Headlines

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ! – Kannada News | Lokayukta Arrests FDA Caught Red Handed Taking Bribe

ಕಲಬುರಗಿ, ಜನವರಿ 18:  ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ (Bribe) ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ…

Read More

Video: ಹರಿಯುವ ನೀರಿನಲ್ಲಿ ತೇಲಿ ಹೋದ ಮರಿ ಆನೆಯನ್ನು ಬದುಕಿಸಿದ ತಾಯಿ – Kannada News | A Mother’s Instinct: Elephant Mom Saves Calf From Raging Waters

ಪ್ರಾಣಿಯೇ ಆಗಿರಲಿ, ಮನುಷ್ಯರಾಗಿರಲಿ ತಾಯಿಗೆ ಮಗುವಿನ ಮೇಲಿರುವ ಮಮತೆ ಒಂದೇ. ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮರಿಯಾನೆಯನ್ನು ತಾಯಿ ಆನೆ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ನೀರಿನ ಹರಿವು ಎಷ್ಟು ಪ್ರಬಲವಾಗಿದೆ ಎಂಬುದನ್ನು ನೀವು ವಿಡಿಯೋದಲ್ಲಿ ನೋಡಬಹುದು ಮತ್ತು ಆನೆ ಮತ್ತು ಅದರ ಮರಿ ಪ್ರವಾಹದಲ್ಲಿ ಕೊಚ್ಚಿ ಹೋಗುವುದನ್ನು ನೀವು ನೋಡಬಹುದು. ಆನೆ ತನ್ನನ್ನು ತಾನು ನಿಯಂತ್ರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು, ಆದರೆ ಮರಿ ಆನೆ ನೀರಿನಲ್ಲಿ ತೇಲಲಾರಂಭಿಸಿತು. ಹೆಣ್ಣು ಆನೆ ಮರಿ ಆನೆಯನ್ನು ಹಿಡಿದು ನೀರಿನಿಂದ ಹೊರತೆಗೆದಿತ್ತು….

Read More

ತಂದೆ ಜಾಗ ನೀಡಿದ್ದ ಆಸ್ಪತ್ರೆಯಲ್ಲೇ ಮಗನ ದುರಂತ ಅಂತ್ಯ: ಅಷ್ಟಕ್ಕೂ ಆಗಿದ್ದೇನು? – Kannada News | Son Dies in Hospital Built on Land Donated by His Father Amid Ambulance Delay in Tumakuru

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದೆ ವ್ಯಕ್ತಿ ಸಾವು ತುಮಕೂರು, ಜನವರಿ 18: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದ ಕಾರಣ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ. ಸೈಯ್ಯದ್​​ ಅಕ್ರಮ್(42) ಮೃತ ದುರ್ದೈವಿಯಾಗಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ನಮಗಾದ ತೊಂದರೆ ಮತ್ಯಾರಿಗೂ ಆಗಬಾರದು ಎಂದು ಅಲವತ್ತುಕೊಂಡಿದ್ದಾರೆ. 1 ಗಂಟೆ ಕಾದರೂ…

Read More

ಕರ್ನಾಟಕ ಟೆಸ್ಟ್ ತಂಡ ಪ್ರಕಟ – Kannada News | Karnataka squad for ranji trophy 2026

ಜನವರಿ 22 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ. ಇನ್ನು ಮೊದಲ ಸುತ್ತಿನಲ್ಲಿ ಕರ್ನಾಟಕ ಪರ ಕಣಕ್ಕಿಳಿದಿದ್ದ ಸ್ಮರಣ್ ರವಿಚಂದ್ರನ್ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ. ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಸ್ಮರಣ್ ರವಿಚಂದ್ರನ್ ಅವರ ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ವಿಜಯ ಹಝಾರೆ ಟೂರ್ನಿಯ ಸೆಮಿಫೈನಲ್ ಮ್ಯಾಚ್​ನಲ್ಲಿ ಅವರು ಕಣಕ್ಕಿಳಿದಿರಲಿಲ್ಲ. ಇದೇ ಗಾಯದ ಕಾರಣ ಸ್ಮರಣ್ ರವಿಚಂದ್ರನ್ ಅವರನ್ನು…

Read More

Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ – Kannada News | Loud Explosion Near Hyderabad Jain Temple Triggers Panic

ಹೈದರಾಬಾದ್, ಜನವರಿ 18: ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾರೂ ಇರಲಿಲ್ಲ, ಆದ್ದರಿಂದ ದೊಡ್ಡ ಅಪಘಾತವನ್ನು ತಪ್ಪಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಶಬ್ದ ಕೇಳಿ ಎಲ್ಲರೂ ಬಾಂಬ್ ಸ್ಫೋಟವಾದಂತೆ ಭಯಪಟ್ಟು ಮನೆಯಿಂದ ಓಡಿ ಬಂದಿದ್ದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

DISCOMs: ಹಲವು ವರ್ಷಗಳ ಬಳಿಕ ಮೊದಲ ಆದಾಯ ಸವಿದ ಭಾರತದ ಡಿಸ್ಕಾಂ ಕಂಪನಿಗಳು – Kannada News | India’s Power distributing DISCOMs see first profit in over a decade of losses

