್ತಿದ್ದ ಎರಡು ದಿನಗಳ ಸಾರ್ವಜನಿಕ ರಜೆಯನ್ನು ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ಜಾರಿಗೆ ತಂದಿದ್ದ ರಜಾ ಪಟ್ಟಿಯನ್ನು ಪರಿಷ್ಕರಿಸಿ ರಾಜ್ಯ ಹಣಕಾಸು ಇಲಾಖೆಯು ಅಧಿಕೃತ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಇನ್ನೊಂದೆಡೆ, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಬಲಿ ಪ್ರಕ್ರಿಯೆಯನ್ನು ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿದ್ದ ಕಠಿಣ ಮಾರ್ಗಸೂಚಿಗಳನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ. ಪಶ್ಚಿಮ ಬಂಗಾಳ ಪ್ರಾಣಿ ಬಲಿ ನಿಯಂತ್ರಣ ಕಾಯ್ದೆ 1950ರ ಅಡಿಯಲ್ಲಿ, ಕೇವಲ 14 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರಾಣಿಗಳನ್ನು ಮಾತ್ರ ಬಲಿ ನೀಡಲು ಅವಕಾಶವಿದ್ದು, ಅದಕ್ಕೆ ಪಶುವೈದ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:57 pm, Sat, 23 May 26

Source link

LSG vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Punjab Kings IPL 2026 Live Cricket Score LSG vs PBKS Match on 23rd May latest news in Kannada

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. 19 ನೇ ಸೀಸನ್​ನ ಲೀಗ್ ಹಂತದಲ್ಲಿ ಲಕ್ನೋ ಮತ್ತು ಪಂಜಾಬ್ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸಿರೆ, ರಿಷಭ್ ಪಂತ್ ಲಕ್ನೋ ತಂಡವನ್ನು ಮುನ್ನಡೆಸಲಿದ್ದಾರೆ. ಈ ಪಂದ್ಯ ಲಕ್ನೋಗೆ ಕೇವಲ ಔಪಚಾರಿಕ ಪಂದ್ಯವಾಗಿದ್ದರೆ, ಪಂಜಾಬ್ ತಂಡಕ್ಕೆ ಪ್ಲೇಆಫ್ ವಿಷಯದಲ್ಲಿ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

Source link

Chanakya Niti: ಈ ಒಂದು ಸಣ್ಣ ಅಭ್ಯಾಸ ನಿಮ್ಮನ್ನು ಬಡತನದ ಕೂಪಕ್ಕೆ ನೂಕಬಹುದು… ಎಚ್ಚರ! – Kannada News | Chanakya Niti: Those who have this one habit will never be able to achieve wealth in life

ಯಶಸ್ಸನ್ನು (Success) ಸಾಧಿಸಬೇಕು, ಜೀವನದಲ್ಲಿ ಪ್ರಗತಿಯನ್ನು ಸಾಧಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಹಗಲಿರುಳು ಕಷ್ಟಪಟ್ಟು ದುಡಿಯುತ್ತಾರೆ. ಈ ರೀತಿ ಎಷ್ಟೇ ದುಡಿದು ಹಣ ಸಂಪಾದಿಸಿದರೂ, ಶ್ರೀಮಂತಿಕೆಯನ್ನು ಗಳಿಸಿದರೂ ಈ ಒಂದು ಅಭ್ಯಾಸವಿದ್ದರೆ ಆ ಹಣ ಎಂದಿಗೂ ನಿಮ್ಮ ಕೈಯಲ್ಲಿ ನಿಲ್ಲಲಾರದು, ಈ ಅಭ್ಯಾಸದ ಕಾರಣದಿಂದ ನೀವು ಜೀವನಪರ್ಯಂತ ಬಡತನದಲ್ಲಿಯೇ ಇರಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹೌದು ಮನುಷ್ಯನ ಈ ಒಂದು ಸಣ್ಣ ಅಭ್ಯಾಸವು ಕ್ರಮೇಣ ಬಡತನಕ್ಕೆ ಕಾರಣವಾಗುತ್ತದೆ. ಅದನ್ನು ಬದಲಾಯಿಸದಿದ್ದರೆ ಜೀವನದಲ್ಲಿ ಪ್ರಗತಿಯನ್ನು ಹೊಂದಲು ಸಾಧ್ಯವೇ ಇಲ್ಲ. ಹಾಗಿದ್ದರೆ ಒಬ್ಬ ವ್ಯಕ್ತಿಯನ್ನು ಬಡತನಕ್ಕೆ ತಳ್ಳುವ ಆ ಅಭ್ಯಾಸ ಯಾವುದು ಎಂಬುದನ್ನು ನೋಡೋಣ ಬನ್ನಿ.