ನವದೆಹಲಿ, ಜನವರಿ 18: ಭಾರತದ ವಿದ್ಯುತ್ ವಿತರಣಾ ಕಂಪನಿಗಳು (ಡಿಸ್ಕಾಂ) 2024-25ರ ಹಣಕಾಸು ವರ್ಷದಲ್ಲಿ 2,701 ಕೋಟಿ ರೂ ನಿವ್ವಳ ಲಾಭ ಗಳಿಸಿವೆ. ಇದು ತೆರಿಗೆ ಕಳೆದ ನಂತರ ಉಳಿಯುವ ಲಾಭವಾಗಿದೆ. ಭಾರತದ ಒಟ್ಟೂ ಡಿಸ್ಕಾಂ ಕಂಪನಿಗಳಿಗೆ ಸಿಕ್ಕಿರುವ ಒಟ್ಟೂ ಪಿಎಟಿ ಲಾಭ ಇದು. ಹತ್ತಕ್ಕೂ ಹೆಚ್ಚು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಈ ಕಂಪನಿಗಳು ಲಾಭ ಕಂಡಿವೆ. ನಷ್ಟಗಳ ಕೂಪದಲ್ಲೇ ಸಿಲುಕಿದ್ದ ಡಿಸ್ಕಾಂ ಕಂಪನಿಗಳು ಲಾಭದ ಹಳಿಗೆ ಬರುವಂತಾಗಲು ಹಲವು ವರ್ಷಗಳ ಸುಧಾರಣಾ ಹಾದಿಯೇ…

Read More

IND vs NZ: ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ – Kannada News | India vs New Zealand 3rd ODI Toss Update and Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಮ್ಯಾಚ್ ಶುರುವಾಗಿದೆ. ಇಂದೋರ್​ನ ಹೋಲ್ಕರ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಾಜ್​ಕೋಟ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಈ ಬಾರಿ ಕೈ ಬಿಡಲಾಗಿದ್ದು, ಅವರ ಬದಲಿಗೆ ಅರ್ಷದೀಪ್ ಸಿಂಗ್​ಗೆ ಅವಕಾಶ ನೀಡಲಾಗಿದೆ. ಅದರಂತೆ…

Read More

Gadag: ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ! – Kannada News | Ancient Shiva Linga Unearthed in Lakkundi Fort Wall Amidst Excavation

ಗದಗ, ಜನವರಿ 18: ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ಈ ಸಂದರ್ಭದಲ್ಲಿಯೇ ಲಕ್ಕುಂಡಿಯಲ್ಲಿನ ಕೋಟೆ ಗೋಡೆಯ ಪಕ್ಕದಲ್ಲಿದ್ದ ಶಾಲಾ ಕಟ್ಟಡವನ್ನು ಕೆಡವುವಾಗ ಅಲ್ಲಿ ಪುರಾತನ ಕಾಲದ ಶಿವಲಿಂಗವೊಂದು ಪತ್ತೆಯಾಗಿದೆ. ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ. ಸಂಪೂರ್ಣವಾಗಿ ಡೆಮಾಲಿಶ್ ಮಾಡಿದ ಶಾಲೆಯ ಗೋಡೆಯ ಭಾಗದಲ್ಲಿ ಗ್ರಾಮಸ್ಥರ ಕಣ್ಣಿಗೆ ಈ ಶಿವಲಿಂಗ ಮೊದಲು ಬಿದ್ದಿದೆ. ಈ ಲಿಂಗವು ಬಹಳ ಹಳೆಯ ಕಾಲದ್ದಾಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ….

Read More

ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು – Kannada News | Kichcha Sudeep shares his farewell words as Bigg Boss Kannada Season 12 comes to end

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇಂದು (ಜನವರಿ 18) ಮುಕ್ತಾಯ ಆಗುತ್ತಿದೆ. 112 ದಿನಗಳ ಕಾಲ ನಡೆದ ಈ ಶೋ ತುಂಬಾ ಜನಪ್ರಿಯತೆ ಪಡದುಕೊಂಡಿದೆ. ಕಿಚ್ಚ ಸುದೀಪ್ (Kichcha Sudeep) ಅವರ ನಿರೂಪಣೆಯಲ್ಲಿ ವೀಕ್ಷಕರಿಗೆ ಸಖತ್ ಮನರಂಜನೆ ಸಿಕ್ಕಿದೆ. ಒಟ್ಟು 24 ಸ್ಪರ್ಧಿಗಳು ಈ ಬಾರಿ ಬಿಗ್ ಬಾಸ್ ಮನೆಗೆ ಬಂದು ಹೋಗಿದ್ದಾರೆ. ಅಂತಿಮವಾಗಿ ಗಿಲ್ಲಿ ನಟ (Gilli Nata), ಕಾವ್ಯಾ ಶೈವ, ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ…

Read More

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್; ಎಕ್ಸ್ ಪೋಸ್ಟ್ ನೋಡಿ ಆರೋಪಿಯನ್ನು ಹಿಡಿದ ಪೊಲೀಸರು – Kannada News | Bengaluru Road Rage: Scooter Rider Arrested After Knife Threat Caught on Dashcam

ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ರೋಡ್ ರೇಜ್ ಬೆಂಗಳೂರು, ಜನವರಿ 18: ನಗರದಲ್ಲಿ ರೋಡ್ ರೇಜ್ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದ್ದು,   ಶುಕ್ರವಾರ (ಜನವರಿ 16) ಸಂಜೆ ಮಾಲ್ ಎದುರು ಕಾರ್ ಒಂದನ್ನು ನಿಲ್ಲಿಸಿದ ಆರೋಪಿ, ಅವಾಚ್ಯ ಶಬ್ಧಗಳಿಂದ ಬೈದು ಪರಾರಿಯಾಗಿದ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತರು ಎಕ್ಸ್ ಪೋಸ್ಟ್ ಹಂಚಿಕೊಂಡ ನಂತರ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ದ್ವಿಚಕ್ರವಾಹನ ಸವಾರನ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯರಸ್ತೆಯಲ್ಲಿ ಕಾರನ್ನು ನಿಲ್ಲಿಸಿ, ಅವಾಚ್ಯ ಶಬ್ಧಗಳಿಂದ ನಿಂದನೆ ಶುಕ್ರವಾರ ಸಂಜೆ ಸುಮಾರು…

Read More