ನಿಮ್ಮ ಈ ಅಭ್ಯಾಸ ಬಡತನಕ್ಕೆ ಕಾರಣವಾಗಬಹುದು:

ಆಚಾರ್ಯ ಚಾಣಕ್ಯರು  ಹೇಳುವಂತೆ, ತನ್ನ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಮತ್ತು ದುಂದುವೆಚ್ಚದಲ್ಲಿ ತೊಡಗುವ ವ್ಯಕ್ತಿಯು ಎಂದಿಗೂ ಶ್ರೀಮಂತನಾಗಲು ಸಾಧ್ಯವಿಲ್ಲ. ಆತ ಇದೇ ವರ್ತನೆಯನ್ನು ಮುಂದುವರೆಸಿದರೆ ಕ್ರಮೇಣ ಆತನ ಉಳಿತಾಯ ಖಾಲಿಯಾಗುತ್ತದೆ, ಆತ ಸಾಲದ ಹೊರೆಯನ್ನು ಹೊತ್ತುಕೊಳ್ಳುತ್ತಾನೆ. ಈ ಅಭ್ಯಾಸವು ಬಡತನಕ್ಕೆ ಕಾರಣವಾಗಬಹುದು ಮತ್ತು ಅದು ಅವನ ಭವಿಷ್ಯವನ್ನೇ ಹಾಳುಮಾಡುತ್ತದೆ.

ಒಬ್ಬ ವ್ಯಕ್ತಿ ಎಂದಿಗೂ ಆತನ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬಾರದು ಜೊತೆಗೆ ಹಣ ಇದ್ದರೆ ಅದನ್ನು ವ್ಯರ್ಥ ವಸ್ತುಗಳನ್ನು ಕೊಂಡುಕೊಳ್ಳುವ ಮೂಲಕ ದುಂದುವೆಚ್ಚವನ್ನು ಮಾಡಬಾರದು. ಈ ಒಂದು ಅಭ್ಯಾಸ ವ್ಯಕ್ತಿಯನ್ನು ಬಡವನನ್ನಾಗಿ ಮಾಡುತ್ತದೆ. ಅಲ್ಲದೆ ಇದು ಒಬ್ಬ ವ್ಯಕ್ತಿಯನ್ನು ಸಾಲದ ಸುಳಿಯಲ್ಲಿ ಸಿಲುಕಿಸುವ ಸಾಧ್ಯತೆಯೂ ಇದೆ. ಹಾಗಾಗಿ ಶ್ರೀಮಂತಿಕೆಯನ್ನು ಗಳಿಸಬೇಕು ಎಂಬ ಬಯಕೆ ಇದ್ದರೆ ದುಂದುವೆಚ್ಚವನ್ನು ಮಾಡಬೇಡಿ, ವ್ಯರ್ಥ ಖರ್ಚುಗಳನ್ನು ಮಾಡಬೇಡಿ, ಪ್ರತಿ ತಿಂಗಳು ಆದಾಯದ ಸ್ವಲ್ಪ ಭಾಗವನ್ನು ಉಳಿತಾಯ ಮಾಡಿ ಮತ್ತು ಉತ್ತಮ ಸ್ಥಳದಲ್ಲಿ ಹೂಡಿಕೆಯನ್ನು ಮಾಡಿ.

ಇದನ್ನೂ ಓದಿ: ಪುರುಷರೇ…. ನಿಮ್ಮ ಹೆಂಡ್ತಿಯ ಸಂಗತಿಯನ್ನು ಯಾರ ಬಳಿಯೂ ಹೇಳಬೇಡಿ

ವ್ಯರ್ಥ ಖರ್ಚು ಏಕೆ ಅಪಾಯಕಾರಿ?

  • ವ್ಯರ್ಥ ಖರ್ಚು ವ್ಯಕ್ತಿಯನ್ನು ಸಾಲ ಮಾಡುವಂತೆ ಮಾಡುತ್ತವೆ. ಈ ಸಾಲವು ಒತ್ತಡ ಮತ್ತು ಉದ್ವೇಗಕ್ಕೆ ಕಾರಣವಾಗುತ್ತದೆ.
  • ಯಾವುದೇ ಉಳಿತಾಯವಿಲ್ಲದಿದ್ದರೆ, ಇದ್ದ ಹಣವನ್ನೆಲ್ಲಾ ಖರ್ಚು ಮಾಡಿದರೆ ಕಷ್ಟದ ಸಮಯದಲ್ಲಿ ನೀವು ಒಂಟಿಯಾಗಿ ಇರಬೇಕಾಗುತ್ತದೆ. ಇದು ನಿಮ್ಮನ್ನು ಬೀದಿಗೆ ತರಬಹುದು.
  • ಹಣಕಾಸಿನ ಅಸ್ಥಿರತೆಯು ಸಂಬಂಧಗಳು ಮತ್ತು ವೃತ್ತಿಜೀವನ ಎರಡರ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ವ್ಯರ್ಥ ಖರ್ಚು ಮಾಡುವುದನ್ನು ಬಿಟ್ಟುಬಿಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಗಾಳದಲ್ಲಿ ಮಮತಾ ಕಾಲದ ನಿಯಮಕ್ಕೆ ಬಿಜೆಪಿ ಬ್ರೇಕ್!: ಬಕ್ರೀದ್ ರಜೆ 1 ದಿನಕ್ಕೆ ಕಡಿತ, ಪ್ರಾಣಿ ವಧೆಗೂ ಕಠಿಣ ನಿಯಮ  – Kannada News | Bakrid Holiday and Animal Sacrifice: West Bengal Govt’s New Norms Stir Debate

ಕೋಲ್ಕತ್ತಾ, ಮೇ.23 : ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಬಕ್ರೀದ್ ಹಬ್ಬದ ರಜೆ ಹಾಗೂ ಪ್ರಾಣಿ ಬಲಿ ನಿಯಮಗಳ ಕುರಿತು ಭಾರಿ ಚರ್ಚೆ ಮತ್ತು ವಿವಾದ ಆರಂಭವಾಗಿದೆ. ರಾಜ್ಯದ ಹೊಸ ಬಿಜೆಪಿ ಸರ್ಕಾರವು ಬಕ್ರೀದ್ ಹಬ್ಬಕ್ಕೆ ನೀಡಲಾಗುತ್ತಿದ್ದ ಎರಡು ದಿನಗಳ ಸಾರ್ವಜನಿಕ ರಜೆಯನ್ನು ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ಜಾರಿಗೆ ತಂದಿದ್ದ ರಜಾ ಪಟ್ಟಿಯನ್ನು ಪರಿಷ್ಕರಿಸಿ ರಾಜ್ಯ ಹಣಕಾಸು ಇಲಾಖೆಯು ಶುಕ್ರವಾರ ಅಧಿಕೃತ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.

ಹಳೆಯ ಆದೇಶದ ಪ್ರಕಾರ, 2026ರ ಮೇ 26 ಮತ್ತು ಮೇ 27 ರಂದು ಬಕ್ರೀದ್ ಪ್ರಯುಕ್ತ ಸಾರ್ವಜನಿಕ ರಜೆ ಘೋಷಿಸಲಾಗಿತ್ತು. ಆದರೆ, ಪ್ರಸಕ್ತ ವರ್ಷದಲ್ಲಿ ಮೇ 28 ರಂದು ಬಕ್ರೀದ್ ಹಬ್ಬ ಆಚರಿಸಲಾಗುವುದು ಎಂಬ ಅಧಿಕೃತ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಮೇ 28 (ಗುರುವಾರ) ಮಾತ್ರ ಸಾರ್ವಜನಿಕ ರಜೆ ಎಂದು ಘೋಷಿಸಿದೆ. ಇದರೊಂದಿಗೆ ಈ ಹಿಂದೆ ನೀಡಲಾಗಿದ್ದ ಮೇ 26 ಮತ್ತು 27ರ ರಜೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಆ ಎರಡು ದಿನಗಳು ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಾಮಾನ್ಯ ಕೆಲಸದ ದಿನಗಳಾಗಿರಲಿವೆ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ‘ದೇಶ ಇಂತಹ ಪ್ರಧಾನಿಯನ್ನು ಎಂದೂ ನೋಡಿಲ್ಲ!’: ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್

ಪ್ರಾಣಿ ಬಲಿ ನಿಯಮಾವಳಿ ಎತ್ತಿಹಿಡಿದ ಕಲ್ಕತ್ತಾ ಹೈಕೋರ್ಟ್:

ಇನ್ನೊಂದೆಡೆ, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಬಲಿ ಪ್ರಕ್ರಿಯೆಯನ್ನು ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿದ್ದ ಕಠಿಣ ಮಾರ್ಗಸೂಚಿಗಳನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ. ಪಶ್ಚಿಮ ಬಂಗಾಳ ಪ್ರಾಣಿ ಬಲಿ ನಿಯಂತ್ರಣ ಕಾಯ್ದೆ 1950ರ ಅಡಿಯಲ್ಲಿ, ಕೇವಲ 14 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರಾಣಿಗಳನ್ನು ಮಾತ್ರ ಬಲಿ ನೀಡಲು ಅವಕಾಶವಿದ್ದು, ಅದಕ್ಕೆ ಪಶುವೈದ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆ ಮಾಡುವುದನ್ನು ನಿಷೇಧಿಸಿರುವ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ. ಈ ವೇಳೆ ನ್ಯಾಯಾಲಯವು, “ಹಸುಗಳನ್ನು ಬಲಿ ಕೊಡುವುದು ಈದ್ ಹಬ್ಬದ ಕಡ್ಡಾಯ ಅಥವಾ ಅತ್ಯಗತ್ಯ ಭಾಗವಲ್ಲ” ಎಂದು ಸುಪ್ರೀಂ ಕೋರ್ಟ್‌ನ ಹಳೆಯ ಆದೇಶಗಳನ್ನು ಉಲ್ಲೇಖಿಸಿ ಮಹತ್ವದ ವೀಕ್ಷಣೆ ಮಾಡಿದೆ. ಸರ್ಕಾರದ ಈ ಕಟ್ಟುನಿಟ್ಟಿನ ನಿಯಮಗಳಿಂದಾಗಿ ಕೋಲ್ಕತ್ತಾದಲ್ಲಿ ಗೋಮಾಂಸದ ಬೆಲೆ ಕೆಜಿಗೆ 280 ರೂ.ಗಳಿಂದ ಬರೊಬ್ಬರಿ 600 ರೂ.ವರೆಗೆ ದಿಢೀರ್ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ – Kannada News | Karnataka to Recruit 51,000 Guest Teachers in June: Madhu Bangarappa

ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮುಖ್ಯಾಂಶಗಳು

  • ಸರ್ಕಾರಿ ಶಾಲೆಗಳಿಗೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ
  • ಜೂನ್​ 1ರಂದು 1000 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಉದ್ಘಾಟನೆ
  • ಕರ್ನಾಟಕದ KPS ಮಾದರಿ: ಇತರ ರಾಜ್ಯಗಳಿಗೆ ಪ್ರೇರಣೆ ಮತ್ತು ಅನುದಾನ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 22ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ತಕ್ಷಣವೇ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಹಸಿರು ನಿಶಾನೆ ತೋರಿಸಿದೆ. ಮಂಜೂರಾಗಿರುವ ಒಟ್ಟು 51 ಸಾವಿರ ಹುದ್ದೆಗಳಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಿಂಹಪಾಲು ಸಿಕ್ಕಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 11 ಸಾವಿರ ಶಿಕ್ಷಕರು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

1000 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಉದ್ಘಾಟಣೆ

ಇನ್ನು ಜೂನ್ 1 ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಹತ್ವದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲಾಗುತ್ತಿದ್ದು, ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 19 ಶಾಲೆಗಳು ಸೇರಿವೆ. ಪ್ರತಿ ಕೆಪಿಎಸ್ ಸಂಸ್ಥೆಯ ಅಭಿವೃದ್ಧಿಗೆ ತಲಾ 3.5 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ; ಡೆಡ್‌ಲೈನ್ ಸಹ ಫಿಕ್ಸ್!

ಕರ್ನಾಟಕದ ಈ ಮಾದರಿಯನ್ನು ಈಗ ತೆಲಂಗಾಣ ಸೇರಿದಂತೆ ಇತರ ರಾಜ್ಯಗಳೂ ಅನುಕರಿಸುತ್ತಿದ್ದು, ಅಲ್ಲಿ ತೆಲಂಗಾಣ ಪಬ್ಲಿಕ್ ಸ್ಕೂಲ್ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇತ್ತೀಚೆಗಷ್ಟೇ ತೆಲಂಗಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಭೇಟಿ ನೀಡಿ ನಮ್ಮ ಕೆಪಿಎಸ್ ಮಾದರಿಯನ್ನು ಅಧ್ಯಯನ ಮಾಡಿದ್ದಾರೆ ಎಂದರು.

ಶಿಕ್ಷಣ ಸುದ್ದಿಗಳನ್ನು ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:45 pm, Sat, 23 May 26

Source link

ಬಜೆಟ್ ಏಳು ಲಕ್ಷ ಗಳಿಸಿದ್ದು 400 ಕೋಟಿ, ಯಾವುದು ಈ ಬ್ಲಾಕ್ ಬಸ್ಟರ್ ಸಿನಿಮಾ – Kannada News | Hollywood low budget movie Obsession collects huge money at box office

ರಾತ್ರೋರಾತ್ರಿ ಸಾಮಾನ್ಯ ವ್ಯಕ್ತಿಯೊಬ್ಬ ಸ್ಟಾರ್ ಆಗುವುದು, ಸ್ಟಾರ್ ಆಗಿ ಮೆರೆದವರು ಮೂಲೆಗುಂಪಾಗುವುದು ಸಿನಿಮಾ ರಂಗದಲ್ಲಿ ತೀರಾ ಸಾಮಾನ್ಯ. ಇದು ಪ್ರತಿಭೆ, ಶ್ರಮದ ಜೊತೆಗೆ ಅದೃಷ್ಟವೂ ಬೆರೆತಿರುವ ಉದ್ಯಮ. ಸಾವಿರಾರು ಕೋಟಿ ಹಾಕಿ ನಿರ್ಮಿಸಿದ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ನೆಲ ಕಚ್ಚಿದ ಹಲವಾರು ಉದಾಹರಣೆ ಇದೆ. ತೀರ ಕಡಿಮೆ ಬಜೆಟ್​​ನಲ್ಲಿ ನಿರ್ಮಿಸಿದ ಸಿನಿಮಾಗಳು ದೊಡ್ಡ ಹಿಟ್ ಆದ ಸಾಕಷ್ಟು ಉದಾಹರಣೆ ಇವೆ. ಇದೀಗ ಅಂಥಹುದೇ ಉದಾಹರಣೆಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗಿದೆ. ಸಿನಿಮಾದ ಹೆಸರು ‘ಒಬ್​​ಸೆಷನ್’.

‘ಒಬ್​ಸೆಷನ್’ ಎಂಬುದು ಹಾಲಿವುಡ್​​ನಲ್ಲಿ ಇತ್ತೀಚೆಗೆ ಬಿಡುಗಡೆ ಆದ ಹಾರರ್ ಸಿನಿಮಾ. ‘ಮೈಖಲ್’, ‘ಸ್ಟ್ರೀಟ್ ಫೈಟರ್’, ‘ದಿ ಡೆವಿಲ್ ವೇರ್ಸ್ ಪ್ರಾಡಾ 2’ ಅಂಥಹಾ ಸಿನಿಮಾಗಳ ನಡುವೆಯೂ ಭಾರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಬಲು ವೇಗದಿಂದ ಮುನ್ನುಗ್ಗುತ್ತಿದ್ದು, ಆದಷ್ಟು ಶೀಘ್ರವೇ ಈ ಸಿನಿಮಾದ ಗಳಿಕೆ 1000 ಕೋಟಿ ದಾಟಲಿದೆ ಎನ್ನಲಾಗುತ್ತಿದೆ. ಅಂದಹಾಗೆ ಈ ಸಿನಿಮಾದ ಬಜೆಟ್ ಎಂಟು ಲಕ್ಷ ರೂಪಾಯಿಗೂ ಕಡಿಮೆ. ಹಾಲಿವುಡ್​​ನಲ್ಲಿ ಸೂಪರ್ ಹಿಟ್ ಆದ ಅತ್ಯಂತ ಕಡಿಮೆ ಬಜೆಟ್​​ನ ಹಾರರ್ ಸಿನಿಮಾಗಳಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ ಈ ಸಿನಿಮಾ.

‘ಒಬ್ಸೆಷನ್ಸ್’ ಸಿನಿಮಾವನ್ನು ಯೂಟ್ಯೂಬರ್ ಕರ್ರಿ ಬಾಕರ್ ನಿರ್ದೇಶನ ಮಾಡಿದ್ದಾರೆ. ‘ಸಿಮನ್ಸ್’ ಶೋ ನೋಡಿ ಅದರಿಂದ ಸ್ಪೂರ್ತಿ ಪಡೆದು ‘ಒಬ್ಸೆಷನ್ಸ್’ ಕತೆಯನ್ನು ಕರ್ರಿ ಬಾಕರ್ ಬರೆದಿದ್ದರು. ಕೇವಲ 75 ಸಾವಿರ ಡಾಲರ್ (ಸುಮಾರು 7.30 ಲಕ್ಷ ರೂಪಾಯಿ) ಬಜೆಟ್​​ನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಸಿನಿಮಾವು ಹಾರರ್ ಕತೆಯನ್ನು ಒಳಗೊಂಡಿದೆ. ಕೇಳಿದ್ದನ್ನು ನಿಜ ಮಾಡುವ ಬೊಂಬೆ ಆ ನಂತರ ಸಿನಿಮಾದ ನಾಯಕ ಮತ್ತು ಇತರೆ ಪಾತ್ರಗಳಿಗೆ ತರುವ ತೊಂದರೆಗಳನ್ನು ಸಿನಿಮಾದ ಕತೆ ಒಳಗೊಂಡಿದೆ.

ಇದನ್ನೂ ಓದಿ:‘ಮೈಕಲ್’ ಬಾಕ್ಸ್ ಆಫೀಸ್: ಏಳು ದಿನಕ್ಕೆ ದಾಖಲೆ ಕಲೆಕ್ಷನ್, ಭಾರತದಲ್ಲೆಷ್ಟು?

75 ಸಾವಿರ ಡಾಲರ್​​ ನಲ್ಲಿ ನಿರ್ಮಾಣ ಮಾಡಲಾಗಿರುವ ಈ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್​​ನಲ್ಲಿ 38 ಮಿಲಿಯನ್ ಡಾಲರ್​​ಗೂ ಹೆಚ್ಚು (ಸುಮಾರು 400 ಕೋಟಿ) ಗಳಿಕೆ ಮಾಡಿದ್ದು, ಬಾಕ್ಸ್ ಆಫೀಸ್​​ನಲ್ಲಿ ಬಲು ವೇಗವಾಗಿ ಮುನ್ನುಗ್ಗುತ್ತಿದೆ. ಸಿನಿಮಾ ಆದಷ್ಟು ಬೇಗ 1000 ಕೋಟಿ ಗಳಿಕೆ ದಾಟುವ ವಿಶ್ವಾಸವನ್ನು ಚಿತ್ರತಂಡ ವ್ಯಕ್ತಪಡಿಸಿದೆ.

ಈ ಹಿಂದೆ ಬ್ಲಾಕ್ ಬಸ್ಟರ್ ಆಗಿದ್ದ ‘ಪ್ಯಾರಾ ನಾರ್ಮಲ್ ಆಕ್ಟಿವಿಟಿ’ ಹೆಸರಿನ ಹಾಲಿವುಡ್ ಹಾರರ್ ಸಿನಿಮಾ ಕೇವಲ 15 ಸಾವಿರ ಡಾಲರ್​​ನಲ್ಲಿ ನಿರ್ಮಾಣಗೊಂಡಿತ್ತು ಆ ಸಿನಿಮಾ 100 ಮಿಲಿಯನ್ ಡಾಲರ್​​ಗಳು ಹೆಚ್ಚು ಅಂದರೆ ಸುಮಾರು 10 ಸಾವಿರ ಕೋಟಿ ಗಳಿಕೆ ಮಾಡಿತ್ತು. ಇದೀಗ ಮತ್ತೆ ಅದೇ ದಾಖಲೆಯತ್ತ ಮುನ್ನುಗ್ಗುತ್ತಿದೆ ‘ಒಬ್​​ಸೆಷನ್’ ಸಿನಿಮಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಾಯಿಂಟ್ ಪಟ್ಟಿ ಹೀಗಿದೆ

ಕ್ವಾಲಿಫೈಯರ್ 1 ಪಂದ್ಯವನ್ನು ಆಡುವ ಎರಡು ತಂಡಗಳು ಯಾವುವು ಎಂಬುದು ಈಗಾಗಲೇ ನಿರ್ಧಾರವಾಗಿದೆ. ಅದರಂತೆ ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಏಕೆಂದರೆ ಉಭಯ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಹಾಲಿ ಚಾಂಪಿಯನ್ ಆರ್​ಸಿಬಿ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. +0.783 ನೆಟ್ ರನ್​ರೇಟ್ ಹೊಂದಿರುವ ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್?

ವಾಸ್ತವವಾಗಿ ಗುಂಪು ಹಂತದಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ, ಪ್ರತಿ ತಂಡಕ್ಕೆ ತಲಾ ಒಂದು ಅಂಕವನ್ನು ನೀಡಲಾಗುತ್ತಿತ್ತು. ಅಂದರೆ ಲೀಗ್ ಹಂತದಲ್ಲಿ ಯಾವುದೇ ಪಂದ್ಯಕ್ಕೆ ಮೀಸಲು ದಿನವಿರಲಿಲ್ಲ. ವಾಸ್ತವವಾಗಿ ಐಸಿಸಿ ಪಂದ್ಯಾವಳಿಗಳಲ್ಲಿ, ನಾಕೌಟ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿ ಮಾಡಲಾಗಿರುತ್ತದೆ. ಆದರೆ ಐಪಿಎಲ್ ಪ್ಲೇಆಫ್‌ಗಳಿಗೆ ನಿಯಮಗಳು ಸ್ವಲ್ಪ ಭಿನ್ನವಾಗಿವೆ. ಮೊದಲ ಕ್ವಾಲಿಫೈಯರ್, ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್‌ಗೆ ಮೀಸಲು ದಿನವನ್ನು ಇರಿಸಲಾಗಿಲ್ಲ. ಫೈನಲ್ ಪಂದ್ಯಕ್ಕೆ ಮಾತ್ರ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ.

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ?

ಹೀಗಾಗಿ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಲ್ಲಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಪಂದ್ಯದ ಆರಂಭ ವಿಳಂಬವಾದರೆ, ಕನಿಷ್ಠ ಐದು ಓವರ್‌ಗಳ ಪಂದ್ಯವನ್ನು ಆಡಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕಾಗಿ, 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಆದರೆ ಹೆಚ್ಚುವರಿ ಸಮಯದ 120 ನಿಮಿಷಗಳಲ್ಲೂ ಪಂದ್ಯ ಮುಗಿಯದಿದ್ದರೆ, ಆಗ ಪಾಯಿಂಟ್‌ ಪಟ್ಟಿ ಪ್ರಮುಖ ಪಾತ್ರವಹಿಸುತ್ತದೆ. ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಿರುತ್ತದೋ ಆ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇದರರ್ಥ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್​ಸಿಬಿ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಇತ್ತ ಗುಜರಾತ್ ತಂಡ ಕ್ವಾಲಿಫೈಯರ್ 2 ಅನ್ನು ಆಡಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